Tag: borewell

  • ತನ್ನಿಂದ ತಾನೇ ಬೋರ್‌ವೆಲ್‌ನಿಂದ ಹೊರಬರ್ತಿದೆ ನೀರು- ಗ್ರಾಮಸ್ಥರಲ್ಲಿ ಅಚ್ಚರಿ

    ತನ್ನಿಂದ ತಾನೇ ಬೋರ್‌ವೆಲ್‌ನಿಂದ ಹೊರಬರ್ತಿದೆ ನೀರು- ಗ್ರಾಮಸ್ಥರಲ್ಲಿ ಅಚ್ಚರಿ

    ಯಾದಗಿರಿ: ರಾಜ್ಯದ ಕೆಲವು ಕಡೆ ಗಂಟೆಗಟ್ಟಲೇ ಬೋರ್‌ವೆಲ್‌ ಕೊರೆದರೂನೀರು ಬರೋದು ಡೌಟ್. ಆದರೆ ಈ ಗ್ರಾಮದ ಬೋರ್‌ವೆಲ್‌ ಒಂದರಲ್ಲಿ ಸತತ ನಾಲ್ಕು ವರ್ಷಗಳಿಂದ ದಿನದ 24 ಗಂಟೆಯೂ ತನ್ನಷ್ಟಕ್ಕೆ ತಾನೆ ನೀರು ಹೊರಬರುತ್ತಿದೆ.

    ಆಶ್ಚರ್ಯವಾದರೂ ಇದು ಸತ್ಯ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಾಡಂಗೇರಾ ಬಿ ಗ್ರಾಮದಲ್ಲಿ ಈ ಕುತೂಹಲಕಾರಿ ಬೋರ್ ವೆಲ್ ಇದೆ. ಬೇಸಿಗೆ, ಮಳೆ ಮತ್ತು ಚಳಿಗಾಲದಲ್ಲಿ ಎಗ್ಗಿಲ್ಲದೆ ತನ್ನಷ್ಟಕ್ಕೆ ತಾನೇ ಈ ಹ್ಯಾಂಡ್ ಪಂಪ್‍ನಿಂದ ನೀರು ಚಿಮ್ಮುತ್ತದೆ ಇದು ಇಲ್ಲಿನ ಗ್ರಾಮಸ್ಥರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಈ ಗ್ರಾಮದಲ್ಲಿ 9 ಬೋರ್‌ವೆಲ್‌ ಗಳು ಇವೆ. ಆದರೆ ಅವುಗಳಲ್ಲಿ ಯಾವುದರಲ್ಲಿಯೂ ಈ ರೀತಿ ನೀರು ಬರುತ್ತಿಲ್ಲ. ಆದರೆ ಈ ಕೊಳವೆ ಬಾವಿಯಲ್ಲಿ ಮಾತ್ರ ಮೂರು ಕಾಲದಲ್ಲಿಯೂ ಸತತ 24 ಗಂಟೆಗಳ ಕಾಲ ನೀರು ತನ್ನಷ್ಟಕ್ಕೆ ತಾನೇ ಬರುತ್ತಿರುವುದು ಎಲ್ಲರಿಗೂ ಅಚ್ಚರಿ ಉಂಟುಮಾಡಿದೆ.

  • 5 ವರ್ಷದಿಂದ ಬತ್ತಿದ್ದ ಕೊಳವೆಬಾವಿಯಿಂದ ಚಿಮ್ಮುತ್ತಿದೆ ನೀರು

    5 ವರ್ಷದಿಂದ ಬತ್ತಿದ್ದ ಕೊಳವೆಬಾವಿಯಿಂದ ಚಿಮ್ಮುತ್ತಿದೆ ನೀರು

    ಬಾಗಲಕೋಟೆ: ಕಳೆದ 5 ವರ್ಷದಿಂದ ನೀರು ಬತ್ತಿದ್ದ ಕೊಳವೆಬಾವಿಯಿಂದ ಇದೀಗ ಅಚ್ಚರಿ ಎನ್ನುವಂತೆ 20 ರಿಂದ 30 ಅಡಿ ಎತ್ತರಕ್ಕೆ ನೀರು ಚಿಮ್ಮುತ್ತಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ನಡೆದಿದೆ.

    ಬಾದಾಮಿ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ರೆಡ್ ಝೋನ್‍ಗೆ ಇಳಿದಿತ್ತು. ಆದರೆ ಮೂರು ಬಾರಿ ಬಂದ ಪ್ರವಾಹ ಹಾಗೂ ಅತಿಯಾದ ಮಳೆಯಿಂದಾಗಿ ಬಾದಾಮಿ ತಾಲೂಕಿನಲ್ಲಿ ಇದೀಗ ಅಂತರ್ಜಲ ಮಟ್ಟ ದಿಢೀರ್ ಹೆಚ್ಚಳವಾಗಿದೆ. ನೀಲಗುಂದ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರೈತ ದ್ಯಾವಪ್ಪ ಕಾಟನಾಯಕ ಅವರು 6 ವರ್ಷದ ಹಿಂದೆ ಸುಮಾರು 170 ಅಡಿ ಆಳದ ಕೊಳವೆಬಾವಿ ಕೊರಿಸಿದ್ದರು. ಆರಂಭದಲ್ಲಿ ನೀರು ಬಂತಾದರೂ, ಕ್ರಮೇಣ ಕೊಳವೆ ಬಾವಿಯಲ್ಲಿನ ನೀರು ಇಂಗಿತ್ತು. ಹೀಗಾಗಿ ಕೊಳವೆ ಬಾವಿಯನ್ನು ಹಾಗೆಯೇ ಬಿಡಲಾಗಿತ್ತು. ಆದರೆ ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ನೀಲಗುಂದ ಸುತ್ತಲೂ ಅಂತರ್ಜಲಮಟ್ಟ ಹೆಚ್ಚಳವಾಗಿದೆ.

    ಕಳೆದ 5 ವರ್ಷಗಳಿಂದ ನೀರಿಲ್ಲದೆ ಒಣಗಿದ್ದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿರುವುದು ಎಲ್ಲರಲ್ಲೂ ಆಶ್ಚರ್ಯ ಉಂಟುಮಾಡಿದೆ. ಹೀಗಾಗಿ ನೀರು ಚಿಮ್ಮುತ್ತಿರುವುದನ್ನು ಕಣ್ತುಂಬಿಕೊಳ್ಳಲು ಸುತ್ತಲಿನ ಹಳ್ಳಿಗಳ ಜನರು ನೀಲಗುಂದಕ್ಕೆ ಬರುತ್ತಿದ್ದಾರೆ. ಆಕಾಶದೆತ್ತರಕ್ಕೆ ಚಿಮ್ಮುತ್ತಿರುವ ನೀರು ನೋಡಿ ಖುಷಿಪಟ್ಟಿದ್ದಾರೆ. ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

  • ಕೊಳವೆಬಾವಿಯಿಂದ ಜೀವಂತವಾಗಿ ಹೊರಬಂದ ಬಳಿಕ ಸಾವನ್ನಪ್ಪಿದ 5ರ ಬಾಲಕಿ

    ಕೊಳವೆಬಾವಿಯಿಂದ ಜೀವಂತವಾಗಿ ಹೊರಬಂದ ಬಳಿಕ ಸಾವನ್ನಪ್ಪಿದ 5ರ ಬಾಲಕಿ

    ಚಂಡೀಗಢ: ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ್ದ. ಈ ಸಾವಿನ ನೋವು ಮಾಸುವ ಮುನ್ನವೇ ಹರ್ಯಾಣದಲ್ಲಿ 5 ವರ್ಷದ ಬಾಲಕಿಯೊಬ್ಬಳು ಕೊಳವೆಬಾವಿಗೆ ಬಿದ್ದ ಘಟನೆ ನಡೆದಿದೆ. ವಿಪರ್ಯಾಸವೆಂದರೆ ಎನ್‌ಡಿಆರ್‌ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಜೀವಂತವಾಗಿ ಹೊರತೆಗೆದ ಬಳಿಕ ಬಾಲಕಿ ಸಾವನ್ನಪ್ಪಿದ್ದಾಳೆ.

    ಹರ್ಯಾಣದ ಘರೌಂಡಾದ ಹರಿಸಿಂಗ್‌ಪುರ ಗ್ರಾಮದಲ್ಲಿ ಶಿವಾನಿ(5) ಕೊಳವೆಬಾವಿಗೆ ಬಿದ್ದಿದ್ದಳು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಶಿವಾನಿ 50-60 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಳು. ಆದರೆ ಪೋಷಕರು ಬಾಲಕಿ ಕಾಣೆಯಾಗಿದ್ದಾಳೆ ಎಂದು ಆಕೆಗಾಗಿ ಹುಡುಕಾಟ ನಡೆಸಿದಾಗ ಕೊಳವೆಬಾವಿಯಲ್ಲಿ ಮಗಳು ಬಿದ್ದಿರುವುದು ತಿಳಿದುಬಂದಿದೆ. ಇದನ್ನೂ ಓದಿ:ಟಿವಿ ನೋಡುವುದರಲ್ಲಿ ದಂಪತಿ ಬ್ಯುಸಿ- ಟಬ್‍ನಲ್ಲಿ ಬಿದ್ದು ಪುತ್ರಿ ಸಾವು

    ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಎನ್‌ಡಿಆರ್‌ಎಫ್ ತಂಡ ಬಾಲಕಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬಾಲಕಿ ಕೆಳಮುಖವಾಗಿ ಕೊಳವೆಬಾವಿಯಲ್ಲಿ ಬಿದ್ದಿದ್ದ ಕಾರಣ ರಕ್ಷಣಾ ಕಾರ್ಯಾಚರಣೆ ವೇಳೆ ಆಕೆಯ ಕಾಲುಗಳು ಮಾತ್ರ ಕ್ಯಾಮೆರಾದಲ್ಲಿ ಕಾಣಿಸುತ್ತಿದ್ದವು. ಇತ್ತ ಆಕೆಯ ಉಸಿರಾಟಕ್ಕಾಗಿ ಆಮ್ಲಜನಕವನ್ನು ಕೂಡ ಕೊಳವೆಬಾವಿಯಲ್ಲಿ ಒದಗಿಸಲಾಗಿತ್ತು.

    ಇಂದು ಬೆಳಗ್ಗೆ ಸತತ ಶ್ರಮದಿಂದ ಹರಸಾಹಸ ಪಟ್ಟು ಎನ್‌ಡಿಆರ್‌ಎಫ್ ತಂಡ ಬಾಲಕಿಯನ್ನು ಜೀವಂತವಾಗಿ ಹೊರತೆಗೆದಿದ್ದರು. ಆದರೆ ಕೊಳವೆಬಾವಿಯಲ್ಲಿ ಬಿದ್ದ ಪರಿಣಾಮ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಹೀಗಾಗಿ ಆಕೆಯನ್ನು ರಕ್ಷಣಾ ಪಡೆ ಆಸ್ಪತ್ರೆಗೆ ರವಾನಿಸಿದರೂ ಬಾಲಕಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಇದನ್ನೂ ಓದಿ:ಕೊನೆಗೂ ಬದುಕಿ ಬರಲಿಲ್ಲ ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ

    ಈ ಬಗ್ಗೆ ಹರ್ಯಾಣ ಸಿಎಂ ಟ್ವೀಟ್ ಮಾಡಿ ಬಾಲಕಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಘರೌಂಡಾದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 5 ವರ್ಷದ ಶಿವಾನಿ ಸಾವನ್ನಪ್ಪಿದ್ದಾಳೆ. ಆಕೆಯನ್ನು ಜಿಲ್ಲಾ ರಕ್ಷಣಾ ಪಡೆ ಹಾಗೂ ಎನ್‌ಡಿಆರ್‌ಎಫ್ ತಂಡ ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲಾಗಿತ್ತು. ಆಕೆಯನ್ನು ಆಸ್ಪತ್ರೆಗೂ ರವಾನಿಸಲಾಯಿತು. ಆದರೆ ಆಕೆಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಬಾಲಕಿಯ ಕುಟುಂಬಕ್ಕಾಗಿ ನಾನು ಪ್ರಾರ್ಥಿಸುತ್ತೇನೆ, ಅವರೊಂದಿಗೆ ನಾನಿದ್ದೇನೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಅ.25ರಂದು ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಕೊಳವೆಬಾವಿಯಲ್ಲಿ ಸುಜಿತ್(2) ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಕೊಳವೆಬಾವಿಯಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು. ನಾಲ್ಕು ದಿನಗಳ ಕಾಲ ಸುಜಿತ್‌ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವಂತವಾಗಿ ಹೊರಬರಲಿಲ್ಲ.

    ಕೊಳವೆ ಬಾವಿಯಿಂದ ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದರು. ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಯಿತು ಎಂದಿದ್ದರು.

  • ಕೊನೆಗೂ ಬದುಕಿ ಬರಲಿಲ್ಲ ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ

    ಕೊನೆಗೂ ಬದುಕಿ ಬರಲಿಲ್ಲ ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ

    ಚೆನ್ನೈ: ಬೋರ್‌ವೆಲ್‌ನಲ್ಲಿ ಬಿದ್ದು ಕಳೆದ ನಾಲ್ಕು ದಿನಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕ ಸುಜಿತ್(2) ಇನ್ನಿಲ್ಲ. ಕಾರ್ಯಾಚರಣೆ ವಿಫಲವಾಗಿದ್ದು ಬಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಬೋರ್‌ವೆಲ್‌ಗೆ ಶುಕ್ರವಾರ ಸಂಜೆ ಸುಜಿತ್ ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು. ಕಳೆದ ನಾಲ್ಕು ದಿನಗಳಿಂದ ಸುಜಿತ್ ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವ ಉಳಿಸಲು ಆಗಲಿಲ್ಲ. ಜಿಲ್ಲಾಡಳಿತ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ.

    ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಸದ್ಯಕ್ಕೆ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಗಿದೆ. ಬಾಲಕನ ಮೃತದೇಹ ಹೆರತೆಗೆಯಲಾಗಿದ್ದು, ಅದನ್ನು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

  • ತಮಿಳುನಾಡಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಪರದಾಟ

    ತಮಿಳುನಾಡಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಪರದಾಟ

    ಚೆನ್ನೈ: 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ.

    ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ.

    ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ ಕೂಡ ಘಟನಾ ಸ್ಥಳಕ್ಕೆ ಬಂದಿದ್ದು, ಬಾಲಕನಿಗೆ ಆಕ್ಸಿಜನ್ ನೆರವು ನೀಡಲಾಗುತ್ತಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.

    ಆರೋಗ್ಯ ಸಚಿವ ವಿಜಯಬಾಕರ್, ಪ್ರವಾಸೋದ್ಯಮ ಸಚಿವ ನಟರಾಜನ್ ಮುಂತಾದ ಗಣ್ಯರು ಸ್ಥಳದಲ್ಲಿದ್ದಾರೆ.

  • 6 ತಿಂಗ್ಳ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ನಲ್ಲಿ ಏಕಾಏಕಿ ಚಿಮ್ಮಿದ ನೀರು

    6 ತಿಂಗ್ಳ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ನಲ್ಲಿ ಏಕಾಏಕಿ ಚಿಮ್ಮಿದ ನೀರು

    ವಿಜಯಪುರ: ಈ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ ನಿಂದ ಇದ್ದಕ್ಕಿದ್ದಂತೆ ನೀರು ಉಕ್ಕಿ ಹರಿಯುತ್ತಿರುವ ಘಟನೆ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

    ಗಂಗನಹಳ್ಳಿಯಲ್ಲಿ ಗ್ರಾಮದ ಮಾಳಿಂಗರಾಯ ದೊಡಮನಿ ಎಂಬವರ ಜಮೀನಿನಲ್ಲಿರುವ ಬೋರ್‌ವೆಲ್‌ನಿಂದ ನೀರು ಚಿಮ್ಮುತ್ತಿದೆ. ದೊಡಮನಿ ಅವರು ತಮ್ಮ ಜಮೀನಿನಲ್ಲಿ ಆರು ತಿಂಗಳ ಹಿಂದೆ ಬೋರ್‌ವೆಲ್‌ ಕೊರೆಸಿದ್ದರು. ಆದರೆ ಆಗ ಬೋರ್‌ವೆಲ್‌ನಿಂದ ನೀರು ಬಂದಿರಲಿಲ್ಲ. ಆದರೆ ಇಂದು ಇದ್ದಕ್ಕಿದ್ದಂತೆ ತನ್ನಿಂದ ತಾನೇ ಯಾವುದೆ ಮೋಟಾರ್ ಇಲ್ಲದೆ ಬೋರ್‌ವೆಲ್‌ನಿಂದ ಆಕಾಶದೆತ್ತರಕ್ಕೆ ನೀರು ಚಿಮ್ಮುತ್ತಿದೆ.

    ಇದನ್ನು ಕಂಡ ರೈತನ ಮೊಗದಲ್ಲಿ ಸಂತಸ ಮೂಡಿದೆ. ಈ ಬಗ್ಗೆ ತಿಳಿದ ಗ್ರಾಮದ ಜನರು ಚಿಮ್ಮುತ್ತಿರುವ ನೀರನ್ನು ನೋಡಲು ಮುಗಿಬಿದ್ದಿದ್ದರು. ಜೊತೆಗೆ ಆಕಾಶದೆತ್ತರಕ್ಕೆ ಚಿಮ್ಮುತ್ತಿರುವ ನೀರಿನ ವಿಡಿಯೋವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಕೊರೆಸಲಾಗಿದ್ದ ಸಣ್ಣ ಪೈಪಿನಲ್ಲಿ ಮೊದಲು ನೀರಿನ ಶಬ್ದ ಕೇಳಿಸುತ್ತದೆ. ನಂತರ ನಿಧಾನವಾಗಿ ನೀರು ಮೇಲಕ್ಕೆ ಬಂದು ಆಕಾಶದೆತ್ತರಕ್ಕೆ ಹಾರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮೊನ್ನೆ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ಅಂತರ್ಜಲದ ಮಟ್ಟ ಹೆಚ್ಚಾಗಿರಬೇಕೆಂದು ಸ್ಥಳೀಯರು ಹೇಳುತ್ತಿದ್ದಾರೆ.

  • ಕುಡಿಯುವ ನೀರಿನ ಟ್ಯಾಂಕಿಗೆ ಕಲುಷಿತ ನೀರು ಮಿಶ್ರಣ – 10 ಜನ ಅಸ್ವಸ್ಥ

    ಕುಡಿಯುವ ನೀರಿನ ಟ್ಯಾಂಕಿಗೆ ಕಲುಷಿತ ನೀರು ಮಿಶ್ರಣ – 10 ಜನ ಅಸ್ವಸ್ಥ

    ಬೀದರ್: ಕುಡಿಯುವ ನೀರಿನ ಟ್ಯಾಂಕ್‍ಗೆ ಮಿಶ್ರಣಗೊಂಡ ಕಲುಷಿತ ನೀರನ್ನು ಕುಡಿದ 10 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ಇಂದು ನಡೆದಿದೆ.

    ಗ್ರಾಮದ ಚರಂಡಿ ನೀರು ಟ್ಯಾಂಕ್‍ಗೆ ಸಂಪರ್ಕವಿರುವ ಬೋರ್‍ವೆಲ್ ಒಳಗೆ ಮಿಶ್ರಣವಾಗಿದ್ದು, ಈ ನೀರು ಕುಡಿದ ಗ್ರಾಮದ 10ಕ್ಕೂ ಹೆಚ್ಚು ಜನ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಬ್ರಿಮ್ಸ್ ಹಾಗೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಗ್ರಾಮದ ಜನರು ಕಲುಷಿತ ನೀರು ಕುಡಿಯಲು ಗ್ರಾಮ ಪಂಚಾಯತಿ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವಾಗಿದ್ದು, ಚರಂಡಿ ನೀರು ಸೇರಿದಂತೆ ಯಾವುದನ್ನು ಸ್ವಚ್ಛ ಮಾಡದ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಮಿಶ್ರಣವಾಗಿದೆ. ಇದರಿಂದ ಜನರು ಅಸ್ವಸ್ಥಗೊಂಡದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 109 ಗಂಟೆಗಳ ಬಳಿಕ ಪಂಜಾಬ್‍ನ ಕೊಳವೆಬಾವಿಗೆ ಬಿದ್ದಿದ್ದ ಮಗುವಿನ ರಕ್ಷಣೆ- ಸಾವು

    109 ಗಂಟೆಗಳ ಬಳಿಕ ಪಂಜಾಬ್‍ನ ಕೊಳವೆಬಾವಿಗೆ ಬಿದ್ದಿದ್ದ ಮಗುವಿನ ರಕ್ಷಣೆ- ಸಾವು

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ.

    ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

    ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

    ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.

  • ಶವದಂತೆ ಮೋಟಾರ್ ಪಂಪ್ ಮಲಗಿಸಿ ಕೋಲಾರ ಜನತೆಯಿಂದ ಪ್ರತಿಭಟನೆ

    ಶವದಂತೆ ಮೋಟಾರ್ ಪಂಪ್ ಮಲಗಿಸಿ ಕೋಲಾರ ಜನತೆಯಿಂದ ಪ್ರತಿಭಟನೆ

    ಕೋಲಾರ: ನಗರಸಭೆ ಮುಂದೆ ಮೋಟಾರ್ ಪಂಪ್ ಅನ್ನು ಶವದ ಹಾಗೆ ಮಲಗಿಸಿ ಕೋಲಾರದ ಜನ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ಕೋಲಾರ ವಾರ್ಡ್ ನಂ.17 ರ ಶಹೀಂ ಷಾ ಬಡಾವಣೆಯಲ್ಲಿರುವ ಮೋಟಾರ್ ಪಂಪ್ ಹಾಳಾಗಿದ್ದು, 15 ದಿನಗಳಿಂದ ನೀರು ಬರುತ್ತಿರಲಿಲ್ಲ. ಕೆಟ್ಟು ಹೋಗಿರುವ ಪಂಪ್ ಸರಿ ಪಡಿಸುವಂತೆ ನಗರಸಭೆಗೆ ದೂರು ನೀಡಿದರು ಏನೂ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಅಲ್ಲಿನ ಜನರು ಮೋಟಾರ್ ಪಂಪ್ ಮೇಲೆ ಬಿಳಿ ಬಟ್ಟೆ ಮುಚ್ಚಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಮಾಡುವ ಮೂಲಕ ನಗರಸಭೆ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ.

    2 ಗಂಟೆಗಳ ಕಾಲ ಈ ಪ್ರತಿಭಟನೆ ನಡೆದ ಬಳಿಕ ಸ್ಥಳಕ್ಕೆ ನಗರಸಭೆ ಎಂಜಿನಿಯರ್ ಪೂಜಾರಪ್ಪ ಆಗಮಿಸಿದರು. ಈ ವೇಳೆ ಪ್ರತಿಭಟನಾ ನಿರತ ಜನ ಅವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೂಜಾರಪ್ಪ ಜನರಿಗೆ ಪಂಪ್ ಸರಿಪಡಿಸಿ ಕೊಡುವುದಾಗಿ ಭರವಸೆ ನೀಡಿದರು.

  • ಹೊಸ ಬೋರ್‌ವೆಲ್‌ ಹಾಕಿ ಗ್ರಾಮದಿಂದ ಹೊರಡಿ- ನೀರಿಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು

    ಹೊಸ ಬೋರ್‌ವೆಲ್‌ ಹಾಕಿ ಗ್ರಾಮದಿಂದ ಹೊರಡಿ- ನೀರಿಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು

    ಬೀದರ್: ಹನಿ ನೀರಿಗಾಗಿ ಎಲ್ಲೆಡೆ ಹಾಹಾಕಾರ ಎದುರಾಗಿದೆ. ಈ ನಡುವೆ ಗ್ರಾಮಕ್ಕೆ ಬೋರ್‌ವೆಲ್‌ ರೀ-ಬೋಟಿಂಗ್ ಮಾಡಲು ಬಂದು ನೀರು ಸಿಗದೇ ವಿಫಲವಾದ ಬೋರ್‌ವೆಲ್‌ ಗಾಡಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಬೋರ್ ರೀ-ಬೋಟಿಂಗ್ ಗೆ ಚಟ್ನಹಳ್ಳಿ ಗ್ರಾಮಕ್ಕೆ ಬೋರ್ ವೇಲ್ ಗಾಡಿಯೊಂದು ಬಂದಿತ್ತು. ಆದರೆ ರೀ-ಬೋಟಿಂಗ್ ಮಾಡಿದರು ಬೋರ್ ನಲ್ಲಿ ಹನಿ ನೀರು ಕೂಡ ಸಿಗಲಿಲ್ಲ. ಆದ್ದರಿಂದ ಬಂದ ಕೆಲಸ ವಿಫಲವಾದರಿಂದ ಬೋರ್‌ವೆಲ್‌ ಗಾಡಿ ವಾಪಾಸ್ ಹೊರಟಿತ್ತು. ಆದರೆ ಈ ವೇಳೆ ಏಕಾಏಕಿ ಗ್ರಾಮಸ್ಥರು ಗಾಡಿಯನ್ನು ಮುತ್ತಿಗೆ ಹಾಕಿ ಹೊಸ ಬೋರ್‌ವೆಲ್‌ ಕೊರೆಸಿ, ಬಳಿಕ ಗ್ರಾಮದಿಂದ ಹೋಗಿ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

    ನೀರಿನ ಸಮಸ್ಯೆಯಿಂದ ಕೆಂಗೆಟ್ಟಿದ್ದ ಗ್ರಾಮಸ್ಥರು ಈ ರೀತಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಒಂದೇ ಬೋರ್‌ವೆಲ್‌ ಇದ್ದ ಕಾರಣ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಇತ್ತ ಜಿಲ್ಲಾಡಳಿತ ವತಿಯಿಂದ ಅಧಿಕಾರಿಗಳು ಬೋರ್‌ವೆಲ್‌ ರೀ ಬೋಟಿಂಗ್ ಕಳಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಹೊಸ ಬೋರ್‌ವೆಲ್‌ ಕೊರೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.