Tag: BJP Rebels

  • ರಾಜ್ಯ ಬಿಜೆಪಿ ನಾಯಕರು ಯಾರೂ ಬಹಿರಂಗವಾಗಿ ಮಾತನಾಡಬಾರದು: ಸುಧಾಕರ್ ರೆಡ್ಡಿ

    ರಾಜ್ಯ ಬಿಜೆಪಿ ನಾಯಕರು ಯಾರೂ ಬಹಿರಂಗವಾಗಿ ಮಾತನಾಡಬಾರದು: ಸುಧಾಕರ್ ರೆಡ್ಡಿ

    ಬೆಂಗಳೂರು: ರಾಜ್ಯ ಬಿಜೆಪಿ ಆಂತರಿಕ ಕಿತ್ತಾಟಕ್ಕೆ ಕೊನೆಗೂ ಹೈಕಮಾಂಡ್ ಕಠಿಣ ಸಂದೇಶವನ್ನು ಕಳಿಸಿದೆ.‌ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಮೂಲಕ ರಾಜ್ಯ ನಾಯಕರಿಗೆ ಸಂದೇಶ ರವಾನೆ ಮಾಡಿರೋ ಬಿಜೆಪಿ ಹೈಕಮಾಂಡ್, ಯಾರು ಕೂಡ ಬಹಿರಂಗವಾಗಿ ಮಾತಾಡದಂತೆ ಸೂಚಿಸಿದೆ.

    ವಿಪಕ್ಷ ನಾಯಕ ಅಶೋಕ್‌ ಅವರನ್ನ ಬಿಜೆಪಿ ಕಚೇರಿಗೆ ಕರೆಸಿಕೊಂಡು ಸುಧಾಕರ್ ರೆಡ್ಡಿ ಮಾತುಕತೆ ನಡೆಸಿದರು. ಅಲ್ಲದೇ, ಯಾವುದೇ ನಾಯಕರು ಬಹಿರಂಗವಾಗಿ ಮಾತಾಡದಂತೆ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಬಹಿರಂಗವಾಗಿಯೇ ರಾಜ್ಯ ನಾಯಕರಿಗೆ ಸಂದೇಶ ರವಾನೆ ಮಾಡಿದರು.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸುಧಾಕರ್ ರೆಡ್ಡಿ, ನಾನು ಪ್ರತಿಯೊಬ್ಬರಿಗೂ ಹೇಳುತ್ತೇನೆ. ಎಲ್ಲರೂ ಅತಿ ಮುಖ್ಯ ಹಿರಿಯರು. ಮಾಧ್ಯಮ ಮೂಲಕ ನಾವು ಎಲ್ಲರ ವ್ಯೂ ನೋಡಿದ್ದೇವೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಆಂತರಿಕ ಚುನಾವಣಾ ಮುಕ್ತಾಯ ಆಗಿದೆ. ಕರ್ನಾಟಕದಲ್ಲಿ ಕೂಡ ಆ ಪ್ರೊಸಿಜರ್ ನಡೆಯುತ್ತಿದೆ. ಈಗಾಗಲೇ ಅನೇಕ ಜಿಲ್ಲಾಧ್ಯಕ್ಷರ ಆಯ್ಕೆ ಆಗಿದೆ. ಯಾರೇ ಮಾತಾಡುವುದು ಇದ್ದರೂ ಪಾರ್ಟಿ ವೇದಿಕೆಯಲ್ಲಿ ಮಾತಾಡಿ ಎಂದು ಮನವಿ ಮಾಡಿದರು.

    ರಾಜ್ಯದ ಯಾವುದೇ ನಾಯಕರು ಆಗಲಿ A ಅಥವಾ B ಯಾರೇ ಆಗಲಿ, ಒಂದು ವೇದಿಕೆಯಲ್ಲಿ ಚರ್ಚೆ ಮಾಡಲಿ. ಪಾರ್ಟಿಯ ಗೈಡ್‌ಲೈನ್ಸ್ ಅಡಿ ನಡೆಯಬೇಕು. ಭ್ರಷ್ಟಾಚಾರದ ಕಾಂಗ್ರೆಸ್ ಇದೆ. ಜನರ ವಿರೋಧ ಕಾಂಗ್ರೆಸ್ ಮೇಲೆ ಇದೆ. ಸ್ವತಃ ಸಿದ್ದರಾಮಯ್ಯ ಆರೋಪ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಶಾಂತ ರೀತಿಯಲ್ಲಿ, ಸಹೋದರ ಭಾವದಲ್ಲಿ ಶಿಸ್ತಿನಿಂದ ನಡೆಯಬೇಕು. ಏನೇ ಸಮಸ್ಯೆ ಇದ್ದರೂ ಪಕ್ಷ ಅದನ್ನು ನೋಡಿಕೊಳ್ಳಲಿದೆ ಎಂದು ತಿಳಿಸಿದರು.

  • ರಾಜ್ಯ ಬಿಜೆಪಿಯಲ್ಲಿ ಮತ್ತೆ ಜೋರಾದ ಭಿನ್ನಮತ – ‘ದೋಸ್ತಿ’ ಪಾದಯಾತ್ರೆಗೆ ಬಿಜೆಪಿ ರೆಬೆಲ್ಸ್ ಠಕ್ಕರ್?

    ರಾಜ್ಯ ಬಿಜೆಪಿಯಲ್ಲಿ ಮತ್ತೆ ಜೋರಾದ ಭಿನ್ನಮತ – ‘ದೋಸ್ತಿ’ ಪಾದಯಾತ್ರೆಗೆ ಬಿಜೆಪಿ ರೆಬೆಲ್ಸ್ ಠಕ್ಕರ್?

    – ಕುಂದಾನಗರಿಯಲ್ಲಿ ಬಿಜೆಪಿ ಬಂಡಾಯ ನಾಯಕರ ಸಭೆ

    ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಿನ್ನಮತ ಜೋರಾಗಿದೆ. ಮೈಸೂರು ಪಾದಯಾತ್ರೆ ಸಮಾರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಾಳತ್ವ ವಹಿಸಿ ಯಶಸ್ವಿಯಾಗಿದ್ದರು. ಆದರೆ, ಇದು ಬಿಜೆಪಿ ರೆಬೆಲ್ ನಾಯಕರ ಕಣ್ಣು ಕೆಂಪಾಗಿಸಿದೆ.

    ಬಿಜೆಪಿ ಬಂಡಾಯ (BJP Rebels) ನಾಯಕರು ಬೆಳಗಾವಿಯಲ್ಲಿ (Belagavi) ಜಾಂಬೋಟಿ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಸಭೆ ಸೇರಿದ್ದರು. ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ದೇಶ್ವರ, ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಬಿಎಸ್‌ವೈ ಆಪ್ತ ಎನ್.ಆರ್.ಸಂತೋಷ್ ಸೇರಿದಂತೆ 10ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ 17ರಂದು ಅಥವಾ ದೀಪಾವಳಿ ಬಳಿಕ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಜೊತೆಗೆ, ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾಯಕರೆಲ್ಲರೂ ಒಕ್ಕೊರಲಾಗಿ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ. ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ ಲಿಂಬಾವಳಿ, ಇದು ಭಿನ್ನಮತ ನಾಯಕರ ಸಭೆ ಅಲ್ಲ. ವಾಲ್ಮೀಕಿ ನಿಗಮ ಹಗರಣ, ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟ ಬಗ್ಗೆ ಚರ್ಚೆ ನಡೆದಿದ್ದು, ಮತ್ತೊಂದು ಸುತ್ತಿನ ಸಭೆ ಮಾಡಿ ನಿರ್ಧಾರ ಮಾಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ