Tag: Black Ink

  • ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ ಎಂದು ಲೋಕಸಭೆ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಗುರುವಾರ ಕೆಲವು ಕೆಲ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್‌ ಮಾಡಲಾಗುತ್ತಿದೆ. ಈ ಬಗ್ಗೆ ದೆಹಲಿ ಪೊಲೀಸ್‌ ಅಧಿಕಾರಿಗಳನ್ನು ಕೇಳಿದರೆ ಅವರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಎಂದರು.

     

     

    ಎಕ್ಸ್ ಪೋಸ್ಟ್‌ಗೆ ಗೃಹ ಸಚಿವ ಅಮಿತ್ ಶಾ (Amitshah) ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರನ್ನು ಓವೈಸಿ ಟ್ಯಾಗ್ ಮಾಡಿದ್ದಾರೆ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನಾನು ಹೆದರಲ್ಲ: ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ ಓವೈಸಿ, ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ. ನಾನು ಯಾವುದಕ್ಕೂ ಹೆದರಲ್ಲ ಎಂದು ಸಂಸದರು ಹೇಳಿದ್ದಾರೆ.

    ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.

    ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022 ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.

  • ಬೆಂಗಳೂರಿನಲ್ಲಿ ಟಿಕಾಯತ್‌ ಮುಖಕ್ಕೆ ಮಸಿ – ವ್ಯಕ್ತಿಗೆ ಥಳಿತ

    ಬೆಂಗಳೂರಿನಲ್ಲಿ ಟಿಕಾಯತ್‌ ಮುಖಕ್ಕೆ ಮಸಿ – ವ್ಯಕ್ತಿಗೆ ಥಳಿತ

    ಬೆಂಗಳೂರು: ರಾಷ್ಟ್ರೀಯ ‌ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.

    ಕೋಡಿಹಳ್ಳಿ‌ ಚಂದ್ರಶೇಖರ್‌ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ವೇದಿಕೆಯಲ್ಲಿದ್ದರು.

    ಈ ವೇಳೆ ಏಕಾಏಕಿ ನುಗ್ಗಿದ ಯುವಕ ಟಿಕಾಯತ್ ಮುಖಕ್ಕೆ ಮಸಿ ಬಳಿದು ಮೋದಿ ಮೋದಿ, ನಕಲಿ ಹೋರಾಟಗಾರರಿಗೆ ಧಿಕ್ಕಾರ ಎಂದು‌ ಘೋಷಣೆ ಕೂಗಿದ್ದಾನೆ. ಏಕಾಏಕಿ ವೇದಿಕೆಗೆ ನುಗ್ಗಿದ ಯುವಕ ಟಿವಿ ಚಾನಲ್ ಮೈಕ್ ಕಿತ್ತುಕೊಂಡು‌ ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಎರಚಿದ್ದಾನೆ.  ಇದನ್ನೂ ಓದಿ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ

    ಈ ಸಂದರ್ಭದಲ್ಲಿ ಅಲ್ಲಿ ಮಾರಾಮಾರಿ ನಡೆದಿದ್ದು ಅಲ್ಲಿದ್ದ ವ್ಯಕ್ತಿಗಳು ಯುವಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಕುರ್ಚಿಗಳನ್ನು ಹಿಡಿದು ತೂರಿದ ವೀಡಿಯೋ ಲಭ್ಯವಾಗಿದೆ.

    ಭಾರತ್‌ ರಕ್ಷಣಾ ವೇದಿಕೆ ಸದಸ್ಯರು ಎನ್ನಲಾದ ಭರತ್ ಶೆಟ್ಟಿ, ದಿಲೀಪ್ ಹಾಗೂ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡರು ನೀಡುವ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ‌ತಿಳಿಸಿದ್ದಾರೆ.