Tag: blanket

  • ಮೇಕೆಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ದಂಪತಿ- ಕಂಬಳಿ ಗಿಫ್ಟ್

    ಮೇಕೆಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ದಂಪತಿ- ಕಂಬಳಿ ಗಿಫ್ಟ್

    ಲಕ್ನೋ: ಮೇಕೆ (Goat) ಮರಿಗಳ ಹುಟ್ಟುಹಬ್ಬವನ್ನು (Birth Day) ದಂಪತಿ ಅದ್ಧೂರಿಯಾಗಿ ಉತ್ತರ ಪ್ರದೇಶದಲ್ಲಿ (UttaraPradesh) ಆಚರಿಸಿದ್ದಾರೆ.

    ಉತ್ತರಪ್ರದೇಶದ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುವ ರಾಜಾ ಮತ್ತು ಅವರ ಪತ್ನಿಗೆ ಮಕ್ಕಳಿರಲಿಲ್ಲ. ಇದರಿಂದಾಗಿ ಕಳೆದ ವರ್ಷ ಅವರು ಸಾಕಿದ್ದ ಮುದ್ದಿನ ಮೇಕೆ 2 ಮರಿಗಳಿಗೆ ಜನನ ನೀಡಿತ್ತು. ಈ 2 ಮರಿಗಳನ್ನು ಮುದ್ದಿನಿಂದ ಸಾಕಿದ್ದ ದಂಪತಿ ಆ ಮರಿಗಳ ಮೊದಲ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

    ತಮ್ಮ ಸಂಬಂಧಿಕರು ಮತ್ತು ಸ್ನೇಹಿತರನ್ನು ಮೇಕೆ ಮರಿಗಳ ಹುಟ್ಟುಹಬ್ಬಕ್ಕೆ ಆಹ್ವಾನಿಸಿದ್ದರು. ಈ ವೇಳೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಜೊತೆಗೆ ಡಿಜೆಗೂ ವ್ಯವಸ್ಥೆ ಮಾಡಿದ್ದರು. ಅಷ್ಟೇ ಅಲ್ಲದೇ ಆ 2 ಮೇಕೆಗಳಿಗೆ ಕಂಬಳಿಯನ್ನು (Blanket) ರಾಜು ದಂಪತಿ ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಪಾರ್ಟಿಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕುದಿಯುತ್ತಿರುವ ಸಾಂಬಾರ್‌ ಪಾತ್ರೆಗೆ ಬಿದ್ದು ಬಾಲಕ ಸಾವು

    ಈ ಬಗ್ಗೆ ರಾಜಾ ಮತನಾಡಿ, ನಾವು ಮೇಕೆಗಳನ್ನು ನಮ್ಮ ಮಕ್ಕಳಂತೆ ನೋಡಿದ್ದೇವೆ. ಆ 2 ಮರಿಗಳಿಗೆ ಕುಬೇರ ಮತ್ತು ಲಕ್ಷ್ಮೀ ಎಂದು ಹೆಸರಿಟ್ಟಿದ್ದೇವೆ. ನಾವು ಅವುಗಳನ್ನು ರಿಕ್ಷಾದಲ್ಲೂ ಹೊರಗಡೆ ಕರೆದುಕೊಂಡು ಹೋಗುತ್ತೇವೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಿದ್ದೆವು ಎಂದರು. ಇದನ್ನೂ ಓದಿ: ಚಲಿಸುವ ಕಾರಿನ ಬಾನೆಟ್ ಮೇಲೆ ಕೂತು ಯುವತಿ ಜಾಲಿ ರೈಡ್ – ವಾಹನ ಪೊಲೀಸರ ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ಚಳಿಗಾಲದಲ್ಲಿ ನಟಿ ಹರಿಪ್ರಿಯಾಗೆ ಅಮ್ಮನಿಂದ ಸ್ಪೆಷಲ್ ಗಿಫ್ಟ್

    ಚಳಿಗಾಲದಲ್ಲಿ ನಟಿ ಹರಿಪ್ರಿಯಾಗೆ ಅಮ್ಮನಿಂದ ಸ್ಪೆಷಲ್ ಗಿಫ್ಟ್

    ಬೆಂಗಳೂರು: ಚಳಿಗಾಲದಲ್ಲಿ ನಟಿ ಹರಿಪ್ರಿಯಾಗೆ ಅವರ ಅಮ್ಮ ಸ್ಪೆಷಲ್ ಗಿಫ್ಟ್ ವೊಂದನ್ನು ನೀಡಿದ್ದಾರೆ.

    ಬೆಳಗ್ಗೆ ಎದ್ದ ತಕ್ಷಣ ಮೈ ಜುಮ್ಮೆನಿಸುವ ಚಳಿ. ಹೊರಗಡೆ ಕಾಲು ಹೆಜ್ಜೆ ಇಡಲು ಸಹ ಆಗಲ್ಲ. ಚಳಿಗಾಲದಲ್ಲಿ ಚರ್ಮದ ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು. ಅದರಲ್ಲೂ ಹೀರೋ, ಹಿರೋಯಿನ್‍ಗಳಿಂಗತೂ ತ್ವಚೆಯ ಆರೋಗ್ಯ ಕಾಪಾಡಿಕೊಂಡು ಸುಂದರವಾಗಿ ಕಾಣುವಂಥ ಡ್ರೆಸ್ ಹುಡುಕುವುದೇ ದೊಡ್ಡ ಸರ್ಕಸ್.

    ಈ ನಿಟ್ಟಿನಲ್ಲಿ ಕನ್ನಡದ ನಟಿ ಹರಿಪ್ರಿಯಾ ತಾಯಿ, ತಮ್ಮ ಮಗಳಾದ ಹರಿಪ್ರಿಯಾಗಾಗಿ ವಿಶೇಷವಾದ ಕಂಬಳಿಯೊಂದನ್ನು ತಯಾರಿಸಿದ್ದಾರೆ. ಮತ್ಸ್ಯಕನ್ಯೆ ರೀತಿ ಕಲರ್ ಫುಲ್ ಆಗಿರುವ ಹೊದಿಕೆಯನ್ನು ಕೈಯಾರೆ ಸಿದ್ಧ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಹರಿಪ್ರಿಯಾ ಅವರೇ ಟ್ವೀಟ್ ಮಾಆಡುವ ಮೂಲಕ ರೀವಿಲ್ ಮಾಡಿದ್ದಾರೆ.

    ಇದನ್ನು ಹೊದ್ದಿರುವ ಫೋಟೋವನ್ನು ಟ್ವೀಟ್ ಮಾಡಿರುವ ಹರಿಪ್ರಿಯಾ, ಈ ಚಳಿಗಾಲದಲ್ಲಿ ನಾನು ಈ ಮತ್ಸ್ಯಕನ್ಯೆ ಕಂಬಳಿಯಿಂದ ಮಾತ್ರ ಚಳಿಯನ್ನು ತಡೆಯಬಲ್ಲೆ. ಇದನ್ನು ತಯಾರಿಸಲು ತುಂಬ ಶ್ರಮ ಮತ್ತು ಸಮಯವನ್ನು ತೆಗದುಕೊಂಡಿದೆ. ಈ ಸೂಪರ್ ಕೂಲ್ ಮತ್ತು ವರ್ಣರಂಜಿತ ಕಂಬಳಿಯನ್ನು ನನಗಾಗಿ ಹೆಣೆದಿದ್ದಕ್ಕಾಗಿ ಅಮ್ಮನಿಗೆ ಧನ್ಯವಾದಗಳು. ಮಮ್ಮಿ ಈಸ್ ದ ಬೆಸ್ಟ್ ಎಂದು ಬರೆದುಕೊಂಡಿದ್ದಾರೆ.

  • ಬೀದಿ ಬದಿ ಮಲಗಿರುವವರಿಗೆ ಬೆಚ್ಚನೆಯ ಹೊದಿಕೆ- ಬೆಣ್ಣೆ ನಗರಿ ಜನರ ಮಾನವೀಯತೆ

    ಬೀದಿ ಬದಿ ಮಲಗಿರುವವರಿಗೆ ಬೆಚ್ಚನೆಯ ಹೊದಿಕೆ- ಬೆಣ್ಣೆ ನಗರಿ ಜನರ ಮಾನವೀಯತೆ

    ದಾವಣಗೆರೆ: ಎಷ್ಟೋ ಜನಕ್ಕೆ ಇರೋಕೆ ಮನೆ ಇಲ್ಲದೇ, ಚಳಿಯಿಂದ ತಪ್ಪಿಸಿಕೊಳ್ಳಲು ಬೆಚ್ಚನೆ ಹೊದಿಕೆ ಇಲ್ಲದೇ ಬೀದಿ ಬದಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇಂತಹ ನಿರಾಶ್ರಿತರಿಗೆ ದಾವಣಗೆರೆಯ ಜನ ಬೆಚ್ಚನೆಯ ಹೊದಿಕೆಯನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.

    ನಗರದ ಇನ್ನರ್ ವೀಲ್ ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಭಿಕ್ಷುಕರಿಗೆ ಮೆತ್ತನೆಯ ಹೊದಿಕೆ ನೀಡಿ ಮಾನವೀಯತೆ ಮೆರೆದಿದಿದ್ದಾರೆ. ದಾವಣಗೆರೆಯಲ್ಲಿ ಇತ್ತೀಚಿಗೆ ಚಳಿ ಜಾಸ್ತಿಯಾಗಿದ್ದು, ಭಿಕ್ಷುಕರು ಸರಿಯಾಗಿ ಹೊದಿಕೆ ಇಲ್ಲದೇ ಪ್ರತಿನಿತ್ಯ ಚಳಿಯಲ್ಲಿ ನರಕ ಯಾತನೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಇನ್ನರ್ ವೀಲ್, ರೋಟರಿ ಸಂಸ್ಥೆಯ ಸದಸ್ಯರು ಹೊದಿಕೆ ನೀಡಿದ್ದಾರೆ.

    ಸಂಸ್ಥೆಯ ಸದಸ್ಯರು ದಾವಣಗೆರೆ ವಿವಿಧ ಕಡೆ ಸಂಚರಿಸಿ ಚಳಿಯಲ್ಲಿ ನಡುಗುತ್ತಿದ್ದ ಭಿಕ್ಷುಕರಿಗೆ ಬ್ಲಾಂಕೇಟ್ ಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ನೂರಾರು ಜನ ಭಿಕ್ಷುಕರಿಗೆ ಸಂಸ್ಥೆಯ ಸದಸ್ಯರು ಹೊದಿಕೆ ನೀಡಿದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಬರ್ತ್ ಡೇ ಆಚರಿಸಿಕೊಂಡು ವಿವಾದಕ್ಕೀಡಾಗಿದ್ದ ಶಾಸಕರಿಂದ ಮತ್ತೊಂದು ಎಡವಟ್ಟು

    ಬರ್ತ್ ಡೇ ಆಚರಿಸಿಕೊಂಡು ವಿವಾದಕ್ಕೀಡಾಗಿದ್ದ ಶಾಸಕರಿಂದ ಮತ್ತೊಂದು ಎಡವಟ್ಟು

    ಬೆಂಗಳೂರು: ಯೋಧರನ್ನು ಕಳೆದುಕೊಂಡು ಇಡೀ ದೇಶ ಮರುಗುತ್ತಿದ್ದ ವೇಳೆಯಲ್ಲೇ ಶಾಂತಿನಗರ ಶಾಸಕ ಹ್ಯಾರಿಸ್ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ವಿವಾದಕ್ಕೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಆರೋಪ ಅವರ ವಿರುದ್ಧ ಕೇಳಿಬಂದಿದೆ.

    ಹೌದು. ಶಾಸಕ ಎನ್ ಎ ಹ್ಯಾರಿಸ್ ಈಗ ತಮ್ಮ ಜನ್ಮದಿನಕ್ಕಾಗಿ ಸರ್ಕಾರಿ ಶಾಲೆಯ ಕಟ್ಟಡವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪಕ್ಕೆ ಸಿಲುಕಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಶಾಸಕರು ತಮ್ಮ ಹುಟ್ಟುಹಬ್ಬಕ್ಕಾಗಿ ಕ್ಷೇತ್ರದ ಮತದಾರರಿಗೆ ರಾತ್ರೋರಾತ್ರಿ ಕಂಬಳಿಗಳನ್ನು ವಿತರಣೆ ಮಾಡಿದ್ರು. ಆದರೆ ಈ ಕಂಬಳಿಗಳನ್ನು ಅವರ ಕ್ಷೇತ್ರದಲ್ಲಿ ಬರುವ ಜೋಗುಪಾಳ್ಯದಲ್ಲಿರುವ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶೇಖರಣೆ ಮಾಡಿಟ್ಟಿದ್ದರು.

    ಶಾಲೆಯ ಎರಡು ಕೊಠಡಿಗಳಲ್ಲಿ ಈ ಕಂಬಳಿಗಳ ರಾಶಿ ಇಡಲಾಗಿತ್ತು. ಇದರಿಂದ ಎರಡು ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ಕೊಠಡಿಯಿಲ್ಲದೆ ಪಾಠಕ್ಕೆ ತೊಂದರೆಯಾಗಿದೆ. ಸಾಲದ್ದಕ್ಕೆ ರಾತ್ರಿ ವೇಳೆಯಲ್ಲೂ ಕ್ಷೇತ್ರದ ಮತದಾರರಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ಶಾಲೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

    ಇದೇ ಶಾಲೆಗೆ ಅಂಟಿಕೊಂಡಿರುವ ರಸ್ತೆಗೆ ಫುಟ್ ಪಾತ್ ಇಲ್ಲ. ಮಕ್ಕಳು ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕಾಗಿದೆ. ಜೊತೆಗೆ ಶಾಲೆಯ ಎದುರೇ ಕಸದ ರಾಶಿ ಸದಾ ಬಿದ್ದಿರುತ್ತದೆ. ಇವೆಲ್ಲ ಸರಿ ಮಾಡದ ಶಾಸಕರು ತಮ್ಮ ಸ್ವಾರ್ಥಕ್ಕಾಗಿ ಶಾಲೆಯನ್ನೆ ದುರ್ಬಳಕೆ ಮಾಡಿಕೊಳ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

    ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪ್ರೇಮಿಗಳ ದಿನದಂದೇ ಉಗ್ರನ ಆತ್ಮಾಹುತಿ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಇಡೀ ದೇಶ ದುಃಖದಲ್ಲಿ ಮುಳುಗಿದ್ದಾಗ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಶಾಂತಿನಗರದ ಬಸ್ ನಿಲ್ದಾಣದಲ್ಲಿ ಅಬ್ಬರದ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಿ ವಿವಾದಕ್ಕೆ ಗುರಿಯಾಗಿದ್ರು. ಈ ವಿವಾದ ಮರೆಯಾಗುವ ಮುನ್ನವೇ ಇದೀಗ ಮತ್ತೊಂದು ವಿವಾದ ಶಾಸಕರನ್ನು ಸುತ್ತಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇರಳ ನಿರಾಶ್ರಿತರಿಗೆ ಹೊದಿಕೆ ಕೊಟ್ಟು ಹೀರೋ ಆದ ಮಧ್ಯಪ್ರದೇಶದ ಬಡವ್ಯಾಪಾರಿ

    ಕೇರಳ ನಿರಾಶ್ರಿತರಿಗೆ ಹೊದಿಕೆ ಕೊಟ್ಟು ಹೀರೋ ಆದ ಮಧ್ಯಪ್ರದೇಶದ ಬಡವ್ಯಾಪಾರಿ

    ತಿರುವನಂತಪುರಂ: ಕಂಡು ಕೇಳರಿಯದ ಮಳೆಗೆ ದೇವರನಾಡು ಕೇರಳ ತತ್ತರಿಸಿ ಹೋಗಿದ್ದು, ತನ್ನ ಪ್ರಾಣದ ಹಂಗು ತೊರೆದು ಪುಟ್ಟ ಕಂದಮ್ಮನನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಿಸಿ ಸುದ್ದಿಯಾದ ಬೆನ್ನಲ್ಲೇ ಇದೀಗ ಬಡ ವ್ಯಾಪಾರಿಯೊಬ್ಬರು ಮಾನವೀಯತೆ ಮೆರೆದು ಹೀರೋ ಆಗಿದ್ದಾರೆ.

    ಹೌದು. ಮಧ್ಯಪ್ರದೇಶ ಮೂಲದ ಬಡ ವ್ಯಾಪಾರಿ ವಿಷ್ಣು ಕಚ್ಚಾವ ಅಲ್ಲಿನ ನಿರಾಶ್ರಿತರಿಗೆ ಹೊದಿಕೆಗಳನ್ನು ನೀಡುವ ಮೂಲಕ ಹೀರೋ ಆಗಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವಿಷ್ಣು ಕೇರಳದಲ್ಲಿ ಕೆಲದಿನಗಳಿಂದ ಬ್ಲಾಂಕೆಟ್ ಮಾರಾಟ ಮಾಡುತ್ತಿದ್ದರು. ಹಾಗೆಯೇ ಬ್ಲಾಂಕೆಟ್ ಗಳನ್ನು ಮಾರಿ ಜೀವನ ನಡೆಸುತ್ತಿದ್ದ ಇವರು, ಕೇರಳದ ಭಾರೀ ಮಳೆಯನ್ನು ಕಂಡು ಆತಂಕಕ್ಕೀಡಾಗಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮಳೆಯಿಂದಾದ ಅನಾಹುತಗಳನ್ನು ಕಣ್ಣಾರೆ ಕಂಡಿದ್ದರು. ಇದರಿಂದ ಜನರ ಕಷ್ಟವನ್ನು ಅರಿತ ವಿಷ್ಣು ತನ್ನಲ್ಲಿರುವ 50 ಬ್ಲಾಂಕೆಟ್ ಗಳನ್ನು ನಿರಾಶ್ರಿತರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ತನ್ನ ಬಳಿಯಿರುವ ಎಲ್ಲಾ ಹೊದಿಕೆಗಳನ್ನು ಕಣ್ಣೂರು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ. ಡಿಸಿ ಅದನ್ನು ನಿರಾಶ್ರಿತರಿಗೆ ನೀಡಿದ್ದಾರೆ. ಇದನ್ನೂ ಓದಿ: ಪ್ರಾಣವನ್ನು ಲೆಕ್ಕಿಸದೇ ಮಗುವನ್ನು ರಕ್ಷಿಸೋದೇ ಗುರಿಯಾಗಿತ್ತು: ಎನ್‍ಡಿಆರ್‌ಎಫ್ ಸಿಬ್ಬಂದಿ

    ಮೂಲತಃ ಮಧ್ಯಪ್ರದೇಶದವರಾಗಿರೋ ವಿಷ್ಣು ಕಳೆದ 12 ವರ್ಷಗಳಿಂದ ಕೇರಳದಲ್ಲಿ ನೆಲೆಸಿದ್ದಾರೆ. ಅಲ್ಲದೇ ಕೇರಳ ನನ್ನ ಎರಡನೆಯ ಮನೆ ಅಂತ ಹೇಳುತ್ತಿದ್ದಾರೆ. ಇಲ್ಲಿ ಬಂದು ವಾಸ ಮಾಡಿದ ಬಳಿಕ ಕೇರಳದಲ್ಲಿ ಇಂತಹ ಘಟನೆ ನೋಡಿರಲಿಲ್ಲ. ನೆರೆ ಪ್ರವಾಹದಿಂದ ಇಲ್ಲಿನ ಜನರ ಸ್ಥಿತಿಯನ್ನು ನನ್ನಿಂದ ನೋಡಲಾಗಿಲ್ಲ. ಹೀಗಾಗಿ ನನ್ನಲ್ಲಿ ಏನಿದೆಯೋ ಅದನ್ನು ದಾನ ಮಾಡಿದ್ದೇನೆ ಅಂತ ಹೇಳಿದ್ದಾರೆ.

    ಸದ್ಯ ವಿಷ್ಣು ರಾತ್ರೋರಾತ್ರಿ ಬಡ ವ್ಯಾಪಾರಿ ಸ್ಟಾರ್ ಆಗಿದ್ದಾರೆ. ಅಲ್ಲದೇ ತಾನು ಮಾನವೀಯತೆ ಮೆರೆದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರೋದನ್ನು ಕಂಡು ಅವರು ಹೌಹಾರಿದ್ದಾರೆ. ಈ ವಿಡಿಯೋ ನೋಡಿದ್ರೆ ನನ್ನ ಪತ್ನಿ ತುಂಬಾ ಖುಷಿ ಪಡುತ್ತಾಳೆ ಅಂತಾನೂ ಹೇಳಿದ್ದಾರೆ.

    ಈ ಮೊದಲು ಎನ್‍ಡಿಆರ್‍ಎಫ್ ತಂಡ ಕೇರಳದ ಇಡುಕ್ಕಿ, ಅಲಪುಜಾ, ಎರ್ನಾಕುಲಂ ಮತ್ತು ತ್ರಿಶೂರ್ ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಇಡುಕ್ಕಿ ಪ್ರದೇಶದ ಸೇತುವೆಯೊಂದರ ಬಳಿ ಪುಟ್ಟ ಮಗುವಿನೊಂದಿಗೆ ವ್ಯಕ್ತಿಯೊಬ್ಬರು ರಕ್ಷಣೆಗಾಗಿ ಕಾದು ಕುಳೀತಿದ್ದರು. ಇದನ್ನು ಕಂಡ ಸಿಬ್ಬಂದಿ ಹರಿಯುತ್ತಿದ್ದ ರಭಸದ ನೀರನ್ನು ಲೆಕ್ಕಿಸದೇ ಸೇತುವೆ ದಾಟಿ ಮಗುವಿನೊಂದಿಗೆ ಓಡಿ ಬಂದಿದ್ದಾರೆ. ಈ ವೇಳೆ ಮಗುವಿನ ತಂದೆಯೂ ಕೂಡ ಸಿಬ್ಬಂದಿ ಹಿಂದೆಯೇ ಓಡಿ ಹೋಗಿದ್ದಾರೆ. ಒಟ್ಟಿನಲ್ಲಿ ಅಧಿಕಾರಿಯೊಬ್ಬರು ಪ್ರವಾಹದ ಮಧ್ಯೆಯೇ ಮಗುವನ್ನು ಕಾಪಾಡಿದ್ದು ಭಾರೀ ಸುದ್ದಿಯಾಗಿತ್ತು. ಅಧಿಕಾರಿಯ ಈ ಮಹಾನ್ ಕಾರ್ಯಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಅಲ್ಲದೇ ಆ ವಿಡಿಯೋ ಕೂಡ ವೈರಲ್ ಆಗಿತ್ತು.

    ಒಟ್ಟಿನಲ್ಲಿ ಹಲವು ದಿನಗಳಿಂದ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಲ್ಲಿನ ಜನಜೀವನ ಅಕ್ಷರಶಃ ನಲುಗಿ ಹೋಗಿದೆ. ಆಹಾರ, ನೀರಿಗೂ ಅಲ್ಲಿನ ಜನ ಪರದಾಡುವಂತಜಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಅಲ್ಲಲ್ಲಿ ಕೆಲವೊಂದು ಮಾನವೀಯತೆ ಮೆರೆದ ಘಟನೆಗಳು ಬೆಳಕಿಗೆ ಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಕಂಬಳಿ ಭಾಗ್ಯ!

    ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಕಂಬಳಿ ಭಾಗ್ಯ!

    ಬಳ್ಳಾರಿ: ರಾಜ್ಯದ ಜನತೆಗೆ ಭಾಗ್ಯಗಳ ಮೇಲೆ ಭಾಗ್ಯಗಳನ್ನ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಮತ್ತೊಂದು ಹೊಸ ಭ್ಯಾಗ್ಯವನ್ನ ನೀಡಲು ಮುಂದಾಗಿದೆ. ಇನ್ನು ಮುಂದೆ ಬಿಪಿ.ಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಗಳಿಗೆ ಕಂಬಳಿ ಭಾಗ್ಯ ದೊರೆಯಲಿದೆ.

    ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಹಾಲಮತ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಾರಿಗೆ ಸಚಿವ ಹೆಚ್ ಎಂ ರೇವಣ್ಣ ಈ ವಿಷಯವನ್ನ ಬಹಿಂಗಪಡಿಸಿದ್ದಾರೆ.

    ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಕಂಬಳಿ ತಯಾರಿಕೆಯ ಮೇಲೆ ಅವಲಂಬನೆಯಾಗಿರುವ ಕುಟುಂಬಗಳು ಸಂಕಷ್ಟದಲ್ಲಿದ್ದು, ಈ ಯೋಜನೆ ಜಾರಿಯಿಂದ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಅಲ್ಲದೆ ಕಂಬಳಿ ಬಳಕೆ ಮಾಡುವುದರಿಂದ ಮನುಷ್ಯ ಚಳಿ, ಮಳೆ, ಗಾಳಿಯಿಂದ ರಕ್ಷಣೆ ಪಡೆಯಬಹುದೆಂದು ತಿಳಿಸಿದ್ರು.