Tag: Blood lunar eclipse

  • ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ – ಸುದೀರ್ಘ ಚಂದ್ರಗ್ರಹಣ ಮುಕ್ತಾಯ

    ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ – ಸುದೀರ್ಘ ಚಂದ್ರಗ್ರಹಣ ಮುಕ್ತಾಯ

    ನವದೆಹಲಿ: ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ ಆಗಿದ್ದು, ಸುದೀರ್ಘ ಚಂದ್ರಗ್ರಹಣ (Lunar Eclipse)  ಮುಕ್ತಾಯವಾಗಿದೆ.

    ಆಗಸದಲ್ಲಿ ಹಾಲ್ಬೆಳದಿಂಗಳಂತೆ ಕಾಣುತ್ತಿದ್ದ ಚಂದಿರನಿಗೆ ಭಾನುವಾರ (ಸೆ.7) ರಾತ್ರಿ ಗ್ರಹಣ ಹಿಡಿದಿತ್ತು. ಬಾನಂಗಳದಲ್ಲಿ ಚಂದಿರ ಗ್ರಹಣದಿಂದ ಬಂಧಿ ಆಗಿದ್ದ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಅದೇ ರೀತಿ ಚಂದ್ರನ ಹೆಚ್ಚಿನ ಭಾಗ ಭೂಮಿಯ ನೆರಳು ಆವರಿಸಿದಾಗ ಚಂದ್ರ ಕೆಂಪು ಬಣ್ಣದಲ್ಲಿ ಕಾಣಿಸಿದ. ಈ ಮೂಲಕ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಿದೆ.ಇದನ್ನೂ ಓದಿ: ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ರಾತ್ರಿ 9:57 ನಿಮಿಷಕ್ಕೆ ಸರಿಯಾಗಿ ಆರಂಭವಾದ ಚಂದ್ರಗ್ರಹಣ ಮೊದಲು ಸೈಪ್ರಸ್‌ನಲ್ಲಿ ಗೋಚರಿಸಿತು. ಇನ್ನೂ ಭಾರತದಲ್ಲಿ ಮೊದಲು ಲಡಾಖ್‌ನಲ್ಲಿ ಗೋಚರಿಸಿತು. ಟರ್ಕಿ, ಸೈಪ್ರಸ್, ಇಂಡೋನೇಷ್ಯಾದ ಜಕಾರ್ತಾ, ಆಸ್ಟ್ರೇಲಿಯಾದ ಸಿಡ್ನಿ, ಚೀನಾದ ಬೀಜಿಂಗ್, ದುಬೈನಲ್ಲಿ ಶ್ವೇತ ವರ್ಣದ ಚಂದಿರ ಕೆಂಬಣ್ಣದಲ್ಲಿ ಗೋಚರಿಸಿತು.

    ಆಕಾಶದಲ್ಲಿ ಹುಣ್ಣಿಮೆ ಚಂದಿರನೊಡನೆ ನೆರಳು ಬೆಳಕಿನ ಆಟ ನಡೆದಿತ್ತು. ಬಾನಂಗಳ ಬೆಳಗುವ ಚಂದ್ರನನ್ನು ಭೂಮಿಯ ನೆರಳು ಆವರಿಸಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಂದ್ರಗ್ರಹಣ ಉತ್ತುಂಗ ಸ್ಥಿತಿ ತಲುಪಿತ್ತು. ಆಗಸದಲ್ಲಿ ಚಂದ್ರ ರಕ್ತರೂಪಿಯಾಗಿ ಕಂಗೊಳಿಸಿದ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಚಂದ್ರಗ್ರಹಣವನ್ನು ಜನರು ಕಣ್ತುಂಬಿಕೊಂಡರು.

    ಇನ್ನೂ ಕರ್ನಾಟಕದಲ್ಲಿಯೂ ಹಲವೆಡೆ ರಕ್ತರೂಪಿ ಚಂದ್ರನ ಗೋಚರವಾಯಿತು. ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಚಂದ್ರಗ್ರಹಣ ಆರಂಭ ವೇಳೆ ಕೆಲಕಾಲ ಗ್ರಹಣ ಗೋಚರಿಸಲಿಲ್ಲ. ಸಮಯ ಕಳೆದಂತೆ ಮೋಡ ಸರಿದಾಗ ಚಂದ್ರಗ್ರಹಣ ಸ್ಪಷ್ಟವಾಗಿ ಗೋಚರಿಸಿತು.ಇದನ್ನೂ ಓದಿ: ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    ಬೆಂಗಳೂರು:
    ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು, ವಯೋವೃದ್ಧರು. ಕುಟುಂಬ ಸಮೇತ ಆಗಮಿಸಿ ತಾರಾಲಯದಲ್ಲಿ ಕಣ್ತುಂಬಿಕೊಂಡರು. 4 ಟೆಲಿಸ್ಕೋಪ್, 1 ಎಲ್‌ಸಿಡಿ ವ್ಯವಸ್ಥೆ ಮಾಡಲಾಗಿತ್ತು. ಮತ್ತೊಂದ್ಕಡೆ ಕೋರಮಂಗಲದ ಭಾರತೀಯ ಖಗೋಳ ಭೌತ ವಿಜ್ಞಾನ ಸಂಸ್ಥೆಯಲ್ಲೂ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಗ್ರಹಣ ವೀಕ್ಷಣೆ ಮಾಡಿ ಖಗೋಳ ಕೌತುಕ ಕಣ್ತುಂಬಿಕೊಂಡರು.

    ದಾವಣಗೆರೆ:
    ಬೆಂಗಳೂರು ಜೊತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಚಂದ್ರಗ್ರಹಣವನ್ನು ಜನರು ಕಣ್ತುಂಬಿಕೊಂಡಿದ್ದಾರೆ. ಬಾನಂಗಳದ ವಿಸ್ಮಯವನ್ನು ಬರಿಗಣ್ಣಿನಲ್ಲಿ ಕಂಡು ಸಂತಸಗೊಂಡಿದ್ದಾರೆ. ದಾವಣಗೆರೆಯಲ್ಲಿ ಮನೆ ಮನೆ ವಿಜ್ಞಾನ ದಾಸೋಹ ಹಾಗೂ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಯಿಂದ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಇನ್ನೂ ದಾವಣಗೆರೆಯ ಶ್ರೀರಾಘವೇಂದ್ರ ಮಠದಲ್ಲಿ ಗ್ರಹಣ ಕಾಲದಲ್ಲಿ ಗ್ರಹಣ ಶಾಂತಿ ಹೋಮ ನೆರವೇರಿಸಲಾಯ್ತು. ದಾವಣಗೆರೆ ನಗರದ ದೀಕ್ಷಿತ್ ರಸ್ತೆಯಲ್ಲಿನ ರಾಘವೇಂದ್ರ ಮಠದಲ್ಲಿ ರಾಯರ ಬೃಂದಾವನಕ್ಕೆ ನಿರಂತರ ಜಲಾಭಿಷೇಕ ಮಾಡಲಾಯ್ತು. ನೂರಾರು ಭಕ್ತರು ಪೂಜೆಯಲ್ಲಿ ಭಾಗಿ ಆಗಿದ್ದರು.

    ಧಾರವಾಡ:
    ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಚಂದ್ರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣ ಚಂದ್ರಗ್ರಹಣ ಗೋಚರವಾಗಿಲ್ಲ. ಗ್ರಹಣ ವೀಕ್ಷಣೆಗೆ ಕಾಯ್ದಿದ್ದ ಜನರು ನಿರಾಸೆ ಉಂಟಾಯ್ತು.ಇದನ್ನೂ ಓದಿ: Video | ಸೂರ್ಯ-ಭೂಮಿ-ಚಂದ್ರ ಒಂದೇ ಸಾಲಿನಲ್ಲಿ ಬರಲು ಕಾರಣವೇನು?

    ಚಿಕ್ಕಮಗಳೂರು:
    ಇನ್ನು ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೇವಾಲಯಗಳಿಗೆ ದಿಗ್ಬಂಧನ ಹಾಕಲಾಗಿತ್ತು. ಆದರೆ ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನಿರಂತರ ಜಲಾಭಿಷೇಕ ಮಾಡಲಾಗಿತ್ತು. ಗ್ರಹಣದ ಆರಂಭದಿಂದ ಅಂತ್ಯದವರೆಗೂ ಅನ್ನಪೂಣೇಶ್ವರಿಗೆ ವಿಶೇಷ ಪೂಜೆ ಮತ್ತು ಜಲಾಭಿಷೇಕ ಮಾಡಲಾಯಿತು.

    ಉತ್ತರ ಕನ್ನಡ:
    ಗ್ರಹಣ ಕಾಲದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗ್ರಹಣ ಕಾಲದಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. ಗ್ರಹಣ ಮೋಕ್ಷ ಕಾಲದವರೆಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು,.

    ರಾಯಚೂರು:
    ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ಗ್ರಾಮಸ್ಥರು ಭಜನೆ ಮೊರೆ ಹೋಗಿದ್ದರು. ಆಂಜನೇಯ ದೇವಾಲಯದಲ್ಲಿ ಕೊಣಚಪ್ಪಳಿ ಗ್ರಾಮಸ್ಥರು ಲೋಕದ ಒಳಿತಿಗಾಗಿ ಭಜನೆ ಕೈಗೊಂಡರು.ಇದನ್ನೂ ಓದಿ: Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

    ಬಾಗಲಕೋಟೆ:
    ಬಾಗಲಕೋಟೆಯ ಬಾದಾಮಿಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮಹಾಕೂಟದಲ್ಲಿ ಚಂದ್ರಗ್ರಹಣ ಪ್ರಯುಕ್ತ ನೀರಿನಲ್ಲಿ ಧ್ಯಾನ ಮಾಡಲಾಯಿತು. ಪುಷ್ಕರಣಿಯಲ್ಲಿ ಸಾವಿರಾರು ಜನರು, ಸಾಧು ಸಂತರು ಧ್ಯಾನ ಮಾಡಿದರು.

    ಇನ್ನುಳಿದಂತೆ ದೆಹಲಿ, ಮುಂಬೈ, ಕೋಲ್ಕತ್ತಾ, ಯುಪಿಯಲ್ಲೂ ಚಂದ್ರಗ್ರಹಣ ಗೋಚರಿಸಿತು. ಕೆಂಪು ವರ್ಣಕ್ಕೆ ತಿರುಗಿದ ಹುಣ್ಣಿಮೆ ಚಂದಿರನನ್ನು ಜನರು ಕಣ್ತುಂಬಿಕೊಂಡರು. ಒಟ್ಟಾರೆ ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣ ಮುಕ್ತಾಯವಾಗಿದೆ. ರಾತ್ರಿ 9:57ಕ್ಕೆ ಆರಂಭವಾದ ಗ್ರಹಣ ಮಧ್ಯರಾತ್ರಿ 1:26ಕ್ಕೆ ಅಂತ್ಯವಾಯಿತು. ಬರೋಬ್ಬರಿ ಮೂರೂವರೆ ಗಂಟೆಗಳ ಕಾಲ ಗ್ರಹಣ ಸಂಭವಿಸಿತು. ಗ್ರಹಣ ಮೋಕ್ಷ ಬಳಿಕ ದೇವಾಲಯಗಳಲ್ಲಿ ಶುದ್ಧಿ ಕಾರ್ಯ ನಡೆಸಲಾಗುತ್ತಿದೆ.ಇದನ್ನೂ ಓದಿ: Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

  • ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    – ಬೆಂಗ್ಳೂರಿನ ಬಹುತೇಕ ದೇವಸ್ಥಾನಗಳ ದರ್ಶನ ಸಮಯದಲ್ಲಿ ಬದಲಾವಣೆ

    ಬೆಂಗಳೂರು: ಇದೇ ಭಾನುವಾರ (ಸೆ.7) ರಕ್ತಚಂದ್ರಗ್ರಹಣ ಸಂಭವಿಸಲಿದ್ದು, ನಗರದ ಗವಿಗಂಗಾಧರ ದೇವಾಲಯ (Gavi Gangadhareshwara Temple) ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ.

    ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್‌ ಅವರು ಮಾತನಾಡಿ, ಸೂರ್ಯಗ್ರಹಣವಾದರೆ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಬಂದ್ ಮಾಡುತ್ತಿದ್ದೆವು. ಆದರೆ ಚಂದ್ರಗ್ರಹಣದಲ್ಲಿ ಹಾಗೇ ಮಾಡಲು ಬರುವುದಿಲ್ಲ. ಗ್ರಹಣಕ್ಕೂ ಮೊದಲು ಸುಮಾರು 6 ಗಂಟೆ ದೇವಾಲಯ ಬಂದ್ ಮಾಡಬೇಕಾಗುತ್ತದೆ. ಹೀಗಾಗಿ ಬೆಳಗ್ಗೆ ಗಂಗಾಧರನಿಗೆ ಕ್ಷೀರ ನೈವೇದ್ಯ ನೀಡುತ್ತೇವೆ. ಕ್ಷೀರ ಬಿಟ್ಟು ಬೇರೆ ಪ್ರಸಾದ ನೀಡಲ್ಲ. ಬೆಳಗ್ಗೆ 11 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಬಳಿಕ ಬಾಗಿಲು ಬಂದ್ ಮಾಡಲಾಗುತ್ತದೆ. ಗ್ರಹಣ ಮೋಕ್ಷಗೊಂಡ ಕೂಡಲೇ ಶುದ್ಧೀಕರಣ ಮಾಡಲು ಆಗಲ್ಲ, ಮರುದಿನ ಬೆಳಗ್ಗೆ ಶುದ್ಧೀಕರಣ ಮಾಡಿದ ಬಳಿಕ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸೆಪ್ಟೆಂಬರ್ 7, 8 ರಂದು ಸಂಭವಿಸಲಿದೆ ಚಂದ್ರಗ್ರಹಣ

    ಇನ್ನೂ ರಕ್ತಚಂದ್ರಗ್ರಹಣ ಹಿನ್ನೆಲೆ ನಗರದ ಬಹುತೇಕ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆಯಾಗಲಿದೆ. ಯಾವ ದೇವಸ್ಥಾನ, ದರ್ಶನ ಸಮಯ ಯಾವಾಗ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

    ಬನಶಂಕರಿ ದೇವಾಲಯ:
    ಬನಶಂಕರಿ ದೇವಿ ಜನ್ಮೋತ್ಸವದ ದಿನವೇ ರಕ್ತಚಂದ್ರಗ್ರಹಣ ಸಂಭವಿಸುತ್ತಿದೆ. ಗ್ರಹಣದ ದಿನ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತದೆ. ಜೊತೆಗೆ ದೇವಿಯ ಜನ್ಮೋತ್ಸವವಿರುವುದರಿಂದ ಚಂಡಿಕಾ ಹೋಮ ನಡೆಸಲಾಗುತ್ತದೆ. ಸಂಜೆ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದ್ದು, ಬಳಿಕ 4:30ಕ್ಕೆ ದೇವಾಲಯ ಬಂದ್ ಮಾಡಲಾಗುತ್ತದೆ. ಮರುದಿನ ಬೆಳಗ್ಗೆ 6 ಗಂಟೆಗೆ ದೇವಾಲಯ ಹಾಗೂ ಆವರಣ ಶುದ್ಧೀಕರಣ ಮಾಡಲಾಗುತ್ತದೆ. ನಂತರ ಪೂಜೆ ಮಾಡಿ, ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ.

    ಗಾಳಿ ಆಂಜನೇಯ ದೇವಸ್ಥಾನ:
    ಗ್ರಹಣದ ದಿನ ಮಧ್ಯಾಹ್ನ 3 ಗಂಟೆಗೆ ದೇವಾಲಯವನ್ನು ಬಂದ್ ಮಾಡಲಾಗುತ್ತದೆ. ಹೀಗಾಗಿ 2:30ರ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. 2:30ರಿಂದ 3ಗಂಟೆವರೆಗೆ ದೇವಾಲಯದ ಒಳಗೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಬಳಿಕ ಬೆಳಗ್ಗೆ ಶಾಂತಿ ಪೂಜೆ ಮಾಡಿ, ಎಂದಿನಂತೆ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ.

    ಕಾಡು ಮಲ್ಲೇಶ್ವರ ದೇವಾಲಯ:
    ಗ್ರಹಣದ ದಿನ ಬೆಳಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಮಧ್ಯಾಹ್ನ 2:30ವರೆಗೆ ಮಾತ್ರ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ. ಗ್ರಹಣದ ಸಮಯದಲ್ಲಿ ಎಲ್ಲಾ ದೇವರುಗಳ ಮೇಲೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಮರುದಿನ ಬೆಳಿಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಶುದ್ಧೀಕರಣ ಮಾಡಿ, ನಂತರ ಗ್ರಹಣ ಶಾಂತಿಗಾಗಿ ರುದ್ರ ಹೋಮ, ಪ್ರಸಾದ ಸೇವೆ ಇರಲಿದೆ. ನಂತರ ದರ್ಶನಕ್ಕೆ ಅವಕಾಶವಿರುತ್ತದೆ.ಇದನ್ನೂ ಓದಿ: ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

  • ರಕ್ತ ಚಂದ್ರಗ್ರಹಣ

    ರಕ್ತ ಚಂದ್ರಗ್ರಹಣ

    https://www.youtube.com/watch?v=tqwGF6hB1EU

  • ಸೋಮವಾರ ರಕ್ತ ಚಂದ್ರಗ್ರಹಣ: ವಿಶೇಷತೆ ಏನು? ಅವಧಿ ಎಷ್ಟು? ಭಾರತಕ್ಕೆ ಎಫೆಕ್ಟ್ ಆಗುತ್ತಾ?

    ಸೋಮವಾರ ರಕ್ತ ಚಂದ್ರಗ್ರಹಣ: ವಿಶೇಷತೆ ಏನು? ಅವಧಿ ಎಷ್ಟು? ಭಾರತಕ್ಕೆ ಎಫೆಕ್ಟ್ ಆಗುತ್ತಾ?

    ಬೆಂಗಳೂರು: ಮೊನ್ನೆಯಷ್ಟೇ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಿತ್ತು. ಈಗ ಚಂದ್ರಗ್ರಹಣ ಬಂದಿದೆ. ಅದು ಅಂತಿಂಥ ಚಂದ್ರಗ್ರಹಣವಲ್ಲ. ಸೂಪರ್ ಬ್ಲಡ್ ವೂಲ್ಫ್ ಮೂನ್. ಅಂದ್ರೆ ರಕ್ತಚಂದ್ರಗ್ರಹಣ. ಹೆಸರಲ್ಲೇ ಭಯಾನಕತೆ ಹೊಂದಿರುವ ರಕ್ತಚಂದ್ರಗ್ರಹಣದ ಸೋಮವಾರ ನಡೆಯಲಿದೆ.

    ಪ್ರಶ್ನೆಗಳ ಸಾಗರದಂತಿರುವ ಬ್ರಹ್ಮಾಂಡದಲ್ಲಿ ನಡೆಯೋ ಪ್ರತಿಯೊಂದು ಪ್ರಕ್ರಿಯೆಯೂ ಮನುಷ್ಯನಿಗೆ ಕುತೂಹಲ ಹುಟ್ಟಿಸುತ್ತದೆ. ಕಣ್ಣರಳಿಸಿ ನೋಡುವಂತೆ ಮಾಡುತ್ತದೆ. ಇದರ ಜೊತೆಗೆ ಸಣ್ಣ ಆತಂಕವನ್ನೂ ಭಯವನ್ನೂ ಹುಟ್ಟಿಸುತ್ತದೆ. ಕೆಲವೊಂದು ಪ್ರಕ್ರಿಯೆಗಳ ನೈಜ ಕಾರಣವನ್ನ ಮನುಷ್ಯ ಕಾಲಾಂತರದಲ್ಲಿ ಅರ್ಥಮಾಡಿಕೊಳ್ಳುತ್ತಾ ಬಂದಿದ್ದಾನೆ. ಆದರೆ ಇನ್ನು ಕೆಲವು ಆಕಾಶದಲ್ಲಿ ನಡೆಯುವ ವಿದ್ಯಮಾನಗಳ ಇವತ್ತಿಗೂ ಭಯ ಹುಟ್ಟಿಸುತ್ತದೆ.

    ಅಮಾವಾಸ್ಯೆ ಸೂರ್ಯ ಗ್ರಹಣ ಕಳೆದು ಹುಣ್ಣಿಮೆಗೆ ಈಗ ಚಂದ್ರ ಗ್ರಹಣ ಬಂದಿದೆ. ಇದು ಸಾಮಾನ್ಯವಾದ ಚಂದ್ರಗ್ರಹಣವಾದ್ರೆ ಯಾರೂ ಭಯಪಡುತ್ತಿರಲಿಲ್ಲ. ಆದ್ರೆ ಇದನ್ನ ವಿಜ್ಞಾನಿಗಳು ರಕ್ತಚಂದ್ರಗ್ರಹಣ ಅಂತಾನೆ ಕರೆದಿದ್ದಾರೆ. ಚಂದ್ರ ಗ್ರಹಣದ ಸಮಯದಲ್ಲಿ ಕಂಡು ಕೆಂಪು ಬಣ್ಣದಲ್ಲಿ ಗೋಚರವಾಗಲಿದ್ದಾನೆ. 2018ರಲ್ಲಿಯೂ ಇದೇ ಸಂದರ್ಭದಲ್ಲಿ ಭೂಮಿ ರಕ್ತ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಿತ್ತು.

    ಗ್ರಹಣ ಅವಧಿ:
    ರಕ್ತ ಚಂದ್ರಗ್ರಹಣವು ಭಾರತೀಯ ದಿನಮಾನದ ಪ್ರಕಾರ ಜನವರಿ 21ನೇ ತಾರೀಕು ಸೋಮವಾರ ನಡೆಯಲಿದೆ. ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 8 ಗಂಟೆ 6 ನಿಮಿಷಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆ 18 ನಿಮಿಷಕ್ಕೆ ರಕ್ತ ಚಂದ್ರಗ್ರಹಣವು ಸಮಾಪ್ತಿಯಾಗಲಿದೆ. ಬೆಳಗ್ಗೆ 10 ಗಂಟೆ 11 ನಿಮಿಷದಿಂದ 11 ಗಂಟೆ 13 ನಿಮಿಷದವರೆಗೆ ಅಂದ್ರೆ 62 ನಿಮಿಷಗಳ ಕಾಲ ಚಂದ್ರ ಸಂಪೂರ್ಣ ಗ್ರಹಣಕ್ಕೆ ಒಳಗಾಗಿ ರಕ್ತಾವತಾರದಲ್ಲಿ ಕಾಣಿಸಿಕೊಳ್ಳಲಿದ್ದಾನೆ. ಭಾರತದಲ್ಲಿ ಈ ಸಂದರ್ಭದಲ್ಲಿ ಹಗಲು ಇರೋದ್ರಿಂದ ಎಲ್ಲೂ ಕೂಡ ಸೂಪರ್ ಬ್ಲಡ್ ಮೂನ್ ಗೋಚರವಾಗುವುದಿಲ್ಲ.

    ಈ ಬಾರಿಯ ರಕ್ತಚಂದ್ರಗ್ರಹಣ ಭಾರತದಲ್ಲಿ ಗೋಚರವಾಗದೇ ಇದ್ದರೂ ಭಾರತಕ್ಕೆ ಎಫೆಕ್ಟ್ ಇಲ್ವಾ ಅಂತ ಕೇಳಿದ್ರೆ ಚಂದ್ರ ಇಡೀ ಭೂಮಿಗೆ ಒಬ್ಬನೆ ಎನ್ನುವ ಉತ್ತರವನ್ನ ಜ್ಯೋತಿಷಿಗಳು ನೀಡುತ್ತಾರೆ. ಗ್ರಹಣ ನಡೆಯೋದು ಚಂದ್ರನಿಗೆ. ಅದು ಭೂಮಿಯ ಯಾವ ಭಾಗದಲ್ಲಿ ಗೋಚರವಾದರೂ ಇಡೀ ಭೂಮಿಗೆ ಸಂಚಕಾರ ತರಬಹುದು ಎನ್ನಲಾಗುತ್ತದೆ.

    ಎಲ್ಲಿ ಗ್ರಹಣ ಗೋಚರ?
    ಭಾರತದ ಕಾಲಮಾನದ ಪ್ರಕಾರ ಸೋಮವಾರ ಗ್ರಹಣ ನಡೆಯುತ್ತದೆ. ಗ್ರಹಣ ಗೋಚರವಾಗುವ ಪ್ರದೇಶಗಳಲ್ಲಿ ಆಗಿನ್ನೂ ಭಾನುವಾರ ರಾತ್ರಿಯಾಗಿರುತ್ತದೆ. ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಗ್ರೀನ್‍ಲ್ಯಾಂಡ್, ಐಸ್‍ಲ್ಯಾಂಡ್, ಐರ್ಲೆಂಡ್, ಗ್ರೇಟ್ ಬ್ರಿಟನ್, ನಾರ್ವೆ, ಸ್ವೀಡನ್, ಪೋರ್ಚುಗಲ್ ಹಾಗೂ ಫ್ರಾನ್ಸ್ ಮತ್ತು ಸ್ಪೇನ್‍ನ ಕರಾವಳಿ ಭಾಗಗಳಲ್ಲಿ ರಕ್ತಚಂದ್ರಗ್ರಹಣ ಗೋಚರವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv