Tag: Bommai Budget

  • ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ನಿಗದಿ – ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್

    ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ನಿಗದಿ – ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್

    ಬೆಂಗಳೂರು: ಬಡತನದ ಕಾರಣಕ್ಕೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು 2022-23ನೇ ಸಾಲಿನ ಬಜೆಟ್ ಮೂಲಕ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳಿಂದ ಶೈಕ್ಷಣಿಕ ಸಾಲ ಒದಗಿಸಲು ಸರ್ಕಾರ ನೆರವಾಗಲಿದೆ.

    ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಎ, ಬಿ, ಸಿ ಮತ್ತು ಡಿ ಎಂದು ವರ್ಗೀಕರಿಸಿ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಬೆಳಗಾವಿಯಲ್ಲಿ ಕ್ಯಾನ್ಸರ್ ಕೇಂದ್ರ:
    ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೌಕರ್ಯವನ್ನು ಒದಗಿಸಲು ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಇನ್‌ಫ್ಯೂಷನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

    ಮೈಸೂರು ಕೆ.ಆರ್. ಆಸ್ಪತ್ರೆ ನವೀಕರಣ:
    ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು 2024ರಲ್ಲಿ ಶತಮಾನೋತ್ಸವ ಆಚರಿಸುವ ಹಿನ್ನೆಲೆಯಲ್ಲಿ ಕೆ.ಆರ್. ಆಸ್ಪತ್ರೆಯ ಕಟ್ಟಡಗಳ ನವೀಕರಣವನ್ನು ಮುಂದಿನ ಮೂರು ವರ್ಷದಲ್ಲಿ 89 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

    ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

    ಬೆಂಗಳೂರು: ಗಣರಾಜ್ಯೋತ್ಸವದ ವೇಳೆ ಕೇರಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಬಿಜೆಪಿ ಟೀಕೆಗೆ ಗುರಿಯಾಗಿತ್ತು. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಕರ್ನಾಟಕ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಆರಂಭಿಸಲು ಮುಂದಾಗಿದೆ.

    ಮಾನವೀಯತೆ, ಸಮಾನತೆ ಹರಿಕಾರ, ಶ್ರೀನಾರಾಯಣ ಗುರುವರರರ ಸ್ಮರಣಾರ್ಥಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

    ಬಜೆಟ್‍ನಲ್ಲಿ ಏನಿದೆ?
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯಮನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳಾದ ತಿಗಳ, ಮಾಳಿ, ಮಾಳಿ ಮಾಲಗಾg, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರಿಯ, ಮೇದಾರ, ಕಂಚಿ, ಕುರ್ಮ, ಪಿಂಜಾರ/ ನದಾಫ್, ಕುರುಬ, ಬಲಿಜ, ಈಡಿಗ, ಹಡಪ ಹಾಗೂ ಇತರ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂಪಾಯಿ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.

    ಎಸ್.ಸಿ/ಎಸ್.ಟಿ ಮಹಿಳೆಯಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳಲ್ಲಿನ ಗುರಿಯಲ್ಲಿ ಎಸ್.ಟಿ/ಎಸ್/ಟಿ ಮಹಿಳೆಯರಿಗೆ ಶೇ.25 ರಷ್ಟು ಕಾಯ್ದಿರಿಸಲಿದೆ. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಳೆಗಳ ವ್ಯಾಪ್ತಿಗೆ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಂದ ಒಟ್ಟಾರೆ 800 ಕೋಟಿ ರೂಪಾಯಿಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು

    ದುರ್ಬಲ ವರ್ಗಗಳ ಸಬಲೀಕರಣ:
    • ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.
    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.
    • ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ: ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.
    • ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.


    • ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.
    • ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ 1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
    • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ
    • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.
    • ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.
    • ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

  • ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

    ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

    ಬೆಂಗಳೂರು: ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

    ರಾಜ್ಯ ಮಹತ್ವಾಕಾಂಕ್ಷಿ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸುವುದು. ಈ ಯೋಜೆನೆಗೆ 2ನೇ ಹಂತದ 260 ಕಿ.ಮೀ ಉದ್ದ ಗುರತ್ವ ಕಾಲುವೆ ಟಿ.ಜಿ ಹಳ್ಳಿ- ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಟಿ.ಜಿ ಗೌರೀಬಿದನೂರು ಫೀಡರ್ ಕಾಲುವೆ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜೆನಗೆ ಉಳಿಗೆ ಕಾಮಗಾರಿಗಳನ್ನು ಹಂತ, ಹಂತವಾಗಿ ಕಾರ್ಯಗತಗೊಳಿಸಲು ಕ್ರಮವಹಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ 3,000 ಕೋಟಿ ರೂಪಾಯಿ ಅನುದಾನ ಒದಗಿಲಸಾಗುವುದು. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

    ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನಾ ವರದಿಗೆ ಕೇಂದ್ರ ಸರ್ಕಾರದ ಸಮಕ್ಷ ಪ್ರಾಧಿಕಾರಿಗಳ ತೀರುವಳಿಗನ್ನು ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯ ಅನುಷ್ಠಾನಕ್ಕೆ ಪ್ರಸ್ತಕ ಸಾಲಿನಲ್ಲಿ 1,000 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗುವುದು. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

    ನೀರಾವರಿಗೆ ಆದ್ಯತೆ:
    * ಕೃಷ್ಣಾ ಮೇಲ್ದಂಡೆ ಯೋಜೆನೆ ಹಂತ 3ಕ್ಕೆ- 5000 ಕೋಟಿ ರೂ.
    * ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ- 1000 ಕೋಟಿ ರೂ
    * ಭದ್ರಾ ಮೇಲ್ದಂಡೆ ಯೋಜನೆ- 3000 ಕೋಟಿ ರೂ ಅನುದಾನ
    * ಮೇಕೆದಾಟು ಯೋಜನೆಗೆ 1,000 ಕೋಟಿ ಅನುದಾನ
    * ಎತ್ತನಹೊಳೆ ಯೋಜನೆ- 3,000 ಕೋಟಿ ರೂ ಅನುದಾನ

  • Karnataka Budget  – ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ

    Karnataka Budget – ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ

    ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.

    ಬಜೆಟ್‌ ಮುಖ್ಯಾಂಶಗಳು
    – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.
    – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ
    – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ
    – ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ

    – ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ
    – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ
    – 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ  ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

    – ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ
    – ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ
    – ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು