Tag: BJP Leaders

  • ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

    ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

    ಬೆಂಗಳೂರು: ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ. ದೇಶಾದ್ಯಂತ ಜನ ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬರ್ತಿದ್ದಾರೆ. ಪುಣೆ, ಮುಂಬೈನಲ್ಲಿ ಸಮಸ್ಯೆಗಳು ಇಲ್ವಾ? ಲೇವಡಿ ಏಕೆ ಮಾಡ್ತಿರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಾರವಾಗಿ ಪ್ರಶ್ನಿಸಿದ್ದಾರೆ.

    ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದಿಂದ ಹತ್ತು ರೂಪಾಯಿ ಹಣ ತನ್ನಿ. ಸ್ಟೀಲ್ ಫ್ಲೈಓವರ್ ಬೇಡ ಎಂದು ರಾಜೀವ್ ಚಂದ್ರಶೇಖರ್ ಅಭಿಯಾನ ಮಾಡಿದ್ರು. ಈಗ ಕರ್ನಾಟಕದಿಂದ ಓಡಿ ಹೋಗಿದ್ದಾರೆ‌. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ಸಾಹೇಬ್ರು ನಾಟಿ ಕೋಳಿ ತಿನ್ನಿಸ್ತಾರೆ, ಮುದ್ದೆ ಸೊಪ್ಪು ಸಾರು ಹಾಕಿದ್ರು ಓಕೆ: ಪ್ರಿಯಾಂಕ್ ಖರ್ಗೆ

    32 ಕಿಲೋ‌ ಮೀಟರ್ ಡಬಲ್ ಡೆಕ್ಕರ್ ಮಾಡ್ತಿದ್ದೇವೆ.‌ ಇದೆಲ್ಲವನ್ನ ಮಾಡ್ತಿರೋದು ಟ್ರಾಫಿಕ್ ಕಂಟ್ರೋಲ್‌ಗೆ ಅಲ್ವಾ? ವಾಹನ ದಟ್ಟಣೆ ಟ್ರಾಫಿಕ್ ಎಲ್ಲವೂ ಬೆಂಗಳೂರು ಪ್ರಗತಿಯ ಜೊತೆ ಇರುತ್ತೆ ಅಲ್ವಾ? ಸಮಸ್ಯೆ ಇರೋದನ್ನ ಇದೆ ಅನ್ನೋದು ತಪ್ಪಾ. ಪರಿಹರಿಸೋದು ತಪ್ಪಾ? ಬಾಂಬೆ, ಡೆಲ್ಲಿ, ಚೆನ್ನೈ, ಪುಣೆಯಲ್ಲಿ‌ ಏನೂ ಸಮಸ್ಯೆ ಇಲ್ಲವಾ‌? ಸಮಸ್ಯೆ ಗುರುತಿಸಿ ಪರಿಹಾರ ಕೊಡಬೇಕು ಅಲ್ವಾ ಎಂದು ತಿರುಗೇಟು ನೀಡಿದ್ದಾರೆ.

    ಶಾಸಕ ವೀರೇಂದ್ರ ಪಪ್ಪಿಯಿಂದ ಬಿಹಾರ ಎಲೆಕ್ಷನ್‌ಗೆ ಹಣ ಕಲೆಕ್ಷನ್ ನಡೆಯುತ್ತಿತ್ತು ಎಂಬ ಬಿಜೆಪಿ-ಜೆಡಿಎಸ್ ಆರೋಪ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಅಶೋಕ್ 100 ಕೋಟಿ ಕೊಟ್ಟಿದ್ದಾರೆ. ಇದನ್ನ ನೀವು ಹಾಕ್ತೀರಾ? ವಿಜಯೇಂದ್ರ ದುಬೈಗೆ ಹೋಗಿ ಬರ್ತಾರೆ. ವಿಜಯೇಂದ್ರ, ಅಮಿತ್ ಶಾಗೆ ಬಿಟ್‌ಕಾಯಿನ್ ಕೊಟ್ಟಿದ್ದಾರೆ ಅಂದ್ರೆ ನೀವು ನಂಬುತ್ತೀರಾ? ಸಿಎಂ ಆಗಿ ಬರಬೇಕು ಅಂದ್ರೆ ಸುಮ್ಮನೇನಾ? ಕಪ್ಪ ಕೊಡಬೇಕು ಅಂತ ಯಡಿಯೂರಪ್ಪ ಅನಂತ್ ಕುಮಾರ್ ಕಿವಿಯಲ್ಲಿ ಹೇಳಿಲ್ವಾ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ?

    ಆರ್.ಅಶೋಕ್, ವಿಜಯೇಂದ್ರ ದುಡ್ಡು ಕೊಟ್ಟು ಅವರ ಸ್ಥಾನ ಉಳಿಸಿಕೊಂಡಿದ್ದಾರೆ. ನಾನೂ ಈ ರೀತಿ ಹೇಳಬಹುದು ಅಲ್ವಾ? ಇದು ಅವರ ಪಾರ್ಟಿ ವಿಚಾರ‌. ಇಡಿ ಯಾರ ಕೈಯಲ್ಲಿ ಇದೆ? ಕೇಂದ್ರದ ಕೈಯಲ್ಲಿ ಅಲ್ವಾ? ಅಮಿತ್‌ ಶಾರಿಂದ ದಾಖಲೆ ತರಿಸಲಿ. ಸುಮ್ಮನೆ ಚಪಲಕ್ಕೆ ಮಾತಾಡುವುದಲ್ಲ. ಗಾಳಿಯಲ್ಲಿ ಗುಂಡು ಹೊಡೆಯುವುದಲ್ಲ ಎಂದು ಕಿಡಿಕಾರಿದ್ದಾರೆ.

  • ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

    ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

    – ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದ ಕೇಸರಿ ಪಡೆ

    ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಜನರನ್ನು ಭೇಟಿಯಾಗಿ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದರು.

    ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಂಸದರಾದ ಪಿ.ಸಿ.ಮೋಹನ್‌, ಡಾ. ಕೆ.ಸುಧಾಕರ್‌ ಆಸ್ಪತ್ರೆಗೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸರ್ಕಾರದ ವಿರುದ್ಧ ಹರಿಹಾಯ್ದರು. ಇವರಿಗೂ ಮೊದಲು ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಭೇಟಿ ನೀಡಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

    ಬಸವರಾಜ್‌ ಬೊಮ್ಮಾಯಿ ಮಾತನಾಡಿ, 11 ಜನ ಸಾವನ್ನಪ್ಪಿರೋದು ದುಃಖದ ಸಂಗತಿ. ಕರ್ನಾಟಕದ ನಾಗರಿಕರಿಗೆ ಕೋಪ ಬಂದಿದೆ. ವಿಜಯೋತ್ಸವ ನಿಯಂತ್ರಣ ಮಾಡಲಿಕ್ಕೆ ಆಗಲಿಲ್ಲ ಅಂದರೆ, ಇಡೀ ಕರ್ನಾಟಕ ಜನರ ರಕ್ಷಣೆ ಮಾಡ್ತೀರಾ? ಇದು ಅನಿರೀಕ್ಷಿತ ಅಲ್ಲ, ಯಾಕಂದ್ರೆ ನೀವು ಪ್ಲಾನಿಂಗ್ ಮಾಡಿಲ್ಲ.‌ ಒಂದೇ ಒಂದು‌ ಸಭೆ ಮಾಡಿಲ್ಲ. ಯಾವ ಪ್ಲಾನಿಂಗ್ ಮಾಡಿಲ್ಲ.‌ ಒಟ್ಟಾರೆ ಬೇಜವಾಬ್ದಾರಿ ಇದು. ಈ ಕೊಲೆಗೆ ಸರ್ಕಾರ ನೇರ ಕಾರಣ. ಸಿಎಂ, ಕೆಸಿಎ ಅಂತಾರೆ. ಆದರೆ ಸೆಕ್ಯುರಿಟಿ ಯಾರು‌ ಕೊಡಬೇಕು? ಹಿರಿಯ ಪೊಲೀಸ್ ಅಧಿಕಾರಿಗಳು ಸುಮ್ಮನೆ ಇದ್ರು. ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ತನಿಖೆ ಆಗಬೇಕು ಎಂದು ಆಗ್ರಹಿಸಿದರು.

    ಫಂಕ್ಷನ್ ಮಾಡದೇ, ರೋಡ್ ಶೋ ಮಾಡಬೇಕಿತ್ತು. ಪುನೀತ್ ರಾಜ್‍ಕುಮಾರ್ ಅವರ ನಿಧನದ ವೇಳೆ, ಹಳೆ ವಿಚಾರದ ಬಗ್ಗೆ ಯೋಚನೆ ಮಾಡಿ, 25 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು. ಆಗ ನಾವು ಪ್ಲಾನಿಂಗ್‌ ಮಾಡಿದ್ವಿ. ಗೃಹ ಸಚಿವರ ಪಾತ್ರ ಕಾಣಿಸ್ತಾ ಇಲ್ಲ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ‌ ಚೇಲಗಳೇ ತುಂಬಿ ಹೋಗಿದ್ರು. ನಾಚಿಕೆ ಮರ್ಯಾದೆ ಇದ್ದರೆ ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು. ತನಿಖೆ ಘಟನೆಯ ಬಗ್ಗೆ ಆಗಬಾರದು, ಪೂರ್ವಯೋಜನೆ ವಿಫಲತೆ ಬಗ್ಗೆ ಆಗಬೇಕು. ಎಲ್ಲಿ ಹಿರಿಯ ಅಧಿಕಾರಿಗಳು ವೈಫಲ್ಯ ಆಗಿದ್ದಾರೆ, ಯಾವ ರಾಜಕಾರಣಿ ಪಾತ್ರ ಇದೆ ಅಂತ ತಿಳಿಯಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

    ಬೆಂಗಳೂರಿನಲ್ಲಿ ಹಬ್ಬದ ವಾತಾವರಣ ಹೋಗಿ, ಸೂತಕದ ವಾತಾವರಣ ಆಗಿದೆ. ಇದು ನಮಗೆ ತುಂಬಾ ದುಃಖ ತಂದಿದೆ. ಗಾಯಾಳುಗಳನ್ನು, ಮೃತರ ಸಂಬಂಧಿಕರನ್ನು ನಾವು ಮಾತಾಡಿಸಿದ್ದೇವೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಚೆನೈ, ಮುಂಬೈ, ಎಲ್ಲಾ ಕಡೆ ಗೆದ್ದ ಸಂಭ್ರಮ ಮಾಡಿದ್ದಾರೆ, ಎಲ್ಲೂ ಹೀಗಾಗಿಲ್ಲ. ದುರಾಡಳಿ ಸರ್ಕಾರದಿಂದ ನಮ್ಮಲ್ಲಿ ಈ ದುರಂತ ನಡೆದಿದೆ. ಸಮಯೋಚಿತ ನಿರ್ಧಾರ ಮಾಡದೇ, ಅತ್ಯಂತ ಬೇಜವಬ್ದಾರಿಯಿಂದ ಸರ್ಕಾರ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

    ಮೃತರ ತಂದೆ-ತಾಯಿಗೆ ಶೋಕ ಜೀವನಪರ್ಯಂತ ಇರುತ್ತದೆ. ಸರ್ಕಾರ ವ್ಯವಸ್ಥೆ ಮಾಡಬೇಕಿತ್ತು. ಗೆದ್ದ ವಾತಾವರಣ ಅಲ್ಲಿಗಿಂತ ಇಲ್ಲಿ ಹೆಚ್ಚಿತ್ತು. ದೀಪಾವಳಿ ರೀತಿಯಲ್ಲಿ ಆಚರಿಸಲಾಗಿತ್ತು. ಈ ವಿಚಾರ ತಿಳಿದು ಬಂದೋಬಸ್ತ್ ಮಾಡಬೇಕಿತ್ತು. ಇಂಟಲಿಜೆನ್ಸ್ ಏನು ಮಾಡ್ತಾ ಇತ್ತು? ಸರ್ಕಾರದ ನಡೆ ಎಲ್ಲಾ ಗೊಂದಲಮಯವಾಗಿತ್ತು. ಕಾರ್ಯಕ್ರಮ ಚೇಂಜ್ ಆಗ್ತಾನೆ ಇತ್ತು. ಜನರ ರಕ್ಷಣೆ ಮಾಡುವ ಬದಲು ಈ ರೀತಿ ಬೇಜವಬ್ದಾರಿತನ ಮಾಡಿದೆ. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಅಂತ ಸಂಬಂಧಿಕರು ಆರೋಪ ಮಾಡ್ತಿದ್ದಾರೆ. ರೈತರು ನೂರು ಜನ ಹೋರಾಟ ಮಾಡಲು, ಬಂದರೆ ನೂರಾರು ಪೊಲೀಸ್ ಹಾಕಿ ಭದ್ರತೆ ಕೊಡೋ ಸರ್ಕಾರ, ಈಗ್ಯಾಕೆ‌ ಭದ್ರತೆ ಕೊಡಲಿಲ್ಲ? ಸರ್ಕಾರ ತಪ್ಪಿತಸ್ಥ ಸ್ಥಾನದಲ್ಲಿದೆ. ಈ ಘಟನೆಯ ಸೂಕ್ತ ತನಿಖೆ ಆಗಬೇಕು. ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ಆಗಬೇಕು. ಇದು ಸಾಮಾನ್ಯ ವಿಚಾರ ಅಲ್ಲ ಎಂದು ಮಾತನಾಡಿದರು. ಇದನ್ನೂ ಓದಿ: ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

  • ಕಾರಿಗೆ ಟ್ರಕ್‌ ಡಿಕ್ಕಿ – ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವು

    ಕಾರಿಗೆ ಟ್ರಕ್‌ ಡಿಕ್ಕಿ – ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವು

    ಭುವನೇಶ್ವರ: ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಒಡಿಶಾದ (Odisha) ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ ಮಾಜಿ ಸರಪಂಚ್ ಆಗಿದ್ದರು. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್‌ಗೆ ಆಪ್ತರಾಗಿದ್ದರು. ಇದನ್ನೂ ಓದಿ: ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು

    ಬುರ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎನ್‌ಎಚ್ 53ನಲ್ಲಿ ಮುಂಜಾನೆ 1:30 ರ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಭುವನೇಶ್ವರದಿಂದ ಕಾರ್ಡೋಲಾದಲ್ಲಿ ಮನೆಗೆ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಎಲ್ಲಾ ಆರು ಜನರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು

    ವಾಹನವು ನಮ್ಮ ಕಾರಿಗೆ ಎರಡು ಬಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಯಾರೋ ಉದ್ದೇಶಪೂರ್ವಕವಾಗಿ ನಮ್ಮ ವಾಹನವನ್ನು ಡಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶಂಕಿಸಿದ ಚಾಲಕ, ಕಾಂತಪಲ್ಲಿ ಚೌಕದ ಬಳಿ ಹೆದ್ದಾರಿಯಿಂದ ಗ್ರಾಮಾಂತರ ರಸ್ತೆಯ ಕಡೆಗೆ ಕಾರನ್ನು ತಿರುಗಿಸಿದನು. ಟ್ರಕ್‌ ಚಾಲಕ ನಮ್ಮ ವಾಹನವನ್ನು ಹಿಂಬಾಲಿಸಿದ. ಈ ವೇಳೆ ಕಾರು ಪಲ್ಟಿಯಾಯಿತು. ಹೆದ್ದಾರಿಯಲ್ಲಿ ನಮ್ಮ ಕಾರಿಗೆ ಟ್ರಕ್‌ ಚಾಲಕ ಮೂರನೇ ಬಾರಿ ಡಿಕ್ಕಿ ಹೊಡೆದಾಗ ನನಗೆ ಪ್ರಜ್ಞೆಯೇ ತಪ್ಪಿತು ಎಂದು ಅಪಘಾತದಲ್ಲಿ ಗಾಯಗೊಂಡ ಸುರೇಶ ಚಂದಾ ತಿಳಿಸಿದ್ದಾರೆ.

    ಯಾರೋ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿದ್ದಾರೆ ಎಂದು ನನಗೆ ಖಾತ್ರಿಯಿದೆ. ತಪ್ಪಾಗಿ ಒಮ್ಮೆ ವಾಹನಕ್ಕೆ ಡಿಕ್ಕಿ ಹೊಡೆಯಬಹುದು. ಯಾರದರು ಹಿಂದಿನಿಂದ ಮೂರು ಬಾರಿ ಡಿಕ್ಕಿ ಹೊಡೆಯುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಮಾಜಿ ಶಾಸಕ ರೆಂಗಾಳಿ ನಾಯ್ಕ್ ಮಾತನಾಡಿ, ಇದು ಅಪಘಾತವಲ್ಲ, ಉದ್ದೇಶಪೂರ್ವಕ ಯಾರೋ ಪಿತೂರಿ ಮಾಡಿದ್ದಾರೆಂದು ಆರೋಪಿಸಿದ್ದಾರೆ.

  • ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

    ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

    ಬೆಂಗಳೂರು: ವಕ್ಫ್ ಆಸ್ತಿ (Waqf Board) ಕಬಳಿಕೆ ಪ್ರಕರಣ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಆಡಳಿತ ಪಕ್ಷದ ಸದಸ್ಯರೇ ಸದನದಲ್ಲಿ ಆಗ್ರಹಿಸಿ ಗದ್ದಲವೆಬ್ಬಿಸಿದ ಘಟನೆ ಇಂದು ವಿಧಾನ ಪರಿಷತ್ (Legislative Council) ಕಲಾಪದಲ್ಲಿ ನಡೆಯಿತು.

    ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ (Raghupati rao Malkapure) ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡರು. ಈ ವೇಳೆ ಸದನದಲ್ಲಿ ದಿಢೀರ್ ಎದ್ದು ನಿಂತ ಬಿಜೆಪಿಯ ಸದಸ್ಯ ಸಚೇತಕ ನಾರಾಯಣಸ್ವಾಮಿ, ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಬರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

    ವರದಿ ಸಲ್ಲಿಸಿ ಎರಡು ವರ್ಷವಾಗಿದೆ. ಆ ವರದಿ ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದರು. ಇದಕ್ಕೆ ಬಿಜೆಪಿಯ ಸದಸ್ಯರಾದ ರವಿಕುಮಾರ್, ತೇಜಸ್ವಿನಿಗೌಡ ಸೇರಿದಂತೆ ಇತರ ಕೆಲ ಸದಸ್ಯರು ಸಾತ್ ನೀಡಿದರು. ಕೂಡಲೇ ವರದಿಯನ್ನು ಕಂದಾಯ ಸಚಿವರು ಮಂಡಿಸಬೇಕು ಎಂದು ಒತ್ತಾಯಿಸಿದರು.

    ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ವಿರೋಧ ಪಕ್ಷದ ಕೆಲಸ ನೀವೇ ಮಾಡಿದರೆ ಅವರೇನು ಮಾಡಬೇಕು? ಆಡಳಿತ ಪಕ್ಷದ ಸದಸ್ಯರಾಗಿ ನೀವೇ ಹೀಗೆ ಮಾಡಿದರೆ ಹೇಗೆ? ಒಬ್ಬೊಬ್ಬರಾಗಿ ಮಾತನಾಡಿ ಎಂದರು.

    ಇದಕ್ಕೆ ಪ್ರತಿಯಾಗಿ ಪ್ರತಿಪಕ್ಷ ನಾಯಕ ಹರಿಪ್ರಸಾದ್ (Hariprasad) ಮಾತನಾಡಿ, ಸರ್ಕಾರ ಅವರದ್ದೇ. ಯಾರು ತನಿಖೆ ಮಾಡುವುದು ಬೇಡ ಎಂದಿದ್ದಾರೆ. ಆದರೆ ಮೊದಲು ಪ್ರಶ್ನೋತ್ತರ ತೆಗೆದುಕೊಳ್ಳಿ ನಂತರ ಅವರ ಮಾತು ಆಲಿಸಿ ಎಂದರು. ಆಡಳಿತ ಪಕ್ಷದ ಸದಸ್ಯರ ಮಾತಿಗೆ ಅವಕಾಶ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆ – ಒಪ್ಪಿಕೊಂಡ ಸರ್ಕಾರ

    ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ನಮ್ಮ ಕಾರ್ಯ ಪದ್ದತಿ ಪ್ರಕಾರ ಪ್ರಶ್ನೋತ್ತರ ತೆಗೆದುಕೊಳ್ಳಲಿದ್ದೇವೆ. ನೀವು ಯಾವುದೇ ನೋಟಿಸ್ ಕೂಡ ನೀಡಿಲ್ಲ ಎಂದು ಬಿಜೆಪಿ ಸದಸ್ಯರಿಗೆ ಸೂಚಿಸಿ ಪ್ರಶ್ನೋತ್ತರ ಕಲಾಪ ಆರಂಭಿಸಲು ಮುಂದಾದರು. ಆದರೂ ಇದಕ್ಕೆ ಅವಕಾಶ ನೀಡದೆ ಬಿಜೆಪಿ ಸದಸ್ಯ ರವಿಕುಮಾರ್, ಪ್ರಾಣೇಶ, ನಾರಾಯಣಸ್ವಾಮಿ, ತೇಜಸ್ವಿನಿಗೌಡ ವರದಿ ಮಂಡಿಸಲು ಸರ್ಕಾರದಕ್ಕೆ ಆದೇಶ ಮಾಡಿ ಎಂದು ಆಗ್ರಹಿಸಿದರು.

    ಈ ವೇಳೆ ಮಾತನಾಡಿದ ಹರಿಪ್ರಸಾದ್, ಸರ್ಕಾರವೇ ಅಲ್ಲಿ ಇಲ್ಲ ಅದಕ್ಕೆ ನೀವು ಹೇಳುತ್ತಿದ್ದೀರಿ. ನಿಮಗೆ ಧಮ್ಮು ತಾಕತ್ತು ಇಲ್ಲ. ಧಮ್ಮಿರುವುದು 40 ಪರ್ಸೆಂಟ್‌ಗೆ ಮಾತ್ರ. ವಕ್ಫ್ ಬೋರ್ಡ್‌ನಲ್ಲಿ ಇವರಿಗೆ 40 ಪರ್ಸೆಂಟ್ ಸಿಕ್ಕಿಲ್ಲ. ಅದಕ್ಕೆ ಈಗ ಈ ರೀತಿ ಮಾಡುತ್ತಿದ್ದಾರೆ ಎಂದರು.

    ಇದಕ್ಕೆ ಟಾಂಗ್ ನೀಡಿದ ಸರ್ಕಾರಿ ಮುಖ್ಯ ಸಚೇತಕ ನಾರಾಯಣಸ್ವಾಮಿ, ನಿಮ್ಮದು 85 ಪರ್ಸೆಂಟ್ ಸರ್ಕಾರ. ರಾಜೀವ್ ಗಾಂಧಿಯೇ ಹೇಳಿದ್ದರು ಎನ್ನುವುದನ್ನು ಉಲ್ಲೇಖಿಸಿದರು.‌ ಈ ವೇಳೆ ಬಿಜೆಪಿ ಸದಸ್ಯರಾದ ತೇಜಸ್ವಿನಿ, ರವಿಕುಮಾರ್ ಯಾವಾಗ ವರದಿ ಮಂಡಿಸುತ್ತೀರಾ ಅಂತ ಸರ್ಕಾರದಿಂದ ಭರವಸೆ ಕೊಡಿಸಿ ಎಂದರು. ಇದನ್ನೂ ಓದಿ: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್

    ಈ ವೇಳೆ ಪ್ರಶ್ನೋತ್ತರ ಕಲಾಪವನ್ನು ಆರಂಭಿಸಲಾಯಿತು. ಆದರೆ ಪ್ರಶ್ನೆಯೇ ಕೇಳಿಸದಂತೆ ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದರಿಂದ ಕುಪಿತರಾದ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಇದೇನು ಮಾರುಕಟ್ಟೆಯಾ? ಇವರನ್ನು ಕೂರಿಸಿ ಎಂದರು. ಗದ್ದಲ ಹೆಚ್ಚಾಗಿದ್ದರಿಂದ ಸದನದಕ್ಕೆ ಮಾಹಿತಿ ನೀಡಲು ಎದ್ದುನಿಂತ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಮಾಣಿಪ್ಪಾಡಿ ವರದಿ ಕುರಿತು ಮಾತು ಆರಂಭಿಸಿದರು. ಆದರೆ ಇದಕ್ಕೆ ಸಚಿವ ಅಶ್ವತ್ಥ ನಾರಾಯಣ (Ashwath Narayan) ಬೇಡವೆಂದು ಸೂಚಿಸಿದ್ದರಿಂದ ಉತ್ತರ ಮೊಟಕುಗೊಳಿಸಿದರು. ನಂತರ ಸಭಾಪತಿ ಪ್ರಶ್ನೋತ್ತರ ಕಲಾಪ ಆರಂಭಿಸಿ ಗದ್ದಲಕ್ಕೆ ತೆರೆ ಎಳೆದರು.

    Live Tv
    [brid partner=56869869 player=32851 video=960834 autoplay=true]

  • ಬಾಬರಿ ಮಸೀದಿ ಧ್ವಂಸ ಪ್ರಕರಣ; ನ್ಯಾಯಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ – BJP ನಾಯಕರಿಗೆ ಬಿಗ್ ರಿಲೀಫ್

    ಬಾಬರಿ ಮಸೀದಿ ಧ್ವಂಸ ಪ್ರಕರಣ; ನ್ಯಾಯಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ – BJP ನಾಯಕರಿಗೆ ಬಿಗ್ ರಿಲೀಫ್

    ನವದೆಹಲಿ: 1992ರ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನ್ಯಾಯಂಗ ನಿಂದನೆಯ ಎಲ್ಲ ಅರ್ಜಿಗಳನ್ನು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಕೈಬಿಟ್ಟಿದೆ. ಇಂದು ಈ ಬಗ್ಗೆ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವಾಗಿರುವ ಹಿನ್ನೆಲೆ ಈ ಎಲ್ಲ ಅರ್ಜಿಗಳು ಅಪ್ರಸುತ್ತ ಎಂದು ಹೇಳಿದೆ.

    ಬಾಬರಿ ಮಸೀದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಅದನ್ನು ನೆಲಸಮಗೊಳಿಸಬೇಡಿ ಎಂದು 1991ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ರಾಜ್ಯ ಸರ್ಕಾರ, ಅಧಿಕಾರಿಗಳು, ರಾಜಕಾರಣಿಗಳು ಎಲ್ಲರಿಗೂ ಅನ್ವಯ ಆಗಿತ್ತು. ಈ ಆದೇಶ ಬಳಿಕ 1992 ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI

    ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಹಿನ್ನೆಲೆ ಮುಹಮ್ಮದ್ ಅಸ್ಲಾಮ್ ಭುರೆ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಮಾಜಿ ಸಿಎಂ ಕಲ್ಯಾಣ ಸಿಂಗ್, ಬಿಜೆಪಿ ನಾಯಕರಾದ ಎಲ್‌.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವು ನಾಯಕರ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

    ಅರ್ಜಿದಾರ ಮಹಮ್ಮದ್ ಅಸ್ಲಾಮ್ 2010ರಲ್ಲಿ ಮೃತಪಟ್ಟ ಹಿನ್ನೆಲೆ ಈ ಅರ್ಜಿ ಹೆಚ್ಚು ವಿಚಾರಣೆಗೆ ಬಂದಿರಲಿಲ್ಲ. 2019ರಲ್ಲಿ ಅಯೋಧ್ಯೆ ವಿವಾದಿತ ಜಮೀನಿನ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇಂದು ಈ ಅರ್ಜಿ ಇತ್ಯರ್ಥಪಡಿಸಿದ ಕೋರ್ಟ್, ಪ್ರಕರಣ ಸಂಪೂರ್ಣ ಇತ್ಯರ್ಥವಾಗಿರುವ ಹಿನ್ನೆಲೆ ವಿಚಾರಣೆ ಅಗತ್ಯವಿಲ್ಲ. ಮುಖ್ಯ ಅರ್ಜಿ ವಿಚಾರಣೆ ವೇಳೆ ಈ ಬಗ್ಗೆ ಪ್ರಸ್ತಾಪಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿತು‌. ಇದನ್ನೂ ಓದಿ: ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್‌ – ಮುಂದೇನಾಯ್ತು?

    ಈಗ ಈ ಕೇಸುಗಳ ಪ್ರಸ್ತುತತೆ ಇಲ್ಲದ ಕಾರಣ ಎಲ್ಲ ನ್ಯಾಯಾಂಗ ನಿಂದನೆ ಕೇಸುಗಳನ್ನು ಕೈಬಿಡುತ್ತಿದ್ದೇವೆ ಎಂದು ಕೋರ್ಟ್ ಆದೇಶಿಸಿತು. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಲವು ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಲೆಯಲ್ಲಿ ಮುಸ್ಲಿಮ್‌ ಪ್ರಾರ್ಥನೆ – ಆವರಣಕ್ಕೆ ಗಂಗಾಜಲ ಸಿಂಪಡಿಸಿದ ಬಿಜೆಪಿ ಕಾರ್ಯಕರ್ತರು

    ಶಾಲೆಯಲ್ಲಿ ಮುಸ್ಲಿಮ್‌ ಪ್ರಾರ್ಥನೆ – ಆವರಣಕ್ಕೆ ಗಂಗಾಜಲ ಸಿಂಪಡಿಸಿದ ಬಿಜೆಪಿ ಕಾರ್ಯಕರ್ತರು

    ಲಕ್ನೋ: ಮುಸ್ಲಿಮರ ಪ್ರಾರ್ಥನೆಯನ್ನು (ಕಲಿಮಾ) ಪಠಿಸುವ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕರು ಗಂಗಾ ಜಲ ಬಳಸಿ ಶಾಲೆ ಆವರಣವನ್ನು ಶುದ್ಧೀಕರಿಸಿದ ಘಟನೆ ನಡೆದಿದೆ.

    ಪ್ರತಿಭಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ಅವರು ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ. ಶಾಲೆ ಹಾಗೂ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಇದನ್ನೂ ಓದಿ: ಹರ್ ಹರ್ ಶಂಭು ಹಾಡಿಗೆ ಅಪಸ್ವರ – ಮುಸ್ಲಿಮಳಾಗಿ ಆ ಹಾಡನ್ನು ಹಾಡಬಾರದು ಎಂದ ದಿಯೋಬಂದ್

    ವಿದ್ಯಾರ್ಥಿಗಳು ಕಳೆದ 12-13 ವರ್ಷಗಳಿಂದ ಹಿಂದೂ, ಸಿಖ್, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಪ್ರಾರ್ಥನೆಗಳನ್ನು ಪಠಿಸುವ ಪರಿಪಾಠವಿತ್ತು. ಅದನ್ನು ಶಾಲೆಯ ಪ್ರಾಂಶುಪಾಲರಾದ ಸುಮಿತ್ ಮಖಿಜಾ ಅವರು ನಿರ್ವಹಿಸಿಕೊಂಡು ಬಂದಿದ್ದಾರೆ. ಈ ಕುರಿತು ಈಗಾಗಲೇ ಒಮ್ಮೆ ಅವರೊಂದಿಗೆ ಮಾತನಾಡಿದ್ದೇವೆ. ಆದರೆ ಮತ್ತೊಮ್ಮೆ ಸಂಪರ್ಕಿಸಿದಾಗ, ಮಾಹಿತಿ ನೀಡಲು ಅವರು ಲಭ್ಯವಾಗುತ್ತಿಲ್ಲ ಸಹಾಯಕ ಪೊಲೀಸ್ ಕಮಿಷನರ್ ನಿಶಾಂಕ್ ವರ್ಮಾ ತಿಳಿಸಿದ್ದಾರೆ.

    ಶಾಲೆಯಲ್ಲಿ ಎಲ್ಲಾ ಧರ್ಮಗಳ ಪ್ರಾರ್ಥನೆಗೆ ಆರಂಭದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ ಇತ್ತೀಚೆಗೆ ಪೋಷಕರೊಬ್ಬರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಇದಾದ ಬಳಿಕ ಶಾಲೆಯು ಎಲ್ಲಾ ಧರ್ಮಗಳ ಪ್ರಾರ್ಥನೆಗಳನ್ನು ಕೈಬಿಡಲು ನಿರ್ಧರಿಸಿತು. ರಾಷ್ಟ್ರಗೀತೆ ಹಾಡುವುದನ್ನು ಮಾತ್ರ ಕಡ್ಡಾಯಗೊಳಿಸಲಾಗಿದೆ ಎಂದು ಶಾಲಾ ಪ್ರಾಂಶುಪಾಲರು ತಿಳಿಸಿರುವುದಾಗಿ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಲ್ವರು ಸಂಸದರ ಅಮಾನತು ಹಿಂಪಡೆದ ಸ್ಪೀಕರ್

    ವಿವಾದ ಏನು?
    ಕಾನ್ಪುರ ಶಾಲೆಯಲ್ಲಿ ಸರ್ವಧರ್ಮಗಳ ಪ್ರಾರ್ಥನೆಯನ್ನು ಹಾಡಿಸಲಾಗುತ್ತಿತ್ತು. ಈ ಪ್ರಾರ್ಥನೆಯನ್ನು ಗಾಯತ್ರಿ ಮಂತ್ರದೊಂದಿಗೆ ಆರಂಭಿಸಲಾಗುತ್ತಿತ್ತು. ಆದರೆ ಮುಸ್ಲಿಮರ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್‌ನವರು ವಿರೋಧ ವ್ಯಕ್ತಪಡಿಸಿದ್ದರು. ವಿವಾದದ ಬಳಿಕ ಇದನ್ನು ನಿಲ್ಲಿಸಲಾಗಿತ್ತು.

    ಪ್ರಾರ್ಥನೆಗೆ ಸಂಬಂಧಿಸಿದಂತೆ ಶಾಲೆ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿನಿಯನ್ನು ಆಕೆಯ ಪೋಷಕರು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವೀಡಿಯೋವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೂ ಟ್ಯಾಗ್‌ ಮಾಡಿ ವೈರಲ್‌ ಮಾಡಲಾಗಿತ್ತು.

    ಸ್ಥಳೀಯ ಬಿಜೆಪಿ ಮುಖಂಡರಾದ ಮಹೇಂದ್ರ ಶುಕ್ಲಾ ಮತ್ತು ಧೀರಜ್ ಸಾಹು ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಶಾಲೆಯ ಆವರಣವನ್ನು ಗಂಗಾಜಲದಿಂದ ಶುದ್ಧೀಕರಿಸಲಾಗಿದೆ. ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ಕಲಿಮಾ (ಮುಸ್ಲಿಂ ಪ್ರಾರ್ಥನೆ) ಪಠಿಸುವಂತೆ ಮಾಡುವುದು ಹೇಗೆ? ಇದು ಸಮರ್ಥನೀಯವಲ್ಲ ಎಂದು ಶುಕ್ಲಾ ಆಕ್ಷೇಪ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    ಬೆಂಗಳೂರು: ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

    2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!

    ಇದಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.

    ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.‌ ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ

  • ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಪಕ್ಷದ ಪ್ರಭಾವಿಯೊಬ್ಬರಿದ್ದಾರೆ: ರಾಮಲಿಂಗಾರೆಡ್ಡಿ

    ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಪಕ್ಷದ ಪ್ರಭಾವಿಯೊಬ್ಬರಿದ್ದಾರೆ: ರಾಮಲಿಂಗಾರೆಡ್ಡಿ

    -ರಾಮಲಿಂಗಾರೆಡ್ಡಿ ಹೊಸ ಬಾಂಬ್

    ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ಕಾಂಗ್ರೆಸ್ ಇಂದು ಹೊಸ ಬಾಂಬ್ ಸಿಡಿಸಿದೆ. ಬಿಟ್ ಕಾಯಿನ್ ಹಗರಣದಲ್ಲಿ ಆಡಳಿತ ಪಕ್ಷದ ಪ್ರಭಾವಿಯೊಬ್ಬರಿದ್ದಾರೆ. ಮತ್ತೊಬ್ಬ ಪ್ರಭಾವಿಯ ಪುತ್ರರು ಕೂಡ ಭಾಗಿ ಆಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ.

    ಈ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಯೊಬ್ಬರ ಮಗ ಇದ್ದಾನೆ ಅನ್ನೋ ಮಾಹಿತಿ ಇದೆ. ತನಿಖೆ ಆದಾಗ ಎಲ್ಲಾ ವಿಚಾರ ಗೊತ್ತಾಗಲಿದೆ. ಬಿಟ್ ಕಾಯಿನ್ ಹಗರಣ ಬಗ್ಗೆ ಇಡಿಗೆ ತನಿಖೆಗೆ ಒಪ್ಪಿಸಲಾಗಿದೆ ಅಂತಿದ್ದಾರೆ. ಯಾವಾಗ ಇಡಿ ತನಿಖೆಗೆ ಒಳಪಡಿಸಲಾಯಿತು? ಈ ಬಗ್ಗೆ ಸದನದಲ್ಲೂ ಸಹ ಸರ್ಕಾರ ಏನೂ ಹೇಳಿರಲಿಲ್ಲ. ಆದರೆ ಹಗರಣದ ಬಗ್ಗೆ ಪ್ರಧಾನಿ ಕಚೇರಿಯಿಂದ ಪತ್ರ ಬಂದಿರೋದಾಗಿ ತಿಳಿದುಬಂದಿದೆ. ಬಿಟ್ ಕಾಯಿನ್ ಹಗರಣ ರಾಜ್ಯ ಸರ್ಕಾರಕ್ಕೆ ಕಂಟಕ ಆಗಲಿದೆ ಎಂದು ರಾಮಲಿಂಗಾರೆಡ್ಡಿ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

    ಆದರೆ ಯಾರ್ಯಾರಿದ್ದಾರೆ ಹೇಳಿ ಎಂದಾಗ ನ್ಯಾಯಾಂಗ ತನಿಖೆ ನಡೆಯಲಿ ಎಂದು ರಾಮಲಿಂಗಾರೆಡ್ಡಿ ಸುಮ್ಮನಾಗಿದ್ದಾರೆ. ಬಳಿಕ ಸಿದ್ದರಾಮಯ್ಯರ ಮೇಲೆ ಬಿಜೆಪಿ ಆರೋಪದ ಬಗ್ಗೆ ಮಾತನಾಡಿದ ಅವರು, ವಿನಾಕಾರಣ ಸಿದ್ದರಾಮಯ್ಯನವರ ಮೇಲೆ ಬಿಜೆಪಿ ಅವರು ಆರೋಪ ಮಾಡುತ್ತಿದ್ದಾರೆ. ದಲಿತರು ಹೊಟ್ಟೆಪಾಡಿಗೆ ಹೋಗಿದ್ದಾರೆ ಅಂತಾ ಸಿದ್ದರಾಮಯ್ಯ ಎಲ್ಲೂ ಹೇಳಿಲ್ಲ. ಬಿಜೆಪಿ ಅವರು ಸುಳ್ಳು ಹೇಳಿಕೊಂಡು, ವಿಷಯಾಂತರ ಮಾಡಿಕೊಂಡು ಬರುತ್ತಿದ್ದಾರೆ. ವಿಷಯ ತಿರುಚುವುದರಲ್ಲಿ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಸುಳ್ಳು ಹೇಳುವುದು ಬಿಜೆಪಿ ನಾಯಕರಿಗೆ ಕರಗತ, ಹುಟ್ಟುತ್ತಲೇ ಸುಳ್ಳು ಹೇಳುವುದು ಕಲಿತುಕೊಂಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ರಾಮಲಿಂಗಾರೆಡ್ಡಿ ಕಿಡಿಕಾರಿದರು.

    ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಇದನ್ನೂ ಓದಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ: ಸಿದ್ದರಾಮಯ್ಯ

  • ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ

    ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ

    – ಆರ್‌ಎಸ್‌ಎಸ್ ದೇಶವನ್ನು ಕಟ್ಟಲು ಯುವಕರನ್ನು ಬೆಳೆಸುವ ಕಾರ್ಖಾನೆ

    ಹಾಸನ: ಅಧಿಕಾರಕ್ಕಾಗಿ ಜೆಡಿಎಸ್ ಜೊತೆ ರಾಜಿಯಾಗಿ, ಅವರ ಮುಲಾಜಿಗೆ ಒಳಗಾಗಿ ಅವರು ಹೇಳಿದ್ದನ್ನೆಲ್ಲಾ, ಕೇಳುವಂತಹ ಪರಿಸ್ಥಿತಿ ನಮ್ಮ ಪಕ್ಷಕ್ಕೆ ಆಗಲಿ, ನಾಯಕರಿಗಾಗಲಿ, ಸಂಘಟನೆಗಾಗಲಿ ಬರಬಾರದು ಎನ್ನುವುದು ನನ್ನ ದಿಟ್ಟ ನಿಲುವು ಎಂದು ಶಾಸಕ ಪ್ರೀತಂಗೌಡ ಸ್ವಪಕ್ಷದ ನಾಯಕರಿಗೇ ಕಿವಿಮಾತು ಹೇಳಿದ್ದಾರೆ.

    ಆರ್‌ಎಸ್‌ಎಸ್ ಬಗ್ಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟೀಕೆ ಮಾಡಿರುವ ವಿಚಾರಕ್ಕೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ದೇಶವನ್ನು ಕಟ್ಟಲು ಯುವಕರನ್ನು ಬೆಳೆಸುವ ಕಾರ್ಖಾನೆ. ದೇಶ ಕಟ್ಟುವುದೇ ತಪ್ಪು ಎನ್ನುವುದಾದರೆ ಸಾರ್ವಜನಿಕರು ಯೋಚನೆ ಮಾಡಬೇಕಾದ ಸಮಯ ಇದು. ಇದರಲ್ಲಿ ಯಾರ್ಯಾರ ಮನಸ್ಥಿತಿ ಏನು ಎಂಬುದು ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ:  ನಿಮ್ಮ ಪಕ್ಷದ ಫ್ಯಾಮಿಲಿ ಬ್ಯುಸಿನೆಸ್‍ಗೆ ಸಂಘದಲ್ಲಿಯೇ ತರಬೇತಿ ನೀಡಲಾಗ್ತಿದೆಯೇ: ಕಟೀಲ್‍ಗೆ ಹೆಚ್.ಕೆ.ಕುಮಾರಸ್ವಾಮಿ ಪ್ರಶ್ನೆ

    ಇದೇ ವೇಳೆ ಮುಖ್ಯಮಂತ್ರಿ ಸೇರಿದಂತೆ ಸ್ವಪಕ್ಷದ ಕೆಲವು ನಾಯಕರು ಜೆಡಿಎಸ್ ಜೊತೆ ಸಾಫ್ಟ್ ಕಾರ್ನರ್ ಹೊಂದಿರುವ ಬಗ್ಗೆಯೂ ವಿರೋಧಿಸಿದ ಅವರು, ಬಿಜೆಪಿ ಯಾವುದೋ ಒಂದು ಭಾಗದಲ್ಲಿ ಅಧಿಕಾರ ಹಿಡಿಯಲು ಸಾಫ್ಟ್ ಕಾರ್ನರ್ ತೋರಿಸಿದೆ. ಜೆಡಿಎಸ್ ಅನ್ನು ರಾಜಕೀಯವಾಗಿ ಒಂದು ಮೈಲಿ, ಒಂದು ಕಿಲೋಮೀಟರ್, ಒಂದು ಮೀಟರ್ ದೂರ ಇಡಬೇಕು. ನಮ್ಮನ್ನು ಬಳಸಿಕೊಂಡು ಅವರ ಬೇಳೆಯನ್ನು ಬೇಯಿಸಿಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.

    ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಅವರನ್ನು ಓಲೈಕೆ ಮಾಡಲು ಹೋದ್ರೆ ನಮ್ಮ ಬುಡಕ್ಕೆ ಬರುತ್ತೆ. ಅಧಿಕಾರ ಹಿಡಿಯಲು ಐದಲ್ಲ ಹತ್ತು ವರ್ಷ ಕಾಯೋಣ. ನಮ್ಮ ರಾಜ್ಯ ನಾಯಕರು, ರಾಜ್ಯಾಧ್ಯಕ್ಷರು, ಮಂತ್ರಿಗಳು, ಮುಖ್ಯಮಂತ್ರಿಗಳು ಯಾವ್ಯಾವ ಸಂದರ್ಭದಲ್ಲಿ ಜೆಡಿಎಸ್ ಬಗ್ಗೆ ಮೃದು ಧೋರಣೆ ತೋರಿದ್ದರು ಅವರಿಗೆ ಕುಮಾರಸ್ವಾಮಿ ಅವರು ಒಂದು ಸಂದೇಶ ನೀಡಿದ್ದಾರೆ ಎಂದರು. ಇದನ್ನೂ ಓದಿ:  ರಾಷ್ಟ್ರೀಯ ಹಸಿರು ನ್ಯಾಯಾಲಯಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಅಧಿಕಾರವಿದೆ: ಸುಪ್ರೀಂಕೋರ್ಟ್

    ಯಾವುದೋ ಹಾಸನ ಮುನ್ಸಿಪಾಲಿಟಿ ಅಧಿಕಾರಕ್ಕೋಸ್ಕರ ನಾನು ಹೊಂದಾಣಿಕೆ ರಾಜಕೀಯ ಮಾಡಲ್ಲ. ಜೆಡಿಎಸ್ ಅವರ ಮಿಷನ್ ಎಂದರೆ ಬಿಜೆಪಿ-ಕಾಂಗ್ರೆಸ್ ನೂರರ ಮೇಲೆ ಬರಬಾರದು. ಆಗ ಯಾವ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳೋದು ಅವರ ಗುಣ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಬೇರೆಯವರು ಮಾತನಾಡಲ್ಲ, ಪ್ರೀತಂಗೌಡ ನೇರವಾಗಿ ಮಾತನಾಡುತ್ತಾನೆ ಎಂದು ಶಾಸಕರು ಕಿಡಿಕಾರಿದ್ದಾರೆ.

    ಆರ್‌ಎಸ್‌ಎಸ್  ಪರ, ವಿರುದ್ಧ ರಾಜಕೀಯ ನಾಯಕರ ಹೇಳಿಕೆಗಳಿಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ

  • ಬಿಜೆಪಿ ಮುಖಂಡರಿಗೂ ಕೊರೊನಾ – ನಗರಾಭಿವೃದ್ಧಿ ಪ್ರಾಧಿಕಾರ ಸೀಲ್‍ಡೌನ್

    ಬಿಜೆಪಿ ಮುಖಂಡರಿಗೂ ಕೊರೊನಾ – ನಗರಾಭಿವೃದ್ಧಿ ಪ್ರಾಧಿಕಾರ ಸೀಲ್‍ಡೌನ್

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರ ಜೊತೆ ಸಂಪರ್ಕದಲ್ಲಿದ್ದ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಎಚ್.ಡಿ.ತಮ್ಮಯ್ಯ ಅವರಿಗೂ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

    ತಮ್ಮಯ್ಯ ಅವರ ಪತ್ನಿಗೂ ಪಾಸಿಟಿವ್ ದೃಢವಾಗಿದೆ. ಈಗಾಗಲೇ ಮೂವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಸಂಪರ್ಕಿತ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಮಾಜಿ ಸದಸ್ಯ ತಮ್ಮಯ್ಯ ಅವರಲ್ಲಿ ಪಾಸಿಟಿವ್ ಪತ್ತೆಯಾಗಿರುವುದರಿಂದ ಇನ್ನುಳಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕೊರೊನಾ ಆತಂಕ ಎದುರಾಗಿದೆ.

    ಇದೀಗ ಜಿಲ್ಲಾ ಬಿಜೆಪಿ ವಲಯದಲ್ಲಿ ತೀವ್ರ ಆತಂಕ ಎದುರಾಗಿದ್ದು, ಮೂಡಿಗೆರೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಮುಂದಾಗಿದ್ದಾರೆ. ಸಾಲದಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಸದಸ್ಯ ತಮ್ಮಯ್ಯ ಸಂಪರ್ಕದಲ್ಲಿದ್ದ ಜನಸಾಮಾನ್ಯರು ತೀವ್ರ ಆತಂಕಕ್ಕೀಡಾಗಿದ್ದಾರೆ. ಅಷ್ಟೇ ಅಲ್ಲದೇ ಇವರಿಬ್ಬರು ಸಚಿವ ಸಿಟಿ ರವಿ ಅವರ ಜೊತೆ ಸಂಪರ್ಕದಲ್ಲಿದ್ದ ಹಿನ್ನೆಲೆ ಅವರು ಕೂಡ ಕ್ವಾರಂಟೈನ್‍ಗೆ ಒಳಗಾಗುವ ಸಾಧ್ಯತೆ ಇದೆ.

    ಈಗಾಗಲೇ ನಗರಸಭೆ ಮಾಜಿ ಸದಸ್ಯ ತಮ್ಮಯ್ಯ ಅವರ ಏರಿಯಾವನ್ನು ಸೀಲ್‍ಡೌನ್ ಮಾಡಲಾಗಿದೆ. ಜೊತೆಗೆ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಕೂಡ ಅಧಿಕಾರಿಗಳು ಸೀಲ್‍ಡೌನ್ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಜನಸಾಮಾನ್ಯರಲ್ಲಿ ಮಾತ್ರ ಕೊರೊನಾ ಪತ್ತೆಯಾಗುತ್ತಿತ್ತು. ಇದೀಗ ರಾಜಕಾರಣಿಗಳಲ್ಲೂ ಕೊರೊನಾ ಪತ್ತೆಯಾಗಿರುವುದರಿಂದ ಜನಸಾಮಾನ್ಯರು ಭಯಭೀತರಾಗಿದ್ದಾರೆ.