Tag: birth

  • ಹೊಸ ವರ್ಷದಂದು ಭಾರತದಲ್ಲಿ ಬರೋಬ್ಬರಿ 69 ಸಾವಿರ ಮಕ್ಕಳ ಜನನ- ಯಾವ ದೇಶದಲ್ಲಿ ಎಷ್ಟು?

    ಹೊಸ ವರ್ಷದಂದು ಭಾರತದಲ್ಲಿ ಬರೋಬ್ಬರಿ 69 ಸಾವಿರ ಮಕ್ಕಳ ಜನನ- ಯಾವ ದೇಶದಲ್ಲಿ ಎಷ್ಟು?

    ನವದೆಹಲಿ: 2021ರ ಶತಮಾನದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದ ಬೆನ್ನಲ್ಲೇ, ಹೊಸ ವರ್ಷದ ಮೊದಲ ದಿನದಂದು ಭಾರತದಲ್ಲಿ ಬರೋಬ್ಬರಿ 69,944 ಮಕ್ಕಳು ಜನಿಸಿದೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ (ಯುನಿಸೆಫ್) ತಿಳಿಸಿದೆ.

    ಹೊಸ ವರ್ಷದಂದು ಭಾರತದಲ್ಲಿ 69,944 ಮಗು ಜನಿಸಿದ್ದರೆ ಚೀನಾ 44,940 ಮಕ್ಕಳು ಜನಿಸಿವೆ. ನೈಜೀರಿಯಾ 25,685, ಪಾಕಿಸ್ತಾನ 15,112, ಇಂಡೋನೇಶಿಯಾ 13,256, ಅಮೆರಿಕ 1,086 ಹಾಗೂ ಬಾಂಗ್ಲಾದೇಶದಲ್ಲಿ 8,428 ಮಗು ಜನಿಸಿದೆ.

    ವಿಶ್ವಸಂಸ್ಥೆ ಮಾಹಿತಿ ಪ್ರಕಾರ ಪ್ರತಿದಿನ ವಿಶ್ವದಲ್ಲಿ ಅಂದಾಜು 3,95,072 ಮಕ್ಕಳ ಜನನವಾಗುತ್ತಿದ್ದು, ಈ ಪೈಕಿ ಅತಿ ಹೆಚ್ಚು ಶೇ.18 ರಷ್ಟು ಮಕ್ಕಳು ಭಾರತದಲ್ಲೇ ಜನಿಸುತ್ತಿವೆ ಎಂದು ಹೇಳಿದೆ.

    ಆರೋಗ್ಯದ ಸಮಸ್ಯೆಯಿಂದ ಕೆಲವು ಶಿಶುಗಳು ಒಂದು ವರ್ಷ ಕೂಡ ಬದುಕಲ್ಲ. ಕೆಲವು ಶಿಶುಗಳು ಒಂದು ದಿನದಲ್ಲೇ ಸಾವನ್ನಪ್ಪುತ್ತದೆ. ಹಾಗಾಗಿ ಡೆಲಿವರಿ ಸಮಯದಲ್ಲಿ ಪ್ರತಿ ಗಂಡು ಹಾಗೂ ಹೆಣ್ಣು ಮಗುವನ್ನು ಉಳಿಸಬೇಕೆಂದು ನಾವು ಈ ವರ್ಷ ರೆಸಲ್ಯೂಶನ್ ತೆಗೆದುಕೊಳ್ಳಬೇಕು ಎಂದು ಭಾರತದ ಯೂನಿಸೆಫ್ ಪ್ರತಿನಿಧಿ ಡಾ. ಯಾಸ್ಮಿನ್ ಅಲಿ ಹಕ್ ಹೇಳಿದ್ದಾರೆ.

    2017ರಲ್ಲಿ ಹುಟ್ಟಿದ ದಿನವೇ 10 ಲಕ್ಷ ಮಗು ಮೃತಪಟ್ಟಿತ್ತು. ಇನ್ನೂ ಹುಟ್ಟಿದ 1 ತಿಂಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಮಗು ಸಾವನ್ನಪ್ಪಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಶಿಶು ಮರಣದ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆ. ಶಿಶುಗಳ ಮರಣದ ಪ್ರಮಾಣವನ್ನು ಕಡಿಮೆ ಮಾಡುವುದು ಒಂದು ಸವಾಲಾಗಿದೆ ಎಂದು ಯಾಸ್ಮಿನ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿದ ಪುಟಾಣಿ ಜೀವಗಳು

    ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿದ ಪುಟಾಣಿ ಜೀವಗಳು

    ಬೆಂಗಳೂರು: ಹೊಸ ವರ್ಷದ ಸಂಭ್ರಮದ ಜೊತೆಗೆ ಪುಟಾಣಿ ಜೀವಗಳು ಅಮ್ಮಂದಿರ ಮಡಿಲಲ್ಲಿ ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿವೆ.

    ಹೊಸ ವರ್ಷದ ದಿನವೇ ಹುಟ್ಟಿದ ಮಕ್ಕಳ ಅಮ್ಮಂದಿರ ಸಂಭ್ರಮಕ್ಕೆ ಪಾರವೇ ಇಲ್ಲ. ಕೆಲವು ಕಂದಮ್ಮಗಳಂತೂ ಸರಿಯಾಗಿ ಮಧ್ಯರಾತ್ರಿ ಹನ್ನೆರಡು ಗಂಟೆಗೆ ಹುಟ್ಟಿದ್ದವು. ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮಧ್ಯರಾತ್ರಿಯಿಂದ ಮಧ್ಯಾಹ್ನದವರೆಗೆ ಹನ್ನೆರಡು ಗಂಟೆವರೆಗೂ ಒಟ್ಟು ಹದಿನಾರು ಹೆರಿಗೆಗಳಾಗಿದೆ.

    ಇಂದು ಸ್ವಾತಿ ನಕ್ಷತ್ರ ತುಲಾ ರಾಶಿ ಒಳ್ಳೆಯ ದಿನ ಎನ್ನುವುದು ಜ್ಯೋತಿಷ್ಯರ ನಂಬಿಕೆ ಆಗಿರುವುದರಿಂದ ಕಂದಮ್ಮಗಳ ಪೋಷಕರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಹೆಣ್ಣು ಮಗುವೇ ಹೆಚ್ಚು ಹುಟ್ಟಿದ್ದು ಹೊಸ ವರ್ಷದಂದು ಜನಿಸಿದ ಕಂದಮ್ಮಗಳಿಗೆ ಆಸ್ಪತ್ರೆ ಗಿಫ್ಟ್ ನೀಡಿ ದಂಪತಿಗೆ ಶುಭಾಶಯ ಹೇಳಿದೆ.

    ಇತ್ತೀಚಿನ ವರ್ಷಗಳಲ್ಲಿ ಹೊಸ ವರ್ಷಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ನವಮಾಸ ತುಂಬುತ್ತಿದ್ದ ಅಮ್ಮಂದಿರು ನ್ಯೂ ಇಯರ್ ಗೆ ಹೆರಿಗೆ ಮಾಡಿಸಲು ದುಂಬಾಲು ಬೀಳುತ್ತಿದ್ದಾರೆ. ಕೇವಲ ಹೊಸ ವರ್ಷ ಮಾತ್ರ ಅಲ್ಲದೇ ಈ ದಿನ ಹುಟ್ಟುವ ಮಗುವಿನ ಅದೃಷ್ಟವೇ ಬದಲಾಗುತ್ತದೆ ಎನ್ನುವ ನಂಬಿಕೆಯಿದೆ.

    ಫ್ಯಾನ್ಸಿ ನಂಬರ್ ಗಳ ಸೆಳೆತ, ಒಳ್ಳೆಯ ದಿನ ನೋಡಿಯೇ ಡೆಲಿವರಿ ಡೇಟ್ ಅಡ್ಜೆಸ್ಟ್ ಮೆಂಟ್ ಮಾಡುವ ಟ್ರೆಂಡ್ ಈಗ ಸಿಕ್ಕಾಪಟ್ಟೆ ಜೋರಾಗಿದೆ. ಅದರಲ್ಲೂ ಹೆರಿಗೆಗೆ ಅಸುಪಾಸಿನಲ್ಲಿರುವವರು ಹೊಸ ವರ್ಷ ಜನವರಿ ಒಂದರಂದು ಡೆಲಿವರಿ ಮಾಡಿಸಲು ವೈದ್ಯರಿಗೆ ಬೇಡಿಕೆ ಇಡುತ್ತಿದ್ದಾರೆ. ರಿಸ್ಕಿ ಇಲ್ಲದ ಡೆಲಿವರಿಗಳನ್ನು ಅವರ ಇಷ್ಟದ ದಿನವೇ ಮಾಡಬಹುದು. ಆದರೆ ಸ್ವಾಭಾವಿಕವಾಗಿ ಹೆರಿಗೆ ನೋವು ಬಂದಾಗ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಈ ಹಿಂದೆ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 9 ತಿಂಗಳ ತುಂಬು ಗರ್ಭಿಣಿ ಆತ್ಮಹತ್ಯೆ- ಕರುಳಬಳ್ಳಿ ಜೊತೆ ಜೀವಂತವಾಗಿ ನೇತಾಡುತ್ತಿದ್ದ ಮಗು ರಕ್ಷಣೆ

    9 ತಿಂಗಳ ತುಂಬು ಗರ್ಭಿಣಿ ಆತ್ಮಹತ್ಯೆ- ಕರುಳಬಳ್ಳಿ ಜೊತೆ ಜೀವಂತವಾಗಿ ನೇತಾಡುತ್ತಿದ್ದ ಮಗು ರಕ್ಷಣೆ

    ಭೋಪಾಲ್: 9 ತಿಂಗಳ ತುಂಬು ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಾಗ ಆಕೆಯ ಹೊಟ್ಟೆಯಿಂದ ಕರುಳಬಳ್ಳಿಯೊಂದಿಗೆ ಜಾರಿ ನೇತಾಡುತ್ತಿದ್ದ ಮಗುವನ್ನು ರಕ್ಷಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಲಕ್ಷ್ಮಿ ಠಾಕೂರ್(36) ಆತ್ಮಹತ್ಯೆ ಮಾಡಿಕೊಂಡ ತುಂಬು ಗರ್ಭಿಣಿ. ಲಕ್ಷ್ಮಿ 9 ತಿಂಗಳು ಗರ್ಭಿಣಿಯಾಗಿದ್ದು, ಈಗಾಗಲೇ ಆಕೆಗೆ 4 ಮಕ್ಕಳಿದ್ದರು. ಲಕ್ಷ್ಮಿ ಗುರುವಾರ ಬೆಳಗ್ಗೆ 6.30ಕ್ಕೆ ತನ್ನ ಮನೆಯ ಬಳಿಯಿದ್ದ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾಗ ಗಂಡು ಮಗು ಕರುಳಬಳ್ಳಿ ಸಮೇತ ಲಕ್ಷ್ಮಿ ಕಾಲಿನ ಮಧ್ಯೆ ಸೀರೆಯಲ್ಲಿ ಜೀವಂತವಾಗಿ ನೇತಾಡುತ್ತಿತ್ತು.

    ಈ ಘಟನೆ ಬಗ್ಗೆ ನಮಗೆ ಮಾಹಿತಿ ಬಂದಾಗ ನಾವು ಮೊದಲು ಸ್ಥಳಕ್ಕೆ ಭೇಟಿ ನೀಡಿದ್ದೇವು. ವೈದ್ಯರು ಬರುವವರೆಗೂ ನೇತಾಡುತ್ತಿದ್ದ ಗಂಡು ಮಗುವನ್ನು ಕ್ಲೀನ್ ಮಾಡಿ ಅದನ್ನು ಬೆಚ್ಚಗಿರಿಸಿದ್ದೇವು. ನಂತರ ವೈದ್ಯರು ಬಂದು ಮಗುವನ್ನು ತಾಯಿಯ ಕರುಳಬಳ್ಳಿಯಿಂದ ಬೇರ್ಪಡಿಸಿದ್ದಾರೆ. ಸದ್ಯ ಮಗುವನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಬದುಕುಳಿಯುವ ಎಲ್ಲ ಸಾಧ್ಯತೆ ಇದೆ ಎಂದು ಎಸ್‍ಐ ಕವಿತಾ ಸಹ್ನಿ ಹೇಳಿದ್ದಾರೆ.

    ತುಂಬು ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗುರುವಾರ ಬೆಳಗ್ಗೆ 7.13 ಕರೆ ಬಂತು. ನಾವು ಆಕೆಯ ಮೃತದೇಹವನ್ನು ಪರಿಶೀಲಿಸಲು ಹೋಗಿದ್ದಾಗ ಆಕೆಯ ಸೀರೆಯಲ್ಲಿ ಮಗು ನೇತಾಡುತ್ತಿರುವುದು ಕಾಣಿಸಿತು. ಆಗ ವೈದ್ಯರನ್ನು ಕರೆಸಿ ಕರುಳ ಬಳ್ಳಿಯನ್ನು ಕತ್ತರಿಸಿ ಮಗುವನ್ನು ತಾಯಿಯನ್ನು ಪ್ರತ್ಯೇಕಿಸಲಾಯಿತು. ಮಗುವನ್ನು ತೆಗೆದ ಬಳಿಕ ಲಕ್ಷ್ಮಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದರು.

    ಇದು ಒಂದು ದುರಾದೃಷ್ಟಕರ ಘಟನೆ. ಮಹಿಳೆಯನ್ನು ಜೀವಂತವಾಗಿ ಉಳಿಸಲು ಸಾಧ್ಯವಾಗಿಲ್ಲ. ಆದರೆ ಮಗುವನ್ನು ರಕ್ಷಿಸಿದ್ದೇವೆ. ಮಗು ಬದುಕಲಿ ಎಂದು ಬೇಡಿಕೊಳ್ಳುತ್ತಿದ್ದೇವು. ಸರಿಯಾದ ಸಮಯಕ್ಕೆ ನಮಗೆ ಕರೆ ಮಾಡಿದ್ದಕ್ಕೆ ಮಗು ಬದುಕುಳಿದಿದೆ, ಇಲ್ಲದಿದ್ದರೆ ಮಗು ಕೂಡ ಮೃತಪಡುತ್ತಿತ್ತು ಎಂದು ವೈದ್ಯರು ತಿಳಿಸಿದರು. ತಾಯಿ ಮೃತಪಟ್ಟರೂ ಮಗು ಜೀವಂತವಾಗಿರುವುದನ್ನು ನೋಡಿದರೆ ಇದೊಂದು ಪವಾಡವೇ ಎಂದು ಎನ್ನಿಸುತ್ತದೆ ಎಂದು ಕವಿತಾ ಹೇಳಿದರು.

    ಲಕ್ಷ್ಮಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನನ್ನ ಹಾಗೂ ಲಕ್ಷ್ಮಿ ನಡುವೆ ಯಾವುದೇ ಜಗಳ ಇರಲಿಲ್ಲ. ಇಬ್ಬರು ಬುಧವಾರ 9 ಗಂಟೆವರೆಗೂ ಟಿವಿ ನೋಡಿ ಮಲಗಲು ಹೋಗಿದ್ದೇವು. ಗುರುವಾರ ಬೆಳಗ್ಗೆ 6 ಗಂಟೆಗೆ ನಾನು ಎದ್ದಾಗ ಲಕ್ಷ್ಮಿ ಎಲ್ಲಿಯೂ ಕಾಣಿಸಲಿಲ್ಲ. ಆಕೆಯನ್ನು ಹುಡುಕುತ್ತಿದ್ದಾಗ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕೂಡಲೇ ನಾನು ಸ್ಥಳೀಯ ನಿವಾಸಿಗಳಿಗೆ ತಿಳಿಸಿದೆ ಎಂದು ಪತಿ ಸಂತೋಷ್ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾರೆ.

    ಮಹಿಳೆ ನೇಣಿಗೆ ಶರಣಾಗುವ ಮೊದಲು ಅಥವಾ ನಂತರ ಮಗು ಜನಿಸಿರುವುದು ಇದು ಮೊದಲ ಪ್ರಕರಣ ಎಂದು ವೈದ್ಯಕೀಯ ಲೋಕದಲ್ಲಿ ಹೇಳಲಾಗುತ್ತಿದೆ. ಲಕ್ಷ್ಮಿ ಆತ್ಮಹತ್ಯೆ ಹಾಗೂ ಡೆಲಿವರಿಯಾದ ಮಗುವಿನ ಬಗ್ಗೆ ಸಮಯ ಸರಿಯಾಗಿ ಗೊತ್ತಿಲ್ಲ. ಮಹಿಳೆ ನೇಣಿಗೆ ಶರಣಾದ ಹಿನ್ನಲೆಯಲ್ಲಿ ಮಗು ಜನಿಸಿರಬಹುದು ಪೊಲೀಸರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ- ಒಂದು ಕಡೆ ಖುಷಿಯಾದರೆ, ಮತ್ತೊಂದೆಡೆ ಬೇಸರ

    ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ- ಒಂದು ಕಡೆ ಖುಷಿಯಾದರೆ, ಮತ್ತೊಂದೆಡೆ ಬೇಸರ

    ಕೊಪ್ಪಳ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಗಂಗಾವತಿ ತಾಲೂಕಿನ ವಿಠಲಾಪುರದ ಗ್ರಾಮದ ರತ್ನಮ್ಮ ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈಗ ತಾಯಿ ಹಾಗೂ ಮೂರು ಮಕ್ಕಳು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ರತ್ನಮ್ಮ ಅವರು ಈ ಮೊದಲು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

    ಈ ಮೊದಲು ರತ್ನಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇದೀಗ ಮತ್ತೆ ಮೂರು ತ್ರಿವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಟ್ಟು ನಾಲ್ಕು ಜನ ಹೆಣ್ಣು ಮಕ್ಕಳನ್ನು ಪಡೆದಿರುವ ರತ್ನಮ್ಮ ಅವರಿಗೆ ಒಂದು ಕಡೆ ಖುಷಿಯಾದರೆ, ಮತ್ತೊಂದೆಡೆ ಕಡುಬಡತನಕ್ಕೆ ಮಕ್ಕಳನ್ನು ಸಾಕುವುದು ಕಷ್ಟ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನ

    ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನ

    ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನವಾಗಿದೆ. ನಗರದ ರಾಜೇಶ್ವರಿ ಈ ಭಾರೀ ತೂಕದ ಮಗುವಿಗೆ ಜನ್ಮ ನೀಡಿದ ತಾಯಿ.

    ರಾಜೇಶ್ವರಿ ತಿಲಕ್ ನಗರದ ನಿವಾಸಿ ಸಿದ್ದರಾಜು ಅವರ ಪತ್ನಿಯಾಗಿದ್ದು, ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಪರೂಪದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ತೂಕ ಜಾಸ್ತಿಯಿದ್ದ ಕಾರಣ ಸಿಸೇರಿಯನ್ ಮೂಲಕ ವೈದ್ಯಾಧಿಕಾರಿಗಳು ಹೊರತೆಗೆದಿದ್ದಾರೆ. ಇದನ್ನೂ ಓದಿ: ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಯಾಕೆ ಮಾಡ್ತಾರೆ? ಕಾರಣಗಳೇನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದೇ ಬಾರಿಗೆ ಮೂರು ಮರಿಗಳಿಗೆ ಜನ್ಮ ನೀಡಿದ ಕುರಿ

    ಒಂದೇ ಬಾರಿಗೆ ಮೂರು ಮರಿಗಳಿಗೆ ಜನ್ಮ ನೀಡಿದ ಕುರಿ

    ಮಂಡ್ಯ: ಕುರಿ ಸಾಧಾರಣವಾಗಿ ಒಂದು ಮರಿಗೆ ಅಥವಾ ಹೆಚ್ಚು ಅಂದರೆ ಎರಡು ಮರಿಗಳಿಗೆ ಜನ್ಮ ನೀಡುತ್ತದೆ. ಆದರೆ ಮಂಡ್ಯದ ರೈತರೊಬ್ಬರ ಮನೆಯಲ್ಲಿ ಕುರಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿ ಸುದ್ದಿಯಾಗಿದೆ.

    ಜಿಲ್ಲೆಯ ಮದ್ದೂರು ತಾಲೂಕಿನ, ತರಮನಕಟ್ಟೆ ಗ್ರಾಮದ ರೈತ ರಮೇಶ್ ಎಂಬವರ ಮನೆಯಲ್ಲಿ ಕುರಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ರಮೇಶ್ ಮನೆಯವರು ಸುಮಾರು 50 ವರ್ಷಗಳಿಂದ ಕುರಿ ಸಾಕಾಣಿಕೆ ಮಾಡುತ್ತಿದ್ದಾರೆ.

    ರಮೇಶ್ ತಮ್ಮ ಮನೆಯಲ್ಲಿ ಸುಮಾರು 60 ಕುರಿಗಳನ್ನು ಸಾಕಿದ್ದಾರೆ. ಕಳೆದ ಐವತ್ತು ವರ್ಷಗಳಲ್ಲಿ ಅವರ ಕುರಿಗಳು ಒಮ್ಮೆಯೂ ಒಮ್ಮೆಲೆ ಮೂರು ಮರಿಗಳಿಗೆ ಜನ್ಮ ನೀಡಿಲ್ಲ. ಅಷ್ಟೇ ಅಲ್ಲದೇ ಸಹಜವಾಗಿ ಕುರಿಗಳು ಒಮ್ಮೆಗೆ ಒಂದು ಅಥವಾ ಎರಡು ಮರಿಗಳಿಗೆ ಜನ್ಮ ನೀಡುತ್ತವೆ.

    ಇದೀಗ ಒಮ್ಮೆಗೆ ಮೂರು ಮರಿಗಳಿಗೆ ಜನ್ಮ ನೀಡಿರುವುದರಿಂದ ರೈತ ರಮೇಶ್ ಕುಟುಂಬ ಸಂತಸ ವ್ಯಕ್ತಪಡಿಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದ ಮಹಾತಾಯಿ!

    21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದ ಮಹಾತಾಯಿ!

    ಲಂಡನ್: ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ.

    ಸ್ಯೂ ರಾಡ್ಫೋರ್ಡ್ 21ನೇ ಮಗುವಿಗೆ ಜನ್ಮ ನೀಡಿದ ಮಹಿಳೆ. 20 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ ಕುಟುಂಬ. ಸದ್ಯ ಈ ಕುಟುಂಬಕ್ಕೆ 21ನೇ ಸದಸ್ಯ ಎಂಟ್ರಿ ನೀಡಿದ್ದು, ರಾಡ್ಫೋರ್ಡ್ ಇದು ಲಾಸ್ಟ್ ಮಗು ಎಂದು ತಿಳಿಸಿದ್ದಾರೆ.

    ರಾಡ್ಫೋರ್ಡ್ ನ.6ರಂದು ತನ್ನ 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾರೆ. ಬೋನಿ ಜನ್ಮದಿಂದ ಈಗ ನನ್ನ ಕುಟುಂಬದಲ್ಲಿ 23 ಮಂದಿ ಆಗಿದ್ದಾರೆ. ಸದ್ಯ ನಾನು ಹಾಗೂ ನನ್ನ ಪತಿ ಇನ್ನು ಮಗು ಬೇಡ ಎಂದು ನಿರ್ಧರಿಸಿದ್ದೇವೆ. ಬೋನಿ ನಮ್ಮ ಕುಟುಂಬವನ್ನು ಕಂಪ್ಲೀಟ್ ಮಾಡಿದ್ದಾಳೆ ಎಂದು ಹೇಳಿ ಸಂಭ್ರಮಿಸಿದ್ದಾರೆ.

    ನಾವು ಎರಡು ಅಥವಾ ಮೂರು ಮಗುವನ್ನು ಪಡೆಯಲು ಮಾತ್ರ ನಿರ್ಧರಿಸಿದ್ದೇವು. ಆದರೆ ನಾವು ಈಗ 21 ಮಗುವನ್ನು ಪಡೆದಿದ್ದೇವೆ. ನನ್ನ ಎಲ್ಲ ಮಕ್ಕಳು ತಮ್ಮ ಮೂರು ದಶಕದ ಕಿರಿಯ ಸಹೋದರಿಯನ್ನು ನೋಡಲು ನನ್ನ ಎಲ್ಲ ಮಕ್ಕಳು ಖುಷಿಯಾಗಿದ್ದಾರೆ ಎಂದು ರಾಡ್ಫೋರ್ಡ್ ಹೇಳಿದ್ದಾರೆ.

    ತಮ್ಮ ಸಹೋದರಿಯನ್ನು ನೋಡಲು ಎಲ್ಲರೂ ಜಗಳವಾಡಿದರು. ನಂತರ ನಾವು ಮಗುವನ್ನು ಮನೆಗೆ ಕರೆದುಕೊಂಡು ಬಂದಾಗ ಎಲ್ಲರೂ ಮಗುವನ್ನು ನೋಡಲು ಸರದಿಯಲ್ಲಿ ನಿಂತಿದ್ದರು. ನಾವು ಮೂರು ಮಕ್ಕಳು ಪಡೆಯಲು ನಿರ್ಧರಿಸಿದ್ದೇವು. ರಾಡ್ಫೋರ್ಡ್ ಒಂಬತ್ತನೇ ಮಗುವಿಗೆ ಜನ್ಮ ನೀಡಿದ ನಂತರ ಕೆಲವು ವರ್ಷಗಳ ಹಿಂದೆ ನಾನು ಸಂತಾನಹರಣ ಮಾಡಿಸಲು ನಿರ್ಧರಿಸಿದೆ. ಆದರೆ ನನಗೆ ತಂದೆಯಾಗುವ ಬಯಕೆಯಿತ್ತು. ಹಾಗಾಗಿ ನಾನು ಈ ನಿರ್ಧಾರದಿಂದ ಹಿಂದೆ ಸರಿದೆ ಎಂದು ರಾಡ್ಫೋರ್ಡ್ ಪತಿ ತಿಳಿಸಿದ್ದಾರೆ.

    ರಾಡ್ಫೋರ್ಡ್ ಹಾಗೂ ಆಕೆಯ ಪತಿ ಮೋರ್ ಕ್ಯಾಂಬೇಯಲ್ಲಿ ಮಕ್ಕಳ ಸಹಾಯದಲ್ಲಿ ಬೇಕರಿ ನಡೆಸುತ್ತಿದ್ದಾರೆ. ನಾನು ಮತ್ತೆ ಗರ್ಭಿಣಿಯಾಗುವುದನ್ನು ಮಿಸ್ ಮಾಡುತ್ತೇನೆ ಎಂದಿದ್ದಾರೆ. ಸದ್ಯ ರಾಡ್ಫೋರ್ಡ್ 7ನೇ ವಯಸ್ಸಿನಲ್ಲಿದ್ದಾಗ ತನ್ನ ಪತಿ ನಿಯೋಲ್‍ಯನ್ನು ಭೇಟಿಯಾಗಿದ್ದರು. 14ನೇ ವಯಸ್ಸಿಗೆ ರಾಡ್ಫೋರ್ಡ್ ಮೊದಲನೇ ಗಂಡು ಮಗುವಿಗೆ ಜನ್ಮ ನೀಡಿದ್ದು ಆತನಿಗೆ ಈಗ 29 ವರ್ಷ. ರಾಡ್ಫೋರ್ಡ್ ತನ್ನ ಜೀವನದಲ್ಲಿ ಒಟ್ಟು 800 ವಾರ ಗರ್ಭಿಣಿಯಾಗಿದ್ದರು.

    ಕ್ರಿಸ್, ಸೋಫಿ, ಕ್ಲೋಯ್, ಜ್ಯಾಕ್, ಡೇನಿಯಲ್, ಲ್ಯೂಕ್, ಮಿಲ್ಲಿ, ಕೇಟೀ, ಜೇಮ್ಸ್, ಎಲ್ಲೀ, ಐಮೀ, ಜೋಶ್, ಮ್ಯಾಕ್ಸ್, ಟೆಲ್ಲೀ, ಆಸ್ಕರ್, ಕ್ಯಾಸ್ಪರ್, ಹ್ಯಾಲೀ, ಫೋಬೆ ಮತ್ತು ಆರ್ಚೀ ಅವರ ಮಕ್ಕಳ ಹೆಸರಾಗಿದ್ದು, ಸೋಫಿ ಮೂರು ಮಕ್ಕಳ ತಾಯಿ. ಸದ್ಯ ರಾಡ್ಫೋರ್ಡ್ ಈಗ ಅಜ್ಜಿ ಆಗಿದ್ದಾರೆ. ರಾಡ್ಫೋರ್ಡ್ ಡೆಲಿವರಿಗೆ ಆಸ್ಪತ್ರೆಗೆ ಹೋದಾಗ, ಮುಂದಿನ ವರ್ಷ ಬರುತ್ತೀರಾ ಎಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ಇಲ್ಲವೆಂದು ಉತ್ತರಿಸಿದ್ದರು. ಆದರೆ ಹಿಂದಿನ ವರ್ಷ 20ನೇ ಮಗು ಜನಿಸಿದಾಗ ಕೂಡ ರಾಡ್ಫೋರ್ಡ್ ಇದೇ ಉತ್ತರ ನೀಡಿದ್ದರು ಎಂದು ವರದಿಯಾಗಿದೆ.

     

    View this post on Instagram

     

    This is what breakfast time looks like well one table anyway ????????

    A post shared by Radford Family (@theradfordfamily) on

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

    ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

    ವಾಷಿಂಗ್ಟನ್: ವಲಸೆ ವಿಚಾರದಲ್ಲಿ ಕಠಿಣ ನಿಯಮವನ್ನು ರೂಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ. ಅಮೆರಿಕದಲ್ಲೇ ಜನಿಸುವ ಮಕ್ಕಳಿಗೆ ಸ್ವಾಭಾವಿಕವಾಗಿ ಸಿಗುತ್ತಿದ್ದ ಪೌರತ್ವ ನೀತಿಯನ್ನು ರದ್ದುಗೊಳಿಸಲು ಟ್ರಂಪ್ ಚಿಂತನೆ ನಡೆಸಿದ್ದಾರೆ.

    ಪ್ರಸ್ತುತ ಅಮೆರಿಕ ಕಾನೂನು ಪ್ರಕಾರ, ಯಾವುದೇ ದೇಶದ ದಂಪತಿಗೆ ಅಮೆರಿಕದಲ್ಲೇ ಮಗು ಜನನವಾದರೆ ಆ ಮಗು ಸಹಜವಾಗಿಯೇ ಅಮೆರಿಕದ ಪೌರತ್ವಕ್ಕೆ ಅರ್ಹವಾಗಿರುತ್ತದೆ. ಅಷ್ಟೇ ಅಲ್ಲದೇ ಅಮೆರಿಕದ ಮಕ್ಕಳಿಗೆ ಸಿಗುವ ಎಲ್ಲ ಸೌಲಭ್ಯಗಳು ಆ ಮಗುವಿಗೆ ಸಿಗುತ್ತದೆ. ಈ ಕಾನೂನನ್ನೇ ರದ್ದು ಪಡಿಸಲು ಟ್ರಂಪ್ ಮುಂದಾಗಿದ್ದಾರೆ.

    ಸೋಮವಾರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಟ್ರಂಪ್ ತನ್ನ ಮುಂದಿನ ಈ ನಿರ್ಧಾರ ಬಗ್ಗೆ ತಿಳಿಸಿದ್ದು ವಿಶ್ವದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇಡೀ ವಿಶ್ವದಲ್ಲಿಯೇ ಅಮೆರಿಕ ಮಾತ್ರ ಈ ರೀತಿ ಪೌರತ್ವ ನೀಡುತ್ತದೆ. ಇದು ಹಾಸ್ಯಾಸ್ಪದ ಮತ್ತು ಅಸಂಬದ್ಧ. ಇದು ಕೊನೆಯಾಗಲೇಬೇಕು. ನಾನೇ ಇದಕ್ಕೆ ಇತಿಶ್ರೀ ಹಾಡುತ್ತೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.

    ಈಗಾಗಲೇ ಕಾಯ್ದೆಯನ್ನು ರದ್ದುಪಡಿಸುವ ಕೆಲಸ ಆರಂಭವಾಗಿದೆ. ನಾನು ಸಹಿ ಹಾಕಿಯೇ ಹಾಕುತ್ತೇನೆ. ಮುಂದೆ ಈ ಆದೇಶ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಟ್ರಂಪ್ ಗುಡುಗಿದ್ದಾರೆ.

    ತಾತ್ಕಾಲಿಕ ವೀಸಾ, ಟ್ರಾವೆಲ್ ವೀಸಾದಲ್ಲಿ ಬಂದಿರುವವರು, ಅಕ್ರಮವಾಗಿ ನೆಲೆಸಿರುವ ದಂಪತಿಗೆ ಮಗುವಾದರೆ ಹಾಲಿ ಕಾನೂನಿನ ಪ್ರಕಾರ ಅಮೆರಿಕದ ಜನ್ಮ ಪ್ರಮಾಣಪತ್ರ ದೊರೆಯುತ್ತದೆ. ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರ ಮಕ್ಕಳು ಈಗಾಗಲೇ ಅಮೆರಿಕದ ಪೌರತ್ವ ಪಡೆದುಕೊಂಡಿದ್ದಾರೆ.

    ಕೆಲ ದಂಪತಿ ಮಗುವಿಗೆ ಪೌರತ್ವ ಸಿಗಲೆಂದೇ ಅಮೆರಿಕಕ್ಕೆ ಬರುತ್ತಾರೆ. ಇಲ್ಲೇ ಹೆರಿಗೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾಯ್ದೆಯ ದುರುಪಯೋಗವನ್ನು ತಡೆಗಟ್ಟಲು ಟ್ರಂಪ್ ಕಾನೂನನ್ನು ರದ್ದು ಮಾಡಲು ಮುಂದಾಗಿದ್ದಾರೆ. ಈ ಕಾನೂನು ತಿದ್ದುಪಡಿ ಮಾಡಬೇಕಾದರೆ ಅಷ್ಟು ಸುಲಭವಲ್ಲ. ಜನ ಪ್ರತಿನಿಧಿಗಳಿಂದ ವಿರೋಧ ವ್ಯಕ್ತವಾಗಿ ಸರ್ಕಾರ ಭಾರೀ ಕಾನೂನು ಹೋರಾಟ ನಡೆಸಬೇಕಾದಿತು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಹಸು

    ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಹಸು

    – ಪಂಚಾಯ್ತಿ ಅಧ್ಯಕ್ಷರಿಂದ ಸಹಾಯಧನ

    ಬೆಂಗಳೂರು: ಅಪರೂಪದ ಅವಳಿ ಹೆಣ್ಣು ಕರುಗಳಿಗೆ ಗೋವೊಂದು ಜನ್ಮ ನೀಡಿದ್ದು, ಇದೀಗ ಸುತ್ತಮುತ್ತಲ ಜನರ ಆಕರ್ಷಣೆಗೆ ಕಾರಣವಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಈ ವಿಸ್ಮಯ ನಡೆದಿದೆ. ಗ್ರಾಮದ ನರಸಮ್ಮ ಎಂಬವರಿಗೆ ಸೇರಿದ ಹಸು ಎರಡು ಹೆಣ್ಣು ಕರುಗಳಿಗೆ ಜನ್ಮ ನೀಡಿ ಸೋಜಿಗಕ್ಕೆ ಕಾರಣವಾಗಿದೆ.

    ವೈಜ್ಞಾನಿಕವಾಗಿ ವರ್ಣತಂತುಗಳು ಡೈಜೈಗೋಟಿಕ್ ಪ್ರಕ್ರಿಯೆಯಾದಾಗ ಈ ರೀತಿಯ ಎರಡು ಕರುಗಳು ಜನ್ಮ ತಾಳುತ್ತವೆ. ಅಪರೂಪದ ಹಸು ಕರುಗಳನ್ನು ನೋಡಲು ಸುತ್ತ-ಮುತ್ತಲಿನ ಗ್ರಾಮಗಳ ಹಲವಾರು ಮಂದಿ ಆಗಮಿಸಿ ವೀಕ್ಷಿಸುತ್ತಿದ್ದಾರೆ.

    ಸ್ಥಳೀಯ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಸು ಸಾಕಿದ ನರಸಮ್ಮಳಿಗೆ ಉಡುಗೊರೆ ಹಾಗೂ ಕರುಗಳ ಪೋಷಣೆಗಾಗಿ ಸಹಾಯ ಧನ ನೀಡಿ ಮಾನವೀಯತೆಗೆ ಮುಂದಾಗಿದ್ದಾರೆ. ಅಪರೂಪದ ಹಸು ಕರುಗಳು ವಿಜ್ಞಾನಕ್ಕೆ ವಿಸ್ಮಯವಾಗಿದ್ದು, ಹಸು ಹಾಗೂ ಕರುಗಳೆರಡೂ ಆರೋಗ್ಯವಾಗಿವೆ ಎಂದು ನರಸಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎರಡನೇ ಮಗುವಿಗೆ ಜನ್ಮ ನೀಡಿದ್ರು ಹೇಮಾ ಪಂಚಮುಖಿ

    ಎರಡನೇ ಮಗುವಿಗೆ ಜನ್ಮ ನೀಡಿದ್ರು ಹೇಮಾ ಪಂಚಮುಖಿ

    ಬೆಂಗಳೂರು: ‘ಅಮೆರಿಕಾ ಅಮೆರಿಕಾ’ ಚಿತ್ರದಿಂದ ನಾಯಕಿಯಾಗಿ ಗುರುತಿಸಿಕೊಂಡ ನಟಿ ಹೇಮಾ ಪಂಚಮುಖಿ ಗುರುವಾರ ಎರಡನೇ ಮಗುವಿಗೆ ಜನ್ಮ ನೀಡಿದರು.

    ಹೇಮಾ ಕೆಲವು ತಿಂಗಳ ಹಿಂದೆ ತಮ್ಮ ಮನೆಯವರ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಸೀಮಂತ ಮಾಡಿಕೊಂಡಿದ್ದರು. ಆದರೆ ಗುರುವಾರ ಅಂದರೆ ಸೆಪ್ಟೆಂಬರ್ 6ರಂದು ಹೇಮಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈ ವಿಷಯವನ್ನು ಹೇಮಾ ಹಾಗೂ ಅವರ ಪತಿ ಪ್ರಶಾಂತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ನಟಿ ಹೇಮಾ ಅವರಿಗೆ ಈಗಾಗಲೇ ಒಬ್ಬಳು ಮಗಳಿದ್ದಾರೆ. ಹೇಮಾ ಭರತನಾಟ್ಯ ಅಭಿನೇತ್ರಿಯಾಗಿದ್ದು, ಅವರ ಮಗಳು ಕೂಡ ವಿದ್ಯಾಭ್ಯಾಸದ ಜೊತೆ ಭರತನಾಟ್ಯ ಕೂಡ ಕಲಿಯುತ್ತಿದ್ದಾಳೆ. ಅಲದೇ ಆಕೆ ಚಿಕ್ಕ ವಯಸ್ಸಿನಿಂದಲೂ ತನ್ನ ತಾಯಿಯ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ.

    ಹೇಮಾ ‘ರಂಗೋಲಿ’ ಚಿತ್ರದ ನಟ ಪ್ರಶಾಂತ್ ಗೋಪಾಲ್ ಅವರ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದರು. ಸದ್ಯ ಹೇಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿಷಯ ತಿಳಿದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆ ತಿಳಿಸುತ್ತಿದ್ದಾರೆ.

    ಹೇಮಾ ಅಮೆರಿಕಾ ಅಮೆರಿಕಾ, ದೊರೆ, ಸಂಭ್ರಮ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ಚಿತ್ರರಂಗದಿಂದ ದೂರ ಉಳಿದಿರುವ ಹೇಮಾ ಹಾಗೂ ಅವರ ಪತಿ ಪ್ರಶಾಂತ್ ನಾಟ್ಯ ಶಾಲೆ ಮೂಲಕ ಮಕ್ಕಳಿಗೆ ನೃತ್ಯ ಹೇಳಿಕೊಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv