Tag: BJP leader

  • ತಲ್ವಾರ್ ಹಿಡಿದು ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ

    ತಲ್ವಾರ್ ಹಿಡಿದು ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ

    ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಪಕ್ಷದ ಕೆಲವರು ಬಾಲ ಬಿಚ್ಚಲು ಆರಂಭಿಸಿದ್ದು, ಬಿಜೆಪಿ ಮುಖಂಡ ಹಾಗೂ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ತನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ತಲ್ವಾರಿನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿದ್ದಾರೆ.

    ಈ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದ್ದು, ಎರಡು ದಿನ ಹಿಂದೆ ಬಿಜೆಪಿ ಮುಖಂಡ ಶರಣು ಕೋಳಕುರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಕಾರ್ಯಕರ್ತರ ಜೊತೆ ತಲ್ವಾರಿನಿಂದ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

    ಹುಟ್ಟುಹಬ್ಬಕ್ಕೆ ಆಗಮಿಸಿದ ಕಾರ್ಯಕರ್ತರು ಸಹ ತಲ್ವಾರ್ ಹಿಡಿದು ಫೋಟೋಗೇ ಪೋಸ್ ಕೊಟ್ಟಿದ್ದು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಈ ಹಿಂದೆ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಲ್ವಾರಿನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿದ್ದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಇಸ್ಲಾಂಪುರದ ಅಮೀರಾ ದೇಸಾಯಿ ಎಂಬುವರು ತಲ್ವಾರ್ ನಿಂದ ಕೇಕ್ ಕತ್ತರಿಸಿ ಸುದ್ದಿಯಾಗಿದ್ದರು. ಈ ಕುರಿತು ಯಮಕನಮರಡಿ ಫೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಇಂದು ತಾಯಿಯನ್ನು ಕಳೆದುಕೊಂಡ ಮಕ್ಕಳಾಗಿದ್ದೇವೆ: ಶ್ರೀರಾಮುಲು

    ಇಂದು ತಾಯಿಯನ್ನು ಕಳೆದುಕೊಂಡ ಮಕ್ಕಳಾಗಿದ್ದೇವೆ: ಶ್ರೀರಾಮುಲು

    ಬೆಂಗಳೂರು: ಇಂದು ತಾಯಿಯನ್ನು ಕಳೆದುಕೊಂಡ ಮಕ್ಕಳಾಗಿದ್ದೇವೆ ಎಂದು ಮೊಳಕಾಲ್ಮೂರು ಶಾಸಕರಾದ ಶ್ರೀರಾಮುಲು ಅವರು ಪತ್ರ ಬರೆಯುವ ಮೂಲಕ ಮಾಜಿ ವಿದೇಶಾಂಗ ಸಚಿವೆ, ಹಿರಿಯ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

    ಶ್ರೀರಾಮುಲು ಅವರು ಪತ್ರದಲ್ಲಿ, ಸುಷ್ಮಾ ಸ್ವರಾಜ್ ಇಂದು ನಮ್ಮೊಂದಿಗೆ ಇಲ್ಲ. ಅವರ ಅಗಲಿಕೆ ನಮ್ಮನ್ನು ಅನಾಥರನ್ನಾಗಿದೆ. ಇಷ್ಟು ಬೇಗ ಸುಷ್ಮಾ ಅವರು ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ಊಹಿಸಿರಲಿಲ್ಲ. ಬಳ್ಳಾರಿಗೂ ಸುಷ್ಮಾ ಅವರಿಗೂ ಅವಿನಾಭಾವ ಸಂಬಂಧ ಇದೆ. ನಮ್ಮನ್ನು ಅವರು ತಮ್ಮ ಮಕ್ಕಳಂತೆ ವಾತ್ಸಲ್ಯದಿಂದ ನೋಡಿಕೊಳ್ಳುತ್ತಿದ್ದ ತಾಯಿ ಅವರು. ನಾವು ಇಂದು ತಾಯಿಯನ್ನು ಕಳೆದುಕೊಂಡ ಮಕ್ಕಳಾಗಿದ್ದೇವೆ. ಗೌರಿ ಹಬ್ಬ, ವರಮಹಾಲಕ್ಷ್ಮೀ ಹಬ್ಬ ಬಂತು ಎಂದರೆ ಬಳ್ಳಾರಿಯಲ್ಲಿ ಸಡಗರ ಶುರುವಾಗುತ್ತಿತ್ತು. ಇಡೀ ಬಳ್ಳಾರಿಯ ಜನ ಅವರನ್ನು ಅಮ್ಮ ಎಂದೇ ಕರೆಯುತ್ತಿದ್ದರು. ಅವರಿಗೂ ಬಳ್ಳಾರಿ ನೆಲದ ಮೇಲೆ ಅಗಾಧ ಪ್ರೀತಿ ಇತ್ತು. ಬಳ್ಳಾರಿಯಲ್ಲಿ ಎಷ್ಟೋ ಬಾರಿ ಅವರು ಕನ್ನಡದಲ್ಲಿ ಭಾಷಣ ಮಾಡಿದ್ದು, ಇದೆ. ಇಂದು ನಮ್ಮ ಮನೆ ಅಮ್ಮನಿಲ್ಲದ ಮನೆಯಂತಾಗಿದೆ.

    ನಾವು ರಾಜಕಾರಣಿಗಳ ಮಕ್ಕಳಲ್ಲ. ನಾವು ರಾಜಕೀಯ ಪ್ರವೇಶಕ್ಕೆ ಸುಷ್ಮಾ ಸ್ವರಾಜ್ ಅವರೇ ಕಾರಣ. ನಮ್ಮ ಸೇವೆ ಸಮಾಜಕ್ಕೆ ಬಹಳ ಇದೆ ಎಂದು ಅವರು ಅರಿವು ಮೂಡಿಸಿ ರಾಜಕಾರಣಕ್ಕೆ ನಮ್ಮನ್ನು ರಾಜಕರಾಣಕ್ಕೆ ತಂದವರು. ಹಾಗಾಗಿ ಸಾಮಾನ್ಯ ಕುಟುಂಬದಲ್ಲಿ ಬೆಳೆದ ನಾವು ಇಂದು ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದ್ದೇವು. ಅವರ ಪ್ರೀತಿ, ವಾತ್ಸಲ್ಯವನ್ನು ಉಸಿರು ಇರುವ ತನಕ ಮರೆತುವ ಹಾಗಿಲ್ಲ. ಅಲ್ಲದೆ ಸುಷ್ಮಾ ಅವರು ಬಳ್ಳಾರಿಯಿಂದ ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧೆ ಕೂಡ ಮಾಡಿದ್ದರು ಎಂದರು.

    ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟ, ಕೊಯ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರು ಸಿಲುಕಿಕೊಂಡಾಗ ತಾಯಿ ಸುಷ್ಮಾ ಸ್ವರಾಜ್ ಕನ್ನಡಿಗರಂತೆಯೆ ಮಿಡಿದರು. ಪಾಕಿಸ್ತಾನದ ಅಧ್ಯಕ್ಷರಾಗಿದ್ದಾಗ ಮುಷರಫ್ ಅವರನ್ನು ಕೂಡ ತಣ್ಣಗಾಗಿದ್ದ ಗಟ್ಟಿಗಿತ್ತಿ ನಮ್ಮ ಸುಷ್ಮಾ ತಾಯಿ. ಹಿಂದೂ ಮುಸ್ಲಿಂ ಎಲ್ಲರನ್ನು ಭಾವೈಕ್ಯತೆ ಸಾರುತ್ತಿದ್ದವರು. ಇಂದಿರಾ ಗಾಂಧಿ ನಂತರ ನಮ್ಮ ಸುಷ್ಮಾ ಅಮ್ಮ ವಿದೇಶಾಂಗ ಸಚಿವೆಯಾಗಿದ್ದವರು. ವಿದೇಶಾಂಗ ಸಚಿವೆಯಾಗಿದ್ದಾಗ ಭಯೋತ್ಪಾದನೆಯ ವಿರುದ್ಧ ಸಮರ ಸಾರಿದ್ದ ಅವರಿಗೆ ಇಡೀ ವಿಶ್ವವೇ ಬೆಂಬಲವಾಗಿ ನಿಂತಿತ್ತು. ವಿಶ್ವಸಂಸ್ಥೆಯಲ್ಲಿ ಕೂಡ ಅವರು ಭಯೋತ್ಪಾದನೆ ವಿರುದ್ಧ ಗುಡುಗಿದ್ದರು.

    ಸುಷ್ಮಾ ಅವರ ವಾತ್ಸಲ್ಯದ ಹೃದಯದಿಂದಲೇ ‘ಸೂಪರ್ ಮಾಮ್ ಆಫ್ ಇಂಡಿಯಾ’ ಎಂಬ ಬಿರುದು ಪಡೆದಿದ್ದರು. ಅಂತ ವಾತ್ಸಲ್ಯಮಯಿ ಇಂದು ನಮ್ಮನ್ನು ಅಗಲಿದ್ದಾರೆ. ಅವರನ್ನು ಕಳೆದುಕೊಂಡ ನಾವು ಇಂದು ಅನಾಥ ಮಕ್ಕಳಂತೆ ಆಗಿದ್ದೇವೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಬರಿಸುವ ಶಕ್ತಿ ನೀಡಲಿ. ಅವರನ್ನು ಕಳೆದುಕೊಂಡ ನಾವು ಇಂದು ತಬ್ಬಲಿಗಳಾಗಿದ್ದೇವೆ. ನಾವು ಹೇಳೋದು ಒಂದೇ ನಮ್ಮ ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ಅಮ್ಮ ಮತ್ತೆ ಹುಟ್ಟಿ ಬರಲಿ ಎಂದು ಬೇಡಿಕೊಳ್ತೀನಿ.

  • ಸ್ಪೀಕರ್ ಕೆಟ್ಟೋಗಿದೆ: ಈಶ್ವರಪ್ಪ ಟಾಂಗ್

    ಸ್ಪೀಕರ್ ಕೆಟ್ಟೋಗಿದೆ: ಈಶ್ವರಪ್ಪ ಟಾಂಗ್

    ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಕಾವು ಹೆಚ್ಚಾಗುತ್ತಿದ್ದರೆ ಇನ್ನೊಂದು ಕಡೆ ಸ್ಪೀಕರ್ ಕೆಟ್ಟು ಹೋಗಿದೆ ಎಂದು ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

    ಕೆ.ಎಸ್.ಈಶ್ವರಪ್ಪ ಅವರು ಹರಿದಿರುವ ಸ್ಪೀಕರ್ ಫೋಟೋವನ್ನು ಟ್ವೀಟ್ ಮಾಡಿ, ಈ ಸ್ಪೀಕರ್ ಕೆಟ್ಟುಹೋಗಿದೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಮಲ್ಲಿಕಾರ್ಜುನ ಸಜ್ಜನ್ ಎಂಬವರು ಸೋಮವಾರ ಹೊಸ ಸ್ಪೀಕರ್ ಬರುತ್ತೆ ಬಿಡಿ ಸರ್ ಎಂದು ಕಮೆಂಟ್ ಮಾಡಿದ್ದಾರೆ.

    ಸುನಿಲ್ ಮಾಪಾ ಎಂಬವರು ನೀವು ತುಂಬಾ ಲೇಟ್ ಸರ್ ಅದು 2018ರಲ್ಲೇ ಕೆಟ್ಟು ಹೋಗಿತ್ತು ಪ್ರತಿಕ್ರಿಯಿಸಿದರೆ ಹೌದು ಹಾಡಿದನ್ನೆ ಹಾಡುತ್ತೆ. ವಿನ್ಯಾಸವಷ್ಟೇ ವಿವರಿಸುವ, ವಿಪರೀತ, ವಿನಾಕಾರಣ, ಕಾಲಹರಣ ಮಾಡಿಸುವ ಸ್ಪೀಕರ್ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

    ಅನುಪ್ ಕುಲಕರ್ಣಿ ಎಂಬವರು, ಸ್ಪೀಕರ್ ಕೆಟ್ಟು ಹೋಗಿದೆ. ಸ್ಪೀಕರ್ ಕೆಟ್ಟರೆ ಅದರಲ್ಲಿರುವ ಮ್ಯಾಗ್ನೆಟ್‍ಗೆ ಬೆಲೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

    https://twitter.com/Mallika29340855/status/1151811842097856512

  • ಒಂದು ಧ್ವಜ ತೆಗೆಸಿದ್ರೆ ಲಕ್ಷಾಂತರ ಧ್ವಜ ಹಾರಿಸುತ್ತೇವೆ: ಡಿಸಿಎಂಗೆ ಬಿಜೆಪಿ ನಾಯಕ ಎಚ್ಚರಿಕೆ

    ಒಂದು ಧ್ವಜ ತೆಗೆಸಿದ್ರೆ ಲಕ್ಷಾಂತರ ಧ್ವಜ ಹಾರಿಸುತ್ತೇವೆ: ಡಿಸಿಎಂಗೆ ಬಿಜೆಪಿ ನಾಯಕ ಎಚ್ಚರಿಕೆ

    ಶಿವಮೊಗ್ಗ: ನೀವು ಒಂದು ಧ್ವಜ ತೆಗೆಸಿದರೆ ನಾವು ಲಕ್ಷಾಂತರ ಧ್ವಜ ಹಾರಿಸುತ್ತೇವೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಅವರು ಡಿಸಿಎಂ ಪರಮೇಶ್ವರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

    ಕೊರಟಗೆರೆಯಲ್ಲಿ ಬಿಜೆಪಿ ಧ್ವಜ ತೆಗೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಗ್ರಾಮ ವಾಸ್ತವ್ಯ, ಜನ ಸಂಪರ್ಕ ಮಾಡಿಕೊಳ್ಳಿ ಆದರೆ ಬಿಜೆಪಿ ಧ್ವಜ ಕೀಳಿಸುವ ಕೆಲಸ ಮಾಡಬೇಡಿ ಎಂದು ದೋಸ್ತಿ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಇಷ್ಟು ವರ್ಷಗಳ ಕಾಲ ಅಲ್ಲಿನ ಶಾಸಕರಾಗಿದ್ದು, ಜನರ ಸಮಸ್ಯೆಗಳ ಅರಿವು ನಿಮಗಿಲ್ಲ. ಈಗ ರಾಜಕೀಯಕ್ಕಾಗಿ ಕಾರ್ಯಕ್ರಮ ಮಾಡಲು ಹೊರಟಿದ್ದೀರಿ. ನೀವು ಒಂದು ಧ್ವಜ ತೆಗೆಸಿದರೆ ನಾವು ಲಕ್ಷಾಂತರ ಧ್ವಜ ಹಾರಿಸುತ್ತೇವೆ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದರು.

    ನೀವು ಹೋಗುವ ಮಾರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಕಾಣಬಾರದು, ಬಿಜೆಪಿ ಧ್ವಜ ಕಾಣಬಾರದು ಎಂದರೆ ಏನರ್ಥ? ಧ್ವಜ ಕೀಳಿಸುವುದಕ್ಕಾಗಿಯೇ ಜನಸಂಪರ್ಕ ಸಭೆ ಮಾಡುತ್ತೀದ್ದೀರಾ? ಇದು ಸರ್ವಾಧಿಕಾರಿ ಧೋರಣೆ ದಬ್ಬಾಳಿಕೆ ನೀತಿ ಎಂದು ವಾಗ್ದಾಳಿ ನಡೆಸಿದರು.

    ಏನಿದು ಪ್ರಕರಣ?
    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿರುವ ಪ್ರಧಾನಮಂತ್ರಿ ಜನರಿಕ್ ಔಷಧ ಅಂಗಡಿ ಮಾಲೀಕ ಕೆ.ಎನ್ ರವಿ ಎಂಬುವವರು ತಮ್ಮ ಅಂಗಡಿ ಮುಂದೆ ಬಿಜೆಪಿ ಬಾವುಟ ಹಾಕಿದ್ದಕ್ಕೆ ಗ್ರಾಮ ಪಂಚಾಯತಿಯ ಪಿಡಿಓ ನೋಟಿಸ್ ನೀಡಿದ್ದಾರೆ. ಇದಕ್ಕೆ ಶನಿವಾರ ಡಿಸಿಎಂ ಪರಮೇಶ್ವರ್ ಅವರು ತೋವಿನಕೆರೆಯಲ್ಲಿ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಸಂದರ್ಭದಲ್ಲಿ ತುಮಕೂರಿನ ಕೆಸ್ತೂರು ರಸ್ತೆಯಲ್ಲಿರುವ ಔಷಧಿ ಅಂಗಡಿಯ ಮುಂದೆ ಡಿಸಿಎಂ ವಾಹನ ಹೋಗಬೇಕಿತ್ತು. ಹೀಗಾಗಿ ಅಂಗಡಿಯ ಮುಂದೆ ಇದ್ದ ಬಾವುಟವನ್ನು ನೋಡಿ ಡಿಸಿಎಂ ಮುಜಗರಗೊಂಡಿದ್ದರು ಎಂದು ತಿಳಿದು ಬಂದಿದೆ. ಇದರಿಂದ ಬಾವುಟ ತೆರವು ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕನಿಗೆ ನೋಟಿಸ್ ನೀಡುವಂತೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

    ನೋಟಿಸ್‍ನಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೇ ಬಾವುಟ ಹಾಕಿದ್ದಕ್ಕೆ ತೆರವು ಮಾಡಿ ಎಂದು ತಿಳಿಸಲಾಗಿದೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಡಿಸಿಎಂ ಬರುವ ಮಾರ್ಗದಲ್ಲಿ ಬಾವುಟ ಹಾಕಬಾರದು. ಒಂದು ವೇಳೆ ಬಾವುಟ ತೆರವುಗೊಳಿಸಿದ್ದರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಡಿಸಿಎಂ ಬರುವಾಗ ಬಾವುಟ ತೆಗೆದಿಟ್ಟುಕೊಂಡು ಅವರು ಹೋದ ಮೇಲೆ ಮತ್ತೆ ಹಾಕಿಕೊಳ್ಳಿ ಎಂದು ಸಲಹೆಯನ್ನು ನೀಡಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬಿಜೆಪಿ ನಾಯಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು!

    ಬಿಜೆಪಿ ನಾಯಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು!

    ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಬೈಲೂರು ಗ್ರಾಮದ ಬಳಿ ನಡೆದಿದೆ.

    ಸಂತಿ ಬಸ್ತವಾಡ ಗ್ರಾಮದ ನಿವಾಸಿ ನಾಗಪ್ಪಾ ಜಿಡ್ಡನ್ನವರ(45) ಕೊಲೆಯಾಗಿರುವ ಬಿಜೆಪಿ ನಾಯಕ. ನಾಗಪ್ಪಾ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದರು. ಗುರುವಾರ ತಡರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಬೆಳಗಾವಿಯ ಬೈಲೂರು ಗ್ರಾಮದ ಬಳಿ ನಾಗಪ್ಪ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ರಸ್ತೆ ಬದಿ ಬೀಸಾಡಿದ್ದಾರೆ ಎಂದು ಶಂಕಿಸಲಾಗಿದೆ.

    ನಾಗಪ್ಪ ಅವರನ್ನು ಕೊಲೆ ಮಾಡಿದ ಆರೋಪಿಗಳ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಅಲ್ಲದೆ ಕೊಲೆ ಮಾಡಲು ನಿಖರ ಕಾರಣಗಳು ಏನೆಂದು ಲಭ್ಯವಾಗಿಲ್ಲ. ಆದರೆ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಪಕ್ಷದ ಕಾರ್ಯಕರ್ತನ ಮೇಲೆ ಬಿಜೆಪಿ ನಾಯಕನಿಂದ್ಲೇ ಮಾರಣಾಂತಿಕ ಹಲ್ಲೆ!

    ಪಕ್ಷದ ಕಾರ್ಯಕರ್ತನ ಮೇಲೆ ಬಿಜೆಪಿ ನಾಯಕನಿಂದ್ಲೇ ಮಾರಣಾಂತಿಕ ಹಲ್ಲೆ!

    ಬಾಗಲಕೋಟೆ: ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಸೋಮವಾರ ತಡರಾತ್ರಿ ಪಕ್ಷದ ನಗರ ಘಟಕದ ಅಧ್ಯಕ್ಷ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಜಮಖಂಡಿ ನಗರದ ಕಲೂತಿ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಉಮೇಶ್ ಅಲಮೇಲಕರ್ ಮೇಲೆ ಹಲ್ಲೆ ನಡೆದಿದೆ. ಜಮಖಂಡಿ ಬಿಜೆಪಿಯ ನಗರ ಘಟಕದ ಅಧ್ಯಕ್ಷ ಶ್ರೀಧರ ಕೊಣ್ಣೂರ ಹಾಗೂ ಅವರ ಸಹಚರರು ಸೇರಿ ಕಬ್ಬಿಣದ ರಾಡ್ ಹಾಗೂ ಸೋಡಾ ಬಾಟಲ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

    ಈ ಹಲ್ಲೆಯಿಂದ ಉಮೇಶ್ ಅವರ ತಲೆ ಹಾಗೂ ಎಡಗಣ್ಣಿಗೆ ಗಾಯವಾಗಿದ್ದು, ಗಾಯಾಳುವನ್ನು ಜಮಖಂಡಿ ಕೆ.ಎಲ್.ಇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮಖಂಡಿ ಉಪಚುನಾವಣೆ ವೇಳೆ ಇವರಿಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ಸೋಮವಾರ ಈ ಬಗ್ಗೆ ಶುರುವಾದ ಜಗಳ ನಂತರ ಹಲ್ಲೆಗೆ ತಿರುಗಿತ್ತು.

    ಸದ್ಯ ಜಮಖಂಡಿ ನಗರ ಪೊಲೀಸ್ ಠಾಣೆಯಲ್ಲಿ ಉಮೇಶ್ ಅಲಮೇಲಕರ್ ಅವರು ಶ್ರೀಧರ ಕೊಣ್ಣೂರ ಅವರ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

  • ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ಲಕ್ನೋ: ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ ಹಾಕುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?:
    ಬಿಜೆಪಿ ಮುಖಂಡ ಸುರೇಶ್ ಅವಾಸ್ಥಿ, ನೀನು ನನ್ನ ಹಿಟ್ ಲಿಸ್ಟ್ ನಲ್ಲಿದ್ದಿ. ನಿನ್ನನ್ನು ನಾಳೆ ನೋಡಿಕೊಳ್ಳುತ್ತೇನೆ ಎಂದು ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ, ಅವನೇನು ಮಾಡಿಕೊಳ್ಳುತ್ತಾನೋ ಮಾಡಲಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

    ಘಟನೆಯ ವೇಳೆ ಮೇಯರ್ ಪ್ರಮಿಳಾ ಪಾಂಡೆ ಹಾಗೂ ಇತರ ಬಿಜೆಪಿ ನಾಯಕರು ಸ್ಥಳದಲ್ಲಿದ್ದರು. ಆದರೆ ಅವರು ಬೆದರಿಕೆ ಹಾಕುವ ಬಿಜೆಪಿ ನಾಯಕನ್ನು ತಡೆಯುವ ಪ್ರಯತ್ನ ಮಾಡದಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ಶ್ರೀಲಂಕಾದಲ್ಲಿ ಸಿಲುಕಿದ್ದ ಬಿಜೆಪಿ ನಾಯಕ ತಾಯ್ನಾಡಿಗೆ ವಾಪಸ್

    ಶ್ರೀಲಂಕಾದಲ್ಲಿ ಸಿಲುಕಿದ್ದ ಬಿಜೆಪಿ ನಾಯಕ ತಾಯ್ನಾಡಿಗೆ ವಾಪಸ್

    ಮೈಸೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ 350ಕ್ಕೂ ಹೆಚ್ಚು ಮಂದಿ ಅಮಾಯಕ ಜೀವಗಳು ಬಲಿಯಾಗಿದೆ. ಈ ಆತಂಕದ ವಾತಾವರಣದಲ್ಲಿ ಸಿಲುಕಿದ್ದ ಮೈಸೂರಿನ ಬಿಜೆಪಿ ಮುಖಂಡ ವೈ.ವಿ. ರವಿಶಂಕರ್ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸುರಕ್ಷಿತವಾಗಿ ಊರಿಗೆ ವಾಪಸ್ ಆಗಿದ್ದಾರೆ.

    ರವಿಶಂಕರ್ ಸೇರಿ 14 ಜನ ಸ್ನೇಹಿತರ ತಂಡ ಚುನಾವಣಾ ಪ್ರಚಾರ ಮುಗಿಸಿ ಪ್ರವಾಸಕ್ಕೆಂದು ಕೊಲಂಬೋಗೆ ತೆರಳಿದ್ದರು. ಈ ವೇಳೆ ಕೊಲಂಬೋದ ರೆಸಾರ್ಟ್ ನಲ್ಲಿ ರವಿಶಂಕರ್, ಅವರ ಸ್ನೇಹಿತರು ಮತ್ತು ಕುಟುಂಬದವರ ಜೊತೆ ತಂಗಿದ್ದರು. ಬಾಂಬ್ ಸ್ಫೋಟವಾದ ಸಮಯದಲ್ಲಿ ದಾಳಿ ನಡೆದ ಸ್ಥಳದ ಸಮೀಪವೇ ಇವರೆಲ್ಲ ಇದ್ದರು. ಆದರೆ ಅದೃಷ್ಟವಶಾತ್ ಯಾವುದೇ ಅಪಾಯವಾಗದೇ ರವಿಶಂಕರ್, ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಬುಧವಾರ ರಾತ್ರಿ ಮೈಸೂರಿಗೆ ಮರಳಿದ್ದಾರೆ.

    ಇಷ್ಟು ದಿನ ಕೊಲಂಬೋದಿಂದ 30 ಕಿ.ಮೀ ದೂರದ ರೆಸಾರ್ಟ್ ನಲ್ಲಿ ಇವರೆಲ್ಲ ತಂಗಿದ್ದರು. ಅದೇ ರೆಸಾರ್ಟ್ ನಲ್ಲಿಯೇ ಒಟ್ಟು 50 ಮಂದಿ ಭಾರತೀಯರು ತಂಗಿದ್ದರು. ಜೆಡಿಎಸ್ ಮುಖಂಡರು ತಂಗಿದ್ದ ಶಾಂಗ್ರಿಲಾ ಹೋಟೆಲ್ ಅನ್ನು ಮೊದಲು ಬುಕ್ ಮಾಡಿದ್ದರು. ಬಳಿಕ ಕಾರಣಾಂತರಗಳಿಂದ ಸ್ಥಳವನ್ನು ಬದಲಿಸಿದ್ದರಿಂದ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ.

  • ಬಿಜೆಪಿ ಮುಖಂಡನ ಮನೆ ಮೇಲೆ ರೇಡ್ ಮಾಡಲು ಹೋದ ಅಧಿಕಾರಿಗಳೇ ಕನ್ಫ್ಯೂಸ್!

    ಬಿಜೆಪಿ ಮುಖಂಡನ ಮನೆ ಮೇಲೆ ರೇಡ್ ಮಾಡಲು ಹೋದ ಅಧಿಕಾರಿಗಳೇ ಕನ್ಫ್ಯೂಸ್!

    ರಾಯಚೂರು: ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ಐಟಿ ದಾಳಿ ನಡೆಸಲು ಹೋದ ಅಧಿಕಾರಿಗಳು ವಿಳಾಸ ಸಿಗದೇ ಕಕ್ಕಾಬಿಕ್ಕಿಯಾಗಿ ಬೀದಿಯಲ್ಲೇ ಪರದಾಡಿದ ಘಟನೆ ನಡೆದಿದೆ.

    ಹೌದು. ಬಿಜೆಪಿ ಮುಖಂಡ ಬಂಡೇಶ್ ಅವರ ಮನೆಗೆ ದಾಳಿ ನಡೆಸಲು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್, ಸಹಾಯಕ ಆಯುಕ್ತೆ, ಜಿಪಂ ಸಿಇಓ ತಂಡ ಮುಂದಾಗಿತ್ತು. ಆದ್ರೆ ಅಧಿಕಾರಿಗಳೆಲ್ಲ ಬಂದಿರುವುದನ್ನ ನೋಡಿ ಸ್ವತಃ ಬಿಜೆಪಿ ಮುಖಂಡ ಹೊರಗಡೆ ಬಂದು ಹೋದರೂ ಅಧಿಕಾರಿಗಳಿಗೆ ಗೊತ್ತೇ ಆಗ್ಲಿಲ್ಲವಂತೆ.

    ಬಾತ್ ರೂಂನಲ್ಲಿ ದುಡ್ಡು ಇಟ್ಟಿದ್ದರೂ, ಸ್ಟೆಪ್ನಿಯಲ್ಲಿ ದುಡ್ಡು ಇಟ್ಟಿದ್ದರೂ ಹುಡುಕಿ ತೆಗೆಯೋ ಐಟಿ ಅಧಿಕಾರಿಗಳಿಗೆ ವಿಳಾಸ ಪತ್ತೆ ಹಚ್ಚೋದು ಕಷ್ಟವಾಗಿದ್ದು, ಸುಮಾರು ಹೊತ್ತು ಕಾದು ನೋಡಿ ಮರಳಿ ಹೋಗಿರುವ ಪ್ರಹಸನ ನಡೆದಿದೆ.

    ಇದೇ ವೇಳೆ ಪಕ್ಕದಲ್ಲಿರುವ ಬಿಜೆಪಿ ಮುಖಂಡ ರವಿ ಜಲ್ದಾರ್ ಕಚೇರಿ ಹಾಗೂ ಪರಿಶೀಲನೆ ಮಾಡಿ ಮರಳಿದ್ದಾರೆ. ಇದಕ್ಕೂ ಮುನ್ನ ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ್ ಅಳಿಯ ಜಿ.ಪಂ.ಸದಸ್ಯ ಸಂದೀಪ್ ನಾಯಕ್ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಒಟ್ಟು ಎರಡು ಲಕ್ಷ ರೂಪಾಯಿ ಜಪ್ತಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಸಹ ದಾಳಿ ನಡೆಸಿ ಮಾಹಿತಿ ಪಡೆದಿದ್ದಾರೆ. ನಗರದ ಲಿಂಗಸುಗೂರು ರಸ್ತೆಯಲ್ಲಿರುವ ಕೃಷ್ಣಾ ಮೇಡೌಸ್ ನಲ್ಲಿರುವ ಮನೆ ಮೇಲೆ ದಾಳಿ ನಡೆದು ಹಣ ಜಪ್ತಿ ಮಾಡಿದ್ದಾರೆ.

  • ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

    ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

    ಮಡಿಕೇರಿ: ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲ್ಪಟ್ಟಿದ್ದ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ(47) ಅವರ ಕೊಲೆ ಪ್ರಕರಣವನ್ನು ಕೊಡಗು ಪೊಲೀಸರು ಬೇಧಿಸಿದ್ದಾರೆ.

    ಬಾಲಚಂದ್ರ ಅವರ ಚಿಕ್ಕಪ್ಪ ರಾಜಾರಾಮ ಕಳಗಿ ಸಲ್ಲಿಸಿದ ಸಂಶಯಾಸ್ಪದ ಬಗ್ಗೆ ದೂರು ಪರಿಗಣಿಸಿ ತನಿಖೆ ನಡೆಸಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸಂಪತ್ ಕುಮಾರ್(34), ಹರಿಪ್ರಸಾದ್(36), ಜಯನ್(34) ಬಂಧಿತ ಆರೋಪಿಗಳು. ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

    ಹತ್ಯೆ ಮಾಡಿದ್ದು ಯಾಕೆ?
    ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಅವರಲ್ಲಿ ಸಂಪತ್ ವೈನ್ ಶಾಪ್ ತೆರೆಯಲು ಅನುಮತಿ ಕೇಳಿದ್ದಾನೆ. ಕಳಗಿ ಅವರು ವೈನ್ ಶಾಪ್ ತೆರೆಯಲು ಅನುಮತಿ ನೀಡಿರಲಿಲ್ಲ. ರಿಕ್ರಿಯೇಶನ್ ಕ್ಲಬ್ ಮಾಡುವುದಕ್ಕೂ ಕಳಗಿ ವಿರೋಧ ವ್ಯಕ್ತಪಡಿಸಿದ್ದರು. ಅನುಮತಿ ನೀಡದ್ದಕ್ಕೆ ಅಸಮಾಧಾನಗೊಂಡಿದ್ದ ಸಂಪತ್ ಕೊಲೆ ಮಾಡಲು ಪ್ಲಾನ್ ಮಾಡಿದ್ದ.

    ಕೊಲೆ ನಡೆಸಲು ಜಯ ಮತ್ತು ಹರಿಪ್ರಸಾದ್‍ಗೆ ಸಂಪತ್ ಸುಪಾರಿ ನೀಡಿದ್ದ. ಹಿಂದೆ ಜಯನ ವಾಹನ ಅಪಘಾತಗೊಂಡಿದ್ದಾಗ ಸಂಪತ್ ಬಿಡಿಸಿಕೊಟ್ಟಿದ್ದ. ಹೀಗಾಗಿ ಜಯ ಮತ್ತು ಸಂಪತ್ ಸ್ನೇಹಿತರಾಗಿದ್ದರು. ಹತ್ಯೆ ಮಾಡಿದ್ರೆ 1.5 ಲಕ್ಷದ ಲೋನ್ ಕ್ಲಿಯರ್ ಮಾಡಿಕೊಡುತ್ತೇನೆ ಎಂದು ಸುಪಾರಿ ನೀಡಿದ್ದ. ಈ ಕೃತ್ಯಕ್ಕೆ ಸ್ನೇಹಿತ ಹರಿಪ್ರಸಾದ್ ಸಹಕರಿಸುವುದಾಗಿ ತಿಳಿಸಿದ್ದ.

    ಪ್ಲಾನ್ ಹೀಗಿತ್ತು:
    ಕಳಗಿಯನ್ನು ಹತ್ಯೆ ಮಾಡಲು ಮೂವರು ಒಂದು ತಿಂಗಳಿನಿಂದ ಸರಿಯಾದ ಸಮಯವನ್ನು ಕಾಯುತ್ತಿದ್ದರು. ಮಾರ್ಚ್ 19 ರಂದು ಕಳಗಿ ಅವರು ಮಡಿಕೇರಿಗೆ ತೆರಳಿ ಮರಳಿ ಮನೆಗೆ ಬರುತ್ತಿದ್ದಾಗ ಡ್ರೈವರ್ ಆಗಿದ್ದ ಜಯ ತಾಳತ್ತಮನೆ ಸಮೀಪ ಲಾರಿಯನ್ನು ಓಮ್ನಿಗೆ ಗುದ್ದಿಸಿದ್ದ. ಪರಿಣಾಮ ಕಳಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

    ಅನುಮಾನ ಬಂದಿದ್ದು ಹೇಗೆ?
    ಬಾಲಚಂದ್ರ ಕಳಗಿ ಸಾವಿನ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ಎಳೆಯುವಂತೆ ಮೃತರ ಚಿಕ್ಕಪ್ಪ ಹಾಗೂ ಬಿಜೆಪಿ ಪ್ರಮುಖ ರಾಜಾರಾಮ ಕಳಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 23 ರಂದು ದೂರು ದಾಖಲಿಸಿದ್ದರು.

    ಸಾವಿನ ಬಗ್ಗೆ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಯೂ ಕಳಗಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿತ್ತು. ಮೃತರ ಚಿಕ್ಕಪ್ಪ ನೀಡಿರುವ ದೂರಿನ ಬೆನ್ನಲ್ಲೇ ಡಿವೈಎಸ್‍ಪಿ ಕೆ.ಎಸ್.ಸುಂದರರಾಜ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸಿದ್ದಯ್ಯ ಹಾಗೂ ಠಾಣಾಧಿಕಾರಿ ಚೇತನ್ ತನಿಖೆ ಆರಂಭಿಸಿದ್ದರು.

    ಸಿಕ್ಕಿಬಿದ್ದಿದ್ದು ಹೇಗೆ?
    ಬಲವಾದ ಶಂಕೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಜಯನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಜಯ ಸತ್ಯವನ್ನು ಹೇಳಿದ್ದು, ವೈನ್, ಮರಳು ಮಾಫಿಯಾ, ರಿಕ್ರಿಯೇಶನ್ ಕ್ಲಬ್ ಮಾಡಲು ಬಿಡದಕ್ಕೆ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈತ ತಿಳಿಸಿದ ಮಾಹಿತಿ ಆಧಾರದ ಹಿನ್ನೆಲೆಯಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹರಿಪ್ರಸಾದನ ಸ್ವಿಫ್ಟ್ ಕಾರು ಮತ್ತು ಅಪಘಾತದ ಲಾರಿ ವಶಕ್ಕೆ ಪಡೆಯಲಾಗಿದೆ.