Tag: Bird

  • ಪಕ್ಷಿ ಬಡಿದು ಎಂಜಿನ್‌ಗೆ ಬೆಂಕಿ – ತುರ್ತು ಭೂಸ್ಪರ್ಶ ಮಾಡಿದ ವಿಮಾನ

    ಪಕ್ಷಿ ಬಡಿದು ಎಂಜಿನ್‌ಗೆ ಬೆಂಕಿ – ತುರ್ತು ಭೂಸ್ಪರ್ಶ ಮಾಡಿದ ವಿಮಾನ

    ವಾಷಿಂಗ್ಟನ್: ವಿಮಾನ (Flight) ಹಾರಾಟ ನಡೆಸುತ್ತಿದ್ದ ವೇಳೆ ಪಕ್ಷಿ (Bird) ಬಡಿದ ಪರಿಣಾಮ ಎಂಜಿನ್‌ನಲ್ಲಿ ಬೆಂಕಿ (Fire) ಕಾಣಿಸಿಕೊಂಡು ವಿಮಾನವನ್ನು ತುರ್ತು ಭೂಸ್ಪರ್ಶ (Emergency Landing) ಮಾಡಿರುವ ಘಟನೆ ಅಮೆರಿಕದಲ್ಲಿ (America) ನಡೆದಿದೆ.

    ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್‌ಆಫ್ ಆದ ಕೆಲವೇ ಹೊತ್ತಿನಲ್ಲಿ ಅದರ ಎಂಜಿನ್‌ನಲ್ಲಿ ಬೆಂಕಿ ಗೋಚರಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನು ತಕ್ಷಣವೇ ಕೊಲಂಬಸ್‌ನ ಜಾನ್ ಗ್ಲೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.

    ವರದಿಗಳ ಪ್ರಕಾರ ಬೋಯಿಂಗ್ 737 ಫ್ಲೈಟ್ 1958 ಕೊಲಂಬಸ್‌ನಿಂದ ಫೀನಿಕ್ಸ್‌ಗೆ ಹೊರಟಿತ್ತು. ವಿಮಾನ ಟೇಕ್‌ಆಫ್ ಆಗುತ್ತಿದ್ದಂತೆ ಹಕ್ಕಿ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆಯೇ ಎಚ್ಚೆತ್ತ ಪೈಲಟ್‌ಗಳು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ. ಸದ್ಯ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಗಾಯಗೊಂಡಿಲ್ಲ. ಇದನ್ನೂ ಓದಿ: ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

    ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಬಳಿಕ ಎಲ್ಲಾ ಪ್ರಯಾಣಿಕರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡಲಾಯಿತು. ವಿಮಾನಕ್ಕೆ ಹಕ್ಕಿ ಬಡಿದಿರುವ ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

  • ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ

    ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ

    ಭೋಪಾಲ್: ಹಿಂದೂ ಸಂಪ್ರದಾಯದ ವಿಧಿವಿಧಾನಗಳಂತೆ 2 ಗಿಳಿಗಳಿಗೆ (Parrot) ಅದ್ಧೂರಿಯಾಗಿ ಮದುವೆ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಕರೇಲಿಯಲ್ಲಿ ನಡೆದಿದೆ.

    ಮೈನಾ ಹಾಗೂ ಗಿಳಿ ವಧು ವರರು. ಮಧ್ಯಪ್ರದೇಶದ ಕರೇಲಿ ಸಮೀಪದ ಪಿಪಾರಿಯಾದಲ್ಲಿ ವಾಸಿಸುವ ರಾಮಸ್ವರೂಪ್ ಪರಿಹಾರ್ ಅವರು ಮೈನಾ ಎಂಬ ಗಿಳಿಯನ್ನು ಸ್ವಂತ ಮಗಳಂತೆ ಬೆಳೆಸಿದ್ದರು. ಅದೇ ಗ್ರಾಮಾದ ಲಾಲ್ ವಿಶ್ವಕರ್ಮ ಎಂಬುವವರ ಬಳಿಯೂ ಒಂದು ಗಿಳಿಯಿತ್ತು. ಇದರಿಂದಾಗಿ ಇಬ್ಬರು ಆ ಮೈನಾ ಹಾಗೂ ಗಿಳಿಗೆ ಮದುವೆ (marriage) ಮಾಡಲು ನಿರ್ಧರಿಸಿದ್ದಾರೆ.

    POPO PARROT

    ಅದಾದ ಬಳಿಕ ಜಾತಕ ಹೊಂದಿಸಿ, ಅದ್ಧೂರಿಯಾಗಿ ಹಿಂದೂ ಸಾಂಪ್ರದಾಯದೊಂದಿಗೆ ಮದುವೆಯನ್ನು ಮಾಡಲಾಯಿತು. ಮದುವೆ ವೇಳೆ ವರನನ್ನು ಕರೆ ತರುವಾಗ ಚಿಕ್ಕ ವಾಹನದಲ್ಲಿ ಪಂಜರವನ್ನಿರಿಸಿ ಗ್ರಾಮದುದ್ದಕ್ಕೂ ಮೆರವಣಿಗೆ ಸಾಗಿದ್ದಾರೆ. ಇದನ್ನು ವೀಕ್ಷಿಸಲು ನೆರೆಹೊರೆಯವರ ದಂಡೇ ನಿಂತಿತ್ತು. ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!

    ಈ ವಿಶಿಷ್ಟ ವಿವಾಹಕ್ಕೆ ಪಿಪಾರಿಯಾ ಗ್ರಾಮದ ಜನರು ಸಾಕ್ಷಿಯಾದರು. ರಾಮಸ್ವರೂಪ ಪರಿಹಾರ್ ಅವರ ಮನೆಯಲ್ಲಿ ಮದುವೆಯ ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ: ಕೋಟೆನಾಡಲ್ಲಿ ದಂಡ ಪಾವತಿಸಲಾಗದೇ ಜೈಲು ಸೇರಿದ ಬೈಕ್ ಸವಾರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಕಾಶ ಏರ್‌ಗೆ ಬಡಿದ ಹಕ್ಕಿ – ತಪ್ಪಿದ ದುರಂತ, ವಿಮಾನದ ಮೂತಿಗೆ ಹಾನಿ

    ಆಕಾಶ ಏರ್‌ಗೆ ಬಡಿದ ಹಕ್ಕಿ – ತಪ್ಪಿದ ದುರಂತ, ವಿಮಾನದ ಮೂತಿಗೆ ಹಾನಿ

    ನವದೆಹಲಿ: ಇತ್ತೀಚೆಗಷ್ಟೆ ಪ್ರಾರಂಭವಾಗಿದ್ದ ಆಕಾಶ ಏರ್ (Akasa Air) ವಿಮಾನವೊಂದಕ್ಕೆ (Plane) ಹಕ್ಕಿಯೊಂದು (Bird) ಬಡಿದಿರುವ ಘಟನೆ ಗುರುವಾರ ಬೆಳಗ್ಗೆ ನಡೆಸಿದೆ. ಅದೃಷ್ಟವಶಾತ್ ಅನಾಹುತ ತಪ್ಪಿದ್ದು, ವಿಮಾನದ ಮೂತಿಗೆ ಸ್ವಲ್ಪ ಮಟ್ಟದ ಹಾನಿಯಾಗಿದೆ.

    ಇಂದು ಬೆಳಗ್ಗೆ ಅಹಮದಾಬಾದ್‌ನಿಂದ (Ahmedabad) ಹೊರಟಿದ್ದ ಆಕಾಶ ಏರ್ ವಿಮಾನ ಬೋಯಿಂಗ್ 738 ಮ್ಯಾಕ್ಸ್ 8 ಭೂಮಿಯಿಂದ ಸುಮಾರು 1,900 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ಸಂದರ್ಭ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ದೆಹಲಿಯಲ್ಲಿ (Delhi) ವಿಮಾನ ಇಳಿದ ಬಳಿಕ ಅದಕ್ಕೆ ಹಕ್ಕಿ ಬಡಿದಿರುವುದು ಗಮನಕ್ಕೆ ಬಂದಿದೆ. ಇದರಿಂದ ವಿಮಾನದ ಮೂತಿಗೆ ಹಾನಿಯಾಗಿದೆ ಎಂದು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ತಿಳಿಸಿದೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಂದ ಚಿತ್ರಮಂದಿರಕ್ಕೆ ಮುತ್ತಿಗೆ – ಗಂಧದ ಗುಡಿ ಸಿನಿಮಾ ಪ್ರದರ್ಶನಕ್ಕೆ ಪಟ್ಟು

    ಈ ಹಿಂದೆ ಅಕ್ಟೋಬರ್ 14 ರಂದು ಬೆಂಗಳೂರಿನಿಂದ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಬಡಿದ ಪರಿಣಾಮ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಭರ್ಜರಿ ಪೋಸ್ ಸೆರೆಹಿಡಿದ ಸಿಎಂ ಬೊಮ್ಮಾಯಿ!

    Live Tv
    [brid partner=56869869 player=32851 video=960834 autoplay=true]

  • ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ತಿರುವನಂತಪುರಂ: 135 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ (Air India Flight) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಕ್ಕಿಯೊಂದು (Bird) ಬಡಿದ ಹಿನ್ನೆಲೆ ತುರ್ತು ಭೂಸ್ಪರ್ಶ (Emergency Landing) ಮಾಡಿರುವ ಘಟನೆ ಕೇರಳದ (Kerala) ಕಣ್ಣೂರಿನಲ್ಲಿ (Kannur) ಸೋಮವಾರ ನಡೆದಿದೆ.

    ಕೋಝಿಕ್ಕೋಡ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದಕ್ಕೆ ಹಕ್ಕಿಯೊಂದು ಬಡಿದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಒಂದು ತಿಂಗಳಿಂದ ಅತ್ಯಾಚಾರ

    ವಿಮಾನದಲ್ಲಿದ್ದ 135 ಪ್ರಯಾಣಿಕರಲ್ಲಿ 85 ಜನ ಕೋಝಿಕ್ಕೋಡ್ ಹಾಗೂ 50 ಮಂದಿ ಕಣ್ಣೂರಿನವರಾಗಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ. ವಿದೇಶಕ್ಕೆ ಹೋಗುವ ಪ್ರಯಾಣಿಕರಿಗೆ ಇತರ ವಿಮಾನಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ದೆಹಲಿಗೆ ಹೋಗುವ ಪ್ರಯಾಣಿಕರನ್ನು ಕಣ್ಣೂರಿನ ಹೋಟೆಲ್‌ಗಳಲ್ಲಿ ಇರಿಸಲಾಗಿದೆ. ಮಂಗಳವಾರ ಅವರಿಗೆ ಪ್ರತ್ಯೇಕ ವಿಮಾನದ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು

    Live Tv
    [brid partner=56869869 player=32851 video=960834 autoplay=true]

  • ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜೆನ್ಸಿ ಲ್ಯಾಂಡಿಂಗ್

    ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜೆನ್ಸಿ ಲ್ಯಾಂಡಿಂಗ್

    ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಾರಣಾಸಿಯಲ್ಲಿ ಪಕ್ಷಿಗಳ ಬಡಿತದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.

    ಸಿಎಂ ಯೋಗಿ ಆದಿತ್ಯನಾಥ್ ಅವರು ಲಖನೌಗೆ ತೆರಳುತ್ತಿದ್ದರು. ಘಟನೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಸರ್ಕ್ಯೂಟ್ ಹೌಸ್‍ಗೆ ತೆರಳಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯವಾಗದೇ ಯೋಗಿ ಆದಿತ್ಯನಾಥ್ ಅವರು ಸುರಕ್ಷಿತರಾಗಿದ್ದಾರೆ.

    ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ವಿಮಾನದಲ್ಲಿ ಲಕ್ನೋಗೆ ಪ್ರಯಾಣ ಮುಂದುವರಿಸಲಿದ್ದಾರೆ. ಅವರ ಪ್ರಯಾಣಕ್ಕೆ ಆಡಳಿತ ಸಕಲ ವ್ಯವಸ್ಥೆ ಮಾಡಿದೆ. ಯೋಗಿ ಆದಿತ್ಯನಾಥ್ ಅವರು ಶನಿವಾರ ವಾರಣಾಸಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಮತ್ತು ಕಾನೂನು ಸುವ್ಯವಸ್ಥೆ ಪರಿಶೀಲಿಸಿದ್ದರು. ವಾರಣಾಸಿಯಲ್ಲಿ ರಾತ್ರಿ ತಂಗಿದ್ದ ಅವರು ಭಾನುವಾರ ಬೆಳಗ್ಗೆ ಲಖನೌಗೆ ತೆರಳುತ್ತಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಅಪಘಾತ- 9 ಮಂದಿ ದುರ್ಮರಣ

    Live Tv

  • ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ವಾಷಿಂಗ್ಟನ್: ತಮ್ಮ ಮನೆಯ ಹುಲ್ಲು ಹಾಸಿನಲ್ಲಿ ಪಕ್ಷಿಗಳಿಗೆ ನೀರು, ಆಹಾರ ಇಡುವ ಟ್ರೇಗಳನ್ನು ಹೊಂದಿದ್ದಕ್ಕಾಗಿಯೇ ವ್ಯಕ್ತಿಯೊಬ್ಬನನ್ನು 3 ವಾರಗಳಲ್ಲಿ 3 ಬಾರಿ ಬಂಧಿಸಿರುವ ಘಟನೆ ನ್ಯೂಯಾರ್ಕ್‌ನ ಸೋಡನ್ ಪಾಯಿಂಟ್‌ನಲ್ಲಿ ನಡೆದಿದೆ.

    ಸಾಂದರ್ಭಿಕ ಚಿತ್ರ

    71 ವರ್ಷದ ಡೊನಾಲ್ಡ್ ಅಂಟಾಲ್ ಸುಮಾರು ಎರಡು ಡಜನ್ ಫೀಡರ್‌ಗಳನ್ನು ಹೊಂದಿರುವುದಾಗಿ ಸ್ಥಳೀಯರು ನೀಡಿದ ದೂರಿನ ಮೇರೆಗೆ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಇದು ವಿಲೇಜ್ ಆಫ್ ಸೋಡಸ್ ಪಾಯಿಂಟ್ ಸ್ಥಳೀಯ ಸುಗ್ರೀವಾಜ್ಞೆ 57-6B(1) ಉಲ್ಲಂಘನೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಇದನ್ನೂ ಓದಿ: ನೂಪುರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    CRIME

    ಸ್ಥಳೀಯರ ದೂರಿನ ಪ್ರಕಾರ, ಈತ ಪಕ್ಷಿಗಳಿಗಾಗಿ ಕಡೆಲೆಕಾಯಿ ಹಾಗೂ ಇತರ ಆಹಾರ ಬೀಜಗಳನ್ನು ಟ್ರೇನಲ್ಲಿ ಇಡುತ್ತಿದ್ದ. ಈ ಮೂಲಕ ಸಾಕಷ್ಟು ಪಕ್ಷಿಗಳನ್ನು ಆಕರ್ಷಿಸಲಾಗುತ್ತಿತ್ತು. ಇದಕ್ಕಾಗಿ ವನ್ಯಜೀವಿಗಳನ್ನು ಪೋಷಿಸಿದ ಆರೋಪ ಹೊರಿಸಲಾಗಿತ್ತು. ಆದರೆ ಆಲ್ ಕಾಪ್ಸ್ ಆಂಟಿ-ಬರ್ಡ್ ಸಹಾಯದೊಂದಿಗೆ ಪೊಲೀಸರು ತನಿಖೆ ನಡೆಸಿದ ಬಳಿಕ ಕೆಲ ಪಕ್ಷಿಗಳಲ್ಲಿ ಹೆಚ್ಚು ಹುಳುಗಳು ಪತ್ತೆಯಾಗುತ್ತಿತ್ತು. ಇದು ಸ್ಥಳೀಯರನ್ನು ಬಾಧಿಸುತ್ತಿತ್ತು ಎಂಬುದು ತಿಳಿದುಬಂದಿತು. ಆದ್ದರಿಂದಲೇ ವ್ಯಕ್ತಿಯನ್ನು ಬಂಧಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

  • ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

    ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

    ತಿರುವನಂತಪುರಂ: ಕೇರಳದ ಆಲಪ್ಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ವಾರ ಆಲಪ್ಪುಳ ಜಿಲ್ಲೆಯ ಕೋಟ್ಟನಾಡ್‍ನಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಮತ್ತು ಸ್ಥಳೀಯ ಹಕ್ಕಿಗಳು ಸತ್ತ ಹಿನ್ನೆಲೆ ಅಧಿಕಾರಿಗಳು ಭೋಪಾಲ್‍ನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‍ಗೆ ಮಾದರಿಗಳನ್ನು ಕಳುಹಿಸಿದ್ದರು. ಇದೀಗ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿದೆ.

    ಹೀಗಾಗಿ ಹಕ್ಕಿ ಜ್ವರ ಹರಡದಂತೆ ರೋಗ ಪೀಡಿತ ಪ್ರದೇಶದಲ್ಲಿರುವ ಬಾತುಕೋಳಿಗಳನ್ನು ಕೊಲ್ಲಲು ಪಶುವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಪ್ರಕರಣ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ನಾಶಗೊಳಿಸಲು ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ

    ಸೋಂಕು ಹರಡುವುದನ್ನು ತಡೆಗಟ್ಟಲು 12 ಕಿ.ಮೀ. ದೂರದಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಹಕ್ಕಿಗಳ ಚಲನೆಯ ಮೇಲೆ ನಿರ್ಬಂಧ ಹೇರಲಾಗಿದೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ. ಇದನ್ನೂ ಓದಿ: ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

  • ಕೆರೆಯಲ್ಲಿ ಸಿಲುಕಿದ್ದ ಪಕ್ಷಿ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ!

    ಕೆರೆಯಲ್ಲಿ ಸಿಲುಕಿದ್ದ ಪಕ್ಷಿ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ!

    ಶಿವಮೊಗ್ಗ: ಕೆರೆಯ ಮಧ್ಯದಲ್ಲಿ ಸಿಲುಕಿದ್ದ ಪಕ್ಷಿಯನ್ನು ರಕ್ಷಿಸಲು ಹೋಗಿ ಯುವಕ ಮೃತಪಟ್ಟರುವ ಘಟನೆ ಇಲ್ಲಿನ ಬೊಮ್ಮನಕಟ್ಟೆ ಕೆರೆಯಲ್ಲಿ ನಡೆದಿದೆ.

    ಮೃತ ಯುವಕನನ್ನು ಮಹದೇವ (23) ಎಂದು ಗುರುತಿಸಲಾಗಿದೆ.

    ಕೆರೆಯ ಸಮೀಪ ಹೋಗುತ್ತಿದ್ದ ಯುವಕ ಮಹದೇವ ಕೆರೆಯ ಮಧ್ಯದಲ್ಲಿ ಪಕ್ಷಿಯೊಂದು ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ತನ್ನಿಬ್ಬರು ಸ್ನೇಹಿತರ ಸಹಾಯದೊಂದಿಗೆ ಕೆರೆಗೆ ಇಳಿದಿದ್ದಾನೆ. ಆದರೆ ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ಮಹದೇವನ ಸ್ನೇಹಿತರು ನೀರಿಗಿಳಿಯಲು ಹಿಂಜರಿದಿದ್ದಾರೆ. ಆದರೆ ಮಹದೇವ ಪಕ್ಷಿಯನ್ನು ರಕ್ಚಿಸಲು ಮುಂದಾಗಿದ್ದಾನೆ. ಈ ವೇಳೆ ಕೆರೆಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ಸ್ನೇಹಿತ ಮುಳುಗುತ್ತಿರುವುದನ್ನು ಗಮನಿಸಿದ ಸ್ನೇಹಿತರು ಸ್ಥಳದಲ್ಲಿದ್ದ ಸೀರೆ ಹಾಗೂ ಹಗ್ಗ ತಂದು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದರೆ ಎಷ್ಟೇ ಪ್ರಯತ್ನಪಟ್ಟರು ಮಹದೇವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ತೆಲಂಗಾಣ: ಊಟ ಮುಗಿಸಿ ಬರುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಯಾದಗಿರಿಯ ಯುವಕರಿಬ್ಬರು ಸಾವು!

    POLICE

    ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಯುವಕನ‌ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಿಡುಗಡೆಯಾಗಲಿದೆ 50 ಸಾವಿರ ರೂ. ಮೌಲ್ಯದ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌

    ಬಿಡುಗಡೆಯಾಗಲಿದೆ 50 ಸಾವಿರ ರೂ. ಮೌಲ್ಯದ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌

    ನವದೆಹಲಿ: ದೇಶದ ಮಾರುಕಟ್ಟೆಗೆ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಲಗ್ಗೆ ಇಡಲಿದೆ. ಇಎಸ್‌1+ ಹೆಸರಿನ ಸ್ಕೂಟರ್‌ ಅನ್ನು 2021ರ ಮಧ್ಯ ಭಾಗದಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಇದರ ದೆಹಲಿ ಎಕ್ಸ್‌ ಶೋರೂಮ್‌ ಬೆಲೆ 50 ಸಾವಿರ ಇರಲಿದೆ ಎಂದು ಅಂದಾಜಿಸಲಾಗಿದೆ.

    ಬರ್ಡ್‌ ಗ್ರೂಪ್‌ ಆಸ್ಟ್ರೇಲಿಯಾದ ವಿಮೋಟೋ ಜೊತೆ ಪರಸ್ಪರ ಒಡಂಬಡಿಕೆ ಮಾಡಿಕೊಂದ್ದು ಮಾರಾಟ ಹಕ್ಕನ್ನು ಪಡೆದುಕೊಂಡಿದೆ.ಈ ಒಪ್ಪಂದ ಅನ್ವಯ ವಿಮೋಟೋ ಅಭಿವೃದ್ಧಿ ಪಡಿಸಿದರುವ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಭಾರತದಲ್ಲಿ ಮಾರಾಟ ಮಾಡಲಿದೆ.

    ಆರಂಭದಲ್ಲಿ ದೆಹಲಿ ಎನ್‌ಸಿಆರ್‌ನಲ್ಲಿ ಬಿಡುಗಡೆಯಾಗಲಿದ್ದು ಬಳಿಕ ಟಯರ್‌ 1, ಟಯರ್‌ 2 ನಗರದಲ್ಲಿ ಸ್ಕೂಟರ್‌ ಬಿಡುಗಡೆಯಾಗಲಿದೆ.

    ಗುಣ ವೈಶಿಷ್ಟತೆ ಏನು?
    ಎಲ್‌ಇಡಿ ಹೆಡ್‌ಲ್ಯಾಂಪ್‌, ಎಲ್‌ಇಡಿ ಟೇಲ್‌ ಲ್ಯಾಂಪ್‌, ಸ್ಪ್ಪಿಟ್‌ ಸೀಟರ್‌ ಮತ್ತು ಎಲ್‌ಸಿಡಿ ಇನ್‌ಸ್ಟ್ರುಮೆಂಟ್‌ ಕ್ಲಸ್ಟರ್‌, 1782 ಮೀ.ಮೀ ಉದ್ದ, 727 ಮಿ.ಮೀ ಅಗಲ, 1087 ಮಿ.ಮೀ ಎತ್ತರವನ್ನು ಹೊಂದಿದೆ. 140 ಮಿ.ಮೀ ಗ್ರೌಂಡ್‌ ಕ್ಲಿಯರನ್ಸ್‌ ಇದ್ದು ಒಟ್ಟು 62 ಕೆಜಿ ತೂಕವನ್ನು ಹೊಂದಿದೆ.

    ಬ್ಯಾಟರಿ  3ಎಎಚ್‌ ಲಿಥಿಯಾನ್‌ ಐಯಾನ್‌ ಬ್ಯಾಟರಿ ಮತ್ತು 1.6 ಕೆಡಬ್ಲ್ಯೂ ಎಲೆಕ್ಟ್ರಿಕ್‌ ಬ್ಯಾಟರಿ ಒಳಗೊಂಡಿದೆ. ಒಂದು ಬಾರಿ ಚಾರ್ಜ್‌ ಮಾಡಿದರೆ 55 ಕಿ.ಮೀ ದೂರದವರೆಗೆ ಸಂಚರಿಸಬಹುದು. ಗಂಟೆಗೆ 45 ಕಿ.ಮೀ ವೇಗದಲ್ಲಿ ಈ ಸ್ಕೂಟರ್‌ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.