Tag: bjp

  • ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗಾಂಧಿನಗರ: ಅಚ್ಚರಿಯ ಬೆಳವಣಿಗೆಯಲ್ಲಿ ಗುಜರಾತ್‌ (Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಹೊರತುಪಡಿಸಿ ಎಲ್ಲಾ 16 ಸಚಿವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

    ಬಿಜೆಪಿ (BJP) ಪಕ್ಷವು ಎಲ್ಲಾ 16 ಸಚಿವರ ರಾಜೀನಾಮೆಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಪಟೇಲ್ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಶುಕ್ರವಾರ ಬೆಳಿಗ್ಗೆ 11:30 ಕ್ಕೆ ಭೂಪೇಂದ್ರ ಪಟೇಲ್ ಅವರ ಸಚಿವ ಸಂಪುಟ ಪುನರ್‌ಚನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿ ಸಚಿವರಿಂದ ರಾಜೀನಾಮೆಗಳನ್ನು ತೆಗೆದುಕೊಳ್ಳಲಾಗಿದೆ.  ಇದನ್ನೂ ಓದಿ:  ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯಪಾಲ ಆಚಾರ್ಯ ದೇವವ್ರತ್‌ಜಿ ಅವರು ಸಂಪುಟದ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಗುಜರಾತ್‌ ಸಚಿವ ಸಂಪುಟದಲ್ಲಿ ಸಿಎಂ ಪಟೇಲ್ ಸೇರಿದಂತೆ 17 ಮಂದಿ ಸಚಿವರಿದ್ದರು. ಇವರಲ್ಲಿ ಎಂಟು ಮಂದಿ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳಾಗಿದ್ದರೆ, ಇತರರು ರಾಜ್ಯ ಸಚಿವರಾಗಿದ್ದರು.  ಇದನ್ನೂ ಓದಿ:  ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌| ಇನ್ನೂ ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

    ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬುಡಕಟ್ಟು ಶಾಸಕರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲು ಬಿಜೆಪಿ ಮುಂದಾಗಿದೆ. ಆಪ್‌ ಬುಡಕಟ್ಟು ಜನರನ್ನು ಸೆಳೆಯುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.

    ಹೊಸ ಸಂಪುಟವು 23 ಸದಸ್ಯರನ್ನು ಹೊಂದುವ ಸಾಧ್ಯತೆಯಿದೆ. ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಮಾಡಿ ಹೊಸ ಸಂಪುಟ ರಚನೆಗೆ ಬಿಜೆಪಿ ಈಗ ಕೈಹಾಕಿದೆ. 182 ಸದಸ್ಯರ ವಿಧಾನಸಭೆಯನ್ನು ಹೊಂದಿರುವ ಗುಜರಾತ್‌ನಲ್ಲಿ ಗರಿಷ್ಠ 27 ಮಂತ್ರಿಗಳಿರಬಹುದು. ಹೊಸ ಸಂಪುಟದಲ್ಲಿ ಯುವ ಮತ್ತು ಮಹಿಳಾ ನಾಯಕಿಯರಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆಯುವ ಸಾಧ್ಯತೆಯಿದೆ.

  • Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    ಪಾಟ್ನಾ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.

    ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 12 ಹಾಗೂ 3ನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂ‌ರ್ (Maithili Thakur)ರಿಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    pm modi road show bihar

    ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ 29, ಎಚ್‌ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಇದನ್ನೂ ಓದಿ: Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ಆರ್‌ಜೆಡಿ ಪಕ್ಷಗಳು ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳನ್ನ ಘೋಷಣೆ ಮಾಡಿಲ್ಲ. ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಿದೆ. ಆದ್ರೆ ಕಾಂಗ್ರೆಸ್‌ ಸೀಟು ಹಂಚಿಕೆಗೆ ಮುನ್ನವೇ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ ಎಂದು ತಿಳಿದುಬಂದಿದೆ.

    ಈ ಬಾರಿ ಬಿಹಾರದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್‌ 6ರಂದು ಮೊದಲ ಹಾಗೂ ನವೆಂಬರ್‌ 11 ರಂದು 2ನೇ ಹಂತದ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

  • ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ- ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

    ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ- ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

    ಚೆನ್ನೈ: ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಿಂದಿ ಹೇರಿಕೆಯನ್ನು (Hindi Impostion) ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡದೇ ಇರಲು ತಮಿಳುನಾಡು (Tamil Nadu) ಸರ್ಕಾರ ನಿರ್ಧರಿಸಿದೆ.

    ರಾಜ್ಯದ್ಯಂತ ಹಿಂದಿ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನು ನಿಷೇಧಿಸುವ ಮಸೂದೆ ಮಂಡಿಸಲು ತಮಿಳುನಾಡು ಸರ್ಕಾರ ಮುಂದಾಗಿತ್ತು.

    ಈ ಪ್ರಸ್ತಾವಿತ ಮಸೂದೆ ಸಂವಿಧಾನ ವ್ಯಾಪ್ತಿಯ ಒಳಗಡೆ ಇರಲಿದೆ. ಮಸೂದೆಯ ಬಗ್ಗೆ ಮಂಗಳವಾರ ರಾತ್ರಿ ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆಸಲಾಗಿತ್ತು ಎಂದು ಸರ್ಕಾರ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದವು.

    ಮಸೂದೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ನಾವು ಸಂವಿಧಾನಕ್ಕೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ನಾವು ಅದನ್ನು ಪಾಲಿಸುತ್ತೇವೆ. ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ತಮಿಳುನಾಡು ಬಿಜೆಪಿಯೂ (BJP) ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದೆ.ಬಿಜೆಪಿಯ ವಿನೋಜ್ ಸೆಲ್ವಂ ಸರ್ಕಾರದ ಕ್ರಮವನ್ನು ಇದೊಂದು ಮೂರ್ಖತನ ಮತ್ತು ಅಸಂಬದ್ಧ ನಿರ್ಧಾರ. ಭಾಷೆಯನ್ನು ರಾಜಕೀಯ ಸಾಧನವಾಗಿ ಬಳಸಬಾರದು ಎಂದಿದ್ದಾರೆ.  ಇದನ್ನೂ ಓದಿ:  ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

    ತಿರುಪರಾನುಕುಂದ್ರಂ, ಕರೂರ್ ಸಿಬಿಐ ತನಿಖೆ ಮತ್ತು ಆರ್ಮ್‌ಸ್ಟ್ರಾಂಗ್ ವಿಷಯಗಳು ಸೇರಿದಂತೆ ಇತ್ತೀಚಿನ ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತಾರೂಢ ಡಿಎಂಕೆಗೆ ಹಿನ್ನಡೆಯಾಗಿದೆ. ವಿವಾದಾತ್ಮಕ ಫಾಕ್ಸ್‌ಕಾನ್ ಹೂಡಿಕೆ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ ಪ್ರತಿಪಕ್ಷಗಳು ದೂರಿವೆ. ಇದನ್ನೂ ಓದಿ:  ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ?

    ಈ ವರ್ಷದ ಮಾರ್ಚ್‌ನಲ್ಲಿ ಎಂಕೆ ಸ್ಟಾಲಿನ್ ಸರ್ಕಾರವು 2025–26 ರ ರಾಜ್ಯ ಬಜೆಟ್ ಲೋಗೋದಲ್ಲಿ ರಾಷ್ಟ್ರೀಯ ರೂಪಾಯಿ ಚಿಹ್ನೆಅನ್ನು ತಮಿಳು ಅಕ್ಷರ ರೂ.ನೊಂದಿಗೆ ಬದಲಾಯಿಸಿತ್ತು. ಈ ಬದಲಾವಣೆಯನ್ನು ಬಿಜೆಪಿ ನಾಯಕರು ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದರು. ಆದರೂ ಡಿಎಂಕೆ ತಮಿಳು ಭಾಷೆಯನ್ನು ಉತ್ತೇಜಿಸಿಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು.

  • ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

    ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: 20 ಬೆದರಿಕೆ ಕರೆಗಳ ವಿಡಿಯೋ ನನ್ನ ಬಳಿ ಇವೆ. ಅದರಲ್ಲಿ ಕೆಲವು ಆಡಿಯೋ ಬಹಳ ಹೇಸಿಗೆಯಾಗಿವೆ. ನನ್ನ ಮರ್ಯಾದೆ ಉಳಿಸಿಕೊಳ್ಳಲು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬೆದರಿಕೆ ಕರೆ ಬಗ್ಗೆ ಪ್ರಸ್ತಾಪ ಮಾಡಿದ್ದೆ ಆಗ ಬಿಜೆಪಿಯವರು (BJP) ಏನು ಹೇಳಿದರು? ಇದು ಆರ್‌ಎಸ್‌ಎಸ್ (RSS) ಸಂಸ್ಕೃತಿ ಅಲ್ಲ ಇದು ಪ್ರಿಯಾಂಕ್ ಖರ್ಗೆಯವರ ಪಬ್ಲಿಸಿಟಿ ಸ್ಟಂಟ್ ಅಂತ ಹೇಳಿದರು. ನಿನ್ನೆ ಬೆದರಿಕೆ ಕರೆ ಮಾಡಿದವನು ಆರ್‌ಎಸ್‌ಎಸ್ ನಿಂದ ಬಂದಿದ್ದೇನೆ ಅದರ ಸಂಸ್ಕೃತಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾನೆ. ನೀವೇ ನೋಡಿದ್ದೀರಾ, ಬಿಜೆಪಿಯವರು ಆರ್‌ಎಸ್‌ಎಸ್ ಅವರ ಶಾಖೆಯಲ್ಲಿ ಏನು ಕಲಿಸ್ತಾರೆ ಎಂಬುದರ ಉದಾಹರಣೆ ಇದು. ನೀವೇ ತೀರ್ಮಾನ ತೆಗೆದುಕೊಳ್ಳಿ. ಬಹಳ ದೊಡ್ಡ ದೊಡ್ಡ ಮಾತನಾಡುತ್ತಿದ್ದರಲ್ಲ ಬಿಜೆಪಿಯವರೆಲ್ಲ. ಆರ್ ಅಶೋಕ್ ಮಾತನಾಡುತ್ತಿದ್ದರಲ್ಲ 2 ರೂಪಾಯಿ ಬೆಲೆ ಇಲ್ಲ ಈ ಕಾಲ್ ಗೆ ಅಂತ ಇದನ್ನ ತೋರಿಸಿ ಉತ್ತರ ಕೇಳಿ ಎಂದರು. ಇದನ್ನೂ ಓದಿ: RSS ಸಂಸ್ಕೃತಿ ತೋರಿಸುವ 20 ವಿಡಿಯೋ ರಿಲೀಸ್ ಮಾಡಿದ್ದೇನೆ: ಪ್ರಿಯಾಂಕ್ ಖರ್ಗೆ ಬಾಂಬ್

    ಆರ್‌ಎಸ್ಎಸ್ ಏನು ಎಂಬುದಕ್ಕೆ ಉತ್ತರ ನಾನು ಕೊಡಬೇಕಾ? ಉತ್ತರ ಇಲ್ಲಿಯೇ ಸಿಕ್ಕಿದೆಯಲ್ಲ ಹಾಲಿ ಸಂಸದರು ಮಾಜಿ ಸಂಸದರು ಏನೆಲ್ಲಾ ಮಾತನಾಡಿದ್ದಾರೆ ಅದಕ್ಕೆ ಕ್ಷಮೆ ಕೇಳುತ್ತಾರಾ ನನಗೆ? ಅಥವಾ ಇನ್ನಷ್ಟು ಬೆದರಿಕೆ ಕರೆ ಜಾಸ್ತಿ ಮಾಡುತ್ತಾರಾ? ನನ್ನ ಫೋನನ್ನು ಸ್ವಿಚ್ ಆಫ್ ಮಾಡಿದ್ದೇನೆ ಅಂತೇಳಿದ್ರು. ಇವತ್ತು ಹಾಕಿರುವ ವಿಡಿಯೋ ಕೇವಲ ಸ್ಯಾಂಪಲ್, ಇದಕ್ಕಿಂತ ಅವಾಚ್ಯವಾಗಿ ಬೈದಿರುವ ವಿಡಿಯೋಗಳಿದೆ. ನನಗೆ ಹೇಸಿಗೆ ಬರುತ್ತದೆ ನನ್ನ ಮರ್ಯಾದೆ ಉಳಿಸಿಕೊಳ್ಳಲು ನಾನು ಎಲ್ಲವನ್ನು ಹಾಕಿಲ್ಲ. ನಾನು ಕೂಡ ಐಟಿಬಿಟಿ ಸಚಿವ ನಮಗೂ ತಂತ್ರಜ್ಞಾನ ಇಲ್ವಾ? ಎಲ್ಲಿಂದ ಕರೆ ಬರುತ್ತಿದೆ ನನಗೂ ಗೊತ್ತಿದೆ. ದೂರು ಕೊಡುವ ಬಗ್ಗೆ ಚರ್ಚೆ ಮಾಡ್ತೀನಿ, ಗೃಹ ಸಚಿವರ ಜೊತೆಯೂ ಚರ್ಚೆ ಮಾಡ್ತೀನಿ ಎಂದಿದ್ದಾರೆ.

    ಫೋನ್ ಮಾಡಿದವನ ಮೇಲೆ ಕಿರುಕುಳ ಆಗುತ್ತದೆ ಅಷ್ಟೇ. ಅವನಲ್ಲಿ ಆಲೋಚನೆ ಹಾಕಿದ್ದಾರಲ್ಲ ಆ ವ್ಯಕ್ತಿಗಳು ಆರಾಮಾಗಿ ಓಡಾಡುತ್ತಾರೆ. ಮೂರು ನಂಬರ್ ಅಲ್ಲ ನೂರು ನಂಬರ್ ಮೇಲೂ ಕಂಪ್ಲೇಂಟ್ ಕೊಡಬಹುದು. ಆದರೆ ಆ ನೂರು ವ್ಯಕ್ತಿಗಳನ್ನ ಅಂತ ನೂರು ವ್ಯಕ್ತಿಗಳ ಮನಸ್ಸು ಬುದ್ದಿಯನ್ನು ಕಲುಷಿತ ಮಾಡಿದವರು ಹಾಗೆ ಓಡಾಡ್ತಾರಲ್ಲ. ನಾನು ಬಹಳ ಸ್ಪಷ್ಟವಾಗಿ ಹೇಳಲಿಕ್ಕೆ ಬಯಸುತ್ತೇನೆ. ನನ್ನ ಹೋರಾಟ ವ್ಯಕ್ತಿಗಳ ಮೇಲೆ ವೈಯಕ್ತಿಕ ಹೋರಾಟ ಅಲ್ಲ. ನನ್ನ ಹೋರಾಟ ಆರ್‌ಎಸ್ಎಸ್ ತತ್ವ ಸಿದ್ಧಾಂತದ ವಿರುದ್ಧ ನಾನಿದ್ದೇನೆ. ಆರ್‌ಎಸ್ಎಸ್ ದಾಖಲೆ ತೋರಿಸಲು ಹಿಂಜರಿಕೆನಾ? ಬಿಜೆಪಿಯ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ನಿಂದನೆ ಹೇಗೆ ಮಾಡುತ್ತಿದ್ದಾರೆ. ಇವರ ನಾಯಕರೇ ವೈಯಕ್ತಿಕ ಟೀಕೆ ಮಾಡಿದರೆ ಅವರ ಕಾರ್ಯಕರ್ತರು ಸುಮ್ಮನೆ ಇರುತ್ತಾರಾ? ಈ ತತ್ವ ಸಿದ್ಧಾಂತ ಗಾಂಧೀಜಿಯವರನ್ನು ಬಿಟ್ಟಿಲ್ಲ ಅಂಬೇಡ್ಕರ್ ಅವರನ್ನು ಬಿಟ್ಟಿಲ್ಲ. ನಾನು ಅವರ ಕಾಲಿನ ಉಗುರಿನಷ್ಟೂ ಇಲ್ಲ ನನ್ನ ಬಿಡ್ತಾರಾ ಇವರು. ರಾಹುಲ್ ಗಾಂಧಿಯವರು ಈ ತತ್ವದ ವಿರುದ್ಧ ಇದ್ದಾರಲ್ವಾ? ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಈ ತತ್ವದ ವಿರುದ್ಧ ಇದ್ದಾರಲ್ವಾ? ಮೂರು ಜನರ ಬೆಂಬಲ ನನಗಿದೆ ಎಂದಿದ್ದಾರೆ. ಇದನ್ನೂ ಓದಿ: ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

  • ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

    ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

    – ಠೇವಣಿ ಕಳೆದುಕೊಳ್ತಾರೆ ಅಂತ ಗೊತ್ತಾಗಿದೆ; ಬಿಜೆಪಿ ಲೇವಡಿ

    ಪಾಟ್ನಾ: ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್‌ ಸುರಾಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ (Prashant Kishor) ಇದ್ದಕ್ಕಿದ್ದಂತೆ ಚುನಾವಣಾ (Elections) ಕಣದಿಂದ ಹಿಂದೆ ಸರಿದಿದ್ದಾರೆ. ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್‌ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಪ್ರಶಾತ್‌ ಕಿಶೋರ್‌ ಅವರ ನಿರ್ಧಾರ ಅಚ್ಚರಿ ಮೂಡಿಸಿದೆ.

    ಹೌದು.. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ (Bihar Assembly Elections 2025) ನಾನು ಸ್ಪರ್ಧಿಸುವುದಿಲ್ಲ. ಬದಲಾಗಿ, ಪಕ್ಷದ ಸಂಘಟನಾ ಕಾರ್ಯಗಳಲ್ಲಿ ತಮ್ಮನ್ನ ತೊಡಗಿಸಿಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ನಾನು ಈ ಬಾರಿ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಇದು ಪಕ್ಷದ ನಿರ್ಧಾರ. ಪಕ್ಷದ ಬೃಹತ್ ಹಿತಾಸಕ್ತಿಗಾಗಿ ನಾನು ನನ್ನ ಸಂಘಟನಾ ಕಾರ್ಯವನ್ನು ಮುಂದುವರಿಸುತ್ತೇನೆ. ಜನ್‌ ಸುರಾಜ್‌ ಪಕ್ಷವು 150ಕ್ಕೂ ಹೆಚ್ಚು ಸ್ಥಾನಗಳನ್ನ ಪಡೆದರೆ, ಅದು ಬಿಹಾರದ ಜನರ ನಿಜವಾದ ಗೆಲುವಾಗಲಿದೆ. 150ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಅದು ತಮಗೆ ವೈಯಕ್ತಿಕ ಸೋಲು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

    ಅಂದೇ ಅವರ ಕೆಟ್ಟ ದಿನಗಳು ಆರಂಭ
    ಜನ್‌ ಸುರಾಜ್‌ (Jan Suraaj) ಅಧಿಕಾರಕ್ಕೆ ಬರಬಾರದೆಂದು ಪ್ರಾರ್ಥಿಸುತ್ತಿರುವ ನಾಯಕರು ಮತ್ತು ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆ. ನಾವು ಸರ್ಕಾರ ರಚಿಸಿದರೆ ಅವರ ʻಕೆಟ್ಟ ದಿನಗಳುʼ ಆರಂಭವಾಗಲಿವೆ. ಇದು ಅವರಿಗೂ ಚೆನ್ನಾಗಿ ತಿಳಿದಿದೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ, ರಾಜ್ಯದ 100 ಅತ್ಯಂತ ಭ್ರಷ್ಟ ನಾಯಕರನ್ನ ಗುರುತಿಸಿ, ಅವರನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷೆ ನೀಡಲು ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಶಾಂತ್ ಕಿಶೋರ್ ಭರವಸೆ ಕೂಡ ನೀಡಿದ್ದಾರೆ.

    ಇನ್ನೂ ಪ್ರಶಾಂತ್‌ ಕಿಶೋರ್‌ ಅವರ ನಿರ್ಧಾರವನ್ನ ಬಿಜೆಪಿ ಲೇವಡಿ ಮಾಡಿದೆ. ಚುನಾವಣೆಗೆ ನಿಂತರೇ ಅವರು ರೇವಣಿ ಕಳೆದುಕೊಳ್ಳುತ್ತಾರೆಂದು ಗೊತ್ತಿದೆ. ಹಾಗಾಗಿ ಹಿಂದೆ ಸರಿದಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

    ಈ ಬಾರಿ 2 ಹಂತದಲ್ಲಿ ಬಿಹಾರ ಚುನಾವಣೆ ನಡೆಯಲಿದೆ. ನವೆಂಬರ್‌ 6 ರಂದು ಮೊದಲ ಮತ್ತು ನವೆಂಬರ್‌ 11ರಂದು 2ನೇ ಹಂತದ ಮತದಾನ ನಡೆಯಲಿದೆ. ನ.14ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

  • ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

    ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

    ಪಾಟ್ನಾ: ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಸೀಟು ಹಂಚಿಕೆ ಒಪ್ಪಂದದಲ್ಲಿ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆಯೇ, ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಪಟ್ಟಿಯಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಇಬ್ಬರೂ ಇದ್ದಾರೆ. ಆದರೆ, ಪಕ್ಷವು ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಪಾಟ್ನಾ ಸಾಹಿಬ್ ಸ್ಥಾನದಿಂದ ಕೈಬಿಟ್ಟಿದೆ. ಅವರು 2010 ರಿಂದ ಪ್ರತಿನಿಧಿಸುತ್ತಿದ್ದಾರೆ.

    ಚೌಧರಿ ತಾರಾಪುರದಿಂದ ಸ್ಪರ್ಧಿಸಿದರೆ, ಸಿನ್ಹಾ ಲಖಿಸರಾಯ್‌ನಿಂದ ಸ್ಪರ್ಧಿಸಲಿದ್ದಾರೆ. ದಾನಪುರದಿಂದ ಸ್ಪರ್ಧಿಸಲಿರುವ ಪಕ್ಷದ ಹಿರಿಯ ನಾಯಕ ರಾಮ್ ಕೃಪಾಲ್ ಯಾದವ್, ಗಯಾದಿಂದ ಪ್ರೇಮ್ ಕುಮಾರ್, ಕತಿಹಾರ್‌ನಿಂದ ಮಾಜಿ ಉಪಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್, ಸಹರ್ಸಾದಿಂದ ಅಲೋಕ್ ರಂಜನ್ ಝಾ ಮತ್ತು ಸಿವಾನ್‌ನಿಂದ ಮಂಗಲ್ ಪಾಂಡೆ ಸೇರಿದಂತೆ ಇತರ ಕೆಲವು ಪ್ರಮುಖ ಹೆಸರುಗಳು ಸೇರಿವೆ.

    ಏತನ್ಮಧ್ಯೆ, ಪಕ್ಷವು ಹಿಸುವಾ ಸ್ಥಾನವನ್ನು ಉಳಿಸಿಕೊಂಡಿದೆ. ಅನಿಲ್ ಕುಮಾರ್ ಅವರನ್ನು ತನ್ನ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದೆ. ಮಹತ್ವದ ಬದಲಾವಣೆಯೊಂದರಲ್ಲಿ, ಬಿಹಾರ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಕೈಬಿಡಲಾಗಿದೆ. ರತ್ನೇಶ್ ಕುಶ್ವಾಹ ಅವರನ್ನು ಪಾಟ್ನಾ ಸಾಹಿಬ್‌ನಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

    ಬಿಜೆಪಿ ಪಟ್ಟಿಯನ್ನು ಪ್ರಕಟಿಸುವ ಕೆಲವೇ ಗಂಟೆಗಳ ಮೊದಲು, ಚೌಧರಿ ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಎ ಪಕ್ಷಗಳ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟನ್ನು ‘ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಲಾಗಿದೆ’ ಎಂದು ಘೋಷಿಸಿದ್ದಾರೆ. ಆಡಳಿತಾರೂಢ ಮೈತ್ರಿಕೂಟವು ತನ್ನ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿತ್ತು. ಅದರಡಿಯಲ್ಲಿ ಬಿಜೆಪಿ ಮತ್ತು ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

    243 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಮೊದಲ ಹಂತದಲ್ಲಿ ಚುನಾವಣೆಗೆ ನಡೆಯುವ 121 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನಾಂಕವಾಗಿದ್ದರೆ, ಎರಡನೇ ಹಂತದಲ್ಲಿ 122 ಸ್ಥಾನಗಳಿಗೆ ಅಕ್ಟೋಬರ್ 20 ಕೊನೆಯ ದಿನಾಂಕವಾಗಿದೆ.

  • ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ – ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ: ಸಂತೋಷ್‌ ಲಾಡ್‌ ಬಾಂಬ್‌

    ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ – ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ: ಸಂತೋಷ್‌ ಲಾಡ್‌ ಬಾಂಬ್‌

    – ಸಚಿವ ಸಂಪುಟ ಪುನಾರಚನೆ ಮಾಡುವುದಾದ್ರೆ ಸಿಎಂ-ಡಿಸಿಎಂಗೆ ಪೂರ್ಣ ಅಧಿಕಾರ
    – 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ, RSSಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ; ಲೇವಡಿ

    ಬೀದರ್‌: ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್‌ ಲಾಡ್‌ (Santosh Lad) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಬೀದರ್‌ನಲ್ಲಿ (Bidar) ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್‌ ಮೀಟಿಂಗ್‌ನಲ್ಲಿ ಸಂಪುಟ ಪುನರ್‌ ರಚನೆ (Cabinet reshuffle) ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದ್ರೆ ಸಿಎಂ ಡಿಸಿಎಂಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ಅಲ್ಲದೇ ನಮಗೂ ಕೇಂದ್ರದ ʻನವಂಬರ್ ಕಾಂತ್ರಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಹೇಳಿದ್ದಾರೆ.

    RSSಗೆ ವಿಶೇಷ ದೇಶಪ್ರೇಮ ಇಲ್ಲ:
    ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಆರ್‌ಎಸ್‌ಎಸ್‌ ಬ್ಯಾನ್‌ ಬಗ್ಗೆ ಮಾತನಾಡಿ, 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್‌ಎಸ್‌ಎಸ್‌ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ. ಈ ಹಿಂದೇ 3 ಸಾವಿರ ಕೋಟಿ ಖರ್ಚು ಮಾಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದ್ದು ಅವರು ಕಾಂಗ್ರೆಸ್‌ನಲ್ಲಿ ಇದ್ದಾಗ ಪ್ರತಿಮೆ ಮಾಡಲು ಬಿಜೆಪಿ ವಿರೋಧ ಮಾಡಿದ್ರು ಎಂದು ಕುಟುಕಿದರು.

    ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಗ್ಯಾರೆಂಟಿ ಹೊರೆಯಿಂದ ಅಭಿವೃದ್ಧಿ ಕುಂಟಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಲಾಡ್, ನಮ್ಮ ಗ್ಯಾರಂಟಿಗಳನ್ನ ಹಿಡಿದುಕೊಂಡು ಮೋದಿ ಓಡಾಡುತ್ತಿದ್ದಾರೆ. ಬಿಹಾರ್ ಎಲೆಕ್ಷನ್‌ನಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ 10 ಸಾವಿರ ರೂ. ಕೊಡುತ್ತಿದ್ದಾರೆ. ಮೋದಿ ಸಾಹೇಬ್ರು ನಮ್ಮ ಗ್ಯಾರಂಟಿಗಳನ್ನ ಬಿಹಾರ ಚುನಾವಣೆಯಲ್ಲಿ ಬಳಸುತ್ತಿದ್ದಾರೆ ಎಂದು ಕಿಡಿ ಕಾರಿದರು.

  • ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್

    ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್

    ಬೆಂಗಳೂರು: ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಖರ್ಗೆ ಮೇಲೆ ಕೇಸ್ ದಾಖಲಿಸಲಿ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.

    ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದರು. ಇಂತಹ ಘನಂದಾರಿ ಕೆಲಸ ಮಾಡಿರುವ ಪ್ರಿಯಾಂಕ್ ಖರ್ಗೆಯವರನ್ನು ಪತ್ರ ನೀಡಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ವಜಾ ಮಾಡಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ: RSS ಇಂದಿರಾ ಗಾಂಧಿಗೆ ಹೆದರಿಲ್ಲ, ನೆಹರೂ ಮುಂದೆ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?- ಸುನಿಲ್ ಕುಮಾರ್

    ಪ್ರಚಾರದ ಗೀಳು:
    ಸನ್ಮಾನ್ಯ ಪ್ರಿಯಾಂಕ್ ಖರ್ಗೆ ಯಾವಾಗಲೂ ಅಪ್ರಸ್ತುತ ಹೇಳಿಕೆ ಕೊಟ್ಟು ಸುದ್ದಿಯಲ್ಲಿರುವ ಮಂತ್ರಿ. ಅವರಿಗೆ ಯಾವಾಗಲೂ ಪ್ರಚಾರದಲ್ಲಿರುವ ಗೀಳು. ಅವರು ಏನು ಮಾತಾಡುತ್ತಿದ್ದಾರೆ ಅನ್ನೋದೇ ಅವರಿಗೆ ಗೊತ್ತಿಲ್ಲ. ದುರುದ್ದೇಶದಿಂದ ಸಿಎಂಗೆ ಈ ಪತ್ರವನ್ನು ಬರೆದಿದ್ದಾರೆ. ಈ ವ್ಯಕ್ತಿ ಯಾವಾಗಲೂ ಅಪ್ರಸ್ತುತ ಮಾತು ಹಾಗೂ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ: ಗೋವಿಂದ ಕಾರಜೋಳ

    ಮಗ ಎನ್ನುವುದಷ್ಟೇ ಅರ್ಹತೆ:
    ಇವರಿಗೆ ಮಲ್ಲಿಕಾರ್ಜುನ ಖರ್ಗೆಯವರ ಮಗ ಎನ್ನುವುದಷ್ಟೇ ಅರ್ಹತೆ. ಜ್ಞಾನ ಇಲ್ಲದಿದ್ದರೂ ಕುಳಿತಲ್ಲೇ ಅಧಿಕಾರ ಮಾಡುತ್ತಾರೆ. ಬರೀ ವಂಶಪಾರಂಪರ್ಯವಾಗಿ ಬಂದಿರುವವರಿಗೆ ಯಾವ ಅರ್ಹತೆ ಇದೆ. ನಿಮ್ಮ ಸಾಧನೆ ಹಾಗೂ ಕೆಲಸ ಮಾತಾಡಬೇಕು. ಪ್ರಿಯಾಂಕ್ ಖರ್ಗೆ ಅವರೇ ಸಮಾಜ ಒಡೆಯುವ ಕೆಲಸ ಮಾಡಬೇಡಿ. ಬದಲಾಗಿ ಬಾಂಧವ್ಯ ಮತ್ತು ಗೌರವವನ್ನು ಹೆಚ್ಚಿಸಿ ಎಂದು ಕಿವಿಮಾತು ಹೇಳಿದ್ದಾರೆ.

    ನಿಮ್ಮ ಕೀಳು ಆಲೋಚನೆಗಳಿಗೆ ಜನ ನಗುತ್ತಾರೆ. ನೀವು ಬರೆದಿರುವ ಪತ್ರ ಹಿಂಪಡೆದು ಕ್ಷಮೆಯಾಚಿಸಿ, ತಪ್ಪಿಗೆ ಪಶ್ಚಾತ್ತಾಪ ಪಡಲು ಅವಕಾಶ ಸಿಗುತ್ತದೆ. ಇಂತಹ ಘನಂದಾರಿ ಕೆಲಸ ಮಾಡಿರುವ ಪ್ರಿಯಾಂಕ್ ಖರ್ಗೆಯವರನ್ನು ಪತ್ರ ನೀಡಿದ ಕೂಡಲೇ ಸಿಎಂ ವಜಾ ಮಾಡಬೇಕಿತ್ತು. ಸಿದ್ದರಾಮಯ್ಯನವರೇ ಶತಮಾನೋತ್ಸವ ಆಚರಿಸಿಕೊಂಡಿರುವ ಆರ್‌ಎಸ್‌ಎಸ್ ಅನ್ನು ಕೆಟ್ಟದಾಗಿ ನಡೆಸಿಕೊಳ್ಳಲು ನಿಮಗೆ ಆತ್ಮಸಾಕ್ಷಿ ಇದ್ಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಅಸಾಧ್ಯ: ಪ್ರತಾಪ್ ಸಿಂಹ

    ಇವರಿಗೆ ಬಯ್ಯಲು ಹೋದರೆ ನಾವೇ ಕೀಳುಮಟ್ಟಕ್ಕೆ ಹೋಗುತ್ತೇವೆ. ಸರ್ಕಾರಕ್ಕೆ ನೈತಿಕತೆಯನ್ನೋದು ಇದ್ದರೆ ಪ್ರಿಯಾಂಕ್ ಖರ್ಗೆ ಮೇಲೆ ಕೇಸ್ ದಾಖಲಿಸಲಿ ಎಂದು ಹೇಳಿದ್ದಾರೆ.

    ಮ್ಯೂಸಿಕಲ್ ಚೇರ್
    ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಸಂಸ್ಕೃತಿ, ನಿಯಮ ನನಗೆ ಗೊತ್ತಿಲ್ಲ. ಆದರೆ ಮೊದಲ ದಿನದಿಂದಲೂ ಇಬ್ಬರಲ್ಲೂ ಕಾದಾಟ ಇದೆ. ಅದು ಸ್ಪಷ್ಟವಾಗಿ ಕಾಣುತ್ತಿದೆ. ಪರಮೇಶ್ವರ್ ಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಮ್ಯೂಸಿಕಲ್ ಚೇರ್ ಆಗಿದೆ. ಯಾರು ಎತ್ಕೊಂಡು ಹೋಗ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

  • RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ

    RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ

    -ಬಿಹಾರ ಚುನಾವಣೆಗೆ ಫಂಡಿಂಗ್‌ಗಾಗಿ ಸಿಎಂ ಡಿನ್ನರ್ ಕರೆದಿದ್ದಾರೆ

    ಬೆಂಗಳೂರು: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಇನ್ನೂ ಪ್ರಿಯಾಂಕ್‌ಗೆ ಆಗುತ್ತಾ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಉರಿಯುತ್ತಿರುವ ಬೆಂಕಿಯ ಮನೆಯಾಗಿದೆ. ಅಲ್ಲಿ ದಲಿತರಿಗೆ ಸ್ಥಾನ ಇಲ್ಲ ಅಂದ್ರೆ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್‌ನಲ್ಲಿ ಇರಬಾರದು. ಅಂಬೇಡ್ಕರ್ ವಿರುದ್ಧ ಇರುವ ಖರ್ಗೆ ದಲಿತ ನಾಯಕರಲ್ಲ. ಖರ್ಗೆ ಕುಟುಂಬ ಅಂಬೇಡ್ಕರ್ ವಿಚಾರಗಳಿಂದ ದೂರವಿದ್ದು, ತಾಲಿಬಾನಿಯರನ್ನು ಬೆಂಬಲಿಸುತ್ತಾರೆ. ಗಾಂಧಿ ಕುಟುಂಬದ ಚೇಲಾ ಪ್ರಿಯಾಂಕ್ ಖರ್ಗೆ. ಅವರ ತಂದೆ, ಇಂದಿರಾ ಗಾಂಧಿ, ನೆಹರೂ ಅವರಿಗೂ ಸಂಘದ ಬಗ್ಗೆ ಏನೂ ಕಿಸಿಯಲು ಆಗಿಲ್ಲ. ಇನ್ನೂ ಪ್ರಿಯಾಂಕ್ ಖರ್ಗೆಗೆ ಏನು ಕಿಸಿಯಲು ಆಗುತ್ತೆ? ಬಿಜೆಪಿ ಬಗ್ಗೆ, ಆರ್‌ಎಸ್‌ಎಸ್ ಬಗ್ಗೆ ಮಾತಾಡುವಷ್ಟು ಪ್ರಿಯಾಂಕ್ ಖರ್ಗೆ ಪರಿಪಕ್ವ ಆಗಿಲ್ಲ. ಯಾವ ಶಾಖೆ ಬಂದ್ ಮಾಡ್ತಾರೋ ನೋಡೋಣ. ಮುಂದೆ ನಮ್ಮ ಸರ್ಕಾರ ಬಂದಾಗ ಬಡ್ಡಿ ಸಮೇತ ನೋಡಿಕೊಳ್ತೇವೆ. ಅಕ್ರಮ ಮಸೀದಿಗಳನ್ನು ಮೊದಲು ತೆಗೆದು ಹಾಕಿ ನಂತರ ಆರ್‌ಎಸ್‌ಎಸ್ ಬಗ್ಗೆ ಮಾತಾಡಲಿ. ಇನ್ನೆರಡು ವರ್ಷ ಹಾರಾಡಿಕೊಳ್ಳಲಿ, ಮುಂದೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಸಿಎಂ ಡಿನ್ನರ್ ಪಾರ್ಟಿಗೂ ಅಧಿಕಾರ ಹಸ್ತಾಂತರಕ್ಕೂ ಸಂಬಂಧ ಇಲ್ಲ – ಪರಮೇಶ್ವರ್‌

    ಇನ್ನೂ ಬಿಹಾರ ಚುನಾವಣೆಗೆ ಫಂಡಿಂಗ್ ಬೇಕಾಗಿದೆ. ಅದಕ್ಕೆ ಫಂಡ್ ಸಂಗ್ರಹಿಸಲು ಸಿಎಂ ಡಿನ್ನರ್ ಕರೆದಿದ್ದಾರೆ. ಇತ್ತ ಡಿಕೆಶಿ ಬೆಂಗಳೂರಿನಲ್ಲಿ ಚದರಡಿಗೆ 75 ರೂ. ಕಲೆಕ್ಟ್ ಮಾಡ್ತಿದ್ದಾರೆ, ಅದರಲ್ಲಿ 50 ರೂ. ಬಿಹಾರ ಚುನಾವಣೆಗೆ ಕೊಡಿ ಅಂತ ಕೇಳಿದ್ದಾರೆ. ಹೈಕಮಾಂಡ್‌ಗೆ ಸಿದ್ದರಾಮಯ್ಯ ಜಾಸ್ತಿ ಫಂಡ್ ಕೊಡ್ತಾರೋ ಅಥವಾ ಡಿಕೆಶಿ ಜಾಸ್ತಿ ಫಂಡ್ ಕೊಡ್ತಾರೋ ಅಂತ ಪೈಪೋಟಿ ಇದೆ. ಯಾರು ಹೆಚ್ಚು ಫಂಡ್ ಕೊಡ್ತಾರೆ ಅನ್ನೋದರ ಮೇಲೆ ನವೆಂಬರ್ ಕ್ರಾಂತಿ ನಡೆಯುತ್ತದೆ. ಯಾರು ಎಷ್ಟು ಫಂಡ್ ಕೊಡ್ತಾರೆ ಅದರ ಮೇಲೆ ಸಿಎಂ ಸ್ಥಾನ ನಿಂತಿದೆ ಎಂದು ಬಾಂಬ್ ಸಿಡಿಸಿದ್ದಾರೆ.

    ಇದೇ ವೇಳೆ ಹೆಚ್‌ಡಿಡಿ ಆರೋಗ್ಯದ ಬಗ್ಗೆ ಮಾತನಾಡಿ, ದೇವೇಗೌಡರು ಆರೋಗ್ಯವಾಗಿದ್ದಾರೆ, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅವರ ಸ್ಮರಣ ಶಕ್ತಿ, ಕ್ರಿಯಾಶೀಲತೆ ದೇಶಕ್ಕೆ ಮಾದರಿ. ಅತ್ಯಂತ ಆತ್ಮೀಯತೆಯಿಂದ ಅವರು ನಮ್ಮನ್ನು ಮಾತಾಡಿಸಿದರು. ಅವರು ದೇಶಕ್ಕೆ ಆಸ್ತಿ, ಅವರು ಶತಾಯುಷಿ ಆಗಲಿ. ಅವರ ಹಿರಿತನ ದೊಡ್ಡದು, ಅವರ ದರ್ಶನ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ.

    ಯಡಿಯೂರಪ್ಪ ಬಗ್ಗೆ ನಾನು ಸಾಫ್ಟ್ ಆಗಿಲ್ಲ. ಅದು ನಿಮ್ಮ ಡಿಕ್ಷನರಿಯಲ್ಲಿ ಇದ್ರೆ ತೆಗೆದುಬಿಡಿ. ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳದಿದ್ರೂ ಪರವಾಗಿಲ್ಲ. ನಾನು ಅವರ ಮೇಲೆ ಸಾಫ್ಟ್ ಆಗಲ್ಲ, ಅವರ ಜೊತೆ ನಾನು ರಾಜೀನೂ ಆಗಲ್ಲ. ಯಡಿಯೂರಪ್ಪ ಬಳಿ ಹೋಗಿ ಕ್ಷಮೆ ಕೇಳಿ ಅಂತ ಹೈಕಮಾಂಡ್ ಹೇಳಿದರೆ ನಾನು ಕ್ಷಮೆ ಕೇಳಲ್ಲ. ಬಿಜೆಪಿಗೆ ಹಿಂದುತ್ವ ಬೇಕಾಗಿದ್ರೆ, ಭವಿಷ್ಯ ಬೇಕಾಗಿದ್ರೆ ಯಡಿಯೂರಪ್ಪ ಹಿಡಿತದಿಂದ ಬಿಜೆಪಿ ಮುಕ್ತವಾಗಬೇಕು ಎಂದು ಹೇಳಿದ್ದಾರೆ.ಇದನ್ನೂ ಓದಿ: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

     

  • ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

    ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

    -RSSನ 100 ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ

    ಬೆಂಗಳೂರು: ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದರ ಅಹಂನಲ್ಲಿ ಮಾತಾಡ್ತಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ (ಅ.12) ಪ್ರಿಯಾಂಕ್ ಖರ್ಗೆ (Priyank Kharge) ಸಿಎಂಗೆ ಪತ್ರ ಬರೆದು, ಸಂಘದ ಚಟುವಟಿಕೆ ನಿರ್ಬಂಧಕ್ಕೆ ಮುಂದಾಗಿದ್ದಾರೆ. ನಾನು ಪ್ರಿಯಾಂಕ್ ಖರ್ಗೆ ಅವರನ್ನು ಸಾರ್ವಜನಿಕ ಚರ್ಚೆಗೆ ಆಹ್ವಾನ ಕೊಡ್ತೇನೆ. ಅವರಿಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ. ಅದರ ಅಹಂನಲ್ಲಿ ಮಾತಾಡ್ತಿದ್ದಾರೆ. ಸಂಘದ ನೂರು ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆದರೆ ಪ್ರಕೋಪ, ವಿಕೋಪ ಸಮಸ್ಯೆಗಳ ಸಂದರ್ಭದಲ್ಲಿ ನೆರವಿಗೆ ಧಾವಿಸಿದ ನೂರಾರು ಉದಾಹರಣೆಗಳಿವೆ. ಆರ್‌ಎಸ್‌ಎಸ್ ಪ್ರೇರಣೆ ಪಡೆದು ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಸಮಾಜಕ್ಕೆ ತನ್ನದೇ ಆದ ಸಕಾರಾತ್ಮಕ ಕೊಡುಗೆ ಕೊಡ್ತಿದೆ. ಸಕಾರಾತ್ಮಕ ಕೊಡುಗೆ ಕೊಡ್ತಿರೋ ಸಂಘವನ್ನು ನಕಾರಾತ್ಮಕವಾಗಿ ಬಿಂಬಿಸೋದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    ಕಾಂಗ್ರೆಸ್ (Congress) ಭ್ರಷ್ಟಾಚಾರದ ಪಕ್ಷ, ಭ್ರಷ್ಟಾಚಾರದ ಪಿತಾಮಹರೇ ಕಾಂಗ್ರೆಸ್‌ನಲ್ಲಿದ್ದಾರೆ. ಇವರೇ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಕೊಟ್ಟು ಬೆಳೆಸಿದ್ದಾರೆ. ಅಂತಹ ಕಾಂಗ್ರೆಸ್‌ನಲ್ಲಿರುವ ನೀವು ಸಂಘದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಪಾಕ್ ಪರ ಘೋಷಣೆ, ಗೋಹತ್ಯೆ, ಗೋಭಕ್ಷಣೆಗೆ ಕುಮ್ಮಕ್ಕು ಕೊಡೋರನ್ನು ಬೆಂಬಲಿಸುವ ನೀಚತನ ನಿಮ್ಮ ಪಕ್ಷಕ್ಕಿದೆ. ಗಾಂಧಿಯವರ ಹತ್ಯೆಗೂ ಸಂಘಕ್ಕೂ ಸಂಬಂಧ ಇಲ್ಲ ಅಂತ ನೆಹರೂ ಅವರು ನೇಮಿಸಿದ ಸಮಿತಿಗಳೇ ಹೇಳಿವೆ. ಆದರೂ ಮತ್ತೆ ಗಾಂಧಿ ಹತ್ಯೆ ಮಾಡಿದ್ದು ಆರ್‌ಎಸ್‌ಎಸ್ ಅಂತ ಸುಳ್ಳು ಹೇಳ್ತಿದ್ದೀರಿ. ಸರ್ವಾಧಿಕಾರಿ ಮನಸ್ಥಿತಿ ಅಂದಿದ್ದೀರಿ, ತುರ್ತು ಪರಿಸ್ಥಿತಿ ಹೇರಿದ ಇತಿಹಾಸ ನಿಮ್ಮ ಪಕ್ಷಕ್ಕಿದೆ. ಸರ್ವಾಧಿಕಾರಿ ಅನ್ನೋದೂ ನಿಮ್ಮ ಪಕ್ಷಕ್ಕೆ ಅನ್ವಯ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದೇ ವೇಳೆ RSS ಅಜೆಂಡಾ ಇಟ್ಕೊಂಡೇ ನೀವು ಚುನಾವಣೆಗೆ ಬನ್ನಿ. ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬರಲಿ. ನೀವು ಗೆಲ್ತೀರೋ ಇಲ್ಲವೋ ಎಂದು ನೋಡೇಬಿಡೋಣ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

    ಇನ್ನೂ ಸಿಎಂ ಅವರಿಂದ ಸಚಿವರಿಗೆ ಡಿನ್ನರ್ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಅವರು ಗುತ್ತಿಗೆದಾರರ ಕಮಿಷನ್ ಆರೋಪ ಮಾಡಿದ್ದಾರೆ, ಅದರ ಬಗ್ಗೆ ಕಳಕಳಿ ವ್ಯಕ್ತಪಡಿಸಬೇಕಿತ್ತು. ಇದು ಅಪಮಾನ ಅಂತ ಹೇಳಬೇಕಿತ್ತು. ಇನ್ನೂ ಸಿಎಂ ಹೆಲಿಕಾಪ್ಟರ್ ಸಮೀಕ್ಷೆ ಮಾಡಿದರು, ಆದರೆ ಕೆಳಗಿಳಿದು ರೈತರ ಕಷ್ಟ ಕೇಳಲಿಲ್ಲ. ಮೇಲಷ್ಟೇ ಹಾರಾಟ ಮಾಡಿ ರೈತರ ಕಷ್ಟ ಕೇಳಲಿಲ್ಲ. ಸಚಿವರ ಔತಣ ಕೂಟ ಜನರು ಸಂಕಷ್ಟದಲ್ಲಿದ್ದಾಗ ಇಟ್ಕೊಳ್ಳೋದಲ್ಲ. ಸಂವೇದನೆ ಇರೋರು ಈ ಔತಣ ಕೂಟ ಇಟ್ಕೊಳ್ಳಲ್ಲ. ಸಿಎಂಗೆ ಸಂವೇದನೆ ಇದೆಯಾ? ಎಂದಿದ್ದಾರೆ.

    ಬಿಕೆ ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ನೋಂದಣಿ ಆಗಿಲ್ಲ ಎಂದು ಹೇಳಿದ್ದಾರೆ. ಹೀಗೆಲ್ಲ ಮಾತಾಡಿದರೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ, ಅಧಿಕಾರ ಪಡೆದುಕೊಳ್ಳಲು ಹರಿಪ್ರಸಾದ್ ಹೀಗೆ ಮಾತಾಡಿದ್ದಾರೆ. ಇನ್ನೂ ದೇಶಪಾಂಡೆ ಅವರು ಹಿರಿಯರು, ಅವರು ಹೇಳಿದ್ದು ಸರಿ ಇದೆ. ನಾವು ಹೇಳಿದರೆ ಟೀಕೆ, ರಾಜಕೀಯ ಅಂತಾರೆ. ಆದರೆ ಅವರ ಪಕ್ಷದ ದೇಶಪಾಂಡೆ ಅವರೇ ಗ್ಯಾರಂಟಿಗಳಿಂದ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ನಾನು  ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ