Tag: borewell pit

  • ಕೊಪ್ಪಳ: 5 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೊಳವೆ ಬಾವಿಗೆ ಬಿದ್ದಿದ್ದ ಕುರಿಮರಿಯ ರಕ್ಷಣೆ

    ಕೊಪ್ಪಳ: 5 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೊಳವೆ ಬಾವಿಗೆ ಬಿದ್ದಿದ್ದ ಕುರಿಮರಿಯ ರಕ್ಷಣೆ

    ಕೊಪ್ಪಳ: ಕೊಳವೆ ಬಾವಿಗೆ ಬಿದ್ದ ಕುರಿ ಮರಿಯನ್ನು ಜನರು ರಕ್ಷಣೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಜಿಲ್ಲೆಯ ಗಂಗಾವತಿ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಕುರುಮರಿಯೊಂದು ಬಿದ್ದಿತ್ತು. ವೆಂಕಟೇಶ ಬುಕ್ಕ ಎಂಬವರು ತಮ್ಮ ಹೊಲದಲ್ಲಿ ಎರಡು ತಿಂಗಳ ಹಿಂದೆ ಕೊಳವೆ ಬಾವಿ ಕೊರೆಸಿದ್ರು. ಆದ್ರೆ ನೀರು ಬಾರದ ಹಿನ್ನಲೆಯಲ್ಲಿ ಕೊಳವೆ ಬಾವಿ ಮುಚ್ಚದೆ ಹಾಗೆ ಬಿಟ್ಟಿದ್ದರು. ದುರ್ಗಪ್ಪ ಎಂಬವರು ತಮ್ಮ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕೊಳವೆ ಬಾವಿ ಪಕ್ಕದಲ್ಲೇ ಇದ್ದ ನೀರನ್ನು ಕುಡಿಯಲು ಕುರಿಗಳು ಹೋಗಿದ್ದ ಸಂದರ್ಭದಲ್ಲಿ ಕೊಳವೆ ಬಾವಿಗೆ ಒಂದು ವರ್ಷದ ಕುರಿಮರಿ ಬಿದ್ದಿತ್ತು.

    ಬೆಳಗ್ಗೆ 11 ಗಂಟೆಗೆ ಕುರಿಮರಿ ಕೊಳವೆ ಬಾವಿಗೆ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮತ್ತು ಹೊಲದ ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಕಾರಟಗಿ ಪೊಲೀಸರು ಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಗ್ರಾಮಸ್ಥರು ಕಬ್ಬಿಣದ ಕೊಂಡಿ ಹಾಕಿ ಹಗ್ಗದ ಸಹಾಯದಿಂದ ಕುರಿಮರಿಯನ್ನು ಕೊಳವೆ ಬಾವಿಯಿಂದ ಮೇಲೆತ್ತಿದ್ದಾರೆ.

    ಸತತ ಐದು ಗಂಟೆಗಳ ಕಾಲ ಗ್ರಾಮಸ್ಥರು ಪರಿಶ್ರಮಪಟ್ಟು ಕುರಿಮರಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಕುರಿಮರಿಯನ್ನು ಎತ್ತಲು ಕಬ್ಬಿಣದ ಕೊಂಡಿಗಳನ್ನು ಹಾಕಿದ್ದರಿಂದ ಗಾಯಗೊಂಡಿದೆ.

    https://www.youtube.com/watch?v=udR2aTzGwA0

     

  • ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತೆರೆದ ಕೊಳುವೆ ಬಾವಿಯನ್ನು ಮುಚ್ಚಿಸದೆ 6 ವರ್ಷದ ಕಂದಮ್ಮ ಕಾವೇರಿ ಸಾವಿಗೆ ಕಾರಣವಾಗಿದ್ದ ಜಮೀನಿನ ಮಾಲೀಕನ ಮಗನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆಯಲ್ಲಿ ತಲೆ ಮರಿಸಿಕೊಂಡಿದ್ದ ಶಂಕರ ಹಿಪ್ಪರಗಿಯ ಮಗ ಮುತ್ತಪ್ಪ ಶಂಕರ ಹಿಪ್ಪರಗಿಯನ್ನು ಐಗಳಿ ಪೆÇಲೀಸರು ಬಂಧಿಸಿದ್ದಾರೆ. ಇನ್ನು ಈತನ ತಂದೆ ಶಂಕರ ಹಿಪ್ಪರಗಿ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ತನ್ನ ಜಮೀನಿನ ಕೊಳವೆ ಬಾವಿಯಲ್ಲಿ ಕಾವೇರಿ ಬಿದ್ದ ಸುದ್ದಿ ತಿಳಿದ ತಕ್ಷಣವೇ ಶಂಕರ ಹಿಪ್ಪರಗಿ ಹಾಗೂ ಕುಟುಂಬ ಸದಸ್ಯರು ಪರಾರಿಯಾಗಿದ್ದರು.

    ಸತತ 53 ಗಂಟೆಗಳ ಕಾಲ ಕಾವೇರಿಯ ರಕ್ಷಣೆಗಾಗಿ ಎನ್‍ಆರ್‍ಡಿಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಚರಣೆ ಫಲಿಸದ ಪರಿಣಾಮ ಕಾವೇರಿ ಶವವನ್ನು ಹೊರ ತೆಗೆಯಲಾಗಿತ್ತು. ಕಾವೇರಿಗಾಗಿ ರಾಜ್ಯದ ಜನತೆ ನಡೆಸಿದ ಪ್ರಾರ್ಥನೆ ಈಡೇರಿರಲಿಲ್ಲ.