Tag: black money

  • 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

    2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

    ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ.

    ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ, ರೂಪಾಯಿ ಮೌಲ್ಯ ಕನಿಷ್ಠ ಮಟ್ಟದಲ್ಲಿದೆ. ಹಾಗಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಹೇಳಿದರು.

    ದೇಶದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ನೋಟು ಬ್ಯಾನ್ ನಿಂದ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿಲ್ಲ. ನೋಟು ಅಮಾನ್ಯೀಕರಣ ಕೂಡ ಕಪ್ಪು ಹಣವನ್ನು ಬಿಳಿ ಹಣ ಮಾಡುವ ಯೋಜನೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

    ಪ್ರಧಾನಿ ನೆರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾಷಣದ ಸರ್ಕಾರ. ಅದು ಕೇವಲ ಆಶ್ವಾಸನೆಗಳನ್ನು ಕೊಡುವ ಸರ್ಕಾರ ಎಂದು ಕಿಡಿ ಕಾರಿದರು.

    ದೇಶದಲ್ಲಿನ ಕಪ್ಪುಹಣವನ್ನು ಹೊರತರುವ ದೃಷ್ಟಿಯಿಂದ ಮೋದಿ ನೇತೃತ್ವದ ಸರ್ಕಾರ ನೋಟು ಅಮಾನ್ಯೀಕರಣ ಮಾಡಿತು. ಆದರೆ ದೇಶದಲ್ಲಿ ಕಪ್ಪು ಹಣ ಈಗಲೂ ಹೆಚ್ಚಾಗುತ್ತಿದೆ. ಇನ್ನು ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವುದಾಗಿ ಮೋದಿ ಹೇಳಿದ್ದರು. ಆದರೆ ಕಪ್ಪುಹಣ ತರುವ ಬದಲು ಮತ್ತೆ ದೇಶದಲ್ಲಿ ಕಪ್ಪುಹಣ ಹೆಚ್ಚಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

  • ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಳೇ 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿ ಒಂದು ವರ್ಷವೇ ಕಳೆದರೂ ಹಳೆ ನೋಟ್‍ಗಳ ಬದಲಾವಣೆ ಮಾಡುವ ಮಾಫಿಯಾ ಇನ್ನೂ ಕಾರ್ಯಾಚರಣೆ ನಡೆಸುತ್ತಲೇ ಇದೆ. ಇದಕ್ಕೆ ತಾಜಾ ಉದಾರಣೆ ಎಂಬಂತೆ ಗದಗ ನಗರದಲ್ಲಿ ಹಳೇ ನೋಟ್ ಗಳನ್ನು ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

    ಬಂಧಿತರಲ್ಲಿ ಇಬ್ಬರು ಗದಗ ನಗರ ನಿವಾಸಿಗಳಾಗಿದ್ದು ಮತ್ತಿಬ್ಬರು ಗದಗ ತಾಲೂಕಿನ ನಾಗಾವಿ ಮತ್ತು ಮಲ್ಲಸಮುದ್ರ ಗ್ರಾಮದ ನಿವಾಸಿಗಳಾಗಿದ್ದಾರೆ. ಗದಗ ರಾಧಾಕೃಷ್ಣ ನಗರದ ಮಾಬುಸುಬಾನಿ ಸವಡಿ(40), ನಗರದ ಗಂಗಿಮಡಿ ಕಾಲೋನಿ ನಿವಾಸಿ ಮಹಮದ್ ಯುಷುಫ್ ಗುಳಗುಂದಿ (26) ಹಾಗೂ ತಾಲೂಕಿನ ಮಲ್ಲಸಮುದ್ರ ಗ್ರಾಮದ ಸುರೇಶ್ ಹಳ್ಳಿಕೇರಿ(45), ನಾಗಾವಿ ಗ್ರಾಮದ ಮುತ್ತಪ್ಪ ಮಲ್ಲಮ್ಮ ನವರ್ (36) ಬಂಧಿತ ಆರೋಪಿಗಳು.

    ಹಳೇ ನೋಟುಗಳನ್ನು ಸಾಗಣೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗದಗ ಬೆಟಗೇರಿ ಬಡಾವಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಗರದ ರೈಲ್ವೇ ಕ್ವಾಟ್ರಸ್ ಬಳಿ ಬೈಕ್ ಮೇಲೆ ಹಣ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು 12 ಲಕ್ಷ ರೂ. ಮೌಲ್ಯದ ಹಳೇ ನೋಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಆರೋಪಿಗಳನ್ನು ಪೋಲಿಸರು ಬಂಧಿಸಿದ ನಂತರ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದೆ. ಈ ಹಣ ಯಾರದ್ದು? ಹಳೇ ನೋಟುಗಳನ್ನ ಇನ್ನೂ ಎಕ್ಸ್‍ಚೆಂಜ್ ಮಾಡುವ ಕುಳಗಳು ಯಾರು? ಬ್ಲಾಕ್ ಮನಿ ವೈಟ್ ಮನಿ ಮಾಡೊಕೆ ಸಜ್ಜಾಗಿದ್ದಾರಾ ಕಪ್ಪು ಕುಳಗಳು? ಆ ಹಳೇನೋಟನ್ನು ಈಗಲೂ ಸ್ವೀಕರಿಸ್ತಾರೆ ಅಂದರೆ ಅದರ ಹಿಂದಿರುವ ಕೈವಾಡವಾದರು ಎಂತಹದ್ದು? ಈ ಎಲ್ಲಾ ಪ್ರಶ್ನೆಗಳಿಗೆ ಪೊಲೀಸ್ ವಿಚಾರಣೆ ನಂತರವಷ್ಟೇ ಉತ್ತರ ಸಿಗಲಿದೆ.

     

  • 8 ವರ್ಷದಲ್ಲಿ ಫಸ್ಟ್ ಟೈಂ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆ

    8 ವರ್ಷದಲ್ಲಿ ಫಸ್ಟ್ ಟೈಂ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆ

    ಮುಂಬೈ: 8 ವರ್ಷದಲ್ಲೇ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆಯಾಗಿದೆ ಎಂದು ವರ್ಲ್ಡ್  ಗೋಲ್ಡ್ ಕೌನ್ಸಿಲ್ (ಡಬ್ಲ್ಯೂಜಿಸಿ)ಹೇಳಿದೆ.

    ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸರಾಸರಿ ಪ್ರತಿ ವರ್ಷ 845 ಟನ್ ಚಿನ್ನ ಬಳಕೆಯಾಗುತಿತ್ತು. ಆದರೆ 2017ರಲ್ಲಿ ಅಂದಾಜು 650 ಟನ್ ಬಳಕೆಯಾಗುವ ಸಾಧ್ಯತೆಯಿದೆ ಎಂದು ಭಾರತದ ಡಬ್ಲ್ಯೂಜಿಸಿ ಆಡಳಿತ ನಿರ್ದೇಶಕರಾದ ಸೋಮಸುಂದರಂ ಪಿಆರ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    2016ರಲ್ಲಿ 666.1 ಟನ್ ಚಿನ್ನ ಬಳಕೆಯಾಗಿತ್ತು, ಜಿಎಸ್‍ಟಿ ಜಾರಿ ಮತ್ತು  ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಜಾರಿ ಮಾಡಿ ಆಭರಣ ಖರೀದಿ ಮೇಲೆ ಕಠಿಣ ಕ್ರಮವನ್ನು ಕೇಂದ್ರ ಸರ್ಕಾರ ವಿಧಿಸಿದ ಬಳಿಕ ಚಿನ್ನದ ಬಳಕೆ ಭಾರೀ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಜುಲೈ ಮತ್ತು ಸೆಪ್ಟೆಂಬರ್ ಅವಧಿಯಲ್ಲಿ ದೇಶದ ಚಿನ್ನ ಬೇಡಿಕೆ ಶೇ.24ರಷ್ಟು ಇಳಿಕೆಯಾಗಿದೆ. ಭಾರತದಲ್ಲಿ ಮೂರನೇ ಎರಡರಷ್ಟು ಚಿನ್ನದ ಬೇಡಿಕೆ ಗ್ರಾಮೀಣ ಭಾಗದಿಂದ ಬರುತ್ತದೆ. ಆದರೆ ಈ ಬಾರಿ ಮುಂಗಾರು ಮಳೆ ಕೆಲವೆಡೆ ಬಾರದೇ ಇದ್ದ ಕಾರಣ ಚಿನ್ನದ ಬೇಡಿಕೆ ಕುಸಿದಿದೆ  ಎಂದು ಡಬ್ಲ್ಯೂಜಿಸಿ ತನ್ನ ವರದಿಯಲ್ಲಿ ತಿಳಿಸಿದೆ.

    ಅಕ್ಟೋಬರ್ – ಡಿಸೆಂಬರ್ ವೇಳೆ ಹಬ್ಬಗಳು ಮತ್ತು ಮದುವೆಗಳು ಹೆಚ್ಚಾಗಿ ನಡೆಯುವ ಕಾರಣ ಈ ಅವಧಿಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಡಬ್ಲ್ಯೂಜಿಸಿ ಹೇಳಿದೆ.

    ಜಿಎಸ್‍ಟಿಗೂ ಮೊದಲು ಚಿನ್ನದ ಮೇಲೆ ಸೇವಾ ತೆರಿಗೆ 1.2% ಇತ್ತು. ಜಿಎಸ್‍ಟಿಯಲ್ಲಿ ಚಿನ್ನದ ಮೇಲೆ 3% ತೆರಿಗೆ ವಿಧಿಸಲಾಗಿದೆ.

    ಇದೇ ಅಕ್ಟೋಬರ್ ನಲ್ಲಿ 50 ಸಾವಿರ ರೂ. ಮೇಲ್ಪಟ್ಟ ಚಿನ್ನಾಭರಣಗಳ ಖರೀದಿಗೆ ಪಾನ್‍ಕಾರ್ಡ್ ಕಡ್ಡಾಯಗೊಳಿಸಿದ್ದ ಕಾನೂನನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಇನ್ನು ಮುಂದೆ 2 ಲಕ್ಷ ರು. ವರೆಗಿನ ಚಿನ್ನಾಭರಣ ಖರೀದಿಗೆ ಪಾನ್‍ಕಾರ್ಡ್ ಕಡ್ಡಾಯ ಇರುವುದಿಲ್ಲ. ಅದಕ್ಕೆ ಮೇಲ್ಪಟ್ಟ ಮೊತ್ತದ ಖರೀದಿಗೆ ಮಾತ್ರವೇ ಪಾನ್ ಕಡ್ಡಾಯ ಎಂದು ಸರ್ಕಾರ ತಿಳಿಸಿತ್ತು.

    ನೋಟ್ ಬ್ಯಾನ್ ಬಳಿಕ ಆಭರಣ ಉದ್ಯಮಿಗಳು, ಅಕ್ರಮ ಹಣ ಸಕ್ರಮ ಮಾಡುವ ದಂಧೆಯಲ್ಲಿ ಭಾಗಿಯಾಗಿದ್ದಾರೆಂಬ ಸಂಶಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ- 2002 ಅನ್ನು ಆಭರಣ ಖರೀದಿ ವ್ಯವಹಾರಗಳಿಗೆ ವಿಸ್ತರಿಸಿತ್ತು. ವಿಸ್ತರಿಸಿದ ಪರಿಣಾಮ 50 ಸಾವಿರ ರೂ. ಮೇಲ್ಪಟ್ಟ ಚಿನ್ನಖರೀದಿ ವೇಳೆ ಗ್ರಾಹಕರು ಪಾನ್‍ಕಾರ್ಡ್ ವಿವರ ನೀಡಬೇಕಿತ್ತು. ಜೊತೆಗೆ ವ್ಯಾಪಾರಿಗಳು ಭಾರೀ ಮೌಲ್ಯದ ಖರೀದಿ ಬಗ್ಗೆ ದಾಖಲೆ ಇಟ್ಟುಕೊಳ್ಳುವುದರ ಜತೆಗೆ ಅದನ್ನು ಹಣಕಾಸು ಗುಪ್ತ ಚರ ಇಲಾಖೆಗೆ ಸಲ್ಲಿಸಬೇಕಿತ್ತು.

    ಪ್ರಸ್ತುತ ಈಗ 2 ಲಕ್ಷ ರೂ. ಮೇಲ್ಪಟ್ಟ ಚಿನ್ನಾಭರಣ ಖರೀದಿಗೆ ಪಾನ್, ಆಧಾರ್ ನಂಬರ್, ಡಿಎಲ್ ಅಥವಾ ಪಾಸ್‍ಪೋರ್ಟ್ ಪ್ರತಿ ನೀಡುವುದು ಕಡ್ಡಾಯವಾಗಿದೆ.

  • ನೋಟ್‍ಬ್ಯಾನ್ ವರ್ಷಾಚರಣೆ ದಿನವೇ ಭರ್ಜರಿ ಬೇಟೆ – ಕಲಬುರಗಿಯಲ್ಲಿ 50 ಲಕ್ಷ ರೂ. ಕಪ್ಪುಹಣ ಪತ್ತೆ

    ನೋಟ್‍ಬ್ಯಾನ್ ವರ್ಷಾಚರಣೆ ದಿನವೇ ಭರ್ಜರಿ ಬೇಟೆ – ಕಲಬುರಗಿಯಲ್ಲಿ 50 ಲಕ್ಷ ರೂ. ಕಪ್ಪುಹಣ ಪತ್ತೆ

    ಕಲಬುರಗಿ: ನೋಟ್ ಬ್ಯಾನ್ ಆಗಿ ಇವತ್ತಿಗೆ ಒಂದು ವರ್ಷವಾದರೂ ಇನ್ನೂ ಕಪ್ಪುಹಣದ ಛಾಯೆ ಮುಗಿದಿಲ್ಲ. ಜಿಲ್ಲೆಯಲ್ಲಿ ಪೊಲೀಸರು ಫೈನಾನ್ಸ್ ಮೇಲೆ ದಾಳಿ ಮಾಡಿದ್ದು, 50 ಲಕ್ಷ ರೂ. ಕಾಳಧನ ಪತ್ತೆಯಾಗಿದೆ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಗಾಯಕವಾಡ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲದೇ ಈ ಪ್ರಕರಣಕ್ಕೆ ಸೇರಿದಂತೆ ಇತರೆ ಮೂವರು ಮೀಟರ್ ಬಡ್ಡಿ ದಂಧೆಕೋರನ್ನೂ ಕೂಡ ಬಂಧಿಸಲಾಗಿದೆ. ಮೀನಾಕ್ಷಿ ಕಾಂತಾ, ನಾಗರಾಜ್ ಕಲಶೆಟ್ಟಿ ಮತ್ತು ಶ್ರೀಕಾಂತ ಒಂಟಿ ಬಂಧಿತ ಆರೋಪಿಗಳಾಗಿದ್ದಾರೆ.

    ಆರೋಪಿ ಕರಣ್ ಗಾಯಕವಾಡ್ ಮೀಟರ್ ಬಡ್ಡಿ ಮೂಲಕ ಜನರ ಬಳಿ ಹಣವನ್ನು ವಸೂಲಿ ಮಾಡುತ್ತಿದ್ದನು. ಈತನ ಬಗ್ಗೆ ಖಚಿತವಾದ ಮಾಹಿತಿ ಪಡೆದು ನಂತರ ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದಾಖಲೆಯಿಲ್ಲದ 2000, 500 ಹಾಗೂ 100 ರೂ. ಮುಖಬೆಲೆಯ 40 ಲಕ್ಷ ರೂಪಾಯಿ ಹಣ ಮತ್ತು ದಾಖಲಾತಿಗಳು ದೊರೆತಿವೆ. ಈ ಎಲ್ಲಾ ಪ್ರಕರಣದಲ್ಲಿ ಒಟ್ಟು 50 ಲಕ್ಷ ರೂ. ಕಾಳಧನ ಪತ್ತೆಯಾಗಿದೆ.

    ಈ ಕುರಿತು ಕಲಬುರಗಿಯ ಆರ್ ಜೆ. ಬ್ರಹ್ಮಪೂರ್ ಠಾಣೆ ಹಾಗೂ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

     

  • ನಿರಾಶಾವಾದಿಗಳಿಂದ ಅಪಪ್ರಚಾರ, ಆರ್ಥಿಕತೆ ಕುಸಿತವಾಗಿಲ್ಲ: ಮೋದಿಯಿಂದ ಅಂಕಿಸಂಖ್ಯೆಯ ಭಾಷಣ

    ನಿರಾಶಾವಾದಿಗಳಿಂದ ಅಪಪ್ರಚಾರ, ಆರ್ಥಿಕತೆ ಕುಸಿತವಾಗಿಲ್ಲ: ಮೋದಿಯಿಂದ ಅಂಕಿಸಂಖ್ಯೆಯ ಭಾಷಣ

    ನವದೆಹಲಿ: ದೇಶದ ಆರ್ಥಿಕತೆ ಕುಸಿದಿಲ್ಲ. ಆದರೆ ನಿರಾಶಾವಾದಿಗಳು ಹಿಂಜರಿತವಾಗಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ವಿರೋಧಿ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದ್ದಾರೆ.

    ದೆಹಲಿಯ ವಿಜ್ಞಾನ ಭವನದಲ್ಲಿ ಇನ್ಸ್ ಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಅಂಕಿಸಂಖ್ಯೆಗಳಿಂದ ಕೂಡಿದ ಮಾಹಿತಿ ಇರುವ ಭಾಷಣವನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

    500, 1ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರಿಂದ ದೇಶಕ್ಕೆ ಒಳ್ಳೆದಾಗುತ್ತಿದೆ. ನೋಟ್ ಬ್ಯಾನ್ ಬಳಿಕ ನಗದು ಚಲಾವಣೆ ಪ್ರಮಾಣ ಶೇ.12ರಿಂದ ಶೇ.9ಕ್ಕೆ ಕುಸಿದಿದೆ ಎಂದು ಹೇಳಿದರು.

    ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಮೊದಲ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟವಾದ ಶೇ 5.7ಕ್ಕೆ ಕುಸಿತ ಕಂಡಿದ್ದನ್ನು ಒಪ್ಪಿಕೊಂಡ ಅವರು, ಯುಪಿಎ ಅವಧಿಯಲ್ಲಿ 8 ಬಾರಿ ಶೇ.5.7ಕ್ಕಿಂತ ಕಡಿಮೆ ಜಿಡಿಪಿ ಕುಸಿದಿತ್ತು ಎಂದು ಹೇಳಿದರು. ಆರಂಭದಲ್ಲಿ ಸಮಸ್ಯೆಯಾದರೂ ಭವಿಷ್ಯದಲ್ಲಿ ದೇಶಕ್ಕೆ ಲಾಭವಾಗಲಿದೆ ಎನ್ನುವ ದೃಷ್ಟಿಯನ್ನು ನೋಡಿಕೊಂಡೇ ನೋಟ್ ನಿಷೇಧ ಮಾಡಿ ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‍ಟಿ) ತಂದಿದ್ದೇವೆ. ನಮ್ಮ ಮೂರು ವರ್ಷದ ಅವಧಿಯಲ್ಲಿ ಜಿಡಿಪಿ ದರ ಶೇ.7.5 ಇತ್ತು ಎನ್ನುವುದನ್ನು ಎಲ್ಲರು ತಿಳಿದುಕೊಳ್ಳಬೇಕು. ಮುಂದಿನ ತ್ರೈಮಾಸಿಕದಲ್ಲಿ ಶೇ.7.7 ಜಿಡಿಪಿ ದರ ಬೆಳವಣಿಗೆಯಾಗುವ ನಿರೀಕ್ಷೆಯಲ್ಲಿದೆ ಎಂದು ಹೇಳಿದರು.

    ಹೊಟ್ಟೆ ತುಂಬಿರುವವರು ನನ್ನನ್ನು ದುರ್ಬಲ ಮಾಡಲು ನೋಡುತ್ತಿದ್ದಾರೆ. ದೇಶದ ಭವಿಷ್ಯಕ್ಕಾಗಿ ನಮ್ಮ ಕೆಲಸ ಕಠಿಣವಾಗಿರಬಹುದು. ಆದ್ರೆ, ಹೃದಯ ಮೃದು, ಸಂವೇದನಾಶೀಲವಾಗಿದೆ. ಕಪ್ಪುಹಣವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ನೊಂದಣಿಯಾದ 3 ಲಕ್ಷ ಕಂಪೆನಿಗಳಲ್ಲಿ 2.1 ಲಕ್ಷಕ್ಕೂ ಅಧಿಕ ಕಂಪೆನಿಗಳು ನಕಲಿಯಾಗಿದೆ ಎನ್ನುವ ವಿಚಾರ ನೋಟ್ ಬ್ಯಾನ್ ಬಳಿಕ ತಿಳಿದು ಬಂದಿದೆ ಎಂದು ವಿವರಿಸಿದರು.

    ಎಫ್‍ಡಿಐನಲ್ಲಿ ದಾಖಲೆಯಾಗಿದ್ದು, 21 ಇಲಾಖೆಗಳಲ್ಲಿ 87 ಸುಧಾರಣೆಗಳನ್ನು ತಂದಿದ್ದೇವೆ. ಜಿಎಸ್‍ಟಿಯಲ್ಲಿ ಸಮಸ್ಯೆಯಾದರೆ ಅಗತ್ಯ ಬದಲಾವಣೆ ತರಲು ಸಿದ್ಧವಾಗಿದ್ದೇವೆ. ದೇಶದ ಆರ್ಥಿಕತೆಯ ಮೂಲ ಸದೃಢವಾಗಿದೆ. ಜನರು ಕಷ್ಟಪಟ್ಟು ದುಡಿದ ಹಣದ ಮಹತ್ವ ಸರ್ಕಾರಕ್ಕೆ ಗೊತ್ತಿದೆ. ನಮ್ಮ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದ ಜನರ ಉತ್ತಮ ಜೀವನವನ್ನು ಕೇಂದ್ರೀಕರಿಸಿವೆ. 2022ರಲ್ಲಿ ಹೊಸ ಭಾರತಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಲಿದೆ ಎಂದು ಹೇಳಿದರು.

  • ಇಂದು ರೌಡಿ ನಾಗ, ಮಕ್ಕಳಿಗೆ ಬಿಡುಗಡೆ ಸಾಧ್ಯತೆ

    ಇಂದು ರೌಡಿ ನಾಗ, ಮಕ್ಕಳಿಗೆ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಕೋಟ್ಯಾಂತರ ರೂಪಾಯಿ ಹಳೇ ನೋಟು ಬದಲಾವಣೆ ದಂಧೆ ಪ್ರಕರಣದಲ್ಲಿ ಸಿಲುಕಿಕೊಂಡು ಪೊಲೀಸರ ಅತಿಥಿಯಾಗಿದ್ದ ರೌಡಿ ನಾಗ ಇಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ.

    ನಾಲ್ಕು ದಿನಗಳ ಹಿಂದೆ ಹೈಕೋರ್ಟ್ ನಲ್ಲಿ ಜಾಮೀನು ಪಡೆದಿರೋ ನಾಗ ಇಂದು ಸಂಜೆ 6 ಗಂಟೆ ಬಳಿಕ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕಾನೂನು ಪ್ರಕ್ರಿಯೆಗಳು ಮುಗಿಯದ ಹಿನ್ನೆಲೆಯಲ್ಲಿ ಇಷ್ಟು ದಿನ ಬಿಡುಗಡೆಯಾಗಿರಲಿಲ್ಲ. ಇಂದು ಪ್ರಕ್ರಿಯೆಗಳು ಮುಗಿಯೋ ಸಾಧ್ಯತೆಗಳಿದ್ದು, ರೌಡಿ ನಾಗ ಮತ್ತು ಮಕ್ಕಳಾದ ಗಾಂಧಿ, ಶಾಸ್ತ್ರಿ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.

    ಅಕ್ರಮ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ ಆರೋಪದಡಿ ಪೊಲೀಸರು ಏಪ್ರಿಲ್ 14ರಂದು ನಾಗನನ್ನು ಬಂಧಿಸಲು ಹೋಗಿದ್ದರು. ಮಾರ್ಚ್ 18ರಂದು ರಿಯಲ್ ಎಸ್ಟೇಟ್ ಉದ್ಯಮಿ ಉಮೇಶ್ ಎಂಬವರನ್ನ ಅಪಹರಿಸಲಾಗಿತ್ತು. ಕಿಡ್ನ್ಯಾಪ್ ತಂಡ ಶ್ರೀರಾಮಪುರದ ನಾಗನ ಮನೆಗೆ ಉಮೇಶ್‍ರನ್ನ ಕರೆತಂದು 50 ಲಕ್ಷ ರೂ. ಹಣ ವಸೂಲಿ ಮಾಡಿದ್ರು. ಕೊಲೆ ಬೆದರಿಕೆ ಇದ್ದ ಕಾರಣ ಉದ್ಯಮಿ ಉಮೇಶ್ ಯಾವುದೇ ದೂರು ನೀಡಿರಲಿಲ್ಲ. ನಂತರ ಏಪ್ರಿಲ್ 07 ರಂದು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಉಮೇಶ್ ದೂರು ದಾಖಲಿಸಿದ್ದರು. ಹೀಗಾಗಿ ಕೋರ್ಟ್‍ನಿಂದ ಸರ್ಚ್ ವಾರೆಂಟ್ ತಂದು ಹೆಣ್ಣೂರು ಇನ್ಸ್ ಪೆಕ್ಟರ್ ಶ್ರೀನಿವಾಸ್, ಮಲ್ಲೇಶ್ವರಂ ಎಸಿಪಿ ಸೇರಿದಂತೆ 40 ಕ್ಕೂ ಹೆಚ್ಚು ಪೊಲೀಸರು ನಾಗನ ಮನೆ ಹಾಗೂ ಸ್ನೇಹ ಸೇವಾ ಸಮಿತಿ ಕಚೇರಿಯ ಮೇಲೆ ದಾಳಿ ಮಾಡಿದ್ದರು.

    ಪೊಲಿಸರು ದಾಳಿ ಮಾಡುತ್ತಿದ್ದಂತೆಯೇ ನಾಗ ಮನೆಯಿಂದ ಪರಾರಿಯಾಗಿದ್ದು, ಆ ಬಳಿಕ ಆತನನ್ನು ಬಂಧಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

    https://www.youtube.com/watch?v=ehMXPLXNDUc

     

     

  • ನೋಟ್ ಬ್ಯಾನ್: ಬರೋಬ್ಬರಿ 246 ಕೋಟಿ ರೂ. ಹಣವನ್ನು ಠೇವಣಿ ಇಟ್ಟ ತಮಿಳುನಾಡು ಉದ್ಯಮಿ!

    ನೋಟ್ ಬ್ಯಾನ್: ಬರೋಬ್ಬರಿ 246 ಕೋಟಿ ರೂ. ಹಣವನ್ನು ಠೇವಣಿ ಇಟ್ಟ ತಮಿಳುನಾಡು ಉದ್ಯಮಿ!

    ಚೆನ್ನೈ: ನವೆಂಬರ್ 8ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳು ನಿಷೇಧವಾದ ಬಳಿಕ ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಬರೊಬ್ಬರಿ 246 ಕೋಟಿ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ.

    ನಾಮಕ್ಕಳ್ ಜಿಲ್ಲೆಯ ತಿರುಚಿನ್ಗೊಡ್‍ನ ಉದ್ಯಮಿ ಇಷ್ಟೊಂದು ಮೊತ್ತದ ಹಳೆ ನೋಟುಗಳನ್ನು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದಾರೆ. ಉದ್ಯಮಿ ಹೆಸರನ್ನು ಐಟಿ ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಆದರೆ ಈ ಠೇವಣಿಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ(ಪಿಎಂಜಿಕೆವೈ) ಅಡಿಯಲ್ಲಿ ಶೇ.45ರಷ್ಟು ತೆರಿಗೆ ಬೀಳಲಿದೆ.

    ಜಮೆ ಮಾಡಿದ ಬಳಿಕ ಉದ್ಯಮಿ ನಾಪತ್ತೆಯಾಗಿದ್ದು, 15 ದಿನಗಳ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ಪಿಎಂಜಿಕೆವೈ ಯೋಜನೆ ಬಗ್ಗೆ ತಿಳಿಸಿದ್ದಾರೆ. ಇದಾದ ಬಳಿಕ ಉದ್ಯಮಿ ಈ ಯೋಜನೆಯ ಅಡಿಯಲ್ಲಿ ಹಣವನ್ನು ಠೇವಣಿ ಇಡುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ತಮಿಳುನಾಡು ಮತ್ತು ಪುದುಚ್ಚೇರಿಯಲ್ಲಿ 200 ಕ್ಕೂ ಹೆಚ್ಚು ವ್ಯಕ್ತಿಗಳು ಮತ್ತು ಕಂಪೆನಿಗಳು ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಿವಿಧ ಬ್ಯಾಂಕ್ ಗಳಲ್ಲಿ ಠೇವಣಿ ಇಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

    ಈಗಾಗಲೇ ಬಹಳಷ್ಟು ಜನ ಪಿಎಂಜಿಕೆವೈ ಯೋಜನೆಯ ಅಡಿಯಲ್ಲಿ ಹಣವನ್ನು ಇಟ್ಟಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಹಣವನ್ನು ಇಡಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಈ ಅವಧಿಯ ಒಳಗಡೆ ಹಣವನ್ನು ಠೇವಣಿ ಇಡದಿದ್ದರೆ, ಏಪ್ರಿಲ್ 1 ರಿಂದ ದಂಡದ ಮೊತ್ತ ಏರಿಸಲಾಗುವುದು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

    ಏನಿದು ಪಿಎಂಜಿಕೆವೈ?
    ಪಿಎಂಜಿಕೆವೈ ಯೋಜನೆ ಅಡಿ ಠೇವಣಿ ಇಟ್ಟ ಹಣ ಕಪ್ಪು ಹಣಗಳಿಗೆ ಶೇ. 49.9 ರಷ್ಟು ದಂಡ ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೇ ಶೇ.25ರಷ್ಟು ಹಣವನ್ನು ಆರ್‍ಬಿಐಯಲ್ಲಿ 4 ವರ್ಷಗಳ ಕಾಲ ಠೇವಣಿ ಇಡಬೇಕಾಗುತ್ತದೆ. ಈ ರೀತಿಯಾಗಿ ಠೇವಣಿ ಇರಿಸಿದ ಹಣಕ್ಕೆ ಯಾವುದೇ ಬಡ್ಡಿ ಸಿಗುವುದಿಲ್ಲ. ಈ ಯೋಜನೆ ಹೊರತುಪಡಿಸಿ ಸಾಮಾನ್ಯ ಪ್ರಕ್ರಿಯೆ ಮೂಲಕ ತಮ್ಮ ಕಪ್ಪು ಹಣ ಘೋಷಿಸಿಕೊಂಡರೆ ಶೇ. 77.2ರಷ್ಟು ದಂಡ ಸೇರಿದಂತೆ ತೆರಿಗೆ ಕಟ್ಟಬೇಕಾಗುತ್ತದೆ.

    ಇಲಾಖೆ ನಡೆಸುವ ದಾಳಿಯಲ್ಲಿ ಕಪ್ಪು ಹಣ ಸಿಕ್ಕಿ ಬಿದ್ದರೆ ಶೇ.137.25ರಷ್ಟು ದಂಡ ಹಾಗೂ ಬೇನಾಮಿ ಕಾಯ್ದೆ ಅನ್ವಯ ಏಳು ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.

  • ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

    ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

    ನವದೆಹಲಿ: ನಗದು ವ್ಯವಹಾರದ ಗರಿಷ್ಠ ಮಿತಿಯನ್ನು 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ.

    ಈ ವರ್ಷದ ಹಣಕಾಸು ಬಜೆಟ್‍ನಲ್ಲಿ ಅರುಣ್ ಜೇಟ್ಲಿ ನಗದು ವ್ಯವಹಾರಕ್ಕೆ 3 ಲಕ್ಷ ರೂ. ಗರಿಷ್ಠ ಮಿತಿಯನ್ನು ಪ್ರಕಟಿಸಿದ್ದರು. ಈಗ ಈ ಮಿತಿಯಲ್ಲಿ 1 ಲಕ್ಷ ರೂ. ಕಡಿತಗೊಳಿಸಿ 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ.

    ಹಣಕಾಸು ಮಸೂದೆಗೆ ಮಾಡಲಾಗಿರುವ 40 ತಿದ್ದುಪಡಿಯಲ್ಲಿ ಈ ತಿದ್ದುಪಡಿ ಅಂಶವೂ ಸೇರಿದೆ. ತಿದ್ದುಪಡಿಯ ಬಳಿಕ ಕಂದಾಯ ಕಾರ್ಯದರ್ಶಿ ಹಸ್ಮುಕ್ ಆಧಿಯಾ ಟ್ವೀಟ್ ಮಾಡಿ, ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ ಅಷ್ಟೇ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಕಪ್ಪು ಹಣದ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ರಚನೆ ಮಾಡಿದ್ದ ವಿಶೇಷ ತನಿಖಾ ತಂಡ ಸಲ್ಲಿಸಿದ್ದ ವರದಿಯ ಶಿಫಾರಸಿನಂತೆ ನಗದು ಹಣಕಾಸು ವ್ಯವಹಾರವನ್ನು ತಡೆಗಟ್ಟಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡುವಾಗ ಸಮರ್ಥಿಸಿಕೊಂಡಿದ್ದರು.

    ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ 2 ಲಕ್ಷ ರೂ.ಗಳಿಗಿಂತ ಹೆಚ್ಚಿನ ವ್ಯವಹಾರವನ್ನು ಜನರು ಚೆಕ್, ಡಿಡಿ, ಆನ್‍ಲೈನ್ ಮೂಲಕ ಮಾಡಬೇಕಾಗುತ್ತದೆ.

  • ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂ. ನೋಟ್ ಬ್ಯಾನ್ ಮಾಡಿದ ವೇಳೆ ನೋಟು ಬದಲಾವಣೆಗೆ ಕ್ಯೂನಲ್ಲಿ ನಿಂತು ಜನರು ಸಾವನ್ನಪ್ಪಿರುವ ಬಗ್ಗೆ ಯಾವುದೇ ‘ಅಧಿಕೃತ ವರದಿ’ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಹಣಕಾಸು ಇಲಾಖೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ಜನರು ಸಾವನ್ನಪ್ಪಿರುವಂತಹ ಅಧಿಕೃತ ವರದಿ ನಮಗಿನ್ನೂ ಬಂದಿಲ್ಲ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ನೋಟ್ ಬ್ಯಾನ್ ನಿರ್ಧಾರದಿಂದ ತೊಂದರೆಗೆ ಸಿಲುಕಿ ಎಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಿಪಿಎಂ ಸಂಸದ ಜಿತೇಂದ್ರ ಚೌಧರಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವರು ಇಂದು ಲಿಖಿತ ಉತ್ತರ ನೀಡಿದ್ದಾರೆ.

    ನೋಟ್ ಬ್ಯಾನ್ ಮಾಡಿದ್ದಾಗ, ದೇಶದ ಹಲವೆಡೆ ಜನ ಕ್ಯೂನಲ್ಲಿ ನಿಂತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು ಎಂಬ ವರದಿಗಳೂ ಬಂದಿದ್ದವು. ಕಳೆದ ನವೆಂಬರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1 ಸಾವಿರ ರೂ.ಗಳ ನೋಟನ್ನು ಬ್ಯಾನ್ ಮಾಡಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ನೋಟುಗಳನ್ನು ಜಮೆ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

    ಇದನ್ನೂ ಓದಿ:ಮತ್ತೆ 2,000 ನೋಟು ನಿಷೇಧವಾಗುತ್ತಾ: ಜನ್ರಲ್ಲಿ ಮೂಡಿದ್ದ ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ರು