Tag: Bishop

  • ಉಡುಪಿಯಲ್ಲಿ ನಿಯಮಬದ್ಧ ಕ್ರಿಸ್‌ಮಸ್‌ – ಬಿಷಪ್ ನಿರ್ಧಾರಕ್ಕೆ ಎಲ್ಲೆಡೆಯಿಂದ ಶ್ಲಾಘನೆ

    ಉಡುಪಿಯಲ್ಲಿ ನಿಯಮಬದ್ಧ ಕ್ರಿಸ್‌ಮಸ್‌ – ಬಿಷಪ್ ನಿರ್ಧಾರಕ್ಕೆ ಎಲ್ಲೆಡೆಯಿಂದ ಶ್ಲಾಘನೆ

    ಉಡುಪಿ: ಕೋವಿಡ್ ಮೂರನೆ ಅಲೆ, ಹೊಸ ರೂಪಾಂತರಿ ಓಮಿಕ್ರಾನ್‌ ಭೀತಿಯ ನಡುವೆ ಉಡುಪಿ ಧರ್ಮಪ್ರಾಂತ್ಯದಲ್ಲಿ ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಸರಳವಾಗಿ ಕ್ರಿಸ್‌ಮಸ್‌ ಆಚರಿಸಲಾಯಿತು.

    ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ತನ್ನ ಅಧೀನದಲ್ಲಿರುವ ಚರ್ಚ್‌ಗಳಿಗೆ ಆದೇಶ ಹೊರಡಿಸಿದ್ದರು. ಚರ್ಚ್ ಹಾಲ್‌ನಲ್ಲಿ ಯೇಸು ಕ್ರಿಸ್ತರ ಜನ್ಮದಿನದಂದು ಬಲಿಪೂಜೆಗಳನ್ನು ಮಾತ್ರ ಮಾಡಬೇಕು ಎಂದು ನಿರ್ಣಯ ಕೈಗೊಂಡಿದ್ದರು. ತನ್ನ ಅಧೀನದಲ್ಲಿ ಬರುವ ಏಳು ತಾಲ್ಲೂಕುಗಳ ಚರ್ಚ್‌ಗಳಲ್ಲಿ ಈ ನಿಯಮವನ್ನು ಪಾಲಿಸಲಾಯಿತು. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಈ ಬಾರಿ ಕೊರೊನಾ ಆತಂಕ ಹಿನ್ನೆಲೆಯಲ್ಲಿ ಪ್ರತಿ ಚರ್ಚ್‌ಗಳಲ್ಲಿ ಕ್ರಿಸ್‌ಮಸ್ ಬಲಿಪೂಜೆಗಳ ಸಂಖ್ಯೆಯನ್ನು ಹೆಚ್ಚು ಮಾಡಲಾಗಿತ್ತು. ಸಾಮೂಹಿಕ ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಚರ್ಚ್ ಆವರಣ ಹಾಗೂ ಚರ್ಚ್ ಸಭಾಂಗಣದ ಹೊರಗೆ ಯಾವುದೇ ವ್ಯವಸ್ಥೆಗಳನ್ನು ಮಾಡಲಾಗಿಲ್ಲ. ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ನೇತೃತ್ವದಲ್ಲಿ ವಿಶೇಷ ಬಲಿ ಪೂಜಾ ಕಾರ್ಯಕ್ರಮ ನೆರವೇರಿತು. ನೂರಾರು ಭಕ್ತರು ಧಾರ್ಮಿಕ ಸಭೆಯಲ್ಲಿ ಭಾಗಿಯಾದರು.

    ಕ್ರಿಸ್‌ಮಸ್‌ ಸಂದರ್ಭದಲ್ಲಿ ಕ್ರೈಸ್ತ ಧರ್ಮೀಯರು ಚರ್ಚ್ ಮತ್ತು ಮನೆಗಳಲ್ಲಿ ಕ್ರಿಬ್ ತಯಾರು ಮಾಡುತ್ತಾರೆ. ಭಗವಾನ್ ಯೇಸು ಸ್ವಾಮಿ ಗೋದಲಿಯಲ್ಲಿ ಹುಟ್ಟಿದ್ದಾನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಅಂದಿನ ದಿನವನ್ನು ಮನೆಗಳಲ್ಲಿ ಗೋದಲಿ ತಯಾರಿಸಿ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಲಾಗುತ್ತದೆ. ಉಡುಪಿ ಧರ್ಮ ಪ್ರಾಂತ್ಯದಲ್ಲಿ ಯೇಸು ಕ್ರಿಸ್ತರು ಹುಟ್ಟಿದ ಘಟನೆಯನ್ನು ಮರುಸೃಷ್ಟಿ ಮಾಡಲಾಯಿತು. ಇದನ್ನೂ ಓದಿ: ಯೇಸು ಕ್ರಿಸ್ತರ ಉದಾತ್ತ ಸಂದೇಶಗಳನ್ನು ಸ್ಮರಿಸೋಣ: ಮೋದಿ ಕ್ರಿಸ್‌ಮಸ್‌ ಶುಭಾಶಯ

    ಪ್ರತಿವರ್ಷ ಎಲ್ಲಾ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆಯ ನಂತರ ವಿವಿಧ ವಿನೋದಾವಳಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು ನಡೆಯುತ್ತವೆ. ಈ ಬಾರಿ ಯಾವುದಕ್ಕೂ ಕೂಡ ಇಲ್ಲ ಅವಕಾಶ ನೀಡಿಲ್ಲ. ಕೊರೊನಾ ಸೋಂಕನ್ನು ಸಂಪೂರ್ಣ ಹತೋಟಿಗೆ ತರುವ ಉದ್ದೇಶ ಹಾಗೂ ಸಮಾಜಕ್ಕೆ ಮಾದರಿಯಾಗಬೇಕೆಂಬ ಹಿನ್ನೆಲೆಯಲ್ಲಿ ಉಡುಪಿ ಬಿಷಪ್ ಈ ನಿಯಮ ರೂಪಿಸಿದ್ದಾರೆ.

    ಸರ್ಕಾರ ನಿಯಮ ರೂಪಿಸುವ ಮೊದಲೇ ಉಡುಪಿ ಬಿಷಪ್ ಒಂದು ನಿರ್ಧಾರಕ್ಕೆ ಬಂದಿದ್ದರು. ಅದನ್ನು ಉಡುಪಿ ಧರ್ಮಪ್ರಾಂತ್ಯದ ಎಲ್ಲರೂ ಪಾಲಿಸಿದ್ದಾರೆ. ಯಾವುದೇ ಚರ್ಚ್‌ಗಳಿಗೆ ಯಾರೂ ಆಸ್ಪದ ಕೊಡಲಿಲ್ಲ ಎಂದು ಉಡುಪಿಯ ಜಸ್ಟಿನ್ ಎರಲ್ ಡಿಸಿಲ್ವ ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿದರು.

  • ಕೇರಳ ಬಿಷಪ್ ಕಾಮ ಪುರಾಣ ಬಿಚ್ಚಿಟ್ಟಿದ್ದ ಫಾದರ್ ಅನುಮಾನಾಸ್ಪದ ಸಾವು!

    ಕೇರಳ ಬಿಷಪ್ ಕಾಮ ಪುರಾಣ ಬಿಚ್ಚಿಟ್ಟಿದ್ದ ಫಾದರ್ ಅನುಮಾನಾಸ್ಪದ ಸಾವು!

    ಕೊಚ್ಚಿ: ಅತ್ಯಾಚಾರ ಆರೋಪಿ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಸಾಕ್ಷ್ಯ ಹೇಳಿದ್ದ ಪಾದ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

    ಕುರಿಯ ಕಟ್ಟುಥಾರ ಪಾದ್ರಿ (62) ಅವರ ಮೃತ ದೇಹ ಪಂಜಾಬಿನ ಹೊಶಿಯರ್‍ಪುರ ಜಿಲ್ಲೆಯ ಚರ್ಚ್‍ನಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೂವರೆಗೂ ಅವರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸದ್ಯ ಪಾದ್ರಿಯ ಕುಟುಂಬಸ್ಥರು ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ.

    ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಈ ವೇಳೆ ಅವರ ವಿರುದ್ಧ ಕುರಿಯ ಕಟ್ಟುಥಾರ ಅವರು ಸಾಕ್ಷಿ ಹೇಳಿ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಬಳಿಕ ಅವರ ವಿರುದ್ಧ ಬೆದರಿಕೆ ಕರೆಗಳು ಕೇಳಿ ಬರುತಿತ್ತು. ಸಾಕ್ಷ್ಯ ಹೇಳಿದ್ದಕ್ಕೆ ಕುರಿಯ ಕಟ್ಟುಥಾರ ಅವರನ್ನು ಕೊಲೆ ಮಾಡಲಾಗಿದೆ ಎಂದು ಅವರ ಸಹೋದರ ಆರೋಪ ಮಾಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಸ್‍ಪಿ ಎಆರ್ ಶರ್ಮಾ, ಪಾದ್ರಿ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತು ಇಲ್ಲ. ಅವರು ವಾಸಿಸುವ ಚರ್ಚ್‍ನಲ್ಲಿಯೇ ಅವರ ಮೃತದೇಹ ಪತ್ತೆಯಾಗಿದೆ. ಅವರ ಮೃತ ದೇಹದ ಬಳಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೇ ರಕ್ತದೊತ್ತಡದ ಮಾತ್ರೆಗಳು ಸ್ಥಳದಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

    ಏನಿದು ಪ್ರಕರಣ:
    ಕ್ರೈಸ್ತ ಸನ್ಯಾಸಿನಿ ಮೇಲೆ ಬಿಷಪ್ ಫ್ರಾಂಕೋ ಮುಳಕಲ್ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ. 2014 ರಿಂದ 2016 ವರೆಗೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸನ್ಯಾಸಿನಿ ಆರೋಪಿಸಿದ್ದಾರೆ.

    ಬಿಷಪ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಫ್ರಾಂಕೋ ಮುಳಕಲ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪ ಹೊಂದಿರುವ ಬಿಷಪ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ನ್ಯಾಯಾಲಯ ಆರೋಪಿ ಬಿಷಪ್ ಫ್ರಾಂಕೋ ಮುಳಕಲ್ ಗೆ ಜಾಮೀನು ನೀಡಿದೆ. ಜಾಮೀನು ಪಡೆದ ಆಗಮಿಸಿದ ಬಿಷಪ್‍ಗೆ ಆತನ ಭಕ್ತರು ಅದ್ಧೂರಿ ಸ್ವಾಗತ ಕೋರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv