Tag: Bird flu

  • ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

    ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

    ನವದೆಹಲಿ: ಹಲವಾರು ರಾಜ್ಯಗಳಲ್ಲಿ ಹೆಚ್5ಎನ್1(H5N1) ಹಕ್ಕಿ ಜ್ವರ(Birf flu) ಹರಡುತ್ತಿರುವ ಹಿನ್ನೆಲೆ ಎಲ್ಲಾ ಕೋಳಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

    ಹಕ್ಕಿ ಜ್ವರ ಹರಡುವಿಕೆ ತಡೆಗಟ್ಟಲು ಮೂರು-ಹಂತದ ಕಾರ್ಯತಂತ್ರದ ಭಾಗವಾಗಿ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು ಒಂದು ತಿಂಗಳೊಳಗೆ ಕಡ್ಡಾಯವಾಗಿ ಆಯಾ ರಾಜ್ಯ ಪಶುಸಂಗೋಪನಾ ಇಲಾಖೆಗಳಲ್ಲಿ ನೋಂದಣಿ ಮಾಡಬೇಕು ಎಂದು ಕೇಂದ್ರ ಪಶುಸಂಗೋಪನೆ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ಮಾಜಿ ಸಿಎಂಗಳು ಸಂಚರಿಸಿದ ಕಾರನ್ನ 2.10 ಲಕ್ಷಕ್ಕೆ ಖರೀದಿಸಿದ ಕಾಂಗ್ರೆಸ್‌ ನಾಯಕ

    ದೇಶದ ಹಲವಾರು ಪ್ರದೇಶಗಳಲ್ಲಿ ಹೆಚ್5ಎನ್1 ವೈರಸ್ ನಿರಂತರವಾಗಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ಬಂದಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ 34 ಕೇಂದ್ರಗಳಲ್ಲಿ ಅಧಿಕಾರಿಗಳು ಹಕ್ಕಿ ಜ್ವರದ ಹರಡುವಿಕೆಯನ್ನು ದೃಢಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಮತಿ ಬ್ಯಾಂಕ್ ದರೋಡೆಗೂ ಮುನ್ನ ಪೂಜೆ ಸಲ್ಲಿಸಿದ್ದ ದೇವಾಲಯದಲ್ಲಿ ಕಳ್ಳತನ!

    ಹಕ್ಕಿ ಜ್ವರವನ್ನು ಹಾಗೂ ಅದರ ಹರಡುವಿಕೆಯನ್ನು ತಡೆಗಟ್ಟಲು ತುರ್ತು ಕ್ರಮಗಳ ಕುರಿತು ಚರ್ಚಿಸಲು ಅಲ್ಕಾ ಉಪಾಧ್ಯಾಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೃಷಿ ಭವನದಲ್ಲಿ ಕೋಳಿ ಉದ್ಯಮ ಪ್ರತಿನಿಧಿಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಧಿಕಾರಿಗಳು ಮತ್ತು ಇತರ ಪಾಲುದಾರರೊಂದಿಗೆ ಉನ್ನತ ಮಟ್ಟದ ಸಭೆ ನಡೆಯಿತು. ಇದನ್ನೂ ಓದಿ: ಹೆಡ್ ಕಾನ್‍ಸ್ಟೇಬಲ್ ಮನೆಗೆ ಕನ್ನ – 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    ಹಕ್ಕಿ ಜ್ವರ ಎಂದರೇನು?
    ಏವಿಯನ್ ಇನ್ಫ್ಲುಯೆನ್ಸ್‌ ಎಂದು ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಒಂದು ಸೋಂಕು ಆಗಿದ್ದು, ಅದು ಪಕ್ಷಿಗಳಲ್ಲಿ ಹರಡುತ್ತದೆ. ಇದು ಮನುಷ್ಯರಿಗೆ ಹರಡುವ ಸಾಧ್ಯತೆ ಕಡಿಮೆ.

  • Andhra Pradesh | ಹಕ್ಕಿಜ್ವರಕ್ಕೆ 2 ವರ್ಷದ ಹೆಣ್ಣು ಮಗು ಬಲಿ

    Andhra Pradesh | ಹಕ್ಕಿಜ್ವರಕ್ಕೆ 2 ವರ್ಷದ ಹೆಣ್ಣು ಮಗು ಬಲಿ

    ಅಮರಾವತಿ: ಎರಡು ವರ್ಷದ ಹೆಣ್ಣು ಮಗುವೊಂದು ಹಕ್ಕಿಜ್ವರಕ್ಕೆ (Bird Flu) ಬಲಿಯಾಗಿರುವ ಘಟನೆ ಆಂಧ್ರಪ್ರದೇಶದ (Andhra Pradesh ) ಪಲ್ನಾಡು ಜಿಲ್ಲೆಯ ನರಸರಾವ್‌ಪೇಟೆಯಲ್ಲಿ ನಡೆದಿದೆ.

    ಮಾರ್ಚ್ 15ರಂದು ಮಗು ಮೃತಪಟ್ಟಿದೆ. ಈ ಹಿನ್ನೆಲೆ ಮಗುವಿನ ಸ್ಯಾಂಪಲ್ ಅನ್ನು ಪುಣೆ ಮೂಲದ ರಾಷ್ಟ್ರೀಯ ವೈರಾಲಜಿಗೆ ಕಳುಹಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಮಗು ಹಕ್ಕಿಜ್ವರದಿಂದ ಮೃತಪಟ್ಟಿರುವುದು ಧೃಡಪಟ್ಟಿದೆ. ಇದನ್ನೂ ಓದಿ: ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ಮಂಗಳಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಗು ಸಾವನ್ನಪ್ಪಿದೆ. ಪಲ್ನಾಡು ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿಲ್ಲ. ಆದರೆ ಮಗುವಿಗೆ ಹೇಗೆ ಸೋಂಕು ತಗುಲಿತು ಎಂಬುದು ಇನ್ನೂ ಅಸ್ಪಷ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

    ಮಗು ಆಗಾಗ ಹಸಿ ಕೋಳಿಮಾಂಸದ ತುಂಡುಗಳನ್ನು ತಿನ್ನುತ್ತಿತ್ತು. ರೋಗಲಕ್ಷಣಗಳು ಕಾಣಿಸುವ ಮೊದಲೂ ಮಗು ಒಂದು ತುಂಡು ಮಾಂಸ ತಿಂದಿದ್ದಳು. ಹೀಗಾಗಿ ಮಗುವಿಗೆ ಕೋಳಿಜ್ವರ ಹರಡಿರಬಹುದು ಎಂದು ಶಂಕಿಸಲಾಗಿದೆ. ಈ ಬೆನ್ನಲ್ಲೇ ಮಗುವಿನ ಪೋಷಕರು ಹಾಗೂ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಆದರೆ ಅವರಲ್ಲಿ ಯಾವುದೇ ಸೋಂಕು ಅಥವಾ ಲಕ್ಷಣಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 105 ಮೀಟರ್‌ ಭರ್ಜರಿ ಸಿಕ್ಸರ್‌ – ಈ ಐಪಿಎಲ್‌ನಲ್ಲಿ ಫಿಲ್‌ ಸಾಲ್ಟ್‌ ವಿಶೇಷ ಸಾಧನೆ

  • PublicTV Explainer: ಕರ್ನಾಟಕದಲ್ಲಿ ಹೆಚ್ಚುತ್ತಿದೆ ಹಕ್ಕಿಜ್ವರ ಆತಂಕ; ಏನಿದು ಕಾಯಿಲೆ? ಮುಂಜಾಗ್ರತಾ ಕ್ರಮ ಏನು?

    PublicTV Explainer: ಕರ್ನಾಟಕದಲ್ಲಿ ಹೆಚ್ಚುತ್ತಿದೆ ಹಕ್ಕಿಜ್ವರ ಆತಂಕ; ಏನಿದು ಕಾಯಿಲೆ? ಮುಂಜಾಗ್ರತಾ ಕ್ರಮ ಏನು?

    * ಕೋಳಿ & ಮೊಟ್ಟೆ ತಿನ್ನುವುದರಿಂದ ಸೋಂಕು ಹರಡುತ್ತಾ?
    * ಹಕ್ಕಿಜ್ವರ ಸೋಂಕು ತಡೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲೇನಿದೆ?

    ರ್ನಾಟಕದಲ್ಲಿ ಹಕ್ಕಿಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಚಿಕ್ಕಬಳ್ಳಾಪುರದ ವರದನಹಳ್ಳಿಯಲ್ಲಿ ಹಕ್ಕಿಜ್ವರದ ಮೊದಲ ಪ್ರಕರಣ ಕಾಣಿಸಿಕೊಂಡಿತು. ಸೋಂಕಿಗೆ ನೂರಾರು ಜೀವಿಗಳು ಬಲಿಯಾದವು. ತಕ್ಷಣ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದೆಲ್ಲೆಡೆ ಹೈಅಲರ್ಟ್ ಘೋಷಿಸಿದೆ. ರಾಜ್ಯಾದ್ಯಂತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ಸಾವಿರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಗಡಿ ಭಾಗಗಳಲ್ಲಿ ನಿಗಾವಹಿಸಲಾಗಿದೆ. ಕಾಯಿಲೆ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದೆ. ಕೋಳಿ ಫಾರಂ, ಇತರೆ ಪಕ್ಷಗಳ ಸಾಕಾಣಿಕ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

    ಏನಿದು ಹಕ್ಕಿಜ್ವರ? ಇದರ ಇತಿಹಾಸ ಏನು? ಇದು ಸಾಂಕ್ರಾಮಿಕ ಕಾಯಿಲೆಯೇ? ಮನುಷ್ಯರಿಗೂ ಹರಡುತ್ತಾ? ರೋಗಲಕ್ಷಣ ಏನು? ಮುನ್ನೆಚ್ಚರಿಕೆ ಕ್ರಮಗಳೇನು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ವಿವರ.

    ಹಕ್ಕಿಜ್ವರ ಎಂದರೇನು?
    ವೈಜ್ಞಾನಿಕವಾಗಿ ಹಕ್ಕಿಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲ್ಯೂ ಎನ್ನುತ್ತಾರೆ. ಈ ಸೋಂಕಿಗೆ ಮುಖ್ಯ ಕಾರಣ ಹೆಚ್5ಎನ್1 ಎಂಬ ಹೆಸರಿನ ವೈರಸ್. ಇದು ಮುಖ್ಯವಾಗಿ ಕೋಳಿ ಮತ್ತು ಇತರ ಕೆಲವು ಪಕ್ಷಿ ಪ್ರಭೇದಗಳಲ್ಲಿ ಕಾಣಿಸಿಕೊಳ್ಳುತ್ತದೆ. ಹಕ್ಕಿಗಳನ್ನು ಹೆಚ್ಚು ಬಾಧಿಸುತ್ತದೆ. ಬಹುಬೇಗ ಹರಡುವ ಜ್ವರ ಇದಾಗಿದೆ.

    ಸೋಂಕಿನ ಇತಿಹಾಸವೇನು?
    ಉತ್ತರ ಇಟಲಿಯ ಎಡೋರ್ಡೊ ಪೆರೊನ್ಸಿಟೊ ಹೆಸರಿನ ಪ್ಯಾರಸಿಟಾಲಜಿಸ್ಟ್ ಮೊಟ್ಟಮೊದಲ ಬಾರಿಗೆ ಹಕ್ಕಿಜ್ವರ ಸೋಂಕನ್ನು ಪತ್ತೆಹಚ್ಚಿದರು. ಹಕ್ಕಿಗಳಲ್ಲಿ ಈ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುತ್ತದೆ ಎಂದು ವಿವರಿಸಿದರು. ಆ ಸಂದರ್ಭದಲ್ಲಿ ಹಕ್ಕಿಜ್ವರಕ್ಕೆ ಅನೇಕ ಪಕ್ಷಗಳು ಬಲಿಯಾಗಿದ್ದವು. ಬಳಿಕ 1955ರಲ್ಲಿ ಹಕ್ಕಿಜ್ವರ ಉಂಟು ಮಾಡುವ ವೈರಸ್ ಅನ್ನು ಟೈಪ್ ಎ ಇನ್ಫ್ಲುಯೆನ್ಸ ವೈರಸ್ ಎಂದು ಗುರುತಿಸಲಾಯಿತು.

    1996ರಲ್ಲಿ ಹೆಚ್5ಎನ್1 ಹೆಚ್‌ಪಿಎಐ ವೈರಸ್ ಚೀನಾದ ಹೆಬ್ಬಾತುಗಳಲ್ಲಿ ಪತ್ತೆಯಾಯಿತು. 1997ರಲ್ಲಿ ಹಾಂಗ್ ಕಾಂಗ್‌ನಲ್ಲಿ ಹೆಚ್5ಎನ್1ಗೆ 18 ಮಂದಿ ತುತ್ತಾಗಿದ್ದರು. ಅವರ ಪೈಕಿ 6 ಮಂದಿ ಬಲಿಯಾದರು. ಲಕ್ಷಾಂತರ ಪಕ್ಷಿಗಳಿಗೆ ಸೋಂಕು ತಗುಲಿತು. ಬರುಬರುತ್ತಾ ಈ ವೈರಸ್ ಜಗತ್ತಿನ ಇತರೆ ದೇಶಗಳಿಗೆ ಹರಡಿತು. ಲಕ್ಷಾಂತರ ಪಕ್ಷಿಗಳು ಸೋಂಕಿಗೆ ಬಲಿಯಾದವು.

    ಸಾಂಕ್ರಾಮಿಕ ಕಾಯಿಲೆ?
    ಹೆಚ್5ಎನ್1 ವೈರಸ್‌ನಿಂದ ಹರಡುವ ರೋಗ ಹಕ್ಕಿಜ್ವರ. ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಇದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ವಲಸೆ ಬರುವ ಹಕ್ಕಿಗಳಲ್ಲಿ ಸೋಂಕಿದ್ದರೆ ಅವುಗಳ ಜೊತೆ ಸಂಪರ್ಕ ಬೆಳೆಸುವ ಹಕ್ಕಿಗಳಿಗೂ ತಗುಲುತ್ತದೆ. ಹಕ್ಕಿಗಳ ಗುಂಪಲ್ಲಿ ಸೋಂಕಿತ ಹಕ್ಕಿಯಿದ್ದರೂ ಹರಡುತ್ತದೆ.

    ಮನುಷ್ಯರಿಗೂ ಹರಡುತ್ತಾ?
    ಹೌದು, ಹೆಚ್5ಎನ್1 ವೈರಸ್ ಸೋಂಕಿತ ಪಕ್ಷಿಗಳಿಂದ ಮನುಷ್ಯರಿಗೂ ಹರಡುತ್ತದೆ. ಸೋಂಕಿತ ಪಕ್ಷಿಗಳ ನೇರ ಸಂಪರ್ಕಕ್ಕೆ ಬಂದರೆ ಪ್ರಾಣಿಗಳು ಮತ್ತು ಮನುಷ್ಯರಿಗೂ ಹರಡುತ್ತದೆ. 1997ರಲ್ಲಿ ಮಾನವರಲ್ಲೂ ಮೊಟ್ಟಮೊದಲ ಬಾರಿಗೆ ಹರಡಿದ್ದು ಕಂಡುಬಂತು. ಹಾಂಗ್ ಕಾಂಗ್‌ನಲ್ಲಿ ಹೆಚ್5ಎನ್1ಗೆ 18 ಮಂದಿ ತುತ್ತಾಗಿ, ಅವರಲ್ಲಿ 6 ಜನರು ಸಾವನ್ನಪ್ಪಿದರು.

    ವೈರಸ್ ಪರಿಣಾಮ ಹೇಗಿರುತ್ತೆ?
    ಸೋಂಕಿತ ಹಕ್ಕಿಯ ಮಲ, ಮೂತ್ರ, ಸಿಂಬಳ, ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ ಮತ್ತು ಅವುಗಳನ್ನು ಸಾಕಾಣಿಕೆಗೆ ಬಳಸುವ ಉಪಕರಣಗಳೂ ವೈರಸ್ ಮಯವಾಗಿರುತ್ತವೆ. ಕೋಳಿ ಫಾರಂಗಳಲ್ಲಿ ಕೆಲಸ ಮಾಡುವವರು, ಕೋಳಿ ಸಾಕುವವರು, ಪಕ್ಷಿಗಳು ಮತ್ತು ಅವುಗಳ ಮೊಟ್ಟೆ ಮಾರುವವರು, ಚಿಕನ್ ಅಂಗಡಿಯವರು, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿಜ್ವರ ಅಂಟುವ ಸಾಧ್ಯತೆ ಇರುತ್ತದೆ.

    ಸೋಂಕು ಹರಡುವುದು ಹೇಗೆ?
    ಈ ವೈರಸ್ ಮುಖ್ಯವಾಗಿ ಉಸಿರಾಡುವ ಗಾಳಿಯಿಂದ ಹರಡುತ್ತದೆ. ಹಕ್ಕಿಯಿಂದ ಹಕ್ಕಿಗೆ ಬಹುಬೇಗನೇ ಹರಡುತ್ತೆ. ಹಕ್ಕಿಗಳು ವಲಸೆ ಹೋದಾಗ, ಗುಂಪಿನಲ್ಲಿ ಸೋಂಕಿತ ಹಕ್ಕಿ ಇದ್ದರೆ ಇತರೆ ಹಕ್ಕಿಗಳಿಗೂ ತಗುಲುತ್ತದೆ. ಕೋಳಿ ಪಾರಂಗಳಲ್ಲಿ ಗಾಳಿ ಮೂಲಕ ಕುಕ್ಕುಟೋದ್ಯಮದಲ್ಲಿ ನಿರತರಾಗುವ ಸಿಬ್ಬಂದಿಯಲ್ಲಿ ಕಾಣಿಸಿಕೊಳ್ಳಬಹುದು. ಹಕ್ಕಿಗಳಿಂದ ಹಕ್ಕಿಗಳಿಗೆ ಹಾಗೂ ಹಕ್ಕಿಗಳಿಂದ ಮನುಷ್ಯರಿಗೆ ಇದು ಹರಡುತ್ತದೆ. ಇದುವರೆಗೂ ಮನುಷ್ಯರಿಂದ ಮನುಷ್ಯರಿಗೆ ಸೋಂಕು ತಗುಲಿರುವ ಉದಾಹರಣೆ ಇಲ್ಲ. ಆದರೆ, ಮುಂದಿನ ದಿನಗಳಲ್ಲಿ ವೈರಸ್ ಮನುಷ್ಯ ದೇಹಕ್ಕೆ ವರ್ಗಾವಣೆಗೊಂಡು ಬದುಕುಳಿಯುವ ಶಕ್ತಿ ಬೆಳೆಸಿಕೊಳ್ಳಬಹುದು ಎನ್ನುತ್ತಾರೆ ತಜ್ಞರು.

    ರೋಗ ಲಕ್ಷಣಗಳೇನು?
    ಹಕ್ಕಿಜ್ವರ ಪೀಡಿತರಲ್ಲಿ ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ಕೆರೆತ, ತಲೆನೋವು, ಕೆಂಗಣ್ಣು, ಸ್ನಾಯುಗಳಲ್ಲಿ ನೋವು, ಆಯಾಸ ಕಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ, ಮೂಗು ಮತ್ತು ಒಸಡಿನಲ್ಲಿ ರಕ್ತ ಸ್ರಾವ, ಭೇದಿಯಾಗುತ್ತದೆ. ಸೋಂಕಿಗೆ ಒಳಗಾಗುವವರಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

    ಕೋಳಿಗಳಲ್ಲಿ ಸೋಂಕು ಪತ್ತೆ ಹೇಗೆ?
    ಸೋಂಕಿತ ಕೋಳಿಗಳು ಸಾಮಾನ್ಯವಾಗಿ ಆಹಾರ ತಿನ್ನಲ್ಲ. ಮೊಟ್ಟೆ ಇಡುವುದೂ ಕಡಿಮೆಯಾಗುತ್ತದೆ. ಹೆಚ್ಚು ಓಡಾಡದೇ ನಿತ್ರಾಣಗೊಂಡಂತಿರುತ್ತದೆ. ಅವುಗಳ ಕಣ್ಣುಗಳು ತೇವವಾಗಿರುತ್ತವೆ. ರೆಕ್ಕೆಗಳು ಕೆದರಿದಂತೆ ಇರುತ್ತವೆ. ನೆತ್ತಿ ಭಾಗದಲ್ಲಿ ದ್ರವ ಸಂಗ್ರಹವಾಗುತ್ತದೆ. ತಲೆ ಭಾಗ ಊದಿಕೊಳ್ಳುತ್ತದೆ. ಕಾಲಿನ ಚರ್ಮದ ಅಡಿಯಲ್ಲಿ ರಕ್ತಸ್ರಾವ ಆಗುತ್ತದೆ. ಕೋಳಿಗಳಿಗೆ ದಿಢೀರ್ ಸಾವು ಸಂಭವಿಸಬಹುದು.

    ಕೋಳಿ, ಮೊಟ್ಟೆ ತಿಂದರೆ ಹಕ್ಕಿಜ್ವರ ಹರಡುತ್ತಾ?
    ಸೋಂಕಿತ ಕೋಳಿ ಹಾಗೂ ಕೋಳಿ ಮೊಟ್ಟೆ ತಿನ್ನುವುದರಿಂದ ಸೋಂಕು ಹರಡುತ್ತದೆಯೇ ಎಂಬ ಗೊಂದಲ ಅನೇಕರಲ್ಲಿದೆ. ಸೋಂಕಿತ ಕೋಳಿ ಮತ್ತು ಮೊಟ್ಟೆಯನ್ನು ಬೇಯಿಸಿ ತಿನ್ನುವುದರಿಂದ ಸೋಂಕು ಹರಡುವುದಿಲ್ಲ. ಕೋಳಿ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಬಹುದು. ಬೇಯಿಸುವುದರಿಂದ ಅದರಲ್ಲಿನ ವೈರಸ್ ಸಾಯುತ್ತದೆ ಎಂದು ತಜ್ಞರು ಹೇಳುತ್ತಾರೆ. ಯಾವುದೇ ಕಾರಣಕ್ಕೂ ಹಸಿ ಮೊಟ್ಟೆ ಸೇವಿಸಬಾರದು ಎಂಬುದು ತಜ್ಞರ ಎಚ್ಚರಿಕೆ ಮಾತು. ಹಕ್ಕಿಜ್ವರ ಸೋಂಕಿತ ಹಸುವಿನ ಹಾಲಿನಲ್ಲೂ ವೈರಸ್ ಇರುತ್ತದೆ. ಹಾಲನ್ನು ಕುದಿಸಿ ಕುಡಿದರೆ ಯಾವುದೇ ಸಮಸ್ಯೆ ಇರುವುದಿಲ್ಲ.

    ಮುಂಜಾಗ್ರತಾ ಕ್ರಮಗಳೇನು?
    * ಯಾವುದೇ ಹಕ್ಕಿಗೆ ಜ್ವರ ಕಂಡುಬಂದರೆ ತಕ್ಷಣ ಸುತ್ತಮುತ್ತಲಿನ ಹಕ್ಕಿಗಳನ್ನೆಲ್ಲ (ಕೋಳಿ) ಹತ್ಯೆ ಮಾಡಬೇಕು.
    * ಹಕ್ಕಿಜ್ವರ ಕಂಡುಬಂದ ಸ್ಥಳಕ್ಕೆ ಭೇಟಿ ನೀಡುವವರು ತಮಗೆ ಕಾಯಿಲೆ ಬರದಂತೆ ತಡೆಯಲು ದಿನಕ್ಕೊಂದರಂತೆ 7 ದಿನ ಟ್ಯಾಮಿಫ್ಲೂ ಮಾತ್ರೆ ಸೇವಿಸಬೇಕು.
    * ಕೋಳಿ ಸಾಕಾಣಿಕೆ ಮಾಡುವವರಿಗೆ ಹಕ್ಕಿಜ್ವರದ ಬಗ್ಗೆ ಜಾಗೃತಿ ಮೂಡಿಸಬೇಕು.
    * ಹಕ್ಕಿ ಸಾಕುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕು.
    * ಹಕ್ಕಿಜ್ವರದಿಂದ ಸತ್ತ ಕೋಳಿಗಳನ್ನು ಐದಾರು ಪದರ ಸುಣ್ಣ ಹಾಗೂ ಮಣ್ಣು ಹಾಕಿ ಹೂಳಬೇಕು ಅಥವಾ ಸುಟ್ಟುಹಾಕಬೇಕು.
    * ಹಕ್ಕಿಜ್ವರದ ಸಮಯದಲ್ಲಿ ಯಾರಿಗಾದರೂ ಅತಿಯಾದ ಜ್ವರ, ಉಸಿರಾಟದ ತೊಂದರೆ ಕಂಡುಬಂದರೆ ನಿರ್ಲಕ್ಷಿಸದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು.

    ಸೋಂಕಿಗೆ ಲಸಿಕೆ ಇದೆಯೇ?
    ಹಕ್ಕಿಜ್ವರ ಸೋಂಕಿಗೆ ಯಾವುದೇ ಲಸಿಕೆ ಇಲ್ಲ. ವಿವಿಧ ಕಂಪನಿಗಳು ಲಸಿಕೆ ಅಭಿವೃದ್ಧಿ ಪಡಿಸುವಲ್ಲಿ ನಿರತವಾಗಿವೆ.

    ಆತಂಕ ಸೃಷ್ಟಿಸಿದ ಹಕ್ಕಿಜ್ವರ
    2023-24ರಲ್ಲಿ ಅಮೆರಿಕ ಸೇರಿದಂತೆ ಜಗತ್ತಿನ 108 ದೇಶಗಳಲ್ಲಿ ಹಕ್ಕಿಜ್ವರ ಭಾದಿಸಿದೆ. ಸೋಂಕಿಗೆ ಈಚೆಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಭಾರತದಲ್ಲಿಯೂ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟç, ರಾಜಸ್ಥಾನ, ಕರ್ನಾಟದಲ್ಲಿ ಈಗ ಆತಂಕ ಮೂಡಿಸಿದೆ. ಸದ್ಯ ರಾಯಚೂರಿನ ಮಾನ್ವಿ, ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿಯ ಸಂಡೂರು ತಾಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ ಪ್ರಕರಣಗಳು ವರದಿಯಾಗಿವೆ. ಬಳ್ಳಾರಿಯಲ್ಲಿ ಇದುವರೆಗೆ 7 ಸಾವಿರ ಜೀವಂತ ಕೋಳಿಗಳನ್ನು ಸಾಮೂಹಿಕ ಹತ್ಯೆ ಮಾಡಲಾಗಿದೆ.

    ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲೇನಿದೆ?
    ರಾಜ್ಯದ ಹಲವೆಡೆ ಹಕ್ಕಿಜ್ವರ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳ ಮಾರ್ಗಸೂಚಿ ಹೊರಡಿಸಿದೆ.
    * ಹಕ್ಕಿಜ್ವರ ಕಂಡುಬಂದ ಸ್ಥಳದ 3 ಕಿಮೀ ವ್ಯಾಪ್ತಿಯಲ್ಲಿ ಮಾಂಸ ಮಾರುವಂತಿಲ್ಲ. (ಈ ವ್ಯಾಪ್ತಿಯಲ್ಲಿ ಯಾರೂ ಓಡಾಡುವಂತಿಲ್ಲ)
    * ಹಕ್ಕಿಜ್ವರ ಕಂಡುಬಂದ 10 ಕಿಮೀ ವ್ಯಾಪ್ತಿ ಸರ್ವಲೆನ್ಸ್ ಸ್ಥಳ ಎಂದು ಘೋಷಿಸಬೇಕು. ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹಾಕಬೇಕು.
    * ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಅರ್ಧಂಬರ್ಧ ಬೇಯಿಸಿದ ಮಾಂಸ ತಿನ್ನುವಂತಿಲ್ಲ.
    * ಪೌಲ್ಟ್ರಿಯಲ್ಲಿ ಕೆಲಸ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು.
    * ಕೋಳಿ ಮಾಂಸ ಮಾರುವವರು ಮಾಸ್ಕ್, ಗ್ಲೌಸ್ ಧರಿಸಬೇಕು.
    * ಹಕ್ಕಿಗಳು, ಕೋಳಿಗಳ ಸಂಪರ್ಕದಲ್ಲಿ ಇರುವವರಿಗೆ ಔಷಧ ನೀಡಬೇಕು.
    * ರೋಗ ಪತೆಯಾದ ಸ್ಥಳದಿಂದ 1 ಕಿಮೀ ವ್ಯಾಪ್ತಿಯಲ್ಲಿ ಎಲ್ಲ ಕೋಳಿಗಳನ್ನು ಹತ್ಯೆ ಮಾಡಿ ಹೂಳುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

  • ಬಳ್ಳಾರಿ | ಹಕ್ಕಿ ಜ್ವರ ಪತ್ತೆ – ಆಂಧ್ರ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು

    ಬಳ್ಳಾರಿ | ಹಕ್ಕಿ ಜ್ವರ ಪತ್ತೆ – ಆಂಧ್ರ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು

    – 5 ಚೆಕ್‌ಪೋಸ್ಟ್ ನಿರ್ಮಾಣ ಮಾಡಿದ ಜಿಲ್ಲಾಡಳಿತ

    ಬಳ್ಳಾರಿ: ಜಿಲ್ಲೆಯಲ್ಲಿ ಹಕ್ಕಿ ಜ್ವರ (Bird Flu) ಪತ್ತೆ ಹಿನ್ನೆಲೆ ಜಿಲ್ಲಾಡಳಿತವು ಆಂಧ್ರದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಹಕ್ಕಿ ಜ್ವರ ಪತ್ತೆ ಹಿನ್ನೆಲೆ ಅಲರ್ಟ್ ಆಗಿರುವ ಜಿಲ್ಲಾಡಳಿತವು, ಜಿಲ್ಲೆಯಾದ್ಯಂತ 5 ಚೆಕ್‌ಪೋಸ್ಟ್‌ಗಳ ನಿರ್ಮಾಣ ಮಾಡಿದೆ.

    ಪ್ರಮುಖವಾಗಿ ಆಂಧ್ರಪ್ರದೇಶದ ಅನಂತಪುರ ಹಾಗೂ ಗುಂತಕಲ್ ಭಾಗದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಆಂಧ್ರ ಗಡಿಗೆ ಹೊಂದಿಕೊಂಡಿರುವ ಪಿಡಿಹಳ್ಳಿ ಗ್ರಾಮದಲ್ಲೂ ಚೆಕ್ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕಾಮಗಾರಿ ಫಲಕದ ವಿಚಾರಕ್ಕೆ ಜಗಳ – ಗುಂಪು ಘರ್ಷಣೆಯಲ್ಲಿ ಓರ್ವ ಸಾವು, 9 ಜನರಿಗೆ ಗಾಯ

    ಪಿಡಿಹಳ್ಳಿ ಚೆಕ್‌ಪೋಸ್ಟ್‌ನಿಂದ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮಾಡಿದ್ದು, ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ, ಕೋಳಿಗಳ ಆರೋಗ್ಯ ಪರಿಶೀಲನೆ ಮಾಡಿಯೇ ವಾಹನಗಳನ್ನ ಜಿಲ್ಲೆಯ ಒಳಗೆ ಬಿಡುತ್ತಿದ್ದಾರೆ. ಪ್ರತಿ ಚೆಕ್‌ಪೋಸ್ಟ್‌ಗಳಿಗೂ ಪಶುವೈದ್ಯರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಸದ್ಯ ಹಕ್ಕಿ ಜ್ವರದ ಆತಂಕ ಹಿನ್ನೆಲೆ ವ್ಯಾಪಾರಸ್ಥರು, ಆಂಧ್ರದಿಂದ ಕೋಳಿ ಮಾಂಸ ಆಮದಿಗೆ ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ

  • ಹಕ್ಕಿಜ್ವರ ಭೀತಿ – ಚಿತ್ರದುರ್ಗ ಜಿಲ್ಲಾಡಳಿತದಿಂದ ಕೋಳಿ ಫಾರಂಗಳಲ್ಲಿ ಜಾಗೃತಿ

    ಹಕ್ಕಿಜ್ವರ ಭೀತಿ – ಚಿತ್ರದುರ್ಗ ಜಿಲ್ಲಾಡಳಿತದಿಂದ ಕೋಳಿ ಫಾರಂಗಳಲ್ಲಿ ಜಾಗೃತಿ

    ಚಿತ್ರದುರ್ಗ: ರಾಜ್ಯಾದ್ಯಂತ ಹಕ್ಕಿಜ್ವರದ (Bird Flu) ಭೀತಿ ಕಾಡುತ್ತಿದೆ. ಅದರಲ್ಲೂ ಆಂಧ್ರಪ್ರದೇಶ ಹಾಗೂ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ತಾಂಡವವಾಡುತ್ತಿರುವ ಪರಿಣಾಮ ಅಲರ್ಟ್ ಆಗಿರುವ ಚಿತ್ರದುರ್ಗ ಜಿಲ್ಲಾಡಳಿತ (Chitradurga District Administration) ಕೋಳಿ ಫಾರಂಗಳಲ್ಲಿ (Poultry) ಹಕ್ಕಿಜ್ವರ ಹರಡದಂತೆ ಜಾಗೃತಿ ಮೂಡಿಸಿದೆ.

    ಹಕ್ಕಿಜ್ವರವನ್ನು ಎದುರಿಸಲು ಸಜ್ಜಾಗಿರುವ ಜಿಲ್ಲೆಯ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಚಿತ್ರದುರ್ಗ ತಾಲೂಕಿನ ದಂಡಿನ ಕುರುಬರಹಟ್ಟಿಯ ಕರ್ನಾಟಕ ಪೌಲ್ಟ್ರಿ ಫಾರಂನಲ್ಲಿ ಹಕ್ಕಿಜ್ವರದ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ ನಡೆಸಿದ್ದು, ಫಾರಂನಲ್ಲಿನ ಸ್ವಚ್ಛತಾ ವ್ಯವಸ್ಥೆ ಹಾಗೂ ಹಕ್ಕಿಜ್ವರ ಹರಡದಂತೆ ಅಲ್ಲಿನ ಸಿಬ್ಬಂದಿಗಳು ಕೈಗೊಂಡಿರುವ ಮುಂಜಾಗ್ರತೆಯನ್ನು ಗಮನಿಸಲಾಯಿತು. ಇದನ್ನೂ ಓದಿ: ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಕ್ಕಿಜ್ವರ ದಿನದಿನಕ್ಕೂ ಮಿತಿಮೀರುತ್ತಿರುವ ಪರಿಣಾಮ ಆಂಧ್ರ ಗಡಿಭಾಗದಲ್ಲಿರುವ ಚಿತ್ರದುರ್ಗದಲ್ಲೂ ಹಕ್ಕಿಜ್ವರದ ಭೀತಿ ಶುರುವಾಗಿದೆ. ಹೀಗಾಗಿ ಕುಕ್ಕುಟೋದ್ಯಮದ ಮೇಲಿನ ಎಫೆಕ್ಟ್ ತಗ್ಗಿಸಲು ಪಶುಸಂಗೋಪನೆ ಇಲಾಖೆಅಧಿಕಾರಿಗಳು ಮುಂದಾಗಿದ್ದು, ಜಿಲ್ಲೆಯ 337 ಕೋಳಿ ಫಾರಂಗಳು, 307 ಮಾಂಸದ ಫಾರಂ ಹಾಗೂ 35 ಮೊಟ್ಟೆ ಕೋಳಿ ಫಾರಂಗಳಿಗೆ ಭೇಟಿ ನೀಡಿ ಹಕ್ಕಿಜ್ವರದ ಜಾಗೃತಿ ಮೂಡಿಸಿದರು. ಇದನ್ನೂ ಓದಿ: ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಎದ್ದಲಬೊಮ್ಮಯ್ಯನಹಟ್ಟಿ, ಚಳ್ಳಕೆರೆಯ ನಾಗಪ್ಪನಳ್ಳಿ ಗೇಟ್ ಹಾಗೂ ಹಿರಿಯೂರಿನ ಪಿಡಿ ಕೋಟೆ ಗಡಿಭಾಗದಲ್ಲಿ ಮೂರುಕಡೆ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಹೊರ ರಾಜ್ಯದ ಕೋಳಿ ಹಾಗೂ ಮೊಟ್ಟೆಗಳು ಚಿತ್ರದುರ್ಗಕ್ಕೆ ಎಂಟ್ರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು – ಶಂಕಿತ ಭಯೋತ್ಪಾದಕ ಅರೆಸ್ಟ್

    ಜೊತೆಗೆ ಕೋಳಿ ಫಾರಂಗಳಲ್ಲೂ ಸಹ ಹಕ್ಕಿಜ್ವರ ಹರಡದಂತೆ ಮುಂಜಾಗ್ರತೆ ವಹಿಸಿದ್ದು, ಸ್ವಚ್ಛತೆಯೊಂದಿಗೆ, ಫಾರಂ ಸುತ್ತಲು ಆಗಾಗ್ಗೆ ಔಷಧಿ ಸಿಂಪಡಿಸುವಂತೆ ಫಾರಂ ಮಾಲೀಕರಿಗೆ ತಿಳಿಸಲಾಗಿದೆ. ಅಲ್ಲದೇ ಆಂಧ್ರ ಗಡಿಭಾಗದಿಂದ ಹಕ್ಕಿಜ್ವರ ಶುರುವಾದ ಬೆನ್ನಲ್ಲೇ ಹೊರರಾಜ್ಯದಿಂದ ಬರುವ ಕೋಳಿಗಳು, ಮೊಟ್ಟೆ ಹಾಗೂ ಕೋಳಿಗಳ ಆಹಾರ ಸಾಗಾಟಕ್ಕೆ ಕೋಟೆನಾಡಲ್ಲಿ ಬ್ರೇಕ್ ಹಾಕಲಾಗಿದೆ. ಇದನ್ನೂ ಓದಿ: ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಫಾರಂ ಮಾಲೀಕರು ಹಾಗೂ ಸಿಬ್ಬಂದಿ ಕೂಡ ಹಕ್ಕಿಜ್ವರ ತಡೆಯಲು ಅಧಿಕಾರಿಗಳೊಂದಿಗೆ ಕೈ ಜೋಡಿಸಿದ್ದಾರೆ. ಹಕ್ಕಿಜ್ವರ ಹರಡದಂತೆ ತಡೆಯಲು ಫೀಡಿಂಗ್, ಸ್ವಚ್ಛತೆಗೆ ಆದ್ಯತೆ ನೀಡಿರುವುದಾಗಿ ಪೌಲ್ಟ್ರಿ ಸಿಬ್ಬಂದಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ

  • ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಮಡಿಕೇರಿ: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಭೀತಿ ಕೊಡಗಿನಲ್ಲೂ (Kodagu) ಹೆಚ್ಚಾಗಿದ್ದು, ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರುತ್ತಿದೆ. ಆತಂಕಕ್ಕೆ ಒಳಗಾಗಿರುವ ಜನ ಕೋಳಿ ಮಾಂಸಾಹಾರ ಸೇವನೆಗೆ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬಿರಿಯಾನಿ ಸೇರಿದಂತೆ ಮಾಂಸಾಹಾರ ಹೋಟೆಲ್‌ಗಳು (Non veg Hotel) ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿವೆ.

    ಪ್ರವಾಸಿರ ಸ್ವರ್ಗವಾದ ಮಡಿಕೇರಿಯಲ್ಲಿ ಈವರೆಗೆ ಹಕ್ಕಿ ಜ್ವರ (Bird Flu) ಪ್ರಕರಣ ಪತ್ತೆಯಾಗದೇ ಇದ್ದರೂ ಜನ ಮಾತ್ರ ಆತಂಕದಲ್ಲೇ ಇದ್ದಾರೆ. ಕೋಳಿ ಸೇರಿದಂತೆ ಇನ್ನಿತರ ಮಾಂಸಾಹಾರ ಪದಾರ್ಥಗಳ ಸೇವನೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹೋಟೆಲ್ ಉದ್ಯಮವನ್ನೆ ನಂಬಿ ಬದುಕುತ್ತಿರುವ ಮಾಲೀಕರಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ ಎಂದು ಹೋಟೆಲ್‌ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

    ಪಶುಸಂಗೋಪನಾ ಇಲಾಖೆ ಮಾರ್ಗಸೂಚಿ ಏನಿದೆ?
    1. 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.
    2. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.
    3. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು.
    4. ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು .
    5. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು.
    6. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ.

    ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
    1. ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು.
    2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.
    3. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು.
    4. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು.
    5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.

  • ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಬಾಗಲಕೋಟೆ: ರಾಜ್ಯದಲ್ಲಿ ಹಕ್ಕಿ ಜ್ವರ (Bird Flu) ಭೀತಿ ಬೆನ್ನಲ್ಲೇ ಬಾಗಲಕೋಟೆ (Bagalkote) ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಡಿಸಿ ಜಾನಕಿ.ಕೆ.ಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಜಾಗ್ರತಾ ಸಭೆ ನಡೆಸಲಾಗಿದೆ.

    ಹಕ್ಕಿ ಜ್ವರ ಬಾರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಡಿಸಿ ಕೆ.ಎಂ ಜಾನಕಿ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 417 ವಾಣಿಜ್ಯ ಬಾಯ್ಲರ್ ಹಾಗೂ ಲೇಯರ್ಸ್ ಕೋಳಿ ಫಾರಂ ಇದ್ದು, ಅವುಗಳಲ್ಲಿ 9 ಲಕ್ಷ 28 ಸಾವಿರ ಬಾಯ್ಲರ್ ಕೋಳಿಗಳು ಹಾಗೂ 10 ಲಕ್ಷ 30 ಸಾವಿರ ಲೇಯರ್ ಕೋಳಿಗಳಿವೆ. ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಹಕ್ಕಿಜ್ವರ ಭೀತಿ ಇಲ್ಲ. ಜನರು ಈ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ – ಜನಸಂಖ್ಯೆ ಹೆಚ್ಚಿಸಲು ಎಂ.ಕೆ ಸ್ಟಾಲಿನ್ ಮನವಿ

    ಕೋಳಿ ಹಾಗೂ ಉತ್ಪನ್ನಗಳ ಆಹಾರ, ಸಾಗಾಣಿಕೆ ಬಂದ್ ಮಾಡುವ ಬಗ್ಗೆ ಹಾಗೂ ಗಡಿ ಪ್ರದೇಶದಲ್ಲಿ ಚೆಕ್‌ಪೋಸ್ಟ್ ಹಾಕಿ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಯಾವುದೇ ಅನುದಾನ ತಂದಿಲ್ಲ: ಹೆಚ್‌ಸಿ ಬಾಲಕೃಷ್ಣ

    ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

  • ಹಕ್ಕಿ ಜ್ವರದ ಆತಂಕ – ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

    ಹಕ್ಕಿ ಜ್ವರದ ಆತಂಕ – ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

    – ಬಿಕೋ ಎನ್ನುತ್ತಿವೆ ಚಿಕನ್‌ ಸೆಂಟರ್‌ಗಳು
    – ಯಾವ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

    ಚಿಕ್ಕಬಳ್ಳಾಪುರ/ಕೋಲಾರ/ಬಳ್ಳಾರಿ: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ. ರೋಗ ಉಲ್ಬಣ ಆಗದಂತೆ ಕೋಳಿಗಳ ಸಾಮೂಹಿಕ ಹತ್ಯೆ ಮಾಡಿ ಪ್ರತಿದಿನವೂ ಸ್ಯಾನಿಟೈಸೇಷನ್ ಮಾಡಲಾಗ್ತಿದೆ.

    ಚಿಕ್ಕಬಳ್ಳಾಪುರದಲ್ಲಿ (Chikkaballapura) 5ನೇ ದಿನವೂ ಸಹ ವರದಹಳ್ಳಿ ಗ್ರಾಮದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಕೋಳಿಗಳ ಹತ್ಯೆ ಮಾಡಿದಂತೆ ಡಿಸ್ ಇನ್‌ಫೆಕ್ಷನ್ ದ್ರಾವಣ ಸಿಂಪಡಿಸಿ ವೈರಸ್ ನಿಯಂತ್ರಣಕ್ಕೆ ಇನ್ನಿಲ್ಲದ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ನಿರಂತರವಾಗಿ ಮೂರು ತಿಂಗಳ ಕಾಲ ಗ್ರಾಮದಲ್ಲಿ ನಿಗಾ ಇಡಲಾಗುತ್ತಿದೆ. ಮೂರು ತಿಂಗಳು ಕೋಳಿಮುಕ್ತ ಗ್ರಾಮವಾಗಿ ವರದಹಳ್ಳಿ ಇರಬೇಕಿದೆ. ಯಾವುದೇ ಹೊಸ ಕೋಳಿ ಸಾಕಾಣಿಕೆಗೆ ಅವಕಾಶವೇ ಇಲ್ಲ. ಸದ್ಯ 1 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ಝೋನ್ ಇದ್ದು.. ಮುಂದಿನ ದಿನಗಳಲ್ಲಿ 10 ಕಿಮೀ ವ್ಯಾಪ್ತಿಯಲ್ಲಿ ಮಾದರಿಗಳನ್ನ ಪ್ರಯೋಗಲಾಯಕ್ಕೆ ಕಳುಹಿಸಿ ವೈರಸ್ ನಿರ್ಮೂಲನೆಗೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

    ಕೋಲಾರ:
    ಕೋಲಾರದಲ್ಲಿ ಹಕ್ಕಿ ಜ್ವರದ ಆತಂಕ ಹಿನ್ನೆಲೆ ಕುಕ್ಕಟೋದ್ಯಮಕ್ಕೆ ಬಿಸಿ ತಟ್ಟಿದ್ದು ಚಿಕನ್‌ಗೆ ಒಂದಷ್ಟು ಬೇಡಿಕೆ ಕಡಿಮೆಯಾಗಿದೆ. ಚಿಕನ್ ಅಂಗಡಿಗಳು ಖಾಲಿಯಾಗಿದ್ದು ಚಿಕನ್ ಪ್ರಿಯರೆಲ್ಲ ಕುರಿ ಮಾಂಸ ಹಾಗೂ ಮೀನಿನ ಮೊರೆ ಹೋಗಿದ್ದಾರೆ.

    ಬಳ್ಳಾರಿ:
    ಜಿಲ್ಲೆಯಲ್ಲೂ ಹಕ್ಕಿ ಜ್ವರ ಆತಂಕ ಮನೆ ಮಾಡಿದ್ದು. ಫಾರಂಗಳಲ್ಲೇ ಕೋಳಿಗಳು ಸಾವಾಗ್ತಿರೋದ್ರಿಂದ ಉತ್ಪಾದನೆ ಕುಂಠಿತಗೊಂಡಿದೆ. ಇದ್ರಿಂದ ಚಿಕನ್ ದರವೂ ಹೆಚ್ಚಾಗಿದೆ.

    ವಿಜಯಪುರ:
    ವಿಜಯಪುರದಲ್ಲೂ ಗ್ರಾಹಕರು ಹಕ್ಕಿ-ಜ್ವರಕ್ಕೆ ಹೆದರಿ ಕೋಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಚಿಕನ್ ಪ್ರಿಯರೆಲ್ಲ ಕುರಿ ಮಾಂಸ ಹಾಗೂ ಮೀನಿನ ಮೊರೆ ಹೋಗಿದ್ದಾರೆ.

    ಕೊಡಗು:
    ಹಕ್ಕಿಜ್ವರ ಹಿನ್ನೆಲೆ ಜನ ವಿವಿಧ ಜಿಲ್ಲೆಗಳಲ್ಲಿ ಚಿಕನ್‌ ತಿನ್ನೋದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೋಪ್ಪದಲ್ಲಿ ಸಂತೆ ದಿನವಾದ ಕೋಳಿ ಮಾಂಸದ ಅಂಗಡಿಗಳಲ್ಲಿ ಗ್ರಾಹಕರು ಇಲ್ಲದೇ ಕೆಲ ಅಂಗಡಿಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನಾಟಿ ಕೋಳಿಗಳಿಗೆ ಬೇಡಿಕೆ ಇರುವುದರಿಂದ ಕೆಲ ಗ್ರಾಹಕರು ನಾಟಿ ಕೋಳಿಯ ಮೊರೆ ಹೋಗುತ್ತಿದ್ದಾರೆ.

    ತುಮಕೂರು:
    ತುಮಕೂರು ಜಿಲ್ಲೆಯಲ್ಲಿ ಯಾವುದೇ ರೀತಿಯ ಹಕ್ಕಿ ಜ್ವರದ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜನರಲ್ಲಿ ಆತಂಕ ಶುರುವಾಗಿದೆ. ಇದರ ಪರಿಣಾಮ ಚಿಕನ್ ಸೆಂಟರ್‌ಗಳು ಬಿಕೋ ಎನ್ನುತ್ತಿವೆ.

  • ಬಳ್ಳಾರಿ | ರೈತರಿಗೆ ವಿತರಿಸಲು ಇಟ್ಟಿದ್ದ 2,000 ಕೋಳಿಗಳು ಹಕ್ಕಿಜ್ವರಕ್ಕೆ ಬಲಿ

    ಬಳ್ಳಾರಿ | ರೈತರಿಗೆ ವಿತರಿಸಲು ಇಟ್ಟಿದ್ದ 2,000 ಕೋಳಿಗಳು ಹಕ್ಕಿಜ್ವರಕ್ಕೆ ಬಲಿ

    ಬಳ್ಳಾರಿ: ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ (Bird Flu) ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ.

    ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು.

    ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ.

    ಕೇಂದ್ರದ ಒಂದು ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಗಳು, ಜನವಸತಿ ಪ್ರದೇಶಗಳು ಇಲ್ಲ. 10 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಕೋಳಿ ಫಾರ್ಮ್‍ಗಳು ಇಲ್ಲ. ಇದರಿಂದ ಹಕ್ಕಿಜ್ವರ ಬೆರೆಡೆಗೆ ಹರಡುವ ಸಾಧ್ಯತೆ ಕಡಿಮೆ ಇದೆ.

  • ಚಿಕ್ಕಬಳ್ಳಾಪುರದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ – 400ಕ್ಕೂ ಹೆಚ್ಚು ಕೋಳಿಗಳ ಸಾಮೂಹಿಕ ಹತ್ಯೆ!

    ಚಿಕ್ಕಬಳ್ಳಾಪುರದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ – 400ಕ್ಕೂ ಹೆಚ್ಚು ಕೋಳಿಗಳ ಸಾಮೂಹಿಕ ಹತ್ಯೆ!

    – ತಪ್ಪಿಸಿಕೊಂಡ ಕೋಳಿಗಳನ್ನು ಹುಡುಕುತ್ತಿರುವ ಸಿಬ್ಬಂದಿ
    – ಅಧಿಕಾರಿಗಳು, ಗ್ರಾಮಸ್ಥರ ಮಧ್ಯೆ ಪರಿಹಾರದ ಫೈಟ್

    ಚಿಕ್ಕಬಳ್ಳಾಪುರ: ಹಕ್ಕಿ ಜ್ವರ (Bird Flu) ರಾಜ್ಯಕ್ಕೂ ಕಾಲಿಟ್ಟಾಯ್ತು. ಹಕ್ಕಿಜ್ವರ ಕಾಣಿಸಿಕೊಂಡಿರೋ ಗ್ರಾಮದಲ್ಲಿರೋ ಕೋಳಿಗಳನ್ನೆಲ್ಲಾ ಆಧಿಕಾರಿಗಳು ಸಾಮೂಹಿಕ ಹತ್ಯೆ ಮಾಡಿ ಗುಂಡಿಗೆ ಹಾಕಿ ಮುಚ್ಚಿದ್ದಾಯ್ತು. ಆದ್ರೆ ಹತ್ಯೆ ಮಾಡಿದ ಕೋಳಿಗಳಿಗೆ ಪರಿಹಾರ ಎಲ್ಲಿ..? ಅದೆಷ್ಟು ಕೊಡ್ತಿರಾ, ಅದ್ಯಾವಾಗ ಕೊಡ್ತೀರಾ? ಅಂತ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

    ಹೌದು. ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಪಕ್ಷಿಗಳು ಅದ್ರಲ್ಲೂ ಕೋಳಿಗಳಿಗೆ ಮಾರಕವಾಗಿರೋ ಡೆಡ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎರಡು ದಿನಗಳಿಂದ ಗ್ರಾಮದಲ್ಲೇ ಬೀಡುಟ್ಟಿದೆ. ಇರೋ ಬರೋ ಕೋಳಿಗಳನ್ನ ಸೆರೆಹಿಡಿದು ಹತ್ಯೆ ಮಾಡಿದೆ. ಹಕ್ಕಿ ಜ್ವರ ನಿಯಂತ್ರಣ ಮಾಡಲು ಗ್ರಾಮದಲ್ಲಿರುವ ಮನೆ ಮನೆಗಳಿಗೆ ತೆರಳಿ ಮನೆಯಲ್ಲಿರುವ ಕೋಳಿಗಳನ್ನ ವಶಕ್ಕೆ ಪಡೆದು ಗ್ರಾಮ ಹೊರವಲಯದಲ್ಲಿ ಗುಂಡಿ ತೋಡಿ ಕೋಳಿಗಳನ್ನ ಮುಚ್ಚಿ ನಾಶ ಮಾಡಲಾಗಿದೆ. ತಪ್ಪಿಸಿಕೊಂಡ ಕೋಳಿಗಳಿಗಾಗಿ ಸಿಬ್ಬಂದಿ ಹುಡುಕಾಡಿ ಹಿಡಿಯುತ್ತಿದ್ದಾರೆ.

    ಕೋಳಿಗಳನ್ನ ಹಿಡಿಯೋಕೆ ಬಂದ ಅಧಿಕಾರಿಗಳಿಗೆ ಕೋಳಿ ಮಾಲೀಕರು ಆಕ್ಷೇಪಿಸಿದರು. ಮೊದಲು ಪರಿಹಾರ ಎಷ್ಟು ಅಂತ ಹೇಳಿ ಆಮೇಲೆ ಕೋಳಿ ತಗೊಂಡು ಹೋಗಿ ಅಂತ ಗ್ರಾಮಸ್ಥರು ಆಕ್ಷೇಪ ಹೊರಹಾಕಿದ್ರು. ಇದ್ರಿಂದ ಸಹಜವಾಗಿಯೇ ಅಧಿಕಾರಿಗಳು ಹಾಗೂ ಕೋಳಿಗಳ ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

    ಗ್ರಾಮಸ್ಥರ ಆಕ್ರೋಶ, ಆಕ್ಷೇಪ ನಡುವೆಯೂ ಹರಸಾಹಸಪಟ್ಟು ಗ್ರಾಮಸ್ಥರ ಮನವೊಲಿಸಿದ ಅಧಿಕಾರಿಗಳು ಗ್ರಾಮದಲ್ಲಿದ್ದ 400ಕ್ಕೂ ಹೆಚ್ಚು ಕೋಳಿಗಳನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಹಕ್ಕಿ ಜ್ವರ ಉಲ್ಭಣಿಸಿದಂತೆ ಮಾಡಲು ಕೋಳಿಗಳ ಹತ್ಯೆ ಮಾಡೋದಾಗಿ ಅಧಿಕಾರಿಗಳು ಹೇಳಿದ್ರು. ವಶಕ್ಕೆ ಪಡೆದಿರುವ ಕೋಳಿಗಳ ಲೆಕ್ಕ ಇದ್ದು ಮುಂದಿನ ದಿನಗಳಲ್ಲಿ ಪರಿಹಾರ ನೀಡುವುದಾಗಿ ಗ್ರಾಮಸ್ಥರ ಮನವೊಲಿಸಿದರು.

    ಗ್ರಾಮದಲ್ಲಿ 447ಕ್ಕೂ ಹೆಚ್ಚು ಕೋಳಿಗಳಿದ್ದು ಬಹುತೇಕ ಕೋಳಿಗಳನ್ನ ಹಿಡಿದು ಹತ್ಯೆ ಮಾಡಿ ಗುಂಡಿಗೆ ಹಾಕಿ ಮುಚ್ಚಿ ನಾಶ ಮಾಡಲಾಗಿದೆ. ಆದ್ರೆ ಕೋಳಿಗೆ ಕೇವಲ 90 ರೂಪಾಯಿ ಪರಿಹಾರ ಮಾತ್ರ ಸಿಗಲಿದೆಯಂತೆ. ಅದು ಕೂಡ ಸಿಗುತ್ತೋ ಇಲ್ವೋ ಅನ್ನೋ ಅನುಮಾನ ಹೊರಹಾಕಿದ್ದಾರೆ ಗ್ರಾಮಸ್ಥರು.