Tag: Bombay High Court

  • ಸ್ವಘೋಷಿತ ದೇವಮಾನವನಿಗೆ ಮಗಳನ್ನೇ ದಾನ ಮಾಡಿದ ತಂದೆ -ಛೀಮಾರಿ ಹಾಕಿದ ಕೋರ್ಟ್

    ಸ್ವಘೋಷಿತ ದೇವಮಾನವನಿಗೆ ಮಗಳನ್ನೇ ದಾನ ಮಾಡಿದ ತಂದೆ -ಛೀಮಾರಿ ಹಾಕಿದ ಕೋರ್ಟ್

    ಮುಂಬೈ: ಹೆಣ್ಣು ಮಗು ದಾನ ಮಾಡಬಹುದಾದ ಆಸ್ತಿಯಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್ ಪೀಠ ಹೇಳಿದೆ.

    ಏನಿದು ಪ್ರಕರಣ?: ಬಾಲಕಿಯೊಬ್ಬಳು ಆಕೆಯ ತಂದೆಯೊಂದಿಗೆ ಜಲ್ನಾ ಜಿಲ್ಲೆಯ ಬದ್ನಾಪುರದ ದೇವಸ್ಥಾನದಲ್ಲಿ ವಾಸಿಸುತ್ತಿದ್ದಳು. ತನ್ನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರ ವಿರುದ್ಧ ಬಾಲಕಿಯು ಆಗಸ್ಟ್ 2021ರಲ್ಲಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಸ್ವಘೋಷಿತ ದೇವಮಾನವ ಶಂಕೇಶ್ವರ ಧಾಕ್ನೆ ಮತ್ತು ಅವರ ಶಿಷ್ಯ ಸೋಪಾನ್ ಆರೋಪಿಗಳನ್ನು ಬಂಧಿಸಲಾಗಿತ್ತು. ಇದನ್ನೂ ಓದಿ:  ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

    ಬಾಲಕಿಯ ತಂದೆ ಸ್ವಯಂಘೋಷಿತ ದೇವಮಾನವನಿಗೆ ತನ್ನ 17 ವರ್ಷದ ಮಗಳನ್ನು ದಾನ ಮಾಡಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಬಾಲಕಿಯನ್ನು ಸ್ವಯಂಘೋಷಿತ ದೇವಮಾನವನಿಗೆ 2018ರಲ್ಲಿ ದಾನವಾಗಿ ನೀಡಿರುವ ದಾನಪತ್ರವನ್ನು ನ್ಯಾಯಮೂರ್ತಿಗಳು ವಿಚಾರಣೆ ವೇಳೆ ಗಮನಿಸಿದರು. 100 ಛಾಪಾ ಕಾಗದದಲ್ಲಿ ಬಾಲಕಿಯನ್ನು ದಾನವಾಗಿ ನೀಡಿರುವುದಾಗಿ ಉಲ್ಲೇಖಿಸಲಾಗಿತ್ತು. ಹುಡುಗಿಯ ತಂದೆ ತನ್ನ ಮಗಳನ್ನು ದಾನವಾಗಿ ಬಾಬಾಗೆ ನೀಡಿದ್ದಾನೆ ಎಂದು ಹೇಳಲಾಗಿದೆ. ದೇವರ ಸನ್ನಿಧಿಯಲ್ಲಿ ಕನ್ಯಾದಾನವನ್ನು ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್

    ಹುಡುಗಿ ಅಪ್ರಾಪ್ತಳಾಗಿರುವಾಗ, ತಂದೆ ಅದ್ಹೇಗೆ ದಾನ ಮಾಡಲು ಸಾಧ್ಯ ಎಂದು ನ್ಯಾಯಾಲಯ ಪ್ರಶ್ನೆ ಮಾಡಿತು. ದಾನ ಮಾಡಲು ಹೆಣ್ಣು ಒಂದು ಆಸ್ತಿಯಲ್ಲ ಎಂದು ನ್ಯಾಯಮೂರ್ತಿ ಕಂಕಣವಾಡಿ ಹೇಳಿದರು. ನ್ಯಾಯಾಲಯ ಕಣ್ಮುಚ್ಚಿ ಕುಳಿತಿಲ್ಲ. ಅಪ್ರಾಪ್ತ ಬಾಲಕಿಯ ಭವಿಷ್ಯದ ಬಗ್ಗೆ ಚಿಂತಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ.

  • “ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ” – ವಿವಾದಿತ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್

    “ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ” – ವಿವಾದಿತ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ.

    ನ್ಯಾಯಮೂರ್ತಿಗಳಾದ ಯು.ಯು ಲಲಿತ್, ಎಸ್ ರವೀಂದ್ರ ಭಟ್ ಮತ್ತು ಬೇಲಾ ಎಂ ತ್ರಿವೇದಿ ಅವರ ತ್ರಿ ಸದಸ್ಯ ಪೀಠವು ಪೋಕ್ಸೊ ಅಡಿಯಲ್ಲಿ ‘ಲೈಂಗಿಕ ದೌರ್ಜನ್ಯ’ದ ಅಪರಾಧದ ಅಂಶವು ಲೈಂಗಿಕ ಉದ್ದೇಶವಾಗಿದೆ ಮತ್ತು ಅಂತಹ ಘಟನೆಗಳಲ್ಲಿ ಚರ್ಮದಿಂದ ಚರ್ಮದ ಸಂಪರ್ಕವು ಪ್ರಸ್ತುತವಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: MLC ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ

    ಲೈಂಗಿಕ ದೌರ್ಜನ್ಯದ ಅಪರಾಧವನ್ನು ರೂಪಿಸುವ ಪ್ರಮುಖ ಅಂಶವೆಂದರೆ ಲೈಂಗಿಕ ಉದ್ದೇಶವೇ ಹೊರತು ಮಗುವಿನೊಂದಿಗೆ ಚರ್ಮದಿಂದ ಚರ್ಮದ ಸಂಪರ್ಕಕ್ಕೆ ಅಲ್ಲ, “ಚರ್ಮದಿಂದ ಚರ್ಮ” ಸಂಪರ್ಕವನ್ನು ಕಡ್ಡಾಯಗೊಳಿಸುವುದು ಸಣ್ಣ ಮತ್ತು ಅಸಂಬದ್ಧ ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ. ಲೈಂಗಿಕ ಉದ್ದೇಶದಿಂದ ಮಗುವಿನ ಯಾವುದೇ ಲೈಂಗಿಕ ಭಾಗವನ್ನು ಸ್ಪರ್ಶಿಸುವ ಯಾವುದೇ ಕ್ರಿಯೆಯನ್ನು ಪೋಕ್ಸೋ ಕಾಯಿದೆಯ ಸೆಕ್ಷನ್ 7 ರ ವ್ಯಾಪ್ತಿಯಿಂದ ತೆಗೆದು ಹಾಕಲಾಗುವುದಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

    ಪ್ರಕರಣ ಹಿನ್ನಲೆ:
    ಮುಂಬೈನಲ್ಲಿ 12ರ ಬಾಲಕಿ ಮೇಲೆ ವ್ಯಕ್ತಿಯೋರ್ವ ಲೈಗಿಂಕ ದೌರ್ಜನ್ಯ ಎಸಗಿದ್ದ, ಆಕೆಯ ಬಟ್ಟೆಯ ಮೇಲೆ ಸ್ತನಗಳನ್ನು ಸ್ಪರ್ಶಿಸುವ ಮೂಲಕ ಬಾಲಕಿಯನ್ನು ಉದ್ರೇಕಿಸುವ ಪ್ರಯತ್ನ ಮಾಡಿದ್ದ. ಇದನ್ನು ವಿರೋಧಿಸಿದ್ದ ಬಾಲಕಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿ ಕೋರ್ಟ್ ಮೆಟ್ಟಿಲೇರಿದ್ದಳು. ಇದನ್ನೂ ಓದಿ: ಅಧಿಕಾರಿಗಳಷ್ಟೇ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ: ಆರ್. ಅಶೋಕ್

    ಪ್ರಕರಣದ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿ ಪುಷ್ಪಾ.ವಿ ಗಣೆಡಿವಾಲಾ ಪೀಠ, 12 ವರ್ಷದ ಮಗುವಿನ ಸ್ತನವನ್ನು ಬಟ್ಟೆ ತೆಗೆಯದೆ ಒತ್ತುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ರ ಅಡಿಯಲ್ಲಿ ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ವ್ಯಾಖ್ಯಾನದೊಳಗೆ ಬರುತ್ತದೆ ಮತ್ತು ಪೋಕ್ಸೋ ಅಡಿಯಲ್ಲಿ ಲೈಂಗಿಕ ದೌರ್ಜನ್ಯವಲ್ಲ ಎಂದು ಹೇಳಿತ್ತು. ಅಲ್ಲದೇ ಸಂತ್ರಸ್ತ ಬಾಲಕಿ ಬಟ್ಟೆಯನ್ನು ಧರಿಸಿದ್ದಳು ಮತ್ತು ಆಕೆಯ “ಚರ್ಮದಿಂದ ಚರ್ಮಕ್ಕೆ” ಯಾವುದೇ ಸಂಪರ್ಕವಿಲ್ಲದ ಕಾರಣಕ್ಕಾಗಿ ಪೋಕ್ಸೊದ ಸೆಕ್ಷನ್ 7 ರ ಅಡಿಯಲ್ಲಿ ಆರೋಪಿತ ವ್ಯಕ್ತಿಯನ್ನು ಕೋರ್ಟ್ ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

    ಈ ಆದೇಶವನ್ನು ಪರಿಶೀಲಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಸುಪ್ರೀಂಕೋರ್ಟ್ ಮುಂದೆ ಪ್ರಸ್ತಾಪಿಸಿದ್ದರು, ಇದನ್ನು ತುಂಬಾ ಗೊಂದಲದ ತೀರ್ಮಾನ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್ ಕಳೆದ ಜನವರಿ 27 ರಂದು ವಿವಾದಾತ್ಮಕ ತೀರ್ಪಿಗೆ ತಡೆ ನೀಡಿತ್ತು. ತರುವಾಯ, ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್ 30 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

  • ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಮುಂಬೈ: ಐಷಾರಾಮಿ ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು ನಿರಾಕರಿಸಿತ್ತು. ಆರ್ಯನ್ ಖಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಆರ್ಯನ್ ಪರ ವಾದ ಮಂಡಿಸಿದ್ದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

    ಅರ್ಜಿ ವಿಚಾರಣೆ ವೇಳೆ ಮುಕುಲ್ ರೊಹ್ಟಗಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಇಂದು ಜಾಮೀನು ನೀಡಿದೆ. ಇದರೊಂದಿಗೆ ಆರ್ಯನ್ ಖಾನ್ 22 ದಿನಗಳ ಜೈಲು ವಾಸದ ಬಳಿಕ ಬಿಡುಗಡೆಗೊಂಡಿದ್ದಾರೆ. ಆರ್ಯನ್ ಖಾನ್ ಜೊತೆಗೆ  ಅರ್ಬಾಜ್ ಮರ್ಚೆಂಟ್ ಮತ್ತು  ಮುನ್ಮುಮ್ ಧಮೇಚಾಗೂ ಜಾಮೀನು ಮಂಜೂರಾಗಿದೆ.

    ಆರ್ಯನ್ ಖಾನ್ ಪರ ವಕೀಲರ ವಾದ ಏನಿತ್ತು?
    ಎನ್‍ಸಿಬಿ ವಿಚಾರಣೆ ವೇಳೆ ಆರ್ಯನ್ ಖಾನ್ ನಿಂದ ವಶಪಡಿಸಿಕೊಂಡಿರುವ ವಾಟ್ಸಪ್ ಚಾಟ್‍ಗೂ ಇಡೀ ಇಡೀ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಎನ್‍ಸಿಬಿ ತನಿಖಾಧಿಕಾರಿ ಸಮೀರ್ ವಾಂಖೆಡೆ, ಎನ್‍ಸಿಪಿಯ ನವಾಬ್ ಮಲಿಕ್ ಮತ್ತು ಪ್ರಕರಣದ ಸಾಕ್ಷಿ ಪ್ರಭಾಕರ್ ಸೈಲ್ ಅವರ ವಿರುದ್ಧದ ಆರೋಪಕ್ಕೂ ಆರ್ಯನ್ ಖಾನ್‍ಗೂ ಯಾವುದೇ ಸಂಬಂಧವಿಲ್ಲ ಎಂದು ರೊಹ್ಟಗಿ ಹೇಳಿದ್ದರು.

    ಆದರೆ ಆರ್ಯನ್ ಖಾನ್ ಪ್ರಭಾವಿ ವ್ಯಕ್ತಿಯಾಗಿದ್ದು, ವಿಚಾರಣೆ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ, ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಪ್ರಭಾವ ಬೀರಬಹುದು ಈ ಹಿನ್ನಲೆ ಜಾಮೀನು ನೀಡದಂತೆ ಎನ್‍ಸಿಬಿ ಪರ ವಕೀಲರು ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

    ಇದಕ್ಕೆ ಆಕ್ಷೇಪಿಸಿದ ಮುಕುಲ್ ರೊಹ್ಟಗಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ತರಲು ಹೊರಟಿರುವ ತಿದ್ದುಪಡಿಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವೇ ಮಾದಕ ವಸ್ತುಗಳ ಸೇವನೆಯನ್ನು ಅಧರಿಸಿ ಜೈಲು ಶಿಕ್ಷೆ ನೀಡುವುದು ವ್ಯವಸ್ಥೆ ಬದಲಿಸಲು ಹೊರಟಿದ್ದು ಆರ್ಯನ್ ಖಾನ್ ಜಾಮೀನು ನಿರಾಕರಿಸುವಂತಿಲ್ಲ ಎಂದಿದ್ದರು.

    ನಿನ್ನೆ ಎನ್.ಡಬ್ಲ್ಯೂ ಸಾಂಬ್ರೆ, ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಪರ ವಕೀಲರ ವಾದವನ್ನು ಆಲಿಸಿದರು. ಅರ್ಬಾಜ್ ಮರ್ಚೆಂಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಎನ್‍ಸಿಬಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

    ವಿಚಾರಣೆ ವೇಳೆ ಎನ್‍ಸಿಬಿ ಅಧಿಕಾರಿಗಳು ವಾಟ್ಸಪ್ ಚಾಟ್‍ಗಳನ್ನು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು. ವಾಟ್ಸಪ್ ಚಾಟ್‍ಗಳು ನ್ಯಾಯಲಯಕ್ಕೆ ದಾಖಲಿಸುವ ಮುನ್ನ ಮಾಧ್ಯಮಗಳಿಗೆ ಹಂಚಿಕೆಯಾಗಿದೆ. ಇದು ಪ್ರಕರಣದಲ್ಲಿ ಸಿಕ್ಕಿಹಾಕಿಸುವ ಪ್ರಯತ್ನ ಎಂದು ಅಮಿತ್ ದೇಸಾಯಿ ಹೇಳಿದ್ದರು.

    ಅರ್ಬಾಜ್ ಮರ್ಚೆಂಟ್ ವಿರುದ್ಧ ಆರಂಭದಲ್ಲಿ ಡ್ರಗ್ ಸೇವನೆ ಪ್ರಕರಣ ಮಾತ್ರ ದಾಖಲಿಸಲಾಗಿತ್ತು ಬಳಿಕ ಡ್ರಗ್ ಜಾಲದ ಪಿತೂರಿಯನ್ನು ಸೇರಿಸಲಾಗಿದೆ, ಆದರೆ ಪಿತೂರಿ ನಡೆಸಿರುವುದಕ್ಕೆ ಯಾವುದೇ ವಾಟ್ಸಪ್ ಚಾಟ್ ಸಾಕ್ಷ್ಯಗಳು ಬೆಂಬಲಿಸುತ್ತಿಲ್ಲ ಹೀಗಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ ಎಂದಿದ್ದರು.

  • ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ

    ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ

    ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಆತನ ಸ್ನೇಹಿತರಿಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಆರ್ಯನ್ ಖಾನ್ ಸೇರಿದಂತೆ ಇತರೆ ಇಬ್ಬರು ಸ್ನೇಹಿತರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಾಳೆಗೆ ಮುಂದೂಡಿದೆ.

    ಇಂದು ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭಿಸಿದ ನ್ಯಾ. ಎನ್.ಡಬ್ಲ್ಯೂ ಸಾಂಬ್ರೆ, ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಪರ ವಕೀಲರ ವಾದವನ್ನು ಆಲಿಸಿದರು. ಅರ್ಬಾಜ್ ಮರ್ಚೆಂಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಎನ್‍ಸಿಬಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

    ವಿಚಾರಣೆ ವೇಳೆ ಎನ್‍ಸಿಬಿ ಅಧಿಕಾರಿಗಳು ವಾಟ್ಸಪ್ ಚಾಟ್‍ಗಳನ್ನು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದರು. ವಾಟ್ಸಪ್ ಚಾಟ್‍ಗಳು ನ್ಯಾಯಲಯಕ್ಕೆ ದಾಖಲಿಸುವ ಮುನ್ನ ಮಾಧ್ಯಮಗಳಿಗೆ ಹಂಚಿಕೆಯಾಗಿದೆ. ಇದು ಪ್ರಕರಣದಲ್ಲಿ ಸಿಕ್ಕಿಹಾಕಿಸುವ ಪ್ರಯತ್ನ ಎಂದು ಅಮಿತ್ ದೇಸಾಯಿ ಹೇಳಿದರು.

    ಅರ್ಬಾಜ್ ಮರ್ಚೆಂಟ್ ವಿರುದ್ಧ ಆರಂಭದಲ್ಲಿ ಡ್ರಗ್ಸ್ ಸೇವನೆ ಪ್ರಕರಣ ಮಾತ್ರ ದಾಖಲಿಸಲಾಗಿತ್ತು ಬಳಿಕ ಡ್ರಗ್ ಜಾಲದ ಪಿತೂರಿಯನ್ನು ಸೇರಿಸಲಾಗಿದೆ, ಆದರೆ ಪಿತೂರಿ ನಡೆಸಿರುವುದಕ್ಕೆ ಯಾವುದೇ ವಾಟ್ಸಪ್ ಚಾಟ್ ಸಾಕ್ಷ್ಯಗಳು ಬೆಂಬಲಿಸುತ್ತಿಲ್ಲ ಹೀಗಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ ಎಂದರು. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

    ಅರ್ಬಾಜ್ ಬಳಿಕ ಮತ್ತೊರ್ವ ಆರೋಪಿ ಮುನ್‍ಮುನ್ ಧಮೇಚಾ ಪರ ವಾದ ಮಂಡಿಸಿದ ವಕೀಲ ಅಲಿ ಕಾಶಿಫ್ ಖಾನ್ ಜಾಮೀನು ನೀಡಲು ಮನವಿ ಮಾಡಿದರು. ಮುನ್‍ಮುನ್ ಧಮೇಚಾಗೂ ಪ್ರಕರಣಕ್ಕೂ ಸಂಬಂಧ ಇಲ್ಲ, ಹಡಗಿಗೆ ಅವರನ್ನು ಆಹ್ವಾನಿಸಲಾಗಿತ್ತು ಈ ವೇಳೆ ಎನ್‍ಸಿಬಿ ಅವರನ್ನು ಬಂಧಿಸಿದೆ ಎಂದರು. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

    ಡ್ರಗ್ಸ್ ಜಪ್ತಿ ಮಾಡಿರುವ ಬಗ್ಗೆ ಎನ್‍ಸಿಬಿ ಆರೋಪ ಮಾಡಿದೆ ಆದರೆ ಇದು ಎಲ್ಲಿಂದ ಬಂತು ಎನ್ನುವುದರ ಬಗ್ಗೆ ಎಲ್ಲೂ ಹೇಳಿಲ್ಲ, ಹಾಗೇ ಹಡಗಿನಲ್ಲಿ ಇದ್ದವರನ್ನು ಬಂಧಿಸುವುದಾದ್ರೆ 1,300 ಜನರನ್ನು ಬಂಧಿಸಬೇಕಾಗಬಹುದು ಎಂದು ವಾದಿಸಿದರು.

    ಆರೋಪಿ ಮುನ್‍ಮುನ್ ಧಮೇಚಾ ಡ್ರಗ್ ಬಗ್ಗೆ ಮಾಹಿತಿ ಇಲ್ಲ ವೈದ್ಯಕೀಯ ಪರೀಕ್ಷೆ ನಡೆಸಿದರೇ ಏನೂ ಪತ್ತೆಯೂ ಆಗುವುದಿಲ್ಲ, ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 29 ಅನ್ನು ಪಿತೂರಿಗಾಗಿ ಎನ್‍ಸಿಬಿ ದುರುಪಯೋಗಪಡಿಸಿಕೊಂಡಿದೆ ಎಂದು ವಕೀಲ ಅಲಿ ಕಾಶಿಫ್ ಖಾನ್ ಹೇಳಿದರು. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ

    ಕೋರ್ಟ್ ಕಲಾಪದ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು ನಾಳೆಗೂ ವಕೀಲ ಅಲಿ ಕಾಶಿಫ್ ಖಾನ್ ವಾದ ಮುಂದುವರಿಸಲಿದ್ದಾರೆ. ಬಳಿಕ ಎನ್‍ಸಿಬಿ ವಾದ ಮಂಡಿಸುವ ಸಾಧ್ಯತೆ ಇದ್ದು ಬಳಿಕ ಆದೇಶ ಕಾಯ್ದಿರಿಸುವ ನಿರೀಕ್ಷೆಗಳಿದೆ.

  • ನೀವು ಶತ್ರು ಇರುವೆಡೆ ನುಗ್ಗುತ್ತಿಲ್ಲ, ಕೊರೊನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ- ಕೇಂದ್ರಕ್ಕೆ ಬಾಂಬೆ ಹೈ ಕೋರ್ಟ್ ಸೂಚನೆ

    ನೀವು ಶತ್ರು ಇರುವೆಡೆ ನುಗ್ಗುತ್ತಿಲ್ಲ, ಕೊರೊನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ- ಕೇಂದ್ರಕ್ಕೆ ಬಾಂಬೆ ಹೈ ಕೋರ್ಟ್ ಸೂಚನೆ

    – ಕೊರೊನಾ ಹೊರಗೆ ಬರಲೆಂದು ಗಡಿಯಲ್ಲಿ ಕಾಯುವುದಲ್ಲ, ಶತ್ರು ಇರುವೆಡೆ ನುಗ್ಗಿ ಹೊಡೆಯಬೇಕು

    ಮುಂಬೈ: ಕೊರೊನಾ ವೀರುದ್ಧ ಯುದ್ಧೋಪಾದಿಯಲ್ಲಿ ಹೋರಾಡಬೇಕಿದೆ ಎಂಬುದನ್ನು ಕೋರ್ಟ್ ತಿಳಿಸಿದ್ದು, ಗಡಿಯಲ್ಲಿ ನಿಂತು ಶತ್ರುವಿಗಾಗಿ ಕಾಯಬಾರದು. ಬದಲಿಗೆ ಶತ್ರು ಇರುವ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು ಎಂದು ಬಾಂಬೆ ಹೈ ಕೋರ್ಟ್ ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.

    ಮುಖ್ಯನ್ಯಾಯಾಧೀಶರಾದ ದೀಪಂಕರ್ ದತ್ತ ಹಾಗೂ ಜಿ.ಎಸ್.ಕುಲಕರ್ಣಿ ಅವರಿದ್ದ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇದೀಗ ಸಮಾಜದ ಅತೀ ದೊಡ್ಡ ವೈರಿ ಕೊರೊನಾ ವೈರಸ್, ಹೀಗಾಗಿ ಕೊರೊನಾ ವೈರಸ್ ಹೊರಗಡೆ ಬರಲಿ ಎಂದು ಬಾರ್ಡರ್‍ನಲ್ಲಿ ನಿಂತು ಕಾಯುವುದಕ್ಕಿಂತ ಇದರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕಿದೆ ಎಂದು ಹೇಳಿದೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು – ಶಶಿ ತರೂರ್ ತಬ್ಬಿಬ್ಬು

    ಕೊರೊನಾ ವೈರಸ್ ನಮ್ಮ ಅತಿ ದೊಡ್ಡ ಶತ್ರು, ನಾವು ಅದನ್ನು ಹೊಡೆದುರುಳಿಸಬೇಕಾಗಿದೆ. ಶತ್ರು ಕೆಲವು ಪ್ರದೇಶಗಳಲ್ಲಿ ಹಾಗೂ ಹೊರ ಬರಲು ಸಾಧ್ಯವಾಗದ ಕೆಲವು ಜನರಲ್ಲಿ ವಾಸಿಸುತ್ತಿದ್ದಾನೆ. ಸರ್ಕಾರದ ದಾಳಿ ಸರ್ಜಿಕಲ್ ಸ್ಟ್ರೈಕ್ ರೀತಿ ಇರಬೇಕು. ಆದರೆ ನೀವು ಗಡಿಯಲ್ಲಿ ನಿಂತು ವೈರಸ್ ನಿಮ್ಮ ಬಳಿ ಬರಲೆಂದು ಕಾಯುತ್ತಿದ್ದೀರಿ. ನೀವು ಶತ್ರುವಿನ ಪ್ರದೇಶದೊಳಗೆ ನುಗ್ಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದತ್ತ ಹೇಳಿದ್ದಾರೆ.

    ಸಾರ್ವಜನಿಕರ ಒಳಿತಿಗಾಗಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಆದರೆ ವಿಳಂಬವಾಗಿರುವುದು ಹಲವು ಜೀವಗಳನ್ನು ಬಲಿ ಪಡೆದಿದೆ ಎಂದು ಕೋರ್ಟ್ ತಿಳಿಸಿದೆ.

    ಮಂಗಳವಾರ ಕೇಂದ್ರ ಸರ್ಕಾರ ಈ ಕುರಿತು ಕೋರ್ಟ್ ಗೆ ಹೇಳಿಕೆ ನೀಡಿದ್ದು, ಪ್ರಸ್ತುತ ಡೋರ್-ಟು-ಡೋರ್ ಲಸಿಕಾಕರಣ ಸಾಧ್ಯವಿಲ್ಲ. ಆದರೆ ಮನೆಯ ಹತ್ತಿರ ಲಸಿಕಾ ಕೇಂದ್ರಗಳನ್ನು ತೆರೆಯಬಹುದು ಎಂದು ಉತ್ತರಿಸಿದೆ. ಹೀಗೆ ಹೇಳುತ್ತಿದ್ದಂತೆ ಬುಧವಾರ ಹೈ ಕೋರ್ಟ್ ದೇಶದಲ್ಲಿನ ಹಲವು ರಾಜ್ಯಗಳು ಹಾಗೂ ನಗರ ಪಾಲಿಕೆಗಳು ಡೋರ್-ಟು-ಡೋರ್ ಲಸಿಕೆಗೆ ಕ್ರಮ ಕೈಗೊಂಡಿರುವ ಕುರಿತು ಉದಾಹರಣೆ ನೀಡಿದ್ದು, ಕೇರಳ, ಜಮ್ಮು ಕಾಶ್ಮೀರ, ಬಿಹಾರ ಹಾಗೂ ಓಡಿಶಾ. ಅಲ್ಲದೆ ಮಹಾರಾಷ್ಟ್ರದ ವಸಾಯಿ-ವಿವರ್ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೋರ್-ಟು-ಡೋರ್ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

    ದೇಶದ ಇತರ ರಾಜ್ಯಗಳಲ್ಲಿ ಇದನ್ನು ಏಕೆ ಪ್ರೋತ್ಸಾಹಿಸಬಾರದು? ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳ ರೆಕ್ಕೆಗಳಿಗೆ ಕ್ಲಿಪ್ ಹಾಕಲು ಸಾಧ್ಯವಿಲ್ಲ. ಆದರೂ ಹಲವು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿವೆ ಎಂದು ಹೇಳಿದೆ.

  • ಅಕ್ಕ ರಿಯಾಗೆ ಜಾಮೀನು ಸಿಕ್ಕರೂ ಶೌವಿಕ್ ಬೇಲ್ ರಿಜೆಕ್ಟ್

    ಅಕ್ಕ ರಿಯಾಗೆ ಜಾಮೀನು ಸಿಕ್ಕರೂ ಶೌವಿಕ್ ಬೇಲ್ ರಿಜೆಕ್ಟ್

    -ರಿಯಾ ಸೇರಿದಂತೆ ಮೂವರಿಗೆ ಬೇಲ್
    -ರಿಯಾಗೆ ಕೋರ್ಟ್ ಹಾಕಿದ ಷರತ್ತುಗಳೇನು?

    ಮುಂಬೈ: ಒಂದು ತಿಂಗಳ ಬಳಿಕ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಕ್ಕಿದ್ದು, ಇಂದು ಸಂಜೆಯೊಳಗಾಗಿ ಜೈಲಿನಿಂದ ಹೊರ ಬರುವ ಸಾಧ್ಯತೆಗಳಿವೆ. ಆದ್ರೆ ರಿಯಾ ಬಂಧನಕ್ಕೂ ಎರಡು ದಿನ ಮುಂಚೆಯೇ ಜೈಲು ಸೇರಿದ್ದ ಸೋದರ ಶೌವಿಕ್ ಚಕ್ರವರ್ತಿಯ ಜಾಮೀನು ಅರ್ಜಿಯನ್ನ ಬಾಂಬೈ ಹೈಕೋರ್ಟ್ ವಜಾಗೊಳಿಸಿದೆ.

    ಸೆಪ್ಟೆಂಬರ್ 8ರಂದು ಎನ್‍ಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ವೇಳೆ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನ ಬಂಧಿಸಿ, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. ಎನ್‍ಸಿಬಿ ಮನವಿಗೆ ಸ್ಪಂದಿಸಿದ್ದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇತ್ತ ರಿಯಾ ಚಕ್ರವರ್ತಿ ವಕೀಲರ ಮೂಲಕ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.

    ಮಂಗಳವಾರ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಅಕ್ಟೋಬರ್ 20ವರೆಗೆ ನ್ಯಾಯಾಂಗ ಬಂಧನವನ್ನ ವಿಸ್ತರಣೆ ಮಾಡಿತ್ತು. ಕಳೆದ ಕೆಲ ದಿನಗಳಿಂದ ಬಾಂಬೆ ಹೈಕೋರ್ಟ್ ನಲ್ಲಿ ರಿಯಾ ಜಾಮೀನು ಅರ್ಜಿ ಸಂಬಂಧ ವಾದ-ಪ್ರತಿವಾದ ನಡೆದಿತ್ತು. ಸುಮಾರು 8 ಗಂಟೆಗೂ ಅಧಿಕ ಕಾಲ ನ್ಯಾಯಾಲಯ ವಾದ-ಪ್ರತಿವಾದವನ್ನ ಆಲಿಸಿ ಇಂದು ರಿಯಾ, ಸ್ಯಾಮುಯೆಲ್ ಮಿರಂಡಾ, ದೀಪೇಶ್ ಸಾವಂತ್ ಗೆ ಜಾಮೀನು ನೀಡಿದೆ. ರಿಯಾ ಸೋದರ ಶೌವಿಕ್ ಮತ್ತು ಡ್ರಗ್ ಪೆಡ್ಲರ್ ಅಬ್ದುಲ್ ಬಸಿತ್ ಸೇರಿದಂತೆ ಇನ್ನುಳಿದ ಆರೋಪಿಗಳ ಅರ್ಜಿಯನ್ನ ವಜಾಗೊಳಿಸಲಾಗಿದೆ.ಇದನ್ನೂ ಓದಿ: ಸಾರಾ, ರಿಯಾ, ಸುಶಾಂತ್ ಸೇರಿ ತೋಟದ ಮನೆಯಲ್ಲಿ ಪಾರ್ಟಿ ಮಾಡ್ತಿದ್ರು: ಮ್ಯಾನೇಜರ್- ಗಾಂಜಾ, ಡ್ರಿಂಕ್ಸ್ ಎಲ್ಲ ಬರುತ್ತಿತ್ತು

    ಶೌವಿಕ್ ಅರ್ಜಿ ವಜಾಗೊಂಡಿದ್ಯಾಕೆ?: ಡ್ರಗ್ಸ್ ಖರೀದಿ ಸಂಬಂಧ ಪೆಡ್ಲರ್ ಗಳ ಜೊತೆ ಶೌವಿಕ್ ನಡೆಸಿದ ಸಂಭಾಷಣೆಯ ತನಿಖೆ ಇನ್ನು ಮುಂದುವರಿದೆ. ಶೌವಿಕ್ ಹಲವರ ಜೊತೆ ಡ್ರಗ್ಸ್ ಖರೀದಿಸಿರುವ ಬಗ್ಗೆ ಎನ್‍ಸಿಬಿಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಶೌವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ ಎಂದು ವರದಿಯಾಗಿದೆ. . ಇದನ್ನೂ ಓದಿ: ಸುಶಾಂತ್ ತನ್ನ ಹೆಸರಿನಲ್ಲಾಗ್ತಿರುವ ಸರ್ಕಸ್ ನೋಡಿ ನಗುತ್ತಿರಬಹುದು: ಸೋನು ಸೂದ್

    ಷರತ್ತುಬದ್ಧ ಜಾಮೀನು: ರಿಯಾ ಒಂದು ಲಕ್ಷ ರೂ. ಬಾಂಡ್ ನ್ನು ಒಂದು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ರಿಯಾ ತಮ್ಮ ಪಾಸ್‍ಪೋರ್ಟ್ ಪೊಲೀಸರ ವಶಕ್ಕೆ ನೀಡಬೇಕು ಮತ್ತು ಮುಂಬೈನಿಂದ ಹೊರ ಹೋಗಲು ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು. ಪ್ರತಿ 10 ದಿನಕ್ಕೊಮ್ಮೆ ಪೊಲೀಸ್ ಠಾಣೆಗೆ ಆಗಮಿಸಿ ಹಾಜರಾತಿ ದಾಖಲಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು

    ರಿಯಾ ವಕೀಲರ ಪ್ರತಿಕ್ರಿಯೆ: ನನ್ನ ಕಕ್ಷಿದಾರರ ಮೇಲೆ ಅನಗತ್ಯವಾಗಿ 27ಎ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ. ರಿಯಾ ಪರಿಚಯಕ್ಕೂ ಮುನ್ನವೇ ಸುಶಾಂತ್ ಡ್ರಗ್ಸ್ ಸೇವಿಸುತ್ತಿರುವ ವಿಚಾರವನ್ನು ಮೂವರು ನಟಿಯರು ರಿವೀಲ್ ಮಾಡಿದ್ದಾರೆ. ನನ್ನ ಕಕ್ಷಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ರೂ ಅವರನ್ನ ಬಂಧನದಲ್ಲಿರಿಸಲಾಗಿತ್ತು. ಕೇಂದ್ರದ ಮೂರು ಏಜೆನ್ಸಿಗಳ ರಿಯಾ ವಿರುದ್ಧ ಅನಗತ್ಯವಾಗಿ ನಡೆಸುತ್ತಿರುವ ತನಿಖೆಗಳು ಅಂತ್ಯಗೊಳ್ಳಬೇಕಿದೆ. ನಾನು ಸತ್ಯಕ್ಕೆ ಬದ್ಧರಾಗಿದ್ದು, ಸತ್ಯಮೇವ ಜಯತೆ ಎಂದು ಸತೀಶ್ ಮನಶಿಂಧೆ ಹೇಳಿದ್ದಾರೆ. ಇದನ್ನೂ ಓದಿ: ಎಲ್ಲ ಆಯಾಮಗಳಲ್ಲಿ ಸುಶಾಂತ್ ಕೇಸ್ ತನಿಖೆ: ಸಿಬಿಐ

  • ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ

    ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ

    -ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ
    -ಮುಂಬೈಗೆ ಬಂದಿಳಿದ ಮಣಿಕರ್ಣಿಕಾ

    ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮ ಕಾರ್ಯಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಬಿಎಂಸಿ (ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಇಂದು ಬೆಳಗ್ಗೆಯಿಂದ ನಡೆಸುತ್ತಿರುವ ಕಾರ್ಯಚರಣೆಗೆ ಬ್ರೇಕ್ ಬಿದ್ದಿದೆ. ಗುರುವಾರ ಮಧ್ಯಾಹ್ನ 3 ಗಂಟೆವರೆಗೆ ಯಾವುದೇ ನೆಲಸಮ ಕಾರ್ಯ ನಡೆಯುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

    ದಿಢೀರ್ ಅಂತಾ ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮಕ್ಕೆ ಮುಂದಾಗಿದ್ದೇಕೆ ಎಂದು ಹೈಕೋರ್ಟ್ ಬಿಎಂಸಿಯನ್ನ ಪ್ರಶ್ನೆ ಮಾಡಿದೆ. ಈ ಸಂಬಂಧ ನಾಳೆ ಬಿಎಂಸಿ ನ್ಯಾಯಾಲಯಕ್ಕೆ ಉತ್ತರ ನೀಡಬೇಕಿದೆ. ಬಾಂಬೆ ಹೈಕೋರ್ಟ್ 26 ಮಾರ್ಚ್ 2020ರಂದು ರಾಜ್ಯ ಸರ್ಕಾರ, ಬಿಎಂಸಿ ಮತ್ತು ಸಂಬಂಧಿತ ವಿಭಾಗಗಳು ಯಾರ ವಿರುದ್ಧವೂ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿತ್ತು. ಮಾರ್ಚ್ 26ರ ಆದೇಶಕ್ಕೆ ಸಂಬಂಧಿಸಿದಂತೆ ಆಗಸ್ಟ್ 31ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಿ, ಆದೇಶದ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿತ್ತು. ಈ ಕಾಲಾವಧಿಯಲ್ಲಿ ಯಾರೇ ಸಮಸ್ಯೆ ಅನುಭವಿಸಿದ್ರೂ ಹೈಕೋರ್ಟ್ ಬಾಗಿಲು ತಟ್ಟಬಹುದು ಎಂದು ನ್ಯಾಯಾಲಯ ಹೇಳಿತ್ತು.  ಇದನ್ನೂ ಓದಿ: ಕಂಗನಾ ಮನೆ, ಆಫೀಸ್ ಕೆಡವಿದ ಬಿಎಂಸಿ – ನನ್ನ ಮುಂಬೈ ಪಿಓಕೆ ಆಗಿದೆಯೆಂದ ನಟಿ

    ಬಿಎಂಸಿಗೆ ಚಾಟಿ: ಹೈಕೋರ್ಟ್ ನೀಡಿದ ಆದೇಶವನ್ನ ಬಿಎಂಸಿ ಪಾಲನೆ ಮಾಡೋದರಲ್ಲಿ ವಿಫಲವಾದಂತೆ ಕಾಣಿಸುತ್ತಿದೆ. ನೋಟಿಸ್ ನೀಡಿದ 24 ಗಂಟೆಯೊಳಗೆ ಕಚೇರಿ ಮತ್ತು ಮನೆ ನೆಲಸಮ ಮಾಡುವ ಆತುರವೇನಿತ್ತು? ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುವ ವಿಷಯ ತಿಳಿಸಿದಿದ್ದರೂ ಬಿಎಂಸಿ ಈ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎಂದು ಹೈಕೋರ್ಟ್ ಬಿಎಂಸಿಗೆ ಚಾಟಿ ಬೀಸಿದೆ. ಇದನ್ನೂ ಓದಿ: ಶಿವಸೇನೆ ಧಮ್ಕಿ -ನಟಿ ಕಂಗನಾ ರಣಾವತ್‍ಗೆ ವೈ ದರ್ಜೆಯ ಭದ್ರತೆ

    ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಗಳು ಆರಂಭಗೊಂಡಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಂಗನಾ ಲಾಕ್‍ಡೌನ್ ಬಳಿಕ ಮೊದಲ ಬಾರಿಗೆ ಮುಂಬೈಗೆ ಆಗಮಿಸಿದ್ದಾರೆ. ಶಿವಸೇನೆ ನಾಯಕರ ಬೆದರಿಕೆ ನೀಡಿದ ಹಿನ್ನೆಲೆ ಕೇಂದ್ರ ಸರ್ಕಾರ ಕಂಗನಾ ರಣಾವತ್ ಅವರಿಗೆ ವೈ ದರ್ಜೆಯ ಭದ್ರತೆ ನೀಡಿದೆ.

    ಸರ್ಕಾರದ ವಿರುದ್ಧ ಕಂಗನಾ ಆಕ್ರೋಶ: ನಾನು ಯಾವತ್ತೂ ತಪ್ಪು ಮಾಡುವುದಿಲ್ಲ ಎಂದು ನನ್ನ ಶತ್ರುಗಳು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ಹೀಗಾಗಿಯೇ ನಾನು ಹೇಳಿದ್ದು, ನನ್ನ ಮುಂಬೈ ಈಗ ಪಿಓಕೆ ಆಗಿದೆ ಎಂದು ಟ್ವೀಟ್ ಮಾಡಿ, ಅಧಿಕಾರಿಗಳು ಮನೆಯನ್ನು ಒಡೆದು ಹಾಕುತ್ತಿರುವ ಫೋಟೋವನ್ನು ಹಾಕಿದ್ದಾರೆ. ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಪಾಕಿಸ್ತಾನ ಪ್ರಜಾಪ್ರಭುತ್ವದ ಕಗ್ಗೋಲೆ ಬಾಬರ್ ಮತ್ತು ಅವನ ಸೈನಿಕರು ಎಂದು ವ್ಯಂಗ್ಯವಾಡಿದ್ದಾರೆ.

    ನಾನು ಮುಂಬೈಗೆ ಬರಲು ವಿಮಾನ ನಿಲ್ದಾಣದಲ್ಲಿದ್ದಾಗ, ಮಹಾರಾಷ್ಟ್ರ ಸರ್ಕಾರ ಮತ್ತು ಅವರ ಗೂಂಡಾಗಳು ನನ್ನ ಮನೆಗ ಮತ್ತು ಆಫೀಸ್‍ಗೆ ಹೋಗಿ ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಅದನ್ನು ಒಡೆದು ಹಾಕಿದ್ದಾರೆ. ಅವರು ಒಡೆದು ಹಾಕಲಿ. ನಾನು ಮುಂಬೈಗಾಗಿ ನನ್ನ ರಕ್ತವನ್ನು ಬೇಕಾದರೂ ಕೊಡಲು ಸಿದ್ಧವಿದ್ದೇನೆ. ಅವರು ಏನೇ ಕಿತ್ತುಕೊಂಡರೂ ನನ್ನ ಹೋರಾಟದ ಗುಣವನ್ನು ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಟ್ವೀಟ್ ಕಂಗನಾ ಟ್ವೀಟ್ ಮಾಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿರುವ, ನನ್ನ ಮನೆಯನ್ನು ಅಕ್ರಮವಾಗಿ ಕಟ್ಟಿದ್ದರೆ, ಅದನ್ನು ಈಗಲೇ ಒಡೆಯಬೇಕಿತ್ತಾ? ಕೊರೊನಾ ಕಾರಣದಿಂದ ಸೆಪ್ಟಂಬರ್ 30ವರೆಗೆ ಸುಪ್ರೀಂ ಕೋರ್ಟ್ ಯಾವುದೇ ರೀತಿಯ ಮನೆಗಳನ್ನು ಕೆಡವುವಂತಿಲ್ಲ ಎಂದು ಹೇಳಿದೆ. ಫ್ಯಾಸಿಸಮ್ ಎಂದರೆ ಏನು ಎಂಬುದನ್ನು ಬಾಲಿವುಡ್ ಈಗ ನೋಡುತ್ತಿದೆ ಎಂದು ಕಂಗನಾ ಹೇಳಿದ್ದಾರೆ. ಜೊತೆಗೆ ನಾನು ಪ್ರೀತಿ ಇಂದು ಹಲವಾರು ವರ್ಷದಿಂದ ಕಟ್ಟಿದ ಮನೆಯನ್ನು ಕೆಡವಲು ನನಗೆ ಎಚ್ಚರಿಕೆಯ ನೋಟಿಸ್ ಕಳುಹಿಸಲಾಗಿದೆ. ಅವರು ಮನೆಯನ್ನು ಕೆಡವಬಹುದು ನನ್ನ ಆತ್ಮಬಲವನ್ನು ಅಲ್ಲ ಎಂದು ಕಂಗನಾ ತಿಳಿಸಿದ್ದಾರೆ.

    14 ನಿಯಮ ಉಲ್ಲಂಘನೆ: ಮುಂಬೈನ ಪಾಲಿ ಹಿಲ್ಸ್ ನಲ್ಲಿರುವ ಕಂಗನಾ ಅವರು ಕಚೇರಿಯಲ್ಲಿ 14 ಬಗೆಯ ನಿಯಮ ಉಲ್ಲಂಘನೆ ಮಾಡಿರೋದನ್ನ ಪಟ್ಟಿ ಮಾಡಿದ್ದೇವೆ. ಜೊತೆಗೆ ಕಂಗನಾ ಬಾಂದ್ರಾ ಬಂಗಲೆಯಲ್ಲಿ ಕೂಡ ಅಕ್ರಮವಾದ ಕೆಲ ರಚನೆಗಳು ಕಂಡು ಬಂದಿವೆ. ಹೀಗಾಗಿ ನಾವು ಅವುಗಳನ್ನು ನೆಲಸಮ ಮಾಡಿ ಅವರಿಗೆ ವಿಳಾಸದಲ್ಲಿಯೇ ನೋಟಿಸ್ ನೀಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

  • ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ಗೆ ಲೈಕ್ ಕೊಟ್ಟ ವಕೀಲರ ಕೈ ತಪ್ಪಿತು ಕೇಸ್

    ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ಗೆ ಲೈಕ್ ಕೊಟ್ಟ ವಕೀಲರ ಕೈ ತಪ್ಪಿತು ಕೇಸ್

    ಮುಂಬೈ: ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ಗೆ ಕಮೆಂಟ್ ಹಾಗೂ ಲೈಕ್ ಮಾಡಿದ್ರು ಅಂತಾ ವಕೀಲರೊಬ್ಬರು ವಾದಿಸುತ್ತಿದ್ದ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ ಘಟನೆ ಬಾಂಬೆ ಹೈಕೋರ್ಟ್ ನಲ್ಲಿ ನಡೆದಿದೆ.

    2018ರ ಏಪ್ರಿಲ್‍ನಿಂದ ಎರಡು ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕಾಗಿ ಕಲಹ ನಡೆದಿದ್ದು, ಪ್ರಕರಣದ ವಿಚಾರಣೆ ಸೆಷನ್ ಕೋರ್ಟ್ ನಲ್ಲಿ ನಡೆಯುತ್ತಿತ್ತು. ಇದರಲ್ಲಿ ಒಂದು ಪಕ್ಷದವರ ಪರವಾಗಿ ವಾದಿಸುತ್ತಿದ್ದ ವಕೀಲ ಅದೇ ಕುಟುಂಬದ ಸದಸ್ಯರಾಗಿದ್ದು, ತಾವು ವಾದಿಸುತ್ತಿರುವ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಫೇಸ್‍ಬುಕ್ ಫೋಸ್ಟ್‌ವೊಂದಕ್ಕೆ ಲೈಕ್ ಹಾಗೂ ಕಮೆಂಟ್ ಮಾಡಿದ್ದರು.

    ನಂತರ ಹೆಚ್ಚುವರಿ ಸೆಷನ್ ನ್ಯಾಯಾಧೀಶರು, ವಿಭಾಗೀಯ ಪೀಠವು ವಕೀಲರ ನಡತೆಯನ್ನು ಮುಖ್ಯ ನ್ಯಾಯಾಧೀಶರ ಗಮಕ್ಕೆ ತಂದಿದ್ದರು. ಹೀಗಾಗಿ ವಕೀಲರು ವೃತ್ತಿ ಅಶಿಸ್ತು ತೋರಿದ್ದಾರೆ ಎಂದು ಪ್ರಕರಣವನ್ನು ಮತ್ತೊಂದು ಕೋರ್ಟ್ ಗೆ ವರ್ಗಾಯಿಸಲಾಯಿತು.

  • ಫೀಸ್ ಕಟ್ಟದ್ದಕ್ಕೆ 150 ವಿದ್ಯಾರ್ಥಿಗಳಿಗೆ ಟಿಸಿಕೊಟ್ಟು ಮನೆಗೆ ಕಳುಸಿದ್ರು!

    ಫೀಸ್ ಕಟ್ಟದ್ದಕ್ಕೆ 150 ವಿದ್ಯಾರ್ಥಿಗಳಿಗೆ ಟಿಸಿಕೊಟ್ಟು ಮನೆಗೆ ಕಳುಸಿದ್ರು!

    ಮುಂಬೈ: ಶಾಲೆಯ ಶುಲ್ಕ (ಫೀಸ್) ಪಾವತಿಸದ 150 ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿಸಿ) ಕೊಟ್ಟು ಮನೆಗೆ ಕಳುಹಿಸಿದ ಅಮಾನವೀಯ ಘಟನೆಯು ಮಹಾರಾಷ್ಟ್ರದ ಪುಣೆಯ ಸಮೀಪದ ಹಿಂಗ್ಲೆಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

    ಝೀಲ್ ಶಿಕ್ಷಣ ಸಂಸ್ಥೆಯ ದ್ಯಾನಗಂಗಾ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸಂಸ್ಥೆಯು ಹೆಚ್ಚು ಶುಲ್ಕವನ್ನು ನಮ್ಮಿಂದ ಪಡೆಯುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

    ನಾವು ಈಗಾಗಲೇ 30 ಸಾವಿರ ರೂ. ಶುಲ್ಕ ಹಾಗೂ 10 ಸಾವಿರ ರೂ. ಠೇವಣಿ ನೀಡಿದ್ದೇವೆ. ಠೇವಣಿ ಹಣದಲ್ಲಿಯೇ ಶುಲ್ಕ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಲೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಅವರು ಇದನ್ನು ಒಪ್ಪಲಿಲ್ಲ ಎಂದು ಪೋಷಕರು ದೂರಿದ್ದಾರೆ.

    ಕೋರ್ಟ್ ಮೆಟ್ಟಿಲೇರಿದ್ದ ಈ ಪ್ರಕರರಣದಲ್ಲಿ ಬಾಂಬೆ ಹೈಕೋರ್ಟ್ ಶಾಲೆಯ ಪರ ತೀರ್ಪು ನೀಡಿದ್ದು, ಶುಲ್ಕ ಪಾವತಿಸದ ಮಕ್ಕಳ ದಾಖಲೆಯನ್ನು ರದ್ದು ಪಡಿಸಿ ವರ್ಗಾವಣೆ ಪತ್ರ ನೀಡಬಹುದು ಆದೇಶಿಸಿತ್ತು.

    2016-17ರಲ್ಲಿ ವಿದ್ಯಾರ್ಥಿಗಳ ಪೋಷಕರು 30 ಸಾವಿರ ಶುಲ್ಕ ಪಾವತಿ ಮಾಡಿದ್ದರು. ಆದರೆ 2017-18ರ ಸಾಲಿನಲ್ಲಿ ಅಷ್ಟೇ ಮೊತ್ತದ ಶುಲ್ಕ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಹೈಕೋರ್ಟ್ ಶುಲ್ಕ ಪಾವತಿಸಲು ಆದೇಶ ನೀಡಿತ್ತು. ಅಲ್ಲದೇ ಶಿಕ್ಷಣ ಸಂಸ್ಥೆ ಶುಲ್ಕ ಪಾವತಿಗೆ ಏಳು ದಿನ ಅವಕಾಶ ನೀಡಿದ್ದರೂ ಪೋಷಕರು ಒಪ್ಪಲಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ನೀಡಿದೆ ಎಂದು ಸಂಸ್ಥೆಯ ಪರ ವಕೀಲ ವಿಕ್ರಂ ದೇಶಮುಖ್ ಹೇಳಿದ್ದಾರೆ.