Tag: bjp rally

  • ಬಿಜೆಪಿಗರ ರ‍್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ – ಡಿಕೆಶಿ

    ಬಿಜೆಪಿಗರ ರ‍್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ – ಡಿಕೆಶಿ

    ಬೆಂಗಳೂರು: ಬಿಜೆಪಿಗರು ರ‍್ಯಾಲಿ (BJP Rally) ಮಾಡ್ತಿರೋದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಅಂತಾ ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ತಿಲ್ಲ ಅಂತ ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ (Dharmasthala) ಪರವಾಗಿ ರ‍್ಯಾಲಿ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:  ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ವಿಜಯೇಂದ್ರ ಕಿಡಿ

    ಇಷ್ಟು ದಿನ ರ‍್ಯಾಲಿ ಯಾಕೆ ಮಾಡಲಿಲ್ಲ? ಎಸ್‌ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ‍್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ‍್ಯಾಲಿ ಎನ್ನಬಹುದು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    ದೊಡ್ಡ ಷಡ್ಯಂತ್ರ ನಡೆದಿದೆ ಎಂದಿದ್ದ ಡಿಸಿಎಂ
    ಮೂರು ದಿನಗಳ ಹಿಂದಷ್ಟೇ ಡಿಕೆಶಿ ಮಾತನಾಡುವಾಗ, ಇದೊಂದು ಖಾಲಿ ಡಬ್ಬ ಏನು ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ. ಈ ಪ್ರಕರಣದಲ್ಲಿ ಬಹಳ ಷಡ್ಯಂತ್ರ (Conspiracy) ನಡೆದಿದೆ. ಯಾರದ್ದು ಷಡ್ಯಂತ್ರ ಎಂದು ಈಗ ನಾನು ಹೇಳಲ್ಲ. ಬಹಳ ಪ್ಲ್ಯಾನ್‌ ಮಾಡಿ ಅವರ ಮೇಲೆ ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

    ಯಾರನ್ನೋ ತೇಜೋವಧೆ ಮಾಡಿ ನೂರಾರು ವರ್ಷದಿಂದ ಬಂದ ಪರಂಪರೆಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವನ್ಯಾರೋ ಒಬ್ಬ ನ್ಯಾಯಾಲಯಕ್ಕೆ ಹೋಗಿ ಹೇಳಿಕೆ ಕೊಟ್ಟಿದ್ದಾನೆ. ಹೇಳಿಕೆ ನೀಡಿದ್ದರಿಂದ ತನಿಖೆ ನಡೆಯುತ್ತಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿವಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ, ಅಶೋಕ್ ರೈ ಮಾತಾಡಿದ್ದಾರೆ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆ? ಸುಳ್ಳು ಆರೋಪ ಮಾಡುತ್ತಾರೆ ಅವರ ವಿರುದ್ಧ ಆಳಕ್ಕೆ ಆಗಿ ಹೋಗಿ ತನಿಖೆ ಮಾಡಿ ಕಾನೂನು ಕ್ರಮಕ್ಕೆ‌ ಕೈಗೊಳ್ಳಲು ಹೇಳಿದ್ದೇವೆ. ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಅಂತ ತಿಳಿಸಿದ್ದರು. ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

  • ಕ್ಷೇತ್ರ ಬದಲಾವಣೆ ಬಗ್ಗೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಹೀಗಂದ್ರು

    ಕ್ಷೇತ್ರ ಬದಲಾವಣೆ ಬಗ್ಗೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಹೀಗಂದ್ರು

    ಮೈಸೂರು: ನಾನು ಸದ್ಯಕ್ಕೆ ಟಿ.ನರಸೀಪುರ ಕ್ಷೇತ್ರದಲ್ಲೆ ಇದ್ದೀನಿ. ಹೊಸ ಕ್ಷೇತ್ರವನ್ನ ಹುಡುಕುವ ಪ್ರಯತ್ನ ಮಾಡಿಲ್ಲ ಅಂತ ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ರಾಜಕೀಯದಲ್ಲೆ ಸಕ್ರೀಯವಾಗಿದ್ದಾನೆ. ಚುನಾವಣಾ ಕಣಕ್ಕೆ ಬರಬೇಕೊ ಬೇಡವೋ ಅಂತ ಜನ ತೀರ್ಮಾನ ಮಾಡ್ತಾರೆ. ಜನ ಬಯಸುವುದರ ಜೊತೆ ಪಕ್ಷದ ಅನುಮೋದನೆ ಬೇಕಿದೆ. ಆ ನಂತರವಷ್ಟೇ ಈ ಬಗ್ಗೆ ಚರ್ಚೆ ಮಾಡೋಣ. ಸದ್ಯಕ್ಕೆ ಕ್ಷೇತ್ರ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ಬೇಡ. ಆ ಸಮಯ ಬಂದಾಗ ಮಾತನಾಡೋಣ ಅಂದ್ರು.

    ಇದೇ ವೇಳೆ ಬಿಜೆಪಿ ಜಾಥಾದ ಬಗ್ಗೆ ಮಾತನಾಡಿದ ಸಚಿವರು, ಬಿಜೆಪಿ ಜಾಥಾ ಕುರಿತು ಕಾಂಗ್ರೆಸ್ ನದ್ದು ಹಸ್ತಕ್ಷೇಪ ಇಲ್ಲ. ಅನುಮತಿ ಕೊಡುವುದು ಬಿಡುವುದು ಪೊಲೀಸ್ ಹಾಗೂ ಗೃಹ ಇಲಾಖೆಗೆ ಬಿಟ್ಟದ್ದು. ಪ್ರತಿಭಟನೆ ಮಾಡಲು ಎಲ್ಲರಿಗೂ ಸಾಂವಿಧಾನಿಕ ಹಕ್ಕು ಇದೆ. ಆದರೆ ಅವರ ಹೋರಾಟಗಳು ಕಾನೂನಿನ ವ್ಯಾಪ್ತಿಯಲ್ಲಿ ಒಳಪಡಬೇಕಿದೆ. ಅವಕಾಶ ನೀಡಿಲ್ಲ ಅನ್ನೋದು ಪೊಲೀಸ್ ಇಲಾಖೆ ವಿವೇಚನೆಗೆ ಬಿಟ್ಟದ್ದು. ಇಲ್ಲಿ ಕಾಂಗ್ರೆಸ್ ಪಕ್ಷ ಅಥವ ಸರ್ಕಾರದ ಹಸ್ತಕ್ಷೇಪದ ಪ್ರಸ್ತಾಪವೇ ಬರೋಲ್ಲ ಅಂತ ಹೇಳಿದ್ರು.

    ಇದನ್ನೂ ಓದಿ: ಸಚಿವ ಮಹದೇವಪ್ಪ ಪುತ್ರ ಈಗ ಆಗಿದ್ದಾರೆ ಡಾ. ಸುನೀಲ್‍ಬೋಸ್! 

    ಈ ಹೇಳಿಕೆ ನೀಡಲು ಕಾರಣ ಏನು?
    ಮಗ ಸುನೀಲ್ ಬೋಸ್ ಅವರನ್ನು 2018ರ ಚುನಾವಣೆಯಲ್ಲಿ ಕಣಕ್ಕೆ ಇಳಿಸಲು ಮಹದೇವಪ್ಪ ಮುಂದಾಗಿದ್ದು, ಈ ಸಂಬಂಧ ತಮ್ಮ ಟಿ. ನರಸೀಪುರ ಕ್ಷೇತ್ರವನ್ನು ಬಿಟ್ಟುಕೊಡುತ್ತಾರೆ. ಅಷ್ಟೇ ಅಲ್ಲದೇ ಬೆಂಗಳೂರಿನ ಸಿ.ವಿ. ರಾಮನ್ ನಗರ ಕ್ಷೇತ್ರದತ್ತ ಅವರು ಕಣ್ಣು ಹಾಕಿದ್ದಾರೆ ಎನ್ನುವ ಸುದ್ದಿ ಕಾಂಗ್ರೆಸ್ ಮೂಲಗಳಿಂದ ಮಾಧ್ಯಮಗಳಿಗೆ ಸಿಕ್ಕಿತ್ತು. ಮೈಸೂರಿನಲ್ಲಿ ಕ್ಷೇತ್ರಗಳು ಸಿಗುವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಮೀಸಲು ಕ್ಷೇತ್ರವಾಗಿರುವ ಸಿವಿ ರಾಮನ್ ನಗರದ ಮೇಲೆ ಮಹದೇವಪ್ಪ ಕಣ್ಣು ಹಾಕಿದ್ದಾರೆ ಎನ್ನುವ ಸುದ್ದಿಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಇಂದು ಈ ಮೇಲಿನ ಪ್ರತಿಕ್ರಿಯೆ ನೀಡಿದ್ದಾರೆ.

    ಇದನ್ನೂ ಓದಿ: ಸಿಎಂ, ಮಹದೇವಪ್ಪ ಪುತ್ರಗೆ ಟಿಕೆಟ್ ಭಾಗ್ಯ: ಎಲ್ಲಿ ಕಣಕ್ಕೆ ಇಳಿಯಲಿದ್ದಾರೆ ಗೊತ್ತಾ?