Tag: biometric attendance

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ

    -10 ಗಂಟೆಗೆ ಯಾರು ಕಚೇರಿಗೆ ಬರಲ್ಲ

    ಬೆಂಗಳೂರು: ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಬಿಬಿಎಂಪಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರಲ್ಲ. ಬಯೋಮೆಟ್ರಿಕ್ ಯಂತ್ರದಲ್ಲಿ 15 ನಿಮಿಷಕ್ಕೂ ಹೆಚ್ಚು ಸಮಯವನ್ನು ತಡವಾಗಿ ಇಟ್ಟಿದ್ದಾರೆ ಎಂದು ಪಾಲಿಕೆ ವಿಶೇಷ ಆಯುಕ್ತ ರಣ್‍ದೀಪ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಾಲಿಕೆಯ ವಿಶೇಷ ಆಯುಕ್ತರು, ಸಿಬ್ಬಂದಿ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂಬ ವಿಷಯ ನನ್ನ ಗಮನಕ್ಕೂ ಬಂದಿದೆ. ಬೆಳಗ್ಗೆ 10.15ಕ್ಕೆ ನಾನು ಕಚೇರಿಗೆ ಬಂದಾಗ ಅರ್ಧಕ್ಕೂ ಹೆಚ್ಚು ಸಿಬ್ಬಂದಿ ಬಂದಿರಲ್ಲ. ಹೀಗಾಗಿಯೇ ಫೇಸ್ ರಿಕ್ಗನೈಜೇಷನ್ ಮತ್ತು ಬಯೋಮೆಟ್ರಿಕ್ ಹಾಜರಾತಿಯನ್ನು ತರಲಾಗಿತ್ತು. ಕಚೇರಿಯ ಅರ್ಧಕ್ಕೂ ಹೆಚ್ಚು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿಲ್ಲ ಎಂದರು.

    ಪಬ್ಲಿಕ್ ಟಿವಿ ಹೇಳಿದಂತೆ ಬಯೋಮೆಟ್ರಿಕ್ ಯಂತ್ರದಲ್ಲಿ ಸಮಯ ವ್ಯತ್ಯಾಸ ಕಂಡು ಬಂದಿದೆ. ಈ ಕೂಡಲೇ ಸಮಯ ಸರಿಯಾಗಿ ನಿಗದಿ ಮಾಡುವಂತೆ ಆದೇಶಿಸಿದ್ದೇನೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಲಾಗುತ್ತದೆ. ದುರುದ್ದೇಶದಿಂದ ಮಷೀನ್ ನಲ್ಲಿ ಟೈಮ್ ಬದಲಿಸಿದ್ದರೆ ಸೂಕ್ತ  ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಯೋಮೆಟ್ರಿಕ್ ಹಾಜರಾತಿ ಜೊತೆ ಸಿಬ್ಬಂದಿಯ ಸಂಬಳದ ಸ್ಲಿಪ್ ಲಿಂಕ್ ಮಾಡಲಾಗುತ್ತದೆ. 10.30ರೊಳಗೆ ಪಂಚ್ ಮಾಡಬೇಕು ಮತ್ತು 5.30ರೊಳಗೆ ಪಂಚ್ ಮಾಡಿ ಹೋದ್ರೆ ಅಂತಹವರ ಅರ್ಧ ಸಂಬಳ ಕಡಿತಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

  • ಕೈಕೊಟ್ಟ ಬಯೋಮೆಟ್ರಿಕ್- ಕಚೇರಿಗೆ ಸಿಬ್ಬಂದಿ ಗೈರು- ಸಾರ್ವಜನಿಕರ ಪರದಾಟ

    ಕೈಕೊಟ್ಟ ಬಯೋಮೆಟ್ರಿಕ್- ಕಚೇರಿಗೆ ಸಿಬ್ಬಂದಿ ಗೈರು- ಸಾರ್ವಜನಿಕರ ಪರದಾಟ

    ವಿಜಯಪುರ: ಬಯೋಮೆಟ್ರಿಕ್ ಕೈಕೊಟ್ಟ ಪರಿಣಾಮ ಇದನ್ನೇ ದುರಪಯೋಗ ಪಡಿಸಿಕೊಂಡ ಸರ್ಕಾರಿ ಸಿಬ್ಬಂದಿ, ಕಚೇರಿಗೆ ಗೈರಾಗಿದ್ದರಿಂದ ಸಾರ್ವಜನಿಕರು ಪರದಾಟ ನಡೆಸುತ್ತಿದ್ದಾರೆ.

    ನಗರ ಜಿಲ್ಲಾ ಪಂಚಾಯತ್ ಬಳಿ ಇರುವ ವಿಜಯಪುರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬಯೋಮೆಟ್ರಿಕ್ ಕೈಕೊಟ್ಟಿದೆ. ಅಲ್ಲದೇ ದಿನಾಂಕ ಮತ್ತು ಸಮಯವನ್ನು ತಪ್ಪಾಗಿ ತೋರಿಸುತ್ತಿರುವ ಬಯೋಮೆಟ್ರಿಕ್ ನಿಂದಾಗಿ ಸಿಬ್ಬಂದಿ ಸಮಯ 11:30 ಆದರೂ ಕಚೇರಿಗೆ ಆಗಮಿಸುತ್ತಿಲ್ಲ. ಇದರಿಂದಾಗಿ ಕಚೇರಿ ಟೇಬಲ್, ಕುರ್ಚಿಗಳು ಖಾಲಿ ಹೊಡೆಯುತ್ತಿವೆ.

    ಇನ್ನೂ ಕೆಲವು ಸಿಬ್ಬಂದಿ ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿಕೊಂಡು ವಾರಾನುಗಟ್ಟಲೆ ಕೆಲಸಕ್ಕೆ ಹಾಜರಾಗಿಲ್ಲ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ ಅನುಭವಿಸುತ್ತಿದ್ದಾರೆ. ತಮ್ಮ ಕೆಲಸಗಳಿಗಾಗಿ ತಿಂಗಳುಗಟ್ಟಲೇ ಅಲೆದಾಡುತ್ತಿದ್ದು, ಎಸಿ ಕಚೇರಿ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ.

  • ಆಫೀಸ್ ವ್ಯವಸ್ಥೆ ಸುಧಾರಣೆಗೆ ಯೋಗಿಯಿಂದ ಮತ್ತೊಂದು ಖಡಕ್ ಆದೇಶ

    ಆಫೀಸ್ ವ್ಯವಸ್ಥೆ ಸುಧಾರಣೆಗೆ ಯೋಗಿಯಿಂದ ಮತ್ತೊಂದು ಖಡಕ್ ಆದೇಶ

    ಲಕ್ನೋ: ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ಡಾನ್‍ಗಳಿಗೆ ನೀಡಬೇಕೆಂದು ಸೂಚಿಸಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಈಗ ಸರ್ಕಾರ ಎಲ್ಲ ಕಚೇರಿಗಳಲ್ಲಿ ಬಯೋಮಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವಂತೆ ಆದೇಶಿಸಿದ್ದಾರೆ.

    ಶನಿವಾರ ರಾತ್ರಿ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಯೋಗಿ, ಆಫೀಸ್‍ನಿಂದ ಆರಂಭವಾಗಿ ಬ್ಲಾಕ್ ಹಂತದ ಆಫೀಸ್ ವರೆಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಹೊರತಾಗಿ ಎಲ್ಲ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಸ್ತುತ ಆಯ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸದ ಮಾಹಿತಿ ಮತ್ತು ಗ್ರಾಮದ ಪಂಚಾಯತ್‍ನ ಪ್ರಧಾನ್ ಸಂಪರ್ಕ ವಿಳಾಸವನ್ನು ಬೋರ್ಡ್ ಮೂಲಕ ಪ್ರಕಟಿಸಬೇಕೆಂದು ಸೂಚಿಸಿದ್ದಾರೆ.

    ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಅವಾಸ್ ಯೋಜನದ ಗುರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೆಲಸಗಾರರ ಹೆಸರುಗಳು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಸೇರ್ಪಡೆಯಾಗಬೇಕು ಎಂದು ಯೋಗಿ ಹೇಳಿದ್ದಾರೆ.

    ಇದನ್ನೂ ಓದಿ: ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್