Tag: BJP-JDS Alliance

  • ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    – ಮೋದಿ ನನ್ನ ಸಂಬಂಧ ಬದಲಾವಣೆ ಮಾಡೋಕೆ ಆಗಲ್ಲ

    ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (H.D Deve Gowda) ಸ್ಪಷ್ಟಪಡಿಸಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ (Elections) ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನವೆಂಬರ್-ಡಿಸೆಂಬರ್ ಒಳಗೆ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್.ಅಶೋಕ್ ಭವಿಷ್ಯ

    ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ ಅಂತ ತಿಳಿಸಿದರು.


    ಕುಮಾರಸ್ವಾಮಿಯವರು 4 ತಿಂಗಳಿಂದ ನಮ್ಮ ರಾಜ್ಯದಲ್ಲಿ ಪ್ರವಾಸ ಮಾಡಿರಲಿಲ್ಲ. ಸ್ವಲ್ಪ ಆರೋಗ್ಯ ಸುಧಾರಣೆ ಆಗಬೇಕಿತ್ತು. ಆರೋಗ್ಯ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ. ಹೊರ ದೇಶದಿಂದ ಬಂದ ಡಾಕ್ಟರ್ ಪರಿಶೀಲನೆ ಮಾಡಿ ಯಾವುದೇ ಸಮಸ್ಯೆ ಇಲ್ಲ. ಅವರು ಎಷ್ಟು ಬೇಕಾದ್ರು ರಾಜಕೀಯದಲ್ಲಿ ಹೋರಾಟ ಮಾಡೋಕೆ ತೊಂದರೆ ಇಲ್ಲ ಎಂದಿದ್ದಾರೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡ್ತಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

  • ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಅಖಾಡ ರಂಗೇರಿದೆ. ಉಭಯ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪ್ರತ್ಯೇಕವಾಗಿ ಹಳ್ಳಿ, ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

    ಮತಬೇಟೆಗಿಳಿದ ನಿಖಿಲ್‌ ಪತ್ನಿ:
    ಸೋಮವಾರವಾದ ಇಂದು ಸಹ 10ಕ್ಕೂ ಹೆಚ್ಚು ಗ್ರಾಮದಲ್ಲಿ ಪುತ್ರನ ಪರ ಮತಯಾಚನೆ ನಡೆಸಲಿದ್ದರೆ, ನಿಖಿಲ್‌ 15 ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದಾರೆ. ಚನ್ನಪಟ್ಟಣದ ಹೆಚ್.ಬ್ಯಾಡರಳ್ಳಿ, ಬೊಮ್ಮನಾಯಕನಹಳ್ಳಿ ಹಾಗೂ ಬೇವೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸುತ್ತಿದ್ದಾರೆ. ಇದರೊಂದಿಗೆ ಪತ್ನಿ ರೇವತಿ ಕೂಡ ನಿಖಿಲ್‌ ಪರವಾಗಿ ಮತಬೇಟೆಗಿಳಿದಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಬೆಳ್ಳಂ ಬೆಳಗ್ಗೆಯಿಂದಲೇ ಪತ್ನಿ ರೇವತಿ (Revathi Nikhil) ಪ್ರಚಾರ ಶುರು ಮಾಡಿದ್ದಾರೆ. ಚನ್ನಪಟ್ಟಣದ ಮಹಿಳಾ ಕಾಲೇಜು ಮುಂಭಾಗ ವಿದ್ಯಾರ್ಥಿಗಳಿಗೆ ಕರಪತ್ರ ಹಂಚಿ ನಿಖಿಲ್‌ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ನಿಖಿಲ್‌ ಪತ್ನಿ ರೇವತಿ ಅವರಿಗೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ

    ಇನ್ನೂ ಪ್ರಚಾರದ ವೇಳೆ ಮಾತನಾಡಿರುವ ನಿಖಿಲ್‌, ಕುಮಾರಸ್ವಾಮಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತೆ. ದೇವೇಗೌಡರು ಕಳೆದ 30 ವರ್ಷಗಳಿಂದ ಹಿಂದೆ ನಿರ್ಣಯ ಮಾಡಿ ಇಗ್ಗಲೂರು ಡ್ಯಾಂ ಮಾಡಿದ್ರು. ಕೆಲವರು 17ಕೆರೆ ತುಂಬಿಸಿದ್ದೇವೆ ಅಂತ ಪ್ರಚಾರ ತೆಗೆದುಕೊಳ್ತಾರೆ. ಆದರೆ ಸದಾನಂದಗೌಡರವರ ಕಾಲದಲ್ಲಿ ಆ ಕೆರೆಗಳನ್ನ ತುಂಬಿಸಿದ್ದು. ವಿ. ಸೋಮಣ್ಣ ಅವರು ಅನುದಾನ ಕೊಟ್ಟು ಕೆರೆಗಳಿಗೆ ಮರುಜೀವ ನೀಡಿದ್ರು. ಕುಮಾರಸ್ವಾಮಿಯವರೂ ಸುಮಾರು 100ಕ್ಕೂ ಹೆಚ್ಚು ಕೆರೆಗಳನ್ನ ತುಂಬಿಸಿದ್ದಾರೆ ಎಂದು ಹೆಚ್‌ಡಿಕೆ ಸಾಧನೆಯನ್ನ ಬಣ್ಣಿಸಿದ್ರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಈ ಹಿಂದೆ ಕುಮಾರಸ್ವಾಮಿ ಅವರು ಸಾರಾಯಿ, ಲಾಟರಿ ನಿಷೇಧ ಮಾಡಿದ್ರು. ಇತ್ತೀಚಿನ ಆನ್ಲೈನ್ ಗೇಮಗಳಿಗೆ ಯುವಕರು ಬಲಿ ಆಗ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಅಂದ್ರೆ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಚನ್ನಪಟ್ಟಣ ತಾಲೂಕಿನಲ್ಲಿ ಅತಿಹೆಚ್ಚು ಹಾಲು ಉತ್ಪಾದನೆ ಆಗುತ್ತೆ. ಸರ್ಕಾರ ರೈತರಿಗೆ ಸರಿಯಾದ ಬೆಂಬಲ ಬೆಲೆ ಕೊಡ್ತಿಲ್ಲ. ಹಾಗಾಗಿ ಈ ಬಾರಿ ಒಂದು ಅವಕಾಶ ಮಾಡಿಕೊಡಿ. ಈ ಚುನಾವಣೆಯ ಸ್ಪರ್ಧೆ ಅನಿರೀಕ್ಷಿತ. ಕಾಂಗ್ರೆಸ್ ಅಭ್ಯರ್ಥಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನನಗೆ ಒಂದು ಅವಕಾಶ ಕೊಟ್ಟು ನೋಡಿ. ಈ ಭಾಗದಲ್ಲಿ ಒಂದು ಕೈಗಾರಿಕೆ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡ್ತೇವೆ ಎಂದು ನಿಖಿಲ್‌ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

  • ಚನ್ನಪಟ್ಟಣ ಟಿಕೆಟ್‌ ಕಗ್ಗಂಟು – ದೆಹಲಿಗೆ ಹೊರಟ ವಿಜಯೇಂದ್ರ

    ಚನ್ನಪಟ್ಟಣ ಟಿಕೆಟ್‌ ಕಗ್ಗಂಟು – ದೆಹಲಿಗೆ ಹೊರಟ ವಿಜಯೇಂದ್ರ

    – ಸೋಮವಾರ ಹೈಕಮಾಂಡ್‌ಗೆ ಗ್ರೌಂಡ್‌ ರಿಪೋರ್ಟ್‌ ಸಲ್ಲಿಕೆ

    ಬೆಂಗಳೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಪಾಲಿಟಿಕ್ಸ್ ಜೋರಾಗಿದೆ. ಅದ್ರಲ್ಲೂ ಚನ್ನಪಟ್ಟಣ ವಿಚಾರವೇ ಹೆಚ್ಚು ಸದ್ದು ಮಾಡ್ತಿದೆ. ಮೈತ್ರಿ ಟಿಕೆಟ್ ವಿಚಾರವಾಗಿ ಬಿಜೆಪಿ-ಜೆಡಿಎಸ್ (BJP JDS Alliance) ನಡುವೆ ಇನ್ನೂ ಒಮ್ಮತ ಮೂಡಿಲ್ಲ. ಇತ್ತ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್‌ ಬೇಕೆಂದು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ ಯೋಗೇಶ್ವರ್‌ (CP Yogeshwara) ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

    ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಸಂಜೆ 5:30ರ ವಿಮಾನದಲ್ಲಿ ದೆಹಲಿಗೆ ಹೊರಟಿದ್ದು, ಸೋಮವಾರ (ಅ.21) ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಮೀಸಲು ಅರಣ್ಯ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ತಡೆ – ಅರಸೀಕೆರೆ ಕೆರೆಗಳಿಗೆ ಹರಿಯದ ನೀರು

    ಹೈಕಮಾಂಡ್‌ಗೆ ಉಪಚುನಾವಣೆ (By Election) ಗ್ರೌಂಡ್ ರಿಪೋರ್ಟ್ ನೀಡಿದ ಬಳಿಕ ಚುನಾವಣಾ ತಯಾರಿ, ಕ್ಷೇತ್ರದ ಚಿತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಚನ್ನಪಟ್ಟಣ ಟಿಕೆಟ್‌ ಜಟಾಪಟಿ, ಸಿಪಿವೈ ಹಠದ ಬಗ್ಗೆಯೂ ಮಾಹಿತಿ ಕೊಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: 6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

    ಕಾಂಗ್ರೆಸ್‌ನಲ್ಲೂ ಟಿಕೆಟ್‌ ಕಗ್ಗಂಟು:
    ಇನ್ನೂ ಮತ್ತೊಂದೆಡೆ ಚನ್ನಪಟ್ಟಣದಿಂದ ಅಭ್ಯರ್ಥಿಯಾಗಿ ಯಾರನ್ನ ಕಣಕ್ಕಿಳಿಸಬೇಕು ಅನ್ನೋ ಬಗ್ಗೆ ಕಾಂಗ್ರೆಸ್ ಕೂಡ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದೆ. ಈ ಕ್ಷೇತ್ರದ ವಿಚಾರದಲ್ಲಿ ಸ್ಪೆಷಲ್ ಇಂಟ್ರೆಸ್ಟ್ ತೋರಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಮೇಲಿಂದ ಮೇಲೆ ಸಭೆ ಮಾಡ್ತಿದ್ದು, ಅಭಿಪ್ರಾಯ ಸಂಗ್ರಹ ಮಾಡ್ತಿದ್ದಾರೆ. ಈ ಹೊತ್ತಲ್ಲೇ ಇಂಟ್ರೆಸ್ಟಿಂಗ್ ಬೆಳವಣಿಗೆ ನಡೆದಿದೆ. ನಿನ್ನೆಯವರೆಗೂ ನಾನು ಸ್ಪರ್ಧೆ ಮಾಡಲ್ಲ ಅಂತಿದ್ದ ಡಿಕೆ ಸುರೇಶ್ ಇದೀಗ ರಾಗ ಬದಲಿಸಿದ್ದಾರೆ. ಪಕ್ಷ ತೀರ್ಮಾನ ಮಾಡಿದ್ರೆ ಸ್ಪರ್ಧೆ ಮಾಡೋ ಸುಳಿವು ನೀಡಿದ್ದಾರೆ. ಜೊತೆಗೆ ರಘುನಂದನ್ ರಾಮಣ್ಣ, ಮಾಜಿ ಎಂಎಲ್‌ಎ ಅಶ್ವಥ್ ಹೆಸರು ಕೂಡ ಕೇಳಿಬರ್ತಿದೆ. ಆದ್ರೆ, ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗ್ತಾರೆ ಎನ್ನುವುದರ ಮೇಲೆ ಯಾರನ್ನು ಅಭ್ಯರ್ಥಿ ಮಾಡ್ಬೇಕು ಎಂದು ಕಾಂಗ್ರೆಸ್ ತೀರ್ಮಾನ ತೆಗೆದುಕೊಳ್ಳಲಿದೆ. ಇನ್ನು ನಾವೇನು ಶಸ್ತ್ರ ಸನ್ಯಾಸ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳುವ ಮೂಲಕ ಡಿಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.

  • ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ಬೇಕಾ? ಇನ್ಯಾರಿಗೆ ಹಾಕ್ತಿರಿ? – ಹೆಚ್‌ಡಿಕೆ ನಿಗಿನಿಗಿ ಕೆಂಡ

    ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ಬೇಕಾ? ಇನ್ಯಾರಿಗೆ ಹಾಕ್ತಿರಿ? – ಹೆಚ್‌ಡಿಕೆ ನಿಗಿನಿಗಿ ಕೆಂಡ

    – ಕರ್ನಾಟಕದಲ್ಲಿರೋದು ದರೋಡೆಕೋರರ ಸರ್ಕಾರ ಎಂದ ಕೇಂದ್ರ ಸಚಿವ
    – ರಾಷ್ಟ್ರ ರಾಜಧಾನಿಯಲ್ಲೂ ಮುಡಾ ಹಗರಣ ಸದ್ದು

    ನವದೆಹಲಿ: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಪ್ರತಿಭಟನೆ ಮಾಡಿದ್ರಿ, ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ದಹನ ಮಾಡಿದ್ರಿ. ಈಗ ಹೈಕೋರ್ಟ್‌ ಆದೇಶ ಆಗಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ (Siddaramaiah) ಅವರಿಗೆ ಹಾಕಬೇಕಾ? ಇನ್ಯಾರಿಗೆ ಹಾಕ್ತಿರಿ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಕಾಂಗ್ರೆಸ್‌ ನಾಯಕರ ವಿರುದ್ಧ ಲೇವಡಿ ಮಾಡಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, ಸಿದ್ದರಾಮಯ್ಯ ಅವರಿಗೆ ವಕೀಲರಾಗಿರುವ ಅನುಭವ ಇದೆ. ನೈತಿಕತೆ ಉಳಿಸಿಕೊಂಡು ಬಂದವರಲ್ಲವೇ? ಲೋಕಾಯಕ್ತ ತನಿಖೆಗೆ ಆದೇಶ ಮಾಡಿದಾಗ ಅಧಿಕಾರದಲ್ಲಿ ಉಳಿಬೇಕಾ ಅಂತ ಅವರೇ ಹೇಳಬೇಕು. ಹೈಕೋರ್ಟ್ (Karnataka Highcourt) ಆದೇಶ ನೀಡಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ ಅವರಿಗೆ ಹಾಕಬೇಕಾ? ಇನ್ಯಾರಿಗೆ ಹಾಕ್ತಿರಿ? ಎಂದು ಲೇವಡಿ ಮಾಡಿದ್ದಾರೆ.

    ಮೂಡಾ ಹಗರಣ (MUDA Scam) ದೇಶದ್ಯಾಂತ ಪ್ರಾಮುಖ್ಯತೆ ಪಡೆದಿದೆ. ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ನಿನ್ನೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಕಾನೂನು ತಜ್ಞರು ಅನುಭವದ ಆಧಾರದ ಮೇಲೆ ವಿಶ್ಲೇಷಣೆ ಮಾಡ್ತಿದ್ದಾರೆ. ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಆದರೆ ಸಿಎಂಗೆ ಮಾತ್ರ ತೀರ್ಪಿನ ಪ್ರತಿ ಸಿಕ್ಕಿಲ್ಲ, ಓದಿಲ್ಲ ಅಂತಿದ್ದಾರೆ. ಅಲ್ಲದೇ ಕುಮಾರಸ್ವಾಮಿ ರಾಜೀನಾಮೆಯನ್ನೂ ಸಿಎಂ ಕೇಳಿದ್ದಾರೆ. ಅವರೂ ಜಾಮೀನಿನ ಮೇಲೆ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

    ನನ್ನ ಪ್ರಕರಣಕ್ಕೂ, ಸಿದ್ದರಾಮಯ್ಯ ಪ್ರಕರಣಕ್ಕೂ ಬಹಳ ವ್ಯತಾಸ ಇದೆ. ಬಿಜೆಪಿ-ಜೆಡಿಎಸ್ ಸೇರಿ ಸರ್ಕಾರವನ್ನು ಅಸ್ಥಿರ ಮಾಡಲು, ನನ್ನ ವರ್ಚಸ್ಸಿಗೆ ಕಪ್ಪು ಮಸಿ ಬಳೆಯಲು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಹೇಳ್ತಿದ್ದಾರೆ. ನಾನು ಆರೋಪದಿಂದ ಮುಕ್ತನಾಗಿ ಮಾತನಾಡುತ್ತೇನೆ ಎಂದಿದ್ದೆ. ಆದ್ರೆ ಇವತ್ತು ನಿಮ್ಮ ಭಂಡತನ ಏನೂ ಅನ್ನೋದು ತೋರಿಸುತ್ತಿದ್ದೀರಿ ಎಂದು ಲೇವಡಿ ಮಾಡಿದ್ದಾರೆ.

    ನನ್ನ ಮೇಲೆ 2 ಕೇಸ್‌ ಇದೆ:
    ಕುಮಾರಸ್ವಾಮಿ ಸರ್ಕಾರಿ ಭೂಮಿ ಹೊಡೆದಿದ್ದೀರಿ ಎಂದು ಎಂದು ಆರೋಪ ಮಾಡ್ತಾರೆ. ಹೀಗಾಗೀ ನನ್ನ ಮೇಲಿನ ಕೇಸ್ ಬಗ್ಗೆ ಹೇಳ್ತಿನಿ. ನನ್ನ ಮೇಲೆ ಎರಡು ಪ್ರಕರಣ ಇದೆ. ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣ ಇದೆ ಮತ್ತೊಂದು ಕಾನೂನು ಬಾಹಿರವಾಗಿ ಭೂಮಿ ಹಂಚಿಕೆ ಮಾಡಿದ್ದೆ ಎಂದು ಆರೋಪಿಸಿದ್ದಾರೆ. ಆದರೆ ನಾನು ಅರ್ಜಿ ಹಾಕಿದವರಿಗೆ ಭೂಮಿ ನೀಡಿದ್ದೆ. ಮುಖ್ಯವಾಗಿ ಇನ್ನೂ ಭೂಮಿ ಹಂಚಿಕೆ ಆಗಿಲ್ಲ. ಅಧಿಕಾರಿಗಳು ಮಾಡಿರುವ ತಪ್ಪಿಗೆ ಕುಮಾರಸ್ವಾಮಿ ಮೇಲೆ ಅರ್ಜಿ ಹಾಕಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಜೆಪಿ ಹಾಕಿದ್ದ ಕೇಸ್ ಮೇಲೆ ಅರ್ಜಿ ಹಾಕಿಸಿದ್ರು:
    ಸಿದ್ದರಾಮಯ್ಯ ಹುಟ್ಟು ಹೋರಾಟಗಾರರಂತೆ. ಅವರು ಯಾವ ಹೋರಾಟ ಮಾಡಿದ್ದಾರೆ ಇವರು. ಬಳ್ಳಾರಿ ಪಾದಯಾತ್ರೆ ಬಿಟ್ಟು ಇನ್ನೇನು ಹೋರಾಟ ಮಾಡಿದ್ದಾರೆ? ವಿರೋಧ ಪಕ್ಷದ ನಾಯಕರಾಗಿ ಅವರು ಯಾವ ಹೋರಾಟ ಮಾಡಿದ್ದಾರೆ? ನಾನು ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದಕ್ಕೆ ಅವರು ಹಾಕಿಸಿದ್ದ ಕೇಸ್ ಇದು. ಸಿದ್ದರಾಮಯ್ಯ ಬಂದ ಮೇಲೆ ನನ್ನ ಮೇಲಿನ ದ್ವೇಷಕ್ಕೆ ಕೇಸ್ ದಾಖಲಿಸಿದರು. ಬಿಜೆಪಿ ಹಾಕಿದ್ದ ಕೇಸ್ ಮೇಲೆ ಸುಪ್ರೀಂ ಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅರ್ಜಿ ಹಾಕಿಸಿದರು. ಅದನ್ನು ಇಟ್ಟುಕೊಂಡು ಈಗ ರಾಜೀನಾಮೆ ಕೇಳ್ತಿದ್ದಾರೆ. ನಾನೇನು ಸರ್ಕಾರದ ಆಸ್ತಿ ಹೊಡೆದಿದ್ದಿನಾ? ಈಗ ಗಂಗೇನಹಳ್ಳಿ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಇದರಲ್ಲಿ ಯಡಿಯೂರಪ್ಪ ಮತ್ತು ನನ್ನನ್ನು ಸೇರಿಸಿದ್ದಾರೆ. ಇದರಲ್ಲಿ ಕುಮಾರಸ್ವಾಮಿ ಪಾತ್ರ ಏನು? ಗಂಗೇನಹಳ್ಳಿ ಡಿ ನೋಟಿಫಿಕೇಷನ್‌ನಲ್ಲಿ ರಾಜೀನಾಮೆ ಕೇಳ್ತಿದ್ದಾರೆ. ಪ್ರಕರಣ ದಾಖಲಾದಾಗ ಲೋಕಾಯುಕ್ತ ಏನ್ ಮಾಡ್ತಿತ್ತು? ಆ ನಂತರ ನಿಮ್ಮ ಕೇಸ್‌ಗಳನ್ನ ಮುಚ್ಚಿಕೊಳ್ಳಲು ಎಸಿಬಿಗಳನ್ನ ಶುರು ಮಾಡಿದ್ರಿ ಎಂದು ತಿರುಗೇಟು ನೀಡಿದ್ದಾರೆ.

    ಗಂಗೇನಹಳ್ಳಿ ಡಿನೋಟಿಕೇಷನ್ ಮಾಡಿಲ್ಲ. ಸತ್ತವರ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದೆ ಎಂದು ಕೃಷ್ಣಭೈರೇಗೌಡ ಆರೋಪ ಮಾಡ್ತಾರೆ. ಇದೇಲ್ಲ ಗೊತ್ತಿದ್ದು ನನ್ನ ಮಂತ್ರಿ ಮಂಡಲದಲ್ಲಿ ಯಾಕೆ ಸಚಿವರಾಗಿದ್ದರು? ಈಗ ಜನಪ್ರತಿನಿಧಿಗಳ ನ್ಯಾಯಲಯ ಏನ್ ಹೇಳಿದೆ? 90 ದಿನಗಳಲ್ಲಿ ತನಿಖಾ ವರದಿ ನೀಡಲು ಹೇಳಿದೆ. ನಿನ್ನೆ ಹೈಕೋರ್ಟ್ ತೀರ್ಪಿನಲ್ಲಿ ಟ್ರಯಲ್ ಮುಗಿದು ಚಾರ್ಜ್ ಶೀಟ್ ಫೈಲ್ ಆಗಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ, ಇದು ಕಾನೂನು ಹೋರಾಟ ಮೂಲಕವೇ ಆಗಬೇಕು ಎಂದು ಹೇಳಿದ್ದೆ. ತಪ್ಪು ಮಾಡಿಲ್ಲ ಅಂದರೆ ಕಾನೂನಿನಲ್ಲಿ ರಕ್ಷಣೆ ಪಡೆಯಬಹುದು ಎಂದು ಹೇಳಿದೆ. ನಾನು ರಾಜೀನಾಮೆ ಈಗಲೂ ಕೇಳಿಲ್ಲ. ನಾನು ರಾಜೀನಾಮೆ ಕೇಳುವ ನೈತಿಕತೆ ಇಟ್ಟುಕೊಂಡಿದ್ದೇನೆ ಸಿದ್ದರಾಮಯ್ಯ ಅವರೇ ಎಂದು ಕುಟುಕಿದ್ದಾರೆ.

    ನನ್ನ ನೈತಿಕತೆ ಪ್ರಶ್ನೆ ಮಾಡ್ತಿರಾ, ರಿಡೂ ನಲ್ಲಿ ಏನ್ ಮಾಡಿದ್ದಿರಿ? ಅದರಲ್ಲಿ ಎಷ್ಟು ಜನರಿಗೆ ಭೂ ಮಾಲೀಕರಿಗೆ ವಾಪಸ್ ಹೋಗಿದೆ? ಎಷ್ಟು ಜನ ಬಿಲ್ಡರ್ ಗಳಿಗೆ ಭೂಮಿ ಹೋಗಿದೆ? ಇದ್ಯಾವ ನೈತಿಕತೆ? ನಾನು ಆರೋಪದಿಂದ ಮುಕ್ತವಾಗಿ ಬಂದ ಮೇಲೆ ಈ ವಿಷಯದ ಮೇಲೆ ಮಾತನಾಡ್ತಿನಿ. ನಾನು ನೈತಿಕತೆ ಕಳೆದುಕೊಂಡಿದ್ದೇನೆ ಎಂದು ಹೇಳಿಲ್ಲ. ನಿಮ್ಮ ಥರಕ್ಕೆ ಡಿನೋಟಿಫಿಕೇಷನ್ ಮಾಡಿಲ್ಲ. ಬಾಮೈದನ ಹೆಸರಿನಲ್ಲಿ ಭೂಮಿ ತಗೊಂಡಿಲ್ಲ ಎಂದು ಲೇವಡಿ ಮಾಡಿದ್ದಾರೆ.

    ಕರ್ನಾಟಕದಲ್ಲಿರೋದು ದರೋಡೆಕೋರರ ಸರ್ಕಾರ:
    ಕರ್ನಾಟಕದಲ್ಲಿ ಸರ್ಕಾರ ಇದಿಯಾ, ದರೋಡೆಕೋರರ ಸರ್ಕಾರ ಇದು. ಸಿದ್ದರಾಮಯ್ಯ ಸರ್ಕಾರ ಹಿಂದಿನ ಅವಧಿಯಲ್ಲೂ ದರೋಡೆ ಮಾಡಿದೆ. ಈ ಸರ್ಕಾರದಿಂದ ಆಡಳಿತ ನಿರೀಕ್ಷೆ ಮಾಡ್ತಿದ್ದೀರಾ? ನೈತಿಕತೆ ಇಲ್ಲ ಅಂತ ರಾಜೀನಾಮೆ ಕೇಳಿಲ್ಲ ಅಂತ ಅಲ್ಲ. ನಾನು ರಾಜೀನಾಮೆ ಕೇಳುವ ನೈತಿಕತೆ ಇಟ್ಟುಕೊಂಡಿದ್ದೇನೆ. ನಾನು ಆರೋಪ ಮುಕ್ತನಾಗಬೇಕು ಅಂತಾ ಸುಮ್ನೆ ಇದ್ದೇನೆ. ನಾನು ಹಿಟ್ ಆಂಡ್ ರನ್ ಅಲ್ಲ, ವರ್ಗಾವಣೆಗೆ ಎಷ್ಟೇಷ್ಟು ಹಣ ತಗೊಬೇಕು ಎನ್ನುವ ಚರ್ಚೆ ನಡೆದಿದೆ. ಅದರದ್ದೇ ಪೆನ್ ಡ್ರೈವ್ ಇದೆ, ಅದನ್ನೇ ತೋರಿಸಿದ್ದು ಎಂದು ಮತ್ತೆ ಪೆನ್‌ಡ್ರೈವ್‌ ವಿಚಾರ ಪ್ರಸ್ತಾಪಿಸಿದ್ದಾರೆ.

  • `ಕೈʼ ನಾಯಕರು ಕುಮಾರಣ್ಣನನ್ನ ಹೇಗೆ ಕಟ್ಟಿ ಹಾಕ್ಬೇಕು ಅಂತ ದೆಹಲಿಯಲ್ಲಿ ಚರ್ಚಿಸಿದ್ದಾರೆ: ನಿಖಿಲ್‌ ಕಿಡಿ

    `ಕೈʼ ನಾಯಕರು ಕುಮಾರಣ್ಣನನ್ನ ಹೇಗೆ ಕಟ್ಟಿ ಹಾಕ್ಬೇಕು ಅಂತ ದೆಹಲಿಯಲ್ಲಿ ಚರ್ಚಿಸಿದ್ದಾರೆ: ನಿಖಿಲ್‌ ಕಿಡಿ

    – ಜೆಡಿಎಸ್ ಪಕ್ಷದಿಂದ ಜಿಪಂ, ತಾಪಂ ಚುನಾವಣೆಗೆ ಸಿದ್ಧತೆ ಕುರಿತು ಸಭೆ
    – ಚನ್ನಪಟ್ಟಣ ಜೆಡಿಎಸ್‌ನ ಭದ್ರಕೋಟೆ ಎಂದ ನಿಖಿಲ್‌

    ಬೆಂಗಳೂರು: ಜಿಪಂ, ತಾಪಂ ಚುನಾವಣೆ ಸಿದ್ಧತೆ ಕುರಿತು ಬೆಂಗಳೂರಿನ ಜೆಪಿ ಭವನದಲ್ಲಿಂದು ಜೆಡಿಎಸ್ ಪಕ್ಷದಿಂದ (JDS Party) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ನೂರಾರು ಜೆಡಿಎಸ್‌ ಮುಖಂಡರು (JDS Leader) ಪಾಲ್ಗೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚಿಸಿದರು.

    ಸಭೆಯ ಬಳಿಕ ಮಾಧ್ಯಮಗಳ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಮ್ಮ ನಾಯಕರಾದ ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಸಂದರ್ಭ ಮೊದಲ ಸಭೆ ಮುಗಿದಿದೆ. ಸಂಘಟನೆ ಇನ್ನು ಚುರುಕು ಆಗಬೇಕು. ಹಲವಾರು ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರವಾಸ ಮಾಡಬೇಕು. ಅದರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ಜಿಲ್ಲಾವಾರು, ತಾಲ್ಲೂಕುವಾರು ಉಸ್ತುವಾರಿಗಳ ನೇಮಕ ಮಾಡಬೇಕಿದೆ ಹಾಗಾಗಿ ಈ ಸಭೆ ಕರೆದಿದ್ದೇವೆ ಎಂದರು. ಇದನ್ನೂ ಓದಿ: ಮಾಜಿ ಸಚಿವ ಎನ್ ಮಹೇಶ್ ಮನೆಯಲ್ಲಿ ಕಳ್ಳತನ – 50 ಸಾವಿರ ಹಣ ದೋಚಿದ ಕಳ್ಳರು

    ಶೀಘ್ರದಲ್ಲೇ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ:
    ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ (HD Kumaraswamy) ಅವರ ಸ್ವಕ್ಷೇತ್ರ ಕಳೆದ 2 ಬಾರಿ ಜನ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಹಾಗಾಗಿ ಪಕ್ಷದ ಧ್ವನಿಯಾಗಿ ಪಕ್ಷ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆ (Channapatna By Election 2024) ಶೀಘ್ರದಲ್ಲೇ ಘೋಷಣೆ ಆಗಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರು, ಮುಖಂಡರಿಗೆ ಜವಾಬ್ದಾರಿ ಕೊಟ್ಟು ಕೆಲಸ ಮಾಡಬೇಕು. ಕಾರ್ಯಕರ್ತರ ಬಯಕೆ ಆ ನಿಟ್ಟಿನಲ್ಲಿ ಕೆಲಸ ಮಾಡ್ತಾ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅಂತಿಮವಾಗಿ ದೆಹಲಿಯ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಈಗಾಗಲೇ ವರದಿ ಸಹ ಹೈಕಮಾಂಡ್ ಕೈಸೇರಿದೆ. ಕೆಲವೇ ದಿನಗಳಲ್ಲಿ ಎನ್‌ಡಿಎ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎಂದು ವಿವರಿಸಿದರು.

    ಚನ್ನಪಟ್ಟಣ ಕಾಂಗ್ರೆಸ್‌ ಭದ್ರಕೋಟೆ:
    ಇನ್ನೂ ಜೆಡಿಎಸ್, ಬಿಜೆಪಿಗೆ ಸ್ಥಾನ ಬಿಟ್ಟು ಕೊಡುತ್ತಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, ಇಲ್ಲಿ ಪ್ರಶ್ನೆ ಯಾವುದೇ ತೀರ್ಮಾನ, ಚರ್ಚೆ ಬೀದಿಯಲ್ಲಿ ಮಾಡೋದು ಸೂಕ್ತ ಅಲ್ಲ. ಏನೇ ಇದ್ದರೂ ಅಧಿಕೃತ ತೀರ್ಮಾನ ಆಗಬೇಕು. ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು. ದೆಹಲಿ ನಾಯಕರು, ನಮ್ಮ ನಾಯಕರು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು. ಟಿಕೆಟ್ ಗೊಂದಲ ಕಾಂಗ್ರೆಸ್‌ಗೆ ಲಾಭ ಆಗುವ ವಿಚಾರ ಕುರಿತು ಮಾತನಾಡಿ, ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ, ವರದೇಗೌಡರಂತ ಸಾಮಾನ್ಯ ವ್ಯಕ್ತಿಗೆ ಬೆಂಬಲ ನೀಡಿದ್ದಾರೆ. ಜೆಡಿಎಸ್‌ನ 60 ಸಾವಿರ ಮತಗಳಿವೆ. ಕಾಂಗ್ರೆಸ್‌ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮತಗಳು ಬಂದಿರಬಹುದು. ನಾವು ಡೇಟಾ ಇತಿಹಾಸ ನೋಡಿದಾಗ ತಿಳಿಯುತ್ತೆ. ಸಿ.ಪಿ ಯೋಗಿಶ್ವರ್ ಅವರು ಸಹ ವೈಯಕ್ತಿಕ ವರ್ಚಸ್ಸು ಇಟ್ಟುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

    2018ರಲ್ಲಿ ಕುಮಾರಣ್ಣನನ್ನ ಸಿಎಂ ಮಾಡ್ದಾಗ ಏನ್‌ ಮಾಡ್ತಿದ್ರು?
    ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತಕ್ಕೆ ಪತ್ರ ಬರೆದಿರುವ ಬಗ್ಗೆ ಮಾತನಾಡಿದ ನಿಖಿಲ್, ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಅವರ ನಾಯಕತ್ವದ ಶಕ್ತಿ ಹೆಚ್ಚಾಗಿದೆ. ಹಳೇ ಮೈಸೂರು ಪ್ರಾಂತ್ಯ ಅಲ್ಲದೇ, ಉತ್ತರ ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ನಿನ್ನೆ-ಮೊನ್ನೆ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ರು. ಅಲ್ಲಿ ಮುಖ್ಯವಾದ ಚರ್ಚೆ ಕುಮಾರಸ್ವಾಮಿ ಅವರನ್ನ ಯಾವ ರೀತಿ ಕಟ್ಟಿ ಹಾಕಬೇಕು ಅಂತ ಚರ್ಚೆ ಆಗಿದೆ. ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಪ್ರಶ್ನೆ ಕೇಳ್ತೀನಿ.. 2018 ರಲ್ಲಿ ಕುಮಾರಸ್ವಾಮಿ ಅವರನ್ನ ಸಿಎಂ ಮಾಡೋಕೆ ಬಂದ್ರು. ಆಗ ಇವರಿಗೆ ಮಾಹಿತಿ ಇರಲಿಲ್ವ? ಈಗ ಯಾಕೆ ಇದನ್ನ ಪ್ರಶ್ನೆ ಮಾಡ್ತಾ ಇದ್ದಾರೆ? ಗೌರ್ನರ್ ವಿರುದ್ಧ ಪ್ರತಿಟನೆ ಮಾಡಿದ್ರು, ಮುಡಾ ವಿಚಾರ ದೇಶಾದ್ಯಂತ ಚರ್ಚೆ ಆಗ್ತಾ ಇದೆ. ಮುಡಾದು ಪ್ರತಿದಿನ ಒಂದಲ್ಲ ಒಂದು ದಾಖಲೆ ಹೊರಗಡೆ ಬರ್ತಾನೆ ಇದೆ ಎಂದು ಕೈ ನಾಯಕರಿಗೆ ತಿಳಿದರು.

    ಕುಮಾರಸ್ವಾಮಿ ಗಣಿಗಾರಿಕೆಗೆ ಸಹಿ ಹಾಕಿಲ್ಲ. ಇವರ‍್ಯಾರು ಸಹ ಕುಮಾರಸ್ವಾಮಿ ಅವರನ್ನ ಕೇಂದ್ರ ಸಚಿವ ಸ್ಥಾನದಿಂದ ಇಳಿಸೋಕೆ ಆಗಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನ ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಮುಡಾ ಹಗರಣ ಮುಚ್ಚಿಹಾಕಲು ಪ್ಲಾನ್‌ ಅಷ್ಟೇ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸರ್ಕಾರ ಕೆಡವಲು ಶಾಸಕರಿಗೆ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ

  • ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಹಾಸನ: ಅಧಿಕಾರಿಗಳು 50:50 ನಿವೇಶನ ಕೊಡುವುದನ್ನು ಯಾವುದೇ ಕಾರಣಕ್ಕೂ ಸಭೆಗೆ ಮಂಡಿಸಲ್ಲ. ಅವರಿಗೆ ಆ ಅಧಿಕಾರವಿದೆ. ಮುಡಾ ಹಗರಣಕ್ಕೆ (MUDA Scam) ಅಧಿಕಾರಿಗಳು ಕಾರಣವೇ ಹೊರತು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಮಿತಿಯಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ಹೇಳಿದರು.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ನೇರ ಅರ್ಜಿದಾರರಲ್ಲ. ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಇಲ್ಲ. ಯಾರ ಗಮನಕ್ಕೂ ತರದೇ ಅಧಿಕಾರಿಗಳೇ ಇದನ್ನ ಮಾಡಿದ್ದಾರೆ. ಇದು ಮುಡಾ ಅಧ್ಯಕ್ಷರು ಮತ್ತು ಯಾವ ಸದಸ್ಯರ ಗಮನಕ್ಕೂ ಬರಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಸವಲತ್ತು ಪಡೆದಿರುವ ಎಲ್ಲರ ಹೆಸರು ಹೇಳಬೇಕು. ತನಿಖೆ ನಡೆಯುತ್ತಿದೆ ಸತ್ಯಾಂಶ ಹೊರಬರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Fashion Tips| ಹೆಣ್ಣಿಗೆ ಸೀರೆ ಯಾಕೆ ಅಂದ?- ನಾರಿಮಣಿಯರ ಗಮನ ಸೆಳೆದ ಬನಾರಸ್ ಸೀರೆ

    ನಾನು ಒಬ್ಬ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ. ನಾನು ಮೂರು ಬಾರಿ ಶಾಸಕನಾಗಿ ಮುಡಾದಲ್ಲಿ ಕೆಲಸ ಮಾಡಿದ್ದೇನೆ. ಅರ್ಜಿ ಇಲ್ಲದೇನೆ ಹೇಗೆ ಮಂಜೂರಾತಿ ಮಾಡಲು ಆಗುತ್ತೆ? ಅರ್ಜಿ ಇಲ್ಲ ಎಂದು ನಾವೇನು ಹೇಳಿಲ್ಲ. ಮಂಜೂರಾತಿ ಮಾಡಿಕೊಡಿ ಎಂದು ಅರ್ಜಿ ಕೊಟ್ಟಿದ್ದಾರೆ. ತಪ್ಪು ಬರೆದಾಗ ವೈಟ್ನರ್ ಹಾಕೋದು ಸಹಜ. ನ್ಯಾಯಾಂಗ ತನಿಖೆಗೆ ಕೊಟ್ಟಿದ್ದೇವೆ ಪರಿಶೀಲನೆ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್

    ಯಡಿಯೂರಪ್ಪ (BS Yediyurappa) ಅವರ ತಂಗಿ ಮಕ್ಕಳಿಗೆ ನಿವೇಶನಗಳನ್ನು ಕೊಟ್ಟಿಲ್ವಾ? 50:50 ಯಲ್ಲಿ ನಿವೇಶನ ತಗೊಂಡಿಲ್ವಾ? ಪ್ರಾಮಾಣಿಕರಾಗಿದ್ದರೆ ಅವರು ತಿಳಿಸಲಿ. ಜೆಡಿಎಸ್ ಶಾಸಕರು (JDS MLAs) 50:50 ಹಂಚಿಕೆ ಅಡಿಯಲ್ಲಿ ಎಷ್ಟು ನಿವೇಶನ ತೆಗೆದುಕೊಂಡಿದ್ದಾರೆ? 1800-2000 ಸೈಟ್‌ಗಳನ್ನು ವ್ಯವಸ್ಥಿತವಾಗಿ ತೆಗೆದುಕೊಂಡಿದ್ದಾರಲ್ಲಾ? ಅದು ಯಾರದ್ದು? ಇವರು, ಇವರ ತಮ್ಮನ ಮಕ್ಕಳು, ಅಕ್ಕನ ಮಕ್ಕಳು, ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳಿಗೆ ಕೊಟ್ಟಿಲ್ವಾ? ಎಂದು ಕಿಡಿಕಾರಿದರು.

    ಸಿಎಂ, ಡಿಸಿಎಂ ದೆಹಲಿ ಭೇಟಿಯ ವಿಚಾರ ತಿಳಿಸಿದ ಅವರು, ಎಲ್ಲಾ ಶಾಸಕರು ದೆಹಲಿಗೆ ಹೋಗಿಲ್ಲ. ಸಿಎಂ ಮತ್ತು ಡಿಸಿಎಂ ಅವರು ರಾಜ್ಯದ ಇವತ್ತಿನ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಲು ದೆಹಲಿಗೆ ಹೋಗಿದ್ದಾರೆ. ಅವರನ್ನು ದೆಹಲಿಗೆ ಹೋಗುವುದಕ್ಕೆ ಎಲ್ಲಾ ಶಾಸಕರು ಒತ್ತಾಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್

    ರಾಷ್ಟ್ರಪತಿ ಅವರನ್ನು ಭೇಟಿ ಮಾಡೋಣ ಎಂದಿದ್ದೇವೆ. ಬಿಜೆಪಿ-ಜೆಡಿಎಸ್ ನವರು ಗದಾಪ್ರಹಾರ ಮಾಡುತ್ತಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಕೊಡೋಣ ಎಂದು ಹೇಳಿದ್ದೇವೆ. ಆದಷ್ಟು ಬೇಗ ಎಲ್ಲಾ ಶಾಸಕರು ಹೋಗಿ ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.

  • Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

    Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

    ಹಾಸನ: Who Is That Preetham Gowda? ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪ್ರಶ್ನೆ ಮಾಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರೀತಂ ಗೌಡ (Preetham Gowda) ಉತ್ತರ ಕೊಟ್ಟಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರೀತಂಗೌಡ ಯಾರು ಎಂಬ ಪ್ರಶ್ನೆಗೆ ನಮ್ಮ ನಾಯಕರು ಉತ್ತರ ಕೊಟ್ಟಿದ್ದಾರೆ. ಪ್ರೀತಂ ಗೌಡ ಓರ್ವ ಸಾಮಾನ್ಯ ಕಾರ್ಯಕರ್ತ ಅನ್ನೋದನ್ನ ಅವರ ಗಮನಕ್ಕೆ ತಂದಿದ್ದಾರೆ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚೇನು ಹೇಳುವುದಿಲ್ಲ ಎಂದು ಉತ್ತರಿಸಿದ್ದಾರೆ.

    ಕೆಂಡಾಮಂಡಲವಾಗಿದ್ದ ಹೆಚ್‌ಡಿಕೆ:
    ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ಇತ್ತೀಚೆಗೆ ಹೆಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದರು. ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಯಾರದು ಪ್ರೀತಂ ಗೌಡ? ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟವನನ್ನ ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ. ಸಹಿಸಿಕೊಳ್ಳೋದಕ್ಕೆ ಒಂದು ಮಿತಿಯಿದೆ ಎಂದು ಕಿಡಿಕಾರಿದ್ದರು.

    ಸುದ್ದಿಗೋಷ್ಠಿಯಲ್ಲಿ ಮುಂದುವರಿದು ಮಾತನಾಡಿದ ಪ್ರೀತಂ ಗೌಡ, ಮೈತ್ರಿ ಧರ್ಮ ಪಾಲನೆ ಮಾಡುಬೇಕು ಅನ್ನೋದು ರಾಷ್ಟ್ರೀಯ, ರಾಜ್ಯ ನಾಯಕರ ಸದುದ್ದೇಶ. ಅಧಿಕಾರ ಸಮಬಲವಾಗಿ ಹಂಚಿಕೆಯಾಗಬೇಕು. ಮೈತ್ರಿ ಧರ್ಮವನ್ನು ಎಲ್ಲರೂ ಪಾಲನೆ ಮಾಡಬೇಕು. ಎಲ್ಲಾ ಸದಸ್ಯರ ಅಭಿಪ್ರಾಯದೊಂದಿಗೆ ಪಾಲನೆ ಮಾಡಬೇಕು. ಎರಡು ಪಕ್ಷಕ್ಕೆ ಬಹುಮತ ಇಲ್ಲದಿರುವುದರಿಂದ ಅಧಿಕಾರ ಹಂಚಿಕೆಯಾಗಬೇಕು. ಕಾರ್ಯಕರ್ತರ ಚುನಾವಣೆ, ವೈಯಕ್ತಿಕ ಪ್ರತಿಷ್ಠೆಗೆ ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.

    ಮೈತ್ರಿ ಆಗಿರುವುದು ರಾಷ್ಟ್ರೀಯ ಮಟ್ಟದಲ್ಲಿ, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅವರಿಗೂ ಕೂಡ ಬದ್ಧತೆ ಇರಬೇಕು. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಆಗಿರುವ ಮೈತ್ರಿ, ಇದರಲ್ಲಿ ಯಾವುದೇ ಗೊಂದಲ ಬೇಡ. ಹಾಸನ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಧರ್ಮ ಪಾಲಿಸಲಾಗುವುದು. ಅಧಿಕಾರ ಸಮಾನಾಗಿ ಹಂಚಿಕೆಯಾಗಲಿದೆ. ಹಾಸನ ನಗರಸಭೆಯಲ್ಲಿ ಮೊದಲ ಹತ್ತು ತಿಂಗಳು ಬಿಜೆಪಿ ಅಧಿಕಾರ ಕೊಡಬೇಕು ಎನ್ನುವ ಭಾವನೆ ಇದೆ. ಅದನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    ನನ್ನಿಂದ ತಪ್ಪಾಗಬಾರದು ಅಂತ ಸಹಮತ ನೀಡುತ್ತಿದ್ದೇನೆ:
    ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಕಡಿಮೆ ಮತಗಳು ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಧಾನ ಪರಿಷತ್ ಚುನಾವಣೆ ಆಯ್ತು. ವಿವೇಕಾನಂದ ಅವರು ನಮ್ಮ ಮನೆಗೆ ಭೇಟಿ ನೀಡಿ ಸಹಕಾರ ಕೇಳಿದ್ರು. ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡರು ಫೋನ್ ಮಾಡಿದ್ರು. ನಮ್ಮ ರಾಜ್ಯಾಧ್ಯಕ್ಷರ ಸೂಚನೆಯು ಇತ್ತು. ಪ್ರಾಮಾಣಿಕವಾಗಿ ವಿವೇಕಾನಂದರ ಗೆಲುವಿಗೆ ಕೆಲಸ ಮಾಡಿದ್ರು. ಆದ್ರೆ ಇದು ಕಾರ್ಯಕರ್ತರ ಚುನಾವಣೆ, ವೈಯುಕ್ತಿಕ ಪ್ರತಿಷ್ಠಿಗೆ ಆಸ್ಪದ ಕೊಡಬಾರದು. ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರ ಹಂಚಿಕೆಯಾಗಬೇಕು. ನನ್ನಿಂದ ಯಾವುದೇ ತರಹದ ತಪ್ಪುಗಳು ಆಗಬಾರದೆಂದು ಸಹಮತ ನೀಡುತ್ತಿದ್ದೇನೆ ಎಂದಿದ್ದಾರೆ.

    ನನ್ನಿಂದ ಯಾವುದೇ ರೀತಿಯ ಚಿಕ್ಕ ಲೋಪವಾಗಬಾರದು. ಸಾಂದರ್ಭಿಕ ಸಮಯದಲ್ಲಿ ಕೆಲವು ಸಾಂದರ್ಭಿಕ ಮತಗಳನ್ನು ಪಡೆದು ಹಾಸನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಾಂದರ್ಭಿಕ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಸಾಂದರ್ಭಿಕ ಶಾಸಕರು ವಿಫಲರಾಗಿದ್ದಾರೆ. ಅವರಿಗೆ ಯಾವ ಸಂದರ್ಭದಲ್ಲಿ ಯಾರು ವೋಟು ಹಾಕಿದ್ರು ಅಂತ ಎಲ್ಲರಿಗೂ ಗೊತ್ತಿದೆ. ಆ ವೋಟುಗಳನ್ನು ಅವರು ಹಿಡಿದು ಇಟ್ಟುಕೊಳ್ಳಬೇಕಿತ್ತು. ಸಾಂದರ್ಭಿಕ ಮತಗಳು ಗಟ್ಟಿ ಇಲ್ಲದ ಸಂದರ್ಭದಲ್ಲಿ ಬೇರೆ ಬೇರೆ ಪಕ್ಷಗಳಿಗೆ ಹೋಗುತ್ತೆ. ಸಾಂದರ್ಭಿಕ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಚುನಾಯಿತರಾದವರಿಗೆ ಅವರ ಶಕ್ತಿ ಈ ಚುನಾವಣೆಯಲ್ಲಿ ಗೊತ್ತಾಗಿದೆ. ಶಾಸಕರು 84 ಸಾವಿರ ಮತಗಳನ್ನು ಪಡೆದಿದ್ದರು. ಲೋಕಸಭಾ ಚುನಾವಣೆಯಲ್ಲಿ 68 ಸಾವಿರ ಮತಗಳು ಬಂದಿವೆ. ಮೈತ್ರಿ ಧರ್ಮ ಪಾಲನೆ ಮಾಡಿದ್ದಕ್ಕೆ 68 ಸಾವಿರ ಮತಗಳು ಬಂದಿವೆ. ಶ್ರಮಪಟ್ಟು ಮತಗಳಿಸಿರುವುದು ಗಟ್ಟಿಯಾಗಿರುತ್ತೆ. ಇದರಿಂದ ನಗರಸಭೆ ಚುನಾವಣೆಯ ಮೈತ್ರಿ ಅನಿವಾರ್ಯತೆ ಏನು ಎಂಬುದು ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.

    ಇನ್ನೂ ಪಾದಯಾತ್ರೆಯಲ್ಲಿ ಕಡಗಣನೆ ವಿಚಾರ ಕುರಿತು ಮಾತನಾಡಿ, ಪಾದಯಾತ್ರೆಯಲ್ಲಿ ಎಲ್ಲಾ ಕಡೆ ಕಾಣಿಸಿಕೊಂಡಿದೆ. ಅದಕ್ಕೆ ಸೂಕ್ತ ಸಮಯದಲ್ಲಿ ಸೂಕ್ತವಾದ ಉತ್ತರ ಸಿಗುತ್ತೆ. ನನ್ನ ರಾಜಕಾರಣ ಲಾಂಗ್ ಟರ್ಮ್. ನಮ್ಮ ಪಕ್ಷದ ಹಿರಿಯರು ಮಾರ್ಗದರ್ಶನ ಕೊಟ್ಟಿದ್ದಾರೆ. ನಮ್ಮ ಮನೆಯ ಹಿರಿಯರು ಬುದ್ಧಿ ಮಾತು ಹೇಳ್ತಾರೆ. ಅದನ್ನು ಆಶೀರ್ವಾದ ಅಂತ ತಗೋತಿನಿ. ನನ್ನದು ಬಹಳ ದೀರ್ಘವಾದ ರಾಜಕಾರಣ. ಸಾಂದರ್ಭಿಕವಾಗಿ ನಡೆಯುವ ಘಟನೆಗಳಿಗೆ, ಸಾಂದರ್ಭಿಕವಾಗಿ ದೃತಿಗೆಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಕಾಂಗ್ರೆಸ್ಸಿಗನಾಗಿ ನಾನೇ ಕೈಮುಗಿದು ಧನ್ಯವಾದ ಹೇಳ್ತೀನಿ: ಕೃಷ್ಣಬೈರೇಗೌಡ

    ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಕಾಂಗ್ರೆಸ್ಸಿಗನಾಗಿ ನಾನೇ ಕೈಮುಗಿದು ಧನ್ಯವಾದ ಹೇಳ್ತೀನಿ: ಕೃಷ್ಣಬೈರೇಗೌಡ

    – ಬಿಜೆಪಿ-ಜೆಡಿಎಸ್‌ನಿಂದ ರಾಜ್ಯ ಸರ್ಕಾರ ಉರುಳಿಸಲು ಸಂಚು: ಆರೋಪ

    ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ (Mekedatu Project) ಅನುಮತಿ ಕೊಡಿಸಿ, ಆಗ ಕಾಂಗ್ರೆಸ್ಸಿಗನಾಗಿ ನಾನೇ ನಿಮಗೆ ಕೈಮುಗಿದು ಧನ್ಯವಾದ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಚಿವ ಕೃಷ್ಣಬೈರೇಗೌಡ (Krishna Byre gowda) ಹೇಳಿದ್ದಾರೆ.

    ಚಿಕ್ಕಮಗಳೂರಿನಲ್ಲಿ (Chikkamagaluru) ಮಾತನಾಡಿದ ಅವರು, ಭದ್ರಾ ಮೇಲ್ದಂಡೆ, ಕಳಸ ಬಂಡೂರಿ ಯೋಜನೆಯನ್ನ ಕೇಂದ್ರ ಸರ್ಕಾರ ಕೆಳಗೆ ಹಾಕಿಕೊಂಡು ಕೂತಿದೆ. ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಿ. ಆವಾಗ ನಾನು ಕಾಂಗ್ರೆಸ್ಸಿಗನಾಗಿ ನಿಮಗೆ ಕೈಮುಗಿದು ಧನ್ಯವಾದ ತಿಳಿಸುತ್ತೇನೆ. ಇದನ್ನು ಮಾಡಿದರೆ ನೀವು ಕೇಂದ್ರದಲ್ಲಿ ಮಂತ್ರಿಯಾಗಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಶೇಖ್ ಹಸೀನಾ ಭಾರತದ ಮೂಲಕ ಲಂಡನ್‌ಗೆ ಪಲಾಯನ; ಭಾರತ-ಬಾಂಗ್ಲಾ ಗಡಿಯಲ್ಲಿ ಹೈಅಲರ್ಟ್

    ಡಿಸೆಂಬರ್ ವೇಳೆಗೆ ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೇಂದ್ರ ಎನ್‌ಡಿಎ ಸರ್ಕಾರದಲ್ಲಿ ಕುಮಾರಸ್ವಾಮಿ ಮಂತ್ರಿಯಾಗಿದ್ದಾರೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ಸ್ವಾಮಿ? ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕು ಎನ್ನುವುದೇ ನಿಮ್ಮ ಕೊಡುಗೆನಾ? ಸರ್ಕಾರವನ್ನು ಬೀಳಿಸುವುದಕ್ಕೆ, ಎತ್ತುವುದಕ್ಕೆ ವೋಟ್ ಹಾಕಿರುವ ಜನರಿದ್ದಾರೆ. ನೀವೆಲ್ಲಾ ಸೇರಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದ್ದೀರಲ್ಲ, ಕರ್ನಾಟಕಕ್ಕೆ ನಿಮ್ಮಿಂದ ಸಿಕ್ಕ ಕೊಡುಗೆ ಏನು? ಆಪರೇಷನ್ ಮಾಡಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸಿದರೆ ರಾಜ್ಯಕ್ಕೆ ಅದೇ ನಿಮ್ಮ ಕೊಡುಗೆನಾ? ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಉರುಳಿಸಬೇಕು ಎನ್ನುವುದು ಮಾತ್ರ ನಿಮ್ಮ ಪ್ರಯತ್ನವಾ? ಎಂದು ಸರಣಿ ಪ್ರಶ್ನೆಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಆರೋಪಿಯನ್ನು ಕರೆ ತಂದು ಮರು ಸೃಷ್ಟಿ ಹೇಗೆ ಮಾಡಲಾಯ್ತು?

    ಆ ಕಡೆ ಪ್ರಹ್ಲಾದ್‌ ಜೋಶಿ, ಈ ಕಡೆ ಕುಮಾರಸ್ವಾಮಿ ಇವರಿಬ್ಬರಿಂದ ಕಾಂಗ್ರೆಸ್ ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿದೆ. ಸರ್ಕಾರ ಬೀಳಿಸಿದ್ರೆ ಕರ್ನಾಟಕಕ್ಕೆ ಏನು ಸಿಗುತ್ತೆ? ನೀವು ಇವತ್ತು ಮಂತ್ರಿಯಾಗಿರೋದು ಬರೀ ದ್ವೇಷ ಸಾಧನೆ ಮಾಡೋದಕ್ಕಾ? ಸರ್ಕಾರ ಬೀಳಿಸುತ್ತೇವೆ ಎನ್ನುವುದು ಯಾವ ಪುರುಷಾರ್ಥಕ್ಕಾಗಿ? ಅದಕ್ಕಾಗಿಯೇ ಜನ ನಿಮ್ಮನ್ನ ದೆಹಲಿಗೆ ಕಳುಹಿಸಿರುವುದಾ? ಕೇಂದ್ರ ಬಿಜೆಪಿಯಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿ ಹಾಕುವುದಕ್ಕೆ ಇವೆಲ್ಲ ಗಿಮಿಕ್ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳು ಸೇರಿ, ಏನಾದರೂ ಮಾಡಿ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ಮಾಡುತ್ತಿದೆ ಎಂದು ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: ಶುಭ ಮುಹೂರ್ತ ನೋಡಿ ಅಕ್ರಮದ ದಾಖಲೆ ಬಿಡುಗಡೆ ಮಾಡಿ: ಹೆಚ್‍ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

  • ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

    ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

    – ಅಂದು ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ
    – ಮೋದಿ ಮಾತು ಕೇಳಿದ್ದರೆ ನಾನೇ ಸಿಎಂ ಆಗಿರುತ್ತಿದ್ದೆ
    – ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವರ ಮಾತು

    ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗಿಂದು ಅದ್ಧೂರಿ ಸ್ವಾಗತ ಕೋರಲಾಯಿತು. ಮಹಿಳಾ ಘಟದ ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತ ಕೋರಿದರು. ಅಲ್ಲದೇ ಜೆಡಿಎಸ್ ವತಿಯಿಂದ ಇಲ್ಲಿನ ಜೆಪಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ (Felicitation Ceremony) ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.

    ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ಡಿಕೆ, ಪಕ್ಷದ ಕಾರ್ಯಕರ್ತರ ದುಡಿಮೆಗೆ 2008 ರಿಂದ ಯಾವುದೇ ರೀತಿಯ ಪ್ರತಿಫಲ ಸಿಕ್ಕಿರಲಿಲ್ಲ. ಅಂತಹ ಸಮಯದಲ್ಲಿ ಪಕ್ಷವನ್ನ ಉಳಿಸಿದ ಬೆಳೆಸಿದ ಲಕ್ಷಾಂತರ ಕಾರ್ಯಕರ್ತರು ಈ ರಾಜ್ಯದಲ್ಲಿ ಇದ್ದೀರಿ. ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡ್ತೀನಿ. ಮೋದಿ (Narendra Modi) ಅವರು 2 ಬಾರಿ ಪ್ರಧಾನಿಯಾಗಿ ಉತ್ತಮವಾಗಿ ಕೆಲಸ ಮಾಡಿ, 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರ ಮಂತ್ರಿ ಮಂಡಲದಲ್ಲಿ ಕೇಂದ್ರದ ಮಂತ್ರಿ ಆಗಿದ್ದೇನೆ, ನನ್ನ ಪಾಲಿಗೆ ಬಂದಿರೋ ಈ ಮಂತ್ರಿ ಸ್ಥಾನವನ್ನ ಕರ್ನಾಟಕದ ಜನರಿಗೆ ಅರ್ಪಣೆ ಮಾಡ್ತೀನಿ ಎಂದು ಭಾವುಕರಾದರು.

    ಮೋದಿಗೆ ಧನ್ಯವಾದ: 2018ರ ದಿನವನ್ನ ನಾನು ನೆನಪು ಮಾಡಿಕೊಳ್ತೀನಿ. ಅವತ್ತು ಬಹುಮತ ಬಾರದೇ ಇದ್ದಾಗ ಕಾಂಗ್ರೆಸ್‌ನವರು ಬಂದರು. ಕಾಂಗ್ರೆಸ್‌ನ ದೆಹಲಿ ನಾಯಕರು ದೇವೇಗೌಡರ ಮನೆಗೆ ಬಂದು ಒತ್ತಾಯ ಹಾಕಿ ನನಗೆ ಬಲವಂತವಾಗಿ ಸಿಎಂ ಸ್ಥಾನ ಕೊಟ್ಟಿದ್ದರು. ಇವತ್ತು ನಾನು ದೆಹಲಿಯಿಂದ ಕನ್ನಡ ನಾಡಿನ ಮಣ್ಣಿಗೆ ಪಾದಾರ್ಪಣೆ ಮಾಡಿದ್ದೇನೆ. ಆವತ್ತು ನಾನು ಸಿಎಂ ಇದ್ದಾಗ ಇದೇ ಜಾಗದಲ್ಲಿ ಸನ್ಮಾನ ಮಾಡಿದ್ರಿ. ಅಂದು ಕಣ್ಣಲ್ಲಿ ನೀರು ಹಾಕಿದ್ದೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದಾಗ ನಮ್ಮನ್ನ ಯಾವ ರೀತಿ ನಡೆಸಿ ಕೊಂಡಿದ್ದರು ಅಂತ ಹೇಳಿದ್ದೆ. ವಿಷಕಂಠ ಆಗಿದ್ದೇ ಅಂತ ಹೇಳಿದ್ದೆ. ಆದರೆ ಇವತ್ತು ನಾನು ಅತ್ಯಂತ ಸಂತೋಷದಿಂದ ಯಾವುದೇ ಕಲ್ಮಷ ಇಟ್ಟುಕೊಳ್ಳದೇ ಪ್ರಾಮಾಣಿಕ ನನ್ನ ಮಾತು ಹೇಳ್ತಿದ್ದೇನೆ. ಮೊದಲಿಗೆ ಮೋದಿ ಅವರಿಗೆ ಕಾರ್ಯಕರ್ತ ಸಮ್ಮುಖದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

    ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ: ಕಾಂಗ್ರೆಸ್ ಜೊತೆ ರಾಜ್ಯದಲ್ಲಿ ಸರ್ಕಾರ ಮಾಡಿ ಏನ್ ಆಯ್ತು ಅಂತ ಜನರಿಗೆ ಗೊತ್ತಿದೆ. ಆವತ್ತು ಸಹ ಕಾಂಗ್ರೆಸ್ ನಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡೋಕೆ ಬಿಡಲಿಲ್ಲ. ಹೀಗಾಗಿ ನಾನು ಶಾಸಕರ ಜೊತೆ ಸೇರಿ ಮುಂದೆ ಹೆಜ್ಜೆ ಇಟ್ಟಿದ್ವಿ. ಆದಾಗ ಬಳಿಕ ನಮ್ಮ ಮತ್ತು ಬಿಜೆಪಿ ಶಾಸಕರು ಸರ್ಕಾರ ಮಾಡೋಣ ಅಂತ ಹೋದ್ವಿ. ನಾನು ಆವತ್ತು ಎಂ.ಪಿ ಪ್ರಕಾಶ್ ಅವರಿಗೆ ನೀವೇ ಆಗಿ ಅಂತ ಹೇಳಿದ್ದೇ. ನಾನು ಯಡಿಯೂರಪ್ಪಗೆ ಅಧಿಕಾರ ಕೊಡಬೇಕು ಅಂತ ಇದ್ದವನು ನಾನು, ಆದ್ರೆ ಅವರಿಗೆ ಅಧಿಕಾರ ಕೊಡಬಾರದು ಅಂತ ಕುತಂತ್ರ ನಡೆಯಿತು. ನಾನೂ ಸಹ ಆ ಕುತಂತ್ರಕ್ಕೆ ಬಲಿಯಾದೆ. ನಾನು ಪಕ್ಷ ಉಳಿಸಿಕೊಳ್ಳೋಕೆ 20 ತಿಂಗಳು ಕೆಲಸ ಮಾಡಿದೆ. ಅಂದು ಸಹ ನಾನು ಹಣದ ವ್ಯಾಮೋಹ ಬಲಿಯಾಗಿಲ್ಲ. ಲಾಟರಿ ನಿಷೇಧ ಮಾಡಿದೆ, ಸಾರಾಯಿ ನಿಷೇಧ ಮಾಡಿದೆ. ಪಕ್ಷ ಕಟ್ಟಬೇಕು ಅಂತ ಗ್ರಾಮ ವಾಸ್ತವ್ಯ ಮಾಡಿದೆ. ಹಣ ಮಾಡೋಕೆ ಇಷ್ಟಪಡೆಯಲಿಲ್ಲ ಎಂದು ಭಾವುಕರಾದರು.

    ಜೆಡಿಎಸ್‌ ನಾಶ ಮಾಡ್ತೀವಿ ಅಂದಿದ್ದರು: ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ತರೋಣ ಅಂತ ಪ್ರಯತ್ನ ಮಾಡಿದೆ, ನನ್ನ ಆರೋಗ್ಯ ಲೆಕ್ಕಿಸದೇ ಕೆಲಸ ಮಾಡಿದೆ. ನಾನು ಅದರಲ್ಲಿ ಯಶಸ್ವಿಯಾಗಲಿಲ್ಲ. ನಾನು ಹೋದ ಕಡೆ ಜನ ಸೇರುತ್ತಾರೆ. `ಪಂಚರತ್ನ’ ಯಾತ್ರೆಗೆ ಲಕ್ಷಾಂತರ ಜನ ಸೇರಿದ್ದರು. ವಿವಿಧ ಬಗೆಯ ಹಾರಗಳನ್ನ ಹಾಕಿದ್ರು, ಗಿನ್ನಿಸ್ ರೇಕಾರ್ಡ್ ಆಯ್ತು. ಇಷ್ಟೆಲ್ಲ ಶ್ರಮ ಹಾಕಿದರೂ 19 ಸೀಟ್‌ಗೆ ಇಳಿಯಿತು. ಜೆಡಿಎಸ್ ಮುಗಿದೇ ಹೋಯ್ತು. ಪಕ್ಷಕ್ಕೆ ಬನ್ನಿ ಅಂತ ಕಾಂಗ್ರೆಸ್ ಅವರು ಕರೆಯುತ್ತಿದ್ದರು, ಕ್ಷೇತ್ರದ ಕೆಲಸಕ್ಕೆ ಹೋದ್ರೆ ಹಣ ಕೊಡ್ತೀವಿ ಪಕ್ಷಕ್ಕೆ ಬನ್ನಿ ಅಂತ ಹಣ ಕೋಡೋಕೆ ಬಂದಿದ್ದರು. ಜೆಡಿಎಸ್ ನಾಶ ಮಾಡ್ತೀವಿ ಅಂತ ಹೋದ್ರು. ಇವತ್ತು ಎಲ್ಲಿಗೆ ಬಂದು ನಿಂತಿದೆ? 2018ರಲ್ಲಿ ರಾಜ್ಯದ ವಿಷಯಗಳ ಬಗ್ಗೆ ಮೋದಿ ಅವರಿಗೆ ಮಾತಾಡೋಕೆ ಹೋಗಿದ್ದೆ, ಆಗ ನಿನ್ನ ಕೆಲಸಕ್ಕೆ ಬೆಲೆ ಇಲ್ಲ. ನೀನು ರಾಜೀನಾಮೆ ಕೊಟ್ಟು ಬಾ, ನೀನೇ ಸಿಎಂ ಆಗು ಅಂತ ಮೋದಿ ಹೇಳಿದ್ದರು. ಆವತ್ತು ಮೋದಿ ಮಾತು ಕೇಳಿದ್ದರೆ ಕಾರ್ಯಕರ್ತರು ಇಷ್ಟು ಕಷ್ಟ ಪಡುತ್ತಿರಲಿಲ್ಲ. ಆ ಅವಕಾಶ ನಾನೇ ಕಳೆದುಕೊಂಡೆ ಎಂದು ಕಹಿ ಸತ್ಯಗಳನ್ನು ಕಾರ್ಯಕರ್ತರ ಮುಂದೆ ಬಿಟ್ಟಿಟ್ಟರು.

    ಈಗಲೂ ನಮ್ಮ ಜೊತೆಗೂಡಿ ಕೆಲಸ ಮಾಡು ಅಂತ ಮೋದಿ ಅವರು ಗೌರವ ಕೊಟ್ಟಿದ್ದಾರೆ. ಈ ಗೌರವ ಕಾರ್ಯಕರ್ತರಿಗೆ ಸೇರುತ್ತದೆ. ಇಲ್ಲದೇ ಹೋಗಿದ್ದರೆ ನಮ್ಮನ್ನ ಕೇಳೋರು ಯಾರು? ಕಾರ್ಯಕರ್ತರ ಪ್ರೀತಿಗೆ ಫಲ ಸಿಕ್ಕಿದೆ. ನಾವು ಗೆದ್ದಿರೋದು ಎರಡು ಸ್ಥಾನ. ಹಾಸನ ಜನರಿಗೆ ದೋಷ ಕೊಡೊಲ್ಲ, ಹಾಸನದ ಜನ ಕೊಟ್ಟಿರೋ ಶಕ್ತಿ ಕೊನೆ ಉಸಿರು ಇರೋ ವರೆಗೂ ಮರೆಯೊಲ್ಲ. ಕೆಲವು ರಾಜಕೀಯ ಆಯ್ತು. ಅದಕ್ಕೂ ಕಾಲ ಬರುತ್ತದೆ ಎಂದು ಹೇಳಿದರು.

    ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಮೃದ್ಧಿ ಮಂಜುನಾಥ್, ಸಂಸದ ಮಲ್ಲೇಶ್ ಬಾಬು, ವೈಎಸ್‌ವಿ ದತ್ತಾ ಸೇರಿ ಶಾಸಕರು, ಮಾಜಿ ಶಾಸಕರು, ಪಕ್ಷದ ನಾಯಕರು ಭಾಗಿ ಪಾಲ್ಗೊಂಡಿದ್ದರು.

  • ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌, ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು

    ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌, ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು

    ಬೆಂಗಳೂರು: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.

    ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.

    ಮೈತ್ರಿ ಅಭ್ಯರ್ಥಿಗೂ ಗೆಲುವು:
    ಇನ್ನೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವಾಗಿದೆ. 37,627 ಮತಗಳನ್ನು ಪಡೆದುಕೊಂಡಿರುವ ಸರ್ಜಿ 6,935 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

    ಇನ್ನೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದನ್ನೂ ಓದಿ: ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

    ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇತ್ತೀಚೆಗಷ್ಟೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಗುರುವಾರವೂ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದರು. ಇದೀಗ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ.