Tag: books

  • ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ: ಪ್ರಿಯಾಂಕ್ ಖರ್ಗೆ

    ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.

    ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಷಿಪ್ ಕಾರ್ಯಕ್ರಮದಡಿ ಆಯ್ಕೆಗೊಂಡು, ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 44 ಮಂದಿ ಫೆಲೊಗಳೊಂದಿಗೆ ಏರ್ಪಡಿಸಲಾಗಿದ್ದ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಸಚಿವರು ಜ.24ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಮಾತನಾಡಿದರು. ಇದನ್ನೂ ಓದಿ: ಗೋಹತ್ಯೆ ಮಾಡಿ ಹೊಟ್ಟೆಯಲ್ಲಿದ್ದ ಕರುವಿನ ಮಾಂಸ ಕೊಂಡೊಯ್ದಿದ್ದ ಪಾಪಿ ಅರೆಸ್ಟ್

    ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಫೆಲೊಗಳು ಸೇತುವೆಗಳಂತೆ ಕಾರ್ಯನಿರ್ವಹಿಸಬೇಕು. ಈ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ಗೋವಿಂದರಾವ್ ಸಮಿತಿಗೆ ಪೂರಕ ಅಂಕಿ ಅಂಶಗಳ ದತ್ತಾಂಶಗಳನ್ನು ನೀಡುವ ದೃಷ್ಟಿಯಲ್ಲಿಯೂ ಫೆಲೊಗಳು ಕಾರ್ಯಪ್ರವೃತ್ತರಾಗಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇದನ್ನೂ ಓದಿ: ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಭೂಕಬಳಿಕೆ ಆರೋಪ – ಗ್ರಾಮಸ್ಥರಿಂದ ದಾಖಲೆ ಬಿಡುಗಡೆ

    ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ನಿಕಟ ಸಂಪರ್ಕ ಇರಿಸಿಕೊಂಡು ಗ್ರಾಮ ಪಂಚಾಯತಿಗಳಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ವರದಿಯನ್ನು ಸಿದ್ಧಪಡಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಆ ಮೂಲಕ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಸಚಿವರು ಫೆಲೊಗಳಿಗೆ ಸೂಚಿಸಿದರು. ಇದನ್ನೂ ಓದಿ: ನಾಲ್ವರು ಇಸ್ರೇಲ್‌ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದ ಹಮಾಸ್‌ ಉಗ್ರರು

    ರಾಜೀವ್ ಗಾಂಧಿ ಗ್ರಾಮೀಣಾಭಿವೃದ್ಧಿ ಫೆಲೊಷಿಪ್ ಕಾರ್ಯಕ್ರಮದಡಿ 2024ರ ಜೂನ್ ತಿಂಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 44 ಮಂದಿ ಫೆಲೊಗಳನ್ನು ಆಯ್ಕೆ ಮಾಡಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ತಾಲೂಕುಗಳಿಗೆ ನಿಯೋಜಿಸಲಾಗಿದೆ. ಸ್ಥಳೀಯ ಆಡಳಿತವನ್ನು ಬಲಪಡಿಸಲು ಫೆಲೊಗಳು ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ: ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ

    ಕಲ್ಯಾಣ ಕರ್ನಾಟಕ ಭಾಗದ ವಿವಿಧ ತಾಲೂಕುಗಳಿಗೆ ನಿಯೋಜನೆಗೊಂಡಿರುವ ಫೆಲೊಗಳು ಕಳೆದ ಐದು ತಿಂಗಳಲ್ಲಿ ಮಾಡಿರುವ ಕಾರ್ಯಚಟುವಟಿಕೆಗಳನ್ನು ಸಭೆಯಲ್ಲಿ ಸಚಿವರ ಗಮನಕ್ಕೆ ತರಲಾಯಿತು. 62 ಪುಸ್ತಕ ಗೂಡುಗಳ ಆರಂಭ, 39 ಅರಿವು ಕೇಂದ್ರಗಳ ಪುನರಾರಂಭ, ವೃತ್ತಪತ್ರಿಕೆಗಳೊಂದಿಗೆ 56 ಅರಿವು ಕೇಂದ್ರಗಳ ಆರಂಭ, 116 ಕೂಸಿನಮನೆ ಪುನರಾರಂಭ, 66 ಕೂಸಿನ ಮನೆಗಳ ಮೂಲಭೂತ ಸೌಲಭ್ಯ ಸುಧಾರಣೆ, 95 ಕೂಸಿನ ಮನೆಗಳ ನಿರ್ವಹಣೆಯಲ್ಲಿ ಸುಧಾರಣೆ, 86 ಕೂಸಿನಮನೆಗಳಲ್ಲಿ ಪೌಷ್ಠಿಕ ಆಹಾರ ವಿತರಣೆಗೆ ಚಾಲನೆ, 61 ಗ್ರಾಮ ಪಂಚಾಯತಿಗಳಲ್ಲಿ ತ್ಯಾಜ್ಯ ಸಂಗ್ರಹ, ವಿಂಗಡಣೆ ಹಾಗೂ ವಿಲೇವಾರಿಗೆ ಚಾಲನೆ, 197 ಗ್ರಾಮ ಪಂಚಾಯತಿಗಳ ಸರ್ವ ಸದಸ್ಯರ ಸಭೆ ಏರ್ಪಾಟು, 104 ಗ್ರಾಮ ಪಂಚಾಯತಿಗಳ ಸಭಾ ನಡಾವಳಿ ಪಿ2.0 ತಂತ್ರಾಂಶದಲ್ಲಿ ಅಳವಡಿಕೆ, 508 ಗ್ರಾಮ ಪಂಚಾಯತಿಗಳಲ್ಲಿ ಉಪ-ಸಮಿತಿಗಳ ರಚನೆ ಮುಂತಾದ ಸುಧಾರಣ ಕಾರ್ಯ ಫೆಲೊಗಳು ಸಾಧ್ಯ ಮಾಡಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇದನ್ನೂ ಓದಿ: ಮೀಟರ್ ಬಡ್ಡಿ ದಂಧೆಕೋರರ ಟಾರ್ಚರ್ – ಯುವಕ ನೇಣಿಗೆ ಶರಣು

    ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅನ್ಯ ಭಾಷಿಕರಿಗೆ ಬಿಬಿಎಂಪಿ, ಕನ್ನಡ ಪ್ರಾಧಿಕಾರದಿಂದ ಕನ್ನಡ ಕಲಿಸಲು ನಿರ್ಧಾರ

  • ಎತ್ತಿನ ಗಾಡಿ ಗ್ರಂಥಾಲಯ- ಮನೆ,ಮನೆಗೆ ಹೋಗಿ ಪುಸ್ತಕ ಹಂಚಿದ ಶಿಕ್ಷಕಿ

    ಎತ್ತಿನ ಗಾಡಿ ಗ್ರಂಥಾಲಯ- ಮನೆ,ಮನೆಗೆ ಹೋಗಿ ಪುಸ್ತಕ ಹಂಚಿದ ಶಿಕ್ಷಕಿ

    ಭೋಪಾಲ್: ಎತ್ತಿನ ಗಾಡಿಯನ್ನು ಗ್ರಂಥಾಲಯವನ್ನಾಗಿ ಮಾಡಿಕೊಂಡು ಬುಡಕಟ್ಟು ವಿದ್ಯಾರ್ಥಿಗಳ ಮನೆ- ಮನೆಗೆ ತೆರಳಿ ಪುಸ್ತಕ ಹಂಚುತ್ತಿರುವ ಶಿಕ್ಷಕಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮಧ್ಯಪ್ರದೇಶದ ಶಿಕ್ಷಕಿಯೊಬ್ಬರು ವಿಶಿಷ್ಟವಾದ ಮಾರ್ಗವನ್ನು ಕಂಡುಕೊಂಡಿದ್ದಾರೆ. ಶಿಕ್ಷಕಿ ಮಲಾ ದಾವಂಡೆ ಅವರ ಕೆಲಸಕ್ಕೆ ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬೇತುಲ್ ಜಿಲ್ಲೆಯ ಭೈನ್ಸ್​​ದೇಹಿಯ  ಬುಡಕಟ್ಟು ಪ್ರದೇಶದ ಹಳ್ಳಿಯೊಂದರ ಶಾಲೆಯ ಶಿಕ್ಷಕಿಯಾದ ಕಮಲಾ ದಾವಂಡೆ ಅವರು, ಸಂಚಾರಿ ಗ್ರಂಥಾಲಯವನ್ನು ಎತ್ತಿನ ಗಾಡಿಯಲ್ಲಿ ಸ್ಥಾಪಿಸಿದ್ದಾರೆ. ಮನೆ ಮನೆಗೆ ಹೋಗಿ ಬಡ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಈ ಮಕ್ಕಳು ಆನ್‍ಲೈನ್ ತರಗತಿಗಳನ್ನು ಕೇಳಲು ಯಾವುದೇ ಸೌಲಭ್ಯವನ್ನು ಹೊಂದಿಲ್ಲ. ಈ ಮಕ್ಕಳು ರೇಡಿಯೋ ಉಪನ್ಯಾಸಗಳನ್ನೇ ಅವಲಂಬಿಸಿದ್ದಾರೆ. ಮಕ್ಕಳಿಗೆ ಸಹಾಯವಾಗಲೆಂದು ಕಮಲಾ ಟೀಚರ್ ಮಕ್ಕಳ ಮನೆ ಮನೆಗೆ ತೆರಳಿ ಪುಸ್ತಕಗಳನ್ನು ನೀಡುವ ಮೂಲಕ ಓದಿಗೆ ಸಹಾಯ ಮಾಡುತ್ತಿದ್ದಾರೆ.  ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್

    ಕಮಲಾ ದಾವಂಡೆ  ಅವರು ಖಾಸಗಿ ವಾಹಿನಿಯೊಂದಿಗೆ ಮಾತನಾಡಿ, ಈ ಗ್ರಾಮದಲ್ಲಿರುವ ಶಾಲೆಯಲ್ಲಿ 87 ಮಕ್ಕಳು ಮತ್ತು ಮೂವರು ಶಿಕ್ಷಕರಿದ್ದಾರೆ. ಕೋವಿಡ್-19 ಕಾರಣ ರಜೆಯಲ್ಲಿದ್ದಾರೆ. ಹೀಗಾಗಿ, ಸದ್ಯಕ್ಕೆ ನಾನೊಬ್ಬಳೇ ಇಲ್ಲಿ ಇರುವ ಶಿಕ್ಷಕಿಯಾಗಿದ್ದನೆ. ಮಕ್ಕಳಿಗೆ ಪುಸ್ತಕಗಳನ್ನು ಹಂಚುವುದು ಅನಿವಾರ್ಯವಾಗಿತ್ತು. ಎಲ್ಲ ಪುಸ್ತಕಗಳನ್ನು ಎತ್ತಿನ ಗಾಡಿಯಲ್ಲಿ ಇಟ್ಟುಕೊಂಡು ಮೊಹಲ್ಲಾ ತರಗತಿಯ ಬ್ಯಾನರ್ ಹಾಕಿಕೊಂಡು ಮನೆ ಮನೆಗೆ ತೆರಳಿ ಮಕ್ಕಳಿಗೆ ಪುಸ್ತಕಗಳನ್ನು ನೀಡುತ್ತಿದ್ದೇನೆ ಎಂದು ಸಂತೋಷದಿಂದ ಹೇಳಿಕೊಂಡಿದ್ದಾರೆ. ಇವರ ಕೆಲಸಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್‌ ಮಾಡಿದ ವಧು

  • ಸಾಹಿತ್ಯ ಲೋಕದಲ್ಲಿ ಕ್ರಾಂತಿ – ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಲಿದ್ದಾರೆ ಸುನಿಲ್ ಕುಮಾರ್

    ಸಾಹಿತ್ಯ ಲೋಕದಲ್ಲಿ ಕ್ರಾಂತಿ – ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಲಿದ್ದಾರೆ ಸುನಿಲ್ ಕುಮಾರ್

    ಬೆಂಗಳೂರು: ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸಾಹಿತ್ಯ ಲೋಕದಲ್ಲೊಂದು ನವ ಕ್ರಾಂತಿ ಮಾಡಿದ್ದಾರೆ. ತಾವು ಸಚಿವರಾದ ಬಳಿಕ ಅಭಿನಂದಿಸಲು ಬಂದ ಅಭಿಮಾನಿಗಳಲ್ಲಿ ಹಾರ, ತುರಾಯಿ ತರಬೇಡಿ ಪುಸ್ತಕಗಳನ್ನು ಕೊಡಿ ಅದನ್ನು ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದಿದ್ದರು. ಇದೀಗ ಇವರಿಗೆ ಸಾವಿರಾರು ಪುಸ್ತಕಗಳು ಅಭಿನಂದನಾ ರೂಪದಲ್ಲಿ ಸಿಕ್ಕಿದೆ.

    ಈ ಹಿಂದೆ ಸುನಿಲ್ ಕುಮಾರ್ ಅವರು ಸಚಿವರಾದ ಬಳಿಕ ದಯವಿಟ್ಟು ಹಾರ ತುರಾಯಿ ತರಬೇಡಿ ಅಭಿನಂದಿಸಲೇ ಬೇಕೆಂದಿದ್ದರೆ ಪುಸ್ತಕಗಳನ್ನು ಕೊಡಿ ಅದನ್ನು ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದಿದ್ದರು. ಅದರಂತೆ ಅವರು ಹೋದಲ್ಲಿ ಎಲ್ಲಾ ಕಡೆ ಅವರಿಗೆ ಪುಸ್ತಕ ನೀಡಿ ಅಭಿನಂದಿಸಿದ್ದಾರೆ. ಇದೀಗ ಅವರ ಬಳಿ ಸಾವಿರಾರು ಪುಸ್ತಕಗಳು ಬಂದು ಸೇರಿದೆ. ಇದನ್ನೂ ಓದಿ: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

    ಸಚಿವರು ಈ ಪುಸ್ತಕಗಳನ್ನು ಇದೀಗ ಪ್ರದರ್ಶನಕ್ಕೆ ಇಟ್ಟು ಬಳಿಕ ಗ್ರಂಥಾಲಯಕ್ಕೆ ಹಸ್ತಾಂತರ ಮಾಡುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 9ರಂದು ವಿಕಾಸ, ಶಾಸಕರ ಕಛೇರಿ, ಕಾರ್ಕಳದಲ್ಲಿ ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆಗಳನ್ನು ಕೊಡಲು ಮುಂದಾಗಿದ್ದಾರೆ.

    ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯ ಖರ್ಚಿಗೆ ಕಡಿವಾಣ ಹಾಕಿದ್ದು, ಹಾರ ತುರಾಯಿ ಹಾಕದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕವುದು ಬೇಡ. ಅನಗತ್ಯವಾಗಿ ಖರ್ಚು ವೆಚ್ಚ ಮಾಡುವುದು ಬೇಡ ಎಂದು ಸೂಚನೆ ಹೊರಡಿಸಿದ್ದರು. ಇದನ್ನೂ ಓದಿ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ: ಸುನೀಲ್ ಕುಮಾರ್

  • ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಚಿಕ್ಕೋಡಿ: ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಸ್ಥಾಪಿಸಿರುವ ಗ್ರಂಥಾಲಯಗಳ ಸದುಪಯೋಗವನ್ನು ಪ್ರತಿಯೊಂದು ಗ್ರಾಮದ ಜನರು ಪಡೆದುಕೊಳ್ಳಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಂಥಾಲಯಗಳಿಗೆ ಸಾರ್ವಜನಿಕ ಗ್ರಂಥಾಲಯದ ಮೂಲಕ ಬಂದಿರುವ ಪುಸ್ತಕಗಳನ್ನು ಹಂಚಿಕೆ ಮಾಡಿ ಮಾತನಾಡಿದ ಅವರು, ಗ್ರಂಥಾಲಯ ಎಂದರೆ ಇಡೀ ವಿಶ್ವವೇ ಇದ್ದ ಹಾಗೆ ದೇಶದ ಇತಿಹಾಸ, ಒಳ್ಳೆಯ ವಿಚಾರ, ಪರಿಸರ, ಜ್ಞಾನ, ಜಗತ್ತು, ಇತಿಹಾಸ ಪರಂಪರೆಯನ್ನು ಪುಸ್ತಕ ಕಲಿಸುತ್ತದೆ ಎಲ್ಲರೂ ಓದುವುದನ್ನು ಹವ್ಯಾಸ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಇದನ್ನೂ ಓದಿ: ರಮೇಶ್ ಕುಮಾರ್ ವಿರುದ್ಧ ಜೆ.ಪಿ ನಗರ ಎಎಸ್‍ಐ ಗರಂ

    ಪುಸ್ತಕ ಓದುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿ ಇರುತ್ತಾರೆ. ಸರ್ಕಾರ ಹಲವಾರು ಯೋಜನೆಗಳನ್ನು ಗ್ರಾಮಗಳಿಗೆ ಒದಗಿಸಿದೆ, ಆ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಇನ್ನೂ ಉಳಿದ ಗ್ರಾಮ ಪಂಚಾಯತ್‍ಗಳಿಗೆ ಸರ್ಕಾರದಿಂದ ಗ್ರಂಥಾಲಯ ಸ್ಥಾಪನೆ ಕಾರ್ಯ ಆಗುತ್ತಿದೆ ಎಂದರು.

    ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ, ಉಪ ತಹಶೀಲ್ದಾರ್ ಮಹಾದೇವ ಬಿರಾದಾರ್, ಡಿವೈಎಸ್‍ಪಿ ಅಲೀಶ್, ಕಂದಾಯ ನಿರೀಕ್ಷಿಕ ಎಂ.ಎಂ ಮಿರ್ಜಿ, ಕುಮಾರ್ ಹಾಡಕರ, ಉದ್ಯಮಿ ಸಂತೋಷ್ ಸಾವಡಕರ ಸೇರಿದಂತೆ ಹಲವರು ಉಪಸ್ಥಿರಿದ್ದರು. ಇದನ್ನೂ ಓದಿ: ಕೆಂಗೇರಿ ಮೆಟ್ರೋ ವೇದಿಕೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಮಾಯ

  • ಗೃಹ ಸಚಿವರಿಗೆ ಶ್ರೀರಾಮಾಯಣ ದರ್ಶನಂ ಪುಸ್ತಕ ನೀಡಿ ಗೌರವ ಸಲ್ಲಿಸಿದ ಪೊಲೀಸರು

    ಗೃಹ ಸಚಿವರಿಗೆ ಶ್ರೀರಾಮಾಯಣ ದರ್ಶನಂ ಪುಸ್ತಕ ನೀಡಿ ಗೌರವ ಸಲ್ಲಿಸಿದ ಪೊಲೀಸರು

    ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ‘ಶ್ರೀರಾಮಾಯಣ ದರ್ಶನಂ’ ಪುಸ್ತಕ ನೀಡಿ ಪೊಲೀಸರು ಗೌರವ ಸಲ್ಲಿಸಿದ್ದಾರೆ.

    ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಐಕ್ಯತೆ ಮತ್ತು ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯ ಓಟ ಕಾರ್ಯಕ್ರಮದಲ್ಲಿ ಶ್ರೀರಾಮಾಯಣ ದರ್ಶನಂ ಪುಸ್ತಕ ನೀಡಿ ಅರಗ ಜ್ಞಾನೇಂದ್ರ ಅವರಿಗೆ ಗೌರವಿಸಲಾಯಿತು.

    ಅರಗ ಜ್ಞಾನೇಂದ್ರ ಗೃಹ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಬಳಿಕ ಕೆಎಸ್‍ಆರ್ ಪಿ  ವತಿಯಿಂದ ಆಯೋಜನೆ ಮಾಡಿದ ಮೊದಲ ಕಾರ್ಯಕ್ರಮವಾಗಿದ್ದರಿಂದ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.  ಇದನ್ನೂ ಓದಿ: ಶಾಲೆಗಳಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ: ನಾರಾಯಣಗೌಡ

    ಸರ್ಕಾರ ಕಾರ್ಯಕ್ರಮದಲ್ಲಿ ಹೂಗುಚ್ಛಗಳನ್ನು ಅತಿಥಿಗಳಿಗೆ ನೀಡದೇ ಪುಸ್ತಕವನ್ನು ಕನ್ನಡ ಪುಸ್ತಕವನ್ನು ನೀಡಬೇಕೆಂದು ಸರ್ಕಾರ ಆದೇಶ ಪ್ರಕಟಿಸಿದ ಹಿನ್ನೆಲೆಯಲ್ಲಿ ಎಲ್ಲ ಅತಿಥಿಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು.

  • ಆಕಸ್ಮಿಕ ಬೆಂಕಿ ಅವಘಡ – ಸ್ಟೇಷನರಿ ಅಂಗಡಿ ಬೆಂಕಿಗಾಹುತಿ

    ಆಕಸ್ಮಿಕ ಬೆಂಕಿ ಅವಘಡ – ಸ್ಟೇಷನರಿ ಅಂಗಡಿ ಬೆಂಕಿಗಾಹುತಿ

    ಹುಬ್ಬಳ್ಳಿ: ಆಕಸ್ಮಿಕ ಬೆಂಕಿ ಅವಘಡದಿಂದ ಸ್ಟೇಷನರಿ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜಿಲ್ಲೆಯ ವಿದ್ಯಾನಗರದಲ್ಲಿನ ರೂಪಾ ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

    ಇಂದು ಬೆಳಗ್ಗೆ ವಿದ್ಯಾನಗರದಲ್ಲಿರುವ ರೂಪಾ ಸ್ಟೇಷನರಿ ಶಾಪ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸ್ಟೇಷನರಿ ಅಂಗಡಿಯಲ್ಲಿದ್ದ ಜೆರಾಕ್ಸ್ ಮಷಿನ್, ಗಿಫ್ಟ್ ಐಟಂ, ಮೊಬೈಲ್ ಹಾಗೂ ಡಿಟಿಎಚ್ ಕರೆನ್ಸಿಗಳ ಕಾರ್ಡ್‍ಗಳು, ಪುಸ್ತಕಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ. ಇದನ್ನೂ ಓದಿ: ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ವಾರ್ಡ್ ಬಾಯ್ ಅರೆಸ್ಟ್

    ಬೆಂಕಿ ತೀವ್ರವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಬಳಿಕ ಅಗ್ನಿ ಅವಘಡದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದೆ.

    ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

    ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

    – ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು

    ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ ತೊಳೆದುಕೊಂಡಿದೆ. ಪ್ರವಾಹ ನಿಂತ ಬಳಿಕ ಪಬ್ಲಿಕ್ ಟಿವಿ ‘ಬುಲೆಟ್ ರಿಪೋರ್ಟರ್’ ಎಂಬ ಹೆಸರಿನಡಿಯಲ್ಲಿ ಪ್ರವಾಹ ಬಂದ ಸ್ಥಳದಿಂದ ನೈಜ ಚಿತ್ರಣವನ್ನು ಅನಾವರಣ ಮಾಡಿತ್ತು. ಬೆಳಗಾವಿ ಜಿಲ್ಲೆಯ ಕಿಲಬನೂರು ಗ್ರಾಮದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದ, ಅದೆಷ್ಟೋ ಕುಟುಂಬದ ಜನ ಕಣ್ಣೀರು ಹಾಕಿದ್ದರು. ಪಬ್ಲಿಕ್ ಟಿವಿ ವರದಿ ಪ್ರಸಾರವಾದ ಬಳಿಕ ಜನ ಅವರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

    ಪ್ರವಾಹ ಬಂದಾಗ ಜನರ ಗೋಳು ಎಷ್ಟಿತ್ತೋ ಪ್ರವಾಹ ನಿಂತ ಮೇಲೆ ಆ ಗೋಳು ಇಮ್ಮಡಿಯಾಗಿತ್ತು. ಸರ್ಕಾರ ಪ್ರವಾಹ ಸಂತ್ರಸ್ತರ ಜೊತೆಯಲ್ಲಿ ಇದೆ ಎಂದು ಹೇಳಿತ್ತು. ಆದರೆ ಪಬ್ಲಿಕ್ ಟಿವಿ ಗ್ರೌಂಡ್ ರಿಪೋರ್ಟ್ ಮಾಡಿದಾಗ ಜನರ ಕಣ್ಣೀರಿನ ಒಂದೊಂದೇ ಕಥೆಗಳು ಅನಾವರಣಗೊಂಡಿದೆ. ಮನೆ ಕಳೆದುಕೊಂಡ ಅದೆಷ್ಟೋ ಜನ ತಮ್ಮ ಮನೆಯ ಮುಂದೆ ನಿಂತು ಕಣ್ಣೀರು ಹಾಕಿದ್ದರು. ಮನೆಯಲ್ಲಿ ಊಟ ಇಲ್ಲದೆ ಮಕ್ಕಳು ಶಾಲೆಗೆ ಹಸಿದ ಹೊಟ್ಟೆಯಲ್ಲಿಯೇ ಹೋಗಿ ಪಾಠ ಕೇಳುತಿದ್ದರು.

    ಪಬ್ಲಿಕ್ ಟಿವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿಲಬನೂರು ಗ್ರಾಮ ಮತ್ತು ವಿಠ್ಠಲ ಪೇಟೆಯ ಸರ್ಕಾರಿ ಶಾಲೆಯ ಮಕ್ಕಳ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಜೊತೆಗೆ ಆ ಶಾಲೆ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ಮತ್ತೆ ಮಕ್ಕಳು ಆ ಶಾಲೆಯಲ್ಲಿ ಕಲಿಯುವಂತೆ ಮಾಡಿತ್ತು. ಇದಕ್ಕೆಲ್ಲ ಕಾರಣ ಸುಮಾರು 8 ವರ್ಷದ ಸ್ವಾತಿ ಎಂಬ ಮುಗ್ಧ ಬಾಲಕಿ. ಅಂದು ಪಬ್ಲಿಕ್ ಟಿವಿ ಬುಲೆಟ್ ರಿಪೋರ್ಟರ್ ಶೀರ್ಷಿಕೆ ಅಡಿಯಲ್ಲಿ ಗ್ರೌಂಡ್ ರಿಪೋರ್ಟಿಂಗ್ ಮಾಡಿದಾಗ  ಬಾಲಕಿ ತನ್ನ ಹಸಿವಿನ ರೋಧನೆ ತೋಡಿಕೊಂಡಿದ್ದಳು. ಆಗ ಪಬ್ಲಿಕ್ ಟಿವಿ ಕೇವಲ ಸ್ವಾತಿ ಕಣ್ಣೀರು ಒರೆಸುವ ಪ್ರಯತ್ನ ಮಾಡಲಿಲ್ಲ. ಜೊತೆಗೆ ಅಲ್ಲಿ ಕಲಿಯುತ್ತಿರುವ ನೂರಾರು ಮಕ್ಕಳು ಕಣ್ಣೀರು ಒರೆಸಿತ್ತು.

    ಕೇವಲ ಪಬ್ಲಿಕ್ ಟಿವಿ ಮಾತ್ರ ಅವಳ ಸಹಾಯಕ್ಕೆ ಬರಲಿಲ್ಲ, ಜೊತೆಯಲ್ಲಿ ಬೆಂಗಳೂರಿನ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವಸಂತರೆಡ್ಡಿ ಅವರು ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡರು. ಸಂಪೂರ್ಣ ಜಲಸಮಾಧಿ ಆಗಿರುವ ಕಿಲಬನೂರು ಗ್ರಾಮದ ಸುಮಾರು 150ಕ್ಕೂ ಹೆಚ್ಚಿನ ಕುಟುಂಬಕ್ಕೆ ಪ್ರೆಶರ್ ಕುಕ್ಕರ್, ಅಕ್ಕಿ, ಬೆಳೆ, ಗೋಧಿಯನ್ನು ಕೊಟ್ಟಿದ್ದಾರೆ. ಅಲ್ಲದೆ ವಿಠ್ಠಲ ಪೇಟೆಯ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಜೊತೆಗೆ ಇತರ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. ಇದಕ್ಕೆಲ್ಲ ಕಾರಣ ಸ್ವಾತಿ ಅಂದು ಹಾಕಿದ ಕಣ್ಣೀರು, ಅವಳ ಆ ಮುಗ್ಧ ಮುಖದಲ್ಲಿ ಮತ್ತೆ ನಗುವನ್ನು ತರೆಸಲು ದೂರದ ಊರಿನಿಂದ ಜನ ಬಂದು ಆ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಕೊಡುತ್ತಿದ್ದಾರೆ. ಸ್ವಾತಿ ಎಂಬ ಪುಟ್ಟ ಬಾಲಕಿಯ ತನ್ನ ಹಸಿವಿನ ರೋಧನೆ ಹೇಳಿಕೊಂಡಿದ್ದರಿಂದ ಇಂದು ಈ ಶಾಲೆಯಲ್ಲಿ ಕಲಿಯುತ್ತಿರುವ ನೂರಾರು ಮಕ್ಕಳಿಗೆ ಸಹಾಯ ಆಗುತ್ತಿದೆ.

    ಪ್ರವಾಹಕ್ಕೆ ತುತ್ತಾಗಿ ಅದೆಷ್ಟೋ ಶಾಲೆಗಳು, ಅಲ್ಲಿ ಕಲಿಯುವ ಮಕ್ಕಳ ಭವಿಷ್ಯ ಇಂದು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಆದರೆ ಪಬ್ಲಿಕ್ ಟಿವಿ ವರದಿ ಬಳಿಕ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಎಲ್ಲಾ ಶಾಲಾ ಮಕ್ಕಳಿಗೆ ಮತ್ತೊಂದು ಸಾರಿ ಪುಸ್ತಕವನ್ನು ವಿತರಿಸುವಂತೆ ಆದೇಶ ಮಾಡಿದೆ. ಜೊತೆಯಲ್ಲಿ ಅನೇಕ ದಾನಿಗಳು ಸರ್ಕಾರಿ ಶಾಲಾ ಮಕ್ಕಳ ಜೊತೆಯಲ್ಲಿ ನಿಲ್ಲುವಂತೆ ಮಾಡಿದೆ.

  • ಗ್ರಾಮೀಣ ಮಕ್ಕಳ ಅಚ್ಚು ಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ

    ಗ್ರಾಮೀಣ ಮಕ್ಕಳ ಅಚ್ಚು ಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ

    ಪುಣೆ: ಮಹಾರಾಷ್ಟ್ರದ ಸೋಲಾಪುರದ ದರ್ಗನಹಳ್ಳಿ ಗ್ರಾಮದ ವಿಶೇಷ ಗ್ರಂಥಾಲಯ ಈಗ ಸಖತ್ ಸುದ್ದಿಯಲ್ಲಿದೆ. ಎತ್ತಿನಬಂಡಿಯಲ್ಲಿಯೇ ಪುಸ್ತಕಗಳನ್ನು ಇರಿಸಲಾಗಿದ್ದು, ಇದು ಹಳ್ಳಿ ಮಕ್ಕಳ ಅಚ್ಚುಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ ಎಂದೇ ಮೆಚ್ಚುಗೆ ಪಡೆದಿದೆ.

    ಸೋಲಾಪುರದ ದರ್ಗನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣ ಕಳೆದ 6 ತಿಂಗಳಿಂದ ಎತ್ತಿನಬಂಡಿ ಗ್ರಂಥಾಲಯವನ್ನು ಗ್ರಾಮಕ್ಕೆ ತರುತ್ತಿರುವ ಕಾಶಿನಾಥ್ ಕೋಲಿ ಅವರ ಶ್ರಮ. ಹೌದು. ಸೋಲಾಪುರದ ನಗರ ಗ್ರಂಥಾಲಯದಲ್ಲಿ ಆಫೀಸ್ ಹುಡುಗನಾಗಿ ಕೆಲಸ ಮಾಡುವ ಕಾಶಿನಾಥ್ ಕೋಲಿ ಅವರು ಈ ಅಪರೂಪದ ಎತ್ತಿನಬಂಡಿ ಗ್ರಂಥಾಲಯವನ್ನು ನಡೆಸುತ್ತಿದ್ದಾರೆ. ಈ ಗ್ರಂಥಾಲಯವನ್ನು ಕಾಶಿನಾಥ್ ಅವರು ವಿಶೇಷವಾಗಿ ಹಳ್ಳಿಯ ಮಕ್ಕಳಿಗಾಗಿಯೇ ಮಾಡಿದ್ದಾರೆ.

    ಕಳೆದ ಆರು ತಿಂಗಳಿನಿಂದ ಈ ಗ್ರಂಥಾಲಯ ಕಾರ್ಯನಿರ್ವಸುತ್ತಿದೆ. ಹೀಗಾಗಿ ಹಳ್ಳಿಯ ಮಕ್ಕಳು ಈಗ ಮನೆಯಲ್ಲಿಯೇ ಕುಳಿತು ಪುಸ್ತಕಗಳನ್ನು ಉಚಿತವಾಗಿ ಓದುತ್ತಿದ್ದಾರೆ. ಮಕ್ಕಳ ಅನುಕೂಲಕ್ಕಾಗಿ ಕಾಶಿನಾಥ್ ಅವರು ಸುಮಾರು ಒಂದೂವರೆ ಸಾವಿರ ಪುಸ್ತಕಗಳನ್ನು ತಮ್ಮ ಎತ್ತಿನಬಂಡಿ ಗ್ರಂಥಾಲಯದಲ್ಲಿ ಸಂಗ್ರಹಿಸಿಟ್ಟಿದ್ದಾರೆ.

    ತಮ್ಮ ರಜಾ ದಿನಗಳಲ್ಲಿ ಅವರು ಎತ್ತಿನಗಾಡಿಯಲ್ಲಿ ಪುಸ್ತಕಗಳನ್ನು ಹೊತ್ತು ದರ್ಗನಹಳ್ಳಿ ಗ್ರಾಮಕ್ಕೆ ಹೋಗುತ್ತಾರೆ. ಅವರ ಎತ್ತಿನ ಬಂಡಿಯಲ್ಲಿ ಚಲಿಸುತ್ತಿರುವ ಮೊಬೈಲ್ ಲೈಬ್ರರಿ ಈಗ ದರ್ಗನಹಳ್ಳಿ ಗ್ರಾಮದ ಗುರುತಾಗಿದೆ. ಮೊಬೈಲ್, ಟಿವಿಯಲ್ಲಿ ಮಕ್ಕಳು ಹೆಚ್ಚು ಗಮನ ಹರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಅವರು ಪುಸ್ತಕಗಳನ್ನು ಓದುವ ಮಕ್ಕಳ ಆಸಕ್ತಿಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

    ಈ ಬಗ್ಗೆ ಮಾತನಾಡಿದ ಕಾಶಿನಾಥ್, ಮೊಬೈಲ್ ವ್ಯಾನ್ ಲೈಬ್ರರಿಯ ಬದಲು ನಾನು ಬುಲಕ್ ಕಾರ್ಟ್ ಲೈಬ್ರರಿಯನ್ನು ಆರಿಸಿದ್ದೇನೆ. ಗ್ರಾಮೀಣ ಪ್ರದೇಶವಾದ ಕಾರಣಕ್ಕೆ ಎತ್ತಿನಬಂಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಎತ್ತಿನಬಂಡಿ ಗ್ರಂಥಾಲಯದಿಂದ ಚಿಕ್ಕ ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಾಗಿದೆ ಎಂದು ಖುಷಿಯನ್ನು ಹಂಚಿಕೊಂಡರು.

  • ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ.

    ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.

    ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.

    ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್‍ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.

    ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.

  • 25 ಪುಸ್ತಕಗಳನ್ನು ಬರೆದ 8ನೇ ತರಗತಿ ವಿದ್ಯಾರ್ಥಿ!

    25 ಪುಸ್ತಕಗಳನ್ನು ಬರೆದ 8ನೇ ತರಗತಿ ವಿದ್ಯಾರ್ಥಿ!

    ಬೆಂಗಳೂರು: ಮಕ್ಕಳು ಬೆಳೆಯುತ್ತ ಹಲವು ವಿಷಯಗಳಲ್ಲಿ ಆಸಕ್ತಿ ಮೂಡಿಸಿಕೊಳ್ಳುತ್ತಾರೆ. ಬಹುತೇಕರು ಆಟ, ಪಾಠದಲ್ಲೇ ಮಗ್ನರಾಗುತ್ತಾರೆ. ಇನ್ನು ಆಟದ ವಿಷಯಕ್ಕೆ ಬಂದರೆ ಬರೀ ಆಟ ಆಡೋದಷ್ಟೇ ಮಕ್ಕಳ ಆಸಕ್ತಿಯಾಗಿರುತ್ತೆ. ಆದರೆ ಇಲ್ಲೊಬ್ಬ ಪೋರ 8ನೇ ತರಗತಿಗೆ 25 ಪುಸ್ತಕಗಳನ್ನ ಸ್ವತಃ ಬರೆದಿದ್ದಾನೆ.

    ಅಂತಃಕರಣ ಎಂಬ 8ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಇಂದು ತಾನು ಬರೆದ 25ನೇ ಪುಸ್ತಕವನ್ನು ಬಿಡುಗಡೆ ಮಾಡಿದ್ದಾನೆ. ಈತನನ್ನು 2015 ರಲ್ಲೇ ಪಬ್ಲಿಕ್ ಟಿವಿ ಗುರುತಿಸಿ ಪಬ್ಲಿಕ್ ಹೀರೋ ಮಾಡಿತ್ತು. ಕ್ರೀಡೆಯ ವಿಚಾರದಲ್ಲಿ ಆಸಕ್ತಿ ಮೂಡಿಸಿಕೊಂಡು ಅದರ ಬಗ್ಗೆ ಪುಸ್ತಕಗಳನ್ನು ಬರೆಯಲು ಶುರು ಮಾಡಿ ಇಂದು ಐಪಿಎಲ್ ಕುರಿತ ತನ್ನ ವಿಮರ್ಶೆ ಜೊತೆಗೆ ತನ್ನ ಡ್ರೀಮ್ ಟೀಮ್ ಬಗ್ಗೆ ಸಹ ವಿವರಿಸಿದ್ದಾನೆ. ಪಬ್ಲಿಕ್ ಹೀರೋ ಆದ ನಂತರದ ದಿನಗಳಲ್ಲಿ ನನಗೆ ಮತ್ತಷ್ಟು ಪುಸ್ತಕಗಳನ್ನ ಬರೆಯಲು ಪ್ರೇರಣೆಯಾಯ್ತು ಎಂದು ಆತ ಹೇಳಿದ್ದಾನೆ.

    ಐಪಿಎಲ್ ಬಗೆಗಿನ ಪುಸ್ತಕ ಬಿಡುಗಡೆಗೆ ಹಿರಿಯ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಆಗಮಿಸಿದ್ದರು. ಬಿಡುಗಡೆ ನಂತರ ಮಾತನಾಡಿದ ಗಣೇಶ್, ಅಂತಃಕರಣ ಬಗ್ಗೆ ಖುಷಿ ವ್ಯಕ್ತಪಡಿಸಿದ್ದರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಬೆಳಸಿಕೊಂಡು ವಿಮರ್ಶೆ ಮಾಡುತ್ತ ಪುಸ್ತಕ ಬರೆದಿರೋದು ನಿಜಕ್ಕೂ ಸೂಪರ್ ಎಂದು ಶ್ಲಾಘಿಸಿದ್ರು.

    ಒಟ್ಟಾರೆ ಆಟ ಪಾಠದಲ್ಲಿ ಮುಂದಿರುವ ಅಂತಕಃರಣ 24 ಪುಸ್ತಕಗಳನ್ನ ಕನ್ನಡದಲ್ಲಿ ಬರೆದು, ಇಂಗ್ಲಿಷ್‍ನಲ್ಲಿ ಪುಸ್ತಕ ಬರೆಯುವ ಈ ಐಪಿಎಲ್ ಬಗೆಗಿನ ಪುಸ್ತಕದಿಂದ ಈಡೇರಿಸಿಕೊಂಡಿದ್ದಾನೆ. ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ಅಂತಃಕರಣ ಮತ್ತಷ್ಟೂ ಪುಸ್ತಕಗಳನ್ನ ಬರೆಯಲಿ ಎನ್ನುವುದು ಎಲ್ಲರ ಆಶಯವಾಗಿದೆ.