Tag: BJP government

  • ಲಕ್ಷ್ಮಿ ದೇವಿ ಸೈಕಲ್, ಆನೆ ಮೇಲೆ ಬರುವುದಿಲ್ಲ, ಕಮಲದಲ್ಲಿ ಕುಳಿತು ಬರುತ್ತಾಳೆ: ರಾಜನಾಥ್ ಸಿಂಗ್

    ಲಕ್ಷ್ಮಿ ದೇವಿ ಸೈಕಲ್, ಆನೆ ಮೇಲೆ ಬರುವುದಿಲ್ಲ, ಕಮಲದಲ್ಲಿ ಕುಳಿತು ಬರುತ್ತಾಳೆ: ರಾಜನಾಥ್ ಸಿಂಗ್

    ಲಕ್ನೋ: ಲಕ್ಷ್ಮಿ ದೇವಿಯು ಎಂದೂ ಸೈಕಲ್ ಅಥವಾ ಆನೆಯ ಮೇಲೆ ಕುಳಿತು ಯಾರ ಮನೆಗೂ ಭೇಟಿ ನೀಡುವುದಿಲ್ಲ. ಹಾಗೆಯೇ ಆಕೆ ಯಾರತ್ತನೂ ತನ್ನ ಕೈ ಬೀಸುವುದಿಲ್ಲ. ಲಕ್ಷ್ಮಿ ಮಾತೆ ಕೇವಲ ಕಮಲದ ಮೇಲೆ ಕುಳಿತು ಬರುತ್ತಾಳೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

    ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಲಕ್ಷ್ಮಿ ದೇವಿಯು ಎಂದೂ ಸೈಕಲ್ ಅಥವಾ ಆನೆಯ ಮೇಲೆ ಕುಳಿತು ಯಾರ ಮನೆಗೂ ಭೇಟಿ ನೀಡುವುದಿಲ್ಲ. ಹಾಗೆಯೇ ಆಕೆ ಯಾರತ್ತಲೂ ತನ್ನ ಕೈ ಬೀಸುವುದಿಲ್ಲ. ಲಕ್ಷ್ಮಿ ಮಾತೆ ಕೇವಲ ಕಮಲದ ಮೇಲೆ ಕುಳಿತು ಬರುತ್ತಾಳೆ. ಈ ಮಾತನ್ನು ನೀವು ಒಪ್ಪುತ್ತೀರಲ್ಲವೇ ಎಂದು ಉತ್ತರ ಪ್ರದೇಶದ ಇತರೆ ಪಕ್ಷಗಳನ್ನು ಲೇವಡಿ ಮಾಡಿದ್ದಾರೆ.

    ನಾವು ಕೇವಲ ಸರ್ಕಾರ ರಚನೆಗಾಗಿ ರಾಜಕೀಯ ಮಾಡುತ್ತಿಲ್ಲ. ನಾವು ಸಮಾಜ ಮತ್ತು ದೇಶವನ್ನು ಕಟ್ಟಲು ರಾಜಕೀಯ ಮಾಡುತ್ತೇವೆ. ಆದ್ದರಿಂದ ನಾವು ದೇಶದ ಒಳಿತಿಗಾಗಿ ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಜನರಿಗೆ ದೊಡ್ಡ ಭರವಸೆಗಳನ್ನು ನೀಡುತ್ತವೆ. ಕಳೆದ 75 ವರ್ಷಗಳಲ್ಲಿ ಜನರ ಭರವಸೆಗಳನ್ನು ಈಡೇರಿಸಿದ್ದರೆ ಭಾರತ 10-20 ವರ್ಷಗಳ ಹಿಂದೆ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶವಾಗಬಹುದಿತ್ತು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

    ಬಿಜೆಪಿ ಸರ್ಕಾರದ ಸಾಧನೆಗಳನ್ನು ಎತ್ತಿ ಹಿಡಿದ ಸಚಿವ ರಾಜನಾಥ್ ಸಿಂಗ್, ಬಡವರಿಗೆ ವಾರ್ಷಿಕ 6,000 ರೂ. ಹಣ, ಉಚಿತ ಪಡಿತರ, ಹಲವಾರು ಜನರಿಗೆ ಉತ್ತಮವಾದ ಮನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

  • ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

    ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

    ಬೀದರ್: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿ ಪರಿವರ್ತನೆಯಾಗುತ್ತಿವೆ ಎಂದು ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

    ಸೇಡಂ ಶಾಸಕ ರಾಜಕುಮಾರ್ ತೇಲ್ಕೂರು ಮಹಿಳೆ ಮೇಲೆ ದೌರ್ಜನ್ಯ ಮಾಡಿರುವ ಆರೋಪ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡ್ರೆ, ಇಂದು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲಾ ಎಂಬುದು ಮೊತ್ತೊಂದು ಸಲ ಸಾಬೀತಾಗುತ್ತಿದ್ದು, ಸೇಡಂ ಶಾಸಕರ ದೌರ್ಜನ್ಯದ ಬಗ್ಗೆ ಮಹಿಳೆ ಸಿಎಂಗೆ ಟ್ವಿಟ್ಟರ್ ಮುಖಾಂತರ ತಿಳಿಸಿದ್ದಾರೆ.  ನಾಗರಿಕ ಸಮಾಜದಲ್ಲಿ ಮಹಿಳೆಗೆ ರಕ್ಷಣೆ ನೀಡಿ ಆರೋಪ ಮಾಡಿದವರ ಮೇಲೆ ಕೇಸ್ ಹಾಕಿ ತನಿಖೆ ಮಾಡಬೇಕಿತ್ತು. ಆದರೆ ದೌರ್ಜನ್ಯಗೊಳಗಾದ ಮಹಿಳೆಗೆ ಶಾಸಕರು ದೂರು ಕೊಟ್ಟಿದ್ದಾರೆ ಎಂದು ಹೇಳಿ ಠಾಣೆಯಲ್ಲಿ ಕೂಡಿ ಹಾಕಿ ಆರೋಪಿಗೆ ರಕ್ಷಣೆ ಕೊಡುವಂತ್ತದ್ದು, ಆತಂಕಕಾರಿ ವಿಷಯವಾಗಿದೆ ಎಂದು ಗರಂ ಆಗಿದ್ದಾರೆ.

    bjp - congress

    ಬಿಜೆಪಿಯ ಪಾಪವನ್ನು ಮುಚ್ಚಲು ಪೊಲೀಸರು ಬೆಂಗಾವಲಾಗಿ ನಿಂತ್ತಿದ್ದು, ಬಿಜೆಪಿ ನಾಯಕರು ಏನೇ ತಪ್ಪು ಮಾಡಿದರು ಬಿ ರಿಪೋರ್ಟ್ ಹಿಡಿದುಕೊಂಡು ಪೊಲೀಸರು ನಿಂತಿದ್ದಾರೆ. ಈ ಮೂಲಕ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಿ, ಮಹಿಳೆಗೆ ರಕ್ಷಣೆ ಕೊಟ್ಟು, ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರಕ್ಕೆ ಆಗ್ರಹ ಮಾಡಿದರು. ಇದನ್ನೂ ಓದಿ:  ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

  • ಆರು ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

    ಆರು ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆರು ತಿಂಗಳ ಆಡಳಿತವನ್ನು ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. ಇದರ ಮಧ್ಯೆಯೇ ಬೊಮ್ಮಾಯಿ ಅವರ ಆರು ತಿಂಗಳ ಸರ್ಕಾರಕ್ಕೆ 6 ಕಾಂಗ್ರೆಸ್‌ ಆರು ಪ್ರಶ್ನೆಗಳನ್ನು ಕೇಳಿ ಕುಟುಕಿದೆ.

    ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?
    ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್‌ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್‌ಡೌನ್‌ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ?

    ಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ಖಾತೆಯನ್ನು ನಿಭಾಯಿಸುತ್ತಿರುವ ಬೊಮ್ಮಾಯಿ ಅವರೇ, ತಮ್ಮ ಅಧಿಕಾರದ 6 ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? GST ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ?

    ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ. ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬೊಮ್ಮಾಯಿ ಅವರೇ, ಈ 6 ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?

    ಸಿಗದ ನೆರೆ ಪರಿಹಾರ, ದೊರಕದ ಕರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ?

    ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬೊಮ್ಮಾಯಿ ಅವರು, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು?

    ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಗಿದೆ, ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ? ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲ್ಲಿದ್ದಾರೆ, ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ ಎಂದು 6 ತಿಂಗಳು ಪೂರೈಸಿರುವ ಬೊಮ್ಮಾಯಿ ಸರ್ಕಾರಕ್ಕೆ 6 ಪ್ರಶ್ನೆಗಳನ್ನು ಕೇಳುವ ಮೂಲಕ ಕಾಂಗ್ರೆಸ್‌ ಚಾಟಿ ಬೀಸಿದೆ.

  • ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಗುತ್ತಿಗೆದಾರರ ಆದ್ಯ ಕರ್ತವ್ಯ: ಕೆ.ಗೋಪಾಲಯ್ಯ

    ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಗುತ್ತಿಗೆದಾರರ ಆದ್ಯ ಕರ್ತವ್ಯ: ಕೆ.ಗೋಪಾಲಯ್ಯ

    ಬೆಂಗಳೂರು: ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ 67 ರ ನಾಗಪುರದ ಸ್ವಾತಿ ಹೋಟೆಲ್ ಬಳಿ ಕೈ ಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಸ್ಥಳೀಯ ಶಾಸಕರಾದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ವೀಕ್ಷಿಸಿದರು.

    ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ತೆರಿಗೆ ಹಣದಲ್ಲಿ ನಡೆಯುತ್ತಿರುವ ಸರ್ಕಾರದ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು, ಇಂಜಿನಿಯರ್ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸೂಚಿಸಿದರು. ಇದನ್ನೂ ಓದಿ: ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಸ್ಥಳೀಯರು ಕೂಡ ತಮ್ಮ ಬಡಾವಣೆಗಳಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾಮಗಾರಿಗಳು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತವೆ ಎನ್ನುವುದರ ಮೇಲೆ ನಿಗಾ ಇರಿಸಬೇಕು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಗುತ್ತಿಗೆದಾರರು, ಇಂಜಿನಿಯರ್‌ಗಳು ಕಾಮಗಾರಿ ಮಾಡಿಕೊಂಡು ಹೋಗುತ್ತಾರೆ ಎಂದು ಕೈ ಕಟ್ಟಿಕೊಂಡು ನೋಡುತ್ತಾ ನಿಂತುಕೊಳ್ಳದೇ, ತಮ್ಮ ಬಡಾವಣೆಯ ಅಭಿವೃದ್ಧಿ ಕಾಮಗಾರಿ ತನ್ನ ಮನೆಯದ್ದೆ ಎಂಬ ಭಾವನೆ ಎಲ್ಲರಿಗೂ ಬಂದರೆ ಕಾಮಗಾರಿಗಳು ದೀರ್ಘ ಬಾಳಿಕೆ ಬರಲು ಸಾಧ್ಯವಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ ಮತ್ತು ಸ್ಥಳೀಯ ಮುಖಂಡರು, ಬಿಬಿಎಂಪಿ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

  • ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನು ನಮ್ಮ ರಾಜ್ಯದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರ್ಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

    ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವಿ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳಲ್ಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ

    ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನು ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ಶಿಕ್ಷಕನ ವರ್ಗಾವಣೆ – ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

  • ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೇಕೆ ಉರಿ – ಡಿಕೆಶಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೇಕೆ ಉರಿ – ಡಿಕೆಶಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ಶಿವಮೊಗ್ಗ: ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೆ ಏಕೆ ಉರಿ. ಇಲ್ಲಿಯವರೆಗೆ ಚರ್ಚ್‍ಗಳಿಗೆ, ಮಸೀದಿಗಳಿಗೆ ಸ್ವಾತಂತ್ರ್ಯ ಇದೆ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ಟ ತಕ್ಷಣ ಡಿ.ಕೆ. ಶಿವಕುಮಾರ್ ಏಕೆ ಬೇಸರ ಮಾಡಿಕೊಂಡರು ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಮುಜರಾಯಿ ದೇವಸ್ಥಾನಗಳನ್ನು ಸರ್ಕಾರ ಮುಕ್ತಗೊಳಿಸುವ ವಿಚಾರವಾಗಿ ಡಿಕೆಶಿ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್ ಅವರು ದೇವಸ್ಥಾನಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಕೊಡುತ್ತಾರೆ ಅಂತ ಹೇಳುವ ಮೊದಲು ಡಿಕೆಶಿ ಅವರು ಜಿಲ್ಲಾಧಿಕಾರಿ ಅವರಿಗೆ ಅರ್ಜಿ ಹಾಕಿಕೊಂಡು ಮುಸಲ್ಮಾನರು ಅಥವಾ ಕ್ರಿಶ್ಚಿಯನ್ ಆಗಿ ಮತಾಂತರವಾದರೆ ರಗಳೆ ಇಲ್ಲ. ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೆ ಏಕೆ ಉರಿ. ಇಲ್ಲಿಯವರೆಗೆ ಚರ್ಚ್‍ಗಳಿಗೆ, ಮಸೀದಿಗಳಿಗೆ ಸ್ವಾತಂತ್ರ್ಯ ಇದೆ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ಟ ತಕ್ಷಣ ಡಿಕೆಶಿಗೆ ಏಕೆ ಬೇಸರ ಮಾಡಿಕೊಂಡರು ನನಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು

    ಗೋಹತ್ಯೆ ನಿಷೇಧ, ಮತಾಂತರ ವಿಷಯ ಬಂದಾಗ ಈ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಡಿಕೆಶಿ ಅವರು ಕೇವಲ ಮುಸಲ್ಮಾನರನ್ನು, ಕ್ರಿಶ್ಚಿಯನ್ನರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಹಿಂದೂಗಳಿಗೆ ತೊಂದರೆ ಆದರೂ ಪರವಾಗಿಲ್ಲ ಅಂತ ಯೋಚನೆ ಮಾಡುತ್ತಿದ್ದಾರೆ. ಗೋ ಹತ್ಯೆ ಮಾಡುವ ವ್ಯಕ್ತಿಗಳ ಬಗ್ಗೆ ಕ್ರಮ ಕೈಗೊಳ್ಳಿ ಅಂದರೂ ಕೈಗೊಳ್ಳಲಿಲ್ಲ. ಗೋಹತ್ಯೆ ನಿಲ್ಲಿಸುವವರನ್ನು ಜೈಲಿಗೆ ಕಳುಹಿಸಿದರು. ಡಿಕೆಶಿ ಅವರು ಇಲ್ಲಿಯೂ ರಾಜಕಾರಣ ತಂದರೆ ನಾನು ಏನು ಮಾಡುವುದಕ್ಕೆ ಆಗುವುದಿಲ್ಲ. ಡಿಕೆಶಿ ಅವರಿಗೆ ದೇವಸ್ಥಾನ ಅಭಿವೃದ್ಧಿ ಆಗುವುದು ಬೇಕಿಲ್ಲ. ಗೋಹತ್ಯೆ ಮಾಡಿದರೆ, ನಮ್ಮ ಹೆಣ್ಣು ಮಕ್ಕಳಿಗೆ ಅನ್ಯಾಯವಾದರೆ ಅವರಿಗೆ ನೋವು ಇಲ್ಲ. ಹೀಗಾಗಿ ಡಿಕೆಶಿ ಮುಸಲ್ಮಾನ್ ಇಲ್ಲವೇ ಕ್ರಿಶ್ಚಿಯನ್ ಆಗುವುದು ಒಳ್ಳೆಯದು ಎಂದಿದ್ದಾರೆ.

    ದೇವಸ್ಥಾನಕ್ಕೆ ಕೈ ಹಾಕಿದರೆ ಸರ್ಕಾರ ಭಸ್ಮ ಆಗುತ್ತದೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಭಸ್ಮ ಆಗಿದೆಯಾ, ಬಿಜೆಪಿ ಭಸ್ಮ ಆಗಿದೆಯಾ? ಗೋಹತ್ಯೆ ಮಾಡಿದ್ದಕೋಸ್ಕರ ಕಾಂಗ್ರೆಸ್ ಭಸ್ಮ ಆಗಿದೆ. ಮತಾಂತರ ನಿಷೇಧ ಕಾಯ್ದೆ ವಿರೋಧ ಮಾಡುತ್ತಿದ್ದಾರೆ. ಅದಕ್ಕೂ ಭಸ್ಮ ಆಗುತ್ತಿದೆ. ದೇಶ ಭಕ್ತರು, ಧರ್ಮ ಭಕ್ತರು ಬಿಜೆಪಿಯಲ್ಲಿ ಇರುತ್ತಾರೆ. ರಾಷ್ಟ್ರ ಭಕ್ತಿ, ಧರ್ಮ ಭಕ್ತಿಯನ್ನು ನಮಗೆ ಆರ್‌ಎಸ್‌ಎಸ್‌ ಹೇಳಿಕೊಟ್ಟಿದೆ. ನಾವೆಲ್ಲರೂ ಆರ್‌ಎಸ್‌ಎಸ್‌ ಬೆಂಬಲಿಗರೇ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

    ಸ್ಥಳೀಯ ಸಂಸ್ಥೆಯ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಅಂದ ಮೇಲೆ ಕಾಂಗ್ರೆಸ್‍ನವರು ಬದುಕಿರಬೇಕಲ್ಲ. ನಮಗೆ ವಿರೋಧ ಪಕ್ಷವೇ ಇಲ್ಲ ಅಂತಿದ್ರೆ ಕಥೆ ಏನು ಡೆಮಾಕ್ರಸಿಯಲ್ಲಿ ವಿರೋಧ ಪಕ್ಷ ಇರಬೇಕು. ಹಾಗಾಗಿ ಕಾಂಗ್ರೆಸ್ ಸ್ವಲ್ಪ ಸ್ಥಾನ ತೆಗೆದುಕೊಳ್ಳುವುದಕ್ಕೆ ಜನ ಬಿಟ್ಟಿದ್ದಾರೆ. ನಾನು ಅದನ್ನು ಸ್ವಾಗತಿಸುತ್ತೇನೆ. ಎಲ್ಲಿ ನಾವು ಎಡವಿದ್ದೇನೆ ಎಂದು ಗಮನಿಸಿ, ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ: ಸೋನಿಯಾ ಗಾಂಧಿ

    ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ: ಸೋನಿಯಾ ಗಾಂಧಿ

    ನವದೆಹಲಿ : ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ. ಭಾರತದ ಇತಿಹಾಸವನ್ನು ತಿರುಚಲಾಗುತ್ತಿದೆ. ದೇಶದ ಸಾಮಾನ್ಯ ಪ್ರಜೆಗೆ ಅಭದ್ರತೆ ಮತ್ತು ಭಯ ಕಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬದಿಗೊತ್ತಿ ಸರ್ವಾಧಿಕಾರ ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    136ನೇ ಕಾಂಗ್ರೆಸ್ ಸಂಸ್ಥಾಪನ ದಿನದ ಹಿನ್ನಲೆ ಕಾರ್ಯಕರ್ತರಿಗಾಗಿ ಸೋನಿಯಾಗಾಂಧಿ ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ಈ ವೀಡಿಯೋ ಸಂದೇಶದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ದೇಶದ ಪರಂಪರೆಯನ್ನು ನಾಶ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಜನಸಾಮಾನ್ಯರಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ, ದೇಶ ವಿರೋಧಿ, ಸಮಾಜ ವಿರೋಧಿ ಷಡ್ಯಂತ್ರಗಳ ವಿರುದ್ಧ ಸಾಧ್ಯವಿರುವ ಎಲ್ಲ ಹೋರಾಟವನ್ನು ಮಾಡುತ್ತೇನೆ. ಪ್ರತಿಯೊಬ್ಬ ಕಾಂಗ್ರೆಸಿಗರು ಇದೇ ನಿರ್ಣಯ ಕೈಗೊಂಡು ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

    ಈ ಮುನ್ನ ಕಾಂಗ್ರೆಸ್ ಇತಿಹಾಸವನ್ನು ನೆನಪಿಸಿದ ಸೋನಿಯಾಗಾಂಧಿ, ಕಾಂಗ್ರೆಸ್ ಮತ್ತು ಅದರ ಎಲ್ಲಾ ನಾಯಕರು ಸ್ವಾತಂತ್ರ್ಯ ಚಳವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ಹೋರಾಡಿದರು. ಜೈಲುಗಳಲ್ಲಿ ತೀವ್ರ ಚಿತ್ರಹಿಂಸೆ ಅನುಭವಿಸಿದರು. ಅನೇಕ ದೇಶಭಕ್ತರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆಗ ಮಾತ್ರ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯದ ನಂತರ ನಾವು ಪಡೆದ ಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಆದರೆ ನಮ್ಮ ಮಹಾನ್ ನಾಯಕರು ಉತ್ತಮ ತಿಳುವಳಿಕೆ ಮತ್ತು ಸಂಕಲ್ಪದಿಂದ ಭಾರತದ ಹೊಸ ನಿರ್ಮಾಣಕ್ಕೆ ಬಲವಾದ ಅಡಿಪಾಯವನ್ನು ಹಾಕಿದ್ದಾರೆ.

    ಈ ಅಡಿಪಾಯದ ಮೇಲೆ ನಾವು ಬಲಿಷ್ಠ ಭಾರತವನ್ನು ನಿರ್ಮಿಸಿದ್ದೇವೆ. ದೇಶದ ಜನರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಕಾಪಾಡಿದ್ದೇವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸದವರಿಗೆ ಈ ಹೋರಾಟದ ಮೌಲ್ಯವನ್ನು ಎಂದಿಗೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಇಂದು ಅವರು ಭಾರತದ ಆ ಭದ್ರ ಬುನಾದಿಯನ್ನು ದುರ್ಬಲಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕುಟುಕಿದ್ದಾರೆ.

  • ಮೋದಿ ಸರ್ಕಾರ ಕ್ರೈಸ್ತರನ್ನು ಟಾರ್ಗೆಟ್ ಮಾಡಿದೆ: ಪಿ. ಚಿದಂಬರಂ

    ಮೋದಿ ಸರ್ಕಾರ ಕ್ರೈಸ್ತರನ್ನು ಟಾರ್ಗೆಟ್ ಮಾಡಿದೆ: ಪಿ. ಚಿದಂಬರಂ

    ಕೋಲ್ಕತ್ತಾ: ಮೋದಿ ಸರ್ಕಾರವು ತನ್ನ ಬಹುಮತದ ಅಜೆಂಡಾವನ್ನು ಮುಂದುವರಿಸಲು ಕ್ರಿಶ್ಚಿಯನ್ನರನ್ನು ಗುರಿಯಾಗಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ಮಿಷನರೀಸ್ ಆಫ್ ಚಾರಿಟಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ವಿಚಾರವಾಗಿ ಪಿ.ಚಿದಂಬರಂ ಗೃಹ ಸಚಿವಾಲಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಮಿಷನರೀಸ್ ಆಫ್ ಚಾರಿಟಿಗೆ ಭವಿಷ್ಯದ ದೃಷ್ಟಿಯಿಂದ ನೀಡುತ್ತಿರುವ ವಿದೇಶಿ ಕೊಡುಗೆಗಳನ್ನು ನಿರಾಕರಿಸುತ್ತಿರುದಕ್ಕಿಂತ ಆಘಾತಕಾರಿ ವಿಚಾರ ಮತ್ತೊಂದಿಲ್ಲ. ಭಾರತದಲ್ಲಿರುವ ಬಡವರು ಮತ್ತು ದಲಿತರ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮದರ್ ತೆರೇಸಾ ಅವರ ಸ್ಮರಣೆಗೆ ಅತ್ಯಂತ ದೊಡ್ಡ ಅವಮಾನವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ನೈಟ್ ಕರ್ಫ್ಯೂ – ಸರ್ಕಾರದ ವಿರುದ್ಧ ಹೋಂಸ್ಟೇ, ರೆಸಾರ್ಟ್ ಮಾಲೀಕರ ಅಸಮಾಧಾನ

    ಎಫ್‌ಸಿಆರ್‌ಎ ನೋಂದಣಿಯ ನವೀಕರಣಕ್ಕಾಗಿ ಮಿಷನರೀಸ್ ಆಫ್ ಚಾರಿಟಿಯು ನೀಡಿದ್ದ ಅರ್ಜಿಯನ್ನು ಡಿಸೆಂಬರ್ 25ರಂದು ಗೃಹ ಸಚಿವಾಲಯ ನಿರಾಕರಿಸಿತ್ತು. ಈ ಬಗ್ಗೆ ಚಿದಂಬರಂ ಟ್ವೀಟ್‌ ಮಾಡಿ, ಎಂಎಚ್‍ಎ ತನ್ನ ಕೌಶಲಗಳನ್ನು ಕೋಮು ಹಿಂಸಾಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಬಳಸಬೇಕೇ ಹೊರತು ಕ್ರಿಶ್ಚಿಯನ್ ಧರ್ಮಾರ್ಥ ಮತ್ತು ಮಾನವೀಯ ಕಾರ್ಯಗಳನ್ನು ನಿಗ್ರಹಿಸಲು ಅಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

    2021ನೇ ವರ್ಷ ಕೊನೆಗೊಳ್ಳುತ್ತಿದ್ದಂತೆ, ಮೋದಿ ಸರ್ಕಾರ ಕ್ರಿಶ್ಚಿಯನ್ನರನ್ನು ಮತ್ತೊಮ್ಮೆ ಗುರಿಯಾಗಿಸಿಕೊಂಡಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಬಿಜೆಪಿ ತಮ್ಮ ಬಹುಮತದ ಅಜೆಂಡಾವನ್ನು ಮುಂದುವರೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಉತ್ತರ ಪ್ರದೇಶದಲ್ಲಿ ಈ ಹಿಂದೆ ಇದ್ದ ಸರ್ಕಾರ ಬಡವರಿಗಾಗಿ ಮೀಸಲಾದ ಹಣವನ್ನು ಕಬ್ರಿಸ್ತಾನ್‍ಗಳಿಗೆ ಬಳಸುವ ಮೂಲಕ ವ್ಯರ್ಥ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ವಿರುದ್ಧ ಪರೋಕ್ಷವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದರು.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟೂರಿನ ಗ್ರಾಮ ಬಟೇಶ್ವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಬಡವರಿಗಾಗಿ ಮೀಸಲಾದ ಹಣವನ್ನು ಕಬ್ರಿಸ್ತಾನ್ (ಸ್ಮಶಾನ)ಗಳಿಗೆ ವ್ಯರ್ಥ ಮಾಡಿತ್ತು. ಅಲ್ಲದೇ ಉರ್ದು ಭಾಷೆ ಗೊತ್ತಿಲ್ಲದವರನ್ನು ಉರ್ದು ಭಾಷಾಂತರಕಾರರನ್ನಾಗಿ ಮಾಡಿತು. ಆದರೆ ಸಂಸ್ಕೃತ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಏನೂ ಮಾಡಿಲ್ಲ ಎಂದು ಹೇಳಿದರು.

    ಕಳೆದ ಐದು ವರ್ಷಗಳಿಂದ ಅಧಿಕಾರದಲ್ಲಿ ಇಲ್ಲದಿದ್ದರೂ ಹೊರಗುಳಿದಿದ್ದರೂ 200 ಕೋಟಿ ರೂ. ಖರ್ಚುಮಾಡಿದೆ. ಈ ಹಣ ಎಲ್ಲಿಂದ ಬಂತು? ಅವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಅದನ್ನು ಲೂಟಿ ಮಾಡಿ ಸಂಗ್ರಹಿಸಲಾಗಿದೆ ಎನ್ನಿಸುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

    ಮಾಜಿ ಪ್ರಧಾನಿಯವರ ಜನ್ಮ ವಾರ್ಷಿಕೋತ್ಸವ ಪ್ರಯುಕ್ತ ಬಟೇಶ್ವರದಲ್ಲಿ 230 ಕೋಟಿ ರೂಪಾಯಿ ಯೋಜನೆಗಳ ಶಂಕುಸ್ಥಾಪನೆ ಮಾಡಿದ ಯೋಗಿ ಆದಿತ್ಯನಾಥ್ ಅವರು, ಭಾರತೀಯ ಜನತಾ ಪಕ್ಷದ ಸರ್ಕಾರವು ಸಂಸ್ಕೃತ ಶಾಲೆಗಳ ಬಗ್ಗೆ ಕಾಳಜಿ ವಹಿಸಿದೆ ಎಂದರು ಮತ್ತು ಬಟೇಶ್ವರ ಅಭಿವೃದ್ಧಿಗೊಳಿಸುವ ಬಗ್ಗೆ ಜನರಿಗೆ ಭರವಸೆ ನೀಡಿದರು. ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ

    ಬಿಜೆಪಿ ಸರ್ಕಾರವು ಉತ್ತರ ಪ್ರದೇಶದ ಯುವಕರಿಗೆ ಟ್ಯಾಬ್ಲೆಟ್‍ಗಳು ಮತ್ತು ಸ್ಮಾರ್ಟ್‍ಫೋನ್‍ಗಳನ್ನು ನೀಡುತ್ತಿದೆ. ಇದಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಹಲವಾರು ಯೋಜನೆಗಳು ಕಾರ್ಯನಿರ್ವಹಿಸುತ್ತಿವೆ. ಅವರ ಹೆಸರಿನಲ್ಲಿ ವೈದ್ಯಕೀಯ ಕಾಲೇಜುಗಳು, ವಸತಿ ಶಾಲೆಗಳು ಮತ್ತು ಮಧ್ಯಂತರ ಶಾಲೆಗಳು ತೆರೆಯುತ್ತಿವೆ ಮತ್ತು ವಸ್ತುಸಂಗ್ರಹಾಲಯ, ಸಾಂಸ್ಕೃತಿಕ ಸಂಕೀರ್ಣ ಮತ್ತು ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

  • ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

    ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

    ಬೆಳಗಾವಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಸರ್ಕಾರ ಜಾರಿಗೆ ತರಲಿ. ಹೊರಗಿಂದ ಬಂದು ಪಕ್ಷ ಸೇರಿದವರು ಆರು ತಿಂಗಳು ಮಂತ್ರಿಗಳಾಗುವಂತಿಲ್ಲ ಅಂತ ಕಾನೂನು ತರಲಿ ಎಂದು ಕಾಂಗ್ರೆಸ್ ಎಂಎಲ್‍ಸಿ ಸಿಎಂ ಇಬ್ರಾಹಿಂ ಸರ್ಕಾರಕ್ಕೆ ಸವಾಲೊಡ್ಡಿದ್ದಾರೆ.

    ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾನೂನಿಗೆ ವಿರೋಧ ಇದೆ. ಪರಿಷತ್ ನಲ್ಲಿ ಮಸೂದೆ ಮಂಡಿಸಿದರೆ ಬೇಡ ಎಂದು ವಿರೋಧಿಸುತ್ತೇವೆ. ಬಿಜೆಪಿಯವರು ದಾರಿ ತಪ್ಪಿದ ಮಕ್ಕಳು. ಅವರಿಗೆ ಏನೂ ಹೇಳುವುದಕ್ಕೆ ಆಗುವುದಿಲ್ಲ. ಬೊಮ್ಮಾಯಿ ಅವರು ಹೇಗೋ ಹೋಗುತ್ತಿದ್ದಾರೆ. ಅವರು ಹೋಗುವ ಮುನ್ನ ಒಳ್ಳೆ ಕೆಲಸ ಮಾಡಿ ಹೋಗಲಿ ಎಂದು ವ್ಯಂಗ್ಯವಾಡಿದ್ದಾರೆ.

    ಮತಾಂತರ ತಡೆ ಮಸೂದೆ ತರುವ ಮುನ್ನ ವಿದೇಶಿ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಲಿ. ಇಲ್ಲಿ ಆ ಕಾಯ್ದೆ ತಂದರೆ ವಿದೇಶಗಳಲ್ಲಿ ಕನ್ನಡಿಗರು ನೆಮ್ಮದಿಯಾಗಿ ಇರಲು ಸಾಧ್ಯವೇ? ಜೊತೆಗೆ ಈ ಕಾನೂನು ಕ್ರಿಶ್ಚಿಯನ್ ಸಮುದಾಯ ಗುರಿಯಾಗಿಸಿಕೊಂಡು ತರುತ್ತಿದ್ದಾರೆ. ಬಿಜೆಪಿಯವರು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗಳಲ್ಲಿ ಓದಿಸುತ್ತಾರೆ. ಅವರ ವಿರುದ್ಧವೇ ಕಾನೂನು ತರುತ್ತಿರುವುದು ಸರೀನಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ. ಹೊರಗಿಂದ ಬಂದು ಪಕ್ಷ ಸೇರಿದವರು ಆರು ತಿಂಗಳು ಮಂತ್ರಿಗಳಾಗುವಂತಿಲ್ಲ ಅಂತ ಕಾನೂನು ತರಲಿ. ಆರು ಜನ ಮಂತ್ರಿಗಳು ವೀಡಿಯೋ ಪ್ರಸಾರಕ್ಕೆ ಸ್ಟೇ ತಂದಿದ್ದಾರೆ. ಮೊದಲು ಆ ಸ್ಟೇ ತೆರವು ಮಾಡಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಲಸಿಗರಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನಿಲ್ಲದ ಪುಂಡಾಟ – ಕನ್ನಡಿಗರ ಮೇಲೆ ಹಲ್ಲೆಗೈದು ನಿಂದಿಸಿದ ಶಿವಸೇನೆ ಕಾರ್ಯಕರ್ತರು!