Tag: bjp office

  • 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    – ದಕ್ಷಿಣ ಭಾರತದ ಸ್ಫೋಟಗಳ ಪ್ರಮುಖ ಆರೋಪಿ ಸೇರಿ ಇಬ್ಬರ ಅರೆಸ್ಟ್

    ಚೆನ್ನೈ: ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ (Bengaluru Blast) ಪ್ರಮುಖ ಸೂತ್ರಧಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ (Tamil Nadu) ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ.

    1995ರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ ಸಿದ್ದಿಕ್. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಈತ 1999ರಿಂದ ತಲೆ ಮರೆಸಿಕೊಂಡಿದ್ದ. ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

    ಪ್ರಕರಣಗಳು ಯಾವುವು..?

    ತಮಿಳುನಾಡು, ಕರ್ನಾಟಕ ರಾಜ್ಯಗಳಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಸಿದ್ದಿಕ್ ಆರೋಪಿಯಾಗಿದ್ದಾನೆ. 1999ರ ಬೆಂಗಳೂರು ಸ್ಫೋಟ, 2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲೂ ಈತ ಆರೋಪಿಯಾಗಿದ್ದ.

    ಅಲ್ಲದೆ, ನಾಗೂರಿನಲ್ಲಿ ಪಾರ್ಸೆಲ್ ಬಾಂಬ್ ಸ್ಫೋಟ, 1997ರಲ್ಲಿ ಚೆನ್ನೈ, ತಿರುಚಿರಾಪಳ್ಳಿ, ಕೊಯಮತ್ತೂರು ಸೇರಿ 7 ಕಡೆ ನಡೆದ ಸ್ಫೋಟ, ಚೆನ್ನೈ ಎಗ್ಮೋರ್ ಪೊಲೀಸ್ ಕಮೀಷನರ್ ಕಚೇರಿ ಸ್ಫೋಟ, 2012ರ ವೆಲ್ಲೂರು ಅರವಿಂದ ರೆಡ್ಡಿ ಕೊಲೆ ಪ್ರಕರಣದಲ್ಲೂ ಈತನೇ ಸೂತ್ರಧಾರನಾಗಿದ್ದ ಎಂದು ತಿಳಿದು ಬಂದಿದೆ.

    ರಹಸ್ಯ ಮಾಹಿತಿಯಿಂದ ಸಿಕ್ಕಿ ಬಿದ್ರು!

    ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು. ರಹಸ್ಯ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಅಬೂಬಕರ್ ಸಿದ್ದಿಕ್‍ನನ್ನು ಬಂಧಿಸಿದ್ದಾರೆ. ಇವರಿಬ್ಬರನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ. ಅಬೂಬಕರ್ ಬಂಧನ ಮಹತ್ವದ ಸಾಧನೆ ಎಂದು ತಮಿಳುನಾಡು ಪೊಲೀಸರು ಹಾಗೂ ಎನ್‍ಐಎ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: Exclusive | ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್: ಬಾಂಬ್‌ ಇಟ್ಟ ಬಳಿಕ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದ ಮಾಸ್ಟರ್‌ ಮೈಂಡ್‌

  • ಯತ್ನಾಳ್ ಉಚ್ಛಾಟನೆಗೆ ಒಕ್ಕೊರಲ ಒತ್ತಾಯ – ಬಿಜೆಪಿ ಸರಣಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    ಯತ್ನಾಳ್ ಉಚ್ಛಾಟನೆಗೆ ಒಕ್ಕೊರಲ ಒತ್ತಾಯ – ಬಿಜೆಪಿ ಸರಣಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    – ಕಚೇರಿಯಲ್ಲಿ 4 ಗಂಟೆಗಳ ಮ್ಯಾರಥಾನ್ ಸಭೆ
    – ಯತ್ನಾಳ್ ವಿರುದ್ಧ ಕ್ರಮಕೈಗೊಂಡರೆ ಎಲ್ಲವೂ ಸರಿಯಾಗುತ್ತೆ

    ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ (Tarun Chugh) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯತ್ನಾಳ್ ಉಚ್ಛಾಟನೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

    ಕರ್ನಾಟಕ ಬಿಜೆಪಿ ಆಂತರಿಕ ಸಂಘರ್ಷಕ್ಕೆ ಮದ್ದು ಅರೆಯಲು ಕೇಂದ್ರ ನಾಯಕರು ಮುಂದಾಗಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಚುಗ್ ರಾಜ್ಯಕ್ಕೆ ಆಗಮಿಸಿದ್ದು, ಸರಣಿ ಸಭೆಗಳನ್ನು ನಡೆಸಿದರು. ಇಂದು (ಡಿ.03) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ, ಸಮಿತಿಗಳ ಸಭೆ ನಡೆಯಿತು.ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಿ ಪಕ್ಷ ಉಳಿಸಿ – ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಅನಾಮಧೇಯ ಪತ್ರ

    ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವಿದ್ಯಮಾನಗಳು, ಬೈ ಎಲೆಕ್ಷನ್ ಸೋಲು, ಪಕ್ಷ ಸಂಘಟೆ ಸಂಘಟನೆ ಮತ್ತಿತರ ವಿಚಾರಗಳ ಬಗ್ಗೆ 4 ಗಂಟೆಗಳ ಮ್ಯಾರಥಾನ್ ಸಭೆ ನಡೆದಿದೆ. ದೆಹಲಿಗೆ ತೆರಳಿರುವ ಚುಗ್ ಇಂದಿನ ಸಭೆ ಬಗ್ಗೆ ಪಕ್ಷದೊಳಗಿನ ಆಂತರಿಕ ಸಂಘರ್ಷದ ಬಗ್ಗೆ ವಿವರವಾಗಿ ಮಾಹಿತಿ ಸಂಗ್ರಹಿಸಿ, ಹೈಕಮಾಂಡ್‌ಗೆ (High Command) ರಿಪೋರ್ಟ್ ಸಲ್ಲಿಸಲಿದ್ದಾರೆ.

    ಇದಕ್ಕೂ ಮುನ್ನ ತರುಣ್ ಚುಗ್, ಸಕ್ರಿಯ ಸದಸ್ಯತ್ವ ಸಮಿತಿಗಳು, ಜಿಲ್ಲಾಧ್ಯಕ್ಷರು, ಮಂಡಲ, ಬೂತ್ ಸಮಿತಿಗಳ ಪ್ರಮುಖರ ಜೊತೆ ಸಭೆ ನಡೆಸಿದರು. ಯತ್ನಾಳ್ ವಿರುದ್ಧ ಕ್ರಮ ಕೈಗೊಂಡರೆ ಎಲ್ಲವೂ ಸರಿಹೋಗತ್ತದೆ ಎಂದು ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಒಕ್ಕೊರಲ ಒತ್ತಾಯ ಮಾಡಿದ್ದಾರೆ. ಆದರೆ ತರುಣ್ ಚುಗ್ ಮಾತ್ರ ಇವತ್ತು ಯತ್ನಾಳ್ ವಿಷಯ ಚರ್ಚಿಸದೆ ಕೇವಲ ಪಕ್ಷ ಸಂಘಟನೆ ಬಗ್ಗೆ ಮಾತ್ರ ಒತ್ತುಕೊಟ್ಟಿದ್ದಾರೆ. ಡಿಸೆಂಬರ್ 7ಕ್ಕೆ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಬರಲಿದ್ದಾರೆ.

    ನಡೆದ ಸರಣಿ ಸಭೆಗಳ ಮೊದಲ ಸಭೆಯಲ್ಲಿಯೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಉಚ್ಛಾಟನೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸಭೆಯಲ್ಲಿದ್ದ ಶಾಸಕರು, ಮಾಜಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರುಗಳು ಒಕ್ಕೊರಲ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಯತ್ನಾಳ್ ಮತ್ತವರ ತಂಡದಿಂದ ಅಡ್ಡಿಯಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಂಡರೆ ಎಲ್ಲವೂ ಸರಿಯಾಗುತ್ತದೆ. ಕಳೆದ ಮೂರು ವರ್ಷಗಳಿಂದಲೂ ಯತ್ನಾಳ್ ಪಕ್ಷದ ಶಿಸ್ತು, ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಪಕ್ಷದ ನಾಯಕತ್ವ ವಿರುದ್ಧವೇ ಬಹಿರಂಗ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮೊದಲು ಯತ್ನಾಳ್ ಉಚ್ಛಾಟನೆ ಮಾಡಲೇಬೇಕೆಂದು ಪಟ್ಟು ಹಿಡಿದರು.

    ಯತ್ನಾಳ್ ತಂಡದಿಂದ ಜಿಲ್ಲಾಧ್ಯಕ್ಷರುಗಳಿಗೆ ತೊಂದರೆ ಆಗುತ್ತಿದೆ. ಈ ವೇಳೆ ಬಿಜೆಪಿಯ (BJP) 32 ಜಿಲ್ಲಾಧ್ಯಕ್ಷರ ಸಹಿ ಇರುವ ಪತ್ರ ತೋರಿಸಿ ಜೆಪಿ ನಡ್ಡಾಗೆ ಹೆಸರಿಗೆ ಪತ್ರ ಬರೆದಿದ್ದೇವೆ. ನೀವು ಅವರಿಗೆ ನೀಡಬೇಕು. ತಳಮಟ್ಟದ ಸಂಘಟನೆಯಲ್ಲಿ ಯತ್ನಾಳ್ ಗೊಂದಲ ಮೂಡಿಸುತ್ತಿದ್ದಾರೆ. ಇತ್ತೀಚಿನ ಪಕ್ಷದೊಳಗೆ ವಿದ್ಯಮಾನಗಳು ನಮಗೆ ಆಘಾತ ತಂದಿವೆ. ರಾಜ್ಯಾಧ್ಯಕ್ಷರ ಮೇಲೆ ಬಹಿರಂಗ ಹೇಳಿಕೆಗಳನ್ನು, ನಿತ್ಯ ಟೀಕೆ ಮಾಡುತ್ತಿದ್ದಾರೆ. ಬಿವೈವಿಯವರು ಉತ್ತಮವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ಅವರು ರಾಜ್ಯಾಧ್ಯಕ್ಷರಾದ ಬಳಿಕ 2023ರ ವಿಧಾನಸಭಾ ಚುನಾವಣೆ ಸೋಲಿನ ನಂತರ ಪಕ್ಷದಲ್ಲಿದ್ದ ನಿರಾಶೆಯ ಭಾವನೆಯಿಂದ ಹೊರಬರಲು ಎಲ್ಲರಿಗೂ ಸಾಧ್ಯವಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಯತ್ನಾಳ್ ಸಾರ್ವಜನಿಕವಾಗಿ ಪಕ್ಷದ ವರ್ಚಸ್ಸು, ವಿಶ್ವಾಸಾರ್ಹತೆ ಮತ್ತು ಪ್ರತಿಷ್ಠೆಗೆ ಪದೇ ಪದೇ ಘಾಸಿ ಮಾಡುತ್ತಿದ್ದಾರೆ. ಯತ್ನಾಳ್ ಮತ್ತು ಅವರ ತಂಡದ ವಿರುದ್ಧ ಕೇಂದ್ರ ನಾಯಕತ್ವ ಏಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ? ಬಹಿರಂಗ ಮಾಧ್ಯಮ ಹೇಳಿಕೆಗಳನ್ನು ನೀಡುವ ಮೂಲಕ ಸಾರ್ವಜನಿಕವಾಗಿ ಪಕ್ಷದ ಅಧ್ಯಕ್ಷರ ಪ್ರತಿಷ್ಠೆಯನ್ನು ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷದ ಘನತೆ, ವಿಶ್ವಾಸಾರ್ಹತೆ ಮತ್ತು ಹಿತದೃಷ್ಟಿಯಿಂದ ಕೂಡಲೇ ಮಧ್ಯಪ್ರವೇಶಿಸಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕಾಗಿ ವಿನಂತಿಕೊಳ್ಳುತ್ತೇವೆ. ಕಾರ್ಯಕರ್ತರ ನೈತಿಕ ಸ್ಥೈರ್ಯದ ಹಿತದೃಷ್ಟಿಯಿಂದ ಇದನ್ನು ತುರ್ತು ಆಧಾರದ ಮೇಲೆ ಪರಿಗಣಿಸಲು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ

    ಬಿಜೆಪಿ ನಾಯಕರ ಒತ್ತಾಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್‌ಗೆ ಶಾಕ್ ನೀಡಿದಂತಾಗಿದೆ. ನಿಮ್ಮ ಭಾವನೆಗಳನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ. ನಿಮ್ಮ ಅಭಿಪ್ರಾಯಗಳನ್ನು ವರಿಷ್ಠರ ಗಮನಕ್ಕೆ ತರುತ್ತೇನೆ. ಆದರೆ ಈಗ ನಾನು ಸಂಘಟನಾತ್ಮಕ ವಿಚಾರಕ್ಕಾಗಿ ಬಂದಿದ್ದೇನೆ. ಸಂಘಟನೆ, ಪಕ್ಷದ ಬಲವರ್ಧನೆ ಆಗಬೇಕು. ಇವತ್ತಿನ ಸಭೆಗಳು ಸಂಘಟನೆ ಪರ್ವ, ಸದಸ್ಯತ್ವ ಅಭಿಯಾನಕ್ಕೆ ಮಾತ್ರ ಸೀಮಿತಾವಗಿದೆ. ಹೀಗಾಗಿ ಈ ವೇದಿಕೆಯಲ್ಲಿ ಚರ್ಚೆ ಬೇಡ ಎಂದು ಮನವಿ ಮಾಡಿಕೊಂಡರು. ಜೆಪಿ ನಡ್ಡಾಗೆ ನೀಡಿದ ಪತ್ರವನ್ನು ಸ್ವೀಕರಿಸದೇ ಕೇವಲ ನಾಯಕರ ಮನವಿ ಆಲಿಸಿ ಹೈಕಮಾಂಡ್ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

    ಸಭೆಯಲ್ಲಿ ವಿಜಯೇಂದ್ರ (BY Vijayendra), ಸಿ.ಟಿ ರವಿ (CT Ravi), ಛಲವಾದಿ ನಾರಾಯಣಸ್ವಾಮಿ, (Chalavadi Narayanaswamy) ಆರ್.ಅಶೋಕ್ (R Ashok), ಸುನೀಲ್ ಕುಮಾರ್ (Sunil Kumar), ರಾಜ್ಯ ಪದಾಧಿಕಾರಿಗಳು ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.ಇದನ್ನೂ ಓದಿ: ಬಿಜೆಪಿಯನ್ನು ವಿಜಯೇಂದ್ರ ಚೇಲಾಗಳು ನಡೆಸ್ತಿದ್ದಾರೆ: ಬಿ.ಪಿ ಹರೀಶ್‌ ಕಿಡಿ

  • ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

    ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

    ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ (Malleswaram BJP Office) ಪೊಲೀಸ್ ಭದ್ರತೆಯನ್ನು (Police Security) ಹೆಚ್ಚಿಸಲಾಗಿದೆ.

    ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್ (Metal Detector) ಅಳವಡಿಕೆ ಮಾಡಲಾಗಿದೆ.

    ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಭೇಟಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು| ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ – ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ

    ನಿತ್ಯ ಬಿಜೆಪಿ ಕಚೇರಿಗೆ ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್‌ ಭೇಟಿ ಮಾಡಿ ಭದ್ರತೆ ಪರಿಶೀಲನೆ ಮಾಡಲಿದ್ದಾರೆ.

    ಯಾಕೆ ಭದ್ರತೆ?
    ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್‌ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿತ್ತು.

    ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ (Rameshwaram Cafe Blast Case) ಪ್ರಕರಣದ ಆರೋಪಿಗಳಾದ ಮುಸ್ಸಾವಿರ್‌ ಹುಸೇನ್‌ ಶಾಜಿದ್‌, ಅಬ್ದುಲ್‌ ಮತೀನ್‌ ತಾಹ, ಮಾಜ್‌ ಮುನೀರ್‌ ಅಹಮದ್‌, ಮುಜಾಮಿಲ್‌ ಷರೀಫ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.

     

  • ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    – ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶ ಬಯಲು

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಆರೋಪಿಗಳನ್ನು ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ಎಂದು ಗುರುತಿಸಲಾಗಿದ್ದು, ಐಪಿಸಿ, ಯುಎ (ಪಿ) ಆಕ್ಟ್, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಪಿಡಿಎಲ್‌ಪಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್‌ ಮಾಡಲಾಗಿದೆ. ಎಲ್ಲಾ ನಾಲ್ವರನ್ನು ಮೊದಲು ಬಂಧಿಸಲಾಗಿತ್ತು. ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು

    ಐಟಿಪಿಎಲ್ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಈ ವರ್ಷ ಮಾ.1 ರಂದು ಸಂಭವಿಸಿದ ಐಇಡಿ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ. ಹೋಟೆಲ್ ಆಸ್ತಿಗೆ ವ್ಯಾಪಕವಾಗಿ ಹಾನಿಯಾಗಿದೆ.

    ಮಾ.3 ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ ಎನ್‌ಐಎ, ವಿವಿಧ ರಾಜ್ಯ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಮನ್ವಯದಲ್ಲಿ ಹಲವಾರು ತಾಂತ್ರಿಕ ಮತ್ತು ಕ್ಷೇತ್ರ ತನಿಖೆಯನ್ನು ನಡೆಸಿತು. ಶಜೀಬ್ ಬಾಂಬ್ ಇಟ್ಟಿದ್ದ ವ್ಯಕ್ತಿ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಆತ ತಾಹಾ ಜೊತೆಗೆ, ಈ ಹಿಂದೆ ಅಲ್-ಹಿಂದ್ ಮಾಡ್ಯೂಲ್ ಅನ್ನು ಸ್ಫೋಟಿಸಿದ ನಂತರ 2020 ರಿಂದ ತಲೆಮರೆಸಿಕೊಂಡಿದ್ದ. ರಾಮೇಶ್ವರಂ ಕೆಫೆ ಸ್ಫೋಟದ 42 ದಿನಗಳ ನಂತರ ಪಶ್ಚಿಮ ಬಂಗಾಳದ ಅವರ ಅಡಗುತಾಣದಿಂದ ಎನ್‌ಐಎ ನಡೆಸಿದ ವ್ಯಾಪಕ ಶೋಧನೆಗಳು ಅವರನ್ನು ಬಂಧಿಸಲು ಕಾರಣವಾಗಿವೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್‌ ಸಲ್ಲಿಕೆ – ಗನ್ನಿಕಡ ತೋಟದ ಮನೆ ರಹಸ್ಯದ ಬಗ್ಗೆಯೂ ಉಲ್ಲೇಖ!

    ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರಾದ ಇಬ್ಬರು ವ್ಯಕ್ತಿಗಳು ಐಸಿಸ್ ಮೂಲಭೂತವಾದಿಗಳಾಗಿದ್ದು, ಈ ಹಿಂದೆ ಸಿರಿಯಾದ ಐಸಿಸ್ ಪ್ರಾಂತ್ಯಗಳಿಗೆ ಹಿಜ್ರಾ ಮಾಡಲು ಸಂಚು ರೂಪಿಸಿದ್ದರು. ಅವರು ಇತರ ಮೋಸಗಾರ ಮುಸ್ಲಿಂ ಯುವಕರನ್ನು ಐಸಿಸ್ ಸಿದ್ಧಾಂತಕ್ಕೆ ತೀವ್ರಗಾಮಿಗೊಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ಅಂತಹ ಯುವಕರಲ್ಲಿ ಸೇರಿದ್ದಾರೆ.

    ತಾಹಾ ಮತ್ತು ಶಾಜಿಬ್ ಮೋಸದಿಂದ ಪಡೆದ ಭಾರತೀಯ ಸಿಮ್ ಕಾರ್ಡ್‌ಗಳು ಮತ್ತು ಭಾರತೀಯ ಬ್ಯಾಂಕ್ ಖಾತೆಗಳನ್ನು ಬಳಸಿದ್ದರು. ಡಾರ್ಕ್ ವೆಬ್‌ನಿಂದ ಡೌನ್‌ಲೋಡ್ ಮಾಡಿದ ವಿವಿಧ ಭಾರತೀಯ ಮತ್ತು ಬಾಂಗ್ಲಾದೇಶದ ಗುರುತಿನ ದಾಖಲೆಗಳನ್ನು ಸಹ ಬಳಸಿದ್ದಾರೆ. ಎಲ್‌ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶಹೀದ್ ಫೈಸಲ್‌ಗೆ ಮಾಜಿ ಅಪರಾಧಿ ಶೋಯೆಬ್ ಅಹ್ಮದ್ ಮಿರ್ಜಾ ಎಂಬಾತ ತಾಹಾಳನ್ನು ಪರಿಚಯಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ತಾಹಾ ನಂತರ ತನ್ನ ಹ್ಯಾಂಡ್ಲರ್ ಆಗಿರುವ ಫೈಸಲ್‌ನನ್ನು ಅಲ್-ಹಿಂದ್ ಐಸಿಸ್ ಮಾಡ್ಯೂಲ್ ಪ್ರಕರಣದ ಆರೋಪಿ ಮೆಹಬೂಬ್ ಪಾಷಾಗೆ ಮತ್ತು ಐಸಿಸ್ ದಕ್ಷಿಣ ಭಾರತದ ಅಮೀರ್ ಖಾಜಾ ಮೊಹಿದೀನ್‌ಗೆ ಮತ್ತು ನಂತರ ಮಾಜ್ ಮುನೀರ್ ಅಹ್ಮದ್‌ಗೆ ಪರಿಚಯಿಸಿದನು.

    ತಾಹಾ ಮತ್ತು ಶಾಜಿಬ್ ಕ್ರಿಪ್ಟೋ ಕರೆನ್ಸಿಗಳ ಮೂಲಕ ಅವರ ಹ್ಯಾಂಡ್ಲರ್‌ನಿಂದ ಹಣವನ್ನು ನೀಡಲಾಯಿತು. ಇದನ್ನು ತಾಹಾ ವಿವಿಧ ಟೆಲಿಗ್ರಾಮ್ ಆಧಾರಿತ ಪ್ಲಾಟ್‌ಫಾರ್ಮ್ಗಳ ಸಹಾಯದಿಂದ ಫಿಯೆಟ್‌ಗೆ ಪರಿವರ್ತಿಸಿತು. ಈ ಹಣವನ್ನು ಆರೋಪಿಗಳು ಬೆಂಗಳೂರಿನಲ್ಲಿ ವಿವಿಧ ಹಿಂಸಾಚಾರಗಳನ್ನು ನಡೆಸಲು ಬಳಸುತ್ತಿದ್ದರು ಎಂದು ತನಿಖೆಯಲ್ಲಿ ಮತ್ತಷ್ಟು ತಿಳಿದುಬಂದಿದೆ. 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಫಲವಾದ ಐಇಡಿ ದಾಳಿಯು ಇದರಲ್ಲಿ ಸೇರಿದೆ. ನಂತರ ಇಬ್ಬರು ಪ್ರಮುಖ ಆರೋಪಿಗಳು ರಾಮೇಶ್ವರಂ ಕೆಫೆ ಸ್ಫೋಟವನ್ನು ಯೋಜಿಸಿದ್ದರು. ಈ ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ? – ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

  • ರಾಮನ ಪೋಸ್ಟರ್ ಹಾಕಿದ್ರೆ ಕತ್ತರಿ, ಕೊಟ್ಟ ಮಂತ್ರಾಕ್ಷತೆ ಬೀಸಾಡ್ತಿದ್ದಾರೆ- ಕೈ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆರೋಪ

    ರಾಮನ ಪೋಸ್ಟರ್ ಹಾಕಿದ್ರೆ ಕತ್ತರಿ, ಕೊಟ್ಟ ಮಂತ್ರಾಕ್ಷತೆ ಬೀಸಾಡ್ತಿದ್ದಾರೆ- ಕೈ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆರೋಪ

    ಬೆಂಗಳೂರು: ರಾಮನ ಪೋಸ್ಟರ್ ಹಾಕಿದರೆ ಕಾಂಗ್ರೆಸ್ (Congress) ಕತ್ತರಿ ಹಾಕುತ್ತದೆ. ಇನ್ನು ಕೊಟ್ಟ ಮಂತ್ರಾಕ್ಷತೆನ್ನು (Mantrakshate) ಬಿಸಾಡುತ್ತಿದ್ದಾರೆ ಎಂದು ಎಂಎಲ್‍ಸಿ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಗಂಭೀರ ಆರೋಪ ಮಾಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ (BJP Office) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನ ಕಾಂಗ್ರೆಸ್ ಮನಬಂದಂತೆ ಟೀಕಿಸ್ತಿದೆ. ಕಾಂಗ್ರೆಸ್‍ನ ಈ ನಿಲುವನ್ನ ಖಂಡಿಸುತ್ತೇನೆ. ಸಿದ್ದರಾಮಯ್ಯ ಮೊದಲು ವಿರೋಧಿಸಿದರು. ಜನ ಉತ್ತರ ಕೊಡಲು ಆರಂಭಿಸಿದ ಮೇಲೆ ಬದಲಾದರು, ಇದನ್ನ ಮೆಚ್ಚುತ್ತೇನೆ ಎಂದರು.

    ಕೆ.ಎನ್ ರಾಜಣ್ಣ (KN Rajanna), ಪ್ರಿಯಾಂಕ್ ಖರ್ಗೆ ಮನಬಂದಂತೆ ಮಾತಾಡಿದ್ದಾರೆ. ಜನರೇ ಇದಕ್ಕೆ ಉತ್ತರ ಕೊಡ್ತಾರೆ. ಶ್ರೀರಾಮನನ್ನ ಅವಹೇಳನ ಮಾಡಿದಾಕ್ಷಣ ದೊಡ್ಡ ನಾಯಕರಾಗ್ತಾರೆ ಎಂಬ ತಪ್ಪು ಭಾವನೆಯಲ್ಲಿದ್ದಾರೆ. ಪೋಸ್ಟರ್ ಹಾಕಿದರೆ ಅದನ್ನ ಕತ್ತರಿಸ್ತಾರೆ. ಮಂತ್ರಾಕ್ಷತೆ ಎಲ್ಲಾ ಕಡೆ ಹಂಚಿಕೆ ಮಾಡಲಾಗ್ತಿದೆ. ಆದರೆ ಕಾಂಗ್ರೆಸ್‍ನವರು ಅದನ್ನ ಬಿಸಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಜನರಿಗೆ ಕೊಡ್ತಿರೋದು ಮೋದಿ ಕೊಡ್ತಿರೋ ಅಕ್ಕಿ: ಜನರಿಗೆ ಕೊಡುತ್ತಿರುವುದು ರಾಜ್ಯದ ಅಕ್ಕಿಯಲ್ಲ, ಮೋದಿ ಕೊಡುತ್ತಿರುವ ಅಕ್ಕಿ. ಡಿಕೆಶಿಯವರೇ ಜನರ ಕಿವಿ ಮೇಲೆ ಹೂವು ಇಡಬೇಡಿ. ಪ್ರಿಯಾಕೃಷ್ಣ ಅವರು 80 ಅಡಿ ರಾಮನ ಪೋಸ್ಟರ್ ಹಾಕಿದ್ದಾರೆ. ಅದಕ್ಕೆ ಕತ್ತರಿ ಹಾಕಿದ್ದೀರಾ?. ಎಲ್ಲರ ಹೃದಯದಲ್ಲಿ ರಾಮನಿದ್ದಾನೆ. ಪ್ರಿಯಾಕೃಷ್ಣ ಅವರ ಪೋಸ್ಟರ್ ಇದಕ್ಕೆ ಸಾಕ್ಷಿ. ಪ್ರಿಯಾಂಕ್ ಖರ್ಗೆ (Priyank Kharge) ಮನೆಯಲ್ಲಿ ರಾಮನಾಮ, ಹೊರಗಡೆ ರಹೀಮ ನಾಮ. ಕಾಂಗ್ರೆಸ್ ಪಕ್ಷದ ಭವಿಷ್ಯ ಅಲ್ಪಸಂಖ್ಯಾತರ ಕೈಯಲ್ಲಿ ಇದೆ ಎಂದುಕೊಂಡು ಹಿಂದೂಗಳನ್ನ ನಿಂದಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

    ಸಂವಿಧಾನದಲ್ಲೂ ರಾಮ ಇದ್ದಾನೆ. ಅಂಬೇಡ್ಕರ್ ಅವರ ಹೆಸರಲ್ಲೂ ರಾಮ ಇದ್ದಾನೆ. ದೇವಸ್ಥಾನಕ್ಕೆ ಯಾಕೆ ನಮ್ಮನ್ನ ಬಿಡಲ್ಲ ಎಂದು ಅಂಬೇಡ್ಕರ್ ಕೇಳಿದ್ರು. ದೇವರ ಮೇಲೆ ನಂಬಿಕೆ ಇದ್ದಿದ್ದರಿಂದಲೇ ಕೇಳಿದರು. ಹಿಂದೂ ಧರ್ಮದಲ್ಲಿರುವ ನ್ಯೂನತೆ ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋದರು. ಕ್ರಿಶ್ಚಿಯನ್, ಮುಸ್ಲಿಂ ಧರ್ಮಕ್ಕೆ ಹೋಗಿಲ್ಲ ಅವರು. ರಾಮಮಂದಿರದ ಅರ್ಚಕರಲ್ಲಿ 24 ಜನರ ಪೈಕಿ ಇಬ್ಬರು ದಲಿತರಿದ್ದಾರೆ. ಹಿಂದೂ ಧರ್ಮ ಬದಲಾಗುತ್ತಿದೆ ಎಂದು ಅವರು ಹೇಳಿದರು.

  • ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ- ರೇಣುಕಾಗೆ ವಿಜಯೇಂದ್ರ ತಾಕೀತು

    ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ- ರೇಣುಕಾಗೆ ವಿಜಯೇಂದ್ರ ತಾಕೀತು

    ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ನೀಡಬೇಡಿ. ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ ಅಂತಾ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ (Renukacharya) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ತಾಕೀತು ಮಾಡಿದ್ದಾರೆ.

    ಇಂದು ವಿಜಯೇಂದ್ರ ಅವರನ್ನು ರೇಣುಕಾಚಾರ್ಯ ಬಿಜೆಪಿ ಕಚೇರಿಯಲ್ಲಿ (BJP Office) ಭೇಟಿ ಮಾಡಿದ್ದರು. ಈ ವೇಳೆ ಮಾಧ್ಯಮಗಳಲ್ಲಿ ಮಾತಾಡಿ ಗೊಂದಲ ಮೂಡಿಸದಂತೆ ಬಿಜೆಪಿ ರಾಜ್ಯಾಧ್ಯಕ್ಷ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತಾಡದೇ ರೇಣುಕಾಚಾರ್ಯ ಅವರು ಬಿಜೆಪಿ ಕಚೇರಿಯಿಂದ ಹೊರಟಿದ್ದಾರೆ. ಈ ವೇಳೆ ಏನೂ ಮಾತಾಡದಂತೆ ಸೂಚಿಸಿದ್ದಾರೆ ಎಂದು ಹೇಳಿ ಹೋಗಿದ್ದಾರೆ.

    ಈ ಹಿಂದೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಮಾಜಿ ಸಚಿವ ವಿ.ಸೋಮಣ್ಣ (V Somanna) ಸೇರಿದಂತೆ ಕೆಲ ನಾಯಕರ ವಿರುದ್ಧ ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡುತ್ತಿದ್ದರು. ರೇಣುಕಾಚಾರ್ಯ ಹೇಳಿಕೆಗಳಿಂದ ಕೆಲ ಅಸಮಾಧಾನಿತರು ಕೆರಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಕರೆದು ಇಂದು ಬಿವೈ ವಿಜಯೇಂದ್ರ ತಿಳಿ ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವು

  • ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ಪಾಟ್ನಾ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ.

    ಬುಧವಾರ ಆರಂಭವಾಗಿದ್ದ ಪ್ರತಿಭಟನೆ, ಇಂದೂ ಸಹ ಮುಂದುವರಿದಿದೆ. ಬಿಹಾರದ ಹಲವು ಭಾಗಗಳಲ್ಲಿ ಸತತ 2ನೇ ದಿನ ರೈಲು ಮತ್ತು ವಾಹನ ಸಂಚಾರಕ್ಕೆ ಸೇನಾ ಆಕಾಂಕ್ಷಿಗಳು ಅಡ್ಡಿಪಡಿಸಿದ್ದಾರೆ. ಭಭುವಾ ರೋಡ್ ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಗಾಜಿನ ಕಿಟಕಿಗಳನ್ನು ಲಾಠಿಗಳಿಂದ ಒಡೆದು ಹಾಕಿದ್ದು, ರೈಲಿನ ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಜೆಹನಾಬಾದ್‌ನಲ್ಲಿ ರೈಲ್ವೆ ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತುಕೊಂಡಿದ್ದ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಬೆನ್ನಟ್ಟಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಸೇರಿದಂತೆ ಅನೇಕ ಮಂದಿಗೆ ಗಾಯಗಳಾಗಿವೆ.

    ಆರಾಹ್‌ದಲ್ಲಿನ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾಕಾರರನ್ನು ಚೆದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. `ಇಂಡಿಯನ್ ಆರ್ಮಿ ಲವರ್ಸ್’ ಎಂಬ ಬ್ಯಾನರ್ ಹಿಡಿದು, ಹೊಸ ನೇಮಕಾತಿ ಯೋಜನೆಗೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನೂ ಓದಿ: ‘ಜೈ ಶ್ರೀರಾಮ್’ ಎನ್ನುತ್ತಾ ಮುಸ್ಲಿಂ ಹತ್ಯೆ ವಿಚಾರ: ಸಾಯಿ ಪಲ್ಲವಿ ಬೆಂಬಲಕ್ಕೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ಏನಿದು ಯೋಜನೆ?: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು. ಈ ಯುವ ಯೋಧರನ್ನು `ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಅನಾವರಣಗೊಳಿಸಿತು.

    ಯಾರು ಅರ್ಹರು?: 17.5 ರಿಂದ 21 ವರ್ಷದೊಳಗಿನ ವಯೋಮಿತಿಯಲ್ಲಿ ಸುಮಾರು 30,000-40,000 ರೂ. ವೇತನದಲ್ಲಿ ಸೈನಿಕರನ್ನು ನೇಮಿಸಿಕೊಳ್ಳಲಾಗುವುದು. ಯುವತಿಯರು ಕೂಡ ನೇಮಕಾತಿ ಯೋಜನೆಗೆ ಅರ್ಹರಾಗಿರುತ್ತಾರೆ.

    Live Tv

  • ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ನವದೆಹಲಿ: ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಬೆಳಗ್ಗೆ ಗಾಂಧಿನಗರದ ಲಾವಡ್ ಪ್ರದೇಶದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದರು. ಭದ್ರತಾ ಪಡೆಗಳನ್ನು ಶ್ಲಾಘಿಸಿದರು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.

    ದೇಶದ ಭದ್ರತೆಯಲ್ಲಿ ತಂತ್ರಜ್ಞಾನದ ಪಾತ್ರವನ್ನು ಒತ್ತಿ ಹೇಳಿದ ಅವರು, ತಂತ್ರಜ್ಞಾನವು ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ. ಭದ್ರತಾ ಪಡೆಗಳಲ್ಲಿರಲು ಕೇವಲ ದೈಹಿಕ ತರಬೇತಿ ಸಾಕಾಗುವುದಿಲ್ಲ. ಈಗ ವಿಶೇಷ ಸಾಮಥ್ರ್ಯವುಳ್ಳ ಹಾಗೂ ದೈಹಿಕವಾಗಿ ಸದೃಢರಾಗದಿದ್ದರೂ ಸಹ ಭದ್ರತೆಗೆ ಕೊಡುಗೆ ನೀಡಬಹುದು ಎಂದರು. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಾವು ನೋಡಿದ್ದೇವೆ. ಲಾಕ್‍ಡೌನ್ ಸಮಯದಲ್ಲಿ ಸಮವಸ್ತ್ರದಲ್ಲಿ ಅನೇಕ ಪೊಲೀಸರು ಅಗತ್ಯವಿರುವವರಿಗೆ ಆಹಾರ ಮತ್ತು ಔಷಧಿಗಳನ್ನು ನೀಡಿದರು. ಜನರು ಪೊಲೀಸರ ಮಾನವೀಯ ಮುಖವನ್ನು ನೋಡಿದ್ದಾರೆ ಎಂದು ಹೇಳಿದರು.

    ಪೊಲೀಸರ ಬಗ್ಗೆ ಜನರಲ್ಲಿರುವ ಗ್ರಹಿಕೆಯನ್ನು ಬದಲಾಯಿಸುವ ರೀತಿಯಲ್ಲಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಬೇಕು. ಪೊಲೀಸ್ ಬಗ್ಗೆ ಜನರಲ್ಲಿ ಒಂದು ಕೆಟ್ಟ ಗ್ರಹಿಕೆ ಇದೆ. ಜನರೊಂದಿಗೆ ಸೌಹಾರ್ದಯುತವಾಗಿರುವ ರೀತಿಯಲ್ಲಿ ಪೊಲೀಸ್ ಪಡೆಯನ್ನು ತರಬೇತುಗೊಳಿಸುವುದು ಕಡ್ಡಾಯವಾಗಿದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಭದ್ರತಾ ಪಡೆಗಳಲ್ಲಿನ ನೇಮಕಾತಿಯಲ್ಲಿನ ಸುಧಾರಣೆಗಳ ಅಗತ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯದ ನಂತರ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ನೇಮಕಾತಿಯಲ್ಲಿ ಸುಧಾರಣೆಗಳ ಅಗತ್ಯವಿತ್ತು. ದುರದೃಷ್ಟವಶಾತ್ ನಾವು ಹಿಂದುಳಿದಿದ್ದೇವೆ ಎಂದು ಹೇಳಿದರು.

    ಪ್ರಧಾನಿ ಮೋದಿಯವರ ಎರಡು ದಿನಗಳ ಗುಜರಾತ್ ಭೇಟಿ ಶುಕ್ರವಾರ ಪ್ರಾರಂಭವಾಯಿತು. ಅಲ್ಲಿ ಅವರು ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಕಮಲಂವರೆಗೆ ರೋಡ್‍ಶೋ ನಡೆಸಿದರು. ನಂತರ ಅಹಮದಾಬಾದ್‍ನಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಇದಲ್ಲದೆ ಅಹಮದಾಬಾದ್‍ನ ಜಿಎಂಡಿಸಿ ಮೈದಾನದಲ್ಲಿ ಮಹಾ ಪಂಚಾಯತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

    ನಂತರ ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಅವರ ಜೊತೆ ಕುಳಿತು ಭೋಜನ ಸ್ವೀಕರಿಸಿದರು.

  • ಚೆನ್ನೈನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ – ಓರ್ವ ಅರೆಸ್ಟ್

    ಚೆನ್ನೈನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ – ಓರ್ವ ಅರೆಸ್ಟ್

    ಚೆನ್ನೈ: ಬಿಜೆಪಿ ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆದ ಆರೋಪದಡಿ ವ್ಯಕ್ತಿಯೋರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

    ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಈ ಕುರಿತಂತೆ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಚೆನ್ನೈನ ನಂದನಂನಲ್ಲಿ 38 ವರ್ಷದ ವಿನೋದ್ ಎಂಬ ಓರ್ವ ಆರೋಪಿಯನ್ನು ಇದೀಗ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    petrol bomb

    ವಿಚಾರಣೆ ವೇಳೆ ಹಣ ಪಡೆದು ಪೆಟ್ರೋಲ್ ಬಾಂಬ್ ಎಸೆಯುವುದರಲ್ಲಿ ವಿನೋದ್ ಫೇಮಸ್ ಎಂಬ ವಿಚಾರ ತಿಳಿದು ಬಂದಿದೆ. ನೀಟ್ ಮಸೂದೆಯನ್ನು ಬಿಜೆಪಿ ಬೆಂಬಲಿಸಿದ್ದಕ್ಕೆ ಬೇಸರಗೊಂಡು ಈ ಕೃತ್ಯ ಎಸೆದಿರುವುದಾಗಿ ಆರೋಪಿ ಹೇಳಿದ್ದಾನೆ. ಈಗಾಗಲೇ ಆರೋಪಿ ವಿನೋದ್ ಮೇಲೆ 4 ಕೊಲೆ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳಿದ್ದು, ಈತ 2015ರಲ್ಲಿ ಸರ್ಕಾರಿ ಸ್ವಾಮ್ಯದ TASMAC ಮದ್ಯದಂಗಡಿ ಮೇಲೆ ಮತ್ತು 2017ರಲ್ಲಿ ತೇನಾಂಪೇಟೆ ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದನು ಎಂಬ ಸತ್ಯ ಬೆಳಕಿಗೆ ಬಂದಿದೆ.

    ಈ ಘಟನೆಯ ಹಿಂದೆ ವಿನೋದ್‍ಗೆ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ. ಅಲ್ಲದೇ ಈ ಕೃತ್ಯ ಎಸಗುವ ವೇಳೆ ವಿನೋದ್ ಮದ್ಯಪಾನ ಮಾಡಿದ್ದನು ಎಂದು ಪೊಲೀಸರ ಆರಂಭಿಕ ತನಿಖೆ ನಡೆಸಿ ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ, ಕಾಲೇಜುಗಳ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ: ಬಿ.ಸಿ. ನಾಗೇಶ್

    ಸದ್ಯ ಈ ಸಂಬಂಧ ಮಾತನಾಡಿದ ಬಿಜೆಪಿ ನಾಯಕ ಕರಾಟೆ ಆರ್. ತ್ಯಾಗರಾಜನ್, “ಇದು ನಮ್ಮ ಚುನಾವಣಾ ಕೆಲಸವನ್ನು (ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ) ಹಾಳು ಮಾಡಲು ಪ್ರಯತ್ನ ನಡೆಸಲಾಗಿದೆ. ಇದಕ್ಕೆ ನಾವು ಹೆದರುವುದಿಲ್ಲ. ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂಕ್ಷೀಪ್ತ ತನಿಖೆಯಾಗಬೇಕು ಎಂದಿದ್ದಾರೆ.

    ಅದೃಷ್ಟವಶಾತ್ ಘಟನೆ ವೇಳೆ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು, ಇದೀಗ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

  • ಪ್ರತಿ ತಿಂಗಳ 2ನೇ ಮಂಗಳವಾರ ಕಾರ್ಯಕರ್ತರ ಕುಂದುಕೊರತೆ ಆಲಿಸುತ್ತೇನೆ: ಮುನಿರತ್ನ

    ಪ್ರತಿ ತಿಂಗಳ 2ನೇ ಮಂಗಳವಾರ ಕಾರ್ಯಕರ್ತರ ಕುಂದುಕೊರತೆ ಆಲಿಸುತ್ತೇನೆ: ಮುನಿರತ್ನ

    ಬೆಂಗಳೂರು: ಪ್ರತಿ ತಿಂಗಳ ಎರಡನೇ ಮಂಗಳವಾರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲಾಗುವುದು ಎಂದು ತೋಟಗಾರಿಕಾ, ಸಚಿವ ಮುನಿರತ್ನ ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಪಕ್ಷದ ಕಚೇರಿಗೆ ನಾಯಕರ ಸೂಚನೆ ಮೇರೆಗೆ ಭೇಟಿ ನೀಡಿದ್ದೇನೆ. ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದ ಹಾಗೂ ಕಾರ್ಯಕರ್ತರ ಸಮಸ್ಯೆಗಳ ಪರಿಹಾರ ಕುರಿತು ವಿಚಾರ ಚರ್ಚೆ ಮಾಡಲಾಯಿತು ಎಂದರು.ಇದನ್ನೂ ಓದಿ: ಲಾಲ್‍ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಮತ್ತೊಂದು ಉದ್ಯಾನವನ: ತೋಟಗಾರಿಕೆ ಸಚಿವ ಮುನಿರತ್ನ

    ಪ್ರತಿ ತಿಂಗಳ ಎರಡನೇ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಮಸ್ಯೆ ಆಲಿಸಲು ಪಕ್ಷದ ಪ್ರಧಾನ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡುತ್ತೇನೆ. ಅಲ್ಲದೇ ಆಗಸ್ಟ್ 26ರಂದು ಕೋಲಾರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕೋಲಾರದಲ್ಲಿಯೂ ಸಹ ಪಕ್ಷದ ಕಾರ್ಯಕರ್ತರು ಇಲಾಖೆ ಸಂಬಂಧ ಸಮಸ್ಯೆಗಳನ್ನು ನೀಡಬಹುದು ಎಂದು ಮಾಹಿತಿ ಹಂಚಿಕೊಂಡರು.

    ಯಶವಂತಪುರದಲ್ಲಿ ಎಲ್ಲಿಯೂ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಗೋಡೆ ನಿರ್ಮಿಸಿಲ್ಲ. ಆಸ್ಪತ್ರೆಗಾಗಿ ತಡೆಗೋಡೆ ಕಟ್ಟಲಾಗಿದೆ. ಇದರಿಂದ ರೈಲ್ವೇ ನಿಲ್ದಾಣ ಹಾಗೂ ಆಸ್ಪತ್ರೆಗೆ ಹೋಗಲು ಹಾಗೂ ವ್ಯಾಪಾರಿಗಳಿಗೂ ಅನುಕೂಲ ಆಗುವಂತೆ ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗಣೇಶ ಚತುರ್ಥಿ ಆಚರಣೆಗೆ 10 ದಿನದಲ್ಲಿ ಹೊಸ ಮಾರ್ಗಸೂಚಿ: ಶಿವರಾಮ್ ಹೆಬ್ಬಾರ್

    ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುನಿರತ್ನ, ಪಕ್ಷದ ವರಿಷ್ಠರು ಈ ಬಗ್ಗೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಉತ್ತರಿಸಿದರು.