Tag: Body Donation

  • ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ

    ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ

    ಹಾವೇರಿ: ಉಕ್ರೇನ್‌ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಹಾವೇರಿಯ ಚಳಗೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ಕುಟುಂಬಸ್ಥರು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ದಾವಣಗೆರೆಯಲ್ಲಿರುವ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ದಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಥಿಯೇಟರ್ ಮೇಲೆ ಬಾಂಬ್ ದಾಳಿ – 130 ಮಂದಿಯ ರಕ್ಷಣೆ

    ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಭಾನುವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬರಲಿದೆ. ಸೋಮವಾರ ಮುಂಜಾನೆ 3 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮೃತದೇಹ ಬರಲಿದ್ದು, ಸಂಜೆ ಹೊತ್ತಿಗೆ ಹುಟ್ಟೂರು ತಲುಪುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಶೆಲ್ ದಾಳಿಗೊಳಗಾದ ಯುವತಿ ನೋಡಲು ಆಸ್ಪತ್ರೆಗೆ ಭೇಟಿಕೊಟ್ಟ ಉಕ್ರೆನ್ ಅಧ್ಯಕ್ಷ

    ಭಾರತ ಆಪರೇಷನ್ ಗಂಗಾ ಮಿಷನ್ ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಕರೆತಂದು ನಿಟ್ಟುಸಿರು ಬಿಟ್ಟಿದೆ.

  • ರಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದ ಹಿರಿಯ ಜೀವ

    ರಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದ ಹಿರಿಯ ಜೀವ

    ರಾಯಚೂರು: ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ ವೃದ್ಧರೊಬ್ಬರು ತಮ್ಮ ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    ಜಿಲ್ಲೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಮಲ್ಲಿಕಾರ್ಜುನ ಸ್ವಾಮಿಯವರ ತಂದೆ ಮಹಾಂತಯ್ಯ ಸ್ವಾಮಿ(87) ವಯೋಸಹಜ ಅನಾರೋಗ್ಯದಿಂದ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಯಚೂರು ಕೃಷಿ ಮಹಾವಿದ್ಯಾಲಯದ ನಿವೃತ್ತ ಹಿರಿಯ ಕೃಷಿ ಸಹಾಯಕ ಮಹಾಂತಯ್ಯ ಸ್ವಾಮಿ ತಮ್ಮ ಸಾವಿನ ಬಳಿಕ ಕಣ್ಣು ಹಾಗೂ ದೇಹದಾನ ಮಾಡಲು ಮಕ್ಕಳಿಗೆ ತಿಳಿಸಿದ್ದರು. ಹೀಗಾಗಿ ಮಹಾಂತಯ್ಯ ಸ್ವಾಮಿ ಇಚ್ಚೆಯಂತೆ ಅವರ ಕಣ್ಣುಗಳನ್ನ ನಗರದ ನವೋದಯ ಮೆಡಿಕಲ್ ಕಾಲೇಜು ಹಾಗೂ ದೇಹವನ್ನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಿಮ್ಸ್‌ಗೆ ದಾನ ಮಾಡಲಾಗಿದೆ.

    ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಾಂತಯ್ಯ ಸ್ವಾಮಿ ಶುಕ್ರವಾರ ಸಂಜೆ ರಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಗರದ ಅಸ್ಕಿಹಾಳ ಬಳಿಯಿರುವ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯ ಅವರ ಮನೆಯಲ್ಲಿ ಅಂತಿಮ ದರ್ಶನ ಬಳಿಕ ರಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಲಾಯಿತು.