Tag: bijapura

  • ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

    ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

    ರಾಯ್ಪುರ: ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೊಟಕ ಸಾಧನ (IED) ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

    ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಮೀಸಲು ಪಡೆ (DRJ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

    ಸ್ಫೋಟದಲ್ಲಿ ಆರ್‌ಜಿ ಪೊಲೀಸ್ ಜವಾನ್‌(Police Jawan) ದಿನೇಶ್ ನಾಗ್ ಮೃತಪಟ್ಟಿದ್ದಾರೆ. ಅಲ್ಲದೇ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ಕಳೆದವಾರವೂ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟಗೊಂಡು ಡಿಆರ್‌ಜಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.

  • ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಜಗದಲ್‌ಪುರ: ಛತ್ತೀಸ್‌ಗಢದ (Chhattisgarh) ದಂತೇವಾಡ (Dantewada) ಮತ್ತು ಬಿಜಾಪುರ (Bijapura) ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.

    ಮಂಗಳವಾರ ಬೆಳಗ್ಗೆ ನಡೆದ ಈ ಎನ್‌ಕೌಂಟರ್, ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ. ಗುಪ್ತಚರ ಮಾಹಿತಿಗಳ ಪ್ರಕಾರ, ಈ ಪ್ರದೇಶದಲ್ಲಿ ನಕ್ಸಲರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಛತ್ತೀಸ್‌ಗಢ ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ಜಂಟಿ ತಂಡ ಸೋಮವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಗೆ ತೆರಳಿತ್ತು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

    ಮಂಗಳವಾರ ಈ ತಂಡವು ಕಾಡಿನ ಒಳಗೆ ಮುನ್ನಡೆಯುತ್ತಿದ್ದಾಗ, ಅಡಗಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಈ ದಾಳಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಡೆದ ಈ ಗುಂಡಿನ ಕಾಳಗದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮೂವರು ನಕ್ಸಲರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಜೊತೆಯಾಗಿ ಹಾಜರಾದ ವಿನಯ್, ರಜತ್

    ಮೃತರ ಗುರುತು ಇನ್ನೂ ಖಚಿತವಾಗಿಲ್ಲವಾದರೂ, ಇವರು ಸ್ಥಳೀಯ ಮಾವೋವಾದಿ ಗುಂಪಿನ ಸದಸ್ಯರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಸ್ಥಳೀಯವಾಗಿ ತಯಾರಿಸಿದ ಬಂದೂಕುಗಳು, ಸ್ಫೋಟಕ ವಸ್ತುಗಳು ಮತ್ತು ಗುಂಡುಗಳನ್ನು ಒಳಗೊಂಡ ಶಸ್ತ್ರಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ನಕ್ಸಲರ ಬಳಕೆಯ ದಿನಚರಿ ವಸ್ತುಗಳು, ಕೆಲವು ದಾಖಲೆಗಳು ಮತ್ತು ಸಂಪರ್ಕ ಸಾಧನಗಳು ಸಹ ದೊರೆತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಲಾಗಿದೆ. ಆದಾಗ್ಯೂ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ತಪಾಸಣೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದೇ ದಿನ ಎರಡು ಕಡೆ 80 ಕ್ಕೂ ಹೆಚ್ಚು ಹಂದಿಗಳ ಕಳ್ಳತನ – ಕಳ್ಳರ ಕಾಟಕ್ಕೆ ಹೈರಾಣಾದ ಸಾಕಾಣಿಕೆದಾರರು

    ಈ ಘಟನೆ ಕುರಿತು ಪ್ರತಿಕ್ರಿಯಿಸಿದ ದಂತೇವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ನಕ್ಸಲೀಯರ ವಿರುದ್ಧ ನಮ್ಮ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರೆದಿವೆ. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದು, ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ನಾವು ಬದ್ಧರಾಗಿದ್ದೇವೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್

    ಮಾರ್ಚ್ 20 ರಂದು ಸೈನಿಕರು ಛತ್ತೀಸ್‌ಗಢದ ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದವು. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತರಾದರು ಮತ್ತು ಬಿಜಾಪುರ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಜವಾನ ಹುತಾತ್ಮರಾದರು. ಇದೇ ಸಮಯದಲ್ಲಿ, ಕಾಂಕೇರ್‌ನಲ್ಲಿ ನಾಲ್ವರು ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ. ಎಲ್ಲಾ 30 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

  • ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapura) ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.

    ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ.ಇದನ್ನೂ ಓದಿ: ಉತ್ತರಾಖಂಡದ ಬಳಿಕ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

    ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ಇಬ್ಬರು ಪೊಲೀಸರಿಗೆ ತಮ್ಮ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ತರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಇದಕ್ಕೂ ಮುನ್ನ ಜನವರಿ 16 ಮತ್ತು 26 ರಂದು ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಪೊಲೀಸ್‌ರಿಗೆ ಮಾಹಿತಿ ನೀಡುತ್ತಾರೆ ಎಂದು ಶಂಕಿಸಿ ಹತ್ಯೆ ಮಾಡಿದ್ದರು. ಕಳೆದ ವರ್ಷ ಬಿಜಾಪುರದ 7 ಜಿಲ್ಲೆಗಳನ್ನು ಒಳಗೊಂಡು ಬಸ್ತಾರ್ ಪ್ರದೇಶದಲ್ಲಿ 68 ನಾಗರಿಕರನ್ನು ಹತ್ಯೆ ಮಾಡಿದ್ದರು.ಇದನ್ನೂ ಓದಿ: ಜೆಸಿಬಿ ಬಳಸಿ ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯ ನಾಶ: ಅಖಿಲೇಶ್‌ ಕಿಡಿ

  • ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಬೆಂಗಳೂರು: ಬಿಜೆಪಿ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಲ್ಲಿಕಾರ್ಜುನ ಖೂಬಾ ಇಂದು ಬಿಎಸ್‍ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕಮಲ ಬಾವುಟ ನೀಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಬಸವಕಲ್ಯಾಣ ಜೆಡಿಎಸ್ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಅನ್ವರಿ, ಮಾಜಿ ಸಚಿವ ನಾಗಪ್ಪ ಸಾಲೋಣಿ ಕೂಡ ಪಕ್ಷಕ್ಕೆ ಸೇರ್ಪಡೆಯಾದರು.

    ಈ ವೇಳೆ ಮಾತನಾಡಿದ ಬಿಎಸ್‍ವೈ, ನಾಲ್ವರನ್ನು ಬಿಜೆಪಿಗೆ ಸ್ವಾಗತ ಮಾಡುತ್ತೇನೆ. ಇಂದು ಪಕ್ಷಕ್ಕೆ ಒಳ್ಳೆಯ ದಿನ, ಮತ್ತಷ್ಟು ಬಲ ಪಕ್ಷಕ್ಕೆ ಸೇರ್ಪಡೆಯಾಗಿದೆ. ಇದೇ ಏಪ್ರಿಲ್ 8ಕ್ಕೆ ವಿಜಯಪುರ, ಬಸವಕಲ್ಯಾಣದಲ್ಲಿ ಬೃಹತ್ ಸಮಾವೇಶಗಳನ್ನು ನಡೆಸುತ್ತೇವೆ. ಈ ವೇಳೆ ಅನೇಕ ಮಾಲೀಕಯ್ಯ ಗುತ್ತೇದಾರ್ ಕೂಡ ಬಿಜೆಪಿ ಸೇರ್ಪಡೆಯಾಗುತ್ತಾರೆ. ಮಾಲೀಕಯ್ಯ ಗುತ್ತೇದಾರ್ ಅವರು ತಮ್ಮೊಂದಿಗೆ ಇನ್ನು ನಾಲ್ಕು ಜನ ಕಾಂಗ್ರೆಸ್ ಶಾಸಕರನ್ನ ಕರೆದುಕೊಂಡು ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ನ ಮತ್ತಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ವಿವರಿಸಿದರು.

    ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖೂಬಾ, ನನ್ನ ಪಕ್ಷ ಸೇರ್ಪಡೆಗೆ ವಿರೋಧ ಮಾಡುವವರು ಕಾಂಗ್ರೆಸ್ ಏಜೆಂಟ್ ಗಳು. ನಾನು ಎಲ್ಲರ ಸಮ್ಮತಿ ಪಡೆದೆ ಪಕ್ಷ ಸೇರ್ಪಡೆಯಾಗಿದ್ದೇನೆ. ಇಬ್ಬರು ಮೂವರು ಸುಮ್ಮನೆ ವಿರೋಧ ಮಾಡುತ್ತಿದ್ದಾರೆ ಅಷ್ಟೇ. ಯಡಿಯೂರಪ್ಪ ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ.

    ಕಾರ್ಯಕರ್ತರ ಪ್ರತಿಭಟನೆ: ಮತ್ತೊಂದೆಡೆ ಖೂಬಾ ಸೇರ್ಪಡೆ ವಿರೋಧಿಸಿ ಬೀದರ್‍ನ ಬಸವಕಲ್ಯಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ವಿಜಯಪುರದಲ್ಲಿ ಯತ್ನಾಳ್ ಬಿಜೆಪಿ ಸೇರ್ಪಡೆ ವಿರುದ್ಧ ಕಾರ್ಯಕರ್ತ ಬಾಬು ಜಗದಾಳೆ ಎನ್ನುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

  • ಕರಾವಳಿಯಲ್ಲಿ ಹೋಟೆಲ್ ಬಂದ್‍ಗೆ ಬೆಂಬಲವಿಲ್ಲ- ಎಲ್ಲೆಲ್ಲಿ ಮೆಡಿಕಲ್, ಹೋಟೆಲ್ ಬಂದ್ ಇಲ್ಲಿದೆ ಪೂರ್ಣ ಮಾಹಿತಿ

    ಕರಾವಳಿಯಲ್ಲಿ ಹೋಟೆಲ್ ಬಂದ್‍ಗೆ ಬೆಂಬಲವಿಲ್ಲ- ಎಲ್ಲೆಲ್ಲಿ ಮೆಡಿಕಲ್, ಹೋಟೆಲ್ ಬಂದ್ ಇಲ್ಲಿದೆ ಪೂರ್ಣ ಮಾಹಿತಿ

    ಮಂಗಳೂರು: ಕೇಂದ್ರದ ಜಿಎಸ್ ಟಿ ವಿರೋಧಿಸಿ ಹೋಟೆಲ್ ಹಾಗೂ  ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ಮೆಡಿಕಲ್ ಬಂದ್‍ಗೆ ದೇಶಾದ್ಯಂತ ಕರೆ ನೀಡಿದ್ದು, ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  ಕೆಲವೆಡೆ ಮೆಡಿಕಲ್ ಗಳನ್ನು ಬಂದೆ ಮಾಡಿದ್ರೆ, ಇನ್ನು ಕೆಲವೆಡೆ ಹೋಟೆಲ್ ಗಳನ್ನು ಬಂದ್ ಮಾಡುವ ಮೂಲಕ ರಾಜ್ಯದ ಜನತೆ ಬಂದ್ ಗೆ ಪ್ರತಿಕ್ರಿಯಿಸಿದ್ದಾರೆ.

    ಎಲ್ಲೆಲ್ಲಿ, ಯಾವುದು ಬಂದ್? ಬಂದ್ ಇಲ್ಲ?:

    ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಜಿ ಎಸ್ ಟಿ ಕಾಯಿದೆ ವಿರೋಧಿಸಿ ದೇಶಾದ್ಯಂತ ಹೋಟೆಲ್ ಮುಷ್ಕರಕ್ಕೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ಲಭಿಸಿದೆ. ಆಸ್ಪತ್ರೆಗಳ ಮೆಡಿಕಲ್ಸ್ ಶಾಪ್ ಗಳು ಎಂದಿನಂತೆ ತೆರೆದಿದ್ದು, ರೋಗಿಗಳಿಗೆ ಸೇವೆ ಒದಗಿಸುತ್ತಿದೆ. ಹೋಟೆಲ್ ಗಳ ತವರೂರು ಆಗಿರುವ ಮಂಗಳೂರಿನ ಎಲ್ಲಾ ಹೊಟೇಲ್ ಮಾಲಕರು ಮುಂಜಾನೆಯಿಂದಲೇ ಹೊಟೇಲ್ ಗಳನ್ನು ತೆರೆದಿದ್ದು, ಹೊಟೇಲ್ ಮುಷ್ಕರಕ್ಕೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

    ಆದ್ರೆ ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಲಾಗಿರುವ ಮೆಡಿಕಲ್ ಶಾಪ್ ಬಂದ್ ಗೆ ಮಂಗಳೂರಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 520 ಮೆಡಿಕಲ್ ಅಂಗಡಿಗಳು ಬಂದ್ ಆಗಿದ್ದು ಶಾಪ್ ಮಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದ್ರೆ ಮೆಡ್ ಪ್ಲಸ್ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಜೌಷಧ ಮಾರಾಟಗಾರರ ಸಂಘದ ವ್ಯಾಪ್ತಿಗೆ ಒಳಪಡದ ಕಾರಣ ಮತ್ತು ಸ್ವತಃ ಆನ್ ಲೈನ್ ಜೌಷಧ ಮಾರಟ ಮಾಡೋದ್ರಿಂದ ಮೆಡ್ ಪ್ಲಸ್ ಶಾಪ್ ಗಳು ಬಂದ್ ಗೆ ಬೆಂಬಲ ನೀಡಿಲ್ಲ.

    ವಿಜಯಪುರದಲ್ಲಿ ಮೆಡಿಕಲ್ ಬಂದ್ ಗೆ ಬೆಂಬಲ ಇಲ್ಲ ಎಂದಿನಂತೆ ತೆರೆದ ಔಷಧ ಅಂಗಡಿಗಳು ಜಿಲ್ಲೆಯ 800 ಮೆಡಿಕಲ್ ಸ್ಟೋರ್ ಗಳಿದ್ದು ಎಲ್ಲವೂ ಎಂದಿನಂತೆ ಕಾರ್ಯ ನಿರ್ವಹಸುತ್ತಿವೆ ನರ್ಸಿಂಗ್ ಹೋಂ ಹಾಗೂ ಆಸ್ಪತ್ರೆಗಳಲ್ಲಿನ ಮೆಡಿಕಲ್ ಶಾಪ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.

    ತುಮಕೂರಿನಲ್ಲಿ ಆನ್ ಲೈನ್ ಔಷಧ ಮಾರಾಟವನ್ನು ಖಂಡಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಕರೆ ನೀಡಿರುವ ಮೆಡಿಕಲ್ ಶಾಪ್ ಗಳ ಒಂದು ದಿನದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಳೆದ ಮಧ್ಯ ರಾತ್ರಿಯಿಂದ ಮೆಡಿಕಲ್ ಶಾಪ್‍ಗಳು ಬಂದ್ ಆಗಿವೆ. ಜಿಲ್ಲೆಯಲ್ಲಿ 800 ಮೆಡಿಕಲ್ ಸ್ಟೋರ್ ಗಳಿದ್ದು ಎಲ್ಲವೂ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಉಳಿದಂತೆ ನರ್ಸಿಂಗ್ ಹೋಂ ಹಾಗೂ ಆಸ್ಪತ್ರೆಗಳಲ್ಲಿನ ಮೆಡಿಕಲ್ ಶಾಪ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ನಗರದ ಪ್ರಮುಖ ರಸ್ತೆಗಳಾದ ಎಮ್ ಜಿ ರಸ್ತೆ, ಬಾರ್ ಲೈನ್, ಹನುಮಂತಪುರಗಳಲ್ಲಿ ಔಷಧಿ ಅಂಗಡಿಗಳು ಮುಚ್ಚಿದ ದೃಶ್ಯ ಸಾಮಾನ್ಯವಾಗಿದೆ.

    ರಾಯಚೂರಿನಲ್ಲಿ ಕೂಡ ಬಂದ್‍ಗೆ ವ್ಯಾಪಾರಿಗಳು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿನ 850 ಔಷಧಿ ಅಂಗಡಿಗಳನ್ನು ಮುಚ್ಚಲಾಗಿದೆ. ನರ್ಸಿಂಗ್ ಹೋಮ್ ನಲ್ಲಿನ ಅಂಗಡಿಗಳು ಹಾಗೂ ತುರ್ತುಪರಸ್ಥಿತಿ ಹೊರತುಪಡಿಸಿ ಎಲ್ಲಾ ಔಷಧಿ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಮೆಡಿಕಲ್ ಶಾಪ್ ಗಳೆ ತುಂಬಿರುವ ನಗರದ ಡಾಕ್ಟರ್ಸ್ ಲೇನ್ ರಸ್ತೆ ಈಗ ಬಿಕೋ ಎನ್ನುತ್ತಿದೆ. ಬಂದ್ ಮಾಹಿತಿಯಿಲ್ಲದೆ ನಗರಕ್ಕೆ ಬರುವ ರೋಗಿಗಳು ಪರಾಡುವ ಸಾಧ್ಯತೆಯಿದೆ. ಜಿಎಸ್ ಟಿ ವಿರೋಧಿ ಕರೆನೀಡಿದ್ದ ಹೋಟೆಲ್ ಬಂದ್ ಗೆ ರಾಯಚೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಹೋಟೆಲ್ ಗಳು ಕಾರ್ಯನಿರ್ವಹಿಸುತ್ತಿವೆ.

    ಗದಗ್ ನಲ್ಲಿ ಔಷಧ ಅಂಗಡಿ ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯ ನೂರಾರು ಮೆಡಿಕಲ್‍ಗಳನ್ನ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಸ್ಪತ್ರೆಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳು ಮಾತ್ರ ಓಪನ್ ಇವೆ. ಅವುಗಳನ್ನ ಹೊರತು ಪಡಿಸಿ ಎಲ್ಲಾ ಔಷಧ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ನಗರದ ಟಾಂಗಾಕೂಟನಲ್ಲಿ ಅನೇಕ ಮೇಡಿಕಲ್‍ಗಳಿದ್ದು, ಮೆಡಿಕಲ್ ಬಳಿ ನಿತ್ಯ ಸಾಕಷ್ಟು ಜನ ಸೇರಿರುತ್ತಿದ್ದರು. ಇಂದು ಬಂದ್ ನಿಂದ ಬಿಕೋ ಎನ್ನುವಂತಾಗಿದೆ. ಇನ್ನು ಜಿ.ಎಸ್.ಟಿ ವಿರೋಧಿಸಿ ಹೊಟೆಲ್ ಮಾಲಿಕರು ನೀಡಿರುವ ಬಂದ್‍ಗೆ ಗದಗ ಜಿಲ್ಲೆನಲ್ಲಿ ವ್ಯಕ್ತವಾಗಿಲ್ಲ. ಎಂದಿನಂತೆ ಎಲ್ಲಾ ಹೊಟೆಲ್‍ಗಳು ಪ್ರಾರಂಭವಾಗುತ್ತಿವೆ.

  • ವಿಜಯಪುರದಲ್ಲಿ ಶೂಟೌಟ್: ಕೂದಲೆಳೆ ಅಂತರದಲ್ಲಿ ಕಾರ್ಪೊರೇಟರ್ ಪುತ್ರ ಪಾರು

    ವಿಜಯಪುರದಲ್ಲಿ ಶೂಟೌಟ್: ಕೂದಲೆಳೆ ಅಂತರದಲ್ಲಿ ಕಾರ್ಪೊರೇಟರ್ ಪುತ್ರ ಪಾರು

    ವಿಜಯಪುರ: ಇಲ್ಲಿನ ಕನ್ನಾನ್ ನಗರದಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಕಾರಿನಲ್ಲಿ ಬರುತ್ತಿದ್ದ ವಿಜಯಪುರ ಕಾರ್ಪೊರೇಟರ್ ಶಹನಾಜ್ ಬೇಗಂ ಪುತ್ರ ಅಜೀಂ ಇನಾಮದಾರ್ ಮೇಲೆ ಮಂಗಳವಾರ ತಡರಾತ್ರಿ ಶೂಟೌಟ್ ನಡೆದಿದೆ.

    ಕಪ್ಪು ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಅಜೀಂ ಇನಾಮದಾರ್(31) ಇದ್ದ ಕಾರಿನ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಈ ಪೈಕಿ ಒಂದು ಗುಂಡು ಕಾರಿನ ಮುಂದಿನ ಗ್ಲಾಸ್‍ಗೆ ತಗುಲಿದೆ. ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ಘಟನೆಯ ನಂತರ ಗಾಬರಿಗೊಂಡ ಇನಾಮದಾರ್ ಗಾಂಧಿ ಚೌಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿದ ಎಎಸ್‍ಪಿ ಶಿವಕುಮಾರ್ ಗುಣಾರಿ, ಡಿಎಸ್‍ಪಿ ರಾಮು ಅರಸಿದ್ದಿ ಹಾಗೂ ಸಿಪಿಐ ಸುನೀಲ ಕಾಂಬಳ ಒಳಗೊಂಡ ತಂಡ ಪರಿಶೀಲನೆ ನಡೆಸಿದೆ. ಗುಂಡು ತಗುಲಿದೆ ಎನ್ನಲಾದ ಕಾರನ್ನು ತಪಾಸಣೆ ನಡೆಸಲಾಗಿದೆ. ಆದ್ರೆ ಈ ವೇಳೆ ಬುಲೆಟ್ ಆಗಲಿ, ಅದರ ಕ್ಯಾಪ್ ಆಗಲಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ.

    ಇದೇ ಸಂದರ್ಭದಲ್ಲಿ ಮಾತನಾಡಿದ ಅಜೀಂ ಇನಾಮದಾರ್ ಫಯಾಜ್, ಕಲ್ಬುರ್ಗಿ ಶೂಟೌಟ್ ಕೇಸ್‍ನಲ್ಲಿ ಆರೋಪಿಯಾಗಿರವ ಜುಬೇರ್ ಜಂಬಗಿಯಿಂದ ಜೀವ ಬೆದರಿಕೆ ಇತ್ತು. ಆತನೇ ಗುಂಡಿನ ದಾಳಿ ನಡೆಸಿರುವ ಸಂಶಯವಿದೆ ಎಂದಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಎಎಸ್‍ಪಿ ಶಿವಕುಮಾರ್ ಗುಣಾರಿ, ಶೂಟೌಟ್ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದೇವೆ. ದೂರನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ರಾಜ್ಯದ ಈ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಣ ಕೊಡಲಿಲ್ಲ ಅಂದ್ರೆ ಶವ ಕೊಡಲ್ಲ

    ರಾಜ್ಯದ ಈ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಣ ಕೊಡಲಿಲ್ಲ ಅಂದ್ರೆ ಶವ ಕೊಡಲ್ಲ

    ವಿಜಯಪುರ: ಹಣ ಅಂದ್ರೆ ಹೆಣವೂ ಬಾಯ್ಬಿಡುತ್ತೆ ಅನ್ನೋ ಮಾತಿದೆ. ಪ್ರಭಾವಿ ಸಚಿವರಾಗಿರುವ ಎಂಬಿ ಪಾಟೀಲ್ ಜಿಲ್ಲೆಯಲ್ಲಿ ಹಣ ಇಲ್ಲಾಂದ್ರೆ ಏನೂ ಆಗಲ್ಲ. ಆಸ್ಪತ್ರೆಯಲ್ಲಿ ಸತ್ತಿರುವ ಶವನೂ ಹೊರಗೆ ಹೋಗಲ್ಲ.

    ಹೌದು. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿರುವ ಶವಾಗಾರದ ಸಹಾಯಕ ಈರಣ್ಣನ ಕೈಬಿಸಿ ಮಾಡಿಲ್ಲ ಅಂದ್ರೆ ಸರ್ಕಾರಿ ಶವಗಾರದಿಂದ ಒಂದೇ ಒಂದು ಹೆಣವೂ ಹೊರಗೆ ಹೋಗಲ್ಲ. ದುಡ್ಡು ಕೊಡಿ ಸ್ವಾಮಿ ಅಂತಾ ನಾಚಿಕೆ ಮಾನ-ಮರ್ಯಾದೆ ಇಲ್ಲದೇ ಬಾಯ್ಬಿಟ್ಟು ಕೇಳ್ತಾನೆ. ಒಂದು ಹೆಣಕ್ಕೆ ಕಮ್ಮಿಯಂದ್ರೂ ಎರಡರಿಂದ ನಾಲ್ಕು ಸಾವಿರ ರೂ. ಕೊಡ್ಲೇಬೇಕು.

    ಈರಣ್ಣ ಸೊಲ್ಹಾಪುರ ಮೂಲದವರಿಂದ ಲಂಚ ಪೀಕ್ತಿರುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮೃತನ ಕುಟುಂಬಸ್ಥರು ಸಾವಿನ ಶೋಕದಲ್ಲಿ ಕಣ್ಣೀರು ಹಾಕ್ತಿದ್ರೆ ಅತ್ತ ಹೇಗೋ ನನ್ನ ಜೇಬು ತುಂಬ್ತಲ್ಲ ಬಿಡಿ ಅನ್ನೋ ಖುಷಿ ಈರಣ್ಣನದ್ದು.

    ಯಾವಾಗ ಈರಣ್ಣನ ಭ್ರಷ್ಟಾಚಾರದ ವೀಡಿಯೋದಲ್ಲಿ ಸೆರೆ ಆಯ್ತೋ ಈಗ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಚಾವ್ಹಾಣ್ ಸಮಜಾಯಿಷಿ ಕೊಟ್ಟಿದ್ದಾರೆ.