Tag: bomb blasts

  • ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ

    ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ

    ಮೊಗಾಡಿಶು: ಮುಂಬೈನ ತಾಜ್ ಹೋಟೆಲ್ ಅನ್ನು ಉಗ್ರರು ವಶಕ್ಕೆ ಪಡೆದು ಹತ್ಯಾಕಾಂಡ ನಡೆಸಿದ್ದ ಮಾದರಿಯಲ್ಲೇ ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಗುಂಡಿನ ದಾಳಿ ಹಾಗೂ ಬಾಂಬ್ ಸ್ಫೋಟ ನಡೆದಿದೆ.

    ಅಲ್‌ಖೈದಾ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಲ್-ಶಬಾಬ್ ಸಂಘಟನೆಯ ಉಗ್ರರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, 8 ಮಂದಿ ನಾಗಕರಿಕರು ಬಲಿಯಾಗಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: 21 ಯುದ್ಧವಿಮಾನ, 5 ರಕ್ಷಣಾ ಹಡಗುಗಳಿಂದ ತೈವಾನ್ ಸುತ್ತುವರಿದ ಚೀನಾ

    ಅಲ್-ಶಬಾಬ್ ಭಯೋತ್ಪಾದಕ ಗುಂಪಿನ ಉಗ್ರರು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ, ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದ ಹಲವಾರು ಸಾವು-ನೋವುಗಳು ವರದಿಯಾಗಿವೆ. ಹೋಟೆಲ್ ಒಳಗೆ ಸ್ಫೋಟದ ಸದ್ದು ಕೂಡ ಕೇಳಿಬಂದಿದೆ. ದಾಳಿಯಲ್ಲಿ 8 ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಥುರಾ ದೇವಾಲಯದಲ್ಲಿ ಜನದಟ್ಟಣೆ – ಉಸಿರುಗಟ್ಟಿ ಇಬ್ಬರ ಸಾವು

    BOMB BLAST
    ಸಾಂದರ್ಭಿಕ ಚಿತ್ರ

    ಹಯಾತ್ ಹೋಟೆಲ್ ಮೇಲಿನ ದಾಳಿಯು ಭದ್ರತಾ ಪಡೆಗಳು ಮತ್ತು ಜಿಹಾದಿ ಗುಂಪಿನ ಬಂದೂಕುಧಾರಿಗಳ ನಡುವೆ ಭಾರೀ ಗುಂಡಿನ ಚಕಮಕಿ ಉಂಟುಮಾಡಿದೆ. ಉಗ್ರರು ಇನ್ನೂ ಕಟ್ಟಡದೊಳಗೆ ಅಡಗಿಕೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿ ಮೊಹಮ್ಮದ್ ಅಬ್ದಿಕದಿರ್ ಹಸನ್ ತಿಳಿಸಿದ್ದಾರೆ.

    ಈ ವರ್ಷದ ಮೇನಲ್ಲಿ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ಅಧಿಕಾರ ವಹಿಸಿಕೊಂಡ ನಂತರ ಸೊಮಾಲಿಯಲ್ಲಿ ನಡೆದ ಮೊದಲ ದಾಳಿ ಇದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಯ ಸಂಬಂಧಿ ಜೊತೆ ಅಖಿಲೇಶ್‌ ಮತಯಾಚನೆ: ಯೋಗಿ ಆದಿತ್ಯನಾಥ್

    ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಯ ಸಂಬಂಧಿ ಜೊತೆ ಅಖಿಲೇಶ್‌ ಮತಯಾಚನೆ: ಯೋಗಿ ಆದಿತ್ಯನಾಥ್

    ಲಕ್ನೋ: 2008ರಲ್ಲಿ ಅಹಮದಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಯೊಬ್ಬನ ಮನೆಯ ಸಂಬಂಧಿ ಜೊತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಮತಯಾಚಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದಾರೆ.

    ಅಹಮದಾಬಾದ್‌ ನ್ಯಾಯಾಲಯವು 2008ರ ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣ ಘೋಷಿಸಿತು. ಅಪರಾಧಿಗಳಿಗೆ ಮರಣ ದಂಡನೆ ಮತ್ತು ಜೀವಾವಧಿ ಶಿಕ್ಷೆ ನೀಡಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಇದ್ದಾರೆ. ಅವರಲ್ಲಿ ಒಬ್ಬ ಅಪರಾಧಿಯ ಕುಟುಂಬದ ಸದಸ್ಯನೊಬ್ಬ ಎಸ್‌ಪಿ ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಯೋಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

    ಸಮಾಜವಾದಿ ಪಕ್ಷವನ್ನು ಬೆಂಬಲಿಸುವುದು ಎಂದರೆ ಭಯೋತ್ಪಾದಕರಿಗೆ ಬೆಂಬಲ ನೀಡಿದಂತೆ. ಎಲ್ಲವೂ ಬದಲಾಗಿದೆ ಆದರೆ ಮುಲಾಯಂ ಸಿಂಗ್‌ ಯಾದವ್‌ ಸ್ಥಾಪಿಸಿದ ಪಕ್ಷವು ಹಾಗೆಯೇ ಉಳಿದಿದೆ ಎಂದು ಟೀಕಿಸಿದ್ದಾರೆ.

    ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಬಡವರು ಹಸಿವಿನಿಂದ ಸಾಯುತ್ತಿದ್ದರು. ಜಂಗಲ್‌ ರಾಜ್‌ ಇತ್ತು. ಅಪರಾಧಿಗಳು ಅಧಿಕಾರ ನಡೆಸುತ್ತಿದ್ದರು. ಪೊಲೀಸ್‌ ಠಾಣೆಗಳನ್ನು ರೌಡಿಶೀಟರ್‌ಗಳು ನಿಯಂತ್ರಿಸುತ್ತಿದ್ದರು. ಉದ್ಯಮಗಳನ್ನು ನಾಶಪಡಿಸಲಾಗಿತ್ತು. ಯುವಕರು ನಿರುದ್ಯೋಗಿಗಳಾಗಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮತಗಟ್ಟೆಯಲ್ಲಿ ತೊಂದರೆಯಾಗಿದ್ದಕ್ಕೆ ಕ್ಷಮೆ ಕೇಳಿದ ತಮಿಳು ನಟ ವಿಜಯ್

    bomb blast

    ಅಹಮದಾಬಾದ್‌ ಸರಣಿ ಸ್ಫೋಟ ಪ್ರಕರಣದ ವಿಚಾರಣೆ ನಿನ್ನೆ ನಡೆಸಲಾಯಿತು. ಸ್ಫೋಟದಲ್ಲಿ 56 ಜನರ ಸಾವಿಗೆ ಕಾರಣವಾದ 36 ಅಪರಾಧಿಗಳಿಗೆ ಮರಣ ದಂಡನೆ, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

  • ಲಂಕಾದಲ್ಲಿ ಸರಣಿ ಸ್ಫೋಟ ಪ್ರಕರಣ- ಬೆಂಗ್ಳೂರಿಗೆ ನಾಗರಾಜ ರೆಡ್ಡಿ ಮೃತದೇಹ

    ಲಂಕಾದಲ್ಲಿ ಸರಣಿ ಸ್ಫೋಟ ಪ್ರಕರಣ- ಬೆಂಗ್ಳೂರಿಗೆ ನಾಗರಾಜ ರೆಡ್ಡಿ ಮೃತದೇಹ

    – ಮುಗಿಲುಮುಟ್ಟಿದ ಬಂಧುಬಾಂಧವರ ಆಕ್ರಂದನ

    ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದ್ದ ನಗರದ ಬಿಟಿಎಂ ಲೇಔಟ್‍ನ ನಾಗರಾಜರೆಡ್ಡಿ ಮೃತದೇಹ ಬೆಂಗಳೂರಿಗೆ ತರಲಾಗಿದೆ.

    ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಶಾಸಕ ಎಸ್‍ಆರ್ ವಿಶ್ವನಾಥ್ ನೇತೃತ್ವದಲ್ಲಿ ಮೃತದೇಹ ತರಲಾಯಿತು. ವಿಮಾನ ನಿಲ್ದಾಣದಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ತರಲಾಗುತ್ತಿದ್ದು, ಕೆಲ ಪ್ರಕ್ರಿಯೆ ಬಳಿಕ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಟಿಎಂ ಲೇಔಟ್ ನಿವಾಸಕ್ಕೆ ರವಾನಿಸಲಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆ ಬಳಿಕ ನಾಗರಾಜರೆಡ್ಡಿ ಅಂತ್ಯಕ್ರಿಯೆ ನಡೆಯುವ ನಿರೀಕ್ಷೆ ಇದ್ದು,  ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

    ಕೊಲಂಬೋದಲ್ಲಿ ಒಟ್ಟಾರೆ ಸಾವನ್ನಪ್ಪಿದ ಕನ್ನಡಿಗರ ಸಂಖ್ಯೆ 8ಕ್ಕೆ ಏರಿಕೆ ಆಗಿದ್ದು, ಮಾರೇಗೌಡ, ಪುಟ್ಟರಾಜು ಅವರ ಮೃತದೇಹ ಪತ್ತೆಯಾಗಿದೆ. ಸದ್ಯ ನಾಗರಾಜರೆಡ್ಡಿ ಅವರ ಮೃತ ದೇಹ ಬೆಂಗಳೂರಿಗೆ ತಲುಪಿದ್ದು, ಇಂದು ಮಧ್ಯರಾತ್ರಿ 4 ಮೃತದೇಹಗಳು ಹಾಗೂ ಉಳಿದ ಮೃತದೇಹಗಳು ಬುಧವಾರ ಬೆಳಗ್ಗೆ ತರಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ.

    ಸ್ಫೋಟ ಪ್ರಕರಣದಲ್ಲಿ ಕೋರಮಂಗಲದ ಪುರುಷೋತ್ತಮ ರೆಡ್ಡಿ ಅವರಿಗೆ ತೀವ್ರವಾಗಿ ಗಾಯವಾಗಿದ್ದು, ಕೊಲಂಬೋದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಾಳೆ ಕೊಲಂಬೋದಿಂದ ಏರ್ ಲಿಫ್ಟ್ ಮಾಡಿ ಕರೆತರಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ಪುರುಷೋತ್ತಮ ರೆಡ್ಡಿ ಅವರು ಯಲಹಂಕ ಶಾಸಕ ಎಸ್ ವಿಶ್ವನಾಥ್ ಸಂಬಂಧಿಯಾಗಿದ್ದು, ಪ್ರವಾಸಕ್ಕೆ ತೆರಳಿ ಶಾಂಗ್ರಿಲಾ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದರು.

  • ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ ಪ್ರಕರಣ – 20ಕ್ಕೂ ಹೆಚ್ಚು ಕನ್ನಡಿಗರು ವಾಪಸ್

    ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ ಪ್ರಕರಣ – 20ಕ್ಕೂ ಹೆಚ್ಚು ಕನ್ನಡಿಗರು ವಾಪಸ್

    ಚಿಕ್ಕಬಳ್ಳಾಪುರ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ಬಾಂಬ್ ಸ್ಫೋಟದಿಂದ ಪ್ರವಾಸಕ್ಕೆ ತೆರಳಿದ್ದ ರಾಜ್ಯದ 6 ಮಂದಿ ಮೃತಪಟ್ಟಿದ್ದು, ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ. ಇದೇ ವೇಳೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮಂದಿ ಇಂದು ಸಂಜೆ ಕೊಲಂಬೋದಿಂದ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದಾರೆ.

    ಬೆಂಗಳೂರಿನ ವಿಜಯನಗರ, ಜಯನಗರ ಸೇರಿದಂತೆ ವಿವಿಧ ಕಡೆಯಿಂದ ಶ್ರೀಲಂಕಾದ ವಿವಿಧ ಭಾಗಗಳಿಗೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್ಸಾಗಿದ್ದು ಕುಟುಂಬಸ್ಥರು ಸೇರಿದಂತೆ ಆತ್ಮೀಯರು ನಿಟ್ಟುಸಿರು ಬಿಟ್ಟಿದ್ದಾರೆ.

    ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರವಾಸಿಗರು ಮಾಧ್ಯಮಗಳೊಂದಿಗೆ ಮಾತನಾಡಿ, ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅದೊಂದು ಘೋರ ದುರಂತ, ಇಂತಹ ಕೃತ್ಯಗಳು ನಡೆಯಬಾರದಿತ್ತು ಎಂದು ಪ್ರವಾಸಿಗರು ದಾಳಿಯನ್ನ ಖಂಡಿಸಿದರು.

    ನಾವು ಇದ್ದ ಸ್ವಲ್ಪ ದೂರದಲ್ಲೇ ಬ್ಲಾಸ್ಟ್ ಆಗಿತ್ತು, ಘಟನೆ ಬಳಿಕ ಶ್ರೀಲಂಕಾ ಸರ್ಕಾರ ನಿಷೇಧಾಜ್ಞೆ ಘೋಷಣೆ ಮಾಡಿತ್ತು. ಹೀಗಾಗಿ ವಿಮಾನದಲ್ಲಿ ಹೆಚ್ಚು ಭದ್ರತೆ ಕೈಗೊಂಡಿದ್ದ ಪರಿಣಾಮ ಎಲ್ಲವನ್ನೂ ಎದುರಿಸಿ ಬರಬೇಕಾಯಿತು. ನಮ್ಮ ಭಾರತದ ನೆಲಕ್ಕೆ ಬಂದಿಳಿದ ಮೇಲೆ ನಮಗೆ ಸಮಾಧಾನವಾಯಿತು ಎಂದು ಪ್ರವಾಸಿಗರು ತಿಳಿಸಿದ್ದಾರೆ.

  • ಶ್ರೀಲಂಕಾ ಸ್ಫೋಟ: ಡಿಎನ್‍ಎ ಪರೀಕ್ಷೆ ಹೇಗೆ? ಯಾಕೆ ಮಾಡುತ್ತಾರೆ?

    ಶ್ರೀಲಂಕಾ ಸ್ಫೋಟ: ಡಿಎನ್‍ಎ ಪರೀಕ್ಷೆ ಹೇಗೆ? ಯಾಕೆ ಮಾಡುತ್ತಾರೆ?

    ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿ ಘಟನೆಯಲ್ಲಿ ಕರ್ನಾಟಕ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳು ಸಿಕ್ಕಿದ್ದು ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದು, ಸಾವನ್ನಪ್ಪಿದ್ದ ಬಗ್ಗೆ ಮಾಹಿತಿ ಪಡೆಯಲು ತಜ್ಞರು ಡಿಎನ್‍ಎ ಪರೀಕ್ಷೆ ಮೊರೆ ಹೋಗುವ ಸಾಧ್ಯತೆ ಇದೆ.

    ವ್ಯಕ್ತಿಯೊಬ್ಬರು ಸಾವನ್ನಪ್ಪಿ ಆತನ ಗುರುತು ಲಭ್ಯವಾಗದ ಸಂದರ್ಭದಲ್ಲಿ ಈ ವಿಧಾನವನ್ನು ತಜ್ಞರು ಬಳಕೆ ಮಾಡುತ್ತಾರೆ. ಅದರಲ್ಲೂ ಬಾಂಬ್ ದಾಳಿ ನಡೆದ ಸಂದರ್ಭದಲ್ಲಿ ಹೆಚ್ಚಿನ ಮಂದಿ ಸಾವನ್ನಪ್ಪಿದ ಪರಿಣಾಮ ಸದ್ಯ ಪ್ರಕ್ರಿಯೆ ತಡವಾಗಬಹುದು ಎಂದು ಬೆಂಗಳೂರಿನ ಸಂಶೋಧಕ, ವಿಧಿ ವಿಜ್ಞಾನ ತಜ್ಞ ಡಾ.ದಿನೇಶ್ ರಾವ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಡಿಎನ್‍ಎ ಪರೀಕ್ಷೆ ಹೇಗೆ?
    ವೈದಕೀಯ ಪರೀಕ್ಷೆಯಲ್ಲಿ ಡಿಎನ್‍ಎ ಪ್ರಕ್ರಿಯೆಯನ್ನು ಪ್ರೊಫೈಲಿಂಗ್ ಎಂದು ಕರೆಯುತ್ತಾರೆ. ಈ ವೇಳೆ ಟಿಶ್ಯೂ ಸ್ಯಾಂಪಲಿಂಗ್ ಮೂಲಕ ದೇಹದ ಗುರುತು ಪತ್ತೆ ಹಚ್ಚಲಾಗುತ್ತದೆ. ಸಾಮಾನ್ಯ ಪ್ರಕರಣದಲ್ಲಿ ಡಿಎನ್‍ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನೇ ಬಳಸುತ್ತಾರೆ. ವಿಶೇಷ ಸಂದರ್ಭದಲ್ಲಿ ಡಿಎನ್‍ಎ ಪರೀಕ್ಷೆ ಮಾಡಲು ಕೂದಲು, ಉಗುರು, ಚರ್ಮವನ್ನು ಪಡೆಯಲಾಗುತ್ತದೆ.

    ಯಾರ ಡಿಎನ್‍ಎ ಪಡೆಯುತ್ತಾರೆ?
    ಈ ಪರೀಕ್ಷೆಯನ್ನು ನಡೆಸಲು ಮೃತ ವ್ಯಕ್ತಿಯ ವ್ಯಕ್ತಿಯ ಮಗ, ಸಹೋದರರು, ತಂದೆ, ತಾಯಿ ಹಾಗೂ ರಕ್ತ ಸಂಬಂಧಿಕರ ಮಾದರಿಯನ್ನು ಪಡೆಯುತ್ತಾರೆ. ಆದರೆ ಪತ್ನಿ, ಪತಿಯ ಡಿಎನ್‍ಎ ನಿಂದ ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವುದು ಕಷ್ಟ ಸಾಧ್ಯವಾಗುತ್ತದೆ. ಸಂಬಂಧಿಕರ ಬಳಿ ಪಡೆದ ಮಾದರಿಯನ್ನು ಮೃತ ವ್ಯಕ್ತಿಯ ದೇಹದ ಡಿಎನ್‍ಎಗೆ ಹೋಲಿಕೆ ಮಾಡಿ ನೋಡಲಾಗುತ್ತದೆ. ವಿಶೇಷವೆಂದರೆ ಡಿಎನ್‍ಎ ಪರೀಕ್ಷೆಯಲ್ಲೂ ಶೇ.100ಕ್ಕೆ 100 ರಷ್ಟು ಹೊಂದಾಣಿಕೆ ಆಗುವುದಿಲ್ಲ. ಕೇವಲ ಶೇ.60 ರಿಂದ 70 ರಷ್ಟು ಹೊಂದಾಣಿಕೆಯಾಗುತ್ತದೆ. ಈ ಫಲಿತಾಂಶದ ಆಧಾರದಲ್ಲಿ ಮೃತ ದೇಹವನ್ನು ಗುರುತಿಸಲಾಗುತ್ತದೆ.

    ಡಿಎನ್‍ಎ ಪರೀಕ್ಷೆ ಏಕೆ?
    ಸಾಮಾನ್ಯ ಪ್ರಕರಣದಲ್ಲಿ ಡಿಎನ್‍ಎ ಪರೀಕ್ಷೆಯನ್ನು ವ್ಯಕ್ತಿಯ ಗುರುತು ಪತ್ತೆ ಮಾಡಲು ಬಳಕೆ ಮಾಡುತ್ತಾರೆ. ಆದರೆ ಇಂತಹ ಘೋರ ದಾಳಿ ಸಂದರ್ಭದಲ್ಲಿ ಮೃತ ವ್ಯಕ್ತಿಯ ದೇಹದ ಭಾಗಗಳು ಛಿದ್ರ ಛಿದ್ರವಾಗಿರುವ ಕಾರಣ ಪರೀಕ್ಷೆ ನಡೆಸುವುದು ಕಡ್ಡಾಯವಾಗುತ್ತದೆ. ಏಕೆಂದರೆ ಆತ್ಮಾಹುತಿ ದಾಳಿ ನಡೆಸಿದ ವ್ಯಕ್ತಿಯ ದೇಹದ ಭಾಗಗಳು ಇಲ್ಲಿ ಲಭ್ಯವಾಗುವುದರಿಂದ ಪೊಲೀಸ್ ತನಿಖೆ ನಡೆಸಲು ಪ್ರಮುಖ ಸಾಕ್ಷಿಯಾಗಿ ಲಭ್ಯವಾಗಲಿದೆ. ಇವುಗಳ ಆಧಾರ ಮೇಲೆಯೇ ಮುಂದಿನ ತನಿಖೆ ಬಹುಬೇಗ ನಡೆಯುವ ಸಾಧ್ಯತೆ ಇರುತ್ತದೆ. ಅಲ್ಲದೇ ದಾಳಿ ಹಿಂದಿನ ಆರೋಪಿಗಳ ಪತ್ತೆಗೂ ಇವು ನೆರವು ನೀಡಲಿದೆ.

    ಶ್ರೀಲಂಕಾದಲ್ಲಿ ನಡೆದ ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೃತದೇಹಗಳ ಸಂಖ್ಯೆ ಹೆಚ್ಚಾಗಿದ್ದು, ಡಿಎನ್‍ಎ ಪರೀಕ್ಷೆ ಸೇರಿದಂತೆ ಇತರೇ ಪರೀಕ್ಷೆಗಳನ್ನು ನಡೆಸಲು ಕಾಲಾವಕಾಶದ ಅಗತ್ಯವಿರುತ್ತದೆ. ವಿದೇಶಾಂಗ ಇಲಾಖೆ ಎಷ್ಟೇ ನಿರಂತರವಾಗಿ ಸಂಪರ್ಕ ಸಾಧಿಸಿ ನಮ್ಮವರ ಬಗ್ಗೆ ಮಾಹಿತಿ ಲಭಿಸಲು ಸಮಯ ಬೇಕಾಗುತ್ತದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

  • ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟಕ್ಕೆ 160 ಬಲಿ – 10 ದಿನದ ಮೊದಲೇ ಸಿಕ್ಕಿತ್ತು ಸುಳಿವು

    ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟಕ್ಕೆ 160 ಬಲಿ – 10 ದಿನದ ಮೊದಲೇ ಸಿಕ್ಕಿತ್ತು ಸುಳಿವು

    ಕೊಲಂಬೋ: ದೇಶದಲ್ಲಿ ಬಾಂಬ್ ದಾಳಿ ನಡೆಯುವ 10 ದಿನದ ಮೊದಲೇ ಶ್ರೀಲಂಕಾ ಪೊಲೀಸ್ ಮುಖ್ಯಸ್ಥರು ದೇಶದ ವಿವಿಧೆಡೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಂಚಿಕೊಂಡಿದ್ದರು.

    ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಪುನೀತ್ ಜಯಸುಂದರ ಅವರು ಏ.11 ರಂದು ಎಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನು ಹಂಚಿಕೊಂಡು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು ಎಂಬುದಾಗಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

    “ವಿದೇಶಿ ಗುಪ್ತಚರ ಇಲಾಖೆಯೊಂದು ಶ್ರೀಲಂಕಾದಲ್ಲಿ ನ್ಯಾಷನಲ್ ಥೌಹೀತ್ ಜಮಾತ್ (ಎನ್‍ಟಿಜೆ) ಸಂಘಟನೆ ಸ್ಫೋಟ ನಡೆಸಲು ಸಿದ್ಧತೆ ನಡೆಸಿದೆ. ಅಲ್ಲದೇ ಚರ್ಚ್‍ಗಳು ಹಾಗೂ ಭಾರತದ ಧೂತವಾಸ ಕಚೇರಿಯೇ ಉಗ್ರರ ಗುರಿ” ಈ ಮಾಹಿತಿಯನ್ನು ಹಂಚಿಕೊಂಡಿದ್ದರು. ದಾಳಿಯ ಬಗ್ಗೆ 10 ದಿನಗಳ ಮುನ್ನವೇ ಮಾಹಿತಿ ಲಭಿಸಿದ್ದರೂ ಕೃತ್ಯ ತಡೆಯಲು ಶ್ರೀಲಂಕಾ ವಿಫಲವಾಗಿದೆ.

    ಎನ್‍ಟಿಜೆ ಸಂಘಟನೆ ಮೂಲಭೂತವಾದಿ ಮುಸ್ಲಿಂ ಸಂಘಟನೆಯಯಾಗಿದ್ದು, ಕಳೆದ ವರ್ಷ ಈ ಸಂಘಟನೆ ದೇಶದಲ್ಲಿ ಕಾರ್ಯಪ್ರವೃತ್ತಿ ಆಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಬುದ್ಧನ ಪ್ರತಿಮೆಗಳನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸಂಘಟನೆ ಹೆಸರು ಬೆಳಕಿಗೆ ಬಂದಿತ್ತು.

    ಇಂದು ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕನಿಷ್ಟ 160 ಮಂದಿ ಮೃತ ಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕೊಲಂಬೋದ ಪ್ರಮುಖ ಚರ್ಚ್ ಮೂರು ಚರ್ಚ್ ಹಾಗೂ 2 ಹೋಟೆಲ್ ಗಳ ಮೇಲೆ ನಡೆದ ದಾಳಿ ಇದಾಗಿದೆ. ಹಲವು ವರ್ಷಗಳ ಬಳಿಕ ಶ್ರೀಲಂಕಾದಲ್ಲಿ ನಡೆದ ಭೀಕರ ದಾಳಿ ಇದಾಗಿದ್ದು, ಸ್ಫೋಟದ ಬಗ್ಗೆ ಯಾವುದೇ ಸಂಸ್ಥೆ ಹೊಣೆ ಹೊತ್ತುಕೊಂಡಿಲ್ಲ.

    ಇತ್ತ ದಾಳಿಯಲ್ಲಿ ತೊಂದರೆಗೆ ಸಿಲುಕಿರುವ ಭಾರತೀಯರ ಸಹಾಯಕ್ಕಾಗಿ ಭಾರತ ರಾಯಭಾರ ಕಚೇರಿ ಸಹಾಯವಾಣಿಯನ್ನು ಆರಂಭಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಸಹಾಯವಾಣಿ ಸಂಖ್ಯೆ: +94777 903082, +94112 422789

  • 40 ಯೋಧರ ಬಲಿ ಪಡೆದಿದ್ದ ಪುಲ್ವಾಮಾದಲ್ಲಿ ಮತ್ತೆ ಬಾಂಬ್ ಸ್ಫೋಟ

    40 ಯೋಧರ ಬಲಿ ಪಡೆದಿದ್ದ ಪುಲ್ವಾಮಾದಲ್ಲಿ ಮತ್ತೆ ಬಾಂಬ್ ಸ್ಫೋಟ

    – ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕ್ ತಂತ್ರ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ದಾಳಿ ಮಾಡಿ 40 ಭಾರತೀಯ ಯೋಧರನ್ನು ಬಲಿಪಡೆದಿದ್ದ ಸ್ಥಳದಲ್ಲಿ ಮತ್ತೆ ಬಾಂಬ್ ಸ್ಫೋಟವಾಗಿದೆ.

    ಪುಲ್ವಾಮಾ ಜಿಲ್ಲೆಯ ತ್ರಾಲ್‍ನಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಬ್ಲಾಸ್ಟ್ ಮಾಡಿದ್ದು, ಮಿಲಿಟರಿಯನ್ನು ಟಾರ್ಗೆಟ್ ಮಾಡಿ ಭಯೋತ್ಪಾದಕರು ಬಾಂಬ್ ಸ್ಫೋಟಿಸಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಬಾಂಬ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದೆ.

    ಈ ಸ್ಫೋಟದಿಂದ ಓರ್ವ ನಾಗರಿಕನಿಗೆ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕಳೆದ ದಿನವಷ್ಟೆ ಶಾಂತಿ ಸ್ಥಾಪನೆಗಾಗಿ ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ ಮಾಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಕೊನೆಗೆ ಸತಾಯಿಸಿ ಸತಾಯಿಸಿ ಶುಕ್ರವಾರ ರಾತ್ರಿ 9 ಗಂಟೆಯ ಸುಮಾರಿಗೆ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿದ್ದರು. ಆದರೆ ಪಾಪಿ ಪಾಕಿಸ್ತಾನ ಮತ್ತೆ ಬಾಂಬ್ ಸ್ಫೋಟ ಮಾಡುವ ಮೂಲಕ ತನ್ನ ಕುತಂತ್ರ ಬುದ್ಧಿಯನ್ನು ತೋರಿಸಿದೆ.

    ವಿಷ ಬೆರೆಸಲು ತಂತ್ರ:
    ಫೆಬ್ರವರಿ 14 ರಂದು ಸೈನಿಕರು ಹೋಗುತ್ತಿದ್ದ ವಾಹನಗಳ ಮೇಲೆ ಉಗ್ರ ದಾಳಿ ಮಾಡಿದ್ದನು. ಇದರಿಂದ 40 ಯೋಧರು ಹುತಾತ್ಮರಾಗಿದ್ದರು. ಆದರೆ ಈಗ ಮತ್ತೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದೆ. ಇನ್ನೊಂದು ಕಡೆ ಪಾಕಿಸ್ತಾನ ಭಾರತದ ಸೈನಿಕರ ಹತ್ಯೆಗೆ ಸಂಚು ಮಾಡಿದ್ದು, ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕಿಸ್ತಾನ ಕುತಂತ್ರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಪಾಕಿಸ್ತಾನ ಸೇನಾ ಶಿಬಿರಗಳಲ್ಲಿರುವ ಆಹಾರ ಡಿಪೋದಲ್ಲಿ ವಿಷ ಬೆರೆಸಲು ಪಿತೂರಿ ಮಾಡಿದ್ದು, ಇದನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಜೊತೆ ಸೇರಿ ಸಂಚು ರೂಪಿಸಿದೆ ಎಂದು ಹೇಳಲಾಗುತ್ತಿದೆ. ಕಾಶ್ಮೀರದಲ್ಲಿರುವ ಭಯೋತ್ಪಾದಕರು ವಿಷ ಬೆರೆಸಬಹುದು ಎಂದು ಪಡಿತರ ಡಿಪೋಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.

    ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 3 ಗಂಟೆಗೆ ಈ ಘಟನೆ ನಡೆದಿದ್ದು, ಸ್ಫೋಟದ ಸದ್ದಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

    ಬಾಂಬ್ ಸ್ಫೋಟವಾದ ಸ್ಥಳದಲ್ಲಿ ತುರ್ತು ಸೇವೆ ಒದಗಿಸಲಾಗುತ್ತಿದ್ದು ಹಲವರು ಮೃತಪಟ್ಟಿದ್ದರೆ, ಹಲವರಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಶೀಘ್ರ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು ಗಾಯಾಳುಗಳ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂಗೀತ ಕಾರ್ಯಕ್ರಮದಲ್ಲಿ ಎರಡು ಬಾರಿ ದೊಡ್ಡ ಶಬ್ದ ಕೇಳಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಇದೊಂದು ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    https://twitter.com/ArianaGrande/status/866849021519966208

    https://www.youtube.com/watch?v=4UyH__FSlbo