Tag: BMW

  • BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ – 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌

    BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ – 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌

    – ದೆಹಲಿಯ ಕರ್ನಾಟಕ ಭವನದಲ್ಲಿ ಊಟ ಮುಗಿಸಿ ಮನೆಗೆ ತೆರಳುವಾಗ ದುರಂತ

    ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ (BMW Car Hit) ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ (Accused) ಬಂಧಿಸಲಾಗಿದೆ.

    ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್‌ ಕೌರ್‌ (Gaganpreet Kaur) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52) (Navjot Singh) ಸಾವನ್ನಪ್ಪಿದ್ದರು.

    ಇಂದು ಮಧ್ಯಾಹ್ನ ಅಪಘಾತ ಮಾಡಿದ ಕಾರು ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಅಪರಾಧ, ನರಹತ್ಯೆ, ಸಾಕ್ಷ್ಯ ನಾಶ ಮತ್ತು ದುಡುಕಿನ ಚಾಲನೆ ಪ್ರಕರಣಗಳನ್ನ ದಾಖಲಿಸಲಾಗಿದೆ. ಇದನ್ನೂ ಓದಿ: BMW ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ

    38 ವರ್ಷ ವಯಸ್ಸಿನ ಗಗನ್‌ಪ್ರೀತ್‌ ಕೌರ್‌ 40 ವರ್ಷ ವಯಸ್ಸಿನ ಪರೀಕ್ಷಿತ್‌ ಮಕ್ಕಡ್‌ ಅವರನ್ನ ವಿವಾಹವಾಗಿದ್ದು, ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದಾರೆ. ಜೊತೆಗೆ ಐಷಾರಾಮಿ ಉತ್ಪನ್ನಗಳ ವ್ಯವಹಾರ ನಡೆಸುತ್ತಿದ್ದಾರೆ. ಅಪಘಾತ ಸಂದರ್ಭದಲ್ಲಿ ಪತಿ ಪರೀಕ್ಷಿತ್‌ ಮಕ್ಕಡ್‌ ಕೂಡ ಇದ್ದರು, ಈ ಕಾರಣಕ್ಕಾಗಿ ಎಫ್‌ಐಆರ್‌ನಲ್ಲಿ ಇಬ್ಬರ ಹೆಸರನ್ನ ಉಲ್ಲೇಖಿಸಲಾಗಿದೆ.

    ಅಪಘಾತ ಸಂಭವಿಸಿದ್ದು ಎಲ್ಲಿ, ಹೇಗೆ?
    ಮೃತ ನವಜೋತ್ ಸಿಂಗ್ ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ತಮ್ಮ ಪತ್ನಿ ಸಂದೀಪ ಕೌರ್ ಜೊತೆಗೆ ಬಾಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದರು. ನಂತರ ಇಬ್ಬರೂ ಆರ್‌.ಕೆ ಪುರಂನಲ್ಲಿರುವ ಕರ್ನಾಟಕ ಭವನದಲ್ಲಿ ಊಟ ಮಾಡಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ನವಜೋತ್‌ ಮತ್ತು ಸಂದೀಪ್ ದಂಪತಿಯನ್ನ ವ್ಯಾನ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಮಗ ಗಗನ್‌ದೀಪ್‌ ಕೂಡ ಜೊತೆಗಿದ್ದರು. ಇದನ್ನೂ ಓದಿ: ʻವಕ್ಫ್ ತಿದ್ದುಪಡಿ ಕಾಯ್ದೆʼಯ ಕೆಲ ಅಂಶಗಳಿಗೆ ಸುಪ್ರೀಂ ತಡೆ; ಒಟ್ಟಾರೆ ಕಾಯ್ದೆ ಕಾನೂನು ಬದ್ಧವಾಗಿದೆ ಎಂದು ಆದೇಶ

    ಪತ್ನಿ ಆರೋಪ ಏನು?
    ನಾನು ಗಗನ್‌ಪ್ರೀತ್‌ಗೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳುತ್ತಲೇ ಇದ್ದೆ. ವ್ಯಾನ್‌ ಚಾಲಕನಿಗೂ ಮನವಿ ಮಾಡಿದೆ. ಆದ್ರೆ ಅಪಘಾತ ಸ್ಥಳದಿಂದ 19 ಕಿಮೀ ದೂರದಲ್ಲಿ ಜಿಟಿಬಿ ನಗರದಲ್ಲಿರುವ ನುಲೈಫ್‌ ಆಸ್ಪತ್ರೆಗೆ ಕರೆದೊಯುವಂತೆ ಆಕೆ ಹೇಳಿದಳು. ಇದರಿಂದಾಗಿ ನನ್ನಪತಿ ಸಾವನ್ನಪ್ಪಿದ್ದಾರೆ ಎಂದು ಮೃತ ನವಜೋತ್‌ ಪತ್ನಿ ಸಂದೀಪ ಕೌರ್ ಹೇಳಿದ್ದಾರೆ. ಇದನ್ನೂ ಓದಿ: ಕೆಲ ವಿಷಯಗಳು ಕ್ರೀಡಾ ಮನೋಭಾವಕ್ಕಿಂತಲೂ ದೊಡ್ಡದು – ಕೈಕುಲುಕದ್ದಕ್ಕೆ ಸೂರ್ಯ ಸ್ಪಷ್ಟನೆ

  • BMW ಕಾರಿನಿಂದ ಇಳಿದು ರಸ್ತೆಯಲ್ಲೇ ಮೂತ್ರ ವಿಸರ್ಜನೆ – ಬಳಿಕ ತಾನೇ ಪೊಲೀಸರಿಗೆ ಶರಣಾದ ಯುವಕ

    BMW ಕಾರಿನಿಂದ ಇಳಿದು ರಸ್ತೆಯಲ್ಲೇ ಮೂತ್ರ ವಿಸರ್ಜನೆ – ಬಳಿಕ ತಾನೇ ಪೊಲೀಸರಿಗೆ ಶರಣಾದ ಯುವಕ

    ಮುಂಬೈ: ಪುಣೆಯ ಟ್ರಾಫಿಕ್ ಜಂಕ್ಷನ್‌ನಲ್ಲಿ (Pune Traffic Junction) ಯುವಕನೊಬ್ಬ ತನ್ನ ಬಿಎಂಡಬ್ಲ್ಯೂ ಕಾರಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಯುವಕ ವಿಡಿಯೋ ಮಾಡಿ ಕ್ಷಮೆಯಾಚಿಸಿದ್ದಾನೆ.

    ಪುಣೆಯ ಯೆರವಾಡಾದ ಶಾಸ್ತ್ರಿನಗರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವಕನನ್ನು ಗೌರವ್‌ ಅಹುಜಾ (Gaurav Ahuja) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಚಿತ್ರೀಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕರಿಂದ ಭಾರೀ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು (Pune Police) ಕಿಡಿಗೇಡಿಯ ಬೆನ್ನುಬಿದ್ದಿದ್ದರು. ಅಲ್ಲದೇ ಕೃತ್ಯ ಎಸಗಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ ಕೃತ್ಯ ಎಸಗಿದ ವೇಳೆ ಆತ ಸಿಕ್ಕಾಪಟ್ಟೆ ಮದ್ಯ ಸೇವಿಸಿದ್ದ ಎಂದು ಶಂಕಿಸಿದ್ದರು.

    ಈ ಬೆನ್ನಲ್ಲೇ ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ಗೌರವ್‌ ಅಹುಜಾ, ನಾನು ಮಾಡಿದ ಕೃತ್ಯ ನನಗೇ ನಾಚಿಕೆಯಾಗುತ್ತದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಕೇರಳಾಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

    ನಾನು ಗೌರವ್‌ ಅಹುಜಾ, ಪುಣೆಯ ನಿವಾಸಿ. ನಾನು ಮಾಡಿದ ಕೃತ್ಯದಿಂದ ನನಗೆ ತುಂಬಾ ನಾಚಿಕೆಯಾಗುತ್ತಿದೆ. ನಾನು ಪುಣೆ, ಮಹಾರಾಷ್ಟ್ರದ ಜನತೆ ಮಾತ್ರವಲ್ಲ ಇಡೀ ದೇಶದ ಎಲ್ಲಾ ಜನರಲ್ಲಿ ನಿಜವಾಗಿಯೂ ಕ್ಷಮೆಯಾಚಿಸುತ್ತೇನೆ. ಪೊಲೀಸ್‌ ಇಲಾಖೆ, ಡಿಸಿಎಂ ಏಕನಾಥ್‌ ಶಿಂಧೆ ಅವರಿಗೂ ಕ್ಷಮೆಯಾಚಿಸುತ್ತೇನೆ. ಇದೊಂದು ಬಾರಿ ಕ್ಷಮಿಸಿ, ಮುಂದೆ ಇಂತಹ ತಪ್ಪು ಎಂದಿಗೂ ಮಾಡುವುದಿಲ್ಲ ಎಂದು ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಇದನ್ನೂ ಓದಿ:  ‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

  • Viral Video: ಬಾನೆಟ್‌ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!

    Viral Video: ಬಾನೆಟ್‌ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!

    ಮುಂಬೈ: ಪೋರ್ಶೆ ಕಾರು ಅಪಘಾತದ ಬೆನ್ನಲ್ಲೇ ಮುಂಬೈನ 17 ವರ್ಷದ ಹುಡುಗನೊಬ್ಬ ವ್ಯಕ್ತಿಯೊಬ್ಬನನ್ನು BMW ಕಾರಿನ ಮೇಲೆ ಮಲಗಿಸಿಕೊಂಡು ಕಲ್ಯಾಣ್‌ನ ಜನನಿಬಿಡ ರಸ್ತೆಯಲ್ಲಿ ಪರವಾನಗಿ ಇಲ್ಲದೆ ಓಡಿಸಿದ ಘಟನೆ ಬೆಳಕಿಗೆ ಬಂದಿದೆ.

    ಪುಣೆ ಪೋರ್ಶೆ ಕಾರು ಅಪಘಾತದಲ್ಲಿ (Pune Porsche Car Accident) ಅಪ್ರಾಪ್ತ ತನ್ನ ಐಷಾರಾಮಿ ಕಾರನ್ನು ಬೈಕ್‌ಗೆ ಡಿಕ್ಕಿಯಾಗಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣವಾಗಿದ್ದನು. ಈ ಘಟನೆಯ ಬಗ್ಗೆ ಭಾರೀ ಆಕ್ರೋಶದ ನಡುವೆ ಈ ಘಟನೆ ಬೆಳಕಿಗೆ ಬಂದಿದೆ. ಈ ಸ್ಟಂಟ್‌ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ವೈರಲ್ ಆದ ತಕ್ಷಣ, ಪೊಲೀಸರು ಕಾರಿನ ಬಾನೆಟ್ ಮೇಲೆ ಮಲಗಿದ್ದ ವ್ಯಕ್ತಿಯನ್ನು ಸುಭಮ್ ಮಿಥಿಲಾ ಎಂದು ಗುರುತಿಸಿದ್ದಾರೆ. ಕಾರು ಚಾಲಕ 17 ವರ್ಷದ ಹುಡುಗ ಮತ್ತು ಅವನ ತಂದೆ, ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಪ್ರಾಪ್ತರು ಶನಿವಾರ ಥಾಣೆ ಜಿಲ್ಲೆಯ ಕಲ್ಯಾಣ್ ನಗರದ ಜನನಿಬಿಡ ಶಿವಾಜಿ ಚೌಕ್ ಪ್ರದೇಶದಲ್ಲಿ ಕಾರನ್ನು ಚಲಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಹನಿಮೂನ್ ಪೀರಿಯೆಡ್ ಮುಗಿದಿದ್ರೂ ಇನ್ನೂ ಅಭಿವೃದ್ಧಿ ಕೆಲಸ ಮಾಡ್ತಿಲ್ಲ: ವಿಜಯೇಂದ್ರ

    ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಗುಂಡ್ ಮಾತನಾಡಿ, ಸಾಮಾಜಿಕ ಮಾಧ್ಯಮದ ರೀಲ್ಸ್‌ಗಳಿಂದ ಪ್ರೇರಿತನಾಗಿ ಅಪ್ರಾಪ್ತ ತಂದೆ 5 ಲಕ್ಷ ರೂ.ಗೆ ಸೆಕೆಂಡ್ ಹ್ಯಾಂಡ್ ಬಿಎಂಡಬ್ಲ್ಯು ಕಾರನ್ನು ಖರೀದಿಸುವಂತೆ ಹಠ ಹಿಡಿದಿದ್ದಾನೆ. ಅಲ್ಲದೇ ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ರಸ್ತೆಯಲ್ಲಿ ಓಡಿಸಿದ್ದಾನೆ. ಇನ್ನು ಕಾರಿನ ಕಾರಿನ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದರು.‌

  • ED  ಕೈಗೆ ಸಿಗದ ಜಾರ್ಖಂಡ್ ಸಿಎಂ – ಹೇಮಂತ್ ಸೊರೆನ್  BMW ಕಾರು  ವಶಕ್ಕೆ

    ED  ಕೈಗೆ ಸಿಗದ ಜಾರ್ಖಂಡ್ ಸಿಎಂ – ಹೇಮಂತ್ ಸೊರೆನ್  BMW ಕಾರು  ವಶಕ್ಕೆ

    ನವದೆಹಲಿ: ದೆಹಲಿ ನಿವಾಸದಲ್ಲಿ E.D (ಜಾರಿ ನಿರ್ದೇಶನಾಲಯ) ಕೈಗೆ ಸಿಗದೇ ಜಾರ್ಖಂಡ್ (Jharkhand) ಸಿಎಂ ಹೇಮಂತ್ ಸೊರೆನ್ (Hemant Soren)  ನಾಪತ್ತೆಯಾಗಿದ್ದಾರೆ. ಅವರ ನಿವಾಸದ ಮೇಲೆ ದಾಳಿ ನಡೆಸಿದ E.D  ಕೆಲವು ದಾಖಲೆಗಳು ಮತ್ತು BMW  ಕಾರನ್ನು ವಶಕ್ಕೆ ಪಡೆದಿದೆ.

    ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿಯ (Delhi) ನಿವಾಸದಲ್ಲಿ ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧಕಾರ್ಯ ನಡೆಸಲು ಹೋಗಿದ್ದರು. ಸೊರೆನ್ ಅವರು ಮನೆಯಲ್ಲಿ ಇಲ್ಲದ ಕಾರಣ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅವರು E.D ಅಧಿಕಾರಿಗಳಿಗೆ ಸಿಗದ ಹಿನ್ನೆಲೆ ಕೆಲವು ದಾಖಲೆಗಳನ್ನು ಮತ್ತು BMW ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಡಲ್ಗಳ್ಳರಿಂದ ಅಪಹರಣಕ್ಕೆ ಒಳಗಾಗಿದ್ದ 19 ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ

    ಸರ್ಕಾರಿ ಭೂಮಿಯ ಮಾಲೀಕತ್ವವನ್ನು ಬದಲಾವಣೆ ಮಾಡುವುದರಲ್ಲಿ ಬೃಹತ್ ಜಾಲವನ್ನೊಳಗೊಂಡ 600 ಕೋಟಿ ರೂಪಾಯಿ ಮೊತ್ತದ ಹಗರಣ ನಡೆದಿದೆ. ಸರ್ಕಾರಿ ಭೂಮಿಯನ್ನು ಕ್ರಮೇಣ ಬಿಲ್ಡರ್‌ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಪ್ರಕರಣ ಸಂಬಂಧ ಸೊರೆನ್‌ಗೆ ಏಳು ಬಾರಿ ನೋಟಿಸ್ ಜಾರಿಗೊಳಿಸಿತ್ತು. ಇದನ್ನೂ ಓದಿ: ‘ಬಾಯ್ಕಾಟ್‌ ಮಾಲ್ಡೀವ್ಸ್‌’ ಎಫೆಕ್ಟ್‌ – ಮಾಲ್ಡೀವ್ಸ್‌ ಪ್ರವಾಸ ರ‍್ಯಾಂಕಿಂಗ್‌ನಲ್ಲಿ ನಂ.1 ರಿಂದ 5ನೇ ಸ್ಥಾನಕ್ಕೆ ಕುಸಿದ ಭಾರತ

    ಆದರೆ, ಈ ನೋಟಿಸ್‌ಗಳನ್ನು ಅವರು ನಿರ್ಲಕ್ಷಿಸಿದ್ದು, ಜಾರಿ ನಿರ್ದೇಶನಾಲಯದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಸೊರೆನ್ ಅವರು ಹಗರಣದ ಹಣದಲ್ಲಿ ದೆಹಲಿಯಲ್ಲಿ ನಿವಾಸ ಮತ್ತು  BMW  ಕಾರನ್ನು ಖರೀದಿ ಮಾಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ಬೇಡಿಕೆ ನಿರಾಕರಿಸಿದ್ದಕ್ಕೆ ಸ್ನೇಹಿತನನ್ನೇ ಕೊಲೆಗೈದ 20ರ ಯುವಕ

    ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 14 ಮಂದಿಯನ್ನು ಬಂಧಿಸಲಾಗಿದೆ. ಐಎಎಸ್ ಅಧಿಕಾರಿ ಛವಿ ರಂಜನ್ ಅವರನ್ನು ಸಹ ಬಂಧಿಸಲಾಗಿದೆ. ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡಿಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ

  • ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

    ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

    ಮುಂಬೈ: ಕ್ರಿಕೆಟಿಗ ಪೃಥ್ವಿ ಶಾ (Prithvi Shaw) ಅವರ ಕಾರಿನ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸಪ್ನಾ ಗಿಲ್ (Sapna Gill) ಅವರನ್ನ ಓಶಿವಾರಾ ಪೊಲೀಸರು ಶುಕ್ರವಾರ ಅಂಧೇರಿ ನ್ಯಾಯಾಲಯಕ್ಕೆ (Andheri Court) ಹಾಜರುಪಡಿಸಿದ್ದು, ನ್ಯಾಯಾಲಯವು ಫೆಬ್ರವರಿ 20ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ಶುಕ್ರವಾರ ಅಂಧೇರಿ ನ್ಯಾಯಾಲಯದಲ್ಲಿ ಸಪ್ನಾಗಿಲ್ ಪರ ವಾದ ವಕೀಲರು (lawyer) ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ಈ ವೇಳೆ ಪೃಥ್ವಿ ಶಾಗೆ ಮದ್ಯಪಾನ ಅಭ್ಯಾಸವಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

    Sapna gill 5

    ಸಪ್ನಾಗಿಲ್ 50 ಸಾವಿರ ಕೊಟ್ಟು ಕೇಸ್ ಮುಗಿಸಿ ಅಂತಾನೂ ಹೇಳಿಲ್ಲ. ಅದಕ್ಕೆ ಸಾಕ್ಷಿಗಳೂ ಇಲ್ಲ. ಅಲ್ಲದೇ ಪೃಥ್ವಿ ಶಾ 15 ಗಂಟೆಗಳ ನಂತರ ಸ್ನೇಹಿತನ ಮೂಲಕ ಪೊಲೀಸರಿಗೆ ದೂರು ಕೊಡಿಸಿದ್ದಾನೆ. ಅದೇ ದಿನ ಏಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು.

    ಸಪ್ನಾ ನ್ಯಾಯಾಲಯದಲ್ಲಿ ಹೇಳಿದ್ದೇನು?
    ಶುಕ್ರವಾರ ಅಂಧೇರಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದಾಗ `ಪೃಥ್ವಿ ಶಾ ಯಾರೆಂದು ನನಗೆ ತಿಳಿದಿಲ್ಲ’ ಎಂದು ಆರೋಪಿ ಸಪ್ನಾ ಗಿಲ್ ಹೇಳಿದರು. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

    ನನ್ನ ಸ್ನೇಹಿತ ಅವರೊಂದಿಗೆ ಸೆಲ್ಫಿ ಕೇಳಿದ್ದ. ಅವರು ಕ್ರಿಕೆಟಿಗನೆಂದೇ ನನಗೆ ತಿಳಿದಿರಲಿಲ್ಲ. ನಾವು ಇಬ್ಬರೇ ಇದ್ದೆವು. ಆದ್ರೆ ಪೃಥ್ವಿ ಶಾ ತನ್ನ 8 ಜನ ಸ್ನೇಹಿತರ ಜೊತೆಗಿದ್ದರು. ನಾವು ಅಲ್ಲಿ ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಅವರು ಅಲ್ಲಿಗೆ ಊಟಕ್ಕೆಂದು ಕುಡಿದುಕೊಂಡು ಬಂದಿದ್ದ. ಘಟನೆ ನಂತರ ಅಲ್ಲಿಗೆ ಬಂದ ಪೊಲೀಸರು ಈ ವಿಷಯವನ್ನು ಇಲ್ಲಿಗೇ ಬಿಡುವಂತೆ ಹೇಳಿದ್ದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಸಪ್ನಾಗಿಲ್ ಪರ ವಕೀಲರು, ಪೃಥ್ವಿ ಶಾ ಅವರ ಆರೋಪಗಳು ಸುಳ್ಳು. ಈ ಬಗ್ಗೆ ನ್ಯಾಯಾಲಯದಲ್ಲಿ ನಮ್ಮ ನಿಲುವು ಮಂಡಿಸಿದ್ದೇವೆ. ಮುಂದಿನ ವಿಚಾರಣಾ ಹಂತದಲ್ಲಿ ಸಪ್ನಾ ಗಿಲ್ ಅವರ ನ್ಯಾಯಾಂಗ ಬಂಧನಕ್ಕೆ ಒತ್ತಾಯಿಸುತ್ತೇವೆ, ನ್ಯಾಯಾಲಯ ಮಂಜೂರು ಮಾಡಿದ ತಕ್ಷಣ ಜಾಮೀನಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    Sapna gill 4

    ಏನಿದು ಘಟನೆ?
    ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಸಪ್ನಾ ಗಿಲ್ ಮತ್ತು ಅವರ ತಂಡ ಪೃಥ್ವಿ ಶಾ ಅವರೊಂದಿಗೆ ಸೆಲ್ಫಿಗೆ ಒತ್ತಾಯಿಸಿದ್ದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದರು. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದರು.

    Sapna gill 2

    ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದರು. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದರು. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದರು. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ದೂರು ನೀಡಿದ್ದರು.

    ಘಟನೆಯ ನಂತರ ಓಶಿವಾರಾ ಪೊಲೀಸರು (Oshiwara Police) ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

    ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

    ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಅಪರಿಚಿತರ ಗುಂಪೊಂದು ಭಾರತ ಕ್ರಿಕೆಟ್ ತಂಡದ (Team India) ಆಟಗಾರ ಪೃಥ್ವಿ ಶಾ (Prithvi Shaw) ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಮುಂಬೈನ (Mumbai) ಪಂಚತಾರಾ ಹೋಟೆಲ್ ಬಳಿ ನಡೆದಿದೆ.

    ಘಟನೆ ಸಂಬಂಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ (Oshiwara Police Station) ದಾಖಲಾದ ದೂರಿನ ಅನ್ವಯ 8 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ

    ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿದ ದೂರಿನ ಪ್ರಕಾರ, ಮೊದಲು ಅಪರಿಚಿತರ ಗುಂಪೊಂದು ಬೇಸ್‌ಬಾಲ್ ಬ್ಯಾಟ್‌ಗಳಿಂದ ಕಾರಿನ ಮೇಲೆ ದಾಳಿ ನಡೆಸಿತು. ನಂತರ ಹಣ ಕೊಡದಿದ್ದರೇ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿತು ಎಂದು ತಿಳಿಸಿದ್ದಾರೆ.

    ಘಟನೆಯ ನಂತರ ಓಶಿವಾರಾ ಪೊಲೀಸರು 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ

    ಏನಿದು ಘಟನೆ?
    ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಅಪರಿಚಿತರ ಗುಂಪು ಅವರ ಸೆಲ್ಫಿಗೆ ಒತ್ತಾಯಿಸಿದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದಾರೆ.

    ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದಾರೆ. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಸನಾ ಅಲಿಯಾಸ್ ಸಪ್ನಾ ಗಿಲ್ ಮತ್ತು ಶೋಭಿತ್ ಠಾಕೂರ್ ಎಂದು ಗುರುತಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೀನಿಯರ್ ಉದ್ಯೋಗಿಗಳಿಗೆ BMW ಕಾರ್ ಗಿಫ್ಟ್ ನೀಡಿದ ಐಟಿ ಕಂಪನಿ ಸಿಇಒ

    ಸೀನಿಯರ್ ಉದ್ಯೋಗಿಗಳಿಗೆ BMW ಕಾರ್ ಗಿಫ್ಟ್ ನೀಡಿದ ಐಟಿ ಕಂಪನಿ ಸಿಇಒ

    ಚೆನ್ನೈ: ಐಟಿ ಕಂಪನಿ ಸಿಇಒ, ಸೀನಿಯರ್  ಐದು ಮಂದಿ ಉದ್ಯೋಗಿಗಳಿಗೆ ದುಬಾರಿ ಬೆಲೆ ಬಾಳುವ ಬಿಎಮ್‍ಡಬ್ಲ್ಯೂ ಕಾರ್ ಉಡುಗೊರೆ ನೀಡುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕೊರೊನಾ ಸಾಂಕ್ರಾಮಿಕ ಸಮಯದಲ್ಲೂ ತಮ್ಮ ಕೈಬಿಡದೆ ಜೊತೆಗಿದ್ದು, ಸಂಸ್ಥೆಯ ಉನ್ನತಿಗೆ ಶ್ರಮಿಸಿದ ಐವರು ಸೀನಿಯರ್ ಉದ್ಯೋಗಿಗಳಿಗೆ ಚೆನ್ನೈ ಮೂಲದ ಕಿಸ್ ಫ್ಲೋ ಇಂಕ್ (Kissflow Inc)  ಎನ್ನುವ ಐಟಿ ಕಂಪನಿ, ಸಿಇಒ ಸುರೇಶ್ ಸಂಬಂದಂ ಅವರು BMW ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    BMW ಕಾರಿನ ಬೆಲೆ 1 ಕೋಟಿ ರೂ. ಕಾರು ಉಡುಗೊರೆಯಾಗಿ ನೀಡುವ ವಿಚಾರವನ್ನು ಗೌಪ್ಯವಾಗಿರಿಸಲಾಗಿತ್ತು. ನಂತರ ಉಡುಗೊರೆ ನೀಡುವುದಕ್ಕೆ ಕೆಲವೇ ಗಂಟೆ ಮೊದಲು ಉದ್ಯೋಗಿಗಳಿಗೆ ತಿಳಿಸಲಾಗಿತ್ತು. ಕಾರು ನೀಡುವ ಸಂದರ್ಭ ಉದ್ಯೋಗಿಗಳ ಕುಟುಂಬಸ್ಥರೂ ಜೊತೆಗಿದ್ದಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಶ್ರೀಕಿ

    ಅನೇಕ ಸೀನಿಯರ್ ಉದ್ಯೋಗಿಗಳು ಕಂಪನಿ ಬೆಳೆಯುವುದಿಲ್ಲವೆಂದು ಅರ್ಧಕ್ಕೆ ಕೆಲಸ ಬಿಟ್ಟು ಬೇರೆ ಕಂಪನಿ ಸೇರಿಕೊಂಡಿದ್ದರು. ಕೊರೊನಾ ಸಮಯದಲ್ಲಿ ಅನೇಕ ಮಂದಿ ಸಂಸ್ಥೆ ತೊರೆದಿದ್ದರು. ಆದರೆ ಐವರು ಮಂದಿ ಎಂಥ ಸಮಸ್ಯೆ ಎದುರಾದಾಗಲೂ ಸಂಸ್ಥೆಯ ಜೊತೆ ಕೈಜೋಡಿಸಿದ್ದಾರೆ ಎಂದು ಸಿಇಒ ಹೇಳಿದ್ದಾರೆ.

  • ಬಟನ್ ಒತ್ತಿದ್ರೆ ಕಾರಿನ ಬಣ್ಣವೇ ಬದಲಾಗುತ್ತೆ

    ಬಟನ್ ಒತ್ತಿದ್ರೆ ಕಾರಿನ ಬಣ್ಣವೇ ಬದಲಾಗುತ್ತೆ

    ಲಾಸ್‍ವೇಗಾಸ್: ಗ್ರಾಹಕರು ಇಷ್ಟ ಪಟ್ಟಾಗ ತನ್ನ ಬಣ್ಣವನ್ನು ಬದಲಿಸುವ ಕಾರನ್ನು ಬಿಎಂಡಬ್ಲ್ಯೂ(BMW)ಅಭಿವೃದ್ಧಿ ಪಡಿಸಿದ್ದು ಸಖತ್ ಸುದ್ದಿಯಲ್ಲಿದೆ.

    ಜರ್ಮನಿಯ ಮೂಲದ ಬಿಎಂಡಬ್ಲ್ಯು ಸಂಸ್ಥೆ ಗ್ರಾಹಕರು ಬಯಸಿದಾಗ ಬಣ್ಣ ಬದಲಾಯಿಸುವ ಕಾರೊಂದನ್ನು ಅನಾವರಣ ಮಾಡಿದೆ. ಕೇವಲ ಒಂದು ಬಟನ್ ಒತ್ತುವ ಮೂಲಕ ಕ್ಷಣ ಮಾತ್ರದಲ್ಲಿ ಇಡೀ ಕಾರಿನ ಬಣ್ಣವನ್ನೇ ಬದಲಾಯಿಸಬಹುದಾಗಿದೆ.

     

    ಲಾಸ್‍ವೇಗಾಸ್‍ನಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ಈ ಕಾರನ್ನು ಪರಿಚಯಿಸಲಾಗಿದೆ. ಈ ತಂತ್ರಜ್ಞಾನ ಹೊಂದಿದ ವಿಶ್ವದ ಮೊದಲ ಕಾರು ಇದಾಗಿದೆ. ಆದರೆ ಮಾರುಕಟ್ಟೆಗೆ ಬಿಡುಗಡೆ ಮಾಡುವ ಕುರಿತು ಯಾವುದೇ ಮಾಹಿತಿ ಇಲ್ಲ.

    ಲಾಭವೇನು?: ಹವಾಮಾನಕ್ಕೆ ಅನುಗುಣವಾಗಿ ಬಣ್ಣ ಬದಲಾಯಿಸಿದರೆ ಕಾರು ಹೆಚ್ಚು ಉಷ್ಣತೆ ಹೀರುವುದನ್ನು ತಡೆಯಬಹುದಾಗಿದೆ. ಇದರಿಂದ ಇಂಧನ ಅಥವಾ ವಿದ್ಯುತ್ ಬಳಕೆ ಕಡಿಮೆಯಾಗಲಿದೆ. ಇದನ್ನೂ ಓದಿ: ವಧು ಬೇಕಾಗಿದ್ದಾಳೆ- ರಸ್ತೆ ಬದಿ ಜಾಹೀರಾತು ಹಾಕಿದ ವರ

    ಬಿಎಂಡಬ್ಲ್ಯು ಐಎಕ್ಸ್ ಕಾರಿನ ಮೇಲ್ಭಾಗವು ಇ-ಇಂಕ್ಸ್ ಎಲೆಕ್ಟ್ರಾನಿಕ್ ಪೇಪರ್ ಡಿಸ್ಪ್ಲ್ಯೆ ತಂತ್ರಜ್ಞಾನವನ್ನು ಒಳಗೊಂಡಿದ್ದು, ಅದು ಸಣ್ಣದಾದ ಬಣ್ಣದ ಶಾಯಿಯ ಮೈಕ್ರೋ ಕ್ಯಾಪ್ಸೂಲ್ಸ್‌ಗಳನ್ನು ಒಳಗೊಂಡಿದೆ. ಕಾರಿನ ಮೇಲ್ಮೈ ಬಣ್ಣದ ಬದಲಾವಣೆಗೆ ಸಹಕಾರಿಯಾಗಲಿದೆ.

  • ಶೋರೂಮ್‍ನಲ್ಲಿ ಹೊತ್ತಿ ಉರಿದ 40 BMW ಕಾರುಗಳು

    ಶೋರೂಮ್‍ನಲ್ಲಿ ಹೊತ್ತಿ ಉರಿದ 40 BMW ಕಾರುಗಳು

    ಮುಂಬೈ: ಶೋರೂಮ್‍ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿರುವ ಘಟನೆ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ನಡೆದಿದೆ.

    ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್ ಮಾಡಲಾದ ಗೋಡಾನ್ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ

    ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ಒಟ್ಟು 10 ಫೈರ್ ಫೈಟ್ ಟ್ರಕ್‍ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು ಎಂದು ವರದಿಯಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ತುರ್ಭೆ ಪೆÇಲೀಸ್ ಠಾಣೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಶೋರೂಂ ಒಳಗೆ ಇದ್ದ ಎಲ್ಲ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಇದನ್ನೂ ಓದಿ: ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

  • ಚಾಲಕ ಮೂತ್ರವಿಸರ್ಜನೆ ಮಾಡಲೆಂದು ನಿಲ್ಲಿಸಿದ ಬಿಎಂಡಬ್ಲ್ಯೂಕಾರನ್ನೇ ಹೊತ್ತೊಯ್ದರು

    ಚಾಲಕ ಮೂತ್ರವಿಸರ್ಜನೆ ಮಾಡಲೆಂದು ನಿಲ್ಲಿಸಿದ ಬಿಎಂಡಬ್ಲ್ಯೂಕಾರನ್ನೇ ಹೊತ್ತೊಯ್ದರು

    – ಇನ್ನೂ 40 ಲಕ್ಷ ಲೋನ್ ಬಾಕಿ ಇತ್ತು

    ನವದೆಹಲಿ: ಮೂತ್ರವಿಸರ್ಜನೆ ಮಾಡಲೆಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ ದುಬಾರಿ ಬೆಲೆಯ ಕಾರನ್ನೇ ಖದೀಮರು ಹೊತ್ತೊಯ್ದ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

    ಈ ಘಟನೆ ಶನಿವಾರ ರಾತ್ರಿ ನಡೆದಿದೆ. ರಿಷಬ್ ಅರೋರ ಎಂಬ ವ್ಯಾಪಾರಿ ಪಾರ್ಟಿ ಮುಗಿಸಿ ಮದ್ಯದ ಅಮಲಿನಲ್ಲಿ ತನ್ನ ಕಾರಿನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದನು. ಈ ಸಂದರ್ಭದಲ್ಲಿ ಆತನಿಗೆ ದಾರಿ ಮಧ್ಯೆ ಸೂಸು ಬಂದಿದೆ. ಹೀಗಾಗಿ ಕೀ ಬಿಟ್ಟು ತನ್ನ ಕಾರನ್ನು ಸೈಡಿಗೆ ಹಾಕಿ ಹೋಗಿದ್ದಾನೆ.

    ದುಬಾರಿ ಕಾರನ್ನು ದರೋಡೆ ಮಾಡಿದ ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಲು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಕೇಂದ್ರ ನೊಯ್ಡಾದ ಪೊಲೀಸ್ ಆಯುಕ್ತ ಹರೀಶ್ ಚಂದರ್ ತಿಳಿಸಿದ್ದಾರೆ.

    ಅರೋರಾ ದಾರಿ ಮಧ್ಯೆ ಕಾರು ನಿಲ್ಲಿಸಿ ಮೂತ್ರವಿಸರ್ಜನೆ ಮಾಡಲು ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲೇ ಇದ್ದ ಖದೀಮರು ಕಾರನ್ನು ಎಗರಿಸಿದ್ದಾರೆ. ಅಲ್ಲದೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಚಂದರ್ ವಿವರಿಸಿದ್ದಾರೆ.

    ಇದೊಂದು ಯೋಜಿತ ಕೃತ್ಯವಾಗಿದೆ. ಕಾರು ಮಾಲೀಕನಿಗೆ ಗೊತ್ತಿರುವವರೇ ಕಳ್ಳತನ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುವುದಾಗಿ ಡಿಸಿಪಿ ಶಂಕೆ ವ್ಯಕ್ತಪಡಿಸಿದ್ದಾರೆ.

    ಪ್ರಕರಣ ಸಂಬಂಧ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಕಾರನ್ನು ಆದಷ್ಟು ಬೇಗ ಚಾಲಕನಿಗೆ ಒಪ್ಪಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಕುಡಿದು ಚಾಲನೆ ಮಾಡಿದ್ದಕ್ಕಾಗಿ ಚಾಲಕನ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ತಿಳಿಸಿದ್ದಾರೆ.

    ಬೈಕಿನಲ್ಲಿ ಬಂದ ಖದೀಮರು ಈ ಕೃತ್ಯ ಎಸಗಿದ್ದಾರೆ. ಅಲ್ಲದೆ ಅವರು ಹಿಂಬದಿಯಿಂದ ಬಂದು ಗನ್ ಇಟ್ಟು ತನಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಅರೋರಾ ಆರೋಪಿಸಿದ್ದಾನೆ.

    ಈ ದುಬಾರಿ ಕಾರು ರಿಷಬ್ ಬಾವನಾದಾಗಿದ್ದು, ಲೋನ್ ಮಾಡಿ ಕಾರು ಖರೀದಿಸಿದ್ದರು. ಅಲ್ಲದೆ ಕಾರಿನ ಇನ್ನೂ 40 ಲಕ್ಷ ಲೋನ್ ಕಟ್ಟಲು ಬಾಕಿಯಿತ್ತು.