Tag: bike rally

  • ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    – ಬೈಕ್ ರ‍್ಯಾಲಿ ವೇಳೆ ಹಸಿರು ಬಾವುಟ ಪ್ರದರ್ಶನ – ಬಜರಂಗದಳ, ವಿಹೆಚ್‌ಪಿ ಆಕ್ರೋಶ

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

    ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

    ಏನಿದರ ಹಿನ್ನೆಲೆ?
    ಬಜರಂಗದಳ (Bajarangadala) ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು.ಇದನ್ನೂ ಓದಿ: ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ.

  • ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಬೈಕ್ ರ‍್ಯಾಲಿ – ಪ್ರತಿಭಟನೆಯಲ್ಲಿ ಭಾಗಿಯಾದ ಚಕ್ರವರ್ತಿ ಸೂಲಿಬೆಲೆ

    ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಬೈಕ್ ರ‍್ಯಾಲಿ – ಪ್ರತಿಭಟನೆಯಲ್ಲಿ ಭಾಗಿಯಾದ ಚಕ್ರವರ್ತಿ ಸೂಲಿಬೆಲೆ

    ರಾಮನಗರ: ನಮೋ ಯುವ ಬ್ರಿಗೇಡ್ 2.0 ಬೈಕ್ ರ‍್ಯಾಲಿ ಹಿನ್ನೆಲೆ ಇಂದು (ಶುಕ್ರವಾರ) ರಾಮನಗರಕ್ಕೆ ಬೈಕ್ ರ‍್ಯಾಲಿ (Bike Rally) ಮೂಲಕ ಆಗಮಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ವ್ಯಕ್ತಪಡಿಸಿದ್ದಾರೆ.

    ಚನ್ನಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾದ ಸೂಲಿಬೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಚನ್ನಪಟ್ಟಣದ ಗಾಂಧಿ ವೃತ್ತದಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಜೊತೆ ರಸ್ತೆಯಲ್ಲಿ ಕೂತು ಪ್ರತಿಭಟನೆಗೆ ಬೆಂಬಲ ನೀಡಿದರು.

    ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಾವೇರಿ ಹೋರಾಟಕ್ಕೆ ನಮೋ ಬ್ರಿಗೇಡ್ ಸಂಪೂರ್ಣ ಬೆಂಬಲ ನೀಡಿದೆ. ಇಂದು ಬೈಕ್ ರ‍್ಯಾಲಿ ಮೂಲಕ ಚನ್ನಪಟ್ಟಣ, ಮಂಡ್ಯ, ಚಾಮರಾಜನಗರದ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇನೆ. ಹೋರಾಟದಲ್ಲಿ ಭಾಗಿಯಾಗಿ ನೀರು ನಿಲ್ಲಿಸಬೇಕು ಎಂದು ಆಗ್ರಹ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯವರು ಕರ್ನಾಟಕವನ್ನ ಪಾಕಿಸ್ತಾನದಲ್ಲಿದೆ ಎಂದು ತಿಳಿದಿದ್ದಾರಾ: ಕಾಂಗ್ರೆಸ್‌ ಪ್ರಶ್ನೆ

    ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ಮಾಡಿಲ್ಲ. ಸಂಪೂರ್ಣವಾಗಿ ನೀರು ನಿಲ್ಲಿಸುವ ಕೆಲಸ ಮಾಡಿಲ್ಲ. ಸಿಎಂ, ಡಿಸಿಎಂ ಅವರ ಹೇಳಿಕೆ ಗಮನಿಸಿದ್ದೇನೆ. ಅವರ ವೈಯಕ್ತಿಕ ಹಿತಾಸಕ್ತಿಗೆ ರಾಜ್ಯದ ಜನರ ಹಿತಾಸಕ್ತಿ ಬಲಿಯಾಗುವ ಆತಂಕ ಇದೆ. ರಾಜ್ಯ ಸರ್ಕಾರ ನೀರು ಬಿಡಲ್ಲ ಎಂದಾಗ ತಮಿಳುನಾಡು ಸರ್ಕಾರ ನೀರು ಬೇಕು ಅಂತ ಹೋರಾಟ ಮಾಡಿದರೆ ಮಾತ್ರ ಕೇಂದ್ರ ಮಧ್ಯ ಪ್ರವೇಶ ಮಾಡಬಹುದು. ಆದರೆ ಅವರು ಕೇಳೋಕು ಮುಂಚೆಯೇ ನೀರು ಬಿಡುತ್ತಿದ್ದಾರೆ ಎಂದರು.

    ಇಂಡಿಯಾ ಒಕ್ಕೂಟವನ್ನು ಓಲೈಸಲು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರಂಗಮಯವಾದ ಸುಪ್ರಸಿದ್ಧ ಮುಗಳಖೋಡ ಶ್ರೀಮಠ

    ತಿರಂಗಮಯವಾದ ಸುಪ್ರಸಿದ್ಧ ಮುಗಳಖೋಡ ಶ್ರೀಮಠ

    ಚಿಕ್ಕೋಡಿ: ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತವಾಗಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಮಠದಲ್ಲಿ ಪೀಠಾಧಿಪತಿಗಳಾದ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮೀಜಿಗಳು ಧ್ವಜಾರೋಹಣ ನೆರವೇರಿಸಿದರು.

    ಮುಗಳಖೋಡ ಗ್ರಾಮದಿಂದ ಪಕ್ಕದ ಗ್ರಾಮ ಕೋಳಿಗುಡ್ಡಕ್ಕೆ ಸುಮಾರು 5 ಸಾವಿರ ಬೈಕ್ ರ‍್ಯಾಲಿ ನಡೆಸಲಾಯಿತು. ಭಾವೈಕ್ಯ ಭಾರತ ಎಂದು ವಿಶೇಷ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಿದ್ದ ಶ್ರೀಗಳು ಮಾಧ್ಯಮಗಳೊಂದಿಗೆ ಮಾತನಾಡಿ, ಇದು ದೇಶ ಹಾಗೂ ತಾಯ್ನಾಡಿಗೆ ಗೌರವ ಸಮರ್ಪಣೆ ಮಾಡುವ ಕಾರ್ಯಕ್ರಮವಾಗಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಭಾರತಕ್ಕೆ ಒದಗಿರುವ ಅಮೃತ ಘಳಿಗೆಯಲ್ಲಿ ನಾವು ಬದುಕಿದ್ದೇವೆ. ಇದು ನಮಗೆ ಸಿಕ್ಕಿರುವ ಉತ್ತಮ ಅವಕಾಶ ಎಂದರು.  ಇದನ್ನೂ ಓದಿ: ಭೂಮಿಯ ತೇವಾಂಶ ಹೆಚ್ಚಾಯ್ತು – ಮಲೆನಾಡಲ್ಲಿ ಮಳೆ ಕಡಿಮೆಯಾದ್ರೂ ಅನಾಹುತ ಕಡಿಮೆಯಾಗ್ತಿಲ್ಲ

    ಇದೇ ವೇಳೆ ಕುಡಚಿ ಶಾಸಕ ಪಿ. ರಾಜೀವ್ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50ನೇ ವರ್ಷದ ಸಂಭ್ರಮ ಆಚರಣೆ ಮಾಡಿರಲಿಲ್ಲ. ಧ್ವಜ ಸಂಹಿತೆಯ ಹೆಸರಿನಲ್ಲಿ ದೇಶದಲ್ಲಿ ಕೆಲವೇ ಜನ ಹಾಗೂ ಕೆಲ ಕಟ್ಟಡಗಳ ಮೇಲೆ ಮಾತ್ರ ಹಾರಿಸುವ ಅವಕಾಶ ನೀಡಲಾಗಿತ್ತು. ಈ ದೇಶದ ಭಾರತೀಯನಿಗೆ ಧ್ವಜ ಹಿಡಿಯುವ ಸ್ವಾತಂತ್ರ್ಯವನ್ನು ಸಹ ಕೊಟ್ಟಿರಲಿಲ್ಲ. ನರೇಂದ್ರ ಮೋದಿಯವರು ಧ್ವಜ ಹಿಡಿಯಬೇಕು ಹಾಗೂ ಧ್ವಜ ಹಾರಿಸಬೇಕು ಎಂದು ಕರೆ ನೀಡಿ ಧ್ವಜ ಸಂಹಿತೆಯನ್ನೂ ಸಹ ಬದಲಿಸಿದ್ದಾರೆ.

    ಇಂದು ಶ್ರೀಮಠದ ಕಲಶದ ಮೇಲೂ ಸಹ ತಿರಂಗಾ ಹಾರಾಡುತ್ತಿದೆ. ಇದಕ್ಕಿಂತ ಇನ್ನೇನು ಹೆಮ್ಮೆ ಬೇಕು ಎಂದರು. ಇದೇ ಸಮಯದಲ್ಲಿ ಶ್ರೀಮಠದ ಅನುಭವ ಮಂಟಪ ಹಾಗೂ ದೇವಸ್ಥಾನದ ಮೇಲೆ ತಿರಂಗಾ ಹಾರಾಡುತ್ತಿದ್ದದ್ದು ಎಲ್ಲರ ಗಮನ ಸೆಳೆಯಿತು. ಇದನ್ನೂ ಓದಿ: ಹರ್‌ ಘರ್‌ ತಿರಂಗ – ಭಯೋತ್ಪಾದಕರ ಕುಟುಂಬ ಸದಸ್ಯರಿಂದ ತ್ರಿವರ್ಣ ಧ್ವಜ ಹಾರಾಟ

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ್‍ಯಾಲಿಯಲ್ಲಿ ಜೋಶಿ ಭಾಗಿ

    ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ್‍ಯಾಲಿಯಲ್ಲಿ ಜೋಶಿ ಭಾಗಿ

    ನವದೆಹಲಿ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ತುಂಬಿದ ಶುಭ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರೇರಣೆ ನೀಡುವಲ್ಲಿ ಇಂದು ಸಂಸದರ ತಿರಂಗಾ ಬೈಕ್ ರ್‍ಯಾಲಿ ನಡೆಯಿತು.

    ದೆಹಲಿಯ ಕೆಂಪುಕೋಟೆಯಿಂದ ವಿಜಯ್ ಚೌಕ್‍ವರೆಗೆ ಸಂಸದರು ತ್ರಿವರ್ಣ ಧ್ವಜ ಹಿಡಿದು ಬೈಕ್ ರ್‍ಯಾಲಿ ನಡೆಸಿದರು. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಂಗಾ ಬೈಕ್ ರ್‍ಯಾಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಅಶ್ವತ್ಥ್‌ನಾರಾಯಣ ಟಾಂಗ್

    ಅಮೃತ ಮಹೋತ್ಸವದ ಹಿನ್ನೆಲೆ ದೇಶದಲ್ಲಿ ರಾಷ್ಟ್ರೀಯ ಭಾವನೆಯನ್ನು ಇಮ್ಮಡಿಗೊಳಿಸುವಂತ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರ್ಣಗೊಂಡಿರುವ ಕುರಿತು ತಮ್ಮ ಮನದಾಳದ ಮಾತುಗಳನ್ನು ಆಡಿದರು. ಅಮೃತ ಮಹೋತ್ಸವ ಒಂದು ಅಭಿಯಾನವಾಗಬೇಕು. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಅಜಾದಿ ಕೀ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನು ತೋರ್ಪಡಿಸುವಂತೆ ಕರೆ ನೀಡಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ಈ ನಡುವೆ ದೇಶದ ಸಂಸದರನ್ನು ಒಟ್ಟುಗೂಡಿಸಿಕೊಂಡು ತಿರಂಗಾ ರ್‍ಯಾಲಿ ಕಾರ್ಯಕ್ರಮ ನಡೆಸುವ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದ್ದರು. ಇದು ಬಿಜೆಪಿಯ ಕಾರ್ಯಕ್ರಮವಲ್ಲ. ಇದೊಂದು ರಾಷ್ಟ್ರಾಭಿಮಾನ ಹೆಚ್ಚಿಸುವ ಮಹತ್ವದ ಅಭಿಯಾನ. ದೇಶದ ಜನರನ್ನು ಪ್ರತಿನಿಧಿಸುವ ಸಂಸದರು ತ್ರಿವರ್ಣ ಧ್ವಜ ಹಿಡಿದು ದೇಶದ ಜನರಿಗೆ ಸಂದೇಶ ಸಾರುವುದು ಮುಖ್ಯ. ಈ ನಿಟ್ಟಿನಲ್ಲಿ ಎಲ್ಲ ಸಂಸದರು ಪಾಲ್ಗೊಳ್ಳುವಂತೆ ತಿಳಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ ಕೇಂದ್ರ ಸಂಸ್ಕೃತಿ ಸಚಿವಾಲಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ತಿರಂಗಾ ರ್ಯಾಲಿಗೆ ಚಾಲನೆ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಹ್ಲಾದ್ ಜೋಶಿ ಅವರು ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದರು. ತಿರಂಗಾ ಬೈಕ್ ರ್‍ಯಾಲಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾಳೆ ಭಜರಂಗದಳದ ಬೈಕ್ ರ‍್ಯಾಲಿ – ವೀರಸೌಧ ಚಿತ್ರಗ್ಯಾಲರಿಗೆ ಪೊಲೀಸ್ ಬಂದೋಬಸ್ತ್

    ನಾಳೆ ಭಜರಂಗದಳದ ಬೈಕ್ ರ‍್ಯಾಲಿ – ವೀರಸೌಧ ಚಿತ್ರಗ್ಯಾಲರಿಗೆ ಪೊಲೀಸ್ ಬಂದೋಬಸ್ತ್

    ಚಿಕ್ಕಬಳ್ಳಾಪುರ: ಕರ್ನಾಟಕ ಜಲಿಯನ್ ವಾಲಾಬಾಗ್ ಖ್ಯಾತಿಯ ವಿದುರಾಶ್ವತ್ಥ ಗ್ರಾಮಕ್ಕೆ ಸ್ವಾಂತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಹಿಂದೂಪರ ಸಂಘಟನೆಗಳು ಭಾನುವಾರ ಬೆಂಗಳೂರಿನ ಪ್ರೀಡಂ ಪಾರ್ಕ್ನಿಂದ ಬೃಹತ್ ಬೈಕ್ ರ‍್ಯಾಲಿಯನ್ನು ಹಮ್ಮಿಕೊಂಡಿವೆ. ಹಿಂದೂ ಪರ ಸಂಘಟನೆಗಳ ದಾಳಿ ಹಿನ್ನೆಲೆ ವೀರಸೌಧ ಗ್ಯಾಲರಿ ಸೇರಿದಂತೆ ಹಲವೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಭಜರಂಗದಳ ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಸೂರ್ಯನಾರಾಯಣ ನೇತೃತ್ವದಲ್ಲಿ ವಿದುರಾಶ್ವತ್ಥ ಗ್ರಾಮಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬರಲಿದ್ದು, ಹುತಾತ್ಮ ವೀರ ಯೋಧರ ಸ್ಮಾರಕ ಹಾಗೂ ಸ್ತೂಪಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಈ ವೇಳೆ ಚಿತ್ರ ಗ್ಯಾಲರಿಗೆ ಭೇಟಿ ನೀಡುವ ಸಾಧ್ಯತೆ ಇದ್ದು, ವಿವಾದಿತ ಪೋಟೋಗಳ ಮೇಲೆ ದಾಳಿ ನಡೆಯುವ ಆತಂಕ ಉದ್ಭವವಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ವೀರಸೌಧದ ಚಿತ್ರ ಗ್ಯಾಲರಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ನಿಮ್ಮ ವರಿಷ್ಠೆಯ ಮೂಲ ಯಾವುದು?: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸವಾಲ್

    ಚಿತ್ರ ಗ್ಯಾಲರಿ ವಿವಾದವೇನು?
    ವಿದುರಾಶ್ವತ್ಥ ಐತಿಹಾಸಿಕ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ, ಸ್ವಾತಂತ್ರ‍್ಯ ಸಂಗ್ರಾಮದ ಪುಣ್ಯ ಭೂಮಿಯೂ ಹೌದು. ಅಂತಹ ಕ್ಷೇತ್ರದಲ್ಲಿ ಒಂದು ಕಡೆ ವಿದುರ ಮಹರ್ಷಿ ನೆಟ್ಟ ಅಶ್ವತ್ಥ ವೃಕ್ಷದ ಕೆಳಗೆ ಅಶ್ವತ್ಥನಾರಾಯಣಸ್ವಾಮಿ ನೆಲೆ ನಿಂತಿದ್ದರೆ ಮತ್ತೊಂದೆಡೆ ಸ್ವಾತಂತ್ರ ಸಂಗ್ರಾಮದಲ್ಲಿ ಮಡಿದ ವೀರಯೋಧರ ಸ್ತೂಪವೂ ಇದೆ. ಅದೇ ಜಾಗದಲ್ಲಿ ಸ್ವಾತಂತ್ರ‍್ಯ ಸಂಗ್ರಾಮದ ಇತಿಹಾಸ ದರ್ಶನ ಮಾಡಿಸುವ ಚಿತ್ರ ಗ್ಯಾಲರಿಯೂ ಇದ್ದು, ಆ ಚಿತ್ರ ಗ್ಯಾಲರಿ ಕಳೆದ ಒಂದು ತಿಂಗಳಿನಿಂದ ವಿವಾದಿತ ಕೇಂದ್ರ ಬಿಂದುವಾಗಿದೆ.

    ಚಿತ್ರ ಗ್ಯಾಲರಿಯಲ್ಲಿನ ಕೆಲ ಪೋಟೋಗಳಲ್ಲಿ ಹಿಂದೂ ಕೋಮುವಾದ, ಬಲ ಪಂಥೀಯ, ಮುಸ್ಲಿಂ ಕೋಮುವಾದ, ಮಹಾತ್ಮ ಗಾಂಧಿ ಹತ್ಯೆ ಮಾಡಿದವರು ಎಂದು ಹಲವು ಪೋಟೋಗಳ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ಬರೆದು, ಪೋಟೋಗಳ ಬದಲಾವಣೆಗೂ ಆಗ್ರಹಿಸಿದ್ದಾರೆ. ಹೀಗಾಗಿ ಕಳೆದ 1 ತಿಂಗಳಿನಿಂದ ವೀರಸೌಧದ ಚಿತ್ರ ಗ್ಯಾಲರಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸುವ ಆತಂಕ ಇದೆ ಎಂದು ಸ್ವತಃ ಉಸ್ತುವಾರಿ ವಹಿಸಿದ್ದ ಸ್ವಾತಂತ್ರ‍್ಯ ಸ್ಮಾರಕ ಅಭಿವೃದ್ಧಿ ಸಮಿತಿ, ವೀರಸೌಧ ಚಿತ್ರ ಗ್ಯಾಲರಿಗೆ ಸೂಕ್ತ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಇದನ್ನೂ ಓದಿ: ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ವೀರಸೌಧ ಚಿತ್ರ ಗ್ಯಾಲರಿಗೆ ಹಿಂದೆಂದೂ ಕಾಣದ ಪೊಲೀಸರನ್ನು ಇದೀಗ ನಿಯೋಜಿಸಿ, ಭದ್ರತೆ ವಹಿಸಲಾಗಿದೆ. ಭಾನುವಾರ ಸಾವಿರಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗಮಿಸುವ ಸಾಧ್ಯತೆ ಇದ್ದು, ವೀರಸೌಧದ ಚಿತ್ರ ಗ್ಯಾಲರಿಗೆ ಎಲ್ಲಿಲ್ಲದ ಬಂದೋಬಸ್ತ್ ಮಾಡಲಾಗಿದೆ.

  • ಮಹಿಳಾ ಸುರಕ್ಷತೆ ಜಾಗೃತಿಗಾಗಿ ಮಿಡ್ ನೈಟ್ ಬೈಕ್ ರ‍್ಯಾಲಿ

    ಮಹಿಳಾ ಸುರಕ್ಷತೆ ಜಾಗೃತಿಗಾಗಿ ಮಿಡ್ ನೈಟ್ ಬೈಕ್ ರ‍್ಯಾಲಿ

    ಬೆಂಗಳೂರು: ಮಹಿಳಾ ಬೈಕರ್‌ಗಳಿಂದ ಲಿಂಗ ಸಮಾನತೆ ಹಾಗೂ ಮಹಿಳಾ ಸುರಕ್ಷತೆ ಜಾಗೃತಿಗಾಗಿ ಬೈಕ್ ಸವಾರಿ ಜಾಥಾ ನಗರದಲ್ಲಿ ನಡೆಯಿತು.

    ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ರೈನ್ ಬೋ ಮಕ್ಕಳ ಆಸ್ಪತ್ರೆ ವಿಶೇಷ ಮಧ್ಯರಾತ್ರಿಯ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಮಹಿಳಾ ಬೈಕರ್‌ಗಳು ಭಾಗಿಯಾಗಿದ್ದರು. ಮಾರತಹಳ್ಳಿಯ ರೈನ್ ಬೋ ಆಸ್ಪತ್ರೆಯಿಂದ ಆರಂಭವಾದ ಬೈಕ್ ರ‍್ಯಾಲಿ ಬನ್ನೇರುಘಟ್ಟ ಮುಖಾಂತರ ಹೆಬ್ಬಾಳ ರೈನ್‍ ಬೋ ಆಸ್ಪತ್ರೆ ಬಳಿ ಅಂತ್ಯಗೊಂಡಿತು. ಇದನ್ನೂ ಓದಿ: ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ – ವಿದ್ಯಾರ್ಥಿ ಮೇಲೆ ಬ್ಯಾಟ್‍ನಿಂದ ಹಲ್ಲೆ

    ಕಾರ್ಯಕ್ರಮದ ಬಗ್ಗೆ ರೈನ್ ಬೋ ಆಸ್ಪತ್ರೆ ಛೇರ್ಮನ್ ಡಾ ರಮೇಶ್ ಕಂಚಾರ್ಲ ಮಾತನಾಡಿ, ಈ ಕಾರ್ಯಕ್ರಮ ನಿಜವಾದ ನಾರಿ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಸಮಾಜದಲ್ಲಿ ಸಮಾನತೆ ಮೂಡಿಸುವ ಅಗತ್ಯವಿದೆ. ಮಹಿಳೆಯರು ಯಾವುದೇ ಸ್ಥಳದಲ್ಲಿ ವಾಹನ ಚಲಾಯಿಸಬಹುದು ಎಂಬುದನ್ನು ಈ ಮಧ್ಯರಾತ್ರಿ ಬೈಕ್ ರೈಡ್ ತೋರಿಸಿಕೊಟ್ಟಿದೆ ಎಂದರು. ಇದನ್ನೂ ಓದಿ: ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

    ಈ ಮಧ್ಯರಾತ್ರಿಯ ಬೈಕ್ ಸವಾರಿ ಅನೇಕ ಅಂಶಗಳಲ್ಲಿ ವಿಶಿಷ್ಟವೆನಿಸಿದೆ. ಮೊದಲನೇಯದಾಗಿ, ಮಹಿಳೆಯರು ಒಂದು ನಿರ್ದಿಷ್ಟ ಸಮಯದಲ್ಲಿ ಹೊರಗೆ ಸುತ್ತಾಡಬಾರದು ಅನ್ನುವ ನಿಯಮಕ್ಕೆ ಬದ್ಧರಲ್ಲ. ಪುರುಷರು ಹೊರಗೆ ಹೋದರೆ ಸಂಜೆ ಅಥವಾ ರಾತ್ರಿಯಾದರೂ ತಿರುಗಬಹುದು ಆದ್ರೆ ಮಹಿಳೆಯರು ರಾತ್ರಿ ಹೊರಗಿರಬಾರದು ಅಂತ ಕಟ್ಟಳೆ ಹೇರುತ್ತದೆ ನಮ್ಮ ಸಾಮಾಜಿಕ ವ್ಯವಸ್ಥೆ. ಮಹಿಳೆ ಕೂಡ ರಾತ್ರಿ ಮುಕ್ತವಾಗಿ ಸಂಚರಿಸಬಹುದು. ಎರಡನೇಯದಾಗಿ, ರೈನ್‍ ಬೋ ಚಿಲ್ಡ್ರನ್ಸ್ ಹಾಸ್ಪಿಟಲ್ ಆಯೋಜಿಸಿರುವ ಈ ಮಧ್ಯರಾತ್ರಿ ಕಾರ್ಯಕ್ರಮ ದೇಶದ ಎಲ್ಲಾ ಪೋಷಕರು ಮಹಿಳೆಯರಿಗೆ ಸಮಾನತೆ ಖಾತ್ರಿಪಡಿಸಬೇಕು ಎನ್ನುವುದಕ್ಕೆ ಉದಾಹರಣೆ. ಮೂರನೇಯದಾಗಿ, ಮಹಿಳೆಯರು ಬೈಕ್ ಚಲಾಯಿಸಲಾರರು ಎಂಬ ಮಾತನ್ನು ನಮ್ಮ ಇಂದಿನ ನಾರಿಶಕ್ತಿ ಸುಳ್ಳಾಗಿಸಿದೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಐಪಿಎಸ್ ಅಧಿಕಾರಿ ರೂಪ ಭಾಗಿಯಾಗಿ, ರ‍್ಯಾಲಿಯಲ್ಲಿ ಭಾಗಿಯಾದ ಮಹಿಳಾ ಬೈಕರ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

  • ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ‍್ಯಾಲಿ

    ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಸುರಾನಾ ಕಾಲೇಜಿನ ವಿದ್ಯಾರ್ಥಿನಿಯರು ಇಂದು ಬೈಕ್ ರ‍್ಯಾಲಿ ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು.

    ಸೌತ್ ಎಂಡ್ ಸರ್ಕಲ್ ಬಳಿಯಿರುವ ಸುರಾನಾ ಕಾಲೇಜಿನ ಬಳಿಯಿಂದ ಪ್ರಾರಂಭವಾದ ಬೈಕ್ ರ‍್ಯಾಲಿಗೆ ಮೈಕ್ರೋ ಲ್ಯಾಬ್‍ನ ಸಿಎಂಡಿ ದಿಲೀಪ್ ಸುರಾನಾ ಹಾಗೂ ರಾಷ್ಟ್ರೀಯ ಹೈಜಂಪ್ ಕ್ರೀಡಾಪಟು ಸಹನಾ ಕುಮಾರಿ ಚಾಲನೆ ನೀಡಿದರು. ನೂರಕ್ಕೂ ಹೆಚ್ಚು ಬೈಕ್‍ಗಳ ಮೇಲೆ ಬ್ರೇಕ್ ದ ಬಯಾಸ್ ಭಿತ್ತಿಪತ್ರಗಳನ್ನು ಹಿಡಿದುಕೊಂಡಂತಹ ವಿದ್ಯಾರ್ಥಿನಿಯರು ತಂಡವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ನ್ಯಾಷನಲ್ ಬೈಕ್ ರೇಸರ್ ಐಶ್ವರ್ಯಾ ಪಿಸೆ ನಗರದ ವಿವಿಧ ಭಾಗಗಳಲ್ಲಿ ಮುನ್ನಡೆಸಿದರು. ಮಹಿಳಾ ಮತ್ತು ಪುರುಷ ಸಮಾನತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಇದನ್ನೂ ಓದಿ: ಮದ್ವೆ ಸೀರೆ ವಾಪಸ್ಸು ಕೊಟ್ರಂತೆ ಸಮಂತಾ: ಮಳೆ ನಿಂತರು ಮಳೆ ಹನಿ ನಿಲ್ಲದು

    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೈಜಂಪ್‍ನಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಕ್ರೀಡಾಪಟು ಸಹನಾ ಕುಮಾರಿ ಮಾತನಾಡಿ, ಅಮಿತವಾದ ಉತ್ಸಾಹ ಹಾಗೂ ಪರಿಶ್ರಮದಿಂದ ಮಹಿಳೆಯರು ಏನನ್ನು ಬೇಕಾದರೂ ಸಾಧಿಸಬಹುದಾಗಿದೆ. ಆ ಸಾಧನೆಯನ್ನು ಮಾಡುವಂತಹ ಉತ್ಸಾಹವನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಆಲಿಯಾ ಭಟ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್‍ಗೆ ‘ಪಾನಿ ಮೇ ದೂಧ್’ ಎಂದ ಕಂಗನಾ

    ಸುರಾನಾ ಕಾಲೇಜಿನ ಕಾರ್ಯನಿರ್ವಾಹಕ ಟ್ರಸ್ಟಿ ಅರ್ಚನಾ ಸುರಾನ ಮಾತನಾಡಿ, ಮಹಿಳೆಯರಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಆದರೆ, ಅವಕಾಶಗಳ ಕೊರತೆ ಹೆಚ್ಚಾಗಿದೆ. ಇದನ್ನು ಲಿಂಗ ಸಮಾನ ಸಮಾಜ ಮಾತ್ರ ಸರಿಪಡಿಸಬಲ್ಲದು. ಮಹಿಳೆಯರು ಇರುವಂತಹ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಸಾಧನೆ ಮಾಡುವತ್ತ ಹೆಚ್ಚಿನ ಗಮನ ಹರಿಸಬೇಕು. ಇಂದು ವಿದ್ಯಾರ್ಥಿನಿಯರು ಬೈಕ್ ಓಡಿಸುವ ಮೂಲಕ ತಾವೂ ಪುರುಷರಿಗಿಂತಾ ಕಡಿಮೆಯಿಲ್ಲ ಎನ್ನುವುದನ್ನು ತೋರಿಸಿದ್ದಾರೆ ಎಂದರು.

    ಸುರಾನಾ ಕಾಲೇಜಿನ ಸ್ಟೂಡೆಂಟ್ ಕೌನ್ಸಿಲ್ ಮತ್ತು ಶಿ ಸೆಲ್ (ಸೆಕ್ಸುಯಲ್ ಹರ್ರಾಸ್‍ಮೆಂಟ್ ಎಲಿಮಿನೇಷನ್) ಸೆಲ್ ಆಯೋಜಿಸಿದ್ದ ಬೈಕ್ ರ‍್ಯಾಲಿ ವಿಧಾನಸೌಧದಲ್ಲಿ ಸಮಾಪ್ತಿಯಾಯಿತು.

  • ಯೋಧರ ಮಕ್ಕಳ ಶಿಕ್ಷಣಕ್ಕಾಗಿ ಧನ ಸಂಗ್ರಹಕ್ಕೆ ಮಹಿಳೆಯರಿಂದ ಬೈಕ್ ಜಾಥಾ

    ಯೋಧರ ಮಕ್ಕಳ ಶಿಕ್ಷಣಕ್ಕಾಗಿ ಧನ ಸಂಗ್ರಹಕ್ಕೆ ಮಹಿಳೆಯರಿಂದ ಬೈಕ್ ಜಾಥಾ

    ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಸಂತಾ ಕ್ಲಾಸ್ ಪೋಷಾಕು ತೊಟ್ಟು ಮಹಿಳೆಯರು ಬೃಹತ್ ಬೈಕ್ ಜಾಥಾ ನಡೆಸಿದರು.

    ನರದಲ್ಲಿಂದು ಮಹಿಳಾ ಸಂಘಟನೆ, ಶೀಫಾರ್ ಸೊಸೈಟಿ ಮತ್ತು ಟಸ್ಕರ್ ಹರ್ಲಿ ವೋನರ್ಸ್ ಗ್ರೂಪ್‌ನಿಂದ ಬೈಕ್ ಜಾಥಾ ನಡೆಸಿದರು. ಈ ಜಾಥಾದಲ್ಲಿ ಸೇನಾ ಯೋಧರ ಮಕ್ಕಳ ಶಿಕ್ಷಣಕ್ಕಾಗಿ ನಿಧಿ ಸಂಗ್ರಹ ಆಕರ್ಷಣೀಯವಾಗಿತ್ತು. 100 ಮಹಿಳೆಯರು ರಂಗು ರಂಗಿನ ಸಂತಾ ಕ್ಲಾಸ್ ವೇಷತೊಟ್ಟು ಬೈಕ್‌ನಲ್ಲಿ ಸಂಚರಿಸಿ ಗಮನ ಸೆಳೆದರು.

    ಶೀಫಾರ್ ಸೊಸೈಟಿ ಸಂಸ್ಥಾಪಕ ಸದಸ್ಯರಾದ ಹರ್ಷಿಣಿ ವೆಂಕಟೇಶ್, ವಿದ್ಯಾ ಮಂಜುನಾಥ್, ಶಾಲಿನಿ ದೀಪಕ್, ಕವಿತಾ ಪ್ರಭಾಕರ್ ನೇತೃತ್ವದ ತಂಡ ಬೈಕ್ ಜಾಥಾ ನಡೆಸಿದರು. ಜಾಥಾಗೆ ನಗರದ ಚಾನ್ಸರಿ ಪೆವಿಲಿಯನ್‌ನ ಬಳಿ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ಹಾಗೂ ಚಾನ್ಸರಿ ಪೆವಲಿಯನ್ ಹೋಟೆಲ್ ನಿರ್ದೇಶಕ ಭಾಸ್ಕರ್ ರಾಜು ಚಾಲನೆ ನೀಡಿದರು.

    ಚಾನ್ಸರಿ ಪೆವಲಿಯನ್ ಹೋಟೆಲ್ ಮುಂಭಾಗದಿಂದ ರೆಸಿಡೆನ್ಸಿ ರಸ್ತೆ, ಮೆಯೋ ಹಾಲ್, ಎಂ.ಜಿ. ರಸ್ತೆ, ವಿಧಾನಸೌಧ, ನೃಪತುಂಗ ರಸ್ತೆ, ಹಡ್ಸನ್ ಸರ್ಕಲ್, ಕಂಠೀರವ ಸ್ಟೇಡಿಯಂ, ಮಲ್ಯ ಆಸ್ಪತ್ರೆ ಮೂಲಕ ಹಾದುಹೋಗಿ ಮತ್ತೆ ಚಾನ್ಸರಿ ಪೆವಿಲಿಯನ್ ಹೋಟೆಲ್ ಬಳಿ ಜಾಥಾ ಕೊನೆಗೊಂಡಿತು. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಶೀಫಾರ್ ಸೊಸೈಟಿಯು ಸೇನಾ ಯೋಧರ ಮಕ್ಕಳಿಗೆ ಶಿಕ್ಷಣ ನೀಡುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕೋಲಾರ ಜಿಲ್ಲೆಯ ಎರಡು ಗ್ರಾಮಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಕಂಪ್ಯೂಟರ್‌ಗಳನ್ನು ಒದಗಿಸುತ್ತಿದೆ. ಈ ಗ್ರಾಮಗಳ 200 ಕುಟುಂಬಗಳಿಗೆ ಶೀಫಾರ್ ಸೊಸೈಟಿಯಿಂದ ಸೋಲಾರ್ ಪೆನಲ್‌ಗಳ ಕಿಟ್‌ಗಳನ್ನು ಒದಗಿಸಿದೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ಸ್ಪರ್ಶ ಫೌಂಡೇಷನ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಬೆಂಗಳೂರು, ಇಕೆಬಾನ ಅಂತಾರಾಷ್ಟ್ರೀ ವಿಜಯಲಕ್ಷ್ಮಿ ಟೂರಿಸ್ಟ್ ಅಂಡ್ ಟೈಟಾನ್ ಸಂಸ್ಥೆ, ವೈಸ್ ಮಾರ್ಷಲ್ ಬಿ.ಕೆ.ಮುರುಳಿ ಪಾಲ್ಗೊಂಡಿದ್ದರು.

  • ಜನವರಿ 8ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ- ಬೆಂಬಲ ಸೂಚಿಸಿ ಐಟಿ ಉದ್ಯೋಗಿಗಳಿಂದ ಬೈಕ್ ರ‍್ಯಾಲಿ

    ಜನವರಿ 8ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ- ಬೆಂಬಲ ಸೂಚಿಸಿ ಐಟಿ ಉದ್ಯೋಗಿಗಳಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಇಂದು ಮಡಿವಾಳದಿಂದ ಕೋನಪ್ಪನ ಆಗ್ರಹಾರದವರೆಗೂ ನೂರಾರು ಮಂದಿ ಐಟಿ ಉದ್ಯೋಗಿಗಳು ಬೈಕ್ ರ‍್ಯಾಲಿ ನಡೆಸಿದರು.

    ಕೇಂದ್ರ ಸರ್ಕಾರದವು ಕಾರ್ಮಿಕ ವಿರೋಧಿ ನೀತಿ ರೂಪಿಸುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದೆ. ಜೊತೆಗೆ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ರೂಪಿಸುತ್ತಿದೆ. ಅದನ್ನು ಕೂಡಲೇ ಬದಲಾಯಿಸಬೇಕು, ಕಾರ್ಮಿಕ ನೀತಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಲಾಯಿತು. ಇದರ ಜೊತೆಗೆ ಪೌರತ್ವ ತಿದ್ದುಪಡೆ ವಿರುದ್ಧವೂ ಇಂದು ಬೈಕ್ ರ‍್ಯಾಲಿ ಮುಖಾಂತರ ವಿರೋಧವನ್ನು ವ್ಯಕ್ತಪಡಿಸಲಾಯಿತು.

    ಕೇಂದ್ರ ಸರ್ಕಾರ ಕಾರ್ಮಿಕರ ಪರವಾಗಿರುವ ಯೋಜನೆಗಳನ್ನು ರೂಪಿಸಬೇಕು. ಕನಿಷ್ಠ ವೇತನ 21 ಸಾವಿರ ರೂ.ಗಳನ್ನ ಅಸಂಘಟಿತ ವಲಯದ ಕಾರ್ಮಿಕರಿಗೆ ನೀಡುವಂತಾಗಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.

    ಈ ರ‍್ಯಾಲಿಯಲ್ಲಿ ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಯೇತರ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಹಾಗೂ ಐಟಿ-ಬಿಟಿ ಉದ್ಯೋಗಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಐಟಿಯು ರಾಜ್ಯಘಟಕದ ಅಧ್ಯಕ್ಷೆ ವರಲಕ್ಷ್ಮಿ ಅವರು, ಭಾರತ ದೇಶ ಬಹಳ ದೊಡ್ಡ ಮಟ್ಟದ ಅರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿದೆ. ನಮ್ಮ ದೇಶ ಅರ್ಥಿಕ ಬಿಕ್ಕಟ್ಟಿನಿಂದ ಹೊರಬರಬೇಕಾದರೆ ಕಾರ್ಮಿಕ ನೀತಿಗಳು ಬದಲಾಗಬೇಕಿದೆ. ಕೆಲ ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಪಬ್ಲಿಕ್ ಸೆಕ್ಟರ್ಸ್ ಸಹ ಬಂದ್ ಆಗುತ್ತಿದೆ. ಐಟಿ ಸೆಕ್ಟರ್ಸ್ ರಾತ್ರೋ ರಾತ್ರೋ ಬಂದ್ ಆಗುತ್ತಿವೆ ಎಂದು ಹೇಳಿದರು.

    ದೇಶ ಪ್ರೇಮ ಎನ್ನುವುದು ಹೆಸರಲ್ಲಿ ಕೇಂದ್ರ ಸರ್ಕಾರವು ಜನರಿಗೆ ಮೋಸ ಮಾಡುತ್ತಿದೆ. ನಾವು ವೇತನವಾಗಿ ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಾಗಿದೆ. ಇದರಿಂದಾಗಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ ಎಂದು ಹೇಳಿದರು.

  • ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಟೌನ್ ಪೊಲೀಸರು ಬೈಕ್ ರ‍್ಯಾಲಿ ಮೂಲಕ ಸಾರ್ವಜನಿಕ ಜಾಗೃತಿಗೆ ಮೂಡಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಅಪರ ಪೊಲೀಸ್ ಅಧೀಕ್ಷಕ ಸಜೀತ್ ಅವರು ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಉಪವಿಭಾಗದ ಪೊಲೀಸ್ ಸಿಬ್ಬಂದಿ ಜೊತೆ ಕೈಜೋಡಿಸಿದ ಸಾರ್ವಜನಿಕರು, ನೆಲಮಂಗಲ ಪಟ್ಟಣದ ವಿವಿಧ ಬಡಾವಣೆ, ಹೊರವಲಯದಲ್ಲಿ ಸಂಚಾರಿ ನಿಯಮಗಳ ಕುರಿತು ಮಾಹಿತಿ ಇರುವ ಭಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು. ಪೊಲೀಸ್ ಇಲಾಖೆ ಜನರೊಂದಿಗೆ ಬೆರೆತು ಕೆಲಸ ಮಾಡಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರ ಜೊತೆ ಕೈಜೋಡಿಸಿ. ಜೊತೆಗೆ ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದರು.

    ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳು ಕಂಡರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಬೈಕ್ ರ‍್ಯಾಲಿ ಮೂಲಕ ಜನರಿಗೆ ಅರಿವು ಮೂಡಿಸಿದರು. ಈ ವೇಳೆ ಡಿವೈಎಸ್ಪಿ ಮೋಹನ್ ಕುಮಾರ್, ಸಿಪಿಐ ಶಿವಣ್ಣ, ಟ್ರಾಫಿಕ್ ಸಿಪಿಐ ವೀರೇಂದ್ರ ಪ್ರಸಾದ್, ನೆಲಮಂಗಲ ಟೌನ್ ಪಿಎಸ್‍ಐ ಮಂಜುನಾಥ್, ಮೋಹನ್ ಕುಮಾರ್, ಪೊಲೀಸ್ ಸಿಬ್ಬಂದಿ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.