Tag: border

  • ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಮಡಿಕೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೊಡಗು (Kodagu) ಜಿಲ್ಲೆಯ ಕೇರಳ ಗಡಿಯಲ್ಲಿ (Kerala Border) ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಮೇ 10 ರಂದು ಮತದಾನ ಹಿನ್ನೆಲೆಯಲ್ಲಿ ಕೊಡಗಿನ ನಕ್ಸಲ್ (Naxal) ಪೀಡಿತ ಬೂತ್‌ಗಳಲ್ಲಿ ಬಿಗಿ ಭದ್ರತೆಯನ್ನು ನೀಡಲಾಗುತ್ತದೆ ಎಂದು ಕೊಡಗು ಎಸ್‌ಪಿ ರಾಜರಾಜನ್ ತಿಳಿಸಿದ್ದಾರೆ.

    ಕೊಡಗಿನ ನಕ್ಸಲ್ ಪೀಡಿತ ಬೂತ್‌ಗಳಾದ ಮಣ್ಟ್ರೂಟ್, ಕಡಮಕಲ್ಲು ಮತ್ತು ಒಣಚಲು ಬೂತ್‌ಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಜಿಲ್ಲೆಯ 12 ಅತಿ ಸೂಕ್ಷ್ಮ ಮತಗಟ್ಟೆಗಳು ಆಗಿದ್ದು ಈ ಬೂತ್‌ಗಳಿಗೆ ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತಗಟ್ಟೆಗಳ ಬೂತ್‌ಗಳಲ್ಲಿ ಅರೆಸೇನಾಪಡೆ, ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜನೆ ನಿರ್ಧಾರ ಮಾಡಿದೆ.

    ಮತ್ತೊಂದೆಡೆ ಕೂಂಬಿಂಗ್ ಮಾಡುತ್ತಿರುವ ಎಎನ್‌ಎಫ್ ತಂಡ ಅರಣ್ಯ ಅಂಚಿನಲ್ಲಿ ನಿರಂತರ ನಿಗಾ ಇರಿಸಿದ್ದಾರೆ. ಜನಸಾಮಾನ್ಯರು ನಿರ್ಭೀತಿ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಕೊಡಗು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಅಷ್ಟೇ ಅಲ್ಲದೇ ಕೊಡಗಿನ ಬಿರುನಾಣಿ, ಪೂಕೊಳ, ಮಾಕುಟ್ಟ ಮೊದಲಾದ ಗಡಿಭಾಗದ ಪ್ರದೇಶಗಳ ಜೊತೆಗೆ ಕೇರಳದ ಭಾಗಗಳಲ್ಲೂ ನಿರಂತರ ನಿಗಾ ಇರಿಸಿದ್ದಾರೆ. ಇದನ್ನೂ ಓದಿ: ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ

    ಏಪ್ರಿಲ್ 27ರಂದು ಕೇರಳದ ವಯನಾಡು ಜಿಲ್ಲೆಯ ತಲಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ನಕ್ಸಲರು ಕಾಣಿಸಿಕೊಂಡಿದ್ದರು. ಇವರಲ್ಲಿ ಕರ್ನಾಟಕದ ನಕ್ಸಲ್ ವಿಕ್ರಂ ಗೌಡ ಕೂಡಾ ಇದ್ದ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಇಲ್ಲಿನ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಎಚ್ಚೆತ್ತಿದ್ದು, ಗಡಿಭಾಗದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಕೇರಳದ ಕಾಡಿನಂಚಿನಲ್ಲಿರುವ ಅನೇಕರಿಗೆ ನಕ್ಸಲರ ಮೇಲೆ ಅನುಕಂಪ ಇದೆ. ನಕ್ಸಲರ ಚಟುವಟಿಕೆಗಳು ಹೆಚ್ಚಿದ್ದರೂ, ಮಾಹಿತಿ ಇದ್ದರೂ ಇವರು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ಕೊಡಗು-ಕೇರಳ ಗಡಿಭಾಗದ ಕುಟ್ಟ ಮತ್ತು ಆರ್ಜಿ ಗ್ರಾಮಗಳಲ್ಲಿ ನಕ್ಸಲ್ ನಿಗ್ರಹ ಪಡೆಯ 2 ಶಿಬಿರಗಳು ಇವೆ. ಇಲ್ಲಿ 60ಕ್ಕೂ ಅಧಿಕ ಮಂದಿ ಪೊಲೀಸರು ಸಕ್ರಿಯರಾಗಿದ್ದು, ನಿತ್ಯವೂ ಕಾಡಿನೊಳಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಡಂಚಿನ ಜನರು ಮುಕ್ತವಾಗಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೊಡಗು ಎಸ್‌ಪಿ ರಾಜರಾಜನ್ ತಿಳಿಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್

  • ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ವಾಷಿಂಗ್ಟನ್: ಕೆನಡಾದಿಂದ (Canada) ಅಮೆರಿಕಕ್ಕೆ (US) ಅಕ್ರಮವಾಗಿ ದಾಟಲು ಯತ್ನಿಸಿದ್ದ ಇಬ್ಬರು ಮಕ್ಕಳು ಸೇರಿದಂತೆ 8 ಜನರ ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯ ಮೂಲಕ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಇವರಲ್ಲಿ ಭಾರತೀಯರು (Indian) ಸೇರಿದ್ದಾರೆ.

    ಮೃತರಲ್ಲಿ ಓರ್ವ ಮಹಿಳೆಯನ್ನು ಭಾರತ ಮೂಲದವರು ಹಾಗೂ ಮತ್ತೋರ್ವನನ್ನು ಕೆನಡಾ ಮೂಲದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆನಡಾದಿಂದ ಅಕ್ರಮವಾಗಿ ಅಮೆರಿಕಾಕ್ಕೆ ದಾಟಲು ಪ್ರಯತ್ನಿಸುತ್ತಿದ್ದರು. ಆದರೆ ಕೆನಡಾ- ಅಮೆರಿಕಾ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಘಟನೆಗೆ ಸಂಬಂಧಿಸಿ ಕೆನಡಾ ಅಧಿಕಾರಿಗಳು ಮಾತನಾಡಿ, ಈ ಪ್ರದೇಶದಲ್ಲಿ ವೈಮಾನಿಕ ಶೋಧ ನಡೆಸಿದಾಗ ಮೊದಲ ಶವ ಪತ್ತೆಯಾಗಿದೆ. ನಾಪತ್ತೆ ಆದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೇವಸ್ಥಾನದ ಹುಂಡಿಗೆ ಹಾಕಲು ತೆಗೆದುಕೊಂಡು ಹೋಗುತ್ತಿದ್ದ 2.50 ಸಾವಿರ ಹಣ ಸೀಜ್

    .

  • ಕೇರಳದಲ್ಲಿ ಹಕ್ಕಿ ಜ್ವರ – ಗಡಿಯಲ್ಲಿ ಕಟ್ಟೆಚ್ಚರ

    ಕೇರಳದಲ್ಲಿ ಹಕ್ಕಿ ಜ್ವರ – ಗಡಿಯಲ್ಲಿ ಕಟ್ಟೆಚ್ಚರ

    ಚಾಮರಾಜನಗರ: ನೆರೆಯ ರಾಜ್ಯ ಕೇರಳದಲ್ಲಿ (Kerala) ಹಕ್ಕಿ ಜ್ವರದ (Bird flu) ಆತಂಕದ ಹಿನ್ನೆಲೆಯಲ್ಲಿ ಚಾಮರಾಜನಗರ ಗಡಿಯಲ್ಲಿ (Chamarajanagar Border) ಕಟ್ಟೆಚ್ಚರ ವಹಿಸಲಾಗಿದೆ.

    ಬಂಡೀಪುರ ಅಭಯಾರಣ್ಯದ ಕೇರಳ ಕರ್ನಾಟಕ ಗಡಿ ಮೂಳೆ ಹೊಳೆಯಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಭಯಾರಣ್ಯದ ಬಳಿ ಹಕ್ಕಿ ಜ್ವರ ಭೀತಿಗೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಕೇರಳದಿಂದ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಸರಕು, ಕೋಳಿ ತುಂಬಿದ್ದ ವಾಹನಗಳಿಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಮೋದಿ ಭೇಟಿ – ಬೀದರ್‌ನಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಟ

    ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಬಳಿ ನಾಟಿ ಕೋಳಿ ಸಾವನ್ನಪ್ಪಿದ್ದವು. ಇದರಿಂದ ಹಕ್ಕಿ ಜ್ವರದ ಆತಂಕವಿತ್ತು. ಇದೀಗ ಆ ಕೋಳಿಯ ಸ್ಯಾಂಪಲ್ ಅನ್ನು ಲ್ಯಾಬ್‌ಗೆ ರವಾನಿಸಲಾಗಿದೆ.

    ಸದ್ಯ ಯಾವುದೇ ಭಯಪಡುವ ಅಗತ್ಯವಿಲ್ಲ, ವರದಿ ಬಂದ ನಂತರ ಮತ್ತಷ್ಟು ಸೂಕ್ತ ಕ್ರಮ ವಹಿಸುತ್ತೇವೆ ಎಂದು ಚಾಮರಾಜನಗರದ ಪಶುಪಾಲನೆ ಹಾಗೂ ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯೆಯ ಸೋಗಿನಲ್ಲಿ ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡ್ತಿದ್ದವಳು ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ

    ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ

    ನವದೆಹಲಿ: ಅರುಣಾಚಲ ಪ್ರದೇಶದ ಗಡಿ ವಾಸ್ತವ ರೇಖೆ(LAC) ಉದ್ದಕ್ಕೂ ಭಾರತ (India) ಹಾಗೂ ಚೀನಾ (China) ಪಡೆಗಳ ನಡುವೆ ಉಂಟಾಗಿರುವ ಘರ್ಷಣೆಯನ್ನು ಚರ್ಚೆ ನಡೆಸಿ ಬಗೆಹರಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದೆ. ಈ ಹಿನ್ನೆಲೆ ಮಾತನಾಡಿರುವ ಗೃಹಸಚಿವ ಅಮಿತ್ ಶಾ (Amit Shah) ನರೇಂದ್ರ ಮೋದಿ ಸರ್ಕಾರ ಅಧಿಕಾರದಲ್ಲಿರುವವರೆಗೆ ಯಾರು ಕೂಡಾ ಒಂದಿಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಸಂಸತ್ ಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು.

    ರಾಜೀವ್ ಗಾಂಧಿ ಪ್ರತಿಷ್ಠಾನ (RGF) ಚೀನಾ ರಾಯಭಾರ ಕಚೇರಿಯಿಂದ 1.35 ಕೋಟಿ ರೂ. ಪಡೆದಿದೆ ಎಂದು ಆರೋಪಿಸಿದ ಅಮಿತ್ ಶಾ, ಇದು ಎಫ್‌ಸಿಆರ್‌ಎ ನಿಯಮಗಳಿಗೆ ಅನುಸಾರವಾಗಿಲ್ಲ. ಹೀಗಾಗಿ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದೊಂದಿಗಿನ ಗಡಿ ಪರಿಸ್ಥಿತಿ ಸ್ಥಿರವಾಗಿದೆ: ಚೀನಾ ಪ್ರತಿಕ್ರಿಯೆ

    ಜವಾಹರಲಾಲ್ ನೆಹರೂ ಅವರು ತಮಗಿದ್ದ ಚೀನಾ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸಿಕ್ಕಿದ್ದ ಖಾಯಂ ಸ್ಥಾನವನ್ನು ತ್ಯಾಗ ಮಾಡಿ ಚೀನಾಗೆ ನೀಡಿದ್ದಾರೆ ಎಂದು ದೂರಿದರು.

    ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದ ಶಾ, ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನೂ ಯಾರಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ

    Live Tv
    [brid partner=56869869 player=32851 video=960834 autoplay=true]

  • ಭಾರತದೊಂದಿಗಿನ ಸಂಬಂಧದಲ್ಲಿ ಹಸ್ತಕ್ಷೇಪ ಮಾಡಬೇಡಿ – ಅಮೆರಿಕಗೆ ಚೀನಾ ವಾರ್ನಿಂಗ್

    ಭಾರತದೊಂದಿಗಿನ ಸಂಬಂಧದಲ್ಲಿ ಹಸ್ತಕ್ಷೇಪ ಮಾಡಬೇಡಿ – ಅಮೆರಿಕಗೆ ಚೀನಾ ವಾರ್ನಿಂಗ್

    ವಾಷಿಂಗ್ಟನ್: ತನ್ನ ಹಾಗೂ ಭಾರತದ (India) ಸಂಬಂಧದಲ್ಲಿ ಹಸ್ತಕ್ಷೇಪ ಮಾಡದಂತೆ ಚೀನಾ (China) ಅಮೆರಿಕಾಗೆ (America) ಎಚ್ಚರಿಕೆ ನೀಡಿದೆ.

    ಭಾರತ ಅಮೆರಿಕದೊಂದಿಗಿನ ನಿಕಟ ಸಂಬಂಧಕ್ಕೆ ಅಡ್ಡಿಯಾಗಲು ಚೀನಾ ಬಯಸುತ್ತದೆ. ಅದಕ್ಕಾಗಿಯೇ ಚೀನಾ ಭಾರತದ ಗಡಿಯಲ್ಲಿ ಸಂಘರ್ಷದ ತೀವ್ರತೆಯನ್ನು ಕಡಿಮೆ ಮಾಡುತ್ತಿದೆ. ತನ್ನ ಹಾಗೂ ಭಾರತದ ಸಂಬಂಧದಲ್ಲಿ ಮಧ್ಯಪ್ರವೇಶಿಸದಂತೆ ಚೀನಾ ಅಮೆರಿಕವನ್ನು ಕೇಳಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

    ಚೀನಾ 2021ರಿಂದ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಮೂಲಸೌಕರ್ಯ ಅಭಿವೃದ್ಧಿಯನ್ನು ಮುಂದುವರಿಸಿದೆ. ಗಡಿಯಲ್ಲಿ ತಮ್ಮ ಅನುಕೂಲಗಳನ್ನು ಕಳೆದುಕೊಳ್ಳುವುದರಿಂದ ಎರಡೂ ಕಡೆಯವರು ವಿರೋಧಿಸಿದ್ದಕ್ಕಾಗಿ ಮಾತುಕತೆಗೆ ಮರಳಲು ಪ್ರಯತ್ನಿಸಿವೆ ಎಂದು ಪೆಂಟಗನ್ ವರದಿಯಲ್ಲಿ ತಿಳಿಸಲಾಗಿದೆ.

    2020ರ ಮೇ ಯಿಂದ ಆರಂಭಗೊಂಡ ಭಾರತದೊಂದಿಗಿನ ಉದ್ವಿಗ್ನತೆಯಿಂದ ಎರಡೂ ಕಡೆಯ ಪಡೆಗಳು ಎಲ್‌ಎಸಿ ಉದ್ದಕ್ಕೂ ಕಲ್ಲು, ಲಾಠಿಗಳನ್ನು ಹಿಡಿದು ಘರ್ಷಣೆಯನ್ನು ನಡೆಸಿವೆ. ಇದರ ಪರಿಣಾಮವಾಗಿ ಎರಡೂ ಕಡೆಗಳ ಸೇನೆಯ ನಿಯೋಜನೆಯನ್ನು ಹೆಚ್ಚಿಸಲಾಗಿದೆ ಎಂದು ಅಮೆರಿಕ ಕಾಂಗ್ರೆಸ್‌ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಸಲಿಂಗ ವಿವಾಹಗಳನ್ನು ರಕ್ಷಿಸುವ ಮಸೂದೆಗೆ ಅಮೆರಿಕ ಸೆನೆಟ್ ಅಂಗೀಕಾರ

    ಚೀನಾ ಹಾಗೂ ಭಾರತ ತಮ್ಮ ಸ್ಥಾನಕ್ಕಾಗಿ ಎರಡೂ ಕಡೆಯವರು ಬಗ್ಗಲಿಲ್ಲ. ಗಡಿಯಲ್ಲಿ ಭಾರತ ತನ್ನ ಮೂಲಸೌಕರ್ಯವನ್ನು ಹೆಚ್ಚಿಸುತ್ತಿದ್ದುದನ್ನು ಚೀನಾ ದೂಷಿಸಿದರೆ, ಭಾರತ ತನ್ನ ಭೂಪ್ರದೇಶದೊಳಗೆ ಚೀನಾ ಆಕ್ರಮಣವನ್ನು ನಡೆಸಲು ಮುಂದಾಗುತ್ತಿದೆ ಎಂದು ಆರೋಪಿಸಿದೆ.

    2020 ರಲ್ಲಿ ಪ್ರಾರಂಭವಾದ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಹಲವು ಬಾರಿ ಮಿಲಿಟರಿ ಮಟ್ಟದ ಮಾತುಕತೆಗಳನ್ನು ನಡೆಸಿವೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಮೆರಿಕ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಜಪಾನ್‍ನಲ್ಲಿದ್ದಾರಂತೆ ಅಲಿಬಾಬಾ ಸಂಸ್ಥಾಪಕ ಜಾಕ್ ಮಾ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕದ ಬಸ್‍ಗೆ ಕಲ್ಲು ತೂರಾಟ – ಮಿರಜ್ ಮಾರ್ಗವಾಗಿ ಸಂಚರಿಸುವ ಬಸ್‍ಗಳ ಸಂಚಾರ ಸ್ಥಗಿತ

    ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕದ ಬಸ್‍ಗೆ ಕಲ್ಲು ತೂರಾಟ – ಮಿರಜ್ ಮಾರ್ಗವಾಗಿ ಸಂಚರಿಸುವ ಬಸ್‍ಗಳ ಸಂಚಾರ ಸ್ಥಗಿತ

    ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra) ಮತ್ತೆ ಪುಂಡಾಟ ಮುಂದುವರಿದಿದ್ದು, ಕರ್ನಾಟಕದ (Karnataka) ಬಸ್‍ಗಳಿಗೆ (Bus) ಕಲ್ಲು ತೂರಾಟ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

    ಮಹಾರಾಷ್ಟ್ರದ ಮಿರಜ್ ಕಾಗವಾಡ ಮಧ್ಯೆ ಕರ್ನಾಟಕ ಬಸ್‍ಗೆ ಮಹಾರಾಷ್ಟ್ರದ ಪುಂಡರು ನಿನ್ನೆ ಮಧ್ಯರಾತ್ರಿ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕದ ಬಸ್ ಮೇಲೆ ಕಲ್ಲು ತೂರಿದ್ದಾರೆ. ಬಸ್‍ಗೆ ಕಲ್ಲು ತೂರಿದ ಪರಿಣಾಮ ಅಥಣಿ ಡಿಪೋಗೆ ಸೇರಿದ್ದ ಬಸ್‍ನ ಮುಂದಿನ ಗಾಜು ಜಖಂ ಆಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳು ತಾತ್ಕಾಲಿಕ ಸ್ಥಗಿತ

    ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕದ ಬಸ್‍ಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ ಸೇವೆ ಬಂದ್ ಮಾಡಲಾಗಿದೆ. ನಿನ್ನೆ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿದ್ದರು. ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳ ಫೋನ್ ಕಾಲ್ ಹಿಂದೆ ಬಿದ್ದ ಕೇಂದ್ರ ಚುನಾವಣಾ ಆಯೋಗ

    Live Tv
    [brid partner=56869869 player=32851 video=960834 autoplay=true]

  • ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ – ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ 6 ಸಾವು

    ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ – ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ 6 ಸಾವು

    ಶಿಲ್ಲಾಂಗ್/ದಿಸ್ಪುರ್: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದಿದ್ದಾರೆ. ಘಟನೆಯ ಬಳಿಕ ಗಡಿ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.

    ಘರ್ಷಣೆಯ ಬಳಿಕ ಮೇಘಾಲಯ ಸರ್ಕಾರ 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.

    ವರದಿಗಳ ಪ್ರಕಾರ, ಮೇಘಾಲಯದ ಗಡಿಯಾದ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಮೊಯಿಕ್ರಾಂಗ್‌ನಲ್ಲಿ ಅಸ್ಸಾಂ ಅರಣ್ಯ ಇಲಾಖೆಯ ತಂಡ ಮುಂಜಾನೆ 3 ಗಂಟೆ ವೇಳೆಗೆ ಟ್ರಕ್ ಒಂದನ್ನು ತಡೆದಿದೆ. ಟ್ರಕ್‌ನಲ್ಲಿದ್ದವರು ಈ ವೇಳೆ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರನ್ನು ತಡೆ ಹಿಡಿಯಲು ಅರಣ್ಯ ಸಿಬ್ಬಂದಿ ಗುಂಡು ಹಾರಿಸಿ ಟ್ರಕ್‌ನ ಟೈರ್ ಪಂಕ್ಚರ್ ಮಾಡಿದ್ದಾರೆ.

    ಬಳಿಕ ಅರಣ್ಯ ಸಿಬ್ಬಂದಿ ಟ್ರಕ್‌ನಲ್ಲಿದ್ದ ಮೂವರನ್ನು ಬಂಧಿಸಿ, ಜಿರಿಕಿಂಡಿಂಗ್‌ಗೆ ಕರೆತಂದಿದ್ದಾರೆ. ಘಟನೆಯ ಬಗ್ಗೆ ಅರಣ್ಯ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಹೆಚ್ಚಿನ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

    ಇದೆಲ್ಲದರ ಬಳಿಕ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಮೇಘಾಲಯದಿಂದ ಅಪಾರ ಸಂಖ್ಯೆಯ ಜನರು ಕಠಾರಿ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘಟನಾ ಸ್ಥಳಕ್ಕೆ ಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರ ತಂಡ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

    ಮೃತ ಅರಣ್ಯ ಸಿಬ್ಬಂದಿಯನ್ನು ಬಿದ್ಯಾ ಸಿಂಗ್ ಲೆಹ್ತ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಅರಣ್ಯ ಸಿಬ್ಬಂದಿ ಅಭಿಮನ್ಯು ಗಾಯಗೊಂಡಿದ್ದಾರೆ. ಪರಿಸ್ಥಿತಿ ಸದ್ಯ ನಿಯಂತ್ರಣಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಕನ್ನಡ ರಾಜ್ಯೋತ್ಸವ – ಗಡಿಯಲ್ಲಿ ನಾಡವಿರೋಧಿ ಚಟುವಟಿಕೆ ಪ್ರಾರಂಭಿಸಿದ ಶಿವಸೇನೆ ಕಾರ್ಯಕರ್ತರು

    ಕನ್ನಡ ರಾಜ್ಯೋತ್ಸವ – ಗಡಿಯಲ್ಲಿ ನಾಡವಿರೋಧಿ ಚಟುವಟಿಕೆ ಪ್ರಾರಂಭಿಸಿದ ಶಿವಸೇನೆ ಕಾರ್ಯಕರ್ತರು

    ಚಿಕ್ಕೋಡಿ: ಕರ್ನಾಟಕದಲ್ಲಿ (Karnataka) ಕನ್ನಡದ ಹಬ್ಬ, ಕನ್ನಡ ನಾಡು ನುಡಿಯ, ಕನ್ನಡ ರಾಜ್ಯೋತ್ಸವ (Kannada Rajyotsava) ಸಂಭ್ರಮದ ತಯಾರಿ ನಡೆಯುತ್ತಿದ್ದರೆ, ಅತ್ತ ಗಡಿ ಪ್ರದೇಶದಲ್ಲಿ ಶಿವಸೇನೆ (Shiv Sena) ಮತ್ತು ಎಂಇಎಸ್ (MES) ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ (Belagavi) ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ ಮತ್ತು ನಾಡದ್ರೋಹಿ ಎಂಇಎಸ್ ಎಂದಿನಂತೆ ತನ್ನ ಖಯಾಲಿ ಮುಂದುವರಿಸಿದೆ.

    ಪ್ರತಿ ವರ್ಷದ ಪದ್ಧತಿಯಂತೆ ಈ ಬಾರಿಯೂ ನಮಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಪ್ರವೇಶಕ್ಕೆ ಶಿವಸೇನೆ ಮುಂದಾಗಿತ್ತು. ಕೊಲ್ಹಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ರಾಜ್ಯ ಪ್ರವೇಶಕ್ಕೆ ಮುಂದಾದ ಶಿವಸೇನೆಯ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಕುಗನೊಳ್ಳಿ ಚೆಕ್‌ಪೋಸ್ಟ್ ಬಳಿ ತಡೆದಿದ್ದಾರೆ. ಪೊಲೀಸರು ತಡೆದಿದ್ದರಿಂದ ಅವರ ವಿರುದ್ಧವೇ ನಡು ರಸ್ತೆಯಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಕ್ಕದ ನದಿಗೆ ಇಳಿದು ಗಡಿ ಪ್ರವೇಶದ ನಾಟಕ ನಡೆಸಿ, ರಸ್ತೆ ಮಧ್ಯೆಯೇ ಕುಳಿತು ತಮ್ಮ ದಾಂಧಲೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಬಂಧಿತ ಮೂವರು ಆರೋಪಿಗಳು ಮತ್ತೆ ಪೊಲೀಸರ ವಶಕ್ಕೆ

    ರಸ್ತೆಯ ಮಧ್ಯೆ ಕುಳಿತು ಪ್ರತಿಭಟನೆ ಶುರು ಮಾಡಿದ ಶಿವಸೇನೆ ಪುಂಡರು ಬಿಸಿಲಿಗೆ ಬಳಲಿ, ಬೆಂಡಾಗಿ ಕೊನೆಗೆ ಪೊಲೀಸರ ಬಳಿ ಒಂದು ನಿವೇದನೆಯನ್ನು ಇಟ್ಟಿದ್ದಾರೆ. ನಾವು ರಾಜ್ಯ ಪ್ರವೇಶ ಮಾಡುವುದಿಲ್ಲ. ನಾವು ತಂದ ವಿಜಯ ಜ್ಯೋತಿಯನ್ನಾದರೂ ಬೆಳಗಾವಿಗೆ ತಲುಪಿಸಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಇದಕ್ಕೂ ಸಹ ಜಪ್ಪಯ್ಯ ಎನ್ನದ ಕರ್ನಾಟಕ ಪೊಲೀಸರು ಯಾವುದೇ ಕಾರಣಕ್ಕೂ ಯಾವುದಕ್ಕೂ ಅವಕಾಶ ನೀಡುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ. ಹೀಗಾಗಿ ಬಂದ ದಾರಿಗೆ ಸುಂಕ ಇಲ್ಲ ಎಂದು ತಮ್ಮಷ್ಟಕ್ಕೆ ತಾವೇ ಶಿವಸೇನೆಯ ಪುಂಡರು ಮತ್ತೆ ಮಹಾರಾಷ್ಟ್ರದ ಹಾದಿ ತುಳಿದಿದ್ದಾರೆ. ಇದನ್ನೂ ಓದಿ: ಪೊಲೀಸ್ ಹುದ್ದೆಗೆ 70-80 ಲಕ್ಷ ಹಣ – ಹೇಳಿಕೆ ನನ್ನದಲ್ಲವೆಂದು ಉಲ್ಟಾ ಹೊಡೆದ MTB

    Live Tv
    [brid partner=56869869 player=32851 video=960834 autoplay=true]

  • ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ

    ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ

    ಚಂಡೀಗಢ: ಪಂಜಾಬ್‌ನ (Punjab) ಭಾರತ – ಪಾಕಿಸ್ತಾನ (India – Pakistan) ಗಡಿಯ (Border) ಭಾಗದಲ್ಲಿ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಸುಮಾರು 12 ಕೆ.ಜಿ ಸರಕನ್ನು ಹೊತ್ತಿದ್ದ ಡ್ರೋನ್ (Drone) ಒಂದನ್ನು ಭದ್ರತಾ ಪಡೆಗಳು (Security Force) ಭಾನುವಾರ ರಾತ್ರಿ ಹೊಡೆದುರುಳಿಸಿದ್ದಾರೆ.

    ಅಮೃತಸರ ಸೆಕ್ಟರ್‌ನ ರಾನಿಯಾ ಗಡಿ ಪೋಸ್ಟ್ ಬಳಿ ರಾತ್ರಿ 9:15ರ ಸುಮಾರಿಗೆ ಭದ್ರತಾ ಪಡೆಗಳು ಕ್ವಾಡ್ ಕಾಪ್ಟರ್ ಸ್ಪೋರ್ಟಿಂಗ್ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾರಾಣಸಿಯಲ್ಲಿ ಗಂಗಾರತಿ ಮಾಡಿದ ‘ಬನಾರಸ್’ ಹೀರೋ ಝೈದ್ ಖಾನ್

    ಡ್ರೋನ್‌ನಲ್ಲಿ ಲೋಡ್ ಮಾಡಲಾಗಿದ್ದ ಹಾಗೂ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸರಕನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡ್ರೋನ್‌ನಲ್ಲಿ ಯಾವ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂಬುದು ಸ್ಪಷ್ಟವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಗಡಿ ಭದ್ರತಾ ಪಡೆ (BSF) ತಿಳಿಸಿದ್ದಾರೆ. ಇದನ್ನೂ ಓದಿ: ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಇದು ಕಳೆದ 3 ದಿನಗಳಲ್ಲಿ ನಡೆದ 2ನೇ ಘಟನೆಯಾಗಿದೆ. ಅಕ್ಟೋಬರ್ 13-14ರ ಮಧ್ಯರಾತ್ರಿ ಪಂಜಾಬ್‌ನ ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಡ್ರೋನ್ ಹಾರಾಡಿದ್ದು, ಅದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಹತ್ಯೆಗೆ ಪಾಕ್‌ನಿಂದ ಅಕ್ರಮವಾಗಿ ಗಡಿ ದಾಟಿ ಬಂದಿದ್ದ ವ್ಯಕ್ತಿ – ಆತನ ಬಳಿ ಇತ್ತು 11 ಇಂಚಿನ ಚಾಕು

    ನೂಪುರ್ ಹತ್ಯೆಗೆ ಪಾಕ್‌ನಿಂದ ಅಕ್ರಮವಾಗಿ ಗಡಿ ದಾಟಿ ಬಂದಿದ್ದ ವ್ಯಕ್ತಿ – ಆತನ ಬಳಿ ಇತ್ತು 11 ಇಂಚಿನ ಚಾಕು

    ನವದೆಹಲಿ: ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಹತ್ಯೆ ನಡೆಸಲು ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಪ್ರಜೆಯನ್ನು ರಾಜಸ್ಥಾನದ ಶ್ರೀ ಗಂಗಾ ನಗರ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

    ಜುಲೈ 16ರಂದು ರಾತ್ರಿ 11 ಗಂಟೆಯ ವೇಳೆಗೆ ಗಡಿ ಬಳಿ ವ್ಯಕ್ತಿಯೊಬ್ಬನನ್ನು ಭದ್ರತಾ ಪಡೆ ಬಂಧಿಸಿತ್ತು. ಅನುಮಾನಾಸ್ಪದವಾಗಿ ಪತ್ತೆಯಾದ ವ್ಯಕ್ತಿಯನ್ನು ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದು, ತಪಾಸಣೆ ನಡೆಸಿದ್ದರು. ವ್ಯಕ್ತಿಯ ಬ್ಯಾಗ್‌ನಲ್ಲಿ 11 ಇಂಚು ಉದ್ದದ ಚಾಕು, ಧಾರ್ಮಿಕ ಪುಸ್ತಕಗಳು, ಬಟ್ಟೆ, ಆಹಾರ ಹಾಗೂ ಮರಳು ಪತ್ತೆಯಾಗಿತ್ತು. ಆತನನ್ನು ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಂಡಿ ಬಹೌದ್ದೀನ್ ನಗರದ ರಿಜ್ವಾನ್ ಅಶ್ರಫ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಬಿಗ್ ರಿಲೀಫ್- ಆಗಸ್ಟ್ 10ರವರೆಗೂ ಬಂಧಿಸದಂತೆ ಸುಪ್ರೀಂ ಸೂಚನೆ

    ಪ್ರಾಥಮಿಕ ತನಿಖೆಯಲ್ಲಿ ಆತ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ಅವರನ್ನು ಕೊಲ್ಲಲು ಗಡಿ ದಾಟಿ ಬಂದಿರುವುದಾಗಿ ತಿಳಿಸಿದ್ದಾನೆ. ನೂಪುರ್ ಅವರನ್ನು ಕೊಲ್ಲುವುದಕ್ಕೂ ಮೊದಲು ಆತ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಲು ಯೋಜಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಅಮಿತ್ ಶಾ ಫೋಟೋ ದುರ್ಬಳಕೆ ಮಾಡಿದ್ದ ಬಾಲಿವುಡ್ ನಿರ್ದೇಶಕ ಅವಿನಾಶ್ ಅರೆಸ್ಟ್

    ಹೆಚ್ಚಿನ ತನಿಖೆಗಾಗಿ ಆತನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆತನ ಬಗ್ಗೆ ಸಂಬಂಧಪಟ್ಟ ಗುಪ್ತಚರ ಸಂಸ್ಥೆಗಳಿಗೂ ತಿಳಿಸಿದ್ದೇವೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಬಂಧಿತ ಪಾಕಿಸ್ತಾನಿ ವ್ಯಕ್ತಿಯನ್ನು ಇಂಟಲಿಜೆನ್ಸ್ ಬ್ಯೂರೋ(ಐಬಿ) ಹಾಗೂ ಇತರ ಗುಪ್ತಚರ ಸಂಸ್ಥೆಗಳ ಜಂಟಿ ತಂಡ ವಿಚಾರಣೆ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]