Tag: birth centenary

  • ಶತಮಾನಕೊಬ್ಬ ಹಾಸ್ಯಚಕ್ರವರ್ತಿ: ವರ್ಷಪೂರ್ತಿ ನರಸಿಂಹರಾಜು ಶತಮಾನೋತ್ಸವ

    ಶತಮಾನಕೊಬ್ಬ ಹಾಸ್ಯಚಕ್ರವರ್ತಿ: ವರ್ಷಪೂರ್ತಿ ನರಸಿಂಹರಾಜು ಶತಮಾನೋತ್ಸವ

    ಜುಲೈ 24 ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ಟಿ.ಆರ್ ನರಸಿಂಹರಾಜು (T.R. Narasimharaju) ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು  ‘ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ (Birth Centenary) ಎಂಬ ಹೆಸರಿನಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ವರ್ಷಪೂರ್ತಿ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿಶ್ಚಯಿಸಿದ್ದಾರೆ.

    ನರಸಿಂಹರಾಜು ಅವರ ಹುಟ್ಟುಹಬ್ಬದಂದೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್, ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಎನ್ ಸುಬ್ರಹ್ಮಣ್ಯ ಹಾಗೂ ಹಿರಿಯನಟ ಬೆಂಗಳೂರು ನಾಗೇಶ್ ಸೇರಿದಂತೆ ವಿವಿಧ ಗಣ್ಯರು ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು ಹಾಗೂ ನರಸಿಂಹರಾಜು ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡರು.

    ನರಸಿಂಹರಾಜು ಅವರ ಶತಮಾನೋತ್ಸವ ಸಮಾರಂಭ ಬರೀ ಕುಟುಂಬದವರಲ್ಲ. ಎಲ್ಲರೂ ಸೇರಿ ಮಾಡಬೇಕಾದ ಕಾರ್ಯಕ್ರಮ ಎಂದು ಆಗಮಿಸಿದ್ದ ಎಲ್ಲಾ ಗಣ್ಯರು ತಿಳಿಸಿದರು. ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ಸಹ ಉಪಸ್ಥಿತರಿದ್ದರು. ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬವನ್ನು ‘ಶತಮಾನಕ್ಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ ಎಂಬ ಹೆಸರಿನಿಂದ ವರ್ಷಪೂರ್ತಿ ಆಚರಿಸಲಾಗುವುದು. ನರಸಿಂಹರಾಜು ಅವರ ಹೆಸರಿನಲ್ಲಿ ಮೂರು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿದೆ. ದೊಡ್ಡಮಟ್ಟದ ಸಮಾರಂಭ ಆಯೋಜಿಸಿ ಈ ಪ್ರಶಸ್ತಿಗಳನ್ನು ನೀಡಲಾಗುವುದು.

    ಮೊದಲು ನರಸಿಂಹರಾಜು ಅವರನ್ನು ಯುವಜನತೆಗೆ  ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

    ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ (ಹಾಸ್ಯದ ಕುರಿತು) ಆಯೋಜಿಸಲಾಗುವುದು.  ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು. ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಸಕ್ರಿಯವಾಗಿರುವ  ನಾಟಕ ಕಂಪನಿಗಳಿವೆ.  ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ನರಸಿಂಹರಾಜು ಅವರ ಜನಪ್ರಿಯ ನಾಟಕಗಳನ್ನು ಅಹೋರಾತ್ರಿ ಆಯೋಜಿಸುವ ಯೋಜನೆ ಇದೆ. ಆಗಸ್ಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಸಮಾರಂಭ ನಡೆಸುವ ಸಿದ್ದತೆ ಕೂಡ ನಡೆಯುತ್ತಿದೆ.

     

    ಈ ಎಲ್ಲಾ ಕಾರ್ಯಕ್ರಮಗಳು ಮುಂದಿನ ಆರು ತಿಂಗಳಲ್ಲಿ ಮೊದಲನೇ ಭಾಗಿ ನಡೆಯಲಿದೆ. ಮುಂದಿನ ಆರು ತಿಂಗಳ ಕಾರ್ಯಕ್ರಮಗಳನ್ನು ಮುಂಬರುವ ದಿನಗಳಲ್ಲಿ ತಿಳಿಸುವುದಾಗಿ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ (Avinash) ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

    ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

    ಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳದಿರುವವರು ಖ್ಯಾತ ಹಾಸ್ಯ ನಟ ದಿ. ಟಿ.ಆರ್ ನರಸಿಂಹರಾಜು. ಜುಲೈ 24 ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

    ಈ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ. ಇದನ್ನೂ ಓದಿ:‘ದಿಲ್ಲಿ ಮೇಡಂ ದಿಲ್ಲಿ ಮೇಡಂ ಸ್ಲೇಟು ಬಳಪ ತನ್ನಿ’ ಎಂದರಾ ಹಾಸ್ಟೆಲ್ ಹುಡುಗರು?

    ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು.

    ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ . ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖಾಲಿ ಕುರ್ಚಿ ಕಂಡು 15 ನಿಮಿಷಕ್ಕೆ ಭಾಷಣ ಮುಗಿಸಿದ ಸಿದ್ದರಾಮಯ್ಯ

    ಖಾಲಿ ಕುರ್ಚಿ ಕಂಡು 15 ನಿಮಿಷಕ್ಕೆ ಭಾಷಣ ಮುಗಿಸಿದ ಸಿದ್ದರಾಮಯ್ಯ

    ಕೋಲಾರ: ವೇದಿಕೆಯ ಮುಂದೆ ಖಾಲಿ ಖಾಲಿ ಕುರ್ಚಿ ಕಂಡು ಕೇವಲ 15 ನಿಮಿಷಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮುಗಿಸಿದ್ದಾರೆ.

    ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ ಜೊತೆಯಾಗಿ ಚಾಲನೆ ನೀಡಿದ್ದರು.

    ಸಿದ್ದರಾಮಯ್ಯ ಅವರು ಭಾಷಣ ಆರಂಭಿಸುವ ವೇಳೆಗೆ ಮಧ್ಯಾಹ್ನವಾಗಿತ್ತು. ಇತ್ತ ಬೆಳಗ್ಗೆಯಿಂದ ಕಾದು ಕುಳಿತಿದ್ದ ರೈತರು ಹಸಿವು ತಾಳಲಾರದೆ ಮನೆಯತ್ತ ಹೆಜ್ಜೆ ಹಾಕಿದ್ದರು. ಇದರಿಂದಾಗಿ ಗಣ್ಯರ ಗ್ಯಾಲರಿ ಹೊರತುಪಡಿಸಿ, ರೈತರು, ಸಾರ್ವಜನಿಕರಿದ್ದ ಕುರ್ಚಿಗಳು ಖಾಲಿ ಖಾಲಿಯಾಗಿದ್ದವು. ಇದನ್ನು ಅರಿತ ಸಿದ್ದರಾಮಯ್ಯ ಅವರು ಮುಜುಗರ ತಪ್ಪಿಸಲು ಕೇವಲ 15 ನಿಮಿಷದಲ್ಲಿಯೇ ಭಾಷಣ ಮುಗಿಸಿದರು.

    ಹೈನೋದ್ಯಮಕ್ಕೆ ತಮ್ಮದೆಯಾದ ಕೊಡುಗೆ ನೀಡಿದ ಎಂ.ವಿ.ಕೃಷ್ಣಪ್ಪ ಅವರ ಜ್ಞಾನಪಕಾರ್ಥವಾಗಿ ಅವರ ಪತ್ನಿ ಪ್ರಮೀಳಾ ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಸಾವಿರಾರರು ಜನರು ಆಗಮಿಸಿದ್ದರು. ಕೃಷಿ ಸಚಿವ ಶಿವಶಂಕರರೆಡ್ಡಿ, ಸ್ಪೀಕರ್ ರಮೇಶ್ ಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ, ಸೇರಿದಂತೆ ಪಕ್ಷಾತೀತವಾಗಿ ಎರಡು ಜಿಲ್ಲೆಯ ಶಾಸಕರುಗಳು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv