Tag: bit coin

  • ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು: ಬಿ.ವೈ ವಿಜಯೇಂದ್ರ

    ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು: ಬಿ.ವೈ ವಿಜಯೇಂದ್ರ

    ದಾವಣಗೆರೆ: ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು ಎಂದು ಸಂಸದ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

    ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂಬ ವಿಚಾರ ಕುರಿತಂತೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು, ಚುನಾವಣೆಗೆ ಇನ್ನೂ ಒಂದುವರೆ ವರ್ಷಗಳ ಕಾಲ ಸಮಯವಿದೆ. ಅಲ್ಲಿಯವರೆಗೂ ಬೊಮ್ಮಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ವಿಚಾರ, ಇದೆಲ್ಲ ಕಾಂಗ್ರೆಸ್ ಪಕ್ಷದ ಪಿತೂರಿ ಅಷ್ಟೇ. ಈ ರೀತಿ ಹೇಳಿಕೆ ಕೊಡುವ ಮೂಲಕ ಆಡಳಿತವನ್ನು ಕುಂಠಿತ ಮಾಡುವ ಪ್ರಯತ್ನವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    basavaraj bommai

    ಇದೇ ವೇಳೆ ದಲಿತ ನಾಯಕ ಸಿಎಂ ಆಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಯಾರು ಸಿಎಂ ಆಗುತ್ತಾರೆ ಎನ್ನುವುದನ್ನು ಜನ ನಿರ್ಧಾರ ಮಾಡುತ್ತಾರೆ. ಇನ್ನೂ ಈಗ ಚುನಾವಣೆ ಬಂದಿಲ್ಲ. ಸಿದ್ದರಾಮಯ್ಯ, ಡಿಕೆಶಿ ಹಾಗೂ ಕಾಂಗ್ರೆಸ್ ಮುಖಂಡರ ನಡುವಿನ ಗೊಂದಲ ಇದರಲ್ಲಿ ಕಾಣಿಸುತ್ತಿದೆ. ಕಾಂಗ್ರೆಸ್ ಸಂಸೃತಿ ಕಾಲೇಳೆಯುವುದು ಅದು ಇದರಲ್ಲಿ ಎಂಬುವುದು ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:  ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

    ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ ಬಗ್ಗೆ ಮಾತನಾಡಿದ ಅವರು, ಇದು ಬೊಮ್ಮಾಯಿ ಅವರು ಸಿಎಂ ಆದ ನಂತರ ನಡೆಯುತ್ತಿರುವ ಘಟನೆ ಅಲ್ಲ. ಮೂನ್ನಾಲ್ಕು ವರ್ಷಗಳ ಹಿಂದೆ ನಡೆದ ಘಟನೆಯಾಗಿದೆ. ಬಿಟ್ ಕಾಯನ್ ಬಗ್ಗೆ ಕಾಂಗ್ರೆಸ್ ಮುಖಂಡರು ಆರೋಪ ಮಾಡುತ್ತಿದ್ದಾರೆ. ಆ ಆರೋಪಗಳಿಗೆ ಯಾವುದೇ ಆಧಾರ ಇಲ್ಲ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ವಿಚಿತ್ರ ಏನು ಅಂದ್ರೆ ಕಾಂಗ್ರೆಸ್ ಮುಖಂಡರೇ ಅದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಈ ಕುರಿತಂತೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತನಿಖೆ ನಡೆಸಲು ಸೂಚಿಸಿದ್ದಾರೆ. ಇದರಲ್ಲಿ ಯಾರೇ ಪ್ರಭಾವಿಗಳಿದ್ದರು ಅವರ ವಿರುದ್ಧ ತನಿಖೆಯಾಗುತ್ತದೆ. ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

  • ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

    ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

    ಬೆಂಗಳೂರು: ಯಾವುದೇ ಕಾಯಿನ್ ವಿಚಾರಕ್ಕೂ ನನ್ನ ಮಗ ಉಮರ್ ನಲಪಾಡ್‍ಗೂ ಸಂಬಂಧ ಇಲ್ಲ ಎಂದು ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಹೇಳಿದ್ದಾರೆ.

    ಬಿಟ್ ಕಾಯಿನ್ ವಿಚಾರದಲ್ಲಿ ನಲಪಾಡ್ ಶಾಮೀಲಾಗಿದ್ದು ಈ ವಿಚಾರವಾಗಿ ನಲಪಾಡ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯ ಈ ಕುರಿತಂತೆ ಮಾಧುಮದವರೊಂದಿಗೆ ಮಾತನಾಡಿದ ಹ್ಯಾರಿಸ್ ಅವರು, ಇದೆಲ್ಲಾ ಸುಳ್ಳು ಸುದ್ದಿಯಾಗಿದೆ. ನಮಗೆ ಆಗದೇ ಇರುವವರು ನಲಪಾಡ್ ವಿರೋಧಿಗಳು ಬೇಕಂತಲೇ ಈ ರೀತಿಯ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಜನವರಿಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಲಪಾಡ್ ವಹಿಸಿಕೊಳ್ಳುತ್ತಿದ್ದಾನೆ. ಇದಕ್ಕಾಗಿ ವಿರೋಧ ಪಕ್ಷದವರು ಮಾಡಿರುವ ತಂತ್ರ ಇರಬಹುದು. ಇಲ್ಲ ನಮ್ಮ ಪಕ್ಷದವರೇ ಷಡ್ಯಂತ್ರ್ಯ ಮಾಡಿರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳುವಾಗ ಬಂಡೆಯಿಂದ‌ ಜಾರಿ‌ ನದಿಗೆ ಬಿದ್ದ ಯುವಕ ಕಣ್ಮರೆ!

    ಯಾವುದೋ ಒಂದು ಕೇಸ್ ಆಯಿತು ಅಂತ ಎಲ್ಲದಕ್ಕೂ ಅವನ ಹೆಸರನ್ನು ಜೋಡಿಸಲಾಗುತ್ತಿದೆ. ನಲಪಾಡ್ ಈಗ ಸಾಮಾಜಿಕ ಕೆಲಸದಲ್ಲಿ ತೊಡಗಿದ್ದಾನೆ. ಯಾವುದೇ ಕಾಯಿನ್ ವಿಚಾರಕ್ಕೂ ನಲಪಾಡ್‍ಗೂ ಸಂಬಂಧ ಇಲ್ಲ. ನಾವು ನಮ್ಮ ಬ್ಯುಸಿನೆಸ್ ನೋಡಿಕೊಂಡು ಇದ್ದೇವೆ. ಈ ತರ ತುಳಿಯುವ ಯತ್ನ ಮಾಡಬಾರದು. ಇಡಿ ನೋಟಿಸ್ ಕೊಡುವುದು ಯಾವತ್ತು ಯಾರಿಗೂ ಗೊತ್ತಾಗುವುದಿಲ್ಲ. ಮಾಧ್ಯಮದವರಿಗೆ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಶ್ರೀಕಿ ನಲಪಾಡ್‍ಗೆ ಫ್ರೆಂಡೋ ಇಲ್ಲವೂ ಎಂಬುವುದು ಗೊತ್ತಿಲ್ಲ. ನಲಪಾಡ್ ಎಲ್ಲಾ ಸ್ನೇಹಿತರು ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವ ಪ್ರಕಾರ ನನ್ನ ಮಗ ಯಾವುದೇ ಕಾಯಿನ್ ವ್ಯವಹಾರ ಮಾಡಿಲ್ಲ. ನಲಪಾಡ್ ವಿರುದ್ಧ ಕುತಂತ್ರ ಮಾಡಲಾಗುತ್ತಿದೆ. ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಇದೆಲ್ಲಾ ನಡೆಯುತ್ತಿದೆ. ಸಿಎಲ್‍ಪಿ ಲೀಡರ್ ಮತ್ತು ನಮ್ಮ ನಾಯಕರಿಗೆ ಷಡ್ಯಂತ್ರ ವಿಚಾರ ಗೊತ್ತು ಎಂದು ತಿಳಿಸಿದ್ದಾರೆ.

  • ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದ್ದು, ಇದರಲ್ಲಿ ರಾಜಕೀಯ ನಾಯಕರ ಮಕ್ಕಳು ಇರುವುದು ಬೆಳಕಿಗೆ ಬಂದಿದೆ. ಆ ರಾಜಕಾರಣಿಗಳ ಮಕ್ಕಳ ಜೊತೆ ಶ್ರೀಕಿಗೆ ನಂಟಿತ್ತು. ಹಾಗಾದರೆ ಬಿಟ್ ಕಾಯಿನ್‍ನಲ್ಲಿ ಇರುವವರು ಯಾರು ಎಂಬ ಕುರಿತು ಪಬ್ಲಿಕ್ ಟಿವಿ ಬಳಿ ಎಕ್ಸ್ ಕ್ಲೂಸೀವ್ ಮಾಹಿತಿ ಇದೆ.

    ಶಾಸಕ ಹ್ಯಾರಿಸ್ ಪುತ್ರ ಒಮರ್ ನಲಪಾಡ್ ಹಾಗೂ ಮಾಜಿ ಶಾಸಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಇರುವುದು ಬಯಲಾಗಿದೆ. ಚಾರ್ಜ್‍ಶೀರ್ಟ್‍ನಲ್ಲಿ ಈ ಇಬ್ಬರು ಮಕ್ಕಳ ಹೆಸರನ್ನು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳುವಾಗ ಬಂಡೆಯಿಂದ‌ ಜಾರಿ‌ ನದಿಗೆ ಬಿದ್ದ ಯುವಕ ಕಣ್ಮರೆ!

    ಸಿಸಿಬಿ ಮುಂದೆ ಹೇಳಿಕೆ ಕೊಟ್ಟಿರುವ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ನಾನು ಸ್ವಲ್ಪವೂ ಹಣವಿಲ್ಲದೆ ಎಲ್ಲೆಲ್ಲೋ ಸುತ್ತಾಡ್ತಿದ್ದೆ. ನೆಟ್‍ವರ್ಕ್ ಹೆಚ್ಚಿಸಿಕೊಳ್ಳೋಕೆ ಸ್ವಿಟ್ಜರ್‍ಲ್ಯಾಂಡ್, ಸ್ವೀಡನ್, ಫ್ರಾನ್ಸ್, ಜರ್ಮನಿ ಸುತ್ತಾಡಿದೆ. ಒಮ್ಮೆ ‘ಬಿಟ್ ಫ್ಲಿಕ್ಸ್’ ಅನ್ನೋ ಸರ್ವರ್ ಹ್ಯಾಕ್ ಮಾಡಿದ್ದೆ. 2015ರಲ್ಲಿ ಭಾರತಕ್ಕೆ ವಾಪಸ್ ಬಂದೆ. 2015ರಲ್ಲಿ ನನ್ನ ಸ್ನೇಹಿತ ಮನಿಶ್ ಮೂಲಕ ಒಮರ್ ನಲಪಾಡ್ ಜೊತೆ ಸ್ನೇಹವಾಯಿತು. 2018ರಿಂದ ಪ್ರತಿದಿನ ಕೂಡ ಪಾರ್ಟಿಗಳಲ್ಲಿ ಭಾಗಿ ಆಗ್ತಿದ್ವಿ. ಒಮರ್ ನಲಪಾಡ್, ಅಭಿಷೇಕ್, ಗ್ಯಾರಿ ಜೊತೆ ಚಂಡೀಗಢ, ಜೈಪುರ ಸುತ್ತಾಡಿದ್ದೆ ಎಂದು ಹೇಳಿರುವುದು ಬಯಲಾಗಿದೆ. ಇದನ್ನೂ ಓದಿ: ವಿವಾಹವಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ 18 ಬಾರಿ ಇರಿದ ಪ್ರಿಯಕರ!

    ಇತ್ತ ಹ್ಯಾರಿಸ್ ಹಿರಿಯ ಪುತ್ರ ಮಹಮದ್ ನಲಪಾಡ್ ಜೊತೆಗೂ ಶ್ರೀಕಿ ನಂಟು ಹೊಂದಿದ್ದ. 2018ರ ಫರ್ಜಿ ಕೆಫೆ ಗಲಾಟೆಯಲ್ಲಿ ಮಹಮದ್ ನಲಪಾಡ್ ಆರೋಪಿ ನಂಬರ್ 1 ಆಗಿದ್ದ. ಇದೇ ಗಲಾಟೆ ಪ್ರಕರಣದಲ್ಲಿ ಶ್ರೀಕೃಷ್ಣ ನಂಬರ್ 3 ಆರೋಪಿಯಾಗಿದ್ದ. ಈ ಪ್ರಕಾರ ನಲ್ಪಾಡ್ ಬ್ರದರ್ಸ್-ಶ್ರೀಕಿ ಸ್ನೇಹಿತರಾಗಿದ್ದಾರೆ. ಆದರೆ ಬಿಟ್ ಕಾಯಿನ್ ವ್ಯವಹಾರದಲ್ಲಿ ನಲಪಾಡ್ ಬ್ರದರ್ಸ್ ಹೆಸರಿಲ್ಲ, ಶ್ರೀಕಿ ಎಲ್ಲೂ ಹೇಳಿಲ್ಲ. ಆದರೆ ಸಿಸಿಬಿ ಮುಂದೆ ನಲಪಾಡ್ ಬದ್ರರ್ಸ್ ನನ್ನ ಫ್ರೆಂಡ್ಸ್ ಅಷ್ಟೇ ಅಂತ ಶ್ರೀಕಿ ಹೇಳಿದ್ದಾನೆ.

  • ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‌ನವರಿದ್ದರೆ ತನಿಖೆ ಮಾಡಿ ನೇಣಿಗೆ ಹಾಕಲಿ: ಡಿ.ಕೆ.ಶಿವಕುಮಾರ್

    ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‌ನವರಿದ್ದರೆ ತನಿಖೆ ಮಾಡಿ ನೇಣಿಗೆ ಹಾಕಲಿ: ಡಿ.ಕೆ.ಶಿವಕುಮಾರ್

    ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಅವ್ಯವಹಾರದಲ್ಲಿ ತೊಡಗಿದ್ದರೆ ಅವರನ್ನು ಕಾನೂನು ಪ್ರಕಾರ ಗಲ್ಲಿಗೆ ಹಾಕಲಿ. ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (KPCC President DK Shivakumar) ಹೇಳಿದ್ದಾರೆ.

    ಬಿಟ್ ಕಾಯಿನ್ (Bit Coin) ವಿಚಾರವಾಗಿ ಕಾಂಗ್ರೆಸ್ ಪಕ್ಷದ ಬಳಿ ಸಾಕ್ಷಿ ಇದ್ದರೆ ನೀಡಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಟ್ ಕಾಯಿನ್ ವಿಚಾರವಾಗಿ ಪೊಲೀಸ್ ದಾಖಲೆ ಮಾಡಿರುವ ಎಫ್ಐಆರ್, ಮಾಧ್ಯಮಗಳಲ್ಲಿ ಕೇಳಿ ಬಂದಿರುವ ಹೆಸರುಗಳು, ಪ್ರಧಾನ ಮಂತ್ರಿಗಳಿಗೆ ಹೋಗಿರುವ ದೂರುಗಳು, ಯಾರನ್ನು ವಿವಿಧ ಪ್ರಕರಣದಲ್ಲಿ ಬಂಧಿಸಿ ವಿಚಾರಣೆ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಬಹಿರಂಗ ಮಾಡಲಿ. ಕಾಂಗ್ರೆಸ್ ಪಕ್ಷದ ನಾಯಕರು ಇದರಲ್ಲಿ ಭಾಗಿಯಾಗಿದ್ದರೆ ಅವರನ್ನು ಕೂಡ ಬಂಧಿಸಿ ವಿಚಾರಣೆ ನಡೆಸಲಿ. ನಾವು ಯಾರ ಬೆಂಬಲಕ್ಕೂ ನಿಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಹಿಂದೆ ಸಂದೀಪ್ ಪಾಟೀಲ್ ಅವರು ಮಾಧ್ಯಮಗೋಷ್ಠಿ ನಡೆಸಿದ್ದು, ಇಡಿಗೆ ಪ್ರಕರಣ ವಹಿಸಿರುವ ಬಗ್ಗೆ ಸಿಎಂ ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಾಹಿತಿಯನ್ನು ನೀಡಲಿ. ನಾವು ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ನಾವು ಕೂಡಾ ಸೂಕ್ತ ಸಮಯದಲ್ಲಿ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ. ನಾವು ತನಿಖೆ ಮಾಡಿಸುವುದು ಬೇರೆ ವಿಚಾರ. ಬಿಜೆಪಿ ಅಧಿಕಾರದಲ್ಲಿದೆ. ಅವರ ಕೈಯಲ್ಲಿ ಸರ್ಕಾರ ಇದೆ. ಗೃಹಮಂತ್ರಿಗಳು ಇದ್ದಾರೆ. ರಾಜ್ಯದ ಜನರಿಂದ ಅವರು ಮುಚ್ಚಿಟ್ಟಿರುವ ಸತ್ಯಾಂಶ ಹೊರಗಿಡಲಿ ಎಂದರು.

    ವಿದ್ವತ್ ಹಲ್ಲೆ ಪ್ರಕರಣದಲ್ಲಿ ಶ್ರೀಕಿ ಜತೆ ನಲಪಾಡ್ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾಕೆ ವಿಚಾರಣೆ ಮಾಡಲಿಲ್ಲ ಎಂಬ ಬಿಜೆಪಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ನಾನು ಗೃಹಮಂತ್ರಿಗಳಿಂದ ಹೇಳಿಕೆ ಬಯಸುತ್ತೇನೆ. ಮಾಧ್ಯಮಗಳ ಮೂಲಕ ನಾನು ಯಾರ ಹೆಸರನ್ನೂ ಕೇಳಲು ಬಯಸುವುದಿಲ್ಲ. ಸಿಎಂ ಹಾಗೂ ಗೃಹ ಸಚಿವರಿಗೆ ಮಾಹಿತಿ ಇದ್ದರೆ ಅವರು ಹೇಳಲಿ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

    ಜಾಮೀನು ಪಡೆದಿದ್ದ ಶ್ರೀಕಿ ಅವರನ್ನು ಮತ್ತೆ ಬಂಧಿಸಿರುವುದರ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ, ಈ ಪ್ರಕರಣದಲ್ಲಿ ಎಷ್ಟು ಎಫ್ಐಆರ್ ಬಂದಿದೆ. ಯಾರ ಮೇಲೆ ಪ್ರಕರಣ ದಾಖಲಾಗಿದೆ, ಹೈಕೋರ್ಟ್‌ನಲ್ಲಿದ್ದ ಪ್ರಕರಣ ಹಿಂಪಡೆದಿದ್ದು ಯಾಕೆ ಎಂಬ ವಿಚಾರಗಳನ್ನು ಬಹಿರಂಗ ಪಡಿಸಲಿ. ಸಮಯ ಬಂದಾಗ ಪಕ್ಷ ಚರ್ಚೆ ಮಾಡಿ ತನ್ನ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರ ಈ ಪ್ರಕರಣದಲ್ಲಿ ಪಂಚನಾಮೆಯಿಂದ ಹಿಡಿದು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಕರಣ ವಹಿಸಿರುವವರೆಗೂ ಸಂಪೂರ್ಣ ಮಾಹಿತಿ ನೀಡಲಿ ಎಂದು ಉತ್ತರಿಸಿದರು.

  • ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ

    ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ

    ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಚರ್ಚೆಯಲ್ಲಿರುವಾಗಲೇ ಕುಖ್ಯಾತ ಹ್ಯಾಕರ್ ಶ್ರೀಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಜೀವನಭೀಮಾನಗರ ಪೊಲೀಸರು ನಿನ್ನೆ ಮಧ್ಯಾಹ್ನ ಶ್ರೀಕಿ ಮತ್ತು ಸ್ನೇಹಿತ ವಿಷ್ಣು ಭಟ್‍ನನ್ನು ಬಂಧಿಸಿದ್ದಾರೆ.

    ನಿನ್ನೆ ತಡರಾತ್ರಿವರೆಗೆ ಶ್ರೀಕಿ ವಿಚಾರಣೆ ನಡೆಸಿದ್ದು, ಆತನ 2 ಮೊಬೈಲನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಜೊತೆಗೆ ಶ್ರೀಕಿಯ ನಾಲ್ಕು ಲ್ಯಾಪ್ ಟ್ಯಾಪ್‍ಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಸ್ತುತ ಇವರ ವಿರುದ್ಧ ಐಪಿಸಿ ಸೆಕ್ಷನ್ 504, 348, 323 ಅಡಿ ಪ್ರಕರಣ ದಾಖಲಾಗಿದ್ದು, ಇಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೂರನೇ ಪೀಠ ಅಸ್ತಿತ್ವಕ್ಕೆ..?

    ಪ್ರಾಥಮಿಕ ತನಿಖೆಯಲ್ಲಿ ವಿಷ್ಣು ಭಟ್ ಹಲ್ಲೆ ಮಾಡಿರೋದು ಸಾಬೀತು ಆಗಿದ್ದು, ಹಲ್ಲೆ ವೇಳೆ ಶ್ರೀಕಿ ವಿಷ್ಣು ಜೊತೆಗಿದ್ದ, ಆದ್ರೆ ಹಲ್ಲೆ ಮಾಡಿಲ್ಲ ಅನ್ನೋ ಮಾಹಿತಿ ಕೂಡ ಪೊಲೀಸರಿಗೆ ಲಭ್ಯವಾಗಿದೆ. ಪ್ರಸ್ತುತ ವಿಷ್ಣು ಭಟ್ ಮತ್ತು ಶ್ರೀಕಿ ಮೆಡಿಕಲ್ ಚೆಕಪ್ ಮಾಡಿಸಿರೋ ಪೊಲೀಸರು ಮೆಡಿಕಲ್ ರಿಪೋರ್ಟ್ ಗಾಗಿ ಕಾಯುತ್ತಿದ್ದಾರೆ.

    ಮೆಡಿಕಲ್ ನಲ್ಲಿ ಮಾದಕ ವಸ್ತು ಸೇವನೆ ಪಕ್ಕಾ ಆದ್ರೆ ಎನ್‍ಡಿಪಿಎಸ್ ಕೇಸ್ ದಾಖಲು ಮಾಡುವ ಸಿದ್ಧತೆಯಲ್ಲಿ ಪೊಲೀಸರು ಇದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ರಾಜಕೀಯ ವಲಯದಲ್ಲಿ ಹ್ಯಾಕರ್ ಶ್ರೀಕಿ ಹೆಸರು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

  • ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

    ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

    – ಕೇಸ್ ಮುಚ್ಚಿ ಹಾಕಲು ನಡೆಯುತ್ತಿದ್ಯಾ ಯತ್ನ..?

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಹಗರಣ ಬಿರುಗಾಳಿ ಎದ್ದಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. 10 ಸಾವಿರ ಕೋಟಿ ರೂ. ಬಿಟ್ ಕಾಯಿನ್ ಹಗರಣದ ಆರೋಪ ಕೇಳಿಬಂದಿದ್ದು, ಸೂಕ್ತ ತನಿಖೆ ಆದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ಕೆಲವು ಪ್ರಭಾವಿಗಳ ಕುರ್ಚಿಗೆ ಕುತ್ತು ಬರಬಹುದು.

    ಹಗರಣದಲ್ಲಿ ಆಡಳಿತ ಪಕ್ಷದವರೇ ಇದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಾಂಬ್ ಸಿಡಿಸಿದೆ. 10 ಸಾವಿರ ಕೋಟಿ ರೂ. ಬಿಟ್‍ಕಾಯಿನ್ ಹಗರಣ ದೊಡ್ಡ ದೊಡ್ಡ ರಾಜಕಾರಣಿಗಳಿದ್ದಾರೆ. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಆದರೆ ಹಗರಣವನ್ನು ಮುಚ್ಚಿಹಾಕಲು ಯತ್ನ ನಡೆಯುತ್ತಿದೆ. ದಾಖಲೆಗಳನ್ನು ಕಲೆ ಹಾಕ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ: ಸಿದ್ದರಾಮಯ್ಯ

    ಇನ್ನು ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಡ್ರಗ್ಸ್, ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳಿದ್ದಾರೆ. ಇದೇ ಕಾರಣಕ್ಕೆ ತನಿಖಾಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದ್ದಾರೆ. ಕೇಸ್ ಮುಚ್ಚಿ ಹಾಕಲು ಯತ್ನಿಸ್ತಿರುವ ವರದಿ ಕಳವಳಕಾರಿ. ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಪ್ರಭಾವ ಬೀರಿ ತನಿಖೆಯ ಹಾದಿ ತಪ್ಪಿಸದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಎಂದು ಒತ್ತಾಯಿಸಿದ್ದಾರೆ.

  • ಬಿಟ್ ಕಾಯಿನ್ ಹೆಸರಲ್ಲಿ 45 ಲಕ್ಷ ರೂಪಾಯಿ ವಂಚನೆ

    ಬಿಟ್ ಕಾಯಿನ್ ಹೆಸರಲ್ಲಿ 45 ಲಕ್ಷ ರೂಪಾಯಿ ವಂಚನೆ

    ಹುಬ್ಬಳ್ಳಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಅಮಿತ್ ಭಾರದ್ವಾಜ್ ಗೇನ್ ಬಿಟ್ ಕಾಯಿನ್ ವಂಚನೆ ಪ್ರಕರಣದಲ್ಲಿ ಹುಬ್ಬಳ್ಳಿಯವರೂ ಮೋಸ ಹೋಗಿರುವ ಪ್ರಕರಣವೊಂದು ಪತ್ತೆಯಾಗಿದೆ.

    ಮೂರು ವರ್ಷಗಳ ಹಿಂದೆ ಬಿಟ್ ಕಾಯಿನ್ ನೀಡುವುದಾಗಿ ನಂಬಿಸಿ ನಮ್ಮಿಂದ 45 ಲಕ್ಷ ಪಡೆದು ವಂಚಿಸಲಾಗಿದೆ ಎಂದು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ತಾಡಪತ್ರಿ ಗಲ್ಲಿಯಲ್ಲಿ ಕಚೇರಿ ತೆರೆದಿದ್ದ, ಭವಾನಿ ನಗರದ ಚೇತನ್ ಪಾಟೀಲ್ ಎಂಬಾತ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ವಾಸಪ್ಪ ಲೋಕಪ್ಪ ಅಂಕುಷ್ಕನಿ ಎಂಬವರು ದೂರು ದಾಖಲಿಸಿದ್ದಾರೆ.

    ಚೇತನ್ ಪಾಟೀಲ್ ಪ್ರಕರಣದ ಮೊದಲ ಆರೋಪಿಯಾದರೆ, ದೆಹಲಿಯ ಅಮಿತ್ ಭಾರದ್ವಾಜ್, ಅಜಯ್ ಭಾರದ್ವಾಜ್, ವಿವೇಕ್ ಭಾರದ್ವಾಜ್, ಮಹೇಂದ್ರ ಕುಮಾರ್ ಹಾಗೂ ಅಮಿತ್ ರಾಜೇಂದ್ರ ಬೀರ್ ವಂಚನೆ ಮಾಡಿದ ಆರೋಪಿಗಳಾಗಿದ್ದಾರೆ.

    2017ರಲ್ಲಿ ಕಂಪನಿಯ ಪರವಾಗಿ ಪ್ರತಿಷ್ಠಿತ ಹೊಟೆಲ್‍ಗಳಲ್ಲಿ ಸೆಮಿನಾರ್ ನಡೆಸಿದ ಚೇತನ್ ಪಾಟೀಲ್, ಅಮಿತ್ ಬೀರ್ ಸೇರಿ ಇತರರು ವೇರಿಯೇಬಲ್ ಟೆಕ್ ಪ್ರೈ. ಲಿ. ಕಂಪನಿಯ ಬಿಟ್ ಕಾಯಿನ್ ಮೇಲೆ ನಾವು ಸಾಕಷ್ಟು ಜನರಿಗೆ ಲಾಭ ಮಾಡಿಕೊಟ್ಟಿದ್ದೇವೆ ಎಂದು ನಂಬಿಸಿದ್ದರು. 1 ಬಿಟ್ ಕಾಯಿನ್‍ಗೆ 1 ಲಕ್ಷದಂತೆ 45 ಬಿಟ್ ಕಾಯಿನ್ ನೀಡುವುದಾಗಿ ನಂಬಿಸಿದ್ದರು. ನಾನು ಹಾಗೂ ಪತ್ನಿ, ಮಗನಿಂದ ತಲಾ 15 ಲಕ್ಷದಂತೆ ಒಟ್ಟು 45 ಲಕ್ಷ ಹಣವನ್ನು 2017ರ ಏಪ್ರಿಲ್ 13ರಂದು ಪಡೆದಿದ್ದೆವು. ಅಲ್ಲದೆ ತಲಾ 15 ಬಿಟ್‍ಕಾಯಿನ್‍ಗಳ ಮೂರು ಇನ್‍ವೈಸ್ ನಂಬರ್ ನೀಡಿದ್ದರು. ಆದರೆ ಈವರೆಗೂ ಬಿಟ್ ಕಾಯಿನ್ ನೀಡದೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

  • ಹ್ಯಾಕರ್ ಶ್ರೀಕಿಯಿಂದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ

    ಹ್ಯಾಕರ್ ಶ್ರೀಕಿಯಿಂದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ

    ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯಿಂದ ಕೋಟ್ಯಂತರ ಮೌಲ್ಯದ ಬಿಟ್ ಕಾಯಿನ್ ಅನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಶ್ರೀಕಿ ಸಿಸಿಬಿ ವಿಚಾರಣೆಯ ವೇಳೆ ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ವಿದೇಶಿ ಆ್ಯಪ್ ಸೇರಿದಂತೆ ಸರ್ಕಾರಿ ಆ್ಯಪ್ ಸಹ ಶ್ರೀಕಿ ಕ್ಯಾಕ್ ಮಾಡ್ತಿದ್ದನು.

    ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸಿದಾಗ ಪೋಕರ್ ಗೇಮ್ ಸೈಟ್, ಬಿಟ್ ಕಾಯಿನ್, ವೈಎಫ್‍ಐ, ಇಥೆರಿಯಂ ಖಾತೆಗಳು ಹೀಗೆ ಹಲವು ವೆಬ್ ಸೈಟ್ ಗಳ ಹ್ಯಾಕ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು. ಇದೀಗ ಸಿಸಿಬಿ ಪೊಲೀಸರು ಆತನ ಬಳಿಯಿಂದ ಸುಮಾರು 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ.

    ಈತ ತನ್ನ ಸಹಚರರಾದ ಸುನೀಷ್ ಹೆಗ್ಡೆ, ಸುಜಯ್, ಹೇಮಂತ್, ರಾಬಿನ್ ಖಂಡೇಲ್ವಾಲ್ ಮೂಲಕವೂ ಹ್ಯಾಕ್ ಮಾಡುತ್ತಿದ್ದ. ಬಳಿಕ ಬಿಟ್ ಕಾಯಿನ್ ಟ್ರೇಡರ್ಸ್ ಗೆ ಮಾರಾಟ ಮಾಡುತ್ತಿದ್ದರು. ಇದರಿಂದ ಬಂದ ಹಣ ಹಾಗೂ ಹವಾಲ ಹಣ ಪಡೆದು ವಿದೇಶದಿಂದ ಗಾಂಜಾ ತರಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು.

    ದೇಶ ವಿದೇಶಗಳ ಪೋಕರ್ ಗೇಮ್ ವೆಬ್ ಗಳನ್ನ ಹ್ಯಾಕ್ ಮಾಡಿ ಡೇಟಾ ಕಳವು ಮಾಡುತ್ತಿದ್ದ. ಸಿಸಿಬಿ ತನಿಖೆಯಿಂದ ಶ್ರೀಕೃಷ್ಣ ಹ್ಯಾಕಿಂಗ್ ಜಾಲ ಕಂಪ್ಲೀಟ್ ಬಯಲಾಗಿದೆ. 3 ಬಿಟ್ ಕಾಯಿನ್ ಎಕ್ಸ್ ಚೇಂಜ್, 10 ಪೋಕರ್ ವೆಬ್ ಸೈಟ್, 4 ಹ್ಯಾಕಿಂಗ್ ವೆಬ್ ಸೈಟ್, 3 ಮಲ್ವಾರ್ಸ್ ಎಕ್ಸ್‍ಪ್ಲೋಟೇಡ್ ಹ್ಯಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ವೆಬ್ ಸೈಟ್ ಹ್ಯಾಕಿಂಗ್ ಬಗ್ಗೆ ಇಂಟರ್ ಪೋಲ್ ಮೂಲಕ ಸಂಬಂಧಪಟ್ಟ ಕಂಪನಿಗಳಿಗೆ ಮಾಹಿತಿ ನೀಡಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ.