Tag: bike rally

  • ಹೇಮಾವತಿ ನೀರಿಗಾಗಿ ಹೋರಾಟಕ್ಕಿಳಿದ ಸಿದ್ದರಬೆಟ್ಟ ಶ್ರೀಗಳು

    ಹೇಮಾವತಿ ನೀರಿಗಾಗಿ ಹೋರಾಟಕ್ಕಿಳಿದ ಸಿದ್ದರಬೆಟ್ಟ ಶ್ರೀಗಳು

    ತುಮಕೂರು: ಹೇಮಾವತಿ ನೀರಿಗಾಗಿ ಸಿದ್ದರಬೆಟ್ಟ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮಾಜಿ ಡಿಸಿಎಂ ಜಿ. ಪರಮೇಶ್ವರ ಅವರ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನ ತೋವಿನಕೆರೆಯ ಸುತ್ತಮುತ್ತಲಿನ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಬೃಹತ್ ಬೈಕ್  ರ‍್ಯಾಲಿ ನಡೆಸಿದರು.

    ಸ್ವಾಮೀಜಿ ನೇತೃತ್ವದಲ್ಲಿ ತೋವಿನಕೆರೆಯಿಂದ ರ‍್ಯಾಲಿ ಹೊರಟ ನೂರಾರು ಪ್ರತಿಭಟನಾಕಾರರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೈಕ್ ರ‍್ಯಾಲಿ ಅಂತ್ಯಗೊಳಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಹತ್ತು- ಹದಿನೈದು ವರ್ಷದಿಂದಲೂ ಈ ಭಾಗದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಹಾಗಾಗಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಉಂಟಾಗಿದೆ. ಜಾನುವಾರುಗಳಿಗೂ ಮೇವಿನ ತೊಂದರೆ ಆಗಿದೆ. ಹೀಗಾಗಿ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ತಿಪಟೂರು, ತುರುವೇಕೆರೆ, ಗುಬ್ಬಿ, ಕುಣಿಗಲ್ ಸೇರಿದಂತೆ ಇತರೆ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ. ತೋವಿನಕೆರೆ ಸುತ್ತಮುತ್ತಲಿನ ಭಾಗಕ್ಕೆ ನೀರು ಬಿಟ್ಟಿಲ್ಲ. ಮಳೆಯೂ ಬಂದಿಲ್ಲ. ಕೂಡಲೇ ಹೇಮಾವತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಇಂದು ಮಾಡಿದ ಹೋರಾಟ ಸಾಂಕೇತಿಕವಾಗಿದ್ದು ನೀರು ಹರಿಸದೇ ಇದ್ದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ಕೊಟ್ಟಿದ್ದಾರೆ.

  • ದಸರಾ ಬೈಕ್ ರ‍್ಯಾಲಿಯಲ್ಲಿ ಮಿಂಚಿದ ದಾವಣಗೆರೆಯ ನಾರಿಮಣಿಯರು

    ದಸರಾ ಬೈಕ್ ರ‍್ಯಾಲಿಯಲ್ಲಿ ಮಿಂಚಿದ ದಾವಣಗೆರೆಯ ನಾರಿಮಣಿಯರು

    ದಾವಣಗೆರೆ: ದಸರಾ ಶೋಭಾಯಾತ್ರೆ ಅಂಗವಾಗಿ ಇಂದು ದಾವಣಗೆರೆಯಲ್ಲಿ ಪ್ರಮುಖ ಬೀದಿಗಳಲ್ಲಿ ಮಹಿಳೆಯರ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು. ಈ ರ‍್ಯಾಲಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡ ನಾರಿಮಣಿಯರು ಸಾಂಪ್ರದಾಯಿಕ ಉಡುಪಿನಲ್ಲಿ ಸಖತ್ ಮಿಂಚಿದ್ದಾರೆ.

    ನಗರದ ರಾಮ್ ಅಂಡ್ ಕೋ ಸರ್ಕಲ್‍ನಿಂದ ಪ್ರಾರಂಭವಾದ ರ‍್ಯಾಲಿಗೆ ಮಹಿಳಾ ಸಿಪಿಐ ನಾಗಮ್ಮ ಚಾಲನೆ ನೀಡಿದರು. ವಿಜಯದಶಮಿಯಂದು ನಡೆಯುವ ಶೋಭಾಯಾತ್ರೆಯ ಪ್ರಯುಕ್ತ ಜಾಗೃತಿ ಬೈಕ್ ರ‍್ಯಾಲಿಯನ್ನು ಮಹಿಳೆಯರು ಹಮ್ಮಿಕೊಂಡಿದ್ದರು. ರ‍್ಯಾಲಿಯಲ್ಲಿ ಮಹಿಳೆಯರು ಕೇಸರಿ ಪೇಟ ಧರಿಸಿ ದುರ್ಗಿಯರಂತೆ ಕಂಗೊಳಿಸುತ್ತಿದ್ದರು. ಕೆಲ ಮಹಿಳೆಯರು ಸ್ಕೂಟಿಯಲ್ಲಿ ಬಂದಿದ್ದರೆ, ಇನ್ನೂ ಕೆಲವರು ಬುಲೆಟ್ ಬೈಕ್ ಸವಾರಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

    ನಗರದ ಪ್ರಮುಖ ಬೀದಿಗಳಲ್ಲಿ ಮಹಿಳೆಯರು ಭಗವಧ್ವಜ ಹಿಡಿದು, ಜೈಕಾರ ಹಾಕಿ ರ‍್ಯಾಲಿಯನ್ನು ಯಶಸ್ವಿಗೊಳಿಸಿದರು. ದಸರಾ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅದ್ಧೂರಿಯಾಗಿ ಶೋಭಾಯಾತ್ರೆ ನಡೆಸಲಾಗುವುದು. ಈ ಬಾರಿ ಮಹಿಳೆಯರು ಅತಿ ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶೋಭಾಯಾತ್ರೆಯನ್ನು ಯಶ್ವಸಿಗೊಳಿಸಬೇಕೆಂದು ರ‍್ಯಾಲಿಯಲ್ಲಿ ಪಾಲ್ಗೊಂಡವರು ಮನವಿ ಮಾಡಿಕೊಂಡರು.

  • ಕಾಫಿ ಕಿಂಗ್ ಸಿದ್ಧಾರ್ಥ್‌ಗೆ ಬೈಕ್ ರ‍್ಯಾಲಿ ಮೂಲಕ ನಮನ

    ಕಾಫಿ ಕಿಂಗ್ ಸಿದ್ಧಾರ್ಥ್‌ಗೆ ಬೈಕ್ ರ‍್ಯಾಲಿ ಮೂಲಕ ನಮನ

    ಬೆಂಗಳೂರು: ಇತ್ತೀಚೆಗೆ ನಿಧನರಾದ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ್ ಅವರಿಗೆ ಬೈಕ್ ರ‍್ಯಾಲಿ ನಡೆಸುವ ಮೂಲಕ ಯುವಕರು ಗೌರವ ನಮನ ಸಲ್ಲಿಸುತ್ತಿದ್ದಾರೆ.

    ರೈಡರ್ಸ್ ರಿಪಬ್ಲಿಕ್ ಮೋಟರ್ ಸೈಕಲ್ ಕ್ಲಬ್‍ನ 50ಕ್ಕೂ ಹೆಚ್ಚು ಬೈಕ್ ಸವಾರರಿಂದ ಈ ರ‍್ಯಾಲಿ ಹಮ್ಮಿಕೊಂಡಿದ್ದು, ಸುಮಾರು 400 ಕಿ.ಮೀ. ಮೋಟರ್ ಸೈಕಲ್ ರೈಡ್ ನಡೆಸುವ ಮೂಲಕ ಸಿದ್ಧಾರ್ಥ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

    ರಾಜ್ಯದಿಂದ ಆಂಧ್ರ ಪ್ರದೇಶದ ಪೆನುಗೊಂಡವರೆಗೆ ಈ ವಿಶೇಷ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮೋಟರ್ ಸೈಕಲ್ ರೈಡ್‍ನಲ್ಲಿ ದಾರಿಯುದ್ದಕ್ಕೂ ಕಾಣಸಿಗುವ ಪ್ರಮುಖ ಕೆಫೆ ಕಾಫಿ ಡೇ ಔಟ್‍ಲೆಟ್‍ಗಳಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿ, ಹೀಗೆ ಪೆನುಗೊಂಡದವರೆಗೆ ತೆರಳಲಿದ್ದಾರೆ.

    ಸೋಮವಾರ ಸಿದ್ಧಾರ್ಥ್ ಕಾಣೆಯಾಗಿರುವ ಕುರಿತು ಸುದ್ದಿ ಬಿತ್ತರವಾಗಿತ್ತು. ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರು ಕಾಣೆಯಾಗಿ 36 ಗಂಟೆಗಳ ನಂತರ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

    1993ರಲ್ಲಿ ಕಾಫಿ ಉದ್ದಿಮೆಗೆ ಕಾಲಿಟ್ಟ ಸಿದ್ದಾರ್ಥ್, ತಮ್ಮ ಜೀವಮಾನದಲ್ಲಿ ಮತ್ತೆಂದು ತಿರುಗಿಯೂ ನೋಡಲಿಲ್ಲ. 24ನೇ ವಯಸ್ಸಿಗೆ ಸ್ಟಾಕ್ ಮಾರ್ಕೆಟ್‍ನಲ್ಲಿ ಷೇರು ಖರೀದಿಸಿದ್ದರು. ಚಿಕ್ಕಮಗಳೂರು-ಹಾಸನ-ಮಡಿಕೇರಿಯಲ್ಲಿ ನಷ್ಟದಲ್ಲಿದ್ದ ಕಾಫಿ ತೋಟಗಳನ್ನು ಖರೀದಿಸಿ, ಹಂತ ಹಂತವಾಗಿ ಬೆಳೆಯುತ್ತಾ 13 ಸಾವಿರಕ್ಕೂ ಅಧಿಕ ಹೆಕ್ಟೇರ್ ಕಾಫಿ ತೋಟದ ಮಾಲೀಕರಾದರು.

    1996ರಲ್ಲಿ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಮೊದಲ ಕಾಫಿ ಡೇ ಆರಂಭಿಸಿದ್ದರು. ಒಂದು ನೂರಾಗಿ, ನೂರು ಐನೂರಾಗಿ ವಿಶ್ವಾದ್ಯಂತ 10ಕ್ಕೂ ಹೆಚ್ಚು ದೇಶ ಸೇರಿದಂತೆ 1772 ಕಾಫಿ ಡೇ ಔಟ್‍ಲೇಟ್‍ನ ಒಡೆಯರಾದರು. ವಾರ್ಷಿಕ 28 ಸಾವಿರ ಟನ್ ಕಾಫಿ ರಫ್ತು ಮಾಡುವ ಮೂಲಕ ಜಗತ್ತೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ದರು. ಕಾಫಿ ಡೇಗಳಿಗೆ ಬೇಕಾದ ಬೀಜವನ್ನು ಸ್ವಂತ ತೋಟದಿಂದಲೇ ಬೆಳೆಯುತ್ತಿದ್ದರು. ಕಾಫಿಯ ಜೊತೆ 10ಕ್ಕೂ ಹೆಚ್ಚು ವಿವಿಧ ಕಂಪನಿಗಳನ್ನು ಆರಂಭಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದರು.

    ಸಿದ್ಧಾರ್ಥ್ ಅವರು ಸಭೆ ಆರಂಭಕ್ಕೂ ಮೊದಲೇ ನಮ್ಮನ್ನು ಉಳಿಸೋದೆ ಹಸಿರು, ಹಸಿರನ್ನು ಬೆಳೆಸಿ ಎಂದು ಸಾರಿ-ಸಾರಿ ಹೇಳುತ್ತಿದ್ದರು. ಕಾರ್ಮಿಕರ ಮಕ್ಕಳ ಮದುವೆ, ಮನೆಗಾಗಿ ಬಂದವರಿಗೆಲ್ಲ ಸಹಾಯ ಮಾಡುತ್ತಿದ್ದ ಇವರನ್ನು ಜನ ಪೂಜ್ಯ ಭಾವನೆಯಿಂದಲೇ ನೋಡುತ್ತಿದ್ದರು. ಇಂತಹ ಗುಣದ ಸಿದ್ಧಾರ್ಥ್ ಅವರಿಗೆ ಇದೀಗ ಬೈಕ್ ರ‍್ಯಾಲಿ ಮೂಲಕ ಯುವಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

  • ಕೊಡಗಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಯುವಕರಿಂದ ಬೈಕ್ ರ‍್ಯಾಲಿ

    ಕೊಡಗಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಯುವಕರಿಂದ ಬೈಕ್ ರ‍್ಯಾಲಿ

    ಮಡಿಕೇರಿ: ಪ್ರವಾಸಿ ತಾಣವಾಗಿರುವ ಕೊಡಗಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಸ್ಯಾಂಡಲ್ ವುಡ್ ನಟ- ನಟಿಯರಿಂದ ಹಿಡಿದು ಎಲ್ಲರೂ ಟ್ವಿಟ್ಟರ್ ನಲ್ಲಿ ಅಭಿಯಾನ ನಡೆಸಿದ್ದರು. ಈ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ ಕೊಡಗು ಮೂಲದ ಯುವಕರ ತಂಡವೊಂದು ಬೈಕ್ ರ‍್ಯಾಲಿ ಮಾಡುವ ಮೂಲಕ ಜಿಲ್ಲೆಗೆ ಆಗಮಿಸಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಕೈ ಜೋಡಿಸಿದೆ.

    ಹೌದು. ಕೊಡವ ರೈಡರ್ಸ್ ಕ್ಲಬ್ ಯುವಕರು ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಲ್ಪಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನಿಂದ ಮಡಿಕೇರಿಯವರೆಗೆ ಬೈಕ್ ರ‍್ಯಾಲಿ ನಡೆಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. 70 ಕ್ಕೂ ಹೆಚ್ಚಿನ ಯುವಕರ ತಂಡ ಬೆಂಗಳೂರಿನಿಂದ ಮೈಸೂರು ಗೋಣಿಕೊಪ್ಪ, ವಿರಾಜಪೇಟೆ ಮಾರ್ಗವಾಗಿ ಮಡಿಕೇರಿಗೆ ಆಗಮಿಸಿ ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: #weneedemergencyhospitalinkodagu – ಕೊಡಗಿನಲ್ಲಿ ಆಸ್ಪತ್ರೆಗಾಗಿ ಅಭಿಯಾನ

    ಮಂಜಿನ ನಗರಿ ಮಡಿಕೇರಿಗೆ ಸಾವಿರಾರು ಪ್ರವಾಸಿಗರು ಬಂದು ಅಪಘಾತ ಸಂಭವಿಸಿದಾಗ ಆಸ್ಪತ್ರೆಯಲ್ಲಿ ಯಾವುದೇ ಸೌಲಭ್ಯ ಇಲ್ಲದೆ ಅನೇಕರು ಜೀವ ಕಳೆದುಕೊಂಡಿದ್ದಾರೆ. ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಅರಂಭವಾದ ಹಿನ್ನೆಲೆಯಲ್ಲಿ ನಮ್ಮ ತಂಡ ಬೈಕ್ ರೈಡ್ ಮಾಡುವ ಮೂಲಕ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿರುವುದಾಗಿ ಬೈಕ್ ರೈಡರ್ ಸುಬ್ಬಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಗೆ ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‍ವುಡ್ ಬೆಂಬಲ

    ಮಡಿಕೇರಿಯಲ್ಲಿ ಜಿಲ್ಲಾಸ್ಪತ್ರೆ ಇದೆಯಾದರೂ ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಾಗ ಖುದ್ದು ಇಲ್ಲಿನ ವೈದ್ಯರೇ ಮಂಗಳೂರು, ಮೈಸೂರು ಅಥವಾ ಬೆಂಗಳೂರಿಗೆ ರೋಗಿಗಳನ್ನು ಕರೆದೊಯ್ಯುವಂತೆ ಸೂಚನೆ ನೀಡುತ್ತಾರೆ. ಇದರಿಂದ ರೋಗಿಗಳು ಮಾರ್ಗ ಮಧ್ಯೆಯೇ ಪ್ರಾಣ ಕಳೆದುಕೊಳ್ಳುತ್ತಿದ್ದು, ಕುಟುಂಬ ವರ್ಗ ಚಿಂತೆಗೀಡಾಗುತ್ತಿದೆ. ಜಿಲ್ಲೆಯಲ್ಲಿ ಸಾವಿರಾರು ಕಾರ್ಮಿಕರಿದ್ದಾರೆ. ಲಕ್ಷಾಂತರ ಪ್ರವಾಸಿಗರು ಬರುತ್ತಿದ್ದಾರೆ. ಕಾರ್ಮಿಕರು ವನ್ಯಜೀವಿಗಳ ದಾಳಿಗೆ ಅಥವಾ ಇನ್ಯಾವುದೇ ಅನಾಹುತಗಳಿಗೆ ಸಿಲುಕಿ ಚಿಂತಾಜನಕ ಸ್ಥಿತಿಗೆ ತಲುಪಿದರೆ ಅಗತ್ಯ ಚಿಕಿತ್ಸೆ ಜಿಲ್ಲೆಯಲ್ಲಿ ಲಭ್ಯವಿಲ್ಲ. ಅಪಘಾತದಲ್ಲಿ ಜನ ಚಿಂತಾಜನಕ ಸ್ಥಿತಿಯಲ್ಲಿ ನರಳಿದರೆ ಜಿಲ್ಲೆಯ ಆಸ್ಪತ್ರೆಗಳಲ್ಲಿ ಬದುಕಿಸುವ ಸೌಲಭ್ಯಗಳಿಲ್ಲ. ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳನ್ನು ಕಂಡಾಕ್ಷಣ ಅಸಹಾಯಕತೆ ವ್ಯಕ್ತಪಡಿಸುವ ಜಿಲ್ಲೆಯ ವೈದ್ಯಕೀಯ ವರ್ಗ ಹೊರ ಜಿಲ್ಲೆಯ ಕಡೆ ಬೆರಳು ಮಾಡುತ್ತದೆ. ಈ ರೀತಿ ಹೊರ ತೆರಳಿದ ಬಹುತೇಕ ರೋಗಿಗಳು, ಗಾಯಾಳುಗಳು ಮರಳಿದ್ದು ವಿರಳ. ದಾರಿ ಮಧ್ಯದಲ್ಲಿ ಮರಣವನ್ನು ಅಪ್ಪಿದ್ದೇ ಹೆಚ್ಚು ಎಂದು ಕ್ಲಬ್‍ನ ಸದಸ್ಯರು ವ್ಯವಸ್ಥೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

    ಒಟ್ಟಿನಲ್ಲಿ ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಬೆಂಗಳೂರಿನಲ್ಲಿ ನೆಲೆಸಿರುವ ಯುವಕರ ತಂಡದಿಂದ ಹಿಡಿದು ಸ್ಯಾಂಡಲ್‍ವುಡ್‍ನ ವರೆಗೂ ಪಸರಿಸಿದೆ.

  • ಮತ್ತೆ ಬಿಎಸ್‍ವೈ ಎಡವಟ್ಟು

    ಮತ್ತೆ ಬಿಎಸ್‍ವೈ ಎಡವಟ್ಟು

    ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅದ್ಯಾಕೋ ಇತ್ತೀಚೆಗೆ ಮೇಲಿಂದ ಮೇಲೆ ಎಡವಟ್ಟು ಮಾಡ್ಕೊಳ್ತಾನೆ ಇದ್ದಾರೆ. ಕರ್ನಾಟಕ ರಾಜ್ಯದಲ್ಲಿ 120ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬೇಕು ಅಂತ ಹೇಳಿಕೆ ನೀಡಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ಜಿಲ್ಲೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡೋ ವೇಳೆ ಈ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಮಾತಿನ ಭರದಲ್ಲಿ ಕರ್ನಾಟಕದಲ್ಲಿ 120 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿ, ಬಳಿಕ ರಾಜ್ಯದಲ್ಲಿ ಎಷ್ಟು ಸ್ಥಾನ ಗೆಲ್ಲುತ್ತೀರಾ ಅನ್ನೋ ಮಾಧ್ಯಮದವರ ಪ್ರಶ್ನೆಗೆ 22 ಸ್ಥಾನ ಗೆಲ್ಲುತ್ತೀವಿ ಅಂತ ಹೇಳಿ ಮೈಕ್ ಸರಿಸಿ ಮಾತು ಮುಗಿಸಿದರು.

    ಮಾತಿನ ಭರದಲ್ಲಿ ರಾಜ್ಯದಲ್ಲಿ 22 ಎನ್ನುವ ಬದಲು 120 ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು, ಪ್ರಧಾನಿಯವರ ಕೈ ಬಲ ಪಡಿಸಬೇಕಾಗಿದೆ. 300ಕ್ಕೂ ಹೆಚ್ಚು ಸ್ಥಾನ ಗೆದ್ದು ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು. ರಾಜ್ಯದಲ್ಲಿ ಕನಿಷ್ಟ 22 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಇನ್ನೊಂದು ವಾರದಲ್ಲಿ ಅಮಿತ್ ಶಾ ಭೇಟಿ ಮಾಡಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ ಎಂದು ಹೇಳಿದ್ದಾರೆ.

    ಮಂಡ್ಯದಲ್ಲಿ ನಟಿ ಸುಮಲತಾ ಸ್ಪರ್ಧೆ ವಿಚಾರ ಪ್ರತಿಕ್ರಿಯಿಸಿ, ಆ ಬಗ್ಗೆ ನಾವು ಇನ್ನು ಚರ್ಚೆ ಮಾಡಿಲ್ಲ, ನೋಡೋಣ. ತುಮಕೂರು ಲೋಕಸಭೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಅಂತಿಮಗೊಳಿಸಿಲ್ಲ, ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

    ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

    ಬೆಂಗಳೂರು: ಮಾಜಿ ಶಾಸಕ ನೆಲ ನರೇಂದ್ರ ಬಾಬು ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

    ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಬಾಬು ಅವರಿಗೆ ಬಾವುಟ ನೀಡಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರ ಜೊತೆಯಲ್ಲಿ ಕಿರುತೆರೆ ನಟಿಯರಾದ ಜ್ಯೋತಿ, ಆಶಾಲತಾ, ಸಂಗೀತಾ ಅವರೂ ಬಿಜೆಪಿ ಸೇರಿಕೊಂಡರು.

    ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನರೇಂದ್ರ ಬಾಬು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ಪಕ್ಷ ನನ್ನನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ನಿರ್ಲಕ್ಷ್ಯ ಧೋರಣೆಯಿಂದ ನನಗೆ ನೋವಾಗಿದೆ. ಕುತಂತ್ರ ಬುದ್ದಿ ಹಾಗೂ ಪಕ್ಷ ದ್ರೋಹಿಗಳಿಗೆ ಬೆಲೆಯಿದೆ ಹೊರತು ನನ್ನಂತಹ ನಿಷ್ಠಾವಂತ, ಪ್ರಾಮಾಣಿಕರಿಗೆ ಬೆಲೆಯಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಅಧಿಕೃತವಾಗಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ತಿಳಿಸಿದ್ದರು.

    ಪಕ್ಷದಲ್ಲಿ 35 ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ಮೂರು ಬಾರಿ ಕಾರ್ಪೊರೇಟರ್, ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನನ್ನನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಹೇಳಿದರು.

    ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್ ಅಶೋಕ್, ಬಿಜೆಪಿ ಉಪಾಧ್ಯಕ್ಷ ಕೆಪಿ ನಂಜುಂಡಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಗಾಳಿ ಕರ್ನಾಟಕದ ಉದ್ದಗಲಕ್ಕೆ ಬೀಸುತ್ತಿದೆ. ರಾಮಕೃಷ್ಣ ಹೆಗ್ಡೆಯವರ ಕಾಲದಲ್ಲಿ ಪಕ್ಷದಲ್ಲಿದ್ದ ನರೇಂದ್ರ ಬಾಬು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಆದರೆ ಮರಳಿ ಬಿಜೆಪಿಗೆ ಪಕ್ಷಕ್ಕೆ ಆಗಮಿಸಿರುವುದಕ್ಕೆ ಸ್ವಾಗತ ಕೋರುತ್ತೇನೆ. ಅವರಿಗೆ ಸೂಕ್ತ ಸ್ಥಾನಮಾನವನ್ನು ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಪ್ರಧಾನಿ ಕಾರ್ಯಕ್ರಮದ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಪರ್ಯಾಯವಾಗಿ, ಸಿಎಂ ಸಿದ್ದರಾಮಯ್ಯ ಕಾಮ್ ಕಿ ಬಾತ್ ಮಾಡ್ತಿರುವುದು ಮೂರ್ಖತನದ ಪರಮಾವಧಿ ಎಂದು ವಗ್ವಾದ ನಡೆಸಿದರು.

    ಸಚಿವ ಹೆಚ್ ಆಂಜನೇಯ ಆಯುಧ ಪೂಜೆ ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ಸಂಪ್ರದಾಯ, ಧರ್ಮಾಚರಣೆಗೆ ಅಪಮಾನ ಮಾಡಿದ್ದಾರೆ. ದುರಂಹಕಾರ ದರ್ಪದಿಂದ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ತರುತ್ತೇವೆಂದು ಯಡಿಯೂರಪ್ಪ ತಿಳಿಸಿದರು.

    ನರೇಂದ್ರ ಬಾಬು ಮಾತನಾಡಿ, ಕೇಂದ್ರ ಸರ್ಕಾರ ಗಾಂಧಿ ತತ್ವಗಳನ್ನು ಜಾರಿಗೊಳಿಸುತ್ತಿದೆ. ನನ್ನನ್ನು ಕಾಯ ವಾಚ ಮನಸ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆಂದು ತಿಳಿಸಿದರು.

    ಬೈಕ್ ರ್ಯಾಲಿ: ನವೆಂಬರ್ 2 ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆಯನ್ನು ಬೆಂಗಳೂರು ಮತ್ತು ಹುಬ್ಬಳ್ಳಿಗೆ ಬೃಹತ್ ಬೈಕ್ ರ್ಯಾಲಿ ನಡೆಸಲು ತೀರ್ಮಾನಿಸಲಾಯಿತು. ನವಕರ್ನಾಟಕ ಪರಿವರ್ತನಾ ಯಾತ್ರೆ ಬಗ್ಗೆ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿ ಬಗ್ಗೆಯೂ ಚರ್ಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದರು.

    ನವ ಕರ್ನಾಟಕ ಪರಿವರ್ತನಾ ಯಾತ್ರೆ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ವಿಚಾರವಾಗಿ, ಬಿಜೆಪಿ ಕಚೇರಿಯಲ್ಲಿ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ತಂಡಗಳ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ,  ಬಿ.ಸೋಮಶೇಖರ್, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಭಾಗಿಯಾಗಿದ್ದರು.

  • ಮುಂಬರೋ ಚುನಾವಣೆಗೆ ಬಿಜೆಪಿ ರಣಕಹಳೆ – ಬೆಂಗ್ಳೂರಲ್ಲಿ ಬೈಕ್  ರ‍್ಯಾಲಿಗೆ ಪ್ಲಾನ್

    ಮುಂಬರೋ ಚುನಾವಣೆಗೆ ಬಿಜೆಪಿ ರಣಕಹಳೆ – ಬೆಂಗ್ಳೂರಲ್ಲಿ ಬೈಕ್ ರ‍್ಯಾಲಿಗೆ ಪ್ಲಾನ್

    ಬೆಂಗಳೂರು: ಮಂಗಳೂರು ಚಲೋ ಬೈಕ್ ಜಾಥಾ ವಿಫಲವಾದ ಬೆನ್ನಲ್ಲೇ ಮತ್ತೊಂದು ಬೈಕ್ ಜಾಥಾ ನಡೆಸಲು ರಾಜ್ಯ ಬಿಜೆಪಿ ನಾಯಕರು ಚಿಂತಿಸಿದ್ದಾರೆ.

    ರಾಜ್ಯದಲ್ಲಿ ಮತ್ತೊಂದು ಜಾಥಾ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಭಾನುವಾರ ರಾತ್ರಿ ನವದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಿವಾಸದಲ್ಲಿ ನಡೆಸಲಾದ ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಅಕ್ಟೋಬರ್ 2ರಂದು ಕರ್ನಾಟಕ ಪರಿವರ್ತನಾ ಜಾಥಾ ಆರಂಭಿಸಲು ಯೋಚಿಸಿದ್ದು, ಬೆಂಗಳೂರಿನಿಂದ ಪರಿವರ್ತನಾ ಯಾತ್ರೆ ಆರಂಭಿಸುವ ಇರಾದೆಯನ್ನು ನಾಯಕರು ಹೊಂದಿದ್ದಾರೆ. ಅಂದು ಸುಮಾರು ಒಂದು ಲಕ್ಷ ಬೈಕ್ ಗಳನ್ನು ರೋಡಿಗಿಳಿಸಿ ಬಲಪ್ರದರ್ಶನ ಮಾಡಬೇಕು ಎಂದು ಭಾನುವಾರ ನಡೆದ ಸಭೆಯಲ್ಲಿ ರಾಜ್ಯದ ನಾಯಕರು ಚರ್ಚಿಸಿದ್ದಾರೆ.

    ಉತ್ತರಪ್ರದೇಶ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲೂ ಚುನಾವಣಾ ಪ್ರಚಾರಕ್ಕೆ ಬೈಕ್ ಬಳಸಿಕೊಳ್ಳಲು ನಿರ್ಧರಿಸಿದ್ದು, ಬೆಂಗಳೂರಿನಿಂದ ತುಮಕೂರುವರೆಗೂ ಮೊದಲ ಹಂತದಲ್ಲಿ ಪರಿವರ್ತನಾ ಯಾತ್ರೆ ನಡೆಸಲು ಪ್ಲಾನ್ ನಡೆಸಲಾಗುತ್ತಿದೆ. ಈ ಮಾರ್ಗದ ಬಗ್ಗೆ ತೀರ್ಮಾನ ಇನ್ನೂ ಅಂತಿಮವಾಗಿಲ್ಲ. ಒಂದು ವೇಳೆ ಈ ಮಾರ್ಗ ಅಂತಿಮವಾದ್ರೆ ತುಮಕೂರುವರೆಗೂ ಬೈಕ್ ಜಾಥಾ ನಡೆಸುವ ಮೂಲಕ ಮಂಗಳೂರು ಬೈಕ್ ಜಾಥಾ ವೇಳೆ ಆದ ಡ್ಯಾಮೇಜ್ ಕಂಟ್ರೊಲ್ ಮಾಡಿಕೊಳ್ಳಬಹದು ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ 350 ಸ್ಥಾನ ಗೆಲ್ಲೋ ಲೆಕ್ಕಚಾರ ಹಾಕಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಧ್ಯಕ್ಷ ಅಮಿತ್ ಶಾ ಈಗಾಗಲೇ ರಣತಂತ್ರ ರೂಪಿಸುತ್ತಿದ್ದಾರೆ. ಗೆಲ್ಲಲು ಕಷ್ಟಕರವಾಗಿರುವ 125 ಕ್ಷೇತ್ರಗಳನ್ನು ಗುರುತಿಸಿದ್ದು, ಎರಡು ತಿಂಗಳ ಒಳಗಾಗಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ. ಗೆಲ್ಲಲು ಕಷ್ಟಕರವಾದ ಕ್ಷೇತ್ರಗಳ ಪಟ್ಟಿಯಲ್ಲಿ ರಾಜ್ಯದ 8 ಲೋಕಸಭಾ ಕ್ಷೇತ್ರಗಳಿವೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು, ಅದಕ್ಕಾಗಿ ಸಿದ್ಧತೆ ನಡೆಸಲು ಅಭ್ಯರ್ಥಿಗಳಿಗೆ ಸಾಕಷ್ಟು ಸಮಯ ಸಿಗಲಿದೆ ಎಂಬುದು ಶಾ ಲೆಕ್ಕಾಚಾರ ಎನ್ನಲಾಗಿದೆ.

    ಕೇಂದ್ರ ಸಚಿವರಾದ ಅನಂತ್ ಕುಮಾರ್, ಪ್ರಕಾಶ್ ಜಾವಡೇಕರ್, ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಅಭ್ಯರ್ಥಿಯ ಆಯ್ಕೆ ಹೊಣೆಯನ್ನು ನೀಡಲಾಗಿದೆ. ಅಚ್ಚರಿಯ ಸಂಗತಿ ಅಂದ್ರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ರಾಯ್‍ಬರೇಲಿ ಮತ್ತು ಅಮೇಥಿ ಕ್ಷೇತ್ರಗಳು ಈ ಪಟ್ಟಿಯಲ್ಲಿಲ್ಲ ಎನ್ನಲಾಗಿದೆ.

  • ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್

    ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್

    ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್ ದಾಖಲಾಗಿದೆ.

    ಇನ್ಸ್ ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ವಿರುದ್ಧ ಮಂಗಳೂರಿನ ಕದ್ರಿ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.

    ಏನಿದು ಘಟನೆ: ಮಂಗಳೂರು ಚಲೋ ರ್ಯಾಲಿಯ ಸಂದರ್ಭದಲ್ಲಿ ಪೊಲೀಸರು ಕದ್ರಿ ಗೋರಕ್ಷನಾಥ ಸಭಾಂಗಣದಲ್ಲಿ ಕಾರ್ಯಕರ್ತರನ್ನು ಕೂಡಿ ಹಾಕಿದ್ದರು. ಕೇಸ್ ಬುಕ್ ಮಾಡುವ ನೆಪದಲ್ಲಿ ಕೂಡಿ ಹಾಕಿ, ಬಿಡುಗಡೆ ಮಾಡಲು ತಡಮಾಡಿದ್ದಕ್ಕೆ ಆಕ್ರೋಶಗೊಂಡ ಸಂಸದರು ಸ್ಥಳಕ್ಕೆ ತೆರಳಿ ಕದ್ರಿ ಇನ್ ಸ್ಪೆಕ್ಟರ್ ಮಾರುತಿ ನಾಯಕ್ ಗೆ ಅವಾಜ್ ಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಮಾರುತಿ ನಾಯಕ್ ಮೊಬೈಲ್ ಕರೆ ಮಾಡಲು ಮುಂದಾದಾಗ ಕಟೀಲು, ನಿಮ್ ಚಾರ್ಜ್, ನಮ್ಮ ಚಾರ್ಜ್ ಅಲ್ಲ. ಸಹಿ ಮಾಡಿ. ಜೋರು ಮಾಡಿದ್ರೆ ಈಗಲೇ ಬಂದ್ ಕಾಲ್ ಕೊಡ್ತೀನಿ, ನೀವೇ ಅನುಭವಿಸಬೇಕು. ಏನು ತಿಳ್ಕೊಂಡಿದ್ದಾರೆ ಕಮಿಷನರ್. ನೀವು ಏನು ತಿಳ್ಕೊಂಡಿದ್ದೀರಾ..? ಆಟ ಆಡ್ತೀರಾ ನಮ್ಮತ್ರ? ನಮ್ಮ ಸಂಘಟನೆಯವರು ತೆಗೆದು ಬಿಸಾಕ್ತಾರೆ. ಕೊಡ್ರಿ ಈಚೆ. ಇನ್ನು ಅರ್ಧ ಗಂಟೆ ಲಾಕ್ ಮಾಡಿದ್ರೆ ಬಂದ್ ಕರೆ ಕೊಡ್ತೀನಿ. ನೀವೇ ಅನುಭವಿಸಬೇಕು. ಕೊಡ್ರಿ ಈಚೆ. ಇಲ್ಲಾಂದ್ರೆ ಬಂದ್ ಕರೆ ಕೊಡ್ತೀನಿ. ನೀವೇ ಜವಾಬ್ದಾರಿ ನಿನ್ನ ಹೆಸರಲ್ಲೇ ಬಂದ್ ಕಾಲ್ ಕೊಡ್ತೇನೆ. ಏನ್ ತಿಳ್ಕೊಂಡಿದ್ದಿ..? ಏನ್ ನಮ್ದು..? ಅರ್ಧ ಗಂಟೆ ಆಯ್ತು ಫೋನ್ ಮಾಡಿ ಎಂದು ಹೇಳಿ ದರ್ಪದಲ್ಲಿ ಮಾತನಾಡಿದ್ದರು.

    https://www.youtube.com/watch?v=z0V_F1q5DDM

  • ಪ್ರತಿಪಕ್ಷಗಳು ಶಾಂತ ರೀತಿಯಲ್ಲಿ ಹೋರಾಟ ಮಾಡುವುದು ತಪ್ಪೇ: ಸರ್ಕಾರಕ್ಕೆ ಬಿಎಸ್‍ವೈ ಪ್ರಶ್ನೆ

    ಪ್ರತಿಪಕ್ಷಗಳು ಶಾಂತ ರೀತಿಯಲ್ಲಿ ಹೋರಾಟ ಮಾಡುವುದು ತಪ್ಪೇ: ಸರ್ಕಾರಕ್ಕೆ ಬಿಎಸ್‍ವೈ ಪ್ರಶ್ನೆ

    ಮಂಗಳೂರು: ನಗರದಲ್ಲಿ ಸಮಾವೇಶ ಬೇಕಾದ್ರೆ ನಡೆಸಲಿ. ಆದ್ರೆ ಬೈಕ್ ರ‍್ಯಾಲಿ ನಡೆಸಬಾರದು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಬಂದೂಕುಗಳನ್ನಿಟ್ಟುಕೊಂಡು ಮಂಗಳೂರಿಗೆ ಬರ್ತಾ ಇದ್ದೇವಾ ಎಂದು ಪ್ರಶ್ನಿಸಿದ್ರು. ಮೋಟಾರ್ ಬೈಕ್ ನಲ್ಲಿ ಬಂದ್ದೇವೆ. ಯಾಕಂದ್ರೆ ರಾಜ್ಯದಲ್ಲಿ ಹಲವಾರು ಹಿಂದೂಗಳ ಕೊಲೆಯಾಗಿದೆ. ಆದ್ರೆ ಸರ್ಕಾರ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದ್ದು, ಮನಬಂದಂತೆ ಆಡಳಿತ ನಡೆಸುತ್ತಿದೆ. ಈ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮೋಟಾರ್ ಬೈಕಿನಲ್ಲಿ ಬರುತ್ತೇವೆ ಅಂದಾಗ ಅದನ್ನು ತಡೆಯುತ್ತಾರೆ. ಇಲ್ಲಿ ಮೆರವಣಿಗೆ ಮಾಡ್ತೀವಿ ಅಂದ್ರೆ ಸೆಕ್ಷನ್ ಹಾಕಿದ್ದೀವಿ ಅಂತಾರೆ. ಹಾಗಾದ್ರೆ ಪ್ರತಿಪಕ್ಷಗಳ ಕರ್ತವ್ಯವೇನು? ನಾವು ನಮ್ಮ ಹೋರಾಟ ಮಾಡುವುದು ಬೇಡ್ವಾ? ಕಾನೂನು ಸುವ್ಯವಸ್ಥೆಯನನ್ನು ಹೋರಾಟ ಮಾಡಿದಾಗ ಅಥವಾ ಅದನ್ನು ಅಡ್ಡಿ ಮಾಡಿದಾಗ ಈ ರೀತಿ ಸರ್ಕಾರ ವರ್ತಿಸುವುದು ಸರಿಯಲ್ಲ. ಇಲ್ಲಿ ನಾವು ಅದನ್ನು ಮಾಡಲು ಹೊರಟಿಲ್ಲವಲ್ಲ. ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಅಂದ್ರೆ ಸರ್ಕಾರ ಬದುಕಿದೆಯೋ ಸತ್ತಿದೆಯೋ? ಪೊಲೀಸ್ ಇಲಾಖೆ ಇದೆಯೋ ಇಲ್ಲವೋ? ಅಂತ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಒಂದು ಮಾತನ್ನು ಮಾನ್ಯ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಲು ಇಚ್ಚಿಸುತ್ತೇನೆ. ಅದೇನಂದ್ರೆ ನೀವು ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಬಹಳ ದಿನ ನಡೆಯಲ್ಲ. ಕಾನೂನು ಚೌಕಟ್ಟಿನಲ್ಲಿ ಯಾರನ್ನು ಬೇಕಾದ್ರೂ ಬಂಧಿಸಬಹುದು. ಯಾರ ಮೇಲೆ ಬೇಕಾದ್ರೂ ಕ್ರಮ ತೆಗೆದುಕೊಳ್ಳಬಹುದು. ಅದಕ್ಕೆ ಅಡ್ಡಿ ಮಾಡಿ ಅಂತ ನಾನು ಹೇಳುವುದಿಲ್ಲ. ಅದು ನಿಮಗೆ ಬಿಟ್ಟ ವಿಚಾರ. ನಾಡಿನ ಆರೂವರೆ ಕೋಟಿ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಅಂದ್ರು.

    ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಿತೂರಿಯಿಂದ ಈ ಘಟನಾವಳಿಗಳು ನಡೆಯುತ್ತಿವೆ. ಈ ರೀತಿಯ ಕೊಲೆಗಳು ಮುಂದುವರೆಯಬಾರದು. ಹೀಗಾಗಿ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈ ಬಿಡಬೇಕು ಅನ್ನೋದು ನಮ್ಮ ಉದ್ದೇಶ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯಾಯ್ತು ಯಾರು ಹೊಣೆ ಇದಕ್ಕೆ? ಈ ಸರ್ಕಾರದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟಿದೆ ಎನ್ನುವುದಕ್ಕೆ ಕಲಬುರ್ಗಿ ಹತ್ಯೆಯ ಬಳಿಕ ಇದೀಗ ಗೌರಿ ಹತ್ಯೆ ಪ್ರತ್ಯಕ್ಷ ಸಾಕ್ಷಿ. ಗಣಪತಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಮತ್ತೊಮ್ಮೆ ನೀಡಿದ್ದಾರೆ. ಅಲ್ಲಿ ಸುಪ್ರೀಂ ಕೋರ್ಟ್ ಕೂಡಾ ಛೀಮಾರಿ ಹಾಕಿದೆ. ನೀವು ಈ ಸಂದರ್ಭಗಳಲ್ಲಿ ಸರಿಯಾಗಿ ನಡೆದುಕೊಂಡಿಲ್ಲ. ಸಿಐಡಿ ತನಿಖೆ ಸರಿಯಾದ ರೀತಿಯಲ್ಲಿ ಆಗಿಲ್ಲ. ಅದಕ್ಕೊಸ್ಕರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರಿಸವುದಾಗಿ ಹೇಳಿದೆ ಅಂತ ಸರ್ಕಾರದ ವಿರುದ್ಧ ಗುಡುಗಿದ್ರು.

    ಭ್ರಷ್ಟ ಸಿಎಂ ಸರ್ಕಾರವನ್ನು ಹಾಗೂ ತೂಘಲಕ್ ದರ್ಬಾರನ್ನು ಕೊನೆಗೊಳಿಸುವವರೆಗೆ ನಮ್ಮ ಹೋರಾಟ ನಡೆಯುತ್ತದೆ ಅಂತ ಬಿಎಸ್ ವೈ ಎಚ್ಚರಿಸಿದರು.

    https://twitter.com/ShobhaBJP/status/905737124699193344

  • ಉಡುಪಿ ಬೈಕ್ ರ‍್ಯಾಲಿಗೆ ಪೊಲೀಸರ ತಡೆ- 300 ಬೈಕ್ ವಶ

    ಉಡುಪಿ ಬೈಕ್ ರ‍್ಯಾಲಿಗೆ ಪೊಲೀಸರ ತಡೆ- 300 ಬೈಕ್ ವಶ

    ಉಡುಪಿ: ‘ಮಂಗಳೂರು ಚಲೋ’ ಬೈಕ್ ರ‍್ಯಾಲಿಗೆ ಉಡುಪಿಯಲ್ಲಿ ಹಿನ್ನಡೆಯಾಗಿದೆ. ಪೂರ್ವಯೋಜಿತ ಕಾರ್ಯಕ್ರಮದಂತೆ ಶಿವಮೊಗ್ಗ, ಹಾವೇರಿ ಭಾಗದ ಕಾರ್ಯಕರ್ತರು ಹೆಬ್ರಿ ಮೂಲಕ ಕಾರ್ಕಳ ತಲುಪಬೇಕಿತ್ತು.

    ಹುಬ್ಬಳ್ಳಿ, ಬೆಳಗಾವಿ ಭಾಗದ ಕಾರ್ಯಕರ್ತರು ಬೈಂದೂರು ಮೂಲಕ ಮಣಿಪಾಲಕ್ಕೆ ಬಂದು ತಂಗಬೇಕಿತ್ತು. ಆದರೆ ಆಯಾ ಜಿಲ್ಲೆಗಳಲ್ಲೇ ಕಾರ್ಯಕರ್ತರನ್ನು ಬಂಧಿಸಿದ ಕಾರಣ ಅನ್ಯ ಜಿಲ್ಲೆಯ ಪ್ರತಿಭಟನಾಕಾರರು ಉಡುಪಿ ಜಿಲ್ಲೆಯ ಪ್ರವೇಶ ಮಾಡಿಲ್ಲ. ಇದರ ಹೊರತಾಗಿಯೂ ಕಾರ್ಕಳ ತಾಲೂಕಿನ ಹೆಬ್ರಿಯಲ್ಲಿ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯ್ತು, ತಾಲೂಕಿನ ಐನೂರಕ್ಕೂ ಅಧಿಕ ಬೈಕ್ ಗಳು ರ‍್ಯಾಲಿಯಲ್ಲಿ ಭಾಗವಹಿಸಿದವು.

    ರ‍್ಯಾಲಿ ಪ್ರಾರಂಭವಾಗಿ ಕೆಲ ದೂರ ಸಂಚರಿಸಿದ ನಂತರ ಪೊಲೀಸರು ಅಡ್ಡಿಪಡಿಸಿದರು. ಶಾಸಕ ಸುನಿಲ್ ಕುಮಾರ್ ಸಹಿತ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸುವ ಮೂಲಕ ಬೈಕ್ ರ‍್ಯಾಲಿಗೆ ಅವಕಾಶ ನೀಡಿಲ್ಲ. ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ಹೆಮ್ಮಾಡಿಯಲ್ಲೂ ರ‍್ಯಾಲಿ ನಡೆಸಲು ಮುಂದಾದ 200 ಕ್ಕೂ ಅಧಿಕ ಉಡುಪಿ ಜಿಲ್ಲೆಯ ಕಾರ್ಯಕರ್ತರನ್ನು ಬಂಧಿಸಲಾಯ್ತು. ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.