Tag: Bihar man

  • ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    – ಹೆಂಡತಿ ಮಡಿಲಲ್ಲೇ ಪ್ರಾಣ ಬಿಟ್ಟ ಗಂಡ

    ಪಾಟ್ನಾ: ಅಂತರ್ಜಾತಿ ವಿವಾಹ (Intercaste Marriage) ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ (Darbhanga) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

    ರಾಹುಲ್ ಕುಮಾ‌ರ್ (25) ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (Medical College Hospital) 2ನೇ ವರ್ಷದ ಬಿಎಸ್ಸಿ ನರ್ಗಿಂಗ್‌ ವ್ಯಾಸಂಗ ಮಾಡುತ್ತಿದ್ದ. 4 ತಿಂಗಳ ಹಿಂದಷ್ಟೇ ಅದೇ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ತನ್ನು ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ. ರಾಹುಲ್‌ ಅಂತರ್ಜಾತಿ ಅನ್ನೋ ಕಾರಣಕ್ಕೆ ಕುಟುಂಬದವರಿಂದ ಭಾರೀ ವಿರೋಧ ಇತ್ತು ಅಂತ ತಿಳಿದುಬಂದಿದೆ.

    ಇನ್ನೂ ಗುಂಡಿಕ್ಕಿ ಹತ್ಯೆಗೈದ ಬೆನ್ನಲ್ಲೇ ರಾಹುಲ್‌ನ ಸ್ನೇಹಿತರು ತನ್ನುವಿನ ತಂದೆ ಆರೋಪಿ ಪ್ರೇಮ್‌ಶಂಕ‌ರ್‌ ಝಾಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಹೆಂಡತಿ ಮಡಿಲಲ್ಲೇ ಪ್ರಾಣಬಿಟ್ಟ ಗಂಡ
    ಮಂಗಳವಾರ (ಆ.5) ಸಂಜೆ ಹೂಡಿ (ಪುಲೋವರ್‌ ಮಾದರಿಯ ಜೆರ್ಸಿ) ಧರಿಸಿದ್ದ ವ್ಯಕ್ತಿಯೊಬ್ಬ ರಾಹುಲ್‌ನ ಬಳಿಗೆ ಬಂದಿದ್ದ. ಹತ್ತಿರ ಬಂದಾಗ ಅದು ನನ್ನ ತಂದೆ ಅನ್ನೋದು ಗೊತ್ತಾಯ್ತ. ಅವರ ಕೈಯಲ್ಲಿ ಬಂದೂಕು ಇತ್ತು. ನನ್ನ ಕಣ್ಮುಂದೆಯೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದ್ರು. ನನ್ನ ಗಂಡ ನನ್ನ ಮಡಿಲಲ್ಲಿ ಪ್ರಾಣ ಬಿಟ್ಟರು ಅಂತ ತನ್ನು ಕಣ್ಣೀರಿಟ್ಟಿದ್ದಾಳೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

    ನನ್ನ ಇಡೀ ಕುಟುಂಬ ಈ ಸಂಚಿನಲ್ಲಿ ಭಾಗಿಯಾಗಿದೆ. ನನ್ನ ಸಹೋದರ ಮತ್ತು ತಂದೆಯಿಂದ ನಮ್ಮ ಜೀವಕ್ಕೆ ಬೆದರಿಕೆಯಿದೆ ಎಂದು ದೂರು ನೀಡಿ ನ್ಯಾಯಾಲಯಕ್ಕೂ ಹೋಗಿದ್ದೆವು ಎಂದು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಮರ್ಯಾದೆಗೇಡು ಹತ್ಯೆ ಎಂದು ತಿಳಿದುಬಂದಿದೆ ಎಂದು ವದರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

  • ಕೂಲರ್‌, ಫ್ಯಾನ್‌ ಇಲ್ಲದ ಕೋಣೆಯಲ್ಲಿ ವಾಸ – ಹೀಟ್‌ಸ್ಟ್ರೋಕ್‌ನಿಂದ ವ್ಯಕ್ತಿ ಸಾವು

    ಕೂಲರ್‌, ಫ್ಯಾನ್‌ ಇಲ್ಲದ ಕೋಣೆಯಲ್ಲಿ ವಾಸ – ಹೀಟ್‌ಸ್ಟ್ರೋಕ್‌ನಿಂದ ವ್ಯಕ್ತಿ ಸಾವು

    ನವದೆಹಲಿ: ಬಿಹಾರ ಮೂಲದ (Bihar Man) ವ್ಯಕ್ತಿಯೊಬ್ಬರು ಹೀಟ್‌ಸ್ಟ್ರೋಕ್‌ನಿಂದ ದೆಹಲಿ ಆಸ್ಪತ್ರೆಯಲ್ಲಿ (Delhi Hospital) ಸಾವನ್ನಪ್ಪಿದ್ದಾರೆ. ಶಾಖಾಘಾತದಿಂದ ವ್ಯಕ್ತಿಯನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ವ್ಯಕ್ತಿ ಕೂಲರ್ ಅಥವಾ ಫ್ಯಾನ್ ಇಲ್ಲದ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಗೆ ತೀವ್ರ ಜ್ವರವಿತ್ತು ಎಂದು ವೈದ್ಯರು ಹೇಳಿದ್ದರು. ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿತ್ತು. ಅದು ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಹೆಚ್ಚಾಗಿತ್ತು. ಬಿರು ಬೇಸಿಗೆಯಲ್ಲಿ ದೆಹಲಿಯಲ್ಲಿ ವರದಿಯಾದ ಹೀಟ್‌ಸ್ಟ್ರೋಕ್‌ ಸಾವು ಪ್ರಕರಣ ಇದು ಎನ್ನಲಾಗಿದೆ. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಜೂನ್‌ 9 ರಂದು ಮೋದಿ ಪ್ರಮಾಣ ವಚನ!

    ಶಾಖದ ಅಲೆ ರಾಷ್ಟ್ರ ರಾಜಧಾನಿಯನ್ನು ಕಂಗೆಡಿಸಿದೆ. ಹೆಚ್ಚಿದ ತಾಪಮಾನ, ನೀರಿನ ಬಿಕ್ಕಟ್ಟಿನಿಂದ ಇಲ್ಲಿನ ಜನ ಸಂಕಷ್ಟಕ್ಕೀಡಾಗಿದ್ದಾರೆ. ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ.

    ದೆಹಲಿ ನಗರದಾದ್ಯಂತ ಸರಾಸರಿ 45-50% ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ. ಮಹಪಾತ್ರ ಹೇಳಿದ್ದಾರೆ. ರಾಜಧಾನಿಯ ಜನತೆ ಕಳೆದ ವಾರದಿಂದ ತೀವ್ರ ಶಾಖದ ಅಲೆಗೆ ತತ್ತರಿಸುತ್ತಿದ್ದಾರೆ. ತಾಪ ಹೆಚ್ಚಳದ ಜೊತೆಗೆ ದೆಹಲಿಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ – ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಪ್ತ ಸಹಾಯಕ ಬಂಧನ

    ದಿನನಿತ್ಯ ಟ್ಯಾಂಕರ್ ಬರುತ್ತಿದೆ. ಆದರೆ 3,000 ರಿಂದ 4000 ಜನರಿರುವ ನಮಗೆ ಅರ್ಧ ಟ್ಯಾಂಕರ್ ನೀರಷ್ಟೇ ಸಿಗುತ್ತಿದೆ. ಬಿಸಿಯೂಟ, ನೀರು ಬೇಕು. ಆದರೆ ನಮಗೆ ಸಾಕಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ವಿನಯ್ ಅಳಲು ತೋಡಿಕೊಂಡಿದ್ದಾರೆ.

  • ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

    ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

    ಪಾಟ್ನಾ: ಪ್ರೀತಿಗೆ ಜಾತಿ, ಧರ್ಮ, ಭಾಷೆ ಇಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿದೆ. ಪ್ರೀತಿ ಎಂತಹವರ ಹೃದಯವನ್ನು ಸಹ ಕರಗಿಸುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಜರ್ಮನಿಯ ಮಹಿಳೆಯೊಬ್ಬಳು ಬಿಹಾರದ ನವಾಡದ ವ್ಯಕ್ತಿಯೊಂದಿಗೆ ಭಾರತೀಯ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದಾರೆ. ಇದೀಗ ಈ ದಂಪತಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಲಾರಿಸ್ಸಾ ಬೆಲ್ಚ್ ಅವರು ಜರ್ಮನಿಯಲ್ಲಿ ಹುಟ್ಟಿ ಬೆಳೆದರು. ಇದೀಗ ಬಿಹಾರದ ನವಾಡದ ಸತ್ಯೇಂದ್ರ ಕುಮಾರ್ ಅವರನ್ನು ವಿವಾಹವಾಗಿದ್ದಾರೆ. ಇಬ್ಬರು ಸ್ವೀಡನ್‍ನಲ್ಲಿ ಸಂಶೋಧನಾ ವಿದ್ಯಾರ್ಥಿಗಳಾಗಿದ್ದು, ಸತ್ಯೇಂದ್ರ ಅವರು ಚರ್ಮದ ಕ್ಯಾನ್ಸರ್ ಸಂಶೋಧನೆ ನಡೆಸುತ್ತಿದ್ದರೆ, ಲಾರಿಸ್ಸಾ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದರು. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    2019 ಇಬ್ಬರಿಗೂ ಪರಿಚಯವಾಗಿ ನಂತರ ಸ್ನೇಹದಿಂದ ಪರಸ್ಪರ ಪ್ರೀತಿಸಲು ಆರಂಭಿಸಿದರು. ಮೂರು ವರ್ಷಗಳ ಬಳಿಕ ಇದೀಗ ಸಪ್ತಪದಿ ತುಳಿದಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ಫೋಟೋದಲ್ಲಿ ಲಾರಿಸ್ಸಾ ಕೆಂಪು ಬಣ್ಣದ ಲೆಹೆಂಗಾ ತೊಟ್ಟು, ಚಿನ್ನಾಭರಣ ಧರಿಸಿ ದೇಸಿ ಲುಕ್‍ನಲ್ಲಿ ಮಿಂಚುತ್ತಿದ್ದರೆ, ಸತ್ಯೇಂದ್ರ ಅವರು ಗೋಲ್ಡನ್ ಕಲರ್ ಶೇರ್ವಾನಿ ಧರಿಸಿರುವುದನ್ನನು ಕಾಣಬಹುದಾಗಿದೆ.

    ಭಾರತದ ಬಗ್ಗೆ ಮಾತನಾಡಿರುವ ಲಾರಿಸ್ಸಾ, ಇಬ್ಬರೂ ಭಾರತೀಯ ಸಂಪ್ರದಾಯದಂತೆ ಮದುವೆಯಾಗಲು ಬಯಸಿದೇವು. ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯನ್ನು ತಿಳಿದುಕೊಳ್ಳಲು ಬಹಳ ಉತ್ಸುಕಳಾಗಿದ್ದೇನೆ. ನಾನು ಭಾರತದಲ್ಲಿಯೇ ನನ್ನ ಜೀವನವನ್ನು ಆನಂದದಿಂದ ಕಳೆಯಲು ಬಂದಿದ್ದೇನೆ. ಇಲ್ಲಿನ ಜನರು ತುಂಬಾ ಒಳ್ಳೆಯವರು, ನಮ್ಮ ಸಂಸ್ಕೃತಿಗೂ, ಭಾರತೀಯ ಸಂಸ್ಕೃತಿಗೂ ವ್ಯತ್ಯಾಸವಿದೆ. ನನಗೆ ಹಿಂದಿ ಹೆಚ್ಚು ಅರ್ಥವಾಗುವುದಿಲ್ಲ. ಆದರೆ ಸತ್ಯೇಂದ್ರ ಅವರು ಅನುವಾದಿಸಲು ಸಹಾಯ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!


    German woman, Bihar man, marriage, Hindu tradition