Tag: boarding school

  • ಮಡಿಲಲ್ಲಿ ತಂಗಿಯನ್ನುಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಬಾಲಕಿಗೆ ಬೋರ್ಡಿಂಗ್ ಸ್ಕೂಲ್‍ನಲ್ಲಿ ಫ್ರೀ ಸೀಟ್

    ಮಡಿಲಲ್ಲಿ ತಂಗಿಯನ್ನುಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಬಾಲಕಿಗೆ ಬೋರ್ಡಿಂಗ್ ಸ್ಕೂಲ್‍ನಲ್ಲಿ ಫ್ರೀ ಸೀಟ್

    ಇಂಫಾಲ್: ಎರಡು ವರ್ಷದ ಸಹೋದರಿಯನ್ನು ಮಡಿಲಲ್ಲಿಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಮಣಿಪುರದ 10 ವರ್ಷದ ಬಾಲಕಿಯ ಫೋಟೋ ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ಬಾಲಕಿಗೆ ಇಂಫಾಲ್‍ನ ಬೋರ್ಡಿಂಗ್ ಶಾಲೆಯಲ್ಲಿ ಪ್ರವೇಶಾತಿ ಸಿಕ್ಕಿದೆ.

    ಈ ಕುರಿತ ಮಾಹಿತಿಯನ್ನು ಮಣಿಪುರ ಸರ್ಕಾರದ ವಿದ್ಯುತ್, ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವ ಬಿಸ್ವಜೀತ್ ತೊಂಗಮ್ ಅವರು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ಮೇನಿಂಗ್ಸಿನ್ಲಿಯು ಪಮೇಯ್ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆ. ಭರವಸೆ ನೀಡಿದಂತೆ ನಾನು ಅವಳನ್ನು ಇಂಫಾಲ್‍ನಲ್ಲಿರುವ ಬೋರ್ಡಿಂಗ್ ಶಾಲೆಯಾದ ಸ್ಲೋಪ್‍ಲ್ಯಾಂಡ್ ಪಬ್ಲಿಕ್ ಸ್ಕೂಲ್‍ಗೆ ಸೇರಿಸಿದ್ದೇನೆ. ಬಣ್ಣಗಳಂತೆ ಅವಳು ಕಂಗೋಳಿಸಲಿ ಎಂದು ನಾನು ನಯಸುತ್ತೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಸಚಿವರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ರಷ್ಯಾದ ಜನರಲ್‌ಗಳನ್ನು ಕೊಲ್ಲಲು ಉಕ್ರೇನ್‌ಗೆ ಅಮೆರಿಕ ಗುಪ್ತಚರ ಸಹಾಯ

    ಮಣಿಪುರದ ತಮೆಂಗ್ಲಾಂಗ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಪಮೇಯ್ ತಮ್ಮ ಮಡಿಲಲ್ಲಿ ಎರಡು ವರ್ಷದ ಮಗುವನ್ನು ಮಲಗಿಸಿಕೊಂಡು ಓದುತ್ತಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಫೋಟೋವನ್ನು ಗಮನಿಸಿದ ಸಚಿವರು ಬಾಲಕಿಯ ಕುಟುಂಬವನ್ನು ಪತ್ತೆ ಹಚ್ಚಿ ಅವರನ್ನು ಇಂಫಾಲ್‍ಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೀಗ ಬಾಲಕಿ ಪದವಿ ಶಿಕ್ಷಣ ಪೂರೈಸುವವರೆಗೂ ಶಿಕ್ಷಣದ ವೆಚ್ಚವನ್ನು ತಾವೇ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

  • ಮನೆ ಬಾಗಿಲಿಗೆ ಬರಲಿದೆ ಶಾಲೆ

    ಮನೆ ಬಾಗಿಲಿಗೆ ಬರಲಿದೆ ಶಾಲೆ

    ಬೆಂಗಳೂರು : ನೀವು ಆರ್ಡರ್ ಮಾಡಿದ ಕೂಡಲೇ ನಿಮಗೆ ಇಷ್ಟವಾದ ಫುಡ್, ವಸ್ತುಗಳು ಮನೆ ಬಾಗಿಲಿಗೆ ಬರುತ್ತೆ. ಎಲ್ಲಾದ್ರೂ ಹೋಗಬೇಕು ಅಂದ್ರೆ ಬುಕ್ ಮಾಡಿದ ಎರಡು ದಿªನಿಮಿಷದಲ್ಲಿ ಕ್ಯಾಬ್ ನಿಮ್ಮ ಮನೆ ಬಾಗಿಲಿಗೆ ಬರುತ್ತೆ. ಇದೇ ರೀತಿಯ ಸೌಲಭ್ಯವನ್ನು ಕಲ್ಪಿಸೋಕೆ ಬಿಬಿಎಂಪಿ ಮುಂದಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಮನೆ ಬಾಗಿಲಿಗೆ ಶಾಲೆ ಬರಲಿದೆ.

    ಕೂಲಿ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಊರು ಊರು ಅಂತಾ ಓಡಾಡ್ತಾ ಇರತ್ತಾರೆ. ಈ ಕೂಲಿ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಸದ್ದುದೇಶದಿಂದ, ಬಿಬಿಎಂಪಿ ಮನೆ ಬಾಗಿಲಿಗೆ ಶಾಲೆ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಸಲುವಾಗಿ ಪಾಲಿಕೆ ಈ ಯೋಜನೆ ರೂಪಿಸುತ್ತಿದೆ. ಸ್ಲಂಗಳಲ್ಲಿರುವ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಮನೆ ಬಾಗಿಲಿಗೆ ಶಾಲೆ ಎಂಬ ಪರಿಕಲ್ಪನೆಯಡಿ ಬಸ್ ಗಳನ್ನೇ ಶಾಲೆಯನ್ನಾಗಿ ಪರಿವರ್ತಿಸಿ ವಿದ್ಯಾಭ್ಯಾಸ ನೀಡಲು ಮುಂದಾಗಿದೆ.

    ಈ ಸಂಬಂಧ ಬಿಎಂಟಿಸಿಯಿಂದ ಈಗಾಗಲೇ ಪಾಲಿಕೆಯು 10 ಬಸ್ ಗಳನ್ನು ಪಡೆದಿದ್ದು, ಬಸ್‍ಗಳಿಗೆ ಹೊಸ ರೂಪ ನೀಡಲಾಗಿದೆ. ಪಾಲಿಕೆ ವತಿಯಿಂದಲೇ ಶಿಕ್ಷಕರು ಹಾಗೂ ಚಾಲಕರನ್ನು ನೇಮಕ ಮಾಡಿ ಹೆಚ್ಚು ಮಕ್ಕಳಿರುವ ಕೊಳಗೇರಿ ಪ್ರದೇಶಗಳಿಗೆ ಬಸ್ ಗಳನ್ನು ಕಳುಹಿಸಿ ಪಾಠ ಕಲಿಸಲಾಗುತ್ತದೆ. ಈ ಕಾರ್ಯಕ್ಕೆ ಈಗಾಗಲೇ ಬಿಎಂಟಿಸಿ ಬಸ್ಸುಗಳು ಕೂಡ ಸಿದ್ಧಗೊಂಡಿವೆಂದು ಬಿಎಂಟಿಸಿ ನಿರ್ದೇಶಕರ ಕೆ ಸಂತೋಷ್ ಬಾಬು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಸೆಕ್ಸ್ ಫಿಲ್ಮ್ ನೋಡಿ, 10ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದ ಪಿಯು ವಿದ್ಯಾರ್ಥಿಗಳು!

    ಸೆಕ್ಸ್ ಫಿಲ್ಮ್ ನೋಡಿ, 10ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದ ಪಿಯು ವಿದ್ಯಾರ್ಥಿಗಳು!

    ಡೆಹ್ರಾಡೂನ್: ನಾಲ್ವರು ಪಿಯು ವಿದ್ಯಾರ್ಥಿಗಳು ಪೋರ್ನ್ ವಿಡಿಯೋ ನೋಡಿ ಬಳಿಕ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರೆಸಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಡೆಹ್ರಾಡೂನ್ ಬೋರ್ಡಿಂಗ್ ಶಾಲೆಯ ವಿದ್ಯಾರ್ಥಿಗಳು ಈ ನೀಚ ಕೃತ್ಯ ಮಾಡಿದ್ದು, ಈಗ ಅವರನ್ನು ಅತ್ಯಾಚಾರದ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮತ್ತು ಸಂತ್ರಸ್ತೆ ಒಂದೇ ಬೋರ್ಡಿಂಗ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆರೋಪಿಗಳು ತಮ್ಮ ಫೋನಿನಲ್ಲಿ ಪೋರ್ನ್ ವಿಡಿಯೋ ನೋಡಿ ಈ ರೀತಿಯ ಕೃತ್ಯ ಮಾಡಿದ್ದಾರೆ ಎಂದು ಡೆಹ್ರಾಡೂನ್ ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ನಿವೇದಿತಾ ಕುಕ್ರೆಟ್ಟಿ ಅವರು ತಿಳಿಸಿದ್ದಾರೆ.

    ಮೊದಲು ತಮ್ಮ ಮೊಬೈಲ್ ಫೋನಿನಲ್ಲಿ ಪೋರ್ನ್ ಸಿನಿಮಾಗಳನ್ನು ನೋಡಿದ ಬಳಿಕ ಒಬ್ಬನನ್ನು 16 ವರ್ಷದ ಹುಡುಗಿಯನ್ನು ಅತ್ಯಾಚಾರ ಮಾಡುವಂತೆ ಪ್ರೇರೇಪಿಸಿರುವುದಾಗಿ ವಿದ್ಯಾರ್ಥಿಗಳಲ್ಲಿ ಒಬ್ಬ ತಪ್ಪನ್ನು ಒಪ್ಪಿಕೊಂಡಿದ್ದಾನೆ ಅಂತ ಪೊಲೀಸ್ ಮೂಲಗಳು ತಿಳಿಸಿವೆ.

    ನಡೆದಿದ್ದೇನು?
    ಈ ಘಟನೆ ಆಗಸ್ಟ್ 14 ರಂದು ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಗೆ ತಯಾರು ಮಾಡಿಕೊಳ್ಳುತ್ತಿದ್ದಾಗ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಸ್ಟೋರ್ ರೂಮ್ ಗೆ ಕರೆದುಕೊಂಡು ಹೋಗಿದ್ದಾರೆ. ನಂತರ ನಾಲ್ವರು ಹುಡುಗರು ಸೇರಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಮತ್ತು ಆಕೆಯ ಸೋದರಿ ಹಾಸ್ಟೆಲ್‍ನ ಒಂದೇ ಕೋಣೆಯಲ್ಲಿ ಉಳಿದುಕೊಂಡಿದ್ದರು. ಸೋದರಿಯರ ತಂದೆ ಮತ್ತು ತಾಯಿ ನಡುವೆ ಜಗಳ ಉಂಟಾಗಿದ್ದರಿಂದ ಮಕ್ಕಳು ನೋಡಲು ಯಾರು ಬಂದಿರಲಿಲ್ಲ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ತನ್ನ ದೇಹದಲ್ಲಾದ ಬದಲಾವಣೆ ಮತ್ತು 12ನೇ ಕ್ಲಾಸ್ ಹುಡುಗರು ನಡೆಸಿರುವ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ತಂಗಿಯ ಮಾತು ಕೇಳಿದ ಅಕ್ಕ ನೇರವಾಗಿ ಶಿಕ್ಷಕರಿಗೆ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದ್ದನ್ನು ಇನ್ಸ್ಟಿಟ್ಯೂಟ್ ಸಿಬ್ಬಂದಿ ಮುಚ್ಚಿಹಾಕಲು ಮತ್ತು ಆಕೆ ಗರ್ಭಿಣಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಹುಡುಗರು ಮತ್ತು ಶಾಲಾ ನಿರ್ದೇಶಕ, ಪ್ರಿನ್ಸಿಪಾಲ್ ಸೇರಿದಂತೆ ಐದು ಶಾಲಾ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಅಪ್ರಾಪ್ತರನ್ನು ರಿಮ್ಯಾಂಡ್ ಹೋಂಗೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೊಬೈಲ್ ಫೋನ್ ಗಳಲ್ಲಿ ಸುಲಭವಾಗಿ ಪೋರ್ನ್ ವಿಡಿಯೋ ಸಿಗುವುದರಿಂದ ಈ ರೀತಿ ಕೃತ್ಯ ಹೆಚ್ಚಾಗುತ್ತಿವೆ. ಅದರಲ್ಲೂ ಅಪ್ರಾಪ್ತರೇ ಅತಿ ಹೆಚ್ಚಾಗಿ ಲೈಂಗಿಕ ಅಪರಾಧಗಳಿಗೆ ತೊಡಗಿದ್ದಾರೆ. ಈ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಯೋಜನೆಯನ್ನು ಜಾರಿಗೆ ಮಾಡಬೇಕು ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್!

    ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್!

    ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ವಸತಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಾಲ್ವರು ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸೆಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿಗಳನ್ನು ಬಂಧಿಸಲಾಗಿದ್ದು, ಅವರೆಲ್ಲರೂ 17 ವರ್ಷದವರಾಗಿದ್ದಾರೆ. ಹಾಸ್ಟೆಲ್‍ನಲ್ಲಿ ಇದ್ದ ಸಂತ್ರಸ್ತ ವಿದ್ಯಾರ್ಥಿ ಅಸ್ವಸ್ಥಗೊಂಡು ಮಲಗಿದ್ದಾಗ, ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಸಹೋದರಿಗೆ ತಿಳಿಸಿದ್ದಾಳೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ಮೂರು ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ.

    ಆಗಸ್ಟ್ 14ರಂದು ಶಾಲೆಯ ಆವರಣದಲ್ಲಿಯೇ ನಾಲ್ವರು ಹಿರಿಯ ವಿದ್ಯಾರ್ಥಿಗಳು 16 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಕರಣವನ್ನು ಶಾಲೆಯ ಆಡಳಿತ ಮಂಡಳಿ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೇಳಿಬಂದಿದ್ದು, ಶಾಲೆಯ ನಿರ್ದೇಶಕ, ಪ್ರಾಚಾರ್ಯ, ಆಡಳಿತಾಧಿಕಾರಿ ಹಾಗೂ ಅವರ ಪತ್ನಿ ಮತ್ತು ಹಾಸ್ಟೆಲ್ ವಾರ್ಡನ್‍ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಯುವತಿಯ ಪೋಷಕರು ಶಾಲೆಗೆ ದೌಡಾಯಿಸಿದ್ದಾರೆ. ಪೊಲೀಸರ ಜೊತೆಗೆ ಬಂದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹಾಗೂ ಮಕ್ಕಳ ಕಲ್ಯಾಣ ಆಯೋಗ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿನಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

    ಬಂಧಿತ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು: ಹಾಸ್ಟೆಲ್‍ನಲ್ಲಿ ವಿಷದೂಟ ಸೇವಿಸಿ ಮೂರು ಮಕ್ಕಳು ಮೃತರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಾರ್ಚ್ 9 ರಂದು ಮಾಜಿ ಶಾಸಕ ಕಿರಣ್‍ಕುಮಾರ್ ಒಡೆತನದ ವಿದ್ಯಾವಾರಿಧಿ ಶಾಲೆಯ ಹಾಸ್ಟೆಲ್‍ನಲ್ಲಿ ಮಕ್ಕಳು ವಿಷಾಹಾರ ಸೇವನೆಯಿಂದ ಮೃತಪಟ್ಟಿದ್ದರು. ಇನ್ನೂ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೆಕ್ಯೂರಿಟಿ ಗಾರ್ಡ್ ರಮೇಶ್ ಮಾರ್ಚ್ 11 ರಂದು ಸಾವನ್ನಪ್ಪಿದ್ದರು.

    ಇದನ್ನೂ ಓದಿ: ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

    ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಪತ್ತೆಯಾಗಿತ್ತು. ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದರು.

    ಮಾರ್ಚ್ 8ರ ರಾತ್ರಿ ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ.

    ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ರವಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

  • ತುಮಕೂರು ಶಾಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ವಿಷದಂಶ ಪತ್ತೆ

    ತುಮಕೂರು ಶಾಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ವಿಷದಂಶ ಪತ್ತೆ

    – ಪತ್ನಿ ಜೊತೆ ಮಾಜಿ ಶಾಸಕ ಕಿರಣ್ ಕುಮಾರ್ ನಾಪತ್ತೆ

    ತುಮಕೂರು: ಜಿಲ್ಲೆಯ ಬೋರ್ಡಿಂಗ್ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

    ರಕ್ತದ ಮಾದರಿಯನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ. 15 ದಿನದೊಳಗೆ ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾ.ದಿನೇಶ್ ಹೇಳಿದ್ದಾರೆ.

                                         

    ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಶಾಲಾ ಮಾಲೀಕರಾದ ಮಾಜಿ ಶಾಸಕ ಕಿರಣ್ ಕುಮಾರ್ ಹಾಗೂ ಪತ್ನಿ ಕವಿತಾಗಾಗಿ ತೀವ್ರ ಶೋಧ ನಡೆಯುತ್ತಿದೆ. ಶಾಲೆಯ ಮಾಲೀಕರು ಬೆಂಗಳೂರಿನಲ್ಲಿ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಎಸ್‍ಪಿ ಇಶಾ ಪಂತ್ ಅಲ್ಲಿಗೂ ತಂಡ ಕಳಿಹಿಸಿರುವುದಾಗಿ ಹೇಳಿದ್ರು. ಶಾಲೆಯಲ್ಲಿದ್ದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಅಂದ್ರು.

    ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದಾರೆ. ವಿಷ ಬೆರಕೆಯಲ್ಲಿ ರವಿ ಕೈವಾಡವಿಡುವ ಶಂಕೆಯಿದ್ದು ರವಿ ಪತ್ತೆಗಾಗಿ ಪೊಲೀಸರಿಂದ ಶೋಧ ನಡೆಯುತ್ತಿದೆ. ಅಗತ್ಯವಿದ್ದರೆ ರವಿ ವಿಚಾರಣೆ ಕೂಡ ನಡೆಯಲಿದೆ ಅಂತಾ ಎಸ್‍ಪಿ ಹೇಳಿದ್ದಾರೆ. ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ.

    ವಿಷ ಆಹಾರ ಸೇವನೆಯಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೆಕ್ಯೂರಿಟಿಗಾರ್ಡ್ ರಮೇಶ್ ಘಟನೆ ಬಗ್ಗೆ ಮಾಹಿತಿ ನೀಡಲು ಹಾತೊರೆಯುತ್ತಿದ್ದಾರೆ. ಆದ್ರೆ ವೆಂಟಿಲಟರ್‍ನಲ್ಲಿ ಉಸಿರಾಡುತ್ತಿರುವುದರಿಂದ ಅವರು ಮಾತನಾಡಲಾಗದೆ ವೇದನೆ ಅನುಭವಿಸುತ್ತಿದ್ದಾರೆ.

    ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಇವರಿಗೆ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.

  • ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

    ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

    ತುಮಕೂರು: ರೆಸಿಡೆನ್ಸಿಯಲ್ ಶಾಲೆಯಲ್ಲಿ ಫುಡ್ ಪಾಯ್ಸನ್ ಆಗಿ ಮೂರು ಅಮಾಯಕ ಮಕ್ಕಳು ಪ್ರಾಣವನ್ನೇ ಕಳೆದುಕೊಂಡಿರೋ ಘಟನೆ ತುಮಕೂರಿನಲ್ಲಿ ನಡೆದಿದೆ.

    ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. 15 ವರ್ಷ ವಯಸ್ಸಿನವರಾದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಮೃತ ವಿದ್ಯಾರ್ಥಿಗಳು. ಫುಡ್ ಪಾಯ್ಸನ್‍ನಿಂದ ಮೂರು ಮಕ್ಕಳು ಸಾವನ್ನಪ್ಪಿದ್ರೆ ಇಬ್ಬರ ಸ್ಥಿತಿ ಗಂಭಿರವಾಗಿದೆ. ಈ ಬೋರ್ಡಿಂಗ್ ಶಾಲೆ ಬಿಜೆಪಿ ಮಾಜಿ ಶಾಸಕ ಕಿರಣ್‍ಕುಮಾರ್‍ಗೆ ಸೇರಿದ್ದು ಅಂತ ಗೊತ್ತಾಗಿದೆ.

    ಘಟನೆ ಬಗ್ಗೆ ಹುಳಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಹೇಳಿಕೆ ನೀಡಿದ್ದು, ಊಟದಲ್ಲಿ ನೀಲಿ ಬಣ್ಣ ಕಾಣಿಸಿಕೊಂಡಿತ್ತು ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಮೂವರು ಮಕ್ಕಳು ಚಪಾತಿ ಪಲ್ಯಾ ಬದಲಿಗೆ ಅನ್ನ ಸಾಂಬರ್ ತಿಂದಿದ್ದಾರೆ. ಆಗ ಸಾಂಬರ್‍ನಲ್ಲಿ ವ್ಯತ್ಯಾಸ ಇದ್ದಿದ್ದು ಕಂಡು ಬಂತು. ನಂತರ ಅಲ್ಲಿದ್ದ ಉಳಿದ ಮಕ್ಕಳು ಯಾರು ಊಟ ಮಾಡಿರಲಿಲ್ಲ. ಅಸ್ವಸ್ಥರಾದ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ವೈದ್ಯರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಮಕ್ಕಳಿಗೆ ಗ್ಲೂಕೋಸ್ ನೀಡಿ, ನಂತರ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಅಂತ ತಿಳಿಸಿದ್ರು.

    ಹಾಸ್ಟೆಲ್‍ನಲ್ಲಿ 40 ಮಂದಿ ವಿದ್ಯಾರ್ಥಿಗಳಿದ್ದಾರೆ. 3ನೇ ತರಗತಿಯಿಂದ 10ನೇ ತರಗತಿವರೆಗೆನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೇಯಸ್ ಆಕಾಂಕ್ಷ್ ಪಲ್ಲಕ್ಕಿ ಶಿರಾಂಪುರ ವಿದ್ಯಾರ್ಥಿಗಳು. ಶಾಂತಮೂರ್ತಿ ತಿಮ್ಮನಹಳ್ಳಿ ವಿದ್ಯಾರ್ಥಿ. ಹಾಸ್ಟೆಲ್‍ನಲ್ಲಿ ಸಿಸಿ ಕ್ಯಾಮರಾಗಳಿವೆ, ಅದನ್ನ ಪರಿಶೀಲಿಸುತ್ತೇನೆ ಅಂತ ಕಿರಣ್ ಕುಮಾರ್ ಹೇಳಿದ್ದಾರೆ.