Tag: Borewell Tragedy

  • ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನ ರಕ್ಷಣೆ- ಆಸ್ಪತ್ರೆಯಲ್ಲಿ ಸಾವು

    ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನ ರಕ್ಷಣೆ- ಆಸ್ಪತ್ರೆಯಲ್ಲಿ ಸಾವು

    ಭೋಪಾಲ್: 100 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸಿದೆ. 5 ವರ್ಷದ ಬಾಲಕ ಸತ್ಯಂ ಗುರುವಾರ ಆಟ ಆಡುವಾಗ ಆಯತಪ್ಪಿ 100 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ. ಗುರುವಾರ ರಾತ್ರಿ ಗಂಭೀರವಾಗಿ ಗಾಯಗೊಂಡಿದ್ದ ಸತ್ಯಂನನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದರು. ರಕ್ಷಣೆ ಮಾಡಿದ ಬಳಿಕ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಕೊಳವೆಬಾವಿ ದುರಂತ: ಮಣ್ಣಲ್ಲಿ ಮಣ್ಣಾದ 6 ವರ್ಷದ ಕಂದಮ್ಮ ಕಾವೇರಿ

    ಚಿಕಿತ್ಸೆ ಫಲಕಾರಿಯಾಗದೇ ಸತ್ಯಂ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾನೆ. ಕಳೆದ ಫೆಬ್ರವರಿ ತಿಂಗಳಿನಲ್ಲಿಯೂ 1 ವರ್ಷದ ಮಗುವೊಂದು ಮಧ್ಯಪ್ರದೇಶದ ಬೆಹ್ರಿ ಖುದ್ ಗ್ರಾಮದಲ್ಲಿರುವ 50 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದಿತ್ತು. 17 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಲಾಗಿತ್ತು.

    ಏಪ್ರಿಲ್ 22ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತಾಯಿಯೊಂದಿಗೆ ಕಟ್ಟಿಗೆ ಆರಿಸಲು ಹೋಗಿದ್ದಾಗ 6 ವರ್ಷದ ಬಾಲಕಿ ಕಾವೇರಿ ತೆರೆದ ಕೊಳವೆಬಾವಿಗೆ ಬಿದ್ದಿದ್ದಳು. ಸತತ 58 ಗಂಟೆಗಳ ಕಾರ್ಯಚರಣೆ ಬಳಿಕ ಕಾವೇರಿಯ ಮೃತದೇಹವನ್ನು ಹೊರ ತಗೆಯಲಾಗಿತ್ತು.

     

     

  • ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತೆರೆದ ಕೊಳುವೆ ಬಾವಿಯನ್ನು ಮುಚ್ಚಿಸದೆ 6 ವರ್ಷದ ಕಂದಮ್ಮ ಕಾವೇರಿ ಸಾವಿಗೆ ಕಾರಣವಾಗಿದ್ದ ಜಮೀನಿನ ಮಾಲೀಕನ ಮಗನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆಯಲ್ಲಿ ತಲೆ ಮರಿಸಿಕೊಂಡಿದ್ದ ಶಂಕರ ಹಿಪ್ಪರಗಿಯ ಮಗ ಮುತ್ತಪ್ಪ ಶಂಕರ ಹಿಪ್ಪರಗಿಯನ್ನು ಐಗಳಿ ಪೆÇಲೀಸರು ಬಂಧಿಸಿದ್ದಾರೆ. ಇನ್ನು ಈತನ ತಂದೆ ಶಂಕರ ಹಿಪ್ಪರಗಿ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ತನ್ನ ಜಮೀನಿನ ಕೊಳವೆ ಬಾವಿಯಲ್ಲಿ ಕಾವೇರಿ ಬಿದ್ದ ಸುದ್ದಿ ತಿಳಿದ ತಕ್ಷಣವೇ ಶಂಕರ ಹಿಪ್ಪರಗಿ ಹಾಗೂ ಕುಟುಂಬ ಸದಸ್ಯರು ಪರಾರಿಯಾಗಿದ್ದರು.

    ಸತತ 53 ಗಂಟೆಗಳ ಕಾಲ ಕಾವೇರಿಯ ರಕ್ಷಣೆಗಾಗಿ ಎನ್‍ಆರ್‍ಡಿಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಚರಣೆ ಫಲಿಸದ ಪರಿಣಾಮ ಕಾವೇರಿ ಶವವನ್ನು ಹೊರ ತೆಗೆಯಲಾಗಿತ್ತು. ಕಾವೇರಿಗಾಗಿ ರಾಜ್ಯದ ಜನತೆ ನಡೆಸಿದ ಪ್ರಾರ್ಥನೆ ಈಡೇರಿರಲಿಲ್ಲ.

  • ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ.

    ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು. ಇನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಕ್ಕೆ ಶವ ಹಸ್ತಾಂತರಿಸಲಾಯ್ತು. ಈ ವೇಳೆ ಹೆತ್ತವ್ವ ಸವಿತಾ ಮತ್ತು ತಂದೆ ಅಜಿತ್ ಗೋಳಾಟ ಎಂಥವರ ಕರಳು ಕಿವುಚುವಂತಿತ್ತು. ಸಂಬಂಧಿಕರಂತೂ ಎದೆ ಎದೆ ಹೊಡೆದುಕೊಂಡ್ರು. ಗ್ರಾಮಸ್ಥರೆಲ್ಲರೂ ಗೋಳಾಡಿದರು. ಬಳಿಕ ಝುಂಜರವಾಡ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಯ್ತು.

    ಏಪ್ರಿಲ್ 22ರಂದು ಅಮ್ಮನ ಜೊತೆ ಕಟ್ಟಿಗೆ ಆರಿಸಲು ಹೋಗಿದ್ದ ಕಾವೇರಿ ಸಂಜೆ 5 ಗಂಟೆ ಸುಮಾರಿಗೆ ಶಂಕರಪ್ಪ ಹಿಪ್ಪರಗಿ ಅವ್ರ ತೋಟದ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. ಸುದ್ದಿ ತಿಳಿದು ರಾತ್ರಿ 8 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದ್ದ ರಕ್ಷಣಾ ಪಡೆಗಳು ಸತತ 54 ಗಂಟೆ ಕಾರ್ಯಾಚರಣೆ ಬಳಿಕ ಸೋಮವಾರ ರಾತ್ರಿ 11.33ರ ಸುಮಾರಿಗೆ ಕಾವೇರಿಯ ಮೃತದೇಹವನ್ನ ಹೊರ ತೆಗೆದರು.

    28 ಅಡಿಯಲ್ಲಿ ಸಿಲುಕಿದ್ದ ಕಾವೇರಿಯನ್ನ ಸುರಂಗ ಕೊರೆದು ನಿನ್ನೆ ರಾತ್ರಿ ರಕ್ಷಣಾ ಸಿಬ್ಬಂದಿ ಹೊರ ತೆಗೆದ್ರು. ಆದಾಗಲೇ ಸಾವನ್ನಪ್ಪಿದ್ದ ಕಾವೇರಿ ಬಾಯಲ್ಲಿ ರಕ್ತ ಬಂದಿತ್ತು. ಲವಲವಿಕೆಯಿಂದ ಚೂಟಿಯಾಗಿದ್ದ ಮಗಳನ್ನ ಶವವಾಗಿ ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

  • ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    – ಭದ್ರತೆಗೆ ಬಂದಿದೆ ಸೇನೆ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾರ ಗ್ರಾಮದಲ್ಲಿ ಕೊಳವೆ ಬಾವಿಯೊಳಗೆ 6 ವರ್ಷದ ಬಾಲಕಿ ಕಾವೇರಿ ಬಿದ್ದ ಪ್ರಕರಣದ ಕಾರ್ಯಾಚರಣೆ ಚುರುಕು ಪಡೆದಿದೆ. 15 ಗಂಟೆಗಳಿಂದಲೂ ಕಾರ್ಯಾಚರಣೆ ನಡೀತಿದೆ. ಕೊಳವೆ ಬಾವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಪುಣೆ ಎನ್‍ಡಿಆರ್‍ಎಫ್ ತಂಡ ಒಂದ್ಕಡೆ ಆ್ಯಂಕರ್ (ಲಂಗರು) ಬಳಸಿಯೂ ಮತ್ತೊಂದು ಕಡೆ ಹಿಟಾಚಿ, ಬಂಡೆ ಒಡೆಯೋ ಯಂತ್ರಗಳಿಂದ ಮಣ್ಣನ್ನು ಅಗೆಯಲಾಗ್ತಿದೆ. ಈಗಾಗಲೇ 13 ಅಡಿ ಅಗೆಯಲಾಗಿದೆ.

    ಶನಿವಾರ ಸಂಜೆ 5 ಗಂಟೆ ಆಸುಪಾಸಿನಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ ಕಾವೇರಿಯನ್ನ ಇನ್ನೂ ಮೇಲೆತ್ತಲು ಆಗಿಲ್ಲ. ರಾತ್ರಿಯೆಲ್ಲಾ ನಡೆದ ಕಾರ್ಯಾಚರಣೆ ಇದೀಗ 15 ಗಂಟೆಯೇ ಮುಗಿದಿದೆ. ಆದಾಗ್ಯೂ ಕಾವೇರಿ ಇನ್ನೂ ಮೇಲೆ ಬಂದಿಲ್ಲ. ಸುಮಾರು 30 ಅಡಿ ಆಳದಲ್ಲಿ ಸಿಕ್ಕಿರುವ ಕಾವೇರಿಯ ಚಲನವಲನ ವೀಕ್ಷಿಸಲು 18 ಅಡಿಯವರೆಗೆ ವೆಬ್ ಕ್ಯಾಮೆರಾ ಬಿಡಲಾಗಿತ್ತು. ಆದ್ರೆ ಮಧ್ಯದಲ್ಲಿ ಮಣ್ಣು ಆವರಿಸಿದ ಕಾರಣ ಬಾಲಕಿಯ ಸುಳಿವು ಸಿಕ್ಕಿಲ್ಲ.

    ಬಾಲಕಿ ಕಾವೇರಿ ರಕ್ಷಣಾ ಕಾರ್ಯದಲ್ಲಿ 9 ತಂಡಗಳು ಭಾಗಿಯಾಗಿವೆ. ಪುಣೆ, ಹೈದರಾಬಾದ್‍ನ ಎನ್‍ಡಿಆರ್‍ಎಫ್ ತಂಡಗಳು, ಬೆಳಗಾವಿಯ ಮಿಲಿಟರಿ ತುಕಡಿ, ಸಾಂಗ್ಲಿಯ ಹೆಲ್ಪ್‍ಲೈನ್ ಬಸವರಾಜ್ ಹಿರೇಮಠ್, ರಾಯಚೂರಿನ ಹಟ್ಟಿ, ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆಗಳು ಆಪರೇಷನ್ ಕಾವೇರಿಯಲ್ಲಿ ಭಾಗಿಯಾಗಿವೆ. ಇನ್ನು ಬೆಳಗಾವಿಯ ಡಿಸಿ ಜಯರಾಮ್, ಎಸ್‍ಪಿ ರವಿಕಾಂತೇಗೌಡ, ಅಥಣಿ ತಹಸೀಲ್ದಾರ್ ಉಮಾದೇವಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವಧಿ ರಾತ್ರಿಯೆಲ್ಲಾ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಗಂಟೆ ಗಂಟೆಗೂ ಎಲ್ಲರೂ ಮಾಹಿತಿ ಕೊಡ್ತಿದ್ರು.

    ಸವಿತಾ – ಅಜಿತ್ ದಂಪತಿಗೆ ಅನ್ನಪೂರ್ಣ, ಕಾವೇರಿ ಮತ್ತು ಪವನ್ ಎಂಬ ಮೂವರು ಮಕ್ಕಳಿದ್ದಾರೆ. ಶನಿವಾರ ಸಂಜೆ ಕಟ್ಟಿಗೆ ಆರಿಸಲು ತಾಯಿ ಜೊತೆ ಕಾವೇರಿ ಮತ್ತು ಪವನ್ ತೆರಳಿದ್ದರು. ಈ ವೇಳೆ ಶಂಕರಪ್ಪ ಹಿಪ್ಪರಗಿ ಅವರ ಜಮೀನಿನಲ್ಲಿ ಮೂರು ವರ್ಷಗಳ ಹಿಂದೆ ಕೊರೆದು ಫೇಲ್ ಆದ ಕಾರಣ ಹಾಗೇ ಬಿಟ್ಟಿದ್ದ ಕೊಳವೇ ಬಾವಿಗೆ ಅಚಾನಕ್ ಆಗಿ ಕಾವೇರಿ ಆಯತಪ್ಪಿ ಬಿದ್ದಿದ್ದಾರೆ. ಅಕ್ಕ ಬಾವಿಗೆ ಬಿದ್ದ ಸುದ್ದಿಯನ್ನ ಪವನ್ ತಕ್ಷಣವೇ ತಾಯಿಗೆ ತಿಳಿಸಿದ್ದಾನೆ. ಆತಂಕದಿಂದ ಓಡಿ ಬಂದ ತಾಯಿ ಸವಿತಾಗೆ ಮೊದಲಿಗೆ ಕಾವೇರಿಯ ಅಳಲು ಕೇಳಿಸಿದೆ. ಆಮೇಲೆ ಹಗ್ಗ ಬಿಟ್ಟು ರಕ್ಷಿಸಲು ಯತ್ನಿಸಿದ್ದಾರೆ. ಆದ್ರೆ ಸಾಧ್ಯವಾಗಿಲ್ಲ. ತಕ್ಷಣವೇ ಗ್ರಾಮಸ್ಥರಿಗೆ ಸುದ್ದಿ ಮುಟ್ಟಿಸಿ ಎಲ್ಲರಿಗೂ ತಿಳಿದಿದೆ. ಕೂಲಿಗೆ ಹೋಗಿದ್ದ ಪತಿ ಅಜಿತ್ ಬರುವಷ್ಟರಲ್ಲಿ ಇಡೀ ಗ್ರಾಮವೇ ಅಲ್ಲಿ ನೆರೆದಿತ್ತು. ಡಿಸಿ, ಎಸ್‍ಪಿ, ಅಗ್ನಿಶಾಮಕ ದಳವೆಲ್ಲಾ ಬಂದಿತ್ತು. ಸವಿತಾ ಅವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲದೆ, ಅನ್ನ-ಆಹಾರ ಸೇವಿಸದೆ ರಾತ್ರಿಯೆಲ್ಲಾ ಗೋಳಾಡಿ ಕಣ್ಣೀರಿಟ್ಟ ಸವಿತಾ ಅಸ್ವಸ್ಥರಾಗಿದ್ದರು.