Tag: Bihar

  • ಮೇವು ಹಗರಣ: ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್‍ಗೆ 3.5 ವರ್ಷ ಜೈಲು, 5 ಲಕ್ಷ ರೂ. ದಂಡ

    ಮೇವು ಹಗರಣ: ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್‍ಗೆ 3.5 ವರ್ಷ ಜೈಲು, 5 ಲಕ್ಷ ರೂ. ದಂಡ

    ರಾಂಚಿ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋರ್ಟ್ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ 3.5 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.

    ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದಾರೆ. 3.5 ವರ್ಷದ ಜೈಲು, 5 ಲಕ್ಷ ರೂ. ದಂಡ ವಿಧಿಸಿದ್ದು, ಮೊತ್ತವನ್ನು ಪಾವತಿಸಲು ವಿಫಲವಾದ ಸಂದರ್ಭದಲ್ಲಿ 6 ತಿಂಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ನೀಡುವ ಕುರಿತು ತೀರ್ಪಿನಲ್ಲಿ ತಿಳಿಸಿದ್ದಾರೆ. ಇನ್ನು ಪ್ರಕರಣದ ಇತರೇ ಅಪರಾಧಿಗಳಾದ ಫೂಲ್ ಚಂದ್, ಮಹೇಶ್ ಪ್ರಸಾದ್, ಬೇಕ್ ಜೂಲಿಯಸ್, ಸುನೀಲ್ ಕುಮಾರ್, ಸುಧೀರ್ ಕುಮಾರ್ ಮತ್ತು ರಾಜ ರಾಮ್ರಿಗೂ 3.5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಶುಕ್ರವಾರ ಲಾಲು ಪರ ವಕೀಲರ ಮೂಲಕ ಕೋರ್ಟ್ ಗೆ ಮನವಿಯನ್ನು ಸಲ್ಲಿಸಿ ಲಾಲು ಪ್ರಸಾದ್ ಆರೋಗ್ಯದ ಹದಗೆಟ್ಟಿದ್ದು, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಕೋಟ್ ಗಮನಕ್ಕೆ ತಂದಿದ್ದರು. ಅಲ್ಲದೇ ಲಾಲು ತಮ್ಮ ಮನವಿಯಲ್ಲಿ ಈ ಪಕ್ರರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಅಂತಾ ಹೇಳಿದ್ದರು.

    ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಕಳೆದ ಡಿಸೆಂಬರ್ 23ರಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣವನ್ನು ಜನವರಿ 3ಕ್ಕೆ ಕಾಯ್ದಿರಿಸಿತ್ತು. ಆದರೆ ಶುಕ್ರವಾರ ಮೂರನೇ ಬಾರಿಗೆ ತೀರ್ಪನ್ನು ಮುಂದೂಡಿ ತೀರ್ಪನ್ನು ಕಾಯ್ದಿರಿಸಿದ್ದರು.

    ಇದೇ ಪ್ರಕರಣ ಸಂಬಂಧ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಸೇರಿ ಇತರೆ ಏಳು ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಖುಲಾಸೆಗೊಳಿಸಿದ್ದರು. ಈ ಹಿಂದೆ ಲಾಲು ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲು ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿತ್ತು.

    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. ಛಾಯ್ ಬಾಸಾ ಖಜಾನೆಯಿಂದ 37 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. 2013ರ ಸೆಪ್ಟೆಂಬರ್ 3ರಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಎರಡೂವರೆ ತಿಂಗಳ ಕಾಲ ಬಿರ್ಸಾ ಮುಂಡಾ ಜೈಲಿನಲಿದ್ದ ಲಾಲೂ ಬಳಿಕ ಸುಪ್ರೀಂ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

     

  • ಮದುವೆಯುದ್ದಕ್ಕೂ ಗಳಗಳನೆ ಕಣ್ಣೀರು ಹಾಕಿದ ವರ!

    ಮದುವೆಯುದ್ದಕ್ಕೂ ಗಳಗಳನೆ ಕಣ್ಣೀರು ಹಾಕಿದ ವರ!

    ಪಾಟ್ನಾ: ಮದುವೆ ಅಂದ್ರೆ ವಧು ವರರಿಗೆ ಸಂತೋಷದ ದಿನವಾಗಿರುತ್ತೆ. ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಭಾವುಕಳಾಗಿ ಅಳೋದನ್ನ ನೋಡಿರ್ತೀರ. ಆದ್ರೆ ಇಲ್ಲೊಬ್ಬ ವರ ಮದುವೆಯಾಗುವಾಗ ಗಳಗಳನೆ ಅತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

    ಬಿಹಾರದಲ್ಲಿ ಈ ಘಟನೆ ನಡೆದಿದ್ದು, ವರನನ್ನು ಕಿಡ್ನಾಪ್ ಮಾಡಿ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಈ ರೀತಿ ಬಲವಂತವಾಗಿ ಮದುವೆ ಮಾಡಿಸುವುದು ಬಿಹಾರದಲ್ಲಿ ಕಾಮನ್. ಇತ್ತೀಚೆಗೆ ಇದರ ಬಲಿಪಶುವಾಗಿದ್ದು ವಿನೋದ್ ಯಾದವ್.

    ವಿನೋದ್ ಬೊಕಾರೋ ಸ್ಟೀಲ್ ಪ್ಲಾಂಟ್‍ನಲ್ಲಿ ಕಿರಿಯ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದಾರೆ. ವಿನೋದ್‍ಗೆ ಎಲ್ಲಿ ಬೇಕೋ ಅಲ್ಲಿಗೆ ವರ್ಗಾವಣೆ ಮಾಡಿಸುವ ವ್ಯವಸ್ಥೆ ಮಾಡಲು ಸಚಿವರೊಬ್ಬರನ್ನು ಭೇಟಿ ಮಾಡಿಸುವುದಾಗಿ ಹೇಳಿ ಮೊಕಾಮಾಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಅಲ್ಲಿಂದ ವಿನೋದ್‍ರನ್ನು ಕಿಡ್ನಾಪ್ ಮಾಡಿದ್ದಾರೆ.

    ಕಿಡ್ನಾಪರ್‍ಗಳು ಶಸ್ತ್ರಾಸ್ತ್ರಗಳನ್ನ ಹೊಂದಿದ್ದು, ವಿನೋದ್‍ಗೆ ಹೊಡೆದಿದ್ದಾರೆ. ಇದಕ್ಕೆ ವಿನೋದ್ ವಿರೋಧ ವ್ಯಕ್ತಪಡಿಸಿದಾಗ, ನಿನಗೆ ಮದುವೆ ಮಾಡಿಸ್ತಿದ್ದೀವಿ ಅಷ್ಟೇ, ನೇಣು ಹಾಕ್ತಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆಯೂ ಸಾಕಷ್ಟು ಜನ ಇದೇ ರೀತಿ ಮದುವೆ ಆಗಿದ್ದಾರೆ. ಇದೇನು ಹೊಸದಲ್ಲ ಎಂದು ಹೇಳಿದ್ದಾರೆ.

     

    ಮದುವೆಗೆ ಎಲ್ಲಾ ಸಿದ್ಧತೆಗಳನ್ನ ಮಾಡಿ ವಿನೋದ್‍ರನ್ನ ಅಲ್ಲಿಗೆ ಕರೆದೊಯ್ದು ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಜೊತೆಗೆ ಬಲವಂತದ ಮದುವೆಯ ವಿಡಿಯೋವನ್ನೂ ಮಾಡಿದ್ದಾರೆ. ವಿನೋದ್ ತನ್ನನ್ನು ಬಿಟ್ಟುಬಿಡುವಂತೆ ಗೋಗರೆಯುತ್ತಿದ್ದು, ಅಳುತ್ತಿರೋದನ್ನ ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಪ್ರತ್ಯಕ್ಷದರ್ಶಿಗಳು ಮಾತ್ರ ವಿನೋದ್ ಸ್ಥಿತಿಯ ಬಗ್ಗೆ ಕ್ಯಾರೇ ಅಂದಿಲ್ಲ. ಅಲ್ಲೇ ಇದ್ದವರೊಬ್ಬರು ವಿನೋದ್ ಧರಿಸಿದ್ದ ಶಲ್ಯವನ್ನೇ ತೆಗೆದುಕೊಂಡು ಅವರ ಕಣ್ಣೀರು ಒರೆಸಿದ್ದಾರೆ.

     

  • ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

    ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

    ಪಾಟ್ನಾ: ಪೊಲೀಸರು ತುಂಬಾ ಬುದ್ಧಿವಂತಿಕೆಯಿಂದ ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ ಫೋಟೋ ಬಳಸಿ ನಟೋರಿಯಸ್ ಗ್ಯಾಂಗ್‍ಸ್ಟಾರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿ ಮಹಮ್ಮದ್ ಹಸ್‍ನೈನ್ ನಯನತಾರಾ ಫೋಟೋ ನೋಡಿ ಬಲೆಗೆ ಬಿದ್ದ ಕಳ್ಳ. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ ನಯನತಾರಾ ಅವರಂತೆ ಫೋಸ್ ಕೊಟ್ಟು ಗ್ಯಾಂಗ್‍ಸ್ಟರ್ ನನ್ನು ಚಾಣಾಕ್ಷತೆಯಿಂದ ಬಂಧಿಸಿದ್ದಾರೆ.

    ಬಿಹಾರದ ದರ್ಬಾಂಗ್ ಜಿಲ್ಲೆಯ ಬಿಜೆಪಿ ನಾಯಕ ಸಂಜಯ್ ಕುಮಾರ್ ಮಹಾಟೋ ಮೊಬೈಲ್ ಅನ್ನು ಮೊಹಮ್ಮದ್ ಹಸ್‍ನೈನ್ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಬಿಜೆಪಿ ನಾಯಕ ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮೊಬೈಲ್‍ನ ಡೇಟಾ ರೆಕಾರ್ಡ್ ಮಾಡಿ ಟ್ರೇಸ್ ಮಾಡಿದಾಗ ಆತ ಇನ್ನೂ ಫೋನ್ ಬಳಸುತ್ತಿರುವ ಸಂಗತಿ ತಿಳಿಯಿತು.

    ಪ್ರೀತಿಸಿ ಬಂಧಿಸಿದ್ರು: ಪೊಲೀಸರು ಆತನನ್ನು ಬಂಧಿಸಲು ಹೋದಾಗ ಹಲವು ಬಾರಿ ಆತ ತಪ್ಪಿಸಿಕೊಂಡ ಹೋಗಿದ್ದ. ಆದ್ದರಿಂದ ಮಧುಬಾಲಾ ಆರೋಪಿ ಬಂಧನಕ್ಕೆ ಹೊಸ ಪ್ಲ್ಯಾನ್ ಮಾಡಿದ್ದರು. ಅಂತೆಯೇ ಅವರು ಯುವತಿಯಂತೆ ಆತನನ್ನು ಪ್ರೀತಿಸುವ ನಾಟಕವಾಡಿದರು. ಆದರೆ ಕಳ್ಳ ಮೊದಲು ನಂಬಿರಲಿಲ್ಲ. ಬಳಿಕ ಫೋಟೋ ಕಳಿಸುವಂತೆ ಹೇಳಿದ್ದಾನೆ. ಅದಕ್ಕೆ ಮಧುಬಾಲಾ ಅವರು ಬುದ್ಧಿವಂತಿಕೆಯಿಂದ ನಯನತಾರಾ ಫೋಟೋವನ್ನು ಕಳುಹಿಸಿದ್ದಾರೆ.

    ಮೊಹಮ್ಮದ್ ನಟಿಯ ಫೋಟೋ ನೋಡಿ ಮರುಳಾಗಿ ಭೇಟಿ ಮಾಡಲು ಒಪ್ಪಿಕೊಂಡು ಸ್ಥಳವನ್ನು ತಾನೇ ಹೇಳಿದ್ದಾನೆ. ಈತ ಹೇಳಿದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಾಮಾನ್ಯ ವ್ಯಕ್ತಿಗಳಂತೆ ಆತ ಬರುವುದಕ್ಕೂ ಮೊದಲೇ ಹೋಗಿದ್ದರು. ಮಧುಬಾಲಾ ಅವರು ಮುಖಕ್ಕೆ ಮುಸುಕು ಹಾಕಿಕೊಂಡು ಆತನ ಬಳಿಗೆ ಹೋಗಿದ್ದಾರೆ. ಕೂಡಲೇ ಬಂದಿರುವ ಯುವತಿ ನನ್ನ ಸ್ನೇಹಿತೆ ಎಂದು ಮಾತನಾಡಿಸಲು ಹೋದಾಗ ಅಲ್ಲೇ ಇದ್ದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ತಮ್ಮ ವಶಕ್ಕೆ ಪಡೆದು ಬಿಜೆಪಿ ನಾಯಕರಿಗೆ ಒಪ್ಪಿಸಿದ್ದಾರೆ. ಬುದ್ಧಿವಂತಿಕೆಯಿಂದ ಕಳ್ಳನನ್ನು ಬಂಧಿಸಿದ್ದಕ್ಕೆ ಮಧುಬಾಲಾ ದೇವಿಗೆ ಬಿಹಾರ ಪೊಲೀಸ್ ಇಲಾಖೆ ಬಹುಮಾನವನ್ನು ನೀಡಿ ಗೌರವಿಸಿದೆ.

  • ಮೇವು ತಿಂದ ಲಾಲು ಈಗ ಜೈಲುಪಾಲು!

    ಮೇವು ತಿಂದ ಲಾಲು ಈಗ ಜೈಲುಪಾಲು!

    ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್ ಜೆಡಿ  ನಾಯಕ ಲಾಲು ಪ್ರಸಾದ್ ಯಾದವ್ ಜೈಲು ಪಾಲಾಗಿದ್ದಾರೆ.
    ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಸೇರಿ 15 ಮಂದಿ ದೋಷಿಗಳು ಎಂದು ತೀರ್ಪು ನೀಡಿದ್ದು, 7 ಮಂದಿಯನ್ನು ಆರೋಪ ಮುಕ್ತಗೊಳಿಸಿದೆ. ಶಿಕ್ಷೆಯ ಪ್ರಮಾಣವನ್ನು ಜನವರಿ 3 ರಂದು ಕೋರ್ಟ್ ಪ್ರಕಟಿಸಲಿದೆ.
    ಈ ಹಿಂದೆ ಲಾಲು ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲು ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿತ್ತು
    ಲಾಲು ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ಆರೋಪಿಗಳು ಪ್ರತ್ಯೇಕ ವಿಚಾರಣೆ ಎದುರಿಸಬೇಕು ಅಷ್ಟೇ ಅಲ್ಲದೇ ಹಾಗೂ 9 ತಿಂಗಳೊಳಗೆ ಪ್ರಕರಣದ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ  2017ರ ಮೇ ತಿಂಗಳಿನಲ್ಲಿ ಆದೇಶ ಪ್ರಕಟಿಸಿತ್ತು
    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. ಛಾಯ್ ಬಾಸಾ ಖಜಾನೆಯಿಂದ 37 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. 2013ರ ಸೆಪ್ಟೆಂಬರ್ 3ರಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಎರಡೂವರೆ ತಿಂಗಳ ಕಾಲ ಬಿರ್ಸಾ ಮುಂಡಾ ಜೈಲಿನಲಿದ್ದ ಲಾಲೂ ಬಳಿಕ ಸುಪ್ರೀಂ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
  • ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ನಾಲ್ವರ ಸಾವು

    ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ನಾಲ್ವರ ಸಾವು

    ಪಾಟ್ನಾ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್‍ಗಂಜ್ ಜಿಲ್ಲೆಯಲ್ಲಿ ನಡೆದಿದೆ.

    ಇಲ್ಲಿನ ಸಾಸ ಮೂಸಾ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

    ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಬಾಯ್ಲರ್ ಸಮೀಪ ಕೆಲಸ ಮಾಡುತ್ತಿದ್ದ ಮೂವರ ದೇಹಗಳು ಛಿದ್ರಛಿದ್ರವಾಗಿವೆ. ಘಟನೆ ನಡೆದ ವೇಳೆ ಫ್ಯಾಕ್ಟರಿಯಲ್ಲಿ ಸುಮಾರು 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರಬಹುದೆಂದು ಶಂಕಿಸಲಾಗಿದೆ. ಘಟನೆಯ ನಂತರ ನಾಪತ್ತೆಯಾಗಿದ್ದ ಸಕ್ಕರೆ ಕಾರ್ಖಾನೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಗಾಯಾಳುಗಳನ್ನ ಗೋಪಾಲ್‍ಗಂಜ್‍ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಯಾಗಿದೆ. ಮೂವರು ವ್ಯಕ್ತಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಪಿಎಮ್‍ಸಿಹೆಚ್ ಆಸ್ಪತ್ರೆಗೆ ಕಳಿಸಿದ್ದಾರೆ. ಘಟನೆಯ ನಂತರ ಪೊಲೀಸರು ಹಾಗೂ ಗೋಪಾಲ್‍ಜಂಜ್‍ನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.

    ಅತೀಯಾದ ತಾಪದಿಂದಾಗಿ ಬಾಯ್ಲರ್ ಸ್ಫೋಟಗೊಂಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೂ ನಿರ್ದಿಷ್ಟ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಮೂರೂವರೆ ವರ್ಷದ ಬಾಲಕಿಯನ್ನು ರೇಪ್ ಮಾಡಿದ್ದ ಕಾಮುಕನಿಗೆ 10ವರ್ಷ ಜೈಲು, 1ಲಕ್ಷ ರೂ. ದಂಡ

    ಮೂರೂವರೆ ವರ್ಷದ ಬಾಲಕಿಯನ್ನು ರೇಪ್ ಮಾಡಿದ್ದ ಕಾಮುಕನಿಗೆ 10ವರ್ಷ ಜೈಲು, 1ಲಕ್ಷ ರೂ. ದಂಡ

    ಪಾಟ್ನಾ: ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

    ಕಾಮುಕ ಬಿಕೇಶ್ ಕುಮಾರ್ ಅಲಿಯಾಸ್ ಬಾಲುಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಓಂಪ್ರಕಾಶ್ ಶ್ರೀವತ್ಸವ್ ಈ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿ ಕುಟುಂಬಕ್ಕೆ 1 ಲಕ್ಷ ರೂ. ದಂಡ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.

    ಅಪರಾಧಿ ಬಿಕೇಶ್ ಕಳೆದ 2013ರ ಜುಲೈ 19ರಂದು ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದನು. ಈ ಘಟನೆ ಬಿಹಾರದ ನಾವಡ ನಗರದಲಲಿ ನಡೆದಿತ್ತು.

    ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಕಾಮುಕ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರಸವೆಗಿದ್ದನು. ಈ ಸಂಬಂಧ ಬಿಕೇಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.

  • ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

    ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

    ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3 ದಿನಗಳ ಹಿಂದೆ ಪಬ್ಲಿಕ್‍ ಟಿವಿ ಪ್ರಸಾರ ಮಾಡಿದ್ದ ವರದಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

    ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮದ್ಯ ನಿಷೇಧದ ವಿಷಯ ಪ್ರಸ್ತಾಪಿಸಿದರು. ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಇಲ್ಲ’. ‘ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಇನ್ನೂ ಸಾಧ್ಯವಾಗಿಲ್ಲ. ಈ ಕುರಿತು ಕೇಂದ್ರ ಸರ್ಕಾರ ನ್ಯಾಷನಲ್ ಪಾಲಿಸಿ ಆಗಬೇಕು. ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಲು ನಿಮ್ಮ ಪ್ರಧಾನಿ ಮೋದಿ ಅವರಿಗೆ ಹೇಳಿ, ಆವಾಗ ನಾವೂ ಸಪೋರ್ಟ್ ಮಾಡುತ್ತೇವೆ’ ಅಂದರು. ಅಲ್ಲದೇ ನಿಮ್ಮ ಸರ್ಕಾರ ಇದ್ದಾಗ ಏಕೆ ಮಾಡಲಿಲ್ಲ. ಮದ್ಯ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಿಮಗೆ ಸಂಸ್ಕೃತಿ -ಸಂಸ್ಕಾರ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

    ಸಿಎಂ ಅವರ ಹೇಳಿಕೆಗೆ ಕೋಪಗೊಂಡ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಧರಣಿ ನಡೆಸಿ, ಅಸಂವಿಧಾನಿಕ ಪದಗಳನ್ನು ಕಡತದಿಂದ ತೆಗೆಯುವಂತೆ ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಒಪ್ಪದಿದ್ದಾಗ ಕಲಾಪದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗ ರೂಲಿಂಗ್ ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದರಿಂದ, ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದರು.

    ಈ ಹಿಂದೆ ಸುಪ್ರೀಂಕೋರ್ಟ್ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ನೀಡಿದಾಗ ಕರ್ನಾಟಕ ಸೇರಿದಂತೆ ರಾಜ್ಯಗಳು ಹೆದ್ದಾರಿಗಳನ್ನೇ ಡಿನೋಟಿಫೈಗೇ ಮುಂದಾಗಿದ್ದವು. ಅಲ್ಲದೇ ಸುಪ್ರೀಂ ಆದೇಶದಿಂದ ಬೊಕ್ಕಸಕ್ಕೆ ನಷ್ಟ ಆಗುತ್ತೆ ಎಂದು ಹೇಳಿದ್ದವು.

    ಇನ್ನು ನಮ್ಮ ರಾಜ್ಯ ಸರ್ಕಾರದ ಮದ್ಯ ಮಾರಾಟದಿಂದ ಲಭ್ಯವಾಗುವ ಆದಾಯ ಸುಮಾರು 11,000 ಕೋಟಿ ರೂ. ಇದ್ದು, ಈ ವರ್ಷದ ಆದಾಯವನ್ನು 18,000 ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.

    ರಾಜ್ಯದಲ್ಲಿ ಸಂಪೂರ್ಣ ಸಾರಾಯಿ ನಿಷೇಧ ಅಸಾಧ್ಯ ಅಂತ ಸಿಎಂ ಹೇಳಿದ್ದಾರೆ. ಹಾಗಾದ್ರೆ ದೇಶದ ಎಲ್ಲೆಲ್ಲಿ ಸಾರಾಯಿ ನಿಷೇಧ ಮಾಡಲಾಗಿದೆ. ನಿಷೇಧದ ಕಸರತ್ತು ನಡೆದಿದೆ ಅನ್ನೋದರ ಡೀಟೇಲ್ಸ್ ಇಲ್ಲಿದೆ.

    – ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಲಾಗಿದ್ದು, ಮದ್ಯ ಮಾರಾಟ ಮಾಡಿದರೆ ಮರಣ ದಂಡನೆ ಶಿಕ್ಷೆ ನೀಡಬಹುದಾಗಿದೆ. ಅಲ್ಲದೇ ಮದ್ಯವನ್ನು ಮನೆಯಲ್ಲೂ ತಯಾರಿ ಮಾಡುವವರು ಶಿಕ್ಷೆಗೆ ಗುರಿ ಆಗಬೇಕಾಗುತ್ತದೆ.

    – ಬಿಹಾರ 2016ರಲ್ಲಿ ಮದ್ಯ ಮಾರಾಟ ನಿಷಿದ್ಧ ಕಾನೂನು ಜಾರಿ. ಮದ್ಯ ಮಾರಿದರೆ ಜಾಮೀನು ರಹಿತ ವಾರೆಂಟ್. ಕಾನೂನು ಬಾಹಿರ ಮದ್ಯ ಕೇಸಿನ ವಿಚಾರಣೆಗೆ ವಿಶೇಷ ಕೋರ್ಟ್ ರಚನೆ ಮಾಡಲಾಗಿದೆ.

    – ಲಕ್ಷದ್ವೀಪ ಮದ್ಯಕ್ಕೆ ಅಲ್ಪ ನಿರ್ಬಂಧ – ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಸಂಪೂರ್ಣ ನಿಷೇಧವಿಲ್ಲ. ಆದರೆ ದ್ವೀಪಪ್ರದೇಶ ಬಂಗಾರಂನಲ್ಲಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

    – ಕೇರಳ ಮದ್ಯ ನಿಷೇಧಿಸಿ ಆದೇಶ ವಾಪಸ್? 2014ರಲ್ಲಿ ಕೇರಳ ಸರ್ಕಾರದಿಂದ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಜಾರಿ ಮಾಡಲಾಗಿತ್ತು. ಆದರೆ 2017ರಲ್ಲಿ ಸಂಪೂರ್ಣ ನಿಷೇಧ ಆದೇಶ ತೆರವು ಮಾಡಿ ಹೋಟೆಲ್, ಬಾರ್, ಏರ್ ಪೋರ್ಟ್ ನಲ್ಲಿ ಮಾರಾಟ ವ್ಯವಸ್ಥೆ ಆರಂಭ ಮಾಡಲಾಗಿದೆ.

    – ಕೇರಳ ರಾಜ್ಯದಂತೆ ಆಂಧ್ರಪ್ರದೇಶ ರಾಜ್ಯದಲ್ಲಿಯೂ ಮದ್ಯ ನಿಷೇಧ ಜಾರಿ ಮಾಡಿ ಆದೇಶವನ್ನು ಹಿಂಪಡೆಯಲಾಯಿತು. 1994ರಲ್ಲಿ ಎನ್.ಟಿ. ರಾಮರಾವ್ ನೇತೃತ್ವದ ಸರ್ಕಾರ ಮದ್ಯ ನಿಷೇಧ ಮಾಡಿದರೆ. 1997ರಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಆದೇಶವನ್ನು ಹಿಂಪಡೆಯಿತು.

  • ಪ್ರಧಾನಿ ಮೋದಿ ವಿರುದ್ಧ ಎತ್ತುವ ಕೈಗಳನ್ನು ಕತ್ತರಿಸ್ತೀವಿ: ಬಿಜೆಪಿ ಸಂಸದ

    ಪ್ರಧಾನಿ ಮೋದಿ ವಿರುದ್ಧ ಎತ್ತುವ ಕೈಗಳನ್ನು ಕತ್ತರಿಸ್ತೀವಿ: ಬಿಜೆಪಿ ಸಂಸದ

    ಪಾಟ್ನಾ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತೋರಿಸುವ ಬೆರಳುಗಳನ್ನು ಮುರಿಯಲಾಗುವುದು. ಅವಶ್ಯಕತೆ ಬಿದ್ದರೆ ಅಂತಹವರ ಕೈ ಯನ್ನು ಕತ್ತರಿಸಲಾಗುವುದು ಎಂದು ಬಿಹಾರ ರಾಜ್ಯದ ಉಜಿಯಾಪುರ ಕ್ಷೇತ್ರದ ಸಂಸದ ನಿತ್ಯಾನಂದ ರಾಯ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಸೋಮವಾರ ಓಬಿಸಿ ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದ ಸಂಸದರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೋದಿ ಅವರ ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾ, ಮೋದಿಜಿ ತಾಯಿ ಮಗನಿಗೆ ಊಟ ಮಾಡಿಸಿಕೊಳ್ಳಲು ಕೂರುತ್ತಿದ್ದರು. ಆದರೆ ಇಂದು ಆ ತಟ್ಟೆಯ ಮುಂದೆ ಮಗನಿಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲ, ಒಬ್ಬ ಸಾಮಾನ್ಯ ಬಡ ವ್ಯಕ್ತಿ ಇಂದು ದೇಶದ ಪ್ರಧಾನಿಯಾಗಿದ್ದಾರೆ. ಅಂತಹ ಶ್ರೇಷ್ಟ ವ್ಯಕ್ತಿಯನ್ನು ನಾವೆಲ್ಲರೂ ಗೌರವಿಸಬೇಕು ಎಂದು ರಾಯ್ ತಿಳಿಸಿದ್ದಾರೆ.

    ಮೋದಿ ಅವರಿಗೆ ತೋರಿಸುವ ಪ್ರತಿಯೊಂದು ಬೆರಳನ್ನು ಮುರಿಯಲಾಗುವುದು ಮತ್ತು ಪ್ರಧಾನಿ ವಿರುದ್ಧ ಎತ್ತುವ ಕೈಗಳನ್ನು ಊನಗೊಳಿಸಲಾಗುವುದು. ಒಂದು ವೇಳೆ ಅವಶ್ಯಕತೆ ಬಿದ್ದಲ್ಲಿ ಅಂತಹ ಕೈಗಳನ್ನು ಕತ್ತರಿಸಿ ಹಾಕಲಾಗುವುದು ಅಂತಾ ಅಂದ್ರು. ಈ ವೇಳೆ ಸಭೆಯಲ್ಲಿ ಬಿಜೆಪಿ ನಾಯಕ ಸುಶೀಲ್ ಮೋದಿ ಸಹ ಉಪಸ್ಥಿತರಿದ್ದರು.

    ವಿವಾದವಾಗುತ್ತಿದ್ದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ನಿತ್ಯಾನಂದ ರಾಯ್, ನಾನು ದೇಶದ ಪ್ರಧಾನಿ ಮೋದಿ, ದೇಶದ ಗೌರವ ಮತ್ತು ಸುರಕ್ಷತೆಯ ವಿರುದ್ಧ ಧ್ವನಿ ಎತ್ತುವವರಿಗೆ ರೂಪಕವಾಗಿ ಹೇಳಲು ಕಠೋರ ಹೇಳಿಕೆಯನ್ನು ನೀಡಿದ್ದೇವೆ ಹೊರತು ಯಾವುದೇ ಪಕ್ಷ ಮತ್ತು ವ್ಯಕ್ತಿಯ ಬಗ್ಗೆ ನನ್ನ ಭಾಷಣದಲ್ಲಿ ಹೇಳಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    2016ರಲ್ಲಿ ನಿತ್ಯಾನಂದರನ್ನು ಬಿಹಾರನ ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 2016ರಲ್ಲಿ ಮೊದಲ ಬಾರಿಗೆ ಹಾಜಿಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಉಜಿಯಾಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು.

  • ಪೊಲೀಸರನ್ನು ನೋಡಿ ಮದುವೆ ಮಂಟಪದಿಂದ ಕಾಲ್ಕಿತ್ತ ವರ

    ಪೊಲೀಸರನ್ನು ನೋಡಿ ಮದುವೆ ಮಂಟಪದಿಂದ ಕಾಲ್ಕಿತ್ತ ವರ

    ಪಾಟ್ನಾ: ಮದುವೆಗೆ ಆಗಮಿಸಿದ ಪೊಲೀಸರನ್ನು ಕಂಡ ಕೂಡಲೇ ವರನೊಬ್ಬ ಪರಾರಿಯಾಗಿರುವ ಘಟನೆ ಬಿಹಾರ ರಾಜ್ಯದ ಪ್ರವಾಹ ಉಪವಿಭಾಗದ ಅನುಮಂಡಲ ಎಂಬಲ್ಲಿ ನಡೆದಿದೆ.

    ಸೋಮವಾರ ಗ್ರಾಮದ ಉಮಾನಾಥ ದೇವಸ್ಥಾನದಲ್ಲಿ ಚಿನ್ನೈ ಗ್ರಾಮದ ಯುವಕ ಮತ್ತು ಮೊಕಾಮ್ ಗ್ರಾಮದ ಯುವತಿಯ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮದುವೆ ಮಂಟಪದಲ್ಲಿ ಅರಿಶಿಣ ಶಾಸ್ತ್ರ ನಡೆಯುವಾಗ ದೇವಸ್ಥಾನಕ್ಕೆ ಪೊಲೀಸರು ಆಗಮಿಸಿದ್ದಾರೆ. ಪೊಲೀಸರನ್ನು ಕಂಡ ಕೂಡಲೇ ಕೂತಿದ್ದ ಸ್ಥಳದಿಂದ ಎದ್ದು ನಿಂತ ವರ ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾನೆ.

    ಇದನ್ನೂ ಓದಿ: ಕಾಫಿನಾಡಿನಲ್ಲೊಂದು ವಿಶೇಷ ಮದುವೆ- 3 ಅಡಿ ವರ, 3 ಅಡಿ ವಧು..!

    ಮದುವೆ ಬಿಟ್ಟು ವರ ಪರಾರಿಯಾಗಿದ್ದನ್ನು ಕಂಡ ವಧುವಿನ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ವಧುವಿನ ಪೋಷಕರು ದೂರು ದಾಖಲಿಸುತ್ತಿದ್ದಂತೆ ಠಾಣೆಗೆ ಬಂದ ವರನೂ ಸಹ ದೂರು ದಾಖಲಿಸಿದ್ದಾನೆ.

    ಮದುವೆ ಮಂಟಪದಲ್ಲಿ ನನ್ನ ಬಳಗದವರು ಯಾರು ಇರಲಿಲ್ಲ. ಬಲವಂತವಾಗಿ ನನಗೆ ಈ ಮದುವೆ ಮಾಡಲಾಗುತ್ತಿತ್ತು. ಹಾಗಾಗಿ ನಾನು ಮದುವೆ ಮಂಟಪದಿಂದ ಹೊರ ಬಂದಿದ್ದೇನೆ ಎಂದು ಹೇಳಿದ್ದಾನೆ.

    ಇದನ್ನೂ ಓದಿ: ಆರತಕ್ಷತೆಯಲ್ಲಿದ್ದ ವಧು ರಾತ್ರೋರಾತ್ರಿ ನಾಪತ್ತೆ..!

    ಪೊಲೀಸರು ವರ ಮತ್ತು ವಧುವಿನ ಕಡೆಯವರ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಈ ಮದುವೆ ಬಗ್ಗೆ ಗ್ರಾಮದ ತುಂಬೆಲ್ಲಾ ಗುಸು ಗುಸು ಮಾತುಗಳು ಕೇಳಿ ಬರುತ್ತಿವೆ.

    ಇದನ್ನೂ ಓದಿ:  ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡ ಲೇಡಿ ಡಾಕ್ಟರ್ ಬಸ್ ಕಂಡಕ್ಟರನ್ನ ಮದುವೆಯಾದ್ಳು!

    ಇದನ್ನೂ ಓದಿ: ಮೊಗ್ಗಿನ ಜಡೆ ವಿಚಾರಕ್ಕೆ ಮುರಿದು ಬಿತ್ತು ಮದುವೆ!

     

  • ಬಿಹಾರದಲ್ಲಿ ಮಹಿಳೆಯರಿಂದ ಕಸದಬುಟ್ಟಿಗೆ ಪೂಜೆ! ವಿಡಿಯೋ ನೋಡಿ

    ಬಿಹಾರದಲ್ಲಿ ಮಹಿಳೆಯರಿಂದ ಕಸದಬುಟ್ಟಿಗೆ ಪೂಜೆ! ವಿಡಿಯೋ ನೋಡಿ

    ಪಾಟ್ನಾ: ದೇವಸ್ಥಾನದಲ್ಲಿ ಇಟ್ಟಿದ್ದ ಕಾಂಗರೂ ಆಕೃತಿಯ ಕಸದಬುಟ್ಟಿಗೆ ಪೂಜೆ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇತ್ತೀಚಿಗೆ ಬಿಹಾರದಲ್ಲಿ ನಡೆದ ಚಾತ್‍ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಕಾಂಗರೂ ಆಕೃತಿಯ ಕಸದಬುಟ್ಟಿಗೆ ಪೂಜೆಮಾಡಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.

    ವಿಡಿಯೋದಲ್ಲೇನಿದೆ: ದೇವಸ್ಥಾನದ ಹೊರಗಡೆ ಇಟ್ಟಿದ್ದ ಕಾಂಗರೂ ಕಸದಬುಟ್ಟಿಯ ಮೇಲೆ ಮೂರು ಜನ ಮಹಿಳೆಯರು ಮೊದಲು ಚೊಂಬಿನಿಂದ ನೀರನ್ನು ಹಾಕಿ, ನಂತರದಲ್ಲಿ ಅವರಲ್ಲಿನ ಒಬ್ಬ ಮಹಿಳೆ ಶಿರಬಾಗಿ ಹೂವುಗಳನ್ನು ಹಾಕಿ ಪ್ರಾರ್ಥಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ನೋಡಿದವರು ಕಸದಬುಟ್ಟಿ ಹಾಳಾಗದಂತೆ ಕಾಪಾಡಲು ಈ ರೀತಿಯಲ್ಲಿ ಮಾಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಕೆಲವರು ದೇವರಿಗೆ ಮತ್ತು ಕಸದಬುಟ್ಟಿಗೆ ಹೋಲಿಸಿ ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಮುರ್ಖರು, ಅಜ್ಞಾನಿಗಳು ದೇವರ ಮೂರ್ತಿಯನ್ನು ಬಿಟ್ಟು ಕಸದಬುಟ್ಟಿಗೆ ಪೂಜೆ ಸಲ್ಲಿಸಿದ್ದಾರೆಂದು ಗೇಲಿ ಮಾಡಿದ್ದಾರೆ.

    https://twitter.com/Sassy_Soul_/status/924223258789949440?ref_src=twsrc%5Etfw&ref_url=http%3A%2F%2Fwww.india.com%2Fbuzz%2Fvideo-of-women-offering-prayers-to-dustbin-god-in-a-bihar-temple-goes-viral-jai-ho-swachh-bharat-abhiyaan-2577450%2F

    https://twitter.com/priyathomas/status/924247233226092544?ref_src=twsrc%5Etfw&ref_url=http%3A%2F%2Fwww.india.com%2Fbuzz%2Fvideo-of-women-offering-prayers-to-dustbin-god-in-a-bihar-temple-goes-viral-jai-ho-swachh-bharat-abhiyaan-2577450%2F