Tag: bjp

  • ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ

    ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ

    • 97,500 4G ಮೊಬೈಲ್ ಟವರ್‌ಗಳಿಗೆ ಚಾಲನೆ
    • ರ‍್ಯಾಲಿಯಲ್ಲಿ ಮಕ್ಕಳು ತಂದ ಚಿತ್ರ ಸಂಗ್ರಹಿಸಲು ಸೂಚನೆ

    ಭುವನೇಶ್ವರ್‌: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಒಡಿಶಾದ (Odisha) ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡುವಾಗ ಮಕ್ಕಳು ಹಿಡಿದಿದ್ದ ಚಿತ್ರಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಪ್ರಧಾನಿಗಳು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಅಭಿವೃದ್ಧಿ ಯೋಜನೆಗಳಲ್ಲಿ ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಸೇರಿವೆ. ಸ್ವದೇಶಿ ತಂತ್ರಜ್ಞಾನದೊಂದಿಗೆ ಸುಮಾರು 37,000 ಕೋಟಿ ರೂ. ವೆಚ್ಚದ 97,500 BSNL 4G ಮೊಬೈಲ್ ಟವರ್‌ಗಳನ್ನು (ಭಾರತದಾದ್ಯಂತ) ಉದ್ಘಾಟಿಸಿದ್ದಾರೆ.

    ಡಿಜಿಟಲ್ ಭಾರತ್ ನಿಧಿಯಡಿಯಲ್ಲಿ 18,900 ಕ್ಕೂ ಹೆಚ್ಚು 4G ಸೈಟ್‌ಗಳಿಗೆ ಹಣಕಾಸಿನ ನೆರವು ನೀಡಲಾಗಿದೆ. ಇದರಿಂದ ಸುಮಾರು 26,700 ಸಂಪರ್ಕವಿಲ್ಲದ ಹಳ್ಳಿಗಳಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ. 20 ಲಕ್ಷಕ್ಕೂ ಹೆಚ್ಚು ಬಳಕೆದಾರರಿಗೆ ಇದರಿಂದ ಉಪಯೋಗವಾಗಲಿದೆ. ಈ ಟವರ್‌ಗಳು ಸೌರಶಕ್ತಿ ಚಾಲಿತವಾಗಿದ್ದು ಪರಿಸರ ಸ್ನೇಹಿಯಾಗಿವೆ.

    ಸಂಬಲ್‌ಪುರ-ಸರ್ಲಾದಲ್ಲಿ ರೈಲು ಮೇಲ್ಸೇತುವೆಗೆ ಶಂಕು ಸ್ಥಾಪನೆ ನೆರವೇರಿದ್ದು, ಈ ಯೋಜನೆಗಳು ಒಡಿಶಾ ಮತ್ತು ನೆರೆಯ ರಾಜ್ಯಗಳಿಗೆ ಸರಕು ಸಾಗಾಟ ಮತ್ತು ಪ್ರಯಾಣಿಕರ ಸಂಚಾರ ಸುಗಮಗೊಳಿಸುತ್ತದೆ. ಸ್ಥಳೀಯ ಕೈಗಾರಿಕೆಗಳು ಮತ್ತು ವ್ಯಾಪಾರ ಅಭಿವೃದ್ಧಿ ಹೊಂದಲಿದೆ.

    ಬೆರ್ಹಾಂಪುರ ಮತ್ತು ಉಧ್ನಾ (ಸೂರತ್) ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಈ ಯೋಜನೆ ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ. ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

    ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣವನ್ನು ಹೆಚ್ಚಿಸಲು, ಪ್ರಧಾನಿ ಮೋದಿ 130 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವೈ-ಫೈ ಸೌಲಭ್ಯಗಕ್ಕೆ ಚಾಲನೆ ನೀಡಲಿದ್ದಾರೆ. ಇದರಿಂದ 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

    ಒಡಿಶಾದ ಜನರಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲು ಅಪಘಾತ ಆರೈಕೆ ಘಟಕಗಳು, ದಂತ ಕಾಲೇಜುಗಳು, ಮಾತೃ ಮತ್ತು ಮಕ್ಕಳ ಆರೈಕೆ ಘಟಕಗಳಿಗೆ ಚಾಲನೆ ನೀಡಲಿದ್ದಾರೆ.

    ಅಂತ್ಯೋದಯ ಗೃಹ ಯೋಜನೆಯಡಿ 50,000 ಫಲಾನುಭವಿಗಳಿಗೆ ಮಂಜೂರಾತಿ ಆದೇಶಗಳನ್ನು ವಿತರಿಸಲಿದ್ದಾರೆ. ಈ ಯೋಜನೆಯು ಅಂಗವಿಕಲರು, ವಿಧವೆಯರು, ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂತ್ರಸ್ತರು ಸೇರಿದಂತೆ ದುರ್ಬಲ ಗ್ರಾಮೀಣ ಕುಟುಂಬಗಳಿಗೆ ಮನೆ ಮತ್ತು ಆರ್ಥಿಕ ಸಹಾಯ ನೀಡಲಿದೆ.

  • ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

    ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

    ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹೋದರಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬಾಂಧವ್ಯದ ಬಗ್ಗೆ ಮಧ್ಯಪ್ರದೇಶ ನಗಾರಾಭಿವೃದ್ಧಿ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ.

    ಭೋಪಾಲ್‌ನಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತಾಡಿ, ನಮ್ಮ ಸಹೋದರಿಯರ ಹಳ್ಳಿಯಲ್ಲಿ ನಾವು ನೀರನ್ನು ಕೂಡ ಕುಡಿಯಲ್ಲ. ಆದರೆ, ಇಂದಿನ ವಿರೋಧ ಪಕ್ಷದ ನಾಯಕರು ತಮ್ಮ ತಂಗಿಯನ್ನು ರಸ್ತೆಯಲ್ಲಿ ಮುದ್ದಿಸುತ್ತಾರೆ. ನಮ್ಮಲ್ಲಿ ಯಾರಾದರೂ ಈ ರೀತಿ ಮಾಡ್ತಾರಾ..? ಅದು ಅವರ ವಿದೇಶಿ ಮೌಲ್ಯಗಳನ್ನು ತೋರಿಸುತ್ತೆ ಅಂದಿದ್ದಾರೆ.

    ಇದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಕೈಲಾಶ್ ವಿಜಯವರ್ಗೀಯವರು ಪವಿತ್ರ ಸಹೋದರ-ಸಹೋದರಿಯರ ಬಾಂಧವ್ಯವನ್ನು ಅವಮಾನಿಸಿದ್ದಾರೆ. ಇಂತಹ ನಾಚಿಕೆಯಿಲ್ಲದ ಹೇಳಿಕೆಗೆ ಪ್ರತಿಕ್ರಿಯಿಸಲು ನಮಗೆ ನಾಚಿಕೆಯಾಗುತ್ತದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಕಿಡಿಕಾರಿದ್ದಾರೆ.

  • ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಯ್ಕೆ ಎತ್ತಿ ಹಿಡಿದ ಕೋರ್ಟ್ – ಏನಿದು ವಿವಾದ?

    ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಯ್ಕೆ ಎತ್ತಿ ಹಿಡಿದ ಕೋರ್ಟ್ – ಏನಿದು ವಿವಾದ?

    ಕಾರವಾರ: ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ (Dinakar Shetty) ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಧಾರವಾಡ ಕೋರ್ಟ್‌ ತೀರ್ಪು ನೀಡಿದೆ.

    2023 ರ ವಿಧಾನಸಭೆ ಚುನಾವಣೆಯಲ್ಲಿ 673 ಮತಗಳ ಅಲ್ಪ ಮತದಿಂದ ಗೆಲುವು ಕಂಡಿದ್ದ ಬಿಜೆಪಿ ಶಾಸಕ ದಿನಕರ್ ಶೆಟ್ಟಿಯ ಆಯ್ಕೆ ಪ್ರಶ್ನಿಸಿ ಅಲ್ಪ ಮತದಲ್ಲಿ ಪರಾಭವಗೊಂಡಿದ್ದ ಜೆಡಿಎಸ್‌ನ ಸೂರಜ್ ಸೂನಿ ಎರಡು ವರ್ಷದ ಹಿಂದೆ ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ರಾಜ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು: ರವಿಕುಮಾರ್

    ದೂರಿನ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸೂರಜ್ ಸೋನಿ ಅವರ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ 59,966 ಮತ ಗಳಿಸಿದ್ದರು. ಜೆಡಿಎಸ್‌ನ ಸೂರಜ್ ನಾಯ್ಕ ಸೋನಿ 59,293 ಮತ ಗಳಿಸಿದ್ದರು. 673 ಮತದಲ್ಲಿ ಬಿಜೆಪಿ ದಿನಕರ್ ಶೆಟ್ಟಿ ಗೆಲವು ಕಂಡಿದ್ದರು. ಈ ಗೆಲುವನ್ನು ಎತ್ತಿ ಹಿಡಿದ ಧಾರವಾಡ ಹೈಕೋರ್ಟ್, ಈ ಆದೇಶ ಮಾಡಿದೆ.

    ಕ್ಷೇತ್ರ- ಕುಮಟಾ ವಿಧಾನಸಭಾ ಕ್ಷೇತ್ರ
    ದಿನಕರ್ ಶೆಟ್ಟಿ (ಬಿಜೆಪಿ) – ಗೆಲುವು
    ಪಡೆದ ಮತಗಳ ಸಂಖ್ಯೆ – 59,966
    ಸೂರಜ್ ನಾಯ್ಕ ಸೋನಿ (ಜೆಡಿಎಸ್) – ಸೋಲು
    ಪಡೆದ ಮತಗಳ ಸಂಖ್ಯೆ – 59,293
    ಗೆಲುವಿನ ಅಂತರ – 673

  • ಬಿಜೆಪಿಯಿಂದ ಗುಂಡಿ ಮುಚ್ಚಿ ಅಭಿಯಾನ: ಹನೂರಿನಲ್ಲಿ ರಸ್ತೆ ಗುಂಡಿಯಲ್ಲಿ ನಾಟಿ ಮಾಡಿ ಆಕ್ರೋಶ

    ಬಿಜೆಪಿಯಿಂದ ಗುಂಡಿ ಮುಚ್ಚಿ ಅಭಿಯಾನ: ಹನೂರಿನಲ್ಲಿ ರಸ್ತೆ ಗುಂಡಿಯಲ್ಲಿ ನಾಟಿ ಮಾಡಿ ಆಕ್ರೋಶ

    ಚಾಮರಾಜನಗರ: ಬಿಜೆಪಿಯಿಂದ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಗುಂಡಿ ಅಭಿಯಾನ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ಕ್ಷೇತ್ರವಾರು ಬಿಜೆಪಿಯಿಂದ ಗುಂಡಿ ಮುಚ್ಚಿ ಅಭಿಯಾನ ನಡೆಯಿತು.

    ಹನೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಕೊಳ್ಳೇಗಾಲದ ಮಧುವನಹಳ್ಳಿಯಿಂದ ಒಡೆಯರ್ ಪಾಳ್ಯ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯು ಗುಂಡಿಮಯವಾಗಿದೆ ಎಂದು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಗುಂಡ್ಲುಪೇಟೆ ಕ್ಷೇತ್ರದಲ್ಲೂ ಕೂಡ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ನೇತೃತ್ವದಲ್ಲಿ ಗುಂಡ್ಲುಪೇಟೆ ಪಟ್ಟಣದ ಕೊಡಿಹಳ್ಳಿ ಸರ್ಕಲ್ ಬಳಿ ಹೆದ್ದಾರಿ ತಡೆದು ಪ್ರತಿಭಟಿಸಿ ಮಣ್ಣಿನ ಮೂಲಕ ಗುಂಡಿ ಮುಚ್ಚಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ವಿರುದ್ಧ ಧಿಕ್ಕಾರ ಕೂಗಿ ಗುಂಡಿ ಮುಚ್ಚಿ ಕ್ಷೇತ್ರದ ಎಲ್ಲ ಕಡೆಯೂ ಗುಂಡಿ ಮುಚ್ಚುವಂತೆ ಆಗ್ರಹಿಸಿದರು.

    ಸ್ಥಳೀಯ ಶಾಸಕ ಗಣೇಶ್ ಪ್ರಸಾದ್ ಅವರ ಊರು ಹಾಲಹಳ್ಳಿಗೆ ಪದೇ ಪದೆ ರಸ್ತೆ ಮಾಡಿಸುತ್ತಿದ್ದಾರೆ. ಆದರೆ, ಪಕ್ಕದ ಗ್ರಾಮಗಳಿಗೆ ರಸ್ತೆ ಭಾಗ್ಯ ಕಲ್ಪಿಸಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದರು.

  • ಕಾಂಗ್ರೆಸ್ ಹಳೆ ಕಥೆ ಹೇಳುವುದು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸಲಿ – ಬಿವೈವಿ ಆಗ್ರಹ

    ಕಾಂಗ್ರೆಸ್ ಹಳೆ ಕಥೆ ಹೇಳುವುದು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸಲಿ – ಬಿವೈವಿ ಆಗ್ರಹ

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು (Congress Govt) ಹಳೆ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದರು.

    ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಿನ್ನೆ ರಾಜ್ಯಾದ್ಯಂತ ಒಂದು ಗಂಟೆ ರಸ್ತೆ ತಡೆ ಮಾಡಿದೆ. ಗುಂಡಿಗಳನ್ನೂ ಮುಚ್ಚಿ ರಾಜ್ಯ ಸರ್ಕಾರಕ್ಕೆ ಈ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬೇಕು. ಬೆಂಗಳೂರಿನ ಗೌರವ, ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅತೀ ಶೀಘ್ರವೇ ಗುಂಡಿಗಳನ್ನು ಮುಚ್ಚಿ ಬೆಂಗಳೂರಿನ ಗೌರವ ಉಳಿಸಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

    ಬೆಂಗಳೂರು ಮಹಾನಗರ ಮಾತ್ರವಲ್ಲದೇ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಗೆ ಮುಕ್ತಿ ಕೊಡುವ ಕೆಲಸವನ್ನು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅಧಿಕಾರಿಗಳು ಹೋಗಿ ಎಷ್ಟು ರಸ್ತೆ ಗುಂಡಿಗಳಿವೆ ಎಂದು ಲೆಕ್ಕ ಹಾಕಿ ಬಂದಿದ್ದಾರೋ ಗೊತ್ತಿಲ್ಲ. ಹಲವಾರು ಬಾರಿ ಡೆಡ್‌ಲೈನ್ ಕೊಟ್ಟರೂ ಇವತ್ತಿಗೂ ಗುಂಡಿಗಳನ್ನು ಮುಚ್ಚಲು ಈ ಸರ್ಕಾರದ ಕಡೆಯಿಂದ ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು.

    ಕಾಂಗ್ರೆಸ್ ಸರ್ಕಾರವು ಯಾವುದೇ ಆಯೋಗಗಳಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ. ಕಾಂತರಾಜು ಆಯೋಗಕ್ಕೆ 150 ಕೋಟಿ ರೂ., 160 ಕೋಟಿ ರೂ. ಖರ್ಚು ಮಾಡಿ, ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾಗಿದೆ. ಈಗ 500- 600 ಕೋಟಿ ರೂ. ಖರ್ಚು ಮಾಡಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. ನಾಗಮೋಹನ್ ದಾಸ್ ಅವರ ವಿಚಾರದಲ್ಲೂ ಅಷ್ಟೇ ಮಾಡಿದ್ದಾರೆ. ಕಾಂಗ್ರೆಸ್ಸಿನವರು ಬಿಜೆಪಿ ಹಿಂದಿನ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡಿ, ಅಧಿಕಾರಕ್ಕೆ ಬಂದಿದ್ದಾರೆ ಎಂದರು.

    ರಾಜ್ಯ ಸರ್ಕಾರದಲ್ಲಿ ಗೊಂದಲ ಸೃಷ್ಟಿಯಾಗಿ ಜನರು ಅಭಿವೃದ್ಧಿ ಆಗುತ್ತಿಲ್ಲ ಎಂದು ಉಗಿಯಲು ಆರಂಭಿಸಿದಾಗ ಜಾತಿಗಣತಿಯಂಥ ಗೊಂದಲಗಳನ್ನು ಉಂಟು ಮಾಡುತ್ತಾರೆ. ಕಾಂತರಾಜು ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ಎಷ್ಟು ಬಾರಿ ಹೇಳಿದ್ದಾರೆ? ಈ ಸರ್ಕಾರಕ್ಕೆ ಗೊಂದಲ ಸೃಷ್ಟಿಸುವ ಮನಸ್ಸಿದೆ. ಜಾತಿ ವಿಷಬೀಜ ಬಿತ್ತಿ ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆಯೇ ವಿನಃ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಗೊಂದಲ ಸೃಷ್ಟಿಸುವುದನ್ನು ಬಿಟ್ಟರೆ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಟೀಕಿಸಿದರು.ಇದನ್ನೂ ಓದಿ: ಯಶವಂತಪುರ–ಮಂಗಳೂರು ನಡುವೆ ವಿಶೇಷ ರೈಲು

  • ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ

    ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ

    – ರಸ್ತೆಗುಂಡಿ ಮುಚ್ಚುವ ಕೆಲಸಕ್ಕೆ 750 ಕೋಟಿ ಅನುದಾನ ಕೊಟ್ಟಿರುವ ಸಿಎಂ

    ಬೆಂಗಳೂರು: ನಗರದ ರಸ್ತೆ ಗುಂಡಿಗಳು ಬಿಜೆಪಿ (BJP) ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು.

    ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್.ಎಲ್ ಬೈರಪ್ಪನವರ (SL Bhyrappa) ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರದ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿಲ್ಲ. ಆದರೂ ನಾವು ಬೆಂಗಳೂರಿನ ಹಿತ ಕಾಪಾಡುತ್ತೇವೆ. ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆ ಎಂದರು.ಇದನ್ನೂ ಓದಿ: ರಿಸರ್ವ್‌ ಬ್ಯಾಂಕ್‌ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ – 30 ಲಕ್ಷದ ಆಸೆ ತೋರಿಸಿ 3.71 ಲಕ್ಷ ದೋಚಿದ ವಂಚಕ

    ಭೈರಪ್ಪ ಅವರದ್ದು ನೇರ ನುಡಿ, ಗಟ್ಟಿ ವ್ಯಕ್ತಿತ್ವ:
    1994ರಲ್ಲಿ ಕನಕಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿತ್ತು. ಆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಭೈರಪ್ಪ ಅವರು ವಹಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ನನಗೆ ಅವರ ಪರಿಚಯವಾಗಿತ್ತು. ಅವರ ಮಾತು, ಬರವಣಿಗೆ ಸದಾ ನೇರನುಡಿಯಿಂದ ಕೂಡಿತ್ತು. ಅಂದು ಬನಶಂಕರಿಯಿಂದ ಮೆರವಣಿಗೆ ಮೂಲಕ ಅವರನ್ನು ಕರೆದೊಯ್ಯಲಾಗಿತ್ತು ಎಂದು ಹೇಳಿದರು.

    ಅವರ ಕಾದಂಬರಿಗಳು ವಿದೇಶಿ ಭಾಷೆಗಳಿಗೆ ಭಾಷಾಂತರವಾಗಿದ್ದು, ಚಲನಚಿತ್ರಗಳಾಗಿಯೂ ಮೂಡಿಬಂದಿವೆ. ಭೈರಪ್ಪ ಅವರಿಗೆ ಮಾಧ್ಯಮಗಳು ಕೂಡ ಅತ್ಯುತ್ತಮ ಗೌರವ ಸಲ್ಲಿಸುತ್ತಿದ್ದು, ಎಲ್ಲಾ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಭೈರಪ್ಪ ಅವರು ತಮ್ಮ ಬರವಣಿಗೆಯಲ್ಲಿ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿದಿದ್ದಾರೆ. ಅವರಿಗೆ ರಾಷ್ಟ್ರಪ್ರಶಸ್ತಿ ಸೇರಿದಂತೆ ಪದ್ಮ ಪ್ರಶಸ್ತಿಗಳು ಲಭಿಸಿದೆ. ಇಡೀ ದೇಶದ ಗಣ್ಯರು ಭೈರಪ್ಪ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅವರ ಸಿದ್ಧಾಂತ, ನಿಲುವು, ನಡೆ ಕೇವಲ ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ, ಸಮಾಜದ ಎಲ್ಲಾ ವರ್ಗಕ್ಕೆ ಮಾರ್ಗದರ್ಶನವಾಗಿದೆ ಎಂದರು.

    ಬಹಳ ಚಿಕ್ಕ ವಯಸ್ಸಿಗೆ ಸಾಹಿತ್ಯಲೋಕಕ್ಕೆ ಹೆಜ್ಜೆ ಇಟ್ಟು ತಮ್ಮ ಹೋರಾಟ ಆರಂಭಿಸಿದ್ದರು. ಅವರದು ಬಹಳ ಗಟ್ಟಿ ವ್ಯಕ್ತಿತ್ವ. ಮುಖ್ಯಮಂತ್ರಿಗಳು ಕೂಡ ಇವರ ಅಂತಿಮ ದರ್ಶನ ಪಡೆಯಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಲಾಗುವುದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವೈಯಕ್ತಿಕವಾಗಿ, ಸರ್ಕಾರ ಹಾಗೂ ಪಕ್ಷದ ಪರವಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ: ಫೈವ್‌ಸ್ಟಾರ್‌ ಹೋಟೆಲ್‌ಗೆ ನುಗ್ಗಿದ ಕರವೇ ಕಾರ್ಯಕರ್ತರು

    ಸ್ಮಾರಕ ನಿರ್ಮಾಣ ಮಾಡಬೇಕು ಎಂಬ ಮನವಿ ಬಗ್ಗೆ ಕೇಳಿದಾಗ, ಮನವಿಗಳು ಬಂದಿವೆ, ಈ ವಿಚಾರದಲ್ಲಿ ವೈಯಕ್ತಿಕವಾಗಿ ನಾನು ತೀರ್ಮಾನ ಮಾಡಲು ಆಗುವುದಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಯವರು ಎಲ್ಲರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಇತ್ತೀಚೆಗೆ ಚಿತ್ರರಂಗಕ್ಕೆ ಸಂಬಂಧಿಸಿದ ಕೆಲವು ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

    ಬಿಹಾರದ ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯ ನಿರ್ಣಯಗಳ ಕುರಿತು ಕೇಳಿದಾಗ, ಈ ವಿಚಾರವಾಗಿ ನಾನು ಇಂದು ಮಾತನಾಡುವುದಿಲ್ಲ. ನಾವು ಸಂವಿಧಾನಬದ್ಧವಾಗಿ ಸಿಕ್ಕಿರುವ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ಹಕ್ಕಿನ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದರು.ಇದನ್ನೂ ಓದಿ: ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ – ನನಗೆ ಗೊತ್ತಿಲ್ಲ ಎಂದ ಪರಮೇಶ್ವರ್‌

  • ಹಿಂಸಾಚಾರಕ್ಕೆ ತಿರುಗಿದ ಲಡಾಖ್‌ ರಾಜ್ಯ ಸ್ಥಾನಮಾನ ಪ್ರತಿಭಟನೆ – 4 ಬಲಿ, ಬಿಜೆಪಿ ಕಚೇರಿಗೆ ಬೆಂಕಿ

    ಹಿಂಸಾಚಾರಕ್ಕೆ ತಿರುಗಿದ ಲಡಾಖ್‌ ರಾಜ್ಯ ಸ್ಥಾನಮಾನ ಪ್ರತಿಭಟನೆ – 4 ಬಲಿ, ಬಿಜೆಪಿ ಕಚೇರಿಗೆ ಬೆಂಕಿ

    – ಹಿಂಸಾಚಾರಕ್ಕೆ ಕಾಂಗ್ರೆಸ್‌ ಕಾರಣ ಎಂದ ಬಿಜೆಪಿ

    ಲೆಹ್‌: ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ (Ladakh’s Statehood Protests) ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

    ಲಡಾಖ್ ಅಪೆಕ್ಸ್ ಬಾಡಿ (LAB)  ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಹಲವು ವಾಹನಗಳು ಸುಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಕೇಂದ್ರ ಸರ್ಕಾರ ಹಾಗೂ ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ಪ್ರತಿಭಟನೆ ತೀವ್ರಗೊಂಡಿದೆ ಎಂದು ಎಲ್‌ಎಬಿ ಸಂಘಟಕರು ಆರೋಪಿಸಿದ್ದಾರೆ.

    ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಕೇಂದ್ರ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), 2023 ರ ಸೆಕ್ಷನ್ 163 ರ ಅಡಿಯಲ್ಲಿ ಕರ್ಫ್ಯೂ ಹೇರಿ ತಕ್ಷಣವೇ ಲೇಹ್‌ನಲ್ಲಿ ಪ್ರತಿಭಟನೆಗಳು ನಿಷೇಧಿಸಿದೆ.

    ಸೆ.10ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ದಾದ ನಂತರ ಎಲ್‌ಎಬಿ ಯುವ ಘಟಕವು ಬಂದ್ ಮತ್ತು ಬೃಹತ್ ಪ್ರತಿಭಟನೆಗೆ ಕರೆ ನೀಡಿತು. ಹಿಂಸಾಚಾರ ಹಿನ್ನೆಲೆಯಲ್ಲಿ ಹೋರಾಟಗಾರ ಸೋನಮ್ ವಾಂಗ್ ಚುಕ್ (Sonam Wangchuk) ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ಲಡಾಖ್‌ಗೆ ರಾಜ್ಯದ ಮಾನ್ಯತೆ ನೀಡುವುದು ಮತ್ತು ಆರನೇ ಪರಿಚ್ಛೇದದಡಿಯಲ್ಲಿ ಸೇರಿಸುವ ಬೇಡಿಕೆ ಈಡೇರಿದಾಗ ಮಾತ್ರ ತಮ್ಮ ಹೋರಾಟವನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.

    ಲಡಾಖ್‌ ಪ್ರತಿಭಟನೆಯ ಹಿಂದೆ ಕಾಂಗ್ರೆಸ್‌ ಇದೆ. ಸ್ಥಳೀಯ ಕಾಂಗ್ರೆಸ್‌ ನಾಯಕರೇ ಈ ಹಿಂಸಾಚಾರಕ್ಕೆ ಕಾರಣ ಎಂದು ಆರೋಪಿಸಿ ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದೆ.

  • Ramanagara | ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    Ramanagara | ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ರಾಮನಗರ: ರಸ್ತೆಗುಂಡಿ (Road Pothole) ಮುಚ್ಚದ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ (BJP) ಪ್ರತಿಭಟನೆ ನಡೆಸುತ್ತಿದ್ದು, ರಾಮನಗರದ (Ramanagara) ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿ ಗುಂಡಿ ಮುಚ್ಚದ ಪರಿಸ್ಥಿತಿಗೆ ಬಂದು ನಿಂತಿದೆ. ಬೆಂಗಳೂರು ಈಗ ಗುಂಡಿಯೂರು ಆಗಿದೆ. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗೆ ಸಾವನ್ನಪ್ಪುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

    ಐಟಿ ಕಂಪನಿಗಳು ಬೆಂಗಳೂರು ತೊರೆದು ಬೇರೆ ರಾಜ್ಯಕ್ಕೆ ಹೋಗುತ್ತಿವೆ. ಇಷ್ಟಾದರೂ ಗುಂಡಿ ಮುಚ್ಚದೇ ಉಪಮುಖ್ಯಮಂತ್ರಿಗಳು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಬೆಂಗಳೂರಿನ ಎಲ್ಲಾ ಗುಂಡಿಗಳನ್ನ ಮುಚ್ಚಿ ಮರ್ಯಾದೆ ಉಳಿಸಿಕೊಳ್ಳಿ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

  • ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

    ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

    – ನ್ಯಾ. ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ರದ್ದುಪಡಿಸಿದ ಸರ್ಕಾರ

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ (Nagamohan Das Committee) ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ದಿಢೀರನೆ ರದ್ದುಗೊಳಿಸಿದೆ.

    ಸೆ.30 ರ ವರೆಗೆ ತಮ್ಮ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ (40% Commission) ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆ‌ ಜವಾಬ್ದಾರಿಯನ್ನು ಈ ಆಯೋಗಕ್ಕೆ‌ ವಹಿಸಲಾಗಿತ್ತು. ಇದನ್ನೂ ಓದಿ: ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

    ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ನಿನ್ನೆ ಸಂಜೆಯಿಂದ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ ಎಂದು ಕೇಳಿಬಂದಿದೆ.

    ಬೆಂಗಳೂರು ಅಕ್ರಮ ಕಾಮಗಾರಿ ತನಿಖೆ ನಡೆಸಿದ ಆಯೋಗ ಆ.30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನ ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು – ಡಿಸಿ ಕಚೇರಿ ಆವರಣದಲ್ಲಿ ಸುರಿದು ಆಕ್ರೋಶ

    ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ನಿನ್ನೆ ಏಕಾಏಕಿ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತು ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

  • ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚುವ ಮೂಲಕ ಸಾಂಕೇತಿಕ ಹೋರಾಟ – ಅಶ್ವತ್ಥ ನಾರಾಯಣ್

    ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚುವ ಮೂಲಕ ಸಾಂಕೇತಿಕ ಹೋರಾಟ – ಅಶ್ವತ್ಥ ನಾರಾಯಣ್

    – ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ತಡೆ

    ಬೆಂಗಳೂರು: ಅಭಿವೃದ್ಧಿ ಶೂನ್ಯತೆ ಹಾಗೂ ರಸ್ತೆ ಗುಂಡಿಯ ವಿಷಯವನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ದೃಷ್ಟಿಯಿಂದ ರಾಜ್ಯದ ಎಲ್ಲ ಕಡೆ ಬುಧವಾರ (ಸೆ.24) ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ (Ashwath Narayana) ಅವರು ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ (Bengaluru) ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಾಂಕೇತಿಕವಾಗಿ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ (Congress) ಸರ್ಕಾರವು ಜನವಿರೋಧಿಯಾಗಿದ್ದು, ಆಡಳಿತದಲ್ಲಿ ವಿಫಲವಾಗಿದೆ. ಜನರನ್ನು ಬೆದರಿಸುವ ಸರ್ಕಾರವಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ವರ್ತನೆಯನ್ನು ಖಂಡಿಸಿ ಮತ್ತು ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಕೊಪ್ಪಳ ಯಲ್ಲಾಲಿಂಗನ ಕೊಲೆ ಪ್ರಕರಣ – ಅ.3ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

    ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಸಂಪೂರ್ಣವಾಗಿ ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆಗಳು ಎಲ್ಲೆಡೆ ಸಂಪೂರ್ಣವಾಗಿ ಹಾಳಾಗಿವೆ. ಎಲ್ಲ ಕಡೆ ಗುಂಡಿಯಲ್ಲಿ ರಸ್ತೆ ಇದೆ. ಇಷ್ಟೊಂದು ತೆರಿಗೆ ಹೇರಿದ ಮೇಲೂ ಹೀಗಾಗಿದೆ. ಬೆಲೆ ಏರಿಕೆ, ತೆರಿಗೆಗಳ ಮೂಲಕ ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1.5 ಲಕ್ಷ ಕೋಟಿ ರೂ. ಆದಾಯ ಪಡೆದುಕೊಂಡಿದೆ. ಗ್ಯಾರಂಟಿಗೆ 90 ಸಾವಿರ ಕೋಟಿ ರೂ. ಖರ್ಚಾಗಿರಬಹುದು. ಇನ್ನೊಂದೆಡೆ ಸುಮಾರು 39 ಸಾವಿರ ಕೋಟಿ ರೂ. ಎಸ್‌ಇಪಿ, ಟಿಎಸ್‌ಪಿ ಹಣವನ್ನೂ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.