Tag: board

  • ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡ್ಬೇಡಿ ಬೋರ್ಡ್‍ಗೆ ಆದೇಶ

    ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡ್ಬೇಡಿ ಬೋರ್ಡ್‍ಗೆ ಆದೇಶ

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು, ಗುತ್ತಿಗೆದಾರರ ಸಂಘಗಳು ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಸಂದರ್ಭದಲ್ಲಿಯೇ, ನನಗೆ ಯಾರು ಲಂಚ (Bribe) ಕೊಡಬೇಡಿ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ನಾಮಫಲಕವನ್ನು ಸರ್ಕಾರಿ ಕಚೇರಿ (Government Office) ಗಳಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

    ಸಿಟಿಜನ್ ಎನ್‍ಕ್ವೈರಿ ಕೌನ್ಸಿಲ್ ಎಂಬ ಸಂಸ್ಥೆ ನಡೆಸಿರುವ ಭ್ರಷ್ಟಾಚಾರ (Corruption) ನಿರ್ಮೂಲನಾ ಅಭಿಯಾನದ ಅಂಗವಾಗಿ ಬೋರ್ಡ್ ಅಳವಡಿಸಿಕೊಳ್ಳಿ ಎಂದು ಆದೇಶ ನೀಡಿದ್ದಾರೆ. ಅಕ್ಟೋಬರ್ 2ರಿಂದ 20ರವರೆಗೆ ಈ ಕ್ಯಾಂಪೇನ್ ನಡೆಯಲಿದೆ. ಈ ಬಗ್ಗೆ ಕಾಂಗ್ರೆಸ್ (Congress) ಕಿಡಿಕಾರಿದೆ. ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಡೈವರ್ಟ್ ಮಾಡಲು ಖಾಸಗಿ ಸಂಸ್ಥೆ ನಡೆಸಿರುವ ಅಭಿಯಾನವನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಎಷ್ಟು ದಿನ ನಡೆಯುತ್ತೋ ನೋಡ್ಬೇಕು ಎಂದು ಕೈ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ: ಸಿದ್ದರಾಮಯ್ಯ

    ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿ, ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು, ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ. ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ. ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಧು ಬೇಕಾಗಿದ್ದಾಳೆ, ಅಂಗಡಿ ಮುಂದೆ ಬೋರ್ಡ್-ಆಸ್ಟ್ರೇಲಿಯ, ಇಂಗ್ಲೆಂಡ್‍ನಿಂದ ಬಂತು ಆಫರ್

    ವಧು ಬೇಕಾಗಿದ್ದಾಳೆ, ಅಂಗಡಿ ಮುಂದೆ ಬೋರ್ಡ್-ಆಸ್ಟ್ರೇಲಿಯ, ಇಂಗ್ಲೆಂಡ್‍ನಿಂದ ಬಂತು ಆಫರ್

    ತಿರುವನಂತಪುರಂ: ಮದುವೆಗೆ ವಧು ಬೇಕೆಂದು ಅಂಗಡಿ ಮುಂದೆ ಬೋರ್ಡ್ ಹಾಕಿದ ಹಳ್ಳಿ ಹೈದನಿಗೆ ಆಸ್ಟ್ರೇಲಿಯ, ಇಂಗ್ಲೆಂಡ್‍ನಿಂದ ಆಫರ್ ಬಂದಿರುವುದು ಕೇರಳದಲ್ಲಿ ಸುದ್ದಿಯಾಗಿದೆ.

    ಕೇರಳದ ವಲ್ಲಾಚಿರ ಎಂಬ ಊರಿನವರಾದ 33 ವರ್ಷದ ಎನ್.ಎನ್. ಉನ್ನಿಕೃಷ್ಣನ್ ಮದುವೆಯಾಗಲು ಹುಡುಗಿಗಾಗಿ ಹಲವು ವರ್ಷಗಳಿಂದ ಹುಡುಕಾಟ ನಡೆಸಿದ್ದರು. ಆದರೆ ಯಾವ ಹುಡುಗಿಯೂ ಹೊಂದಿಕೆಯಾಗಿರಲಿಲ್ಲ. ವಲ್ಲಾಚಿರದಲ್ಲಿ ತನ್ನದೇ ಆದ ಅಂಗಡಿಯನ್ನು ಇಟ್ಟುಕೊಂಡಿರುವ ಉನ್ನಿಕೃಷ್ಣನ್ ಯಾವುದೇ ಮಧ್ಯವರ್ತಿಯ ಸಹಾಯವಿಲ್ಲದೆ ತಾನೇ ಹುಡುಗಿಯನ್ನು ಹುಡುಕಿಕೊಳ್ಳಲು ನಿರ್ಧರಿಸಿದರು. ಅದಕ್ಕಾಗಿ ತಮ್ಮ ಅಂಗಡಿಯ ಮುಂದೆ ವಧು ಬೇಕಾಗಿದ್ದಾಳೆ ಎಂದು ಬೋರ್ಡ್ ಒಂದನ್ನು ಹಾಕಿ ಅದರ ಕೆಳಗೆ ತಮ್ಮ ನಂಬರನ್ನು ನಮೂದಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

    ನಾನು ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದೇನೆ. ಜಾತಿ, ಧರ್ಮ ಯಾವುದಾದರೂ ತೊಂದರೆಯಿಲ್ಲ ಎಂದು ಉನ್ನಿಕೃಷ್ಣನ್ ಫಲಕದಲ್ಲಿ ಬರೆದು, ಅಂಗಡಿ ಎದುರು ನೇತು ಹಾಕಿದ್ದಾರೆ. ಇತ್ತೀಚೆಗೆ ಈ ಅಂಗಡಿಗೆ ಬಂದಿದ್ದ ಅವರ ಗೆಳೆಯರೊಬ್ಬರು ಈ ಫಲಕವನ್ನು ನೋಡಿ ಅದರ  ಫೋಟೋ ತೆಗೆದುಕೊಂಡು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡಿದ್ದರು. ಅದುವರೆಗೂ ಸುತ್ತಮುತ್ತಲಿನ ಊರುಗಳಲ್ಲಿ ಹುಡುಗಿಗಾಗಿ ಹುಡುಕಾಡುತ್ತಿದ್ದ ಉನ್ನಿಕೃಷ್ಣನ್‍ಗೆ ಈ ಒಂದು ಪೋಸ್ಟ್​ನಿಂದ ಈಗ ಆಸ್ಟ್ರೇಲಿಯ, ಇಂಗ್ಲೆಂಡ್‍ನಿಂದಲೂ  ಫೋನ್ ಕಾಲ್‍ಗಳು ಬಂದಿವೆಯಂತೆ. ಇದನ್ನೂ ಓದಿ: ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್ – ಬಿಡುಗಡೆಯಾಗಲಿದೆ ಆಡಿಯೋ ಬುಕ್

    ನನ್ನ ತಲೆಬುರುಡೆಯಲ್ಲಿ ಗೆಡ್ಡೆ ಬೆಳೆದಿದ್ದರಿಂದ ಈಗಾಗಲೇ ಆಪರೇಷನ್ ಆಗಿದೆ. ಈಗ ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಇನ್ನಾದರೂ ಜೀವನದಲ್ಲಿ ಸೆಟಲ್ ಆಗಬೇಕೆಂದು ಮದುವೆಯಾಗಲು ನಿರ್ಧರಿಸಿದೆ. ಆದರೆ ಯಾರೂ ನನ್ನನ್ನು ಮದುವೆಯಾಗಲು ಮುಂದೆ ಬರಲಿಲ್ಲ. ನನಗೆ ನನ್ನದೇ ಸ್ವಂತದ್ದೊಂದು ಅಂಗಡಿಯಿದೆ. ನಮ್ಮ ಮನೆ ಬಳಿಯೇ ಲಾಟರಿ ಅಂಗಡಿಯೊಂದನ್ನು ತೆರೆದಿದ್ದೇನೆ. ಅಲ್ಲಿಯೇ ಟೀಯನ್ನು ಕೂಡ ಮಾರುತ್ತೇನೆ. ಬ್ರೋಕರ್ ಮೂಲಕ ಹುಡುಗಿಯನ್ನು ಹುಡುಕುವುದು ಇಷ್ಟವಿಲ್ಲದ ಕಾರಣಕ್ಕೆ ಈ ರೀತಿ ಅಂಗಡಿಯೆದುರು ನನಗೆ ನಾನೇ ಜಾಹೀರಾತು ಕೊಟ್ಟುಕೊಂಡಿದ್ದೇನೆ. ನಮ್ಮ ಮನೆಯವರು ಕೂಡ ಹುಡುಗಿಯನ್ನು ಹುಡುಕುತ್ತಿದ್ದಾರೆ. ಆದರೆ ಇನ್ನೂ ನನಗೆ ಸರಿಯೆನಿಸುವ ಹುಡುಗಿ ಸಿಕ್ಕಿಲ್ಲ ಎಂದು ಉನ್ನಿಕೃಷ್ಣನ್ ಹೇಳಿದ್ದಾರೆ. ಇದನ್ನೂ ಓದಿ: ಸುದೀಪ್‍ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ನೀರಜ್ ಚೋಪ್ರಾ

    ಈ ಬೋರ್ಡ್‍ನ  ಫೋಟೋ ತೆಗೆದು ಉನ್ನಿಕೃಷ್ಣನ್ ಅವರ ಸ್ನೇಹಿತ ತಮ್ಮ ಫೇಸ್‍ಬುಕ್ ಪೇಜಿನಲ್ಲಿ ಹಾಕಿಕೊಂಡಿದ್ದರು. ಮಲಯಾಳಂನಲ್ಲಿ ಬರೆದಿದ್ದ ಆ ಬೋರ್ಡ್‍ನ ಅರ್ಥವನ್ನು ಇಂಗ್ಲಿಷ್‍ನಲ್ಲಿ ಅನುವಾದಿಸಿ  ಫೋಸ್ಟ್ ಮಾಡಿದ್ದರು. ನನ್ನನ್ನು ಮದುವೆಯಾಗಲು ಇಚ್ಛಿಸುವ ಯಾವುದೇ ಧರ್ಮ, ಜಾತಿಯ ಹುಡುಗಿ ಈ ನಂಬರ್‍ಗೆ ಸಂಪರ್ಕಿಸಿ ಎಂದು ಬರೆದಿದ್ದ ಆ ಬೋರ್ಡ್ ಅನ್ನು ನೋಡಿ ಅನೇಕರು ಇಂಪ್ರೆಸ್ ಆಗಿದ್ದಾರೆ. ಇದೀಗ ಆ  ಫೋಸ್ಟ್ ನೋಡಿದ ಆಸ್ಟ್ರೇಲಿಯ, ಇಂಗ್ಲೆಂಡ್ ಮುಂತಾದ ದೇಶಗಳಲ್ಲಿ ವಾಸವಾಗಿರುವ ಮಲೆಯಾಳಿಗಳು ಕೂಡ ಫೋನ್ ಮಾಡಿ ತಮ್ಮ ಕುಟುಂಬದಲ್ಲಿ ಹುಡುಗಿ ಇರುವುದಾಗಿ ತಿಳಿಸುತ್ತಿದ್ದಾರೆ. ಹಲವರು ಫೋನ್ ಮಾಡಿ ಜಾತಿ, ಧರ್ಮವನ್ನು ಲೆಕ್ಕಿಸದೆ ಮದುವೆಯಾಗಲು ಬಯಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

    ಮದುವೆಗೆ ಹುಡುಗಿಯನ್ನು ಹುಡುಕಲು ಬ್ರೋಕರ್ ಬಳಿ ಹೋಗಬೇಕು, ನೆಂಟರಿಷ್ಟರ ಬಳಿ ವಿಚಾರಣೆ ಮಾಡಬೇಕೆಂಬ ಕಾಲವೆಲ್ಲ ಹಳೆಯದಾಯ್ತು. ಈಗೇನಿದ್ದರೂ ತಮಗೆ ಬೇಕಾದ ಹುಡುಗಿಯನ್ನು ಹುಡುಕಿಕೊಳ್ಳಲು ಬೇಕಾದಷ್ಟು ಹೊಸ ಹೊಸ ಆಯ್ಕೆಗಳಿವೆ.

  • ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನ – ಬೆಂಗಳೂರಿನಲ್ಲಿ ಕನ್ನಡ ಅಕ್ಷರದ ಕಾರು ಓಡಾಟ

    ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನ – ಬೆಂಗಳೂರಿನಲ್ಲಿ ಕನ್ನಡ ಅಕ್ಷರದ ಕಾರು ಓಡಾಟ

    ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಕಾಯಕ ವರ್ಷಾಚರಣೆ ಹೆಸರಿನಲ್ಲಿ ಒಂದು ವರ್ಷದ ಯೋಜನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ರಥಕ್ಕೆ ಪ್ರಾಧಿಕಾರದ ಅಧ್ಯಕ್ಷರಾದ ನಾಗಾಭರಣ, ಆಡಳಿತಗಾರ ಗೌರವ್ ಗುಪ್ತಾ, ಆಯುಕ್ತರಾದ ಮಂಜುನಾಥ್ ಪ್ರಸಾದ್ ಚಾಲನೆ ನೀಡಿದರು.

    ಕನ್ನಡ ಬಾವುಟ ಕೆಂಪು ಹಾಗೂ ಹಳದಿ ಬಣ್ಣದಿಂದ ಕಂಗೊಳಿಸುತ್ತಿರುವ ಕಾರಲ್ಲಿ ಕನ್ನಡದ ಘೋಷಣೆ, ಕನ್ನಡದ ಮಹತ್ವವನ್ನು ಸಾರಲಾಗಿದೆ. ರಾಜಧಾನಿ ಬೆಂಗಳೂರಲ್ಲಿ ಅನ್ಯ ಭಾಷೆಯ ಜನರಿಗೂ ಕನ್ನಡ ಲಿಪಿ, ಕನ್ನಡ ಸಂಸ್ಕೃತಿಯ ಮಾಹಿತಿಯನ್ನೂ ಅಭಿಯಾನದಲ್ಲಿ ಅರಿವು ಮೂಡಿಸಲಾಗುತ್ತದೆ.

    ಬಳಿಕ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಆದರೆ ಕನ್ನಡೇತರರೂ ಇಲ್ಲಿದ್ದಾರೆ. ನಗರಕ್ಕೆ ವಿಶಿಷ್ಟ ಪರಂಪರೆ ಇದೆ. ಒಗ್ಗೂಡಿ ಬೆಳೆಯುವಾಗ ಎಲ್ಲರನ್ನು ಭಾಷೆ ಒಗ್ಗೂಡಿಸಬೇಕು. ಅದಕ್ಕಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಶುದ್ಧ ಕನ್ನಡ ನಾಮಫಲಕ ಅಭಿಯಾನ ಹಮ್ಮಿಕೊಂಡಿದ್ದೇವೆ. ಇದು ಅಂಗಡಿ ಮುಂಗಟ್ಟು, ನಾಮಫಲಕಕ್ಕೆ ಸೀಮಿತ ಅಲ್ಲ ಅಕ್ಷರದಾಸೋಹವೂ ನಡೆಯಬೇಕಿದೆ. ಮುಖ್ಯಮಂತ್ರಿಗಳು ಈ ವರ್ಷವನ್ನು ಕನ್ನಡ ಕಾಯಕ ವರ್ಷ ಎಂದು ಘೋಷಿಸಿದ್ದು, ಅದರ ಭಾಗವಾಗಿ ಈ ಅಭಿಯಾನ ನಡೆಯುತ್ತಿದೆ ಎಂದರು.

    ಆಯುಕ್ತರಾದ ಮಂಜುನಾಥ್ ಪ್ರಸಾದ್ ಮಾತನಾಡಿ, ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯ ಕೊಡಬೇಕು. ಇದರಲ್ಲಿ ಶೇ. 67ರಷ್ಟು ಕನ್ನಡ ಭಾಷೆ ಇರಬೇಕು. ಉಳಿದ ಭಾಷೆ ಬೇರೆ ಪ್ರಮಾಣದಲ್ಲಿ ಇರಬಹುದು. ಇದಕ್ಕೆ ಸೂಕ್ತ ಕಾನೂನು ಇಲ್ಲದಿದ್ದ ಕಾರಣ, ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ಈಗ ಜಾಹಿರಾತು ಬೈಲಾದಲ್ಲೇ ಈ ಅಂಶವನ್ನು ಜಾರಿಗೆ ತರಲಾಗಿದೆ. ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗಿತ್ತದೆ. ಅಧ್ಯಕ್ಷರು ಹೇಳಿದ್ದಂತೆ, ಪಾಲಿಕೆ ನಾಮಫಲಕಗಳಲ್ಲೂ ಅಕ್ಷರ ತಪ್ಪಾಗಿರುತ್ತವೆ. ಇದನ್ನು ಪ್ರತೀ ವಲಯದ ಅಧಿಕಾರಿಗಳಿಗೆ ಸರಿಪಡಿಸಲು ತಿಳಿಸಲಾಗಿದೆ ಎಂದರು.

  • ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ- ಬೋರ್ಡ್‍ನಲ್ಲಿ ಬರೆದು ಶಿಕ್ಷಕ ಆತ್ಮಹತ್ಯೆ

    ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ- ಬೋರ್ಡ್‍ನಲ್ಲಿ ಬರೆದು ಶಿಕ್ಷಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ. ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು. ಶಾಲಾ ಆಡಳಿತ ಮಂಡಳಿಯಿಂದ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.

    ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಕೊರೊನಾ ಹೊಡೆತಕ್ಕೆ ನಲುಗ್ತಿದೆ ದಾವಣಗೆರೆ – ಎಲ್ಲಿ ನೋಡಿದ್ರೂ ಮನೆ ಖಾಲಿ ಬೋರ್ಡ್

    ಕೊರೊನಾ ಹೊಡೆತಕ್ಕೆ ನಲುಗ್ತಿದೆ ದಾವಣಗೆರೆ – ಎಲ್ಲಿ ನೋಡಿದ್ರೂ ಮನೆ ಖಾಲಿ ಬೋರ್ಡ್

    ದಾವಣಗೆರೆ: ನಗರದ ಬಹುತೇಕ ಬಡಾವಣೆಗಳಲ್ಲಿ ‘ಮನೆ ಬಾಡಿಗೆಗೆ ಇದೆ’ ಎಂಬ ಬೋರ್ಡ್ ಮಾಮೂಲಿ. ಮಾರುಕಟ್ಟೆಯಲ್ಲೂ ಖಾಲಿ ಮಳಿಗೆಗಳಿಗೂ ಬಾಡಿಗೆದಾರರು ಬರುತ್ತಿಲ್ಲ. ಬಾಡಿಗೆ ಕಡಿಮೆ ಮಾಡುತ್ತೇವೆ ಎಂದರೂ ಜನ ಮುಂದೆ ಬರುತ್ತಿಲ್ಲ. ಚಿಲ್ಲರೆ ವ್ಯಾಪಾರಿಗಳಿಂದ ಹಿಡಿದು ದೊಡ್ಡ ದೊಡ್ಡ ಶೋರೂಂಗಳಲ್ಲೂ ವ್ಯಾಪಾರ-ವಹಿವಾಟು ಅಷ್ಟಕ್ಕಷ್ಟೇ. ವ್ಯಾಪಾರ-ವಹಿವಾಟುಗಳು ದಿನೇದಿನೆ ನೆಲಕಚ್ಚುತ್ತಿವೆ. ಪ್ರತಿಷ್ಟಿತ ಬಡಾವಣೆಗಳಲ್ಲಿ, ಜನನಿಬಿಡ ಮಾರುಕಟ್ಟೆ ಪ್ರದೇಶಗಳಲ್ಲಿ ಮಳಿಗೆ ಬಾಡಿಗೆಗೆ ಇದೆ.

    ಕೊರೊನಾ ಹೆಮ್ಮಾರಿ ಹಾವಳಿ ಅರಂಭವಾಗುವದಕ್ಕೂ ಮುನ್ನ ಅಂದ್ರೆ, ಇದೇ ವರ್ಷ ಜನವರಿ, ಫೆಬ್ರವರಿ ತಿಂಗಳಲ್ಲಿ ದಾವಣಗೆರೆಯ ಪ್ರತಿಷ್ಠಿತ ಬಡಾವಣೆಗಳಲ್ಲಿ ಬಾಡಿಗೆ ಮನೆ ಇರಲಿ ಒಂದು ರೂಂ ಸಿಗೋದು ಕಷ್ಟವಾಗಿತ್ತು. ಆದರೆ ಕೊರೊನಾ ಲಾಕ್‍ಡೌನ್ ಬಂದಿದ್ದೇ ಬಂದಿದ್ದು, ದಾವಣಗೆರೆ ವ್ಯಾಪಾರ-ವಹಿವಾಟಿಗೆ ಭಾರೀ ಪೆಟ್ಟು ಬಿತ್ತು. ಲಾಕ್‍ಡೌನ್ ನಂತರ ಸುಧಾರಿಸಿಕೊಳ್ಳಬಹುದು ಎಂಬ ನಂಬಿಕೆ ಸಾರ್ವಜನಿಕರಲ್ಲಿತ್ತು. ಆದರೆ ಲಾಕ್ ಡೌನ್ ತೆರವುಗೊಂಡು ಈಗಾಗಲೇ ಅನ್ಲಾಕ್ ವರ್ಷನ್ 5.0 ಜಾರಿಗೊಂಡಿದೆ. ಆದರೂ ವ್ಯಾಪಾರ-ವಹಿವಾಟುಗಳು ಕುದುರುವ ಲಕ್ಷಣ ಕಾಣ್ತಿಲ್ಲ. ಇರುವಷ್ಟರಲ್ಲೇ ಜೀವನ ಮಾಡೋಣ ಎಂದು ಜನ ಮಿತವ್ಯಯಕ್ಕೆ ಹೊಂದಿಕೊಂಡಂತೆ ಕಾಣ್ತಿದೆ. ವ್ಯಾಪಾರವಿಲ್ಲದೇ ಎಷ್ಟೋ ಮಳಿಗೆಗಳು ಕಡಿಮೆ ಬಾಡಿಗೆಯ ಮಳಿಗೆಗೆ ಶಿಫ್ಟ್ ಆಗಿದ್ರೆ, ಇನ್ನೂ ಕೆಲವು ಅಂಗಡಿಗಳು ಶಾಶ್ವತವಾಗಿ ಬಂದ್ ಆಗಿವೆ.

    ದಾವಣಗೆರೆ ವಿದ್ಯಾನಗರಿ ಎಂಬ ಖ್ಯಾತಿಗೆ ಅನೇಕ ಶಾಲಾ-ಕಾಲೇಜುಗಳ, ಎಂಬಿಎ, ಎಂಜಿನಿಯರಿಂಗ್, ಮೆಡಿಕಲ್, ಡೆಂಟಲ್, ನರ್ಸಿಂಗ್ ಕಾಲೇಜುಗಳು ತಮ್ಮದೇ ಆದ ಕೊಡುಗೆ ನೀಡಿದ್ದವು. ಲಾಕ್ ಡೌನ್ ಹಿನ್ನೆಲೆ ಶಾಲಾ-ಕಾಲೇಜುಗಳೂ ಬಂದ್ ಆದವು. ಎಷ್ಟೋ ಅತಿಥಿ ಉಪನ್ಯಾಸಕರು ಬೀದಿಗೆ ಬಿದ್ದರು. ಜೀವನ ನಿರ್ವಹಣೆಗೆಗೆ ಅತಿಥಿ ಉಪನ್ಯಾಸಕರು ಬೀದಿ ಬದಿ ಹಣ್ಣು-ತರಕಾರಿ ವ್ಯಾಪಾರ ಮಾಡುವ ಸ್ಥಿತಿ ಬಂತು. ಜೀವನ ಮಿತವ್ಯಯಕ್ಕಾಗಿ ದೊಡ್ಡಮನೆಗಳನ್ನು ಬಿಟ್ಟು ಸಣ್ಣ ಬಾಡಿಗೆ ಮನೆಗಳಿಗೆ ಶಿಫ್ಟ್ ಆಗಲು ಆರಂಭಿಸಿದರು.

    ಇದೇ ಪರಿಸ್ಥಿತಿ ಮಾರುಕಟ್ಟೆಯಲ್ಲೂ ಕಾಣಿಸಿಕೊಂಡಿತು. ಬರೋಬ್ಬರಿ ಮೂರು ತಿಂಗಳ ಲಾಕ್‍ಡೌನ್ ಅವಧಿಯಲ್ಲಿ ವ್ಯಾಪಾರಸ್ಥರು ಕೂಡಿಟ್ಟ ಹಣವೆಲ್ಲಾ ಕರಗಿ ಹೋಗಿತ್ತು. ನಂತರ ಅನ್ಲಾಕ್ ವರ್ಷನ್ 1.0 ಜಾರಿಯಾದ ನಂತರ, ವ್ಯಾಪಾರ ಚೇತರಿಸಿಕೊಳ್ಳಬಹುದು ಅಂದುಕೊಂಡಿದ್ದು ಹುಸಿಯಾಗಿತ್ತು. ಹೊಟೇಲ್ ಉದ್ಯಮ ಸೇರಿದಂತೆ ಎಲ್ಲ ವ್ಯಾಪಾರ-ವಹಿವಾಟು ಪ್ರಪಾತಕ್ಕೆ ಜಾರಿದೆ. ಹಲವರು ತಮ್ಮ ವ್ಯಾಪಾರ ಬಂದ್ ಮಾಡಿ, ಮತ್ತೊಬ್ಬರಲ್ಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಕರೊನಾ ಹೆಮ್ಮಾರಿ ನೂರಾರು ಜೀವಹರಣ ಮಾಡುವ ಜತೆ ಸಾವಿರಾರು ಜನರ ಜೀವನವನ್ನು ನರಕವನ್ನಾಗಿಸಿದೆ ಎಂದು ಹೋಟೆಲ್ ಉದ್ಯಮಿ ಯುವರಾಜ್ ಹೇಳಿದ್ದಾರೆ.

    ಈ ವರ್ಷ ಮಾರ್ಚ್ ಅಂತ್ಯದಿಂದ ಈವರೆಗೆ ಏಳು ತಿಂಗಳಿಂದ ವ್ಯಾಪಾರ ಕುಸಿಯುತ್ತಲೇ ಇದೆ. ನಗರ ಪ್ರದೇಶದಿಂದ ಹಲವರು ಹಳ್ಳಿ ಕಡೆ ಮುಖ ಮಾಡಿದ್ದಾರೆ. ಹೆಮ್ಮಾರಿ ಸೋಂಕು ನಿಯಂತ್ರಣಕ್ಕೆ ಬರಲಿಲ್ಲ ಅಂದ್ರೆ ಚೇತರಿಕೆ ಹೇಗೆ ಎಂಬ ಚಿಂತೆ ಸಾರ್ವಜನಿಕರನ್ನು ಕಾಡುತ್ತಿದೆ.

  • ಆಸ್ಪತ್ರೆ ಇಲ್ಲದ ವಲಯ ನಿಧಾನವಾಗಿ ಚಲಿಸಿ- ಶೃಂಗೇರಿಯಲ್ಲಿ ವಿಭಿನ್ನ ಬ್ಯಾನರ್

    ಆಸ್ಪತ್ರೆ ಇಲ್ಲದ ವಲಯ ನಿಧಾನವಾಗಿ ಚಲಿಸಿ- ಶೃಂಗೇರಿಯಲ್ಲಿ ವಿಭಿನ್ನ ಬ್ಯಾನರ್

    ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ಇಲ್ಲದ ವಲಯ. ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಬೇಕೆಂದು ತಮ್ಮಲ್ಲಿ ವಿನಂತಿ ಎಂಬ ಬೋರ್ಡ್ ಜಿಲ್ಲೆಯ ಶೃಂಗೇರಿಯಲ್ಲಿ ಕಂಡು ಬಂದಿದೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಕುತೂಹಲ ಭರಿತರಾಗಿದ್ದಾರೆ.

    ಕಳೆದೊಂದು ವಾರದಿಂದ ಶೃಂಗೇರಿ ಜನ ಬ್ಯಾನರ್ ಅಂದ್ರೆ ಬೆಚ್ಚಿ ಬೀಳ್ತಿದ್ದಾರೆ. ಶಂಕರಾಚಾರ್ಯರ ಪುತ್ಥಳಿ ಮೇಲೆ ಈದ್‍ಮಿಲಾದ್ ಹಬ್ಬದಲ್ಲಿ ಶುಭ ಕೋರುವ ಬ್ಯಾನರ್ ಹಾಕಿದ್ದರಿಂದ ಶೃಂಗೇರಿಯಲ್ಲಿ ವಾದ-ವಿವಾದ ಪ್ರತಿಭಟನೆಗಳೇ ನಡೆದಿದ್ದವು. ನೋಡ-ನೋಡುತ್ತಿದ್ದಂತೆ ಶೃಂಗೇರಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದೀಗ ಮತ್ತೆ ಬ್ಯಾನರ್ ಸುದ್ದಿ ಶಾರದಾಂಭೆ ಮಡಿಲಲ್ಲಿ ಸದ್ದು ಮಾಡುತ್ತಿದೆ. ಬದಲಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧದ ಬ್ಯಾನರ್.

    ಶೃಂಗೇರಿ ಪ್ರಸಿದ್ಧ-ಪುಣ್ಯ ಹಾಗೂ ಪ್ರವಾಸಿ ತಾಣ. ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಆದರೆ ಇಂತಹ ಪ್ರವಾಸಿ ತಾಣದಲ್ಲಿ ಬಡಜನರ ಗೋಳನ್ನ ಕೇಳುವವರಿಲ್ಲದಂತಾಗಿದೆ. ಸುಮಾರು 40-50 ಸಾವಿರಕ್ಕೂ ಅಧಿಕ ಜನಸಂಖ್ಯೆಯುಳ್ಳ ಶೃಂಗೇರಿಯಲ್ಲಿ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಸಣ್ಣ-ಪುಟ್ಟ ಜ್ವರ-ಶೀಥದಂತಹ ಕಾಯಿಲೆ ಹೊರತುಪಡಿಸಿ ಇನ್ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಾಯಲ್ಲಿ ಬರೋದು ಮಾತು ಒಂದೇ. ಇಲ್ಲಿ ಆಗಲ್ಲ, ಮಣಿಪಾಲ್‍ಗೆ ಹೋಗಿ ಅನ್ನೋದು. ಇದರಿಂದ ಸ್ಥಳಿಯರು ಕೂಡ ಸಂಕಷ್ಟಕ್ಕೀಡಾಗಿದ್ದಾರೆ.

    ಈಗಿರುವ ಆಸ್ಪತ್ರೆಯಲ್ಲಿ ಯಾವುದೇ ಸುಸಜ್ಜಿತ ವ್ಯವಸ್ಥೆಯಾಗಲಿ, ಸೌಲಭ್ಯವಾಗಲಿ ಇಲ್ಲ. ಎಲ್ಲಾ ವಿಭಾಗದಲ್ಲೂ ವೈದ್ಯರೂ ಇಲ್ಲ. ಮಣಿಪಾಲ್ ಅಥವಾ ಉಡುಪಿಗೆ ಶೃಂಗೇರಿಯಿಂದ ಸುಮಾರು 100 ಕಿ.ಮೀ. ಇದೆ. ಅದು ಕೂಡ ಘಾಟಿಯ ರಸ್ತೆ. ತುರ್ತು ಸಂದರ್ಭದಲ್ಲಿ ಅಲ್ಲಿಗೆ ಹೋಗಲು ಎರಡರಿಂದ ಮೂರು ಗಂಟೆ ಬೇಕು. ಅಷ್ಟು ದೂರ ಹೋಗುವಾಗ ಮಾರ್ಗ ಮಧ್ಯೆ ಏನು ಬೇಕಾದ್ರು ಸಂಭವಿಸಬಹುದು. ಈಗಾಗಲೇ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರೋರು ಹಲವರಿದ್ದಾರೆ. ಇನ್ನು ಕೆಲವರು ಅಲ್ಲಿನ ಬಿಲ್ ನೋಡಿ ಜೀವ ಉಳಿದರು ಜೀವನವೇ ಹೋದಂತಾಗಿದೆ.

    ಸಾಲ ತೀರಿಸಲು ದುಡಿಯುತ್ತಲೇ ಇದ್ದಾರೆ. ಹಾಗಾಗಿ ತಾಲೂಕಿನ ಜನ ತಾಲೂಕಿನ ಅಲ್ಲಲ್ಲೇ ಈ ರೀತಿಯ ಬ್ಯಾನರ್ ಬರೆಸಿ ಹಾಕಿದ್ದಾರೆ. ಕೂಡಲೇ ತಾಲೂಕಿಗೊಂಡು ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

  • 24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

    24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

    ಬೆಂಗಳೂರು: ಸರ್ಕಾರದ ಮೊದಲ ವರ್ಷದ ಸಂಭ್ರಮದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಗಿಫ್ಟ್‌ ನೀಡಿದ್ದಾರೆ. 24 ಮಂದಿ ಶಾಸಕರಿಗೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ.

    ಈ ಹಿಂದೆ ಸಚಿವ ಸ್ಥಾನ‌ ಆಂಕಾಕ್ಷಿಗಳಾಗಿದ್ದವರಿಗೂ ಸಿಎಂ‌ ಮಣೆ ಹಾಕಿದ್ದಾರೆ. ಅರಗ ಜ್ಞಾನೇಂದ್ರ, ರಾಜುಗೌಡ, ದತ್ತಾತ್ರೇಯ ಪಾಟೀಲ್ ರೇವೂರ್, ತಿಪ್ಪಾರೆಡ್ಡಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ.

    ಅತೃಪ್ತರ ಸಭೆಯಲ್ಲಿ ಭಾಗವಹಿಸಿದ್ದವರಿಗೂ ಶಾಸಕರಿಗೂ ಯಡಿಯೂರಪ್ಪ ಮಣೆ ಹಾಕಿದ್ದಾರೆ. ಪರಣ್ಣ ಮುನವಳ್ಳಿ, ಶಿವರಾಜ್ ಪಾಟೀಲ್ , ರಾಜಕುಮಾರ್ ತೇಲ್ಕೋರ್ ಸೇರಿದಂತೆ ಹಲವರಿಗೆ ಅಧ್ಯಕ್ಷ ಸ್ಥಾನವನ್ನು ಕಲ್ಪಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಾಧನೆ ಬಗ್ಗೆ ಪ್ರಧಾನಿ ಸಂಸದರಿಂದ ಚಪ್ಪಾಳೆ ಹೊಡೆಸಿದ್ರು – ಸಿಎಂ

    ಯಾರಿಗೆ ಯಾವ ಹುದ್ದೆ?
    1 . ಅರಗ ಜ್ಞಾನೇಂದ್ರ(ತೀರ್ಥಹಳ್ಳಿ) ಕರ್ನಾಟಕ ಗೃಹಮಂಡಳಿ
    2. ಎಂ. ಚಂದ್ರಪ್ಪ (ಹೊಳಲ್ಕೆರೆ) ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
    3. ರಾಜುಗೌಡ(ಸುರಪುರ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
    4. ಎಂ ಪಿ ಕುಮಾರಸ್ವಾಮಿ(ಮೂಡಿಗೆರೆ) ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್
    5. ಎಎಸ್ ಪಾಟೀಲ್ ನಡಹಳ್ಳಿ (ಮುದ್ದೆ ಬಿಹಾಳ) ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
    6. ಎಚ್.ಹಾಲಪ್ಪ(ಸಾಗರ) ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

    7. ಮಾಡಾಳ್ ವಿರೂಪಾಕ್ಷಪ್ಪ(ಚನ್ನಗಿರಿ) ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ
    8. ತಿಪ್ಪಾರೆಡ್ಡಿ (ಚಿತ್ರದುರ್ಗ) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
    9. ಶಿವನಗೌಡ ನಾಯಕ್ (ದೇವದುರ್ಗ) ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
    10.ಕಳಕಪ್ಪ ಬಂಡಿ(ರೋಣ) ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
    11. ಪರಣ್ಣ ಮುನವಳ್ಳಿ (ಗಂಗಾವತಿ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
    12. ಸಿದ್ದು ಸವದಿ(ತೇರದಾಳ) ಕರ್ನಾಟಕ ಕೈಮಗ್ಗ, ಅಭಿವೃದ್ಧಿ ನಿಗಮ ನಿಯಮಿತ

    13. ಪ್ರೀತಮ್ ಜಿ ಗೌಡ(ಹಾಸನ) ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
    14. ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ (ಸೇಡಂ) ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ, ಕಲಬುರಗಿ
    15. ದತ್ತಾತ್ರೇಯ ಪಾಟೀಲ್ ರೇವೂರ(ಗುಲ್ಬರ್ಗ ದಕ್ಷಿಣ) ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ
    16. ಶಂಕರ್ ಪಾಟೀಲ್ ಮುನೇನಕೊಪ್ಪ(ನವಲಗುಂದ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
    17. ಎಚ್ ನಾಗೇಶ್(ತಿಪಟೂರು) ಕರ್ನಾಟಕ ತೆಂಗಿನ ನಾರಿನ ಅಭಿವೃದ್ಧಿ ನಿಗಮ
    18. ಎಸ್ ವಿ ರಾಮಚಂದ್ರ(ಜಗಳೂರು) ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ

    19. ನೆಹರೂ ಓಲೇಕಾರ್( ಹಾವೇರಿ) ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
    20. ಐಹೊಳೆ ದುರ್ಯೋಧನ(ರಾಯಭಾಗ) ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
    21. ಲಾಲಾಜಿ ಆರ್ ಟಂಡನ್ (ಕಾಪು) ರಾಜ್ಯ ಹಿಂದುಳಿದ ವರ್ಗಗಳ ಆಯೋಗ
    22. ಬಸವರಾಜ ದಡೇಸೂರ್ (ಕನಕಗಿರಿ) ರಾಜ್ಯ ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ
    23. ಡಾ.ಎಸ್.ಶಿವರಾಜ್ ಪಾಟೀಲ್(ರಾಯಚೂರು) ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
    24.ಸಿ.ಎಸ್.ನಿರಂಜನ್ ಕುಮಾರ್ (ಗುಂಡ್ಲುಪೇಟೆ) ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ

  • ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

    ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ:  ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

    ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.

    ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೂ ಹಳೆಯ ಪರೀಕ್ಷಾ ನೋಂದಣಿ ಸಂಖ್ಯೆ ಇರಲಿದೆ. ಮೊದಲಿಗೆ ತಾವು ಓದಿದ ಶಾಲಾ ಮುಖ್ಯ ಶಿಕ್ಷಕರ ಬಳಿ ತೆರಳಿ ಕೇಂದ್ರ ಬದಲಾವಣೆ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಮುಖ್ಯಸ್ಥರು ಬದಲಾವಣೆ ಮಾಡಿದ ಕೇಂದ್ರದ ಮಾಹಿತಿಯನ್ನ ಎಸ್‍ಎಸ್‍ಎಲ್‍ಸಿ ಬೋರ್ಡಿಗೆ ಮಾಹಿತಿ ಕೊಡಬೇಕಾಗುತ್ತದೆ.

    ಶಿಕ್ಷಣ ಇಲಾಖೆ ಮಾರ್ಗಸೂಚಿ
    * ಈಗ ವಿದ್ಯಾರ್ಥಿಗಳು ಇರುವ ತಾಲೂಕು ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬಹುದು
    * ಒಂದು ಬಾರಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂದರೆ ಮತ್ತೆ ಬದಲಾವಣೆ ಅವಕಾಶ ಇಲ್ಲ
    * ಹೊಸ ಕೇಂದ್ರ ಬದಲಾವಣೆ ನಂತರ ಹಳೆ ಕೇಂದ್ರದಲ್ಲಿ ಬರೆಯಲು ಅವಕಾಶ ಇರೋದಿಲ್ಲ
    * ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್‌ನಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ.
    * ಕೇಂದ್ರ ಮಾತ್ರ ಬದಲಾವಣೆ ಮಾಡಿಕೊಳ್ಳಬಹುದು
    * ಕೇಂದ್ರ ಬದಲಾವಣೆ ಯಾವುದೇ ಶುಲ್ಕ ಇರೋದಿಲ್ಲ
    * ಕೇಂದ್ರ ಬದಲಾವಣೆ ಬಳಿಕ ಪ್ರವೇಶ ಪತ್ರ ಡೌನ್‍ಲೋಡ್‍ಗೆ ಅವಕಾಶ
    * ಶಾಲಾ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ತಾಲೂಕಿನ ಬಿಇಓಗಳ ಮೂಲಕ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.

  • ನೋ ಮಾಸ್ಕ್ ನೋ ಪೆಟ್ರೋಲ್ – ಬಂಕ್‍ಗಳ ಮುಂದೆ ಬೋರ್ಡ್

    ನೋ ಮಾಸ್ಕ್ ನೋ ಪೆಟ್ರೋಲ್ – ಬಂಕ್‍ಗಳ ಮುಂದೆ ಬೋರ್ಡ್

    ಬೆಂಗಳೂರು: ಕೊರೊನಾ ಭೀತಿಯಿಂದ ಎಲ್ಲರೂ ಮಾಸ್ಕ್ ಧರಿಸಿ ಓಡಾಡುವಂತೆ ಸರ್ಕಾರಗಳು ಮನವಿ ಮಾಡಿಕೊಳ್ಳುತ್ತಿವೆ. ಈಗ ಬಂಕ್‍ಗಳಿಗೆ ಬರುವ ವ್ಯಕ್ತಿಗಳು ಮಾಸ್ಕ್ ಧರಸದಿದ್ದರೆ ಪೆಟ್ರೋಲ್ ನೀಡುವುದಿಲ್ಲ ಎಂದು ಬಂಕ್‍ಗಳೇ ಬೋರ್ಡ್ ಹಾಕಿಕೊಂಡಿವೆ.

    ಇಂದು ಬೆಳಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ ಅವರು, ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸಿದ್ದರು. ಇದರ ಜೊತೆಗೆ ಏಪ್ರಿಲ್ 20ರವರೆಗೆ ಡಬಲ್ ಲಾಕ್‍ಡೌನ್ ಇರಲಿದ್ದು, ಕಠಿಣ ರೀತಿಯಲ್ಲಿ ಕಾನೂನನ್ನು ಜಾರಿ ಮಡಲಾಗುವುದು ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಮೋದಿ ಅವರ ಮಾತಿನಂತೆ ಮಾಸ್ಕ್ ಹಾಕದೇ ಇರುವ ವಾಹನ ಸವಾರರಿಗೆ ಪೆಟ್ರೋಲ್ ಹಾಕುವುದಿಲ್ಲ ಎಂದು ಬಂಕ್ ಮಾಲೀಕರು ಹೇಳಿದ್ದಾರೆ.

    ಈ ವಿಚಾರವಾಗಿ ನೋ ಮಾಸ್ಕ್ ನೋ ಫ್ಯೂಯೆಲ್ ಎಂಬ ಹೊಸ ನಿಯಮವನ್ನು ಕೆಲ ಬಂಕ್‍ಗಳೇ ಜಾರಿಗೆ ತಂದಿದ್ದು, ಬೆಂಗಳೂರಿನ ಕೆಲ ಪೆಟ್ರೋಲ್ ಬಂಕ್‍ಗಳಲ್ಲಿ ಮಾಸ್ಕ್ ಹಾಕಿದ್ದರೇ ಮಾತ್ರ ಪೆಟ್ರೋಲ್ ಹಾಕುತ್ತೇವೆ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಸಿಕೊಂಡಿದ್ದರೆ ಮಾತ್ರ ಪೆಟ್ರೋಲ್ ಹಾಕುತ್ತೇವೆ ಎಂದು ಬಂಕ್‍ಗಳೇ ಗ್ರಾಹಕರಿಗೆ ತಿಳಿಸುತ್ತಿವೆ.

  • ಪದವಿ ಗುಂಗಲ್ಲೇ ಪರಮೇಶ್ವರ್ – ಮೈತ್ರಿ ಸರ್ಕಾರ ಬಿದ್ದು 5 ದಿನವಾದ್ರೂ ತೆಗೆದಿಲ್ಲ ಬೋರ್ಡ್

    ಪದವಿ ಗುಂಗಲ್ಲೇ ಪರಮೇಶ್ವರ್ – ಮೈತ್ರಿ ಸರ್ಕಾರ ಬಿದ್ದು 5 ದಿನವಾದ್ರೂ ತೆಗೆದಿಲ್ಲ ಬೋರ್ಡ್

    ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇನ್ನೂ ಉಪಮುಖ್ಯಮಂತ್ರಿ ಪದವಿ ಗುಂಗಲ್ಲೇ ಇದ್ದು, ಮೈತ್ರಿ ಬಿದ್ದು ಅಧಿಕಾರ ಕಳೆದುಕೊಂಡರೂ ತಮ್ಮ ಹುದ್ದೆಯ ಜಪವನ್ನೇ ಮಾಡುತ್ತಿದ್ದಾರೆ.

    ಶುಕ್ರವಾರ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಆದರೆ ಪರಮೇಶ್ವರ್ ಮಾತ್ರ ಇನ್ನೂ ಉಪಮುಖ್ಯಮಂತ್ರಿ ಬೋರ್ಡ್ ತೆಗೆಸಿಲ್ಲ. ಪರಮೇಶ್ವರ್ ಅಧಿಕಾರ ಕಳೆದುಕೊಂಡರೂ ಉಪಮುಖ್ಯಮಂತ್ರಿ ಎಂದು ತಮ್ಮ ಮನೆಯ ಮುಂದೆ ಬೋರ್ಡ್ ಇದೆ.

    ಪರಮೇಶ್ವರ್ ತಮ್ಮ ಸದಾಶಿವನಗರದ ಸರ್ಕಾರಿ ನಿವಾಸದ ಮುಂದೆ ಉಪಮುಖ್ಯಮಂತ್ರಿ ಎಂದು ಬರೆದಿರುವ ಬೋರ್ಡ್ ಹಾಕಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಬಿದ್ದು 5 ದಿನ ಕಳೆದಿದೆ. ಆದರೂ ಬೋರ್ಡ್ ತೆಗೆದಿಲ್ಲ. ಡಾ.ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಕರ್ನಾಟಕ ಸರ್ಕಾರ ಬೆಂಗಳೂರು ಎಂಬ ಬೋರ್ಡ್ ರಾರಾಜಿಸುತ್ತಿದೆ. ಸದ್ಯಕ್ಕೆ ಪರಮೇಶ್ವರ್ ಅವರು ಎಲ್ಲಿಗೂ ತೆರಳದೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದರು. ಈ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಬಹುಮತ ಕಳೆದುಕೊಂಡು ಅಧಿಕಾರದಿಂದ ಕೆಳಗಿಳಿದಿದೆ. ಹೀಗಾಗಿ ಡಿಸಿಎಂ ಹುದ್ದೆಯನ್ನು ಪರಮೇಶ್ವರ್ ಅವರು ಕಳೆದುಕೊಂಡಿದ್ದಾರೆ.