Tag: birthday

  • ಪ್ರೇಮ್@49 – ಕೇಕ್ ಕತ್ತರಿಸಿ ಸಂಭ್ರಮಿಸಿದ ಕೆಡಿ ಡೈರೆಕ್ಟರ್

    ಪ್ರೇಮ್@49 – ಕೇಕ್ ಕತ್ತರಿಸಿ ಸಂಭ್ರಮಿಸಿದ ಕೆಡಿ ಡೈರೆಕ್ಟರ್

    ಹ್ಯಾಟ್ರಿಕ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿರುವ ನಿರ್ದೇಶಕ ಪ್ರೇಮ್ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ 49ನೇ ವರ್ಷದ ಹುಟ್ಟುಹಬ್ಬವನ್ನ ತಮ್ಮ ಕುಟುಂಬ ಹಾಗೂ ಆಪ್ತ ಬಳಗದ ಜೊತೆ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ, ದೀಪಾವಳಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಒಂದು ಕಡೆ ಹುಟ್ಟುಹಬ್ಬ ಹಾಗೂ ದೀಪಾವಳಿ ಸಂಭ್ರಮವನ್ನ ಒಟ್ಟೊಟ್ಟಿಗೆ ಮಾಡಿದ್ದಾರೆ.

    ಮಂಗಳವಾರ ರಾತ್ರಿ ಆಪ್ತರೊಡನೆ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸದ್ಯ ಕೆಡಿ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿರುವ ಪ್ರೇಮ್ ತಮ್ಮ ಅಭಿಮಾನಿಗಳಿಗೆ ಹಾಗೂ ಆಪ್ತ ವಲಯಕ್ಕೆ ಮನೆ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು.

    ಧ್ರುವ ಸರ್ಜಾ ಜೊತೆಗಿನ ಪ್ಯಾನ್ ಇಂಡಿಯಾ ಕೆಡಿ ಸಿನಿಮಾ ಟೀಸರ್ ಹಾಗೂ ಸಾಂಗ್ ಮೂಲಕ ಸದ್ದು ಮಾಡುತ್ತಿದೆ. ಈ ಸಿನಿಮಾವನ್ನ ಸದ್ಯದಲ್ಲಿಯೇ ತೆರೆಗೆ ತರುವ ನಿಟ್ಟಿನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರ ಮಧ್ಯೆ ಆಪ್ತರು ಹಾಗೂ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

  • ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ

    ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ

    ರ್ನಾಟಕ ರತ್ನ ಡಾ.ವಿಷ್ಣುವರ್ಧನ್ (Dr.Vishnuvardhan) ಅವರ 75ನೇ ಹುಟ್ಟುಹಬ್ಬ ಆಚರಿಸಲು ಸಜ್ಜಾಗಿರುವ ಫ್ಯಾನ್ಸ್‌ಗೆ ಖುಷಿ ಸುದ್ದಿ ಸಿಕ್ಕಿದೆ. ವಿಷ್ಣು ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ (Abhiman Studio) ಅಕ್ಕಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆಗೆ ಕೊನೆಗೂ ಪೊಲೀಸರು ಅನುಮತಿ ಕೊಟ್ಟಿದ್ದಾರೆ.

    ಸಮಾಧಿ ಜಾಗ ವಿವಾದ ಕೋರ್ಟ್‌ನಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬೆಳಗ್ಗೆ ಪೊಲೀಸರು ಅನುಮತಿ ಕೊಡಲು ನಿರಾಕರಿಸಿದ್ದರು. ಈ ಸಂಬಂಧ ಡಾ. ವಿಷ್ಣುಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಡಿಸಿಪಿ ಅನಿತಾರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಸಂಜೆ ಹೊತ್ತಿಗೆ ಷರತ್ತು ಬದ್ಧ ಅನುಮತಿ ಕೊಟ್ಟಿದ್ದು, ಅಭಿಮಾನ್ ಸ್ಟುಡಿಯೋ ಬಳಿ ಯಾರೂ ಹೋಗದೇ ನಿಗದಿ ಮಾಡಿರುವ ಜಾಗದಲ್ಲೇ ಸಂಭ್ರಮಾಚರಣೆ ಮಾಡುವಂತೆ ಡಿಸಿಪಿ ಸೂಚಿಸಿದ್ದಾರೆ.

    ಡಿಸಿಪಿ ಒಪ್ಪಿಗೆಯ ಬೆನ್ನಲ್ಲೇ ಅಭಿಮಾನ ಸ್ಟುಡಿಯೋಗೆ 200 ಮೀಟರ್ ಅಂತರದಲ್ಲಿ 2 ಎಕರೆ ಜಾಗ ಬಾಡಿಗೆ ಪಡೆದು ವಿಷ್ಣು ಹುಟ್ಟುಹಬ್ಬ ಆಚರಣೆಗೆ ಫ್ಯಾನ್ಸ್ ಸಿದ್ಧತೆ ನಡೆಸಿದ್ದಾರೆ. ರಕ್ತದಾನ, ಅನ್ನದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

  • ಬರ್ತ್‌ಡೇ ಪಾರ್ಟಿಗೆ ಕರೆದೊಯ್ದು ಪರಿಚಯಸ್ಥರಿಂದಲೆ ಮಹಿಳೆಯ ಗ್ಯಾಂಗ್‌ ರೇಪ್‌

    ಬರ್ತ್‌ಡೇ ಪಾರ್ಟಿಗೆ ಕರೆದೊಯ್ದು ಪರಿಚಯಸ್ಥರಿಂದಲೆ ಮಹಿಳೆಯ ಗ್ಯಾಂಗ್‌ ರೇಪ್‌

    ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ (Birthday) ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ (Gang-Rape) ಎಸಗಿರುವುದು ಕೋಲ್ಕತ್ತಾದಲ್ಲಿ (Kolkata) ನಡೆದಿದೆ.

    ಶುಕ್ರವಾರ ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    ಹರಿದೇವ್‌ಪುರದ ಮಹಿಳೆಯನ್ನು ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಚಂದನ್, ದೀಪ್ ಮನೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಳಿಕ ಶನಿವಾರ ಬೆಳಗ್ಗೆ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು.

    ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ದೂರಿನಲ್ಲಿ, ಮಹಿಳೆಗೆ ಚಂದನ್ ಹಲವು ದಿನಗಳಿಂದ ಪರಿಚಯವಾಗಿದ್ದ. ಆತ ತನ್ನನ್ನು ದಕ್ಷಿಣ ಕೋಲ್ಕತ್ತಾದಲ್ಲಿರುವ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಅಲ್ಲದೇ ಆತ ದೀಪ್‌ನನ್ನು ಪರಿಚಯ ಮಾಡಿಕೊಟ್ಟಿದ್ದ. ಮಹಿಳೆಯನ್ನೂ ಸಮಿತಿಯಲ್ಲಿ ಸೇರಿಸಿಕೊಳ್ಳುವುದಾಗಿ ಭರವಸೆ ನೀಡಿದ್ರು ಎಂದು ಉಲ್ಲೇಖಿಸಲಾಗಿದೆ.

    ಜೂನ್ 25 ರಂದು ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜು ಆವರಣದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾನನ್ನು ಬಂಧಿಸಲಾಗಿತ್ತು. ಇನ್ನೂ ಕಳೆದ ವರ್ಷ ಆರ್‌ಜಿಕರ್‌ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ಹೆಚ್ಚಾಗಿರುವ ಅತ್ಯಾಚಾರ, ಅಪರಾಧ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮದುವೆ ಆಗೋದಾಗಿ ನಂಬಿಸಿ ಅತ್ಯಾಚಾರ ಆರೋಪ – ಎಸ್‌ಎಎಫ್ ಪೊಲೀಸ್ ಕಾನ್‌ಸ್ಟೆಬಲ್ ಅರೆಸ್ಟ್

  • ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!

    ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!

    ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಸೆಪ್ಟಂಬರ್ 2ರಂದು ಸುದೀಪ್ ಹುಟ್ಟುಹಬ್ಬವಿದೆ. ಪ್ರತಿವರ್ಷ ಜಯನಗರದ ಗ್ರೌಂಡ್‌ನಲ್ಲಿ ಸುದೀಪ್ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಈ ವರ್ಷ ತಮ್ಮ ಅಗಲಿಕೆ ನೋವಿನಲ್ಲಿರುವ ಸುದೀಪ್ ಮನೆ ಬಳಿ ಯಾರೂ ಬಂದು ಅಲ್ಲಿರುವ ಜನರ ಶಾಂತಿ ಭಂಗ ಮಾಡೋದು ಬೇಡ. ಎರಡರ ಬದಲಾಗಿ ಸೆ.1ರ ರಾತ್ರಿ ಸೇರೋಣ ಅಂತಾ ಮನವಿ ಮಾಡಿಕೊಂಡಿದ್ದರು. ಅದರಂತೆ ಇದೀಗ ಸುದೀಪ್ ಆಪ್ತ ಬಳಗ ಮನವಿಯನ್ನ ಮಾಡಿಕೊಂಡಿದೆ. ಜೊತೆಗೆ ಬರ್ತ್ಡೇ ನಡೆಯುವ ಸ್ಥಳ ಹಾಗೂ ಟೈಮಿಂಗ್ ಬಹಿರಂಗಪಡಿಸಿದ್ದಾರೆ.

    ನಟ ಸುದೀಪ್ ಅವರ 52ನೇ ಹುಟ್ಟುಹಬ್ಬವನ್ನ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಸೆಲಬ್ರೇಷನ್ ಮಾಡಲು ಸ್ಥಳ ನಿಗದಿಯಾಗಿದೆ. ಇನ್ನು ಸೆ.1ರ ರಾತ್ರಿ 9 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಚರಣೆ ಮಾಡಿಕೊಳ್ಳಲು ಸುದೀಪ್ ಆಪ್ತರು ತೀರ್ಮಾನ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸುದೀಪ್ ಆಪ್ತಬಳಗ ಸಂದೇಶ ರವಾನೆ ಮಾಡಿದೆ. ಜೊತೆಗೆ ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ನಿವಾಸದ ಬಳಿ ಯಾರೂ ಬರೋದು ಬೇಡ ಅಂತಾ ಮನವಿ ಮಾಡಿಕೊಂಡಿದ್ದಾರೆ.

    ಸುದೀಪ್ ತಾಯಿ ಸರೋಜಮ್ಮ ಅಗಲಿ ಒಂದು ವರ್ಷವೂ ಕೂಡಾ ಕಳೆದಿಲ್ಲ. ಆದರೆ ತಮ್ಮನ್ನ ಭೇಟಿಗಾಗಿ ಕಾಯುವ ಲಕ್ಷಾಂತರ ಅಭಿಮಾನಿಗಳಿಗೆ ನಿರಾಸೆಗೊಳಿಸಬಾರದು ಎನ್ನುವ ಕಾರಣಕ್ಕೆ ನಟ ಕಿಚ್ಚ ಸುದೀಪ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸೆ.1ರ ರಾತ್ರಿ ಕಿಚ್ಚ ಸುದೀಪ್ ಬರ್ತ್ಡೇ ಸೆಲಬ್ರೇಷನ್ ಮಾಡಲು ಅಭಿಮಾನಿಗಳು ಕಾತುರದಿಂತ ಕಾಯುತ್ತಿದ್ದಾರೆ.

  • ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು

    ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು

    ಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಳೆದ ಆ.21 ಕ್ಕೆ 63ನೇ ವರ್ಷಕ್ಕೆ ಕಾಲಿಟ್ಟ ಈ ನಟಿಯ ಹುಟ್ಟುಹಬ್ಬವನ್ನ ಸ್ನೇಹಿತೆಯರು ಅದ್ದೂರಿಯಾಗಿ ಆಚರಿಸಿದ್ದಾರೆ. ತಮ್ಮ ಸಮಕಾಲೀನ ನಟಿಮಣಿಯರನ್ನ ಕರೆಸಿ ಗೆಟ್ ಟುಗೆದರ್ ಪಾರ್ಟಿ ಮಾಡಿದ್ದಾರೆ ರಾಧಿಕಾ ಶರತ್‌ಕುಮಾರ್.

    ರಾಧಿಕಾ ಶರತ್‌ಕುಮಾರ್ ಪಾರ್ಟಿಯಲ್ಲಿ ಅನೇಕ ಸಿನಿಮಾ ನಟಿಯರು ಪಾಲ್ಗೊಂಡಿದ್ರು. ಮೀನಾ, ರಮ್ಯಾಕೃಷ್ಣ, ತ್ರಿಶಾ ಸೇರಿದಂತೆ ಹತ್ತಾರು ನಟಿಯರು ಪಾಲ್ಗೊಂಡಿದ್ರು. ಪಾರ್ಟಿಯಲ್ಲಿ ಹೆಚ್ಚಿನ ಗಂಡ್‌ಹೈಕ್ಳಿಗೆ ಅವಕಾಶ ಇರಲಿಲ್ಲ. ಆದರೂ ರಾಧಿಕಾ ಪತಿ ಶರತ್‌ಕುಮಾರ್ ಮಾತ್ರ ನಟಿಯರ ಮಧ್ಯೆ ನಿಂತು ಪೋಸ್ ಕೊಡೋದನ್ನ ಮರೆಯಲಿಲ್ಲ.

    ಅಂದಹಾಗೆ ರಾಧಿಕಾ ತೆಲುಗು ಹಾಗೂ ತಮಿಳು ಇಂಡಸ್ಟ್ರಿಯಲ್ಲಿ ಅಪಾರ ಸ್ನೇಹಿತರನ್ನ ಹೊಂದಿದ್ದಾರೆ. ಆಗಾಗ 90 ತಾರೆಯರ ಗುಂಪು ಹೈದ್ರಾಬಾದ್‌ನಲ್ಲಿ ಸೇರೋದುಂಟು. ಇದೀಗ ಚಿಕ್ಕ ಬರ್ತ್ಡೇ ಪಾರ್ಟಿಗೆ ಸ್ಟಾರ್ ನಟಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದ್ದಾರೆ ರಾಧಿಕಾ. ಹೀಗೆ ಎಲ್ಲಾ ತಾರೆಯರನ್ನ ಒಂದೇ ಫ್ರೇಮ್‌ನಲ್ಲಿ ನೋಡೋದೇ ಚೆಂದ ಎನ್ನುತ್ತಿದ್ದಾರೆ ಸಿನಿಪ್ರಿಯರು.

  • ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!

    ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!

    ಸ್ಟಾರ್ ನಟರು ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲು ಇಷ್ಟಪಡೋದುಂಟು. ಆದರೆ ಕೆಲವು ಮುಖ್ಯ ಕಾರಣಕ್ಕೆ ಸ್ಟಾರ್‌ಗಳು ಅಭಿಮಾನಿಗಳೊಂದಿಗೆ (Fans) ಹುಟ್ಟುಹಬ್ಬ ಆಚರಿಸಿಕೊಳ್ಳೋದನ್ನ ಮಿಸ್ ಮಾಡ್ಕೊಳ್ತಾರೆ. ಇದೀಗ ಡಾಲಿ ಧನಂಜಯ್ (Daali Dhananjay) ಕೂಡ ಈ ಬಾರಿ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕಾರಣವನ್ನೂ ತಿಳಿಸಿದ್ದಾರೆ ನಟ ರಾಕ್ಷಸ ಧನಂಜಯ್.

     

    View this post on Instagram

     

    A post shared by Daali Dhananjaya (@dhananjaya_ka) 

    ಆಗಸ್ಟ್ 23ಕ್ಕೆ ಧನಂಜಯ್ ಹುಟ್ಟುಹಬ್ಬ (Birthday) ಆಚರಿಸಿಕೊಳ್ತಿದ್ದಾರೆ. ಆದರೆ ಈ ಬಾರಿ ಧನಂಜಯ್ ಅಭಿಮಾನಿಗಳೊಂದು ಆಚರಿಸಿಕೊಳ್ತಿಲ್ಲ. ಕೆಲಸದ ನಿಮಿತ್ತ ಹೊರಗಡೆ ಹೋಗುವ ಕಾರಣಕ್ಕೆ ಸಂಭ್ರಮಾಚರಣೆಯನ್ನ ನಿಮ್ಮೊಂದಿಗೆ ಮಾಡುತ್ತಿಲ್ಲ ಎಂದಿದ್ದಾರೆ ಡಾಲಿ. ಅಂದಹಾಗೆ ಇದೀಗ ಧನಂಜಯ್ ಐತಿಹಾಸಿಕ ಹಲಗಲಿ (Halagali) ಚಿತ್ರ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ.

    ಇನ್ನು 666 ಸಿನಿಮಾದಲ್ಲಿ ಶೂಟಿಂಗ್ ನಿಮಿತ್ತ ಬೇರೆ ಊರಿನಲ್ಲಿ ಇರುವ ಸಾಧ್ಯತೆ ಇದೆ. ಹೀಗಾಗಿ ಧನಂಜಯ್ ಈ ಬಾರಿ ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ. ಈ ಬಾರಿ ಬಹುತೇಕ ಸ್ಟಾರ್‌ಗಳು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಅವರ ಸಾಲಿಗೆ ಇದೀಗ ಡಾಲಿ ಧನಂಜಯ್ ಕೂಡ ಸೇರಿದ್ದಾರೆ.

  • ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

    ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

    ಹಾಸನ: ಸರ್ಕಾರಿ ಕಚೇರಿಯಲ್ಲಿ (Government Office) ಖಾಸಗಿ ವ್ಯಕ್ತಿಯೊಬ್ಬರ ಹುಟ್ಟುಹಬ್ಬವನ್ನು (Birthday) ಸಂಭ್ರಮದಿಂದ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಲೇಶಪುರ (Sakleshpura) ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಎಆರ್‌ಟಿಓ) ಎಸ್.ಎನ್.ಮಧುರಾ ಸೇರಿ ಮೂವರು ನೌಕರರನ್ನು ಸೇವೆಯಿಂದ ಅಮಾನತು (Suspend) ಮಾಡಲಾಗಿದೆ.

    ಎಆರ್‌ಟಿಓ ಜೊತೆಗೆ ಕಚೇರಿ ಅಧೀಕ್ಷಕ ಎಂ.ಕೆ.ಗಿರೀಶ್, ಮೋಟಾರು ವಾಹನ ನಿರೀಕ್ಷಕಿ ಎನ್.ಆರ್.ಆಶಾ ಅಮಾನತುಗೊಂಡವರು. ಜು.11ರಂದು ಶುಕ್ರವಾರ ಡ್ರೈವಿಂಗ್ ಶಾಲೆಯೊಂದರ ಮುಖ್ಯಸ್ಥ ಮೋಹನ್ ಶೆಟ್ಟಿ ಎಂಬವರ ಹುಟ್ಟುಹಬ್ಬವನ್ನು ಕಚೇರಿಯಲ್ಲಿ ಆಚರಿಸಲಾಗಿತ್ತು. ಇದರ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಮತ್ತು ಶಿಸ್ತು ಪ್ರಾಧಿಕಾರ ಆಯುಕ್ತ ಎ.ಎಂ.ಯೋಗೀಶ್ ಅವರು ಮೂವರನ್ನು ಅಮಾನತು ಮಾಡಿ ಸೋಮವಾರ ಆದೇಶಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

    ಪ್ರಕರಣ ಕುರಿತು ಸ್ಪಷ್ಟನೆ ಕೋರಿದ್ದ ಮೇಲಧಿಕಾರಿಗಳಿಗೆ ಎಆರ್‌ಟಿಓ ಎಸ್.ಎನ್.ಮಧುರಾ ಅವರು ನೀಡಿದ ಸಮಜಾಯಿಷಿಯಲ್ಲಿ ಖಾಸಗಿ ವ್ಯಕ್ತಿ ಮೋಹನ್ ಶೆಟ್ಟಿ ಅವರನ್ನು ಪರ ಲಿಖಿತ ಹೇಳಿಕೆ ಕೊಟ್ಟಿದ್ದರು. ಆ ವ್ಯಕ್ತಿ ಡ್ರೈವಿಂಗ್ ಶಾಲೆಯ ಮುಖ್ಯಸ್ಥರಾಗಿದ್ದು, ಕಚೇರಿ ಆವರಣದ ಗೇಟ್ ಹಾಗೂ ಬೀಗದ ವ್ಯವಸ್ಥೆ ಉಚಿತವಾಗಿ ನೀಡಿದ ದಾನಿಗಳಾಗಿದ್ದಾರೆ. ಶುಕ್ರವಾರ ಎಂದಿನಂತೆ ಪೂಜೆ ಮಾಡುತ್ತಿದ್ದೆವು. ಮೋಹನ್ ಶೆಟ್ಟಿ ಅವರ ಹುಟ್ಟುಹಬ್ಬ ಹಾಗೂ ಕಚೇರಿಯಲ್ಲಿ ಆಚರಿಸುವ ಕುರಿತು ಮಾಹಿತಿ ಇರಲಿಲ್ಲ. ಏಕಾಏಕಿ ಕೇಕ್, ಶಾಲು, ಹಾರ ತಂದಿದ್ದರು. ನಾನು ಅವರಿಗೆ ಜನ್ಮ ದಿನದ ಶುಭಾಶಯ ಕೋರಿದ್ದೇನೆ ಹೊರತು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿಸಿದ್ದರು. ಇವರಲ್ಲದೆ ಎಂ.ಕೆ.ಗಿರೀಶ್ ಹಾಗೂ ಎನ್.ಆರ್.ಆಶಾ ಸಹ ಇದೇ ರೀತಿ ಸಮಜಾಯಿಷಿ ನೀಡಿದ್ದಾರೆ. ಇದನ್ನೂ ಓದಿ: 1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

    ಎಎಆರ್‌ಟಿಓ ಹಾಗೂ ಇತರ ಇಬ್ಬರು ನೌಕರರ ಸಮಜಾಯಿಷಿಯನ್ನು ಪರಿಶೀಲಿಸಿದ ಮೇಲಧಿಕಾರಿಗಳು, ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದನ್ನು ಪರಿಗಣಿಸಿ ಅಮಾನತು ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮ ಆಯೋಜಿಸಲು ಮಾತ್ರ ಅವಕಾಶವಿದೆ. ಪ್ರಸ್ತುತ ಪ್ರಕರಣದಲ್ಲಿ ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಹುಟ್ಟುಹಬ್ಬ ಆಚರಿಸುವುದು ಸಾಕ್ಷಿ ಸಮೇತ ಕಂಡುಬಂದಿದ್ದು, ಕಚೇರಿ ಶಿಸ್ತು ಉಲ್ಲಂಘನೆ ಮಾಡಿದ್ದಾರೆಂದು ಅಮಾನತು ಮಾಡಲಾಗಿದೆ. ಇದನ್ನೂ ಓದಿ: D-CET ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: KEA

  • ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?

    ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?

    ಸಾಮಾನ್ಯವಾಗಿ ಸಿನಿಮಾ ತಾರೆಯರ ಹುಟ್ಟುಹಬ್ಬಕ್ಕೆ (Birthday) ಅವರವರ ಅಭಿಮಾನಿಗಳು ಮನೆ ಹತ್ತಿರ ಬಂದು ತಮ್ಮ ನೆಚ್ಚಿನ ನಟರಿಗೆ ಶುಭಾಶಯ ಕೋರುವುದು, ಕೇಕ್ ತಂದು ಕಟ್ ಮಾಡಿಸುವುದು ವಾಡಿಕೆ. ಆದರೆ ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸ್ಟಾರ್‌ಗಳು ಅಭಿಮಾನಿಗಳ ಕೈಗೆ ಸುಲಭವಾಗಿ ಸಿಗುತ್ತಿಲ್ಲ. ಹೀಗಾಗಿ ಅಭಿಮಾನಿಗಳು ವರ್ಷಪೂರ್ತಿ ಕಾದಿದ್ದು ಕೊನೆ ಪಕ್ಷ ಹುಟ್ಟುಹಬ್ಬದ ದಿನವಾದ್ರೂ ಸಿಗಬೇಕು ಎಂದುಕೊಂಡಿದ್ದ ಫ್ಯಾನ್ಸ್‌ಗೆ ಇತ್ತೀಚೆಗೆ ಸ್ಟಾರ್‌ಗಳು ಸಬೂಬು ನೀಡುವಂತೆ ಕಾರಣ ಹೇಳಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್.

    ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಹುಟ್ಟುಹಬ್ಬ, ಹೀಗಾಗಿ ಎರಡು ದಿನ ಮುನ್ನವೇ ಗಣೇಶ್ ಇನ್ಸ್ಟಾಗ್ರಾಂನಲ್ಲಿ ಹುಟ್ಟುಹಬ್ಬದ ಕುರಿತಾಗಿ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಇರೋದಿಲ್ಲ. ಯಾರೂ ಮನೆ ಹತ್ತಿರ ಬರಬೇಡಿ ಎಂದಿದ್ದಾರೆ. ಬದಲಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ, ಅದೇ ನನಗೆ ಕೊಡುವ ಉಡುಗೊರೆ ಎಂದಿದ್ದಾರೆ. ಹೀಗಾಗಿ ಈ ಬಾರಿ ಗಣೇಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.

    ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಸಿನಿಮಾದ ಚಿತ್ರೀಕರಣಕ್ಕಾಗಿ ಬೇರೆ ಊರಿನಲ್ಲಿರುವ ಕಾರಣಕ್ಕೆ ಗಣೇಶ್ ಅಭಿಮಾನಿಗಳಿಗೆ ಮನೆ ಹತ್ರ ಬರಬೇಡಿ ಎಂದಿದ್ದಾರೆ. `ಕೃಷ್ಣಂ ಪ್ರಣಯ ಸಖಿ’ ಚಿತ್ರದ ಯಶಸ್ಸಿನ ಬಳಿಕ ಗಣೇಶ್ ಚಿತ್ರಗಳಿಗೆ ಮತ್ತೆ ಪುಷ್ಠಿ ಸಿಕ್ಕಿದ್ದು ಬಲು ಬೇಡಿಕೆ ಹೊಂದಿದ್ದಾರೆ. ಹೀಗಾಗಿ ಈ ವರ್ಷದಲ್ಲಿ ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಚಿತ್ರವನ್ನ ತೆರೆಗೆ ತರಲು ಪ್ರಯತ್ನಸುತ್ತಿರುವ ಗಣೇಶ್ ನಿರಂತರ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರಂತೆ.

  • ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

    ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

    ಬೆಳಗಾವಿ: ರಸ್ತೆ ಮಧ್ಯೆ ಗಾಳಿಯಲ್ಲಿ ಗುಂಡು ಹಾರಿಸಿ (Firing Bullets) ಗ್ರಾಮ ಪಂಚಾಯತ್‌ ಸದಸ್ಯನೊಬ್ಬ ಹುಟ್ಟುಹಬ್ಬ ಆಚರಿಸಿದ ಘಟನೆ ರಾಯಬಾಗ ತಾಲೂಕಿನ‌ ಕುಡಚಿ (Kudachi) ಪಟ್ಟಣದಲ್ಲಿ ನಡೆದಿದೆ.

    ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ ತೋರಿದ್ದಾನೆ‌. ಇದನ್ನೂ ಓದಿ: ವೃದ್ಧಾಪ್ಯ ತಡೆಯುವ ಚಿಕಿತ್ಸೆಯೇ ಶೆಫಾಲಿ ಜರಿವಾಲಾಗೆ ಮುಳುವಾಯ್ತಾ ?

    ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲೇ ಕೈಯಲ್ಲಿ ಚಾಕು ಹಿಡಿದ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಪಕ್ಕದಲ್ಲೇ ಠಾಣೆ ಇದ್ದರೂ ಪೊಲೀಸರು (Police) ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದರು.   ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ರ್ವಜನಿಕ ವಲಯದಲ್ಲಿ ಗುರುತಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ ಹುಟ್ಟುಹಬ್ಬದ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿತ್ತು.

    ನಡು ರಸ್ತೆಯಲ್ಲಿ ಫೈರಿಂಗ್ ಮಾಡಿ ಅಸಭ್ಯ ವರ್ತನೆ ತೋರಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಕುಡಚಿ ಪೊಲೀಸರು ಪ್ರಕರಣ ದಾಖಲಿಸಿ ಬಾಬಾಜಾನನ್ನು ಬಂಧಿಸಿದ್ದಾರೆ.

  • ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಕಂಡಕ್ಟರ್ ಬರ್ತ್‍ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ

    ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಕಂಡಕ್ಟರ್ ಬರ್ತ್‍ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ

    ಬೆಂಗಳೂರು\ ಮೈಸೂರು: ಚಲಿಸುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್‍ನಲ್ಲಿ (KSRTC Bus) ಕೇಕ್ ಕಟ್ ಮಾಡಿ, ಕಂಡಕ್ಟರ್ ಹುಟ್ಟುಹಬ್ಬ ಆಚರಿಸಿರುವ ವೀಡಿಯೋ ವೈರಲ್ ಆಗುತ್ತಿದೆ.

    ನಂಜನಗೂಡು (Nanjanaguru) ತಾಲೂಕಿನ ಹುಲ್ಲಹಳ್ಳಿ ಕಣೇನೂರು ಮಾರ್ಗವಾಗಿ ಹೆಚ್‍ಡಿ ಕೋಟೆಯ ಕಾರಪುರಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ಇಂಜಿನ್ ಬಾಕ್ಸ್ ಮೇಲೆ ಕೆಕ್ ಕತ್ತರಿಸಿ, ಫ್ಲವರ್ ಬ್ಲಾಸ್ಟ್ ಮಾಡಿ ಬರ್ತಡೇ ಸೆಲೆಬ್ರೇಷನ್ ಮಾಡಲಾಗಿದೆ. ಈ ವೇಳೆ ಬಸ್ ಚಾಲಕನ ಗಮನ ಆ ಕಡೆಗೆ ತಿರುಗಿದೆ. ಇದರೀಂದ ಬಸ್‍ನಲ್ಲಿದ್ದ ಪ್ರಯಾಣಿಕನೊಬ್ಬ ಬಸ್ ಸರಿಯಾಗಿ ಹೋಗ್ತಿದೆಯಾ ಎಂದು ಕೂಗಿದ್ದಾರೆ. ಇದನ್ನೂ ಓದಿ:

    ಪ್ರಯಾಣಿಕರಿದ್ದ ಬಸ್‍ನಲ್ಲಿ, ಅದು ಚಲಿಸುತ್ತಿರುವಾಗಲೇ, ಹುಟ್ಟುಹಬ್ಬದ ಆಚರಣೆ ಬೇಕಿತ್ತಾ ಎಂದು ಪ್ರಯಾಣಿಕರು ಹಾಗೂ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: