Tag: Bills

  • 3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

    3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

    ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅಂಕಿತ ಹಾಕಿದ್ದಾರೆ.

    ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು

  • ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ – ಮಸೂದೆಗೆ ಬಿತ್ತು ರಾಜ್ಯಪಾಲರ ಅಂಕಿತ

    ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ – ಮಸೂದೆಗೆ ಬಿತ್ತು ರಾಜ್ಯಪಾಲರ ಅಂಕಿತ

    ಅಮರಾವತಿ: ಆಂಧ್ರಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಜಗನ್‌ ಮೋಹನ್‌ ರೆಡ್ಡಿ ಸರ್ಕಾರ ಮೂರು ರಾಜಧಾನಿಗಳ ಪ್ರಸ್ತಾಪಕ್ಕೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್ ಸಹಿ ಹಾಕಿದ್ದಾರೆ.

    ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲ ವಲಯಗಳ ಸರ್ವಾಂಗೀಣ ಅಭಿವೃದ್ಧಿ ವಿಧೇಯಕ 2020 ಮಸೂದೆ ಶಾಸನ ಸಭೆಯಲ್ಲಿ ಪಾಸ್‌ ಆಗಿತ್ತು. ಈಗ ರಾಜ್ಯಪಾಲರು ಸಹಿ ಹಾಕುವ ಮೂಲಕ ಅಧಿಕೃತವಾಗಿ ಜಾರಿಯಾಗಲಿದೆ.

    ಸಿಎಂ ಜಗನ್ ಸರ್ಕಾರ ಮೂರು ವಾರಗಳ ಹಿಂದೆ ವಿಧಾನಸಣೆಯಲ್ಲಿ ಮಸೂದೆಯನ್ನು ಮಂಡಿಸಿತ್ತು. ಹಣಕಾಸು ಸಚಿವ ಬುಗ್ಗನ್​​ ರಾಜೇಂದ್ರನಾಥ್​​ ರೆಡ್ಡಿ, ರಾಜ್ಯಾಡಳಿತ ವಿಕೇಂದ್ರಿಕರಣ ಮಸೂದೆ ಮಂಡಿಸಿ ಅನುಮೋದನೆ ಪಡೆದುಕೊಂಡಿದ್ದರು. ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ನಡುವಿನ ತೀವ್ರ ತಿಕ್ಕಾಟಕ್ಕೆ ಈ ಮಸೂದೆ ಕಾರಣವಾಗಿತ್ತು.

    ಟಿಡಿಪಿ ಮುಖ್ಯಸ್ಥ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಅಮರಾವತಿ ರಾಜಧಾನಿ ಮಾಡಲು ಮುಂದಾಗಿದ್ದರು. ಅಷ್ಟೇ ಅಲ್ಲದೇ ವಿಶ್ವದ ನಗರಗಳ ಪೈಕಿ ಅಮರಾವತಿಯೂ ಸೇರಲು ಜಗತ್ತಿನ ನಾನಾ ಕಂಪನಿಗಳಿಂದ ನಗರ ವಿನ್ಯಾಸದ ಕಲ್ಪನೆಯನ್ನು ಕೇಳಿದ್ದರು. ಈಗ ಈ ಎಲ್ಲ ಯೋಜನೆಗಳಿಗೆ ಜಗನ್‌ ಪೂರ್ಣ ವಿರಾಮ ಹಾಕಿದ್ದಾರೆ.

    ಈ ಕಾಯ್ದೆಯಿಂದ ಇನ್ನು ಮುಂದೆ ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿಯಾಗಿರುವ ವಿಶಾಖಪಟ್ಟಣ ಆಡಳಿತಾತ್ಮಕ ರಾಜಧಾನಿಯಾಗಲಿದೆ. ಅಮರಾವತಿ ಶಾಸನ ರಾಜಧಾನಿಯಾಗಿಯೇ ಮುಂದುವರಿಯಲಿದ್ದು, ನ್ಯಾಯ ರಾಜಧಾನಿಯಾಗಿ ಕರ್ನೂಲಿನಲ್ಲಿ ಹೈಕೋರ್ಟ್ ನಿರ್ಮಾಣವಾಗಲಿದೆ.