Tag: Bomb Explosion

  • ಕಾಡು ಪ್ರಾಣಿಗಳಿಗಿಟ್ಟ ನಾಡಬಾಂಬ್ ಸ್ಫೋಟ- ಬಾಲಕಿ ಸಾವು

    ಕಾಡು ಪ್ರಾಣಿಗಳಿಗಿಟ್ಟ ನಾಡಬಾಂಬ್ ಸ್ಫೋಟ- ಬಾಲಕಿ ಸಾವು

    ಮುಂಬೈ: ಕಾಡು ಪ್ರಾಣಿಗಳನ್ನು ಕೊಲ್ಲಲು ಬಳಸುವ ನಾಡಸ್ಫೋಟಗೊಂಡು ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ತೀವ್ರ ಗಾಯಗಾಳದ ಘಟನೆ ಮಹಾರಾಷ್ಟ್ರದ ಪುಣಾದ ವಾಡ್ಮುಖವಾಡಿ, ಚಾರ್ಹೋಲಿ ಬುದ್ರುಕ್‍ನ ಹೊಲದಲ್ಲಿ ನಡೆದಿದೆ.

    ರಾಧಾ ಗೋಕುಲ್ ಗಾವ್ಲಿ(5) ಮೃತ ದುರ್ದೈವಿ. ಆರತಿ ಗಾವ್ಲಿ(4) ಮತ್ತು ರಾಜು ಗಾವ್ಲಿ ಗಾಯಗೊಂಡ ಮಕ್ಕಳು. ಪುಣೆ ನಗರದಿಂದ ಸುಮಾರು 20 ಕಿಮೀ ದೂರದಲ್ಲಿರುವ ವಾಡ್ಮುಖವಾಡಿಯ ಕಬ್ಬಿನ ಗದ್ದೆಯ ಬಳಿ ಈ ಮೂವರು ಮಕ್ಕಳು ಆಟವಾಡುತ್ತಿದ್ದರು. ಹೊಲದಲ್ಲಿ ಕಾಡು ಪ್ರಾಣಿಗಳ ರಕ್ಷಣೆಗೆಂದು ಇಟ್ಟಿದ್ದ ನಾಡಬಾಂಬ್ ಇಡಲಾಗಿತ್ತು. ಅದರ ಮೇಲೆ ಬಾಲಕಿಯು ಆಕಸ್ಮಿಕವಾಗಿ ಎಡವಿ ಬಿದ್ದಿದ್ದಾರೆ. ಆ ವೇಳೆಗೆ ನಾಡಬಾಂಬ್ ಸ್ಫೋಟ ಸಂಭವಿಸಿದೆ. ಇದರಿಂದ ಒಂದು ಮಗು ಸಾವನ್ನಪ್ಪಿದೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

    ಮಕ್ಕಳ ಪೋಷಕರು ಹಾಲು ಮಾರಾಟಗಾರುವುದರಿಂದ ಘಟನೆ ನಡೆದಾಗ ಸ್ಥಳದಲ್ಲಿ ಅವರು ಇರಲಿಲ್ಲ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಬಾಲಕಿಯು ಸಾವನ್ನಪ್ಪಿದ್ದಾಳೆ. ಪ್ರಕರಣ ಸಂಬಂಧಿಸಿ ಸ್ಫೋಟಕಗಳು ಅಲ್ಲಿಗೆ ಹೇಗೆ ಬಂದವು ಎಂಬುವ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ದನ್ನೂ ಓದಿ:  ಟಾಟಾ ಏಸ್ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ – 2 ಸಾವು, 10 ಮಂದಿಗೆ ಗಾಯ

  • ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ

    ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ

    ಕೋಲ್ಕತ್ತಾ: ಮುನ್ಸಿಪಲ್ ಕಾರ್ಪೋರೇಷನ್‍ಗೆ ಚುನಾವಣೆ ನಡೆಯ ವೇಳೆ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.

    ಈ ಘಟನೆಯಲ್ಲಿ ಮೂವರು ಮತದಾರರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡ ಮೂವರು ಇದೇ ಕ್ಷೇತ್ರದದ ಮತದಾರರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಘಟನೆಯ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಮತದಾನದ ಹಿನ್ನೆಲೆಯಲ್ಲಿ ಕೋಲ್ಕತ್ತಾ ನಗರದಲ್ಲಿ 23,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸುಮಾರು ಸಂಜೆ 5 ಗಂಟೆಯವರೆಗೆ ಮತದಾನ ನಡೆದಿತ್ತು