Tag: BJP JDS Meet

  • ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ ಎಂದ ಕೇಂದ್ರ ಸಚಿವ

    ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ ಎಂದ ಕೇಂದ್ರ ಸಚಿವ

    – ಆತಂಕ ಬೇಡ, ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ: ಹೆಚ್‌ಡಿಕೆ

    ಬೆಂಗಳೂರು: ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಚಿಕಿತ್ಸೆ ಪಡೆದು ಜಯನಗರದ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಆತಂಕಕ್ಕೆ ಒಳಗಾಗೋದು ಬೇಡ. ಭಗವಂತ, ನಿಮ್ಮ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ. ಮೂರು ಬಾರಿ ವಾಲ್ ರಿಪ್ಲೇಸ್‌ಮೆಂಟ್ ಆಗಿದೆ. ಬ್ಲಡ್ ಥಿನ್ನರ್ ತೆಗೆದುಕೊಳ್ಳುತ್ತೇನೆ. ಒತ್ತಡಗಳು ಜಾಸ್ತಿಯಾದಾಗ ಮೂಗಿನಿಂದ ರಕ್ತಸ್ರಾವ ಆಗೋದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವುದು ಸೂಕ್ತ ಎಂದು ಡಾಕ್ಟರ್ ಹೇಳಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    ಕೇಂದ್ರದಿಂದ ರಾಜ್ಯಕ್ಕೆ, ಜನರಿಗೆ ಕೊಡುಗೆ ಕೊಡಬೇಕು. ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಪಾದಯಾತ್ರೆಗೆ ಇನ್ನೂ ಒಂದು ವಾರ ಇದೆ. ಆಮೇಲೆ ನೋಡೋಣ. ಅಂತಹ ಸಂದರ್ಭ ಬಂದರೆ ನಿಖಿಲ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸೋಮವಾರ ರಾಜ್ಯಸಭೆಯಲ್ಲಿ ಕಾವೇರಿ ನೀರಿನ ಪ್ರಸ್ತಾಪ ಬಂದೇ ಬರುತ್ತದೆ. ತಮಿಳುನಾಡಿನ ಬೇರೆ ಬೇರೆ ಪಕ್ಷದ ನಾಯಕರು ದೇವೇಗೌಡರ ಭಾಷಣಕ್ಕೆ ಹಲವು ವರ್ಷಗಳಿಂದ ಅಡ್ಡಿಪಡಿಸುತ್ತಾ ಬರುತ್ತಿದ್ದಾರೆ. ನಾನು ಈ ಸಂದರ್ಭ ಅವರ ಜೊತೆ ಇರಬೇಕು ಅನ್ನೋದು ನನ್ನ ಆಸೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಹೆಚ್‌ಡಿಕೆಗೆ ಏನಾಗಿತ್ತು?
    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಕೂಡಲೇ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

  • ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡ್ತಿದ್ದಾರೆ – ನಿಖಿಲ್‌ ಭಾವುಕ

    ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡ್ತಿದ್ದಾರೆ – ನಿಖಿಲ್‌ ಭಾವುಕ

    ಬೆಂಗಳೂರು: ನನ್ನ ತಂದೆ ಆರೋಗ್ಯವಾಗಿದ್ದಾರೆ. ಆರೋಗ್ಯ (Health) ಲೆಕ್ಕಿಸದೇ ಸಂಸತ್‌ನಲ್ಲಿ ಮಾತಾಡಿದ್ದಾರೆ. ರಾಜ್ಯದ ಜನರಿಗೆ ಏನಾದರೂ ಮಾಡಬೇಕು ಅಂತ ಕೆಲಸ ಮಾಡ್ತಿದ್ದಾರೆ. ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿಕೆ ಪುತ್ರ ನಿಖಿಲ್‌ ಕುಮಾರಸ್ವಾಮಿ (Nikhil KumaraSwamy)ಹೇಳಿದ್ದಾರೆ.

    ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ (BJP JDS Meet) ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಿತ್ತು. ಈ ಕುರಿತು ಮಾಧ್ಯಮಗಳೊಂದಿಗೆ ನಿಖಿಲ್‌ ಮಾತನಾಡಿದ್ದಾರೆ. ಇದನ್ನೂ ಓದಿ: Women’s Asia Cup 2024: ಲಂಕಾ ಚಾಂಪಿಯನ್‌ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು

    ಬಿಜೆಪಿ-ಜೆಡಿಎಸ್‌ ನಾಯಕರೊಟ್ಟಿಗಿನ ಸಭೆಯ ಬಳಿಕ ಸುದ್ದಿಗೋಷ್ಠಿ ವೇಳೆ ತಂದೆಗೆ ಮೂಗಿನಿಂದ ರಕ್ತ ಬಂದಿದೆ. ಜನ ಆತಂಕಪಡೋದು ಬೇಡ. ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಕೆಲಸದ ಒತ್ತಡಗಳು ಇದ್ದವು. ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಬೆಳಗ್ಗೆ 4.30ಕ್ಕೆ ಎದ್ದೇಳುತ್ತಿದ್ರು, ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಡಾಕ್ಟರ್ ಕೂಡ ಆತಂಕ ಬೇಡ ಅಂತ ಹೇಳಿದ್ದಾರೆ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕುಮಾರಣ್ಣ ಆರೋಗ್ಯವಾಗಿದ್ದಾರೆ. ಸಣ್ಣ ಪುಟ್ಟ ಏರುಪೇರು ಸಾಮಾನ್ಯ. ಆರೋಗ್ಯ ಲೆಕ್ಕಿಸದೇ ಸಂಸತ್‌ನಲ್ಲಿ ಮಾತಾಡಿದ್ದಾರೆ. ರಾತ್ರಿ ಪುಸ್ತಕಗಳನ್ನ ಓದುತ್ತಾರೆ. ರಾಜ್ಯದ ಜನರಿಗೆ ಏನಾದರೂ ಮಾಡಬೇಕು ಅಂತ ಕೆಲಸ ಮಾಡ್ತಿದ್ದಾರೆ. ಈಶ್ವರನ ನಂಬಿಕೊಂಡಿದ್ದೇವೆ, ಜನ, ರೈತರ ಆಶೀರ್ವಾದ ಇದೆ. ಇಂದು (ಭಾನುವಾರ) ರಾತ್ರಿಯೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ವೈದ್ಯರು ಹೇಳಿದ್ದೇನು?
    ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಬ್ಲಡ್ ಥಿನ್ನರ್‌ ಮಾತ್ರೆ ತೆಗೆದುಕೊಳ್ಳುತ್ತಾ ಇದ್ದರು. ಏನೂ ಆತಂಕ ಪಡುವ ಅಗತ್ಯವಿಲ್ಲ. ರೊಟಿನ್‌ ಚೆಕಪ್‌ ಮಾಡಿದ್ದೇವೆ. ಅಡ್ಮಿಷನ್‌ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಅಂತಾ ಜಯನಗರ ಆಪೋಲೋ ಆಸ್ಪತ್ರೆ ವೈದ್ಯ ಯತೀಶ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    ಹೆಚ್‌ಡಿಕೆ ಏನಾಯ್ತು?
    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಕೂಡಲೇ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.

  • ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ (BJP-JDS Meet) ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್‌ಡಿಕೆಗೆ ರಕ್ತಸ್ರಾವ (Bleeding) ಉಂಟಾಗಲು ಕಾರಣ ಏನೂ ಎಂಬುದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಕುಮಾರಸ್ವಾಮಿ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದರಿಂದ ಅವರು ಬ್ಲಡ್‌ ಥಿನ್ನರ್‌ (blood thinner) ಔಷಧಿ ತೆಗೆದುಕೊಳ್ಳುತ್ತಿದ್ದರು. ಬ್ಲಡ್‌ ಥಿನ್ನರ್‌ನಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಿದೆಯಾ? ಅಥವಾ ನಿಖರ ಕಾರಣ ಏನು ಎಂಬುದನ್ನು ವೈದ್ಯರು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಹೆಚ್‌ಡಿಕೆ ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ನಿರ್ಮಲಾ ಸೀತಾರಾಮನ್

    ಸದ್ಯ ಹೆಚ್‌ಡಿಕೆ ಅವರನ್ನ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಏನಿದು ಬ್ಲಡ್‌ ಥಿನ್ನರ್‌? ‌
    ಬ್ಲಡ್‌ ಥಿನ್ನರ್‌ ಎಂಬುದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಔಷಧಿಯಾಗಿದೆ. ಮನುಷ್ಯನ ದೇಹದಲ್ಲಿ ರಕ್ತವನ್ನು ತೆಳುವಾಗಿಸುವುದಕ್ಕೆ ಈ ಔಷಧವನ್ನು ಬಳಸುತ್ತಾರೆ. ಬ್ಲಡ್‌ ಥಿನ್ನರ್‌ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆದು ಹೃದಯಾಘಾತ, ಪಾರ್ಶ್ವವಾಯು ಮೊದಲಾದ ಅಪಾಯವನ್ನುಂಟುಮಾಡದಂತೆ ತಡೆಯುತ್ತದೆ. ವೈದ್ಯರ ಸಲಹೆ ಮೇರೆಗೆ ಮಾತ್ರವೇ ಇದನ್ನು ಬಳಸಬಹುದಾಗಿದೆ. ವೈದ್ಯರ ಸಲಹೆ ಇಲ್ಲದೆಯೇ ಈ ಔಷಧ ಸೇವಿಸಿದರೆ, ರಕ್ತಸ್ರಾವದಂತಗ ಅಡ್ಡಪರಿಣಾಮಗಳು ಉಂಟಾಗುತ್ತವೆ ಎಂದು ಸಂಬಂಧಪಟ್ಟ ವೈದ್ಯರು ಹೇಳಿದ್ದಾರೆ.

    ಕುಮಾರಸ್ವಾಮಿ ಅವರು 2024ರ ಲೋಕಸಭಾ ಚುನಾವಣೆಗೂ ಮುನ್ನ ಮಾರ್ಚ್‌ನಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಎಂದು ಡಾ.ಸಿ.ಎನ್‌ ಮಂಜುನಾಥ್‌ ತಿಳಿಸಿದ್ದರು. ಅದಕ್ಕೂ ಮುನ್ನ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

  • ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಬೆಂಗಳೂರು: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಮೂಗಿನಿಂದ ದಿಢೀರ್‌ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಗೊಂಡ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ದಿದ್ದಾರೆ.

    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಹೆಚ್‌ಡಿಕೆ ಮಾತನಾಡುತ್ತಿದ್ದಂತೆ ದಿಢೀರ್‌ ಅಂತ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ರಕ್ತಸ್ರಾವದ ಪ್ರಮಾಣ ಇದ್ದಕ್ಕಿದ್ದಂತೆ ಹೆಚ್ಚಾಗತೊಡಗಿತು. ಇದರಿಂದ ಆತಂಕಗೊಂಡ ಕಾರ್ಯಕರ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಮೂಗಿಗೆ ಕರ್ಚೀಫ್‌ ಹಿಡಿದುಕೊಂಡೇ ಕಾರಿನಲ್ಲಿ ಹೆಚ್‌ಡಿಕೆ ಜಯನಗರ ಅಪೋಲೋ ಆಸ್ಪತ್ರೆಗೆ ಹೊರಟರು. ಕಾರು ತೆರಳುವಷ್ಟರಲ್ಲಿ ಬಟ್ಟೆಯೆಲ್ಲಾ ರಕ್ತದ ಕಲೆಯಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ನಿರ್ಮಲಾ ಸೀತಾರಾಮನ್