Tag: Bobde

  • ತಕ್ಷಣಕ್ಕೆ ನಿರ್ಭಯಾ ರೇಪಿಸ್ಟ್‌ಗಳಿಗೆ ಗಲ್ಲು ಶಿಕ್ಷೆ ಆಗಲ್ಲ – ಹೊಸ ಪೀಠ ರಚನೆ

    ತಕ್ಷಣಕ್ಕೆ ನಿರ್ಭಯಾ ರೇಪಿಸ್ಟ್‌ಗಳಿಗೆ ಗಲ್ಲು ಶಿಕ್ಷೆ ಆಗಲ್ಲ – ಹೊಸ ಪೀಠ ರಚನೆ

    ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ತಕ್ಷಣಕ್ಕೆ ಗಲ್ಲು ಶಿಕ್ಷೆ ಆಗೋ ಸಾಧ್ಯತೆ ತೀರಾ ಕಡಿಮೆ. ನಿರ್ಭಯ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.

    ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದಿದ್ದೇ ಇದಕ್ಕೆ ಕಾರಣ. ವೈಯಕ್ತಿಕ ಕಾರಣಗಳಿಂದಾಗಿ ಈ ಅರ್ಜಿಯ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿದ್ದು, ಬುಧವಾರ ಬೆಳಗ್ಗೆ 10.30ಕ್ಕೆ ಹೊಸ ಪೀಠ ವಿಚಾರಣೆ ನಡೆಸಲಿದೆ ಎಂದು ಬೊಬ್ಡೆ ತಿಳಿಸಿದರು.

    ಈ ಹಿಂದೆ ಜಸ್ಟೀಸ್ ಬೊಬ್ಡೆ ಅವರ ಅಣ್ಣನ ಮಗ ಅರ್ಜುನ್ ಬೊಬ್ಡೆ ನಿರ್ಭಯ ತಾಯಿ ಪರವಾಗಿ ವಾದ ಮಂಡನೆ ಮಾಡಿದರು. ಹೀಗಾಗಿ ವಿಚಾರಣೆ ಪಾರದರ್ಶಕವಾಗಿ ನಡೆಯಲಿ ಎನ್ನುವ ಉದ್ದೇಶದಿಂದ ಸಿಜೆ ಬೊಬ್ಡೆ ಈ ನಿರ್ಧಾರಕ್ಕೆ ಬಂದಿದ್ದಾರೆ. ವಿಚಾರಣೆ ಹಿನ್ನೆಲೆಯಲ್ಲಿ ಕೋರ್ಟ್‍ಗೆ ಬಂದಿದ್ದ ನಿರ್ಭಯ ತಾಯಿ ನಿರಾಸೆಯಿಂದ ಹಿಂತಿರುಗಿದ್ರು. ಮಂಗಳವಾರ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.

  • ಹಿಂಸಾಚಾರ ನಿಂತ ಬಳಿಕವಷ್ಟೇ ಅರ್ಜಿ ವಿಚಾರಣೆ – ಸುಪ್ರೀಂ ಕೋರ್ಟ್

    ಹಿಂಸಾಚಾರ ನಿಂತ ಬಳಿಕವಷ್ಟೇ ಅರ್ಜಿ ವಿಚಾರಣೆ – ಸುಪ್ರೀಂ ಕೋರ್ಟ್

    ನವದೆಹಲಿ: ಹಿಂಸಾಚಾರ ನಿಲ್ಲಿಸಿದ ಬಳಿಕವಷ್ಟೇ ಬಳಿಕವಷ್ಟೇ ವಿದ್ಯಾರ್ಥಿಗಳ ಕುರಿತಾಗಿ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಎಸ್.ಎ.ಬೊಬ್ಡೆ ಹೇಳಿದ್ದಾರೆ.

    ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಉತ್ತರ ಪ್ರದೇಶದ ಅಲಿಗಡ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂನಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ಮೊದಲು ಹಿಂಸಾಚಾರದ ಪ್ರತಿಭಟನೆ ನಿಲ್ಲಬೇಕು. ಹಿಂಸಾಚಾರ ನಿಂತ ನಂತರವೇ ಅರ್ಜಿ ವಿಚಾರಣೆ ಮಾಡಲಾಗುವುದು. ಹಿಂಸಾಚಾರ ನಿಲ್ಲದೇ ಇದ್ದರೆ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಸೂಚಿಸಿದೆ.

    ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳು ಎನ್ನುವ ಒಂದೇ ಕಾರಣಕ್ಕೆ ಕಾನೂನನ್ನು ಕೈಗೆತ್ತುಕೊಳ್ಳುವಂತಿಲ್ಲ. ಪ್ರತಿಭಟನೆ ನಿಂತ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿ ನಾಳೆಗೆ ಮುಂದೂಡಿತು.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಅಲಿಗಡ ವಿಶ್ವವಿದ್ಯಾಲಯದ ಪರವಾಗಿ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಿದ್ದರು. ವಕೀಲ ಕಾಲಿನ್ ಗೊನ್ಸಾಲ್ವ್ಸ್ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ಜಾಮಿಯಾ ಮಿಲಿಯಾ ಪ್ರಕರಣದ ತನಿಖೆ ನಡೆಸಬೇಕೆಂದು ಮನವಿ ಮಾಡಿದರು. ಈ ವೇಳೆ ಹಿರಿಯ ವಕೀಲರು, ಪೊಲೀಸರ ದೌರ್ಜನ್ಯದ ವಿಡಿಯೋ ನೋಡಿ ನಿಮಗೆ ಪ್ರಕರಣದ ತೀವ್ರತೆ ತಿಳಿಯುತ್ತದೆ ಎಂದಾಗ ಬೊಬ್ಡೆ, ನಾವು ಯಾವುದೇ ವಿಡಿಯೋ ವೀಕ್ಷಿಸುವುದಿಲ್ಲ. ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದರೆ ಅರ್ಜಿ ವಿಚಾರಣೆ ನಡೆಸುವುದೇ ಇಲ್ಲ ಎಂದು ಖಡಕ್ ಆಗಿ ಸೂಚಿಸಿದರು.