Tag: Bihar

  • ಸಿಎಂ ನಿತೀಶ್ ಕುಮಾರ್‍ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಸಿಎಂ ನಿತೀಶ್ ಕುಮಾರ್‍ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಪಾಟ್ನಾ: ಬಿಹಾರದ ಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಸಿಎಂ ನೀತಿಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ್ದಾರೆ.

    ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿಯನ್ನು ಮಾಡಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡರು. ಇಂದು ಮುಂಜಾನೆ ಪ್ರಧಾನಿ ಮೋದಿಯವರನ್ನು ಸ್ವತಃ ನಿತೀಶ್ ಕುಮಾರ್ ಅವರೇ ಕೆಂಪು ಗುಲಾಬಿಯನ್ನು ನೀಡಿ ಸ್ವಾಗತಿಸಿದರು.

    ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಪಟ್ನಾ ವಿವಿ ಉತ್ತಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡಿದ್ದು. ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುತ್ತಿದೆ. ವಿವಿಯಲ್ಲಿ ಮತ್ತಷ್ಟು ಹೊಸ ಅವಿಷ್ಕಾರಗಳನ್ನು ಕೈಗೊಳ್ಳ ಬೇಕಿದೆ ಎಂಬ ಸಲಹೆಯನ್ನು ನೀಡಿದರು. ನಂತರ ಪಟ್ನಾ ವಿವಿಯನ್ನು ಕೇಂದ್ರಿಯ ವಿಶ್ವವಿದ್ಯಾಲಯವಾಗಿ ಘೋಷಣೆ ಮಾಡಿರುವ ಕುರಿತು ಮಾಹಿತಿ ನೀಡಿದರು.

    ಸಿಎಂ ನೀತಿಸ್ ಕುಮಾರ್ ರಾಜ್ಯದ ಅಭಿವೃದ್ಧಿಗೆ ಕೈಗೊಂಡ ಕಾರ್ಯಗಳ ಕುರಿತು ಪ್ರಸ್ಥಾಪಿಸಿದ ಅವರು 2022ರ 75 ನೇ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ದೇಶದ ಅಭಿವೃದ್ಧಿ ಹೊಂದಿರುವ ರಾಜ್ಯವಾಗಿ ಬಿಹಾರ ರೂಪುಗೊಳ್ಳಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.

    ವಿಶ್ವವಿದ್ಯಾಲಯ ಶತಮಾನೋತ್ಸವ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿಯವರು ಬಿಹಾರದಲ್ಲಿ 5 ಸಾವಿರ ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಿದ್ದಾರೆ. ಇದರಲ್ಲಿ ಪ್ರಮುಖವಾಗಿ ಗಂಗಾ ಶುದ್ಧಿಕರಣ ಯೋಜನೆಯ ಅಡಿಯಲ್ಲಿ ಗಂಗಾ ನದಿಗೆ 1,200 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಮಾಡುವ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ವಿವಿ ಶತಮಾನೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರಿಗೂ ಆಹ್ವಾನ ನೀಡಲಾಗಿದ್ದರೂ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಇನ್ನು ಶತೃಘ್ನ ಸಿನ್ಹಾ ತಮಗೆ ಯಾವುದೇ ಆಹ್ವಾನವನ್ನು ನೀಡಿರಲಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಈ ಕುರಿತು ಮಾಹಿತಿ ನೀಡಿದ ವಿವಿ ಉಪಕುಲಪತಿ ರಾಸ್ ಬಿಹಾರಿ ಬೋಸ್ ಆಹ್ವಾನ ಪತ್ರಿಕೆಗಳ ಮುದ್ರಣಾ ತಡವಾಗಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿದೆ. ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಯಶವಂತ್ ಸಿನ್ಹಾ ಅವರಿಗೂ ಆಹ್ವಾವನ್ನು ನೀಡಲಾಗಿದೆ ಎಂದು ಸ್ವಷ್ಟೀಕರಣ ನೀಡಿದರು. ವಿವಿಯ ಶತಮಾನೋತ್ಸವನ್ನು ಡಿಸೆಂಬರ್ 10 ರಂದು ವಿಜೃಂಭಣೆಯಿಂದ ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿವಿಯ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಆಹ್ವಾನಿಸುವುದಾಗಿ ತಿಳಿಸಿದರು.

    ಈ ಕಾರ್ಯಕ್ರಮದ ಬಳಿಕ ನರೇಂದ್ರ ಮೋದಿ ಅವರು ಹೊಸದಾಗಿ ನಿರ್ಮಾಣ ಮಾಡಿರುವ ಮ್ಯೂಸಿಯಂಗೆ ಭೇಟಿ ನೀಡಿದರು.

     

     

     

     

     

     

     

     

     

     

     

  • ವಿದ್ಯಾರ್ಥಿಯ ಬದಲು ಬಿಹಾರದಲ್ಲಿ ಪರೀಕ್ಷೆ ಬರೆಯಲಿದ್ದಾನೆ ಗಣೇಶ!

    ವಿದ್ಯಾರ್ಥಿಯ ಬದಲು ಬಿಹಾರದಲ್ಲಿ ಪರೀಕ್ಷೆ ಬರೆಯಲಿದ್ದಾನೆ ಗಣೇಶ!

    – ಹಾಲ್ ಟಿಕೆಟ್ ನಲ್ಲಿ ಗಣೇಶನ ದೇವರ ಫೋಟೋ ಹಾಕಿ ಎಡವಟ್ಟು

    ಪಾಟ್ನಾ: ಬಿಹಾರದಲ್ಲಿ ಶಿಕ್ಷಣ ವ್ಯವಸ್ಥೆ ಯಾವ ರೀತಿ ಇದೇ ಎಂದು ಈಗಾಗಲೇ ನಿಮಗೆ ತಿಳಿದಿದೆ. ಇದಕ್ಕೆ ಮತ್ತೊಂದು ಪುರಾವೆಯಂತೆ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಯ ಹಾಲ್ ಟಿಕೆಟ್ ನಲ್ಲಿ ಗಣೇಶ ದೇವರ ಫೋಟೋವನ್ನು ಮುದ್ರಿಸಿ ಎಡವಟ್ಟು ಮಾಡಿದೆ.

    ಬಿಹಾರದ ದರ್ಬಂಗಾ ಪ್ರತಿಷ್ಠಿತ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 9 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆ ಪ್ರಾರಂಭವಾಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ವಿತರಿಸಿದೆ. ಆದರೆ ಬಿ.ಕಾಂ ವಿದ್ಯಾರ್ಥಿಯೊಬ್ಬನ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಯ ಫೋಟೋ ಬದಲು ಗಣೇಶನ ಫೋಟೋ ಹಾಕಿ ಮುದ್ರಿಸಿದೆ.

    ಪ್ರಥಮ ವರ್ಷದ ಬಿ.ಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಕೃಷ್ಣ ಕುಮಾರ್ ರಾಯ್ ಎಂಬ ವಿದ್ಯಾರ್ಥಿಯ ಪ್ರವೇಶ ಪತ್ರದಲ್ಲಿ ಈ ರೀತಿ ಎಡಟ್ಟು ಆಗಿದೆ. ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೆ ಎಂದರೆ ಪರೀಕ್ಷಾ ಅಧಿಕಾರಿಗಳು ಈ ಹಾಲ್ ಟಿಕೆಟ್ ಗೆ ಸಹಿ ಕೂಡ ಹಾಕಿದ್ದಾರೆ. ಫೋಟೋ ಎಡವಟ್ಟಿನ ಜೊತೆಗೆ ವಿದ್ಯಾರ್ಥಿಯ ವಿಳಾಸವನ್ನು ಸಹ ತಪ್ಪಾಗಿ ಮುದ್ರಣವಾಗಿದೆ.

    ನಾನು ಪರೀಕ್ಷೆಯ ಫಾರ್ಮ್‍ನಲ್ಲಿ ವಿಳಾಸವನ್ನು ಸರಿಯಾಗಿ ಬರೆದು ನನ್ನ ಫೋಟೋವನ್ನೇ ಹಾಕಿದ್ದೆ. ಆದರೆ ಹಾಲ್ ಟಿಕೆಟ್ ನೋಡಿದಾಗ ನನಗೆ ಶಾಕ್ ಆಯ್ತು. ಅದರಲ್ಲಿ ಗಣೇಶನ ಫೋಟೋ ಇತ್ತು. ಇದನ್ನು ನೋಡಿದ ತಕ್ಷಣ ಸರಿ ಮಾಡಿಸಲು ಅಧಿಕಾರಿಗಳ ಬಳಿ ಹೋದೆ. ಅವರು ತಾಂತ್ರಿಕ ಸಮಸ್ಯೆಯಿಂದಾಗಿ ಈ ಗಣೇಶ ಫೋಟೋ ಮುದ್ರಣವಾಗಿದೆ. ನಾವು ತಪ್ಪು ಮಾಡಿಲ್ಲ. ನಾವು ಸೈಬರ್ ಸೆಂಟರ್‍ಗೆ ಪ್ರವೇಶಾತಿ ಪತ್ರಗಳನ್ನು ಸಿದ್ಧ ಪಡಿಸಲು ನೀಡಿದ್ದೇವು. ಅಲ್ಲಿ ಆಗಿರುವ ಎಡವಟ್ಟು ಎಂದು ತಿಳಿಸಿದ್ದಾರೆ ಎಂಬುದಾಗಿ ವಿದ್ಯಾರ್ಥಿ ಕೃಷ್ಣ ಹೇಳಿದ್ದಾನೆ.

    ಈ ತಪ್ಪು ಹೇಗಾಯ್ತು ಎನ್ನುವುದನ್ನು ಶೀಘ್ರವಾಗಿ ವಿಚಾರಿಸಿ ಬೇಗ ಇದನ್ನು ಸರಿ ಮಾಡುತ್ತೇವೆ. ಇದರಿಂದ ವಿದ್ಯಾರ್ಥಿಗೆ ಯಾವುದೇ ತೊಂದರೆ ಆಗುವುದಿಲ್ಲ. ಖಚಿತವಾಗಿ ಅವನು ಪರೀಕ್ಷೆಗೆ ಕುಳಿತು ಕೊಳ್ಳುತ್ತಾನೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾ ಅಧಿಕಾರಿ ಕುಲಾನಂದ್ ಯಾದವ್ ಹೇಳಿದ್ದಾರೆ.

    ಇದೇ ವರ್ಷ ಕಳೆದ ಜನವರಿಯಲ್ಲಿ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ ಪರೀಕ್ಷೆಯಲ್ಲಿ ಯುವತಿಯ ಪ್ರವೇಶಾತಿ ಕಾರ್ಡ್‍ನಲ್ಲಿ ಆಕೆಯ ಫೋಟೋ ಬದಲು ಭೋಜ್‍ಪುರಿ ನಟಿಯ ಟಾಪ್‍ಲೆಸ್ ಫೋಟೋವನ್ನು ಹಾಕಿ ಬಿಹಾರ ಮಂಡಳಿ ಕಾರ್ಡ್ ವಿತರಿಸಿತ್ತು.

  • ಎಂಎ ಅರ್ಥಶಾಸ್ತ್ರ ಪರೀಕ್ಷೆ ಪಾಸ್ ಮಾಡಿದ್ರು 98ರ ಹಿರಿಯ ವ್ಯಕ್ತಿ!

    ಎಂಎ ಅರ್ಥಶಾಸ್ತ್ರ ಪರೀಕ್ಷೆ ಪಾಸ್ ಮಾಡಿದ್ರು 98ರ ಹಿರಿಯ ವ್ಯಕ್ತಿ!

    ಪಾಟ್ನಾ: 98 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಮುಕ್ತ ವಿಶ್ವವಿದ್ಯಾಲಯದ ಮೂಲಕ ಅರ್ಥಶಾಸ್ತ್ರ ಸ್ನಾತಕೋತ್ತರ ಪರೀಕ್ಷೆಯನ್ನು ತೇರ್ಗಡೆಯಾಗಿ ಸುದ್ದಿಯಾಗಿದ್ದಾರೆ.

    1938ರಲ್ಲಿ ಪದವಿ ಪಡೆದಿದ್ದ ರಾಜ್ ಕುಮಾರ್ ವೈಶ್ಯ ಈಗ ಪಾಟ್ನಾದ ನಳಂದಾ ಮುಕ್ತ ವಿಯಲ್ಲಿ ಅರ್ಥಶಾಸ್ತ್ರ ಪರೀಕ್ಷೆಯನ್ನು ಬರೆದು ತೇರ್ಗಡೆಯಾಗಿದ್ದಾರೆ.

    ತನ್ನ ಸಾಧನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ ಅವರು, ಕೊನೆಗೂ ನನ್ನ ಜೀವನದ ದೊಡ್ಡ ಕನಸನ್ನು ನನಸು ಮಾಡಿದ್ದೇನೆ. ಸ್ನಾತಕೋತ್ತರ ಪದವಿ ಪಡೆದಿದ್ದಕ್ಕೆ ಸಂತೋಷ ಆಗುತ್ತಿದೆ. ಯಾರು ಯಾವ ವರ್ಷದಲ್ಲಿ ಬೇಕಾದರೂ ಕನಸು ನನಸು ಮಾಡಬಹುದು ಎನ್ನುವುದಕ್ಕೆ ನಾನು ಉತ್ತಮ ಉದಾಹರಣೆ ಎಂದು ಅವರು ಹೇಳಿದರು.

    ಯಾರು ಅವರ ಸ್ವ ಸಾಮಾರ್ಥ್ಯದ ಬಗ್ಗೆ ನಂಬಿಕೆ ಇಡುತ್ತಾರೋ ಅವರಿಗೆ ಯಾವಾಗಲೂ ಅವಕಾಶಗಳು ತೆರೆದಿರುತ್ತದೆ. ಯಾವತ್ತೂ ನಿರಾಶೆ ಭಾವನೆಯನ್ನು ಇಟ್ಟುಕೊಳ್ಳಬೇಡಿ ಎಂದು ಅವರು ಕಿರಿಯರಿಗೆ ಸಲಹೆ ನೀಡಿದರು.

    ಈ ಪ್ರಾಯದಲ್ಲಿ ಬೆಳಗ್ಗೆ ಬೇಗ ಎದ್ದು ಪರೀಕ್ಷೆಗೆ ತಯಾರಾಗುವುದು ಬಹಳ ಕಷ್ಟದ ಕೆಲಸವಾಗಿತ್ತು . 2015ಕ್ಕೆ ಸ್ನಾತಕೋತ್ತರ ಪದವಿಗೆ ದಾಖಲಾದ ವೈಶ್ಯ ಅವರು ಮುಂದೆ ಪಿಎಚ್‍ಡಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ನಲಂದಾ ಮುಕ್ತ ವಿವಿಯ ಅಧಿಕಾರಿ ಪ್ರತಿಕ್ರಿಯಿಸಿ, ಮೂರು ಗಂಟೆ ಬರೆದು ರಾಜ್ ಕುಮಾರ್ ವೈಶ್ಯ ಪರೀಕ್ಷೆ ಪೂರ್ಣಗೊಳಿಸಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆದ ಅವರು ಎರಡು ಡಜನ್‍ಗಿಂತ ಹೆಚ್ಚು ಉತ್ತರ ಪತ್ರಿಕೆ ತೆಗೆದುಕೊಂಡು ಉತ್ತರ ಬರೆದಿದ್ದಾರೆ ಎಂದು ತಿಳಿಸಿದರು.

    1920 ಏಪ್ರಿಲ್ 1ರಂದು ಉತ್ತರಪ್ರದೇಶದ ಬರೇಲಿಯಲ್ಲಿ ಜನಿಸಿದ ಇವರು 1938ರಲ್ಲಿ ಅಗ್ರಾ ವಿವಿಯಿಂದ ಪದವಿ ಪಡೆದ ಬಳಿಕ 1940ರಲ್ಲಿ ಕಾನೂನು ಡಿಗ್ರಿ ಪಡೆದಿದ್ದರು. ಕುಟುಂಬ ಸಮಸ್ಯೆಯಿಂದಾಗಿ ವೈಶ್ಯ ಅವರಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

    ಜಾರ್ಖಂಡ್ ನಲ್ಲಿ 1980ರವರೆಗೆ ಉದ್ಯೋಗದಲ್ಲಿದ್ದ ಇವರು ಜನರ ಮತ್ತು ದೇಶದ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಸ್ನಾತಕೋತ್ತರ ಅರ್ಥಶಾಸ್ತ್ರ ಪದವಿ ಓದಿದ್ದೇನೆ ಎಂದು ಹೇಳಿದ್ದಾರೆ.

    10 ವರ್ಷದ ಹಿಂದೆ ಪತ್ನಿಯನ್ನು ಕಳೆದುಕೊಂಡ ಇವರು ಮಗನ ಜೊತೆ ವಾಸವಾಗಿದ್ದಾರೆ. ಶುದ್ಧ ಸಸ್ಯಾಹಾರಿಯಾಗಿರುವ ವೈಶ್ಯ ಇದೂವರೆಗೆ ಆಧುನಿಕ ಜಗತ್ತಿನ ತಿಂಡಿಗಳನ್ನು ತಿನ್ನಿಲ್ಲವಂತೆ.

     

  • ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

    ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

    ಪಾಟ್ನಾ: ಬಿಹಾರದ ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

    ‘ರಾಷ್ಟ್ರೀಯ ಸಹಾರಾ’ಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಂಕಜ್ ಮಿಶ್ರಾ ಅವರು ಬ್ಯಾಂಕ್ ನಿಂದ ಮನೆಗೆ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.

    ರಕ್ತಸ್ರಾವದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಈ ದಾಳಿ ಬಗ್ಗೆ ಅರ್ವಾಲಾದ ಎಸ್ಪಿ ದಿಲೀಪ್ ಕುಮಾರ್ ಅವರು ಪ್ರತಿಕ್ರಿಯಿಸಿ, ವೈಯ್ಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಿಶ್ರಾ ಅವರ ಮೇಲೆ ದಾಳಿಯಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

  • 1500 ರೂ. ಆಸೆಗಾಗಿ ಶವವನ್ನ ನದಿಗೆಸೆದ ರೈಲ್ವೆ ಪೊಲೀಸ್- ವಿಡಿಯೋ ವೈರಲ್

    1500 ರೂ. ಆಸೆಗಾಗಿ ಶವವನ್ನ ನದಿಗೆಸೆದ ರೈಲ್ವೆ ಪೊಲೀಸ್- ವಿಡಿಯೋ ವೈರಲ್

    ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ ನಡೆದಿದೆ.

    ರೈಲ್ವೆ ಪೊಲೀಸ್ ಅಧಿಕಾರಿ ಹಾಗು ಮತ್ತೊಬ್ಬ ವ್ಯಕ್ತಿ ಶವವನ್ನು ನದಿಗೆ ಎಸೆಯುವ ವೇಳೆ ಪ್ರತ್ಯಕ್ಷದರ್ಶಿಗಳು ಇದನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ದರ್ಭಂಗಾ ರೈಲ್ವೆ ನಿಲ್ದಾಣದ ಬಳಿ ಸರ್ಕಾರಿ ರೈಲ್ವೆ ಪೊಲೀಸರಿಗೆ(ಜಿಆರ್‍ಪಿ) ಗುರುವಾರದಂದ ಅಪರಿಚಿತ ಶವವೊಂದು ಪತ್ತೆಯಾದ ಬಳಿಕ ಈ ಘಟನೆ ನಡೆದಿದೆ.

    ನಿಯಮಗಳ ಪ್ರಕಾರ ಅಪರಿಚಿತ ಶವ ಪತ್ತೆಯಾದಾಗ ಭಾರತೀಯ ರೈಲ್ವೇ ಶವ ಸಂಸ್ಕಾರಕ್ಕಾಗಿ 1500 ರೂ. ನೀಡುತ್ತದೆ. ಈ 1500 ರೂ. ಹಣವನ್ನ ಜೇಬಿಗಿಳಿಸಿಕೊಳ್ಳಬಹುದು ಎಂಬ ಆಸೆಯಿಂದ ಜಿಆರ್‍ಪಿ ಅಧಿಕಾರಿ ಅವ್ದೇಶ್ ಮಿಶ್ರಾ ಹಾಗೂ ಶವವನ್ನು ಇರಿಸಲಾಗಿದ್ದ ಆಂಬುಲೆನ್ಸ್‍ನ ಚಾಲಕ ದರ್ಭಂಗಾ- ಸಮಸ್ತಿಪುರ್ ರಸ್ತೆಯಲ್ಲಿನ ಬಾಗ್ಮತಿ ನದಿಗೆ ಶವವನ್ನು ಎಸೆಯಲು ನಿರ್ಧರಿಸಿದ್ದರು.

    ಶವವನ್ನು ಎಸೆಯುವ ವೇಳೆ ಸ್ಥಳದಲ್ಲಿದ್ದವರು ಈ ದೃಶ್ಯವನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಸ್ಥಳದಲ್ಲಿದ್ದವರು ಅವ್ದೇಶ್ ಹಾಗೂ ಆಂಬುಲೆನ್ಸ್ ಚಾಲಕನಿಗೆ ಏನು ಮಾಡ್ತೀದ್ದೀರ ಅಂತ ವಿಚಾರಿಸಿದ್ದರು. ಆಗ ಅವ್ದೇಶ್, ಶವ ಕೊಳೆತುಹೋಗಿದ್ದರಿಂದ ನದಿಗೆ ಎಸೆಯುತ್ತಿದ್ದೇವೆ ಎಂದು ಹೇಳಿದ್ದರು.

    ಈ ದೃಶ್ಯವನ್ನ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ ವ್ಯಕ್ತಿ ಇದನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆಯ ವಿರುದ್ಧ ಕೋಪದಿಂದ ಕಮೆಂಟ್‍ಗಳನ್ನ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಎಸ್‍ಪಿ ಗೆ ಈ ಬಗ್ಗೆ ಮಾಹಿತಿ ತಿಳಿದು ತನಿಖೆಗೆ ಆದೇಶಿಸಿದ್ದರು. ರೈಲ್ವೆ ಪೊಲೀಸ್‍ನ ಈ ನಾಚಿಕೆಗೇಡಿನ ಕೃತ್ಯ ನಿಜವೆಂದು ಸಾಬೀತಾಗಿದೆ. ಕೂಡಲೇ ಇಲಾಖೆ ಕ್ರಮ ಕೈಗೊಂಡಿದ್ದು, ಅವ್ದೇಶ್‍ರನ್ನ ಅಮಾನತು ಮಾಡಿದೆ.

  • ಜನ್ರ ಕಣ್ಣಮುಂದೆ ತಂದೆ, ತಾಯಿ, ಮಗು ನೀರಿನಲ್ಲಿ ಕೊಚ್ಚಿ ಹೋದ್ರು: ವಿಡಿಯೋ ನೋಡಿ

    ಜನ್ರ ಕಣ್ಣಮುಂದೆ ತಂದೆ, ತಾಯಿ, ಮಗು ನೀರಿನಲ್ಲಿ ಕೊಚ್ಚಿ ಹೋದ್ರು: ವಿಡಿಯೋ ನೋಡಿ

    ಪಾಟ್ನಾ: ಒಂದು ದಿನದ ಮಳೆಗೆ ಇಡೀ ಬೆಂಗಳೂರು ತೋಯ್ದು ತೊಪ್ಪೆಯಾಗಿರೋದನ್ನು ನೋಡಿದ್ದೀರಿ. ಆದ್ರೆ ನೆರೆ ರಾಜ್ಯಗಳಲ್ಲಂತೂ ಮಳೆರಾಯನ ಅಬ್ಬರ ಇನ್ನೂ ಭಯಾನಕವಾಗಿದೆ. ನೇಪಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಹಾರದ 14 ಜಿಲ್ಲೆಗಳು ಪ್ರವಾಹದಲ್ಲಿ ಬಹುತೇಕ ಮುಳುಗಿಹೋಗಿವೆ.

    ಅರೇರಿಯಾ ಜಿಲ್ಲೆಯೊಂದರಲ್ಲೇ 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದೇ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದು ಬೀಳುವ ಸ್ಥಿತಿಯಲ್ಲಿದ್ರೂ ದಾಟಲು ಯತ್ನಿಸಿದ ತಂದೆ-ತಾಯಿ ಮತ್ತು ಮಗು ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಅದೃಷ್ಟವಶಾತ್ ತಂದೆ ಪಾರಾಗಿದ್ದು ತಾಯಿ ಮಗು ನೂರಾರು ಜನರ ಕಣ್ಣೆದುರೇ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದು ಜನರ ಅಸಹಾಯಕತೆಯನ್ನ ತೋರಿಸ್ತಿದೆ.

    ಇದುವರೆಗೂ ಬಿಹಾರದಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 98ಕ್ಕೆ ಏರಿದ್ದು, 73 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸಹರ್ಸಾ ಜಿಲ್ಲೆಯಂತೂ ಸಂಪೂರ್ಣ ಮುಳುಗಿಹೋಗಿದೆ.

    https://www.youtube.com/watch?v=cXuvxBoGMVI

  • ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

    ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

     

    ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

    ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ.

    ರಾಜ್ಯಸಭೆಯಲ್ಲಿ ಜಡಿಯು 10 ಸದಸ್ಯರನ್ನ ಹೊಂದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದಿದ್ದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ ಕಾರಣ ಕಳೆದ ರಾತ್ರಿ ಪಕ್ಷದ ರಾಜ್ಯಸಭಾ ಸದಸ್ಯ ಅನಿಲ್ ಅನ್ವರ್ ಅನ್ಸಾರಿ ಅವರನ್ನ ಅಮಾನತು ಮಾಡಲಾಗಿತ್ತು.

    ಬಿಜಾರದಲ್ಲಿ ಕಳೆದ ತಿಂಗಳು ನಿತೀಶ್ ಕುಮಾರ್ ಸರ್ಕಾರ ರಚಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಅವರ ನಡುವೆ ಅಂತರ ಶುರುವಾಗಿತ್ತು.

    ಸದ್ಯ ಬಿಹಾರ ಪ್ರವಾಸದಲ್ಲಿರುವ ಶರದ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಇನ್ನೂ ಆರ್‍ಜೆಡಿ ಹಾಗೂ ಕಾಂಗ್ರೆಸ್ ಮಹಾಮೃತ್ರಿಯ ಭಾಗವಾಗಿದ್ದೇನೆ ಎಂದು ನಂಬಿದ್ದೇನೆ. ಜೆಡಿಯು ಕೇವಲ ನಿತೀಶ್ ಕುಮಾರ್ ಪಕ್ಷವಲ್ಲ. ನನ್ನ ಪಕ್ಷವೂ ಹೌದು ಎಂದಿದ್ದಾರೆ.

    ಮತ್ತೊಂದು ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿತೀಶ್ ಕುಮಾರ್ ಅವರನ್ನ ಎನ್‍ಡಿಎಗೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

     

  • ಕೈಯಲ್ಲಿ ಹಾವು ಹಿಡಿದು ನೂರಾರು ಜನರ ಮೆರವಣಿಗೆ- ವಿಡಿಯೋ ಹಿಂದಿನ ನಿಜವಾದ ಸ್ಟೋರಿ ಏನು?

    ಕೈಯಲ್ಲಿ ಹಾವು ಹಿಡಿದು ನೂರಾರು ಜನರ ಮೆರವಣಿಗೆ- ವಿಡಿಯೋ ಹಿಂದಿನ ನಿಜವಾದ ಸ್ಟೋರಿ ಏನು?

    ಪಾಟ್ನಾ: ನೂರಾರು ಜನ ಯಾವುದೇ ಭಯವಿಲ್ಲದೆ ಕೈಯಲ್ಲಿ ಹಾವುಗಳನ್ನ ಹಿಡಿದುಕೊಂಡು ಮೆರವಣಿಗೆ ಸಾಗುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

    ಅದರಲ್ಲೂ ಈ ವಿಡಿಯೋದ ಬಗ್ಗೆ ಕೆಲವು ಯೂಟ್ಯೂಬ್ ಚಾನೆಲ್‍ಗಳು ಮತ್ತೊಂದು ಬಗೆಯದ್ದೇ ವಿವರಣೆ ನೀಡಿವೆ. ಬಿಹಾರದ ರತ್ನಪುರಿ ಗ್ರಾಮದಲ್ಲಿ ಮನೆ ನಿರ್ಮಿಸಲು ಪಾಯ ತೋಡುವಾಗ ಸಾವಿರಾರು ವರ್ಷಗಳಷ್ಟು ಹಳೆಯದಾದ 160 ಕೆಜಿ ತೂಕದ ಚಿನ್ನದ ಶಿವನ ವಿಗ್ರಹ ಸಿಕ್ಕಿದೆ. ಈ ವಿಗ್ರಹದ ಸುತ್ತ ಸಾವಿರಾರು ಹಾವುಗಳು ಪತ್ತೆಯಾಗಿದ್ದು, ವಿಗ್ರಹವನ್ನ ಕಾವಲು ಕಾಯುತ್ತಿದ್ದವು. ಅದನ್ನ ಜನರು ಹಿಡಿದುಕೊಂಡು ಮೆರವಣಿಗೆ ಹೊರಟಿದ್ದಾರೆ. ಇದೊಂದು ಪವಾಡ ಎಂದು ವಿಡಿಯೋದ ವಿವರಣೆಯಲ್ಲಿ ಹೇಳಲಾಗಿದ್ದು, ಕೆಲವು ವೆಬ್‍ಸೈಟ್‍ಗಳಲ್ಲೂ ಇದೇ ರೀತಿ ವರದಿಯಾಗಿದೆ. ಆದ್ರೆ ಈ ಸುದ್ದಿ ಎಷ್ಟು ಸತ್ಯ ಎಂಬುದನ್ನ ಗಮನಿಸಬೇಕಾಗುತ್ತದೆ.

    ಯಾಕಂದ್ರೆ ಕಳೆದ ವಾರ ಬಿಹಾರದಲ್ಲಿ ಶ್ರಾವಣ ಅಮಾವಾಸ್ಯೆಯ ಪ್ರಯುಕ್ತ ಜನರು ಕೈಯಲ್ಲಿ ಹಾವುಗಳನ್ನ ಹಿಡಿದು ಮೆರವಣಿಗೆ ಹೋಗುತ್ತಿರುವ ಬಗ್ಗೆ ಸುದ್ದಿ ಸಂಸ್ಥೆಯೊಂದು ಫೋಟೋವೊಂದನ್ನ ಪ್ರಕಟಿಸಿತ್ತು. ಕೆಲವು ಮಾಧ್ಯಮಗಳು ಕೂಡ ನಾಗ ಪಂಚಮಿ ಪ್ರಯುಕ್ತ ಜನ ಹಾವು ಹಿಡಿದು ಮೆರವಣಿಗೆ ಹೋಗುತ್ತಿರುವ ಬಗ್ಗೆ ವರದಿ ಮಾಡಿದ್ದವು. ಯೂಟ್ಯೂಬ್‍ನಲ್ಲಿ ಬಿಹಾರದ ನಾಗ ಪಂಚಮಿ ಎಂದು ಹುಡುಕಿದ್ರೆ ಇಂತಹ ಸಾಕಷ್ಟು ಹಳೆಯ ವಿಡಿಯೋಗಳು ಸಿಗುತ್ತವೆ. ಬಿಹಾರದಲ್ಲಿ ನಾಗ ಪಂಚಮಿ ಸಂದರ್ಭದಲ್ಲಿ ಈ ರೀತಿ ಹಾವುಗಳನ್ನ ಕೈಯಲ್ಲಿ ಹಿಡಿದು ಮೆರವಣಿಗೆ ಮಾಡ್ತಾರೆ.

    ಇದೇ ವಿಡಿಯೋವನ್ನ ಬಳಸಿ ಶಿವನ ವಿಗ್ರಹ ಕಾಯುತ್ತಿದ್ದ ಹಾವುಗಳಿವು ಎಂದು ಹೇಳಿರಬಹುದು. ಆದ್ರೆ ಶಿವನ ಚಿನ್ನದ ವಿಗ್ರಹ ನಿಜವಾಗಿಯೂ ಪತ್ತೆಯಾಗಿದ್ಯಾ ಅಥವಾ ಈ ಫೋಟೋ ಹಿಂದೆ ಬೇರೆಯದ್ದೇ ಕಥೆಯಿದ್ಯಾ? ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ.

    https://www.youtube.com/watch?v=tLrjOcqeNo4

    https://www.youtube.com/watch?v=BUCuaMs4Vqs

     

  • 6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

    6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

    ಪಾಟ್ನಾ: ಬಿಹಾರದಲ್ಲಿ ಮತ್ತೆ ಮಹಾಮೈತ್ರಿ ಶುರುವಾಗಿದೆ. ಬುಧವಾರದಂದು ಆರ್‍ಜೆಡಿ ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಇವತ್ತು ಬಿಜೆಪಿ ಜೊತೆ ಕೈಜೋಡಿಸಿ, 6ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ನಿತೀಶ್ ಜೊತೆಗೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಉಭಯ ಮುಖಂಡರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶನಿವಾರದಂದು ನಿತೀಶ್ ಕುಮಾರ್ ವಿಶ್ವಾಸ ಮತ ಗಳಿಸಿದ ನಂತರ ಇತರೆ ಸಚಿವರು ಪ್ರಮಾವಚನ ಸ್ವೀಕರಿಸಲಿದ್ದಾರೆ.

    ಇಡೀ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸುವ ಮೂಲಕ ನಿತೀಶ್ ಕುಮಾರ್ ತಮಗೆ ವಿಶ್ವಾಸದ್ರೋಹ ಮಾಡಿದ್ದಾರೆ ಅಂತ ಟೀಕಿಸಿದ್ದಾರೆ. ಅಧಿಕಾರಕ್ಕಾಗಿ ಜನ ಏನು ಬೇಕಾದ್ರೂ ಮಾಡ್ತಾರೆ. 3-4 ತಿಂಗಳಿನಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬುದು ನಮಗೆ ಗೊತ್ತಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ಭ್ರಷ್ಟಾಚಾರದ ಆರೋಪ ಹೊತ್ರೂ ತೇಜಸ್ವಿ ಯಾದವ್ ಖುರ್ಚಿ ಬಿಡದ ಕಾರಣಕ್ಕೆ ನೊಂದು ನಿತೀಶ್‍ಕುಮಾರ್ ಬುಧವಾರ ಸಂಜೆ ಮಹಾಘಟಬಂಧನ್ ಮುರಿದುಕೊಂಡಿದ್ರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

    ಇದೇ ಅದ್ಬುತ ಕ್ಷಣಕ್ಕೆ ಕಾಯುತ್ತಿದ್ದ ಮೋದಿ, ನಿತೀಶ್ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ಚಿಟ್ಟರ್‍ನಲ್ಲೇ ಶಹಬ್ಬಾಸ್‍ಗಿರಿ ಕೊಟ್ಟು ಬೆನ್ನು ತಟ್ಟಿದ್ರು. ಆಗಲೇ ಚಿಗುರಿತ್ತು ಬಿಜೆಪಿ ಜೊತೆಗಿನ ಮರುಮೈತ್ರಿ. ಬುಧವಾರ ಸಂಜೆ ನಂತರ ಆದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಾಗೂ ಜೆಡಿಯು ಮುಖಂಡರು ಮಹತ್ವದ ಸಭೆ ನಡೆಸಿ, ಮೈತ್ರಿ ಸರ್ಕಾರ ರಚನೆಗೆ ನಿರ್ಧಾರ ಮಾಡಿದ್ರು. ಜೆಡಿಯು ಹಾಗೂ ಬಿಜೆಪಿ ನಾಯಕರು ರಾತ್ರಿಯೇ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿ 132 ಶಾಸಕರ ಪಟ್ಟಿಯನ್ನೂ ಕೊಟ್ಟಿದ್ದರು.

    ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡ್ತಿದ್ರೆ ಆರ್‍ಜೆಡಿ ಏನೂ ಸುಮ್ಮನೇ ಕೂರಲಿಲ್ಲ. ಲಾಲೂ ಪುತ್ರ ತೇಜಸ್ವಿ ಯಾದವ್ ರಾಜಭವನದ ಮುಂದೆ ತಮ್ಮ ಬೆಂಬಲಿಗರ ಜೊತೆ ರಾತ್ರಿಯಿಡೀ ಭಾರೀ ಪ್ರತಿಭಟನೆ ಮಾಡಿದ್ರು. ಐವರು ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ರು. ಬಳಿಕ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಂದ್ರು.

    ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಜೆಡಿಯು 71 ಸ್ಥಾನಗಳ ಜೊತೆ ಬಿಜೆಪಿಯ 53 ಶಾಸಕರು ಕೈ ಜೋಡಿಸಿದ್ರೆ ಸರ್ಕಾರ ರಚನೆಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ಬಿಜೆಪಿ ಬಾಹ್ಯ ಬೆಂಬಲ ನೀಡಿ ಸರ್ಕಾರ ರಚನೆಗೆ ಜೈ ಎಂದಿದೆ.

    ಲಾಲೂ ಹಾಗೂ ನಿತೀಶ್ ನಡುವೆ ಹೇಗೆ ಮನಸ್ತಾಪ ಶುರುವಾಯ್ತು. ಬಿಹಾರ ರಾಜಕೀಯದ ಗುದ್ದಾಟ ಸಾಗಿದ ಹಾದಿ ಹೇಗಿತ್ತು.

    * ಜುಲೈ 12, 2017-ಭ್ರಷ್ಟಚಾರ ಆರೋಪ ಮುಕ್ತವಾಗಿ ಬಂದ್ರೆ ತೇಜಸ್ವಿ ಯಾದವ್ ಅಧಿಕಾರದಲ್ಲಿ ಮುಂದುವರಿಕೆ-ನಿತೀಶ್ ಸ್ಪಷ್ಟನೆ.
    * ಜುಲೈ 14, 2017-ರಾಜೀನಾಮೆ ನೀಡೋ ಮಾತೇ ಇಲ್ಲ-ಲಾಲೂ ಹಾಗೂ ತೇಜಸ್ವಿ ಯಾದವ್ ಸ್ಪಷ್ಟನೆ.
    * ಜುಲೈ 15, 2017-`ವಿಶ್ವ ಯುವ ಕುಶಾಲ್ ದಿವಸ್’ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಿಂದ ತೇಜಸ್ವಿ ಹೆಸರು ಕಿತ್ತಾಕಿದ ನಿತೀಶ್.
    * ಜುಲೈ 22, 2017-ಬಿಹಾರ ಮೈತ್ರಿ ರಾಜಕೀಯ ಸರಿ ಮಾಡಲು ರಾಹುಲ್ ಗಾಂಧಿ ಯತ್ನ, ಆದರೆ ವಿಫಲ.
    * ಜುಲೈ 26, 2017-ಯಾವುದೇ ಕಾರಣಕ್ಕೂ ತೇಜಸ್ವಿ ರಾಜೀನಾಮೆ ನೀಡಲ್ಲ-ಲಾಲೂ ಸ್ಪಷ್ಟ ಸಂದೇಶ ರವಾನೆ.
    * ಜುಲೈ 26, 2017-ಸಂಜೆ 5 ಗಂಟೆ – ಮಹಾಘಟ್‍ಬಂಧನ್ ಅಂತ್ಯ, ಸಿಎಂ ಸ್ಥಾನಕ್ಕೆ ನಿತೀಶ್‍ಕುಮಾರ್ ರಾಜೀನಾಮೆ.
    * ಜುಲೈ 27, 2017- ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ.

  • ಬಿಹಾರದಲ್ಲಿ ನಿತೀಶ್ ಕೈ ಹಿಡಿದ ಮೋದಿ-ಇಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ

    ಬಿಹಾರದಲ್ಲಿ ನಿತೀಶ್ ಕೈ ಹಿಡಿದ ಮೋದಿ-ಇಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ

    ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿ ಮುರಿದ 24 ಗಂಟೆಯೊಳಗೇ ಹೊಸ ಸರ್ಕಾರ ರಚನೆ ಆಗ್ತಿದೆ. ನಿರೀಕ್ಷೆಯಂತೆ ಸೂಪರ್ ಫಾಸ್ಟಾಗಿ ಪ್ರಧಾನಿ ನರೇಂದ್ರ ಮೋದಿ, ನಿತೀಶ್‍ ಕುಮಾರ್ ಕೈ ಹಿಡಿದಿದ್ದಾರೆ.

    ಮಹಾಘಟಬಂಧನ್ ಮುರಿದು ಬಿದ್ದಿದ್ದು, ಘರ್ ವಾಪ್ಸಿ ಆಗಿದೆ. ಪುತ್ರ ವ್ಯಾಮೋಹಕ್ಕೆ ಬಿದ್ದು ಮಹಾಮೈತ್ರಿ ಮುರಿದುಕೊಂಡಿದ್ದ ಲಾಲೂ ಪ್ರಸಾದ್ ಯಾದವ್‍ಗೆ ನಿತೀಶ್ ತಕ್ಕ ಪಾಠ ಕಲಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ರೂ ತೇಜಸ್ವಿ ಯಾದವ್ ಖುರ್ಚಿ ಬಿಡದ ಕಾರಣಕ್ಕೆ ನೊಂದು ನಿತೀಶ್‍ ಕುಮಾರ್ ಬುಧವಾರ ಸಂಜೆ ಮಹಾಘಟಬಂಧನ್ ಮುರಿದುಕೊಂಡಿದ್ರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

    ಇದೇ ಅದ್ಬುತ ಕ್ಷಣಕ್ಕೆ ಕಾಯುತ್ತಿದ್ದ ಮೋದಿ, ನಿತೀಶ್ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ಚಿಟ್ಟರ್‍ನಲ್ಲೇ ಶಹಬ್ಬಾಸ್‍ಗಿರಿ ಕೊಟ್ಟು ಬೆನ್ನು ತಟ್ಟಿದ್ರು. ಆಗಲೇ ಚಿಗುರಿತ್ತು ಬಿಜೆಪಿ ಜೊತೆಗಿನ ಮರುಮೈತ್ರಿ. ನಿನ್ನೆ ಸಂಜೆ ನಂತ್ರ ಆದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಾಗೂ ಜೆಡಿಯು ಮುಖಂಡರು ಮಹತ್ವದ ಸಭೆ ನಡೆಸಿ, ಮೈತ್ರಿ ಸರ್ಕಾರ ರಚನೆಗೆ ನಿರ್ಧಾರ ಮಾಡಿದ್ದಾರೆ.

    ಜೆಡಿಯು ಹಾಗೂ ಬಿಜೆಪಿ ನಾಯಕರು ರಾತ್ರಿಯೇ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿ 132 ಶಾಸಕರ ಪಟ್ಟಿಯನ್ನೂ ಕೊಟ್ಟಿದ್ದಾರೆ. ನಿತೀಶ್‍ ಕುಮಾರ್ ಇಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ರೆ, ಬಿಜೆಪಿಯ ಸುಶೀಲ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆಯೊಳಗೆ ಬಹುಮತ ಸಾಬೀತು ಮಾಡಿ ಅಂತಾ ಗವರ್ನರ್ ಸೂಚಿಸಿದ್ದಾರೆ.

    ರಾತ್ರೋ ರಾತ್ರಿ ಪ್ರತಿಭಟನೆ: ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡ್ತಿದ್ರೆ ಆರ್‍ಜೆಡಿ ಏನೂ ಸುಮ್ಮನೇ ಕೂರಲಿಲ್ಲ. ಲಾಲೂ ಪುತ್ರ ತೇಜಸ್ವಿ ಯಾದವ್ ರಾಜಭವನದ ಮುಂದೆ ತಮ್ಮ ಬೆಂಬಲಿಗರ ಜೊತೆ ರಾತ್ರಿಯಿಡೀ ಭಾರೀ ಪ್ರತಿಭಟನೆ ಮಾಡಿದ್ರು. ಐವರು ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ರು. ಬಳಿಕ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಂದ್ರು.

    ಬಿಹಾರ ವಿಧಾನಸಭೆ ಬಲಾಬಲ:
    ಬಿಹಾರ ಅಸೆಂಬ್ಲಿ – 243
    ಸರಳ ಬಹುಮತ – 122
    ಆರ್‍ಜೆಡಿ – 80
    ಜೆಡಿಯು – 71
    ಕಾಂಗ್ರೆಸ್ – 27
    ಬಿಜೆಪಿ – 53
    ಇತರೆ – 12 (ಎಲ್‍ಜೆಪಿ-02, ಆರ್‍ಎಲ್‍ಎಸ್‍ಪಿ-02, ಹೆಚ್‍ಎಎಂ-01, ಸಿಪಿಎಐ(ಎಂಎಲ್)-03, ಪಕ್ಷೇತರ-04)

     

    ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಜೆಡಿಯು 71 ಸ್ಥಾನಗಳ ಜೊತೆ ಬಿಜೆಪಿಯ 53 ಶಾಸಕರು ಕೈ ಜೋಡಿಸಿದ್ರೆ ಸರ್ಕಾರ ರಚನೆಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ಬಿಜೆಪಿ ಬಾಹ್ಯ ಬೆಂಬಲ ನೀಡಿ ಸರ್ಕಾರ ರಚನೆಗೆ ಜೈ ಎಂದಿದೆ.

    ಲಾಲೂ ಹಾಗೂ ನಿತೀಶ್ ನಡುವೆ ಹೇಗೆ ಮನಸ್ತಾಪ ಶುರುವಾಯ್ತು. ಬಿಹಾರ ರಾಜಕೀಯದ ಗುದ್ದಾಟ ಸಾಗಿದ ಹಾದಿ ಹೇಗಿತ್ತು.

    * ಜುಲೈ 12, 2017-ಭ್ರಷ್ಟಚಾರ ಆರೋಪ ಮುಕ್ತವಾಗಿ ಬಂದ್ರೆ ತೇಜಸ್ವಿ ಯಾದವ್ ಅಧಿಕಾರದಲ್ಲಿ ಮುಂದುವರಿಕೆ-ನಿತೀಶ್ ಸ್ಪಷ್ಟನೆ.
    * ಜುಲೈ 14, 2017-ರಾಜೀನಾಮೆ ನೀಡೋ ಮಾತೇ ಇಲ್ಲ-ಲಾಲೂ ಹಾಗೂ ತೇಜಸ್ವಿ ಯಾದವ್ ಸ್ಪಷ್ಟನೆ.
    * ಜುಲೈ 15, 2017-`ವಿಶ್ವ ಯುವ ಕುಶಾಲ್ ದಿವಸ್’ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಿಂದ ತೇಜಸ್ವಿ ಹೆಸರು ಕಿತ್ತಾಕಿದ ನಿತೀಶ್.
    * ಜುಲೈ 22, 2017-ಬಿಹಾರ ಮೈತ್ರಿ ರಾಜಕೀಯ ಸರಿ ಮಾಡಲು ರಾಹುಲ್ ಗಾಂಧಿ ಯತ್ನ, ಆದರೆ ವಿಫಲ.
    * ಜುಲೈ 26, 2017-ಯಾವುದೇ ಕಾರಣಕ್ಕೂ ತೇಜಸ್ವಿ ರಾಜೀನಾಮೆ ನೀಡಲ್ಲ-ಲಾಲೂ ಸ್ಪಷ್ಟ ಸಂದೇಶ ರವಾನೆ.
    * ಜುಲೈ 26, 2017-ಸಂಜೆ 5 ಗಂಟೆ – ಮಹಾಘಟಬಂಧನ್ ಅಂತ್ಯ, ಸಿಎಂ ಸ್ಥಾನಕ್ಕೆ ನಿತೀಶ್‍ ಕುಮಾರ್ ರಾಜೀನಾಮೆ.
    * ಜುಲೈ 27, 2017-ಇಂದು ಬೆಳಗ್ಗೆ 10 ಗಂಟೆಗೆ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ.

    ಒಟ್ಟಿನಲ್ಲಿ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ.