Tag: Biometric

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • ಸಿಮ್‌ ಕಾರ್ಡ್‌ ಡೀಲರ್‌ಗಳ ಪೊಲೀಸ್‌ ಪರಿಶೀಲನೆ ಕಡ್ಡಾಯ

    ಸಿಮ್‌ ಕಾರ್ಡ್‌ ಡೀಲರ್‌ಗಳ ಪೊಲೀಸ್‌ ಪರಿಶೀಲನೆ ಕಡ್ಡಾಯ

    ನವದೆಹಲಿ: ಮೊಬೈಲ್‌ ಸಿಮ್‌ ಕಾರ್ಡ್‌ ಡೀಲರ್‌ಗಳ (Mobile Sim Card Dealer) ಪೊಲೀಸ್‌ ಪರಿಶೀಲನೆ (Police Verification) ಮತ್ತು ಬಯೋಮೆಟ್ರಿಕ್‌ (Biometric) ಪರಿಶೀಲನೆ ಕಡ್ಡಾಯ ಮಾಡಲಾಗಿದೆ. ಇದರ ಜೊತೆಗೆ ಎಲ್ಲಾ ಪಾಯಿಂಟ್‌ ಆಫ್‌ ಸೇಲ್‌ ಡೀಲರ್‌ಗಳ ನೋಂದಣಿಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ಕಡ್ಡಾಯ ನಿಯಮ ಉಲ್ಲಂಘಿಸಿದರೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರು ಮೊದಲು ಹಿಂದುಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು: ಗುಲಾಂ ನಬಿ ಆಜಾದ್

    ಸಂಚಾರ ಸಾಥಿ ಪೋರ್ಟಲ್ ಪ್ರಾರಂಭವಾದಾಗಿನಿಂದ ಅಕ್ರಮವಾಗಿ ಪಡೆದ 52 ಲಕ್ಷ ಸಂಪರ್ಕಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲಾಗಿದೆ. ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವ 67,000 ಡೀಲರ್‌ಗಳನ್ನು ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದೆ. ಮೇ 2023 ರಿಂದ 300 ಸಿಮ್ ಕಾರ್ಡ್ ವಿತರಕರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ಅವರು ಹೇಳಿದರು.

    ಹಿಂದೆ ಜನರು ಮೊಬೈಲ್‌ ಸಿಮ್ ಕಾರ್ಡ್‌ಗಳನ್ನು ಬಲ್ಕ್‌ ರೀತಿ ಖರೀದಿಸುತ್ತಿದ್ದರು. ಸಿಮ್‌ ಕಾರ್ಡ್‌ ಬಲ್ಕ್‌ ಆಗಿ ಖರೀದಿಸಲು ಅವಕಾಶವಿತ್ತು. ಇನ್ನು ಮುಂದೆ ಇದನ್ನು ಕೊನೆಗೊಳಿಸಿ ಸರಿಯಾದ ವ್ಯಾಪಾರ ಸಂಪರ್ಕದ ನಿಬಂಧನೆಯನ್ನು ತರುತ್ತೇವೆ. ಇದರಿಂದಾಗಿ ಮೋಸದ ಕರೆಗಳನ್ನು ನಿಲ್ಲಿಸಲು ಸಹಾಯವಾಗಲಿದೆ ಎಂದರು.

    ದೇಶದಲ್ಲಿ 10 ಲಕ್ಷ ಸಿಮ್ ಡೀಲರ್‌ಗಳಿದ್ದು, ಅವರಿಗೆ ಪೊಲೀಸ್ ಪರಿಶೀಲನೆಗೆ ಸಾಕಷ್ಟು ಸಮಯ ನೀಡಲಾಗುವುದು ಎಂದು ವೈಷ್ಣವ್ ಹೇಳಿದ್ದಾರೆ.

     

    ಈ ವರ್ಷದ ಮೇ ತಿಂಗಳಲ್ಲಿ, ಪಂಜಾಬ್ ಪೊಲೀಸರು (Punjab Police) ನಕಲಿ ಗುರುತಿನ ಮೂಲಕ ಸಕ್ರಿಯಗೊಂಡ 1.8 ಲಕ್ಷ ಸಿಮ್ ಕಾರ್ಡ್‌ಗಳನ್ನು ನಿರ್ಬಂಧಿಸಿದ್ದರು. ಈ ಸಿಮ್ ಕಾರ್ಡ್‌ಗಳನ್ನು ನೀಡಿದ್ದಕ್ಕಾಗಿ 17 ಜನರನ್ನು ಬಂಧಿಸಿದ್ದರು. ಬಹುತೇಕ ಸೈಬರ್ ಅಪರಾಧಗಳು ಮತ್ತು ‘ದೇಶವಿರೋಧಿ’ ಕೃತ್ಯಗಳನ್ನು ಸುಳ್ಳು ದಾಖಲೆಗಳೊಂದಿಗೆ ಜೋಡಿಸಲಾದ ಮೊಬೈಲ್ ಸಂಖ್ಯೆಗಳನ್ನು ಬಳಸುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಈ ಕ್ರಮ ಕೈಗೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಬಿಎಂಪಿಯ ಸಿಬ್ಬಂದಿ, ಪೌರಕಾರ್ಮಿಕರಿಗೆ ಬಯೋಮೆಟ್ರಿಕ್ ಭಯ

    ಬಿಬಿಎಂಪಿಯ ಸಿಬ್ಬಂದಿ, ಪೌರಕಾರ್ಮಿಕರಿಗೆ ಬಯೋಮೆಟ್ರಿಕ್ ಭಯ

    ಬೆಂಗಳೂರು: ಕೊರೊನೊ ವೈರಸ್, ಕಾಲರಾ ಭಯ ಹರಡುವ ಭೀತಿ ಈಗ ಬಿಬಿಎಂಪಿಯ ಸಿಬ್ಬಂದಿ, ಪೌರಕಾರ್ಮಿಕರಿಗೂ ಕಾಡುತ್ತಿದೆ. ಕಾರಣ ಪಾಲಿಕೆಯಲ್ಲಿ ಹಾಜರಾತಿಗಾಗಿ ಈಗಲೂ ಬಯೋಮೆಟ್ರಿಕ್ ಮುಂದುವರಿಕೆ ಮಾಡಲಾಗಿದೆ.

    ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ, ಬ್ಯಾಟರಾಯನಪುರ, ತ್ಯಾಗರಾಜ್‍ನಗರ ಎಲ್ಲ ಕಡೆ ಬಯೋಮೆಟ್ರಿಕ್ ಮೂಲಕ ಹಾಜರಾತಿ ಪಡೆಯಲಾಗುತ್ತಿದೆ. ಇದು ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿದೆ. ಇಡೀ ನಗರಕ್ಕೆ ಮುನ್ನಚ್ಚರಿಕೆ ಬಗ್ಗೆ ಅರಿವು ಹೇಳುವ ಬಿಬಿಎಂಪಿ ಮಾತ್ರ ಬಯೋಮೆಟ್ರಿಕ್ ಮುಂದುವರಿಸಿದೆ.

    ಈ ಬಗ್ಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಈ ವಿಚಾರ ನನ್ನ ಗಮನಕ್ಕೆ ಬೆಳಿಗ್ಗೆಯೇ ಬಂದಿದೆ. ಆಯುಕ್ತರು, ಆಡಳಿತ ವಿಭಾಗದ ವಿಶೇಷ ಆಯುಕ್ತರು, ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಒಂದೊಮ್ಮೆ ಬಯೋಮೆಟ್ರಿಕ್ ವ್ಯವಸ್ಥೆ ತೆಗೆದರೆ ದುರ್ಬಳಕೆ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಬಯೋಮೆಟ್ರಿಕ್ ಸಂಸ್ಥೆ ದೃಷ್ಟಿಯಿಂದ ತೀರ್ಮಾನ ಮಾಡಲಾಗುತ್ತದೆ ಎಂದರು.

  • ರೇಷನ್ ಅಕ್ಕಿಗಾಗಿ ಬಯೋಮೆಟ್ರಿಕ್ ಕೊಡಲು ಹೋಗುತ್ತಿದ್ದ ಅಪ್ಪ-ಮಗನ ಮೇಲೆ ಹರಿದ ಬಸ್

    ರೇಷನ್ ಅಕ್ಕಿಗಾಗಿ ಬಯೋಮೆಟ್ರಿಕ್ ಕೊಡಲು ಹೋಗುತ್ತಿದ್ದ ಅಪ್ಪ-ಮಗನ ಮೇಲೆ ಹರಿದ ಬಸ್

    ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮೈಸೂರು ತಾಲೂಕು ಕೋಟೆಹುಂಡಿ ಸರ್ಕಲ್ ಬಳಿ ನಡೆದಿದೆ.

    ಹೆಗ್ಗಡದೇವನಕೋಟೆ ತಾಲೂಕಿನ ಕಟ್ಟೆಹುಣಸೂರು ನಿವಾಸಿಗಳಾದ ಪ್ರಕಾಶ್ (50) ಹಾಗೂ ಸುರೇಶ್(23) ಮೃತ ದುರ್ದೈವಿಗಳು. ಇವರು ಮೈಸೂರಿನ ಜೆ.ಪಿ.ನಗರದ ಮಹದೇವುಪರದಲ್ಲಿ ವಾಸವಿದ್ದರು.

    ರೇಷನ್ ಅಕ್ಕಿಗಾಗಿ ಬೈಯೋಮೆಟ್ರಿಕ್ (ಥಂಬ್ ಇಂಪ್ರೆಷನ್) ಕೊಡಲು ಕಟ್ಟೆಹುಣಸೂರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮೈಸೂರು ಗ್ರಾಮಾಂತರ ಪೊಲೀಸ್ ಪರಿಶೀಲನೆ ನಡೆಸಿದ್ದಾರೆ. ಪ್ರಕಾಶ್ ಹಾಗೂ ಸುರೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಕೆಳವರ್ಗದ ನೌಕರರಿಗಿಲ್ಲ ಟಾಯ್ಲೆಟ್- ಸಚಿವಾಲಯದ ಶೌಚಾಲಯಕ್ಕೆ ಬಯೋಮೆಟ್ರಿಕ್

    ಕೆಳವರ್ಗದ ನೌಕರರಿಗಿಲ್ಲ ಟಾಯ್ಲೆಟ್- ಸಚಿವಾಲಯದ ಶೌಚಾಲಯಕ್ಕೆ ಬಯೋಮೆಟ್ರಿಕ್

    ಲಾಹೋರ್: ಪಾಕಿಸ್ತಾನದಲ್ಲಿ ಸಚಿವಾಲಯದ ಶೌಚಾಲಯಕ್ಕೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೆಳವರ್ಗದ ನೌಕರರು ಸೇರಿದಂತೆ ಸಾರ್ವಜನಿಕರು ಸಚಿವಾಲಯದ ಶೌಚಾಲಯ ಬಳಸುವಂತಿಲ್ಲ. ಹೀಗಾಗಿ ವಿಐಪಿ ಮತ್ತು ಗ್ರೇಡ್ ಒನ್ ಅಧಿಕಾರಿಗಳಿಗಾಗಿ ಈ ಶೌಚಾಲಯ ಮೀಸಲಿರಿಸಲಾಗಿದೆ.

    ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಪ್ರಧಾನಿ ಇಮ್ರಾನ್ ಖಾನ್ ದೊಡ್ಡ ಬಂಗಲೆ ತೊರೆದು ಸಾಧಾರಣ ಫ್ಲ್ಯಾಟ್ ನಲ್ಲಿ ಇದ್ದಾರೆ. ಆದರೆ ಅವರ ಸಚಿವ ಸಂಪುಟದ ಅಧಿಕಾರಿಗಳು ವಿಐಪಿ ಸಂಸ್ಕೃತಿಯನ್ನು ಬಿಟ್ಟು ಹೊರ ಬಂದಿಲ್ಲ. ಬಯೋಮೆಟ್ರಿಕ್ ಅಳವಡಿಸಲಾಗಿರುವ ಶೌಚಾಲಯಗಳನ್ನು ಕೇವಲ ಸಹಾಯಕ ಕಾರ್ಯದರ್ಶಿಗಳು ಮತ್ತು ಗ್ರೇಡ್ ಅಧಿಕಾರಿಗಳು ಮಾತ್ರ ಬಳಸಬಹುದಾಗಿದೆ. ಉಳಿದಂತೆ ಸಚಿವಾಲಯದ ಇತರೆ ಸಿಬ್ಬಂದಿ ಹೊರಗಿನ ಸಾರ್ವಜನಿಕ ಶೌಚಾಲಯ ಬಳಸಬೇಕಿದೆ.

    ಸಾರ್ವಜನಿಕ ಶೌಚಾಲಯದಲ್ಲಿ ಸರಿಯಾಗಿ ನೀರಿನ ವ್ಯವಸ್ಥೆ, ಟಿಶ್ಯೂ ಪೇಪರ್ ಸಹ ಇಡುವುದಿಲ್ಲ ಎಂದು ಸಚಿವಾಲಯದ ಕೆಳಹಂತದ ಅಧಿಕಾರಿಗಳು, ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಾರೆ.

  • ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    -ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಆಹಾರ ಇಲಾಖೆ ಆಯುಕ್ತರೇ ಸಸ್ಪೆಂಡ್

    ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಸಚಿವರು ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಮೀರ್ ಅಹಮದ್ ಅವರು, ಮೂರು ಜಿಲ್ಲೆಗೆ ಮಾತ್ರ ಅನುದಾನ ಬಿಡುಗಡೆ ಎನ್ನುವುದು ಸರಿಯಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಜಿಲ್ಲೆಗಳಿಗೂ ಸಮಾನ ಅನುದಾನ ಹಂಚಿಕೆ ಆಗುತ್ತಿದೆ. ಸಚಿವ ರೇವಣ್ಣ ಅವರಿಗೆ ಹಾಸನ ಜಿಲ್ಲೆಯ ಮೇಲೆ ಹೆಚ್ಚು ಪ್ರೀತಿ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಒತ್ತಡ ಹೇರಿ ಹೆಚ್ಚಿನ ಅನುದಾನ ಪಡೆಯುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

    ನಾನು ಕೂಡಾ ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಬೇಕು ಅಂತ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಈ ಕುರಿತು ಮುಂದಿನ ಕ್ಯಾಬಿನೆಟ್‍ನಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇನೆ. ರೇವಣ್ಣ ಅವರಿಗೆ ಮಾತ್ರ ಹೆಚ್ಚು ಅನುದಾನ ಕೊಡುತ್ತಾರೆ ಎನ್ನುವ ಆರೋಪ ಸುಳ್ಳು ಎಂದು ತಿಳಿಸಿದರು.

    ಎಲ್ಲಾ ಜಿಲ್ಲೆಗಳ ಸಭೆ ಮಾಡಿದ್ದು, ಅನಿಲ ಭಾಗ್ಯ ಯೋಜನೆಗೆ 30 ಲಕ್ಷ ಜನ ಫಲಾನುಭವಿಗಳನ್ನು ಗುರುತಿಸಲಾಗಿದೆ. ಅದರಲ್ಲಿ 1 ಲಕ್ಷ ಜನರಿಗೆ ಯೋಜನೆ ತಲುಪಿಸಲು ಸಿದ್ಧತೆ ನಡೆದಿದೆ. ಪ್ರಧಾನಮಂತ್ರಿ ಉಜ್ವಲ್ ಯೋಜನೆ ಅಡಿ ಬಂದಿದ್ದ 31 ಸಾವಿರ ಅರ್ಜಿಗಳನ್ನು ಕೈಬಿಡಲಾಗಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ 15ರೊಳಗಾಗಿ 1 ಲಕ್ಷ ಜನ ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    ನ್ಯಾಯಬೆಲೆ ಅಂಗಡಿ ಬಯೋಮೆಟ್ರಿಕ್ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಲಿಖಿತ ದಾಖಲೆ ಕೊಡುವ ವ್ಯವಸ್ಥೆಯಿಂದ ಅಧಿಕಾರಿಗಳು ಸುಮ್ಮನೆ ಬಿಲ್ ಮಾಡುತ್ತಿದ್ದರು. ಬಯೋಮೆಟ್ರಿಕ್ ಅಳವಡಿಸುವುದರಿಂದ ಇಲಾಖೆಗೆ 580 ಕೋಟಿ ರೂ. ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಬಿಎಸ್‍ಎನ್‍ಎಲ್ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಂದ ಬಯೋಮೆಟ್ರಿಕ್ ಅಳವಡಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪ್ರಾಯೋಗಿಕವಾಗಿ ಶಿವಮೊಗ್ಗದ ಖಾಸಗಿ ಕಂಪನಿಗೆ ಬಯೋಮೆಟ್ರಿಕ್ ಅಳವಡಿಕೆ ಮಾಡಲು ಅವಕಾಶ ನೀಡಲಾಗಿದೆ. ಇಲ್ಲಿ ಯಶಸ್ವಿಯಾದರೆ ಹಂತ ಹಂತವಾಗಿ ರಾಜ್ಯದಲ್ಲಿ ಪ್ರತಿಯೊಂದು ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಬಿಪಿಎಲ್ ಕಾರ್ಡ್ ಗಾಗಿ 6.26 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸುಮಾರು 1 ಕೋಟಿ ಬಿಪಿಎಲ್ ಕಾರ್ಡ್ ಚಾಲ್ತಿಯಲ್ಲಿವೆ. ನಿತ್ಯವೂ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಿಪಿಎಲ್ ಹೊಂದಿರುವ ಶೇ. 99 ಜನರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಆಧಾರ್ ಲಿಂಕ್ ಆಗಿರುವ 4.5 ಲಕ್ಷ ಕಾರ್ಡ್ ಗಳು ರದ್ದಾಗಲಿವೆ ಎಂದು ಸಚಿವರು ಹೇಳಿದರು.

    ನ್ಯಾಯಬೆಲೆ ಅಂಗಡಿಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಈ ಕುರಿತು ಅಧಿಕಾರಿಗಳಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದರೆ ಆಹಾರ ಇಲಾಖೆ ಅಧಿಕಾರಿಯನ್ನೇ ಅಮಾನತು ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿರುವೆ. ನಾನು ಕೂಡ ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ರದ್ದು: ಸಿಎಂ ಕುಮಾರಸ್ವಾಮಿ

    ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ರದ್ದು: ಸಿಎಂ ಕುಮಾರಸ್ವಾಮಿ

    ರಾಮನಗರ: ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಗೊಳಿಸುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಗೊಳಿಸುವುದಾಗಿ ತೀರ್ಮಾನ ತೆಗೆದುಕೊಂಡಿದ್ದೇನೆ. ಬಯೋಮೆಟ್ರಿಕ್‍ನಿಂದಾಗಿ ಉದ್ಭವಿಸಿದ್ದ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ತಿಳಿಸಿದರು.

    ಅಭಿಮಾನದಿಂದ ಆಶೀರ್ವಾದ ಮಾಡಿದರೂ ಬಂದಿಲ್ಲ ಎಂಬ ಮಾತನ್ನು ನಾನು ಕೇಳಿಸಿಕೊಂಡಿದ್ದೇನೆ. ಆದರೆ ಆಡಳಿತದ ಒತ್ತಡದಿಂದ ಬರಲು ಸಾಧ್ಯವಾಗಿರಲಿಲ್ಲ ಇದೀಗ ಬಂದಿದ್ದೇನೆ. ನಾಮಪತ್ರ ಹಾಕಲು ಅವಕಾಶ ನೀಡಿ ಗೆಲುವು ನೀಡಿದ್ದೀರಿ. ಇದು ನನ್ನ ಗೆಲುವಲ್ಲ ಕ್ಷೇತ್ರದ ಜನರ ಗೆಲುವಾಗಿದೆ. ಚುನಾವಣೆಯಾದ ಮೇಲೆ ಕುಮಾರಣ್ಣ ಯಾವ ಕ್ಷೇತ್ರಕ್ಕೆ ರಾಜೀನಾಮೆ ನೀಡ್ತಾರೆ ಅನ್ನೋದು ಅನುಮಾನ ಇತ್ತು, ನಾನು ಅಂತಿಮವಾಗಿ ಚನ್ನಪಟ್ಟಣ ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.

    ರಾಮನಗರ-ಚನ್ನಪಟ್ಟಣ ನನ್ನ ಎರಡು ಕಣ್ಣುಗಳು ಇದ್ದಹಾಗೆ. 20 ವರ್ಷಗಳಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಶಾಪವಂಟಿತ್ತು, ಇದೀಗ ಜೆಡಿಎಸ್ ಮತ್ತೆ ಗೆಲ್ಲುವ ಮೂಲಕ ಶಾಪವಿಮೋಚನೆಯಾಗಿದೆ. ಜಿಲ್ಲಾಧಿಕಾರಿಗಳ ಜೊತೆ ಸಮಗ್ರ ಜಿಲ್ಲೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಿದ್ದೇನೆ. ಚನ್ನಪಟ್ಟಣದ ಎಲ್ಲ ಕೆರೆಗಳನ್ನು ತುಂಬಿಸುವುದು ಹಾಗೂ ಕಣ್ವ ಜಲಾಶಯ ತುಂಬಿಸಿ ಅದರಿಂದ ಹಳ್ಳಿಗಳಿಗೆ ನೀರಾವರಿ ಅವಕಾಶ ಕಲ್ಪಿಸುವುದು, ರಾಮನಗರ ಹಾಗೂ ಚನ್ನಪಟ್ಟಣ ನಗರಗಳಿಗೆ ಪ್ರತ್ಯೇಕ ಪೈಪ್ ಲೈನ್ ಮೂಲಕ ಕಾವೇರಿ ನೀರು ಒದಗಿಸುವ ಯೋಜನೆಯನ್ನು ಜಾರಿಗೊಳಿಸುತ್ತೇನೆ ಎಂದು ತಿಳಿಸಿದರು.

    ಸಿಎಂ ಆದ ಬಳಿಕ ಪ್ರಾರಂಭವಾದ ಮಳೆ ನಿರಂತರವಾಗಿ ಆಗುತ್ತಿದೆ. ದೇವರ ಕೃಪೆಯಿಂದ ಜಲಾಶಯಗಳು ಭರ್ತಿಯಾಗಿವೆ. ತಮಿಳುನಾಡಿನ ಕ್ಯಾತೆ ತಪ್ಪಿದೆ. ಕೇಂದ್ರದಿಂದ 5 ಮೆಗಾಡೈರಿಗಳ ನಿರ್ಮಾಣಕ್ಕೆ ಅನುದಾನ ತರಲಾಗಿದೆ. ಥೈಲ್ಯಾಂಡ್ ಮಾದರಿಯಲ್ಲಿ ರೇಷ್ಮೆಯ ಉಪಪದಾರ್ಥಗಳ ಉತ್ಪಾದನೆಯಾಗಬೇಕು. ಅಲ್ಲದೇ ರಾಮನಗರ- ಚನ್ನಪಟ್ಟಣದ ಮಧ್ಯೆ 500 ಎಕರೆ ಪ್ರದೇಶದಲ್ಲಿ ಸೂಪರ್ ಮಾರುಕಟ್ಟೆ ನಿರ್ಮಿಸುವುದಾಗಿ ಹೇಳಿದರು.

    ಅಂಗನವಾಡಿ ಕಾರ್ಯಕರ್ತೆಯರು, ಟೀಚರ್‍ಗಳು, ಅಡುಗೆ ತಯಾರಕರ ಹೊರೆಯನ್ನ ಇದೀಗ ನನ್ನ ಮೇಲೆ ಹೊರಿಸಿದ್ದೀರಿ, ಮಾಧ್ಯಮಗಳಲ್ಲಿ ನನ್ನ ವಿರುದ್ದವೇ ಸುದ್ದಿಗಳು ಪ್ರಸಾರವಾಗುತ್ತಿವೆ. ಯಾರದ್ದೇ ಕ್ಷೇತ್ರವಾದ್ರೂ ಸಿಎಂ ಇಲ್ನೋಡಿ ಅಂತಾರೆ, ಜಗದೀಶ್ ಶೆಟ್ಟರ್ ಕ್ಷೇತ್ರದ ಸಮಸ್ಯೆಗೆ ಸಿಎಂಗೆ ಧಿಕ್ಕಾರ ಅಂತಾರೆ. ಯಾರೋ ಮಾಡಿದ್ದ ತಪ್ಪನ್ನೆಲ್ಲ ಕುಮಾರಸ್ವಾಮಿ ತಲೆಗೆ ಕಟ್ತಾರೆ ಎಂದು ಮಾಧ್ಯಮದವರ ವಿರುದ್ಧ ಮತ್ತೊಮ್ಮೆ ಹರಿಹಾಯ್ದರು.

  • ದೇಶದಲ್ಲೇ ಫಸ್ಟ್, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಧಾರ್ ಇದ್ರೆ ಪ್ರವೇಶ ಸುಲಭ!

    ದೇಶದಲ್ಲೇ ಫಸ್ಟ್, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಧಾರ್ ಇದ್ರೆ ಪ್ರವೇಶ ಸುಲಭ!

    ಬೆಂಗಳೂರು: ಶೀಘ್ರದಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದಲ್ಲಿಯೇ ಮೊದಲ ಆಧಾರ್ ಬಯೋಮೆಟ್ರಿಕ್ ಪ್ರವೇಶವನ್ನು ಹೊಂದಿರುವ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

    ಹೊಸ ಆಧಾರ್ ಪರಿಶೀಲನಾ ವ್ಯವಸ್ಥೆ 2108 ಮಾರ್ಚ್ ವೇಳೆಗೆ ಆರಂಭವಾಗಲಿದ್ದು, ಡಿಸೆಂಬರ್ 31ರ ವೇಳೆಗೆ ಮುಕ್ತಾಯವಾಗಬೇಕೆಂಬ ಡೆಡ್‍ಲೈನನ್ನು ಕೆಐಎಎಲ್ ಹಾಕಿಕೊಂಡಿದೆ.

    ವಿಮಾನ ನಿಲ್ದಾಣದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯ ಅಳವಡಿಕೆಯಿಂದ ಪ್ರಯಾಣಿಕರ ಪರಿಶೀಲನಾ ವೇಳೆಯು ಕಡಿಮೆಯಾಗಲಿದೆ. ಅಲ್ಲದೆ ರಕ್ಷಣಾ ದೃಷ್ಟಿಯಿಂದಲೂ ಈ ವ್ಯವಸ್ಥೆ ಅತ್ಯುತ್ತಮ ಎಂದು ವಿಶ್ಲೇಷಿಸಲಾಗುತ್ತಿದೆ. ಒಮ್ಮೆ ಪ್ರಯಾಣಿಕರ ವಿವರ ದಾಖಲಾಗಿ ಪ್ರೊಫೈಲ್ ಕ್ರಿಯೆಟ್ ಮಾಡಿದರೆ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಾಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಲ್ಲದೇ ಪ್ರತಿ ಬಾರಿಯೂ ಪ್ರಯಾಣಿಕರು ದಾಖಲೆಗಳನ್ನು ಪರೀಶಿಲನೆಗೆ ತರುವ ಅಗತ್ಯವಿಲ್ಲವದ್ದರಿಂದ ಮುಕ್ತ ಪ್ರವೇಶವನ್ನು ಪಡೆಯಲು ಸಾಧ್ಯವಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರುತ್ತಿರುವುದರಿಂದ ಪ್ರಯಾಣಿಕರ ತ್ವರಿತ ಆಗಮನ ಮತ್ತು ನಿರ್ಗಮನಕ್ಕಾಗಿ ಆಧಾರ್ ಸಂಪರ್ಕ ವ್ಯವಸ್ಥೆಯನ್ನು ಆರಂಭಿಸಲಾಗುತ್ತಿದೆ.