Tag: borewell

  • ಪಕ್ಕದಲ್ಲೇ ನದಿ ಹರಿದ್ರೂ ಹನಿ ನೀರಿಲ್ಲ- ಬೋರ್‍ವೆಲ್‍ಗಳಿಂದ ಸ್ಟೀಲ್ ಕಂಪೆನಿಗಳಿಗೆ ಅಕ್ರಮ ನೀರು

    ಪಕ್ಕದಲ್ಲೇ ನದಿ ಹರಿದ್ರೂ ಹನಿ ನೀರಿಲ್ಲ- ಬೋರ್‍ವೆಲ್‍ಗಳಿಂದ ಸ್ಟೀಲ್ ಕಂಪೆನಿಗಳಿಗೆ ಅಕ್ರಮ ನೀರು

    ಕೊಪ್ಪಳ: ಕಾರ್ಖಾನೆಯೊಂದು ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಬೋರ್‍ವೆಲ್ ಮೂಲಕ ಅನಧಿಕೃತ ನೀರು ಕದಿಯುತ್ತಿರೋ ಸ್ಥಳಕ್ಕೆ ರೈತರು ನುಗ್ಗಿ ಕಾರ್ಖಾನೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾಮದ ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಬೋರವೆಲ್ ಕೊರೆಯಿಸಿ ಕಳೆದ ನಾಲ್ಕೈದು ತಿಂಗಳಿಂದ ಕಲ್ಯಾಣಿ ಕಾರ್ಖಾನೆಯವರು ಅಂತರ್ಜಲಕ್ಕೂ ಕನ್ನಾ ಹಾಕಿ ನೀರು ಕದಿಯುತ್ತಿದ್ದಾರೆ. ನಾಲ್ಕೈದು ಬೋರ್‍ವೆಲ್ ಗಳಿಗೆ ಡೀಸೆಲ್ ಮೋಟರ್ ಅಳವಡಿಸಿ ನಿರಂತರವಾಗಿ ಟ್ಯಾಂಕರ್ ಮೂಲಕ ನೀರು ಕದಿಯುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇದ್ರಿಂದ ರೋಸಿಹೋದ ರೈತರು ಡಿಸೇಲ್ ಪಂಪಸೆಟ್ ಮೂಲಕ ನೀರು ಕದಿಯುತ್ತಿರೋದನ್ನ ನಿಲ್ಲಿಸುವಂತೆ ಕಾರ್ಖಾನೆಯವರಿಗೆ ತಾಕೀತು ಮಾಡಿದ್ದಾರೆ.

    ಇನ್ನು ಈ ರೀತಿ ಕಲ್ಯಾಣಿ ಸ್ಟೀಲ್ ಕಾರ್ಖಾನೆಯವರು ನಿರಂತರವಾಗಿ ನೀರು ಕದಿಯುತ್ತಿರುವುದರಿಂದ ಸುತ್ತಮುತ್ತಲು ರೈತರ ಜಮೀನಿನಲ್ಲಿ ಇರುವ ಬೋರ್‍ವೆಲ್ ನೀರು ಕಡಿಮೆ ಆಗಿ ಬೆಳೆಗೆ ನೀರು ಹಾಯಿಸಲು ಪರದಾಡ್ತಿದ್ದಾರೆ. ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಖಾನೆಯವರು ನೀರು ಕದಿಯೋದನ್ನ ತಡೀಬೇಕು. ಜನಜಾನುವಾರುಗಳಿಗೆ ಕುಡಿಯೋಕೆ ನೀರಿಲ್ಲ. ಇದ್ರ ಮಧ್ಯೆ ಕಾರ್ಖಾನೆಯವರು ನೀರು ಕದಿಯುತ್ತಿರೋದನ್ನ ಕಂಡು ಅಧಿಕಾರಿಗಳು ಕಣ್ಮುಚ್ಚಿ ಕುಳ್ತಿದ್ದಾರೆ ಅಂತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪತ್ನಿ ಜೊತೆ ವಾಯುವಿಹಾರಕ್ಕೆ ತೆರಳಿದ ಪತಿ ಅಪಘಾತಕ್ಕೆ ಬಲಿ: ಮುಗಿಲು ಮುಟ್ಟಿದ ಪತ್ನಿಯ ಆಕ್ರಂದನ

    ಪತ್ನಿ ಜೊತೆ ವಾಯುವಿಹಾರಕ್ಕೆ ತೆರಳಿದ ಪತಿ ಅಪಘಾತಕ್ಕೆ ಬಲಿ: ಮುಗಿಲು ಮುಟ್ಟಿದ ಪತ್ನಿಯ ಆಕ್ರಂದನ

    ವಿಜಯಪುರ: ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಗೆ ಬೋರ್‍ವೆಲ್ ಕೊರೆಯುವ ಲಾರಿಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ.

    ಜಿಲ್ಲೆಯ ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಂಡಿ ಪಟ್ಟಣ ನಿವಾಸಿ 57 ವರ್ಷದ ಬೋಪಾಲ ಹಡಪದ ಮೃತ ದುರ್ದೈವಿ.

    ಬೋಪಾಲ ಹಡಪದ ಎಂದಿನಂತೆ ಇಂದು ಕೂಡ ತನ್ನ ಪತ್ನಿ ಜೊತೆ ವಾಯು ವಿಹಾರಕ್ಕೆಂದು ಬಂದಿದ್ದರು. ಈ ವೇಳೆ ಬೊರ್‍ವೆಲ್ ಕೊರೆಯುವ ವಾಹನವೊಂದು ಬೋಪಾಲರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೋಪಾಲ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಪತಿ ಕಣ್ಣ ಮುಂದೆಯೇ ಸಾವನ್ನಪ್ಪಿದ್ದನ್ನು ಕಂಡು ಪತ್ನಿಗೆ ದಂಗು ಬಡಿದಂತಾಗಿದ್ದು, ಪತಿ ಶವದ ಮುಂದೆ ರೋಧಿಸುತ್ತಿರುವ ದೃಶ್ಯ ಮನಕಲಕುವಂತಿತ್ತು.

    ಘಟನೆಯ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಇಂಡಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಬೋರ್‍ವೆಲ್ ಮೋಟಾರ್ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ

    ಬೋರ್‍ವೆಲ್ ಮೋಟಾರ್ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ

    ಕೊಪ್ಪಳ: ಹೊಲದಲ್ಲಿರೋ ಬೋರ್‍ವೆಲ್ ಮೋಟಾರ್ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. 40 ವರ್ಷದ ಭರಮಪ್ಪ ಅನಬಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಇತ್ತೀಚೆಗೆ ಇವರು ಕುರಿ ಮಾರಾಟ ಮಾಡಿ 1 ಲಕ್ಷ 20 ಸಾವಿರ ಕೈಸಾಲವನ್ನ ವಾಪಾಸ್ಸು ಮಾಡಿದ್ದರು. ಕುರಿ ಮಾರಾಟ ಮಾಡಿ ಸಾಲ ತೀರಿಸಿದ ಬಳಿಕ ಮಾನಸಿಕವಾಗಿನೊಂದಿದ್ದರು ಎಂದು ತಿಳಿದುಬಂದಿದೆ.

    ಅಲ್ಲದೇ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ 3 ಲಕ್ಷ ರೂಪಾಯಿ ಸಾಲಮಾಡಿದ್ದ ರೈತ ಅದನ್ನು ತೀರಿಸೋದು ಹೇಗೆ ಅಂತ ಮಾನಸಿಕವಾಗಿ ನೊಂದಿದ್ದರು. ಈ ಹಿನ್ನೆಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

    ಅಳವಂಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನ ರಕ್ಷಣೆ- ಆಸ್ಪತ್ರೆಯಲ್ಲಿ ಸಾವು

    ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನ ರಕ್ಷಣೆ- ಆಸ್ಪತ್ರೆಯಲ್ಲಿ ಸಾವು

    ಭೋಪಾಲ್: 100 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸಿದೆ. 5 ವರ್ಷದ ಬಾಲಕ ಸತ್ಯಂ ಗುರುವಾರ ಆಟ ಆಡುವಾಗ ಆಯತಪ್ಪಿ 100 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ. ಗುರುವಾರ ರಾತ್ರಿ ಗಂಭೀರವಾಗಿ ಗಾಯಗೊಂಡಿದ್ದ ಸತ್ಯಂನನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದರು. ರಕ್ಷಣೆ ಮಾಡಿದ ಬಳಿಕ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಕೊಳವೆಬಾವಿ ದುರಂತ: ಮಣ್ಣಲ್ಲಿ ಮಣ್ಣಾದ 6 ವರ್ಷದ ಕಂದಮ್ಮ ಕಾವೇರಿ

    ಚಿಕಿತ್ಸೆ ಫಲಕಾರಿಯಾಗದೇ ಸತ್ಯಂ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾನೆ. ಕಳೆದ ಫೆಬ್ರವರಿ ತಿಂಗಳಿನಲ್ಲಿಯೂ 1 ವರ್ಷದ ಮಗುವೊಂದು ಮಧ್ಯಪ್ರದೇಶದ ಬೆಹ್ರಿ ಖುದ್ ಗ್ರಾಮದಲ್ಲಿರುವ 50 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದಿತ್ತು. 17 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಲಾಗಿತ್ತು.

    ಏಪ್ರಿಲ್ 22ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತಾಯಿಯೊಂದಿಗೆ ಕಟ್ಟಿಗೆ ಆರಿಸಲು ಹೋಗಿದ್ದಾಗ 6 ವರ್ಷದ ಬಾಲಕಿ ಕಾವೇರಿ ತೆರೆದ ಕೊಳವೆಬಾವಿಗೆ ಬಿದ್ದಿದ್ದಳು. ಸತತ 58 ಗಂಟೆಗಳ ಕಾರ್ಯಚರಣೆ ಬಳಿಕ ಕಾವೇರಿಯ ಮೃತದೇಹವನ್ನು ಹೊರ ತಗೆಯಲಾಗಿತ್ತು.

     

     

  • ಕೊಳವೆ ಬಾವಿ ದುರಂತ: ರಾಯಚೂರಿನ ಸಂದೀಪ್ ಸಾವನ್ನಪ್ಪಿ ಇಂದಿಗೆ 10 ವರ್ಷ

    ಕೊಳವೆ ಬಾವಿ ದುರಂತ: ರಾಯಚೂರಿನ ಸಂದೀಪ್ ಸಾವನ್ನಪ್ಪಿ ಇಂದಿಗೆ 10 ವರ್ಷ

    ರಾಯಚೂರು: ಇಡೀ ರಾಜ್ಯದ ಜನರೆಲ್ಲಾ `ಕಾವೇರಿ ಬದುಕಿ ಬಾ’ ಅಂತ ಹೇಗೆ ಪ್ರಾರ್ಥನೆ ಮಾಡಿದ್ದಾರೋ, 2007ರ ಏಪ್ರಿಲ್ 24 ರಂದು ಕೂಡ `ಸಂದೀಪ್ ಬದುಕಿ ಬಾ’ ಅಂತ ಪ್ರಾರ್ಥಿಸಿದ್ದರು.

    ಹೌದು. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿಯಲ್ಲಿ ಯಮಸ್ಪರೂಪಿಯಾಗಿ ಬಾಯಿ ತೆರೆದ ಕೊಳವೆ ಬಾವಿ ಬಾಲಕ ಸಂದೀಪ್‍ನನ್ನ ಬಲಿ ಪಡೆದಿತ್ತು. ಆ ಘಟನೆ ನಡೆದು ಇಂದಿಗೆ ಬರೊಬ್ಬರಿ ಹತ್ತು ವರ್ಷಗಳೇ ಕಳೆದಿದೆ. ನತದೃಷ್ಠ ಬಾಲಕ ಸಂದೀಪ್ ಈಗ ನೆನಪು ಮಾತ್ರ.

    ಅಂದು ನಡೆದಿದ್ದೇನು?: ಗ್ರಾಮದ ಗೋಪಾಲ ಎಂಬುವವರ ಜಮೀನಿನಲ್ಲಿ ಟಿಲ್ಲರ್ ಹೊಡೆಯುತ್ತಿದ್ದಾಗ, ಆಟವಾಡಲು ಹೋಗಿ ನೀರು ಬಾರದೆ ಬಿಟ್ಟಿದ್ದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ. ಎರಡನೇ ತರಗತಿ ಪಾಸಾಗಿದ್ದ 9 ವರ್ಷದ ಸಂದೀಪ್‍ನ ಸಾವು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಸಂದೀಪನ ತಂದೆ ನಾಗರಾಜ್ ಹಾಗೂ ತಾಯಿ ಲಕ್ಷ್ಮಿಗೆ ಈ ಘಟನೆಯಿಂದ ಬರಸಿಡಿಲು ಬಡಿದಂತಾಗಿತ್ತು.

    ಅಂದು ಕೊಳವೆ ಬಾವಿಗೆ ಬಿದ್ದ ಸಂದೀಪನನ್ನ ಕಾಪಾಡಲು ಅಗ್ನಿ ಶಾಮಕ ದಳ, ಹಟ್ಟಿ ಚಿನ್ನದ ಗಣಿ ಕಂಪನಿ ರಕ್ಷಣಾ ತಂಡ ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಸತತ ಮೂರು ದಿನಗಳ ಪ್ರಯತ್ನದ ಬಳಿಕ ಏಪ್ರಿಲ್ 26 ರಂದು ಸಂದೀಪನ ಶವವನ್ನ ಹೊರತೆಗೆಯಲಾಗಿತ್ತು. ಸಂದೀಪ್ ಪ್ರಕರಣ ನಡೆದು ಇಂದಿಗೆ ಬರೋಬ್ಬರಿ ಹತ್ತು ವರ್ಷ ಕಳೆದಿದೆ. ಸಂದೀಪನನ್ನ ನೆನೆದು ಈಗಲೂ ಕಣ್ಣಲ್ಲಿ ನೀರನ್ನ ತುಂಬಿಕೊಳ್ಳುವ ಬಾಲಕನ ತಂದೆತಾಯಿಯಾದ ನಾಗರಾಜ್ ಲಕ್ಷ್ಮಿ ದಂಪತಿ ಕಾವೇರಿ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

    ಒಟ್ಟಿನಲ್ಲಿ ಸಂದೀಪನ ದುರಂತ ಸಾವಿನ ಘಟನೆ ನಡೆದು ಹತ್ತು ವರ್ಷ ಕಳೆದರು ತೆರೆದ ಕೊಳವೆ ಬಾವಿಗಳು ಈಗಲೂ ಯಮಸ್ವರೂಪಿಗಳಾಗಿ ಜೀವವಂತವಾಗಿರುವುದು ನಿಜಕ್ಕೂ ದುರಂತವೇ ಸರಿ.

  • ಬದುಕಲಿಲ್ಲ ಕಾವೇರಿ: ನಮ್ಗೆ ಪರಿಹಾರ ಬೇಡ, ತೆರೆದ ಬೋರ್‍ವೆಲ್‍ಗಳನ್ನು ಮುಚ್ಚಿಸಿ- ಸರ್ಕಾರಕ್ಕೆ ತಾಯಿಯ ಕಣ್ಣೀರಿನ ಮನವಿ

    ಬದುಕಲಿಲ್ಲ ಕಾವೇರಿ: ನಮ್ಗೆ ಪರಿಹಾರ ಬೇಡ, ತೆರೆದ ಬೋರ್‍ವೆಲ್‍ಗಳನ್ನು ಮುಚ್ಚಿಸಿ- ಸರ್ಕಾರಕ್ಕೆ ತಾಯಿಯ ಕಣ್ಣೀರಿನ ಮನವಿ

    ಬೆಳಗಾವಿ: ಅಥಣಿ ತಾಲೂಕಿನ ಝುಂಜರವಾಡದಲ್ಲಿ ಶನಿವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಮಾದರ ಮೃತಪಟ್ಟಿದ್ದಾಳೆ.

    ಶನಿವಾರ ಸಂಜೆ ಕಾವೇರಿ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿತ್ತು. ಕೊಳವೆ ಬಾವಿ ಸುತ್ತ 20 ಬೋರ್‍ವೆಲ್‍ ಕೊರೆದು ಸಕ್ಕಿಂಗ್ ಮಷಿನ್ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆದಿತ್ತು.

    ಸರ್ಕಾರಕ್ಕೆ ಕಾವೇರಿ ತಾಯಿ ಮನವಿ: ನಮ್ಗೆ ಆಗಿರೋ ಆದ ಪರಿಸ್ಥಿತಿ ಬೇರೆಯವರಿಗೆ ಆಗೋದು ಬೇಡ, ಪರಿಹಾರವೂ ನಮ್ಗೆ ಬೇಡ. ರಾಜ್ಯದಲ್ಲಿ ಇರುವ ಎಲ್ಲಾ ತೆರೆದ ಬೋರ್‍ವೆಲ್‍ಗಳನ್ನ ಮುಚ್ಚಿಸಿ ಅಂತಾ ಕಾವೇರಿ ತಾಯಿ ಸವಿತಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ನಮಗೆ ಪರಿಹಾರ ಬೇಡ ಏನೂ ಬೇಡ ಗೋಳಿಟ್ಟಿದ್ದಾರೆ.

    `ನನ್ನ ಮಗಳು ಮತ್ತ ತೊಡಿ ಮ್ಯಾಲ ಆಡಬೇಕು. ಹಸದ್ರ ಉಣ್ಣಾಕ್ ಕೇಳಬೇಕು. ನೀರಡಿಕಿ ಆದ್ರ ನಾ ನೀರ್ ಕುಡ್ಸಬೇಕು… ಅಲ್ಲೀಮಟಾ ನಂಗ ಏನೂ ಬ್ಯಾಡ….’ ಎಂದು ತಾಯಿ ಸವಿತಾ ಸತತ ರೋದಿಸಿದ್ದರಿಂದ ಹಲವು ಬಾರಿ ಪ್ರಜ್ಞಾಹೀನರಾಗಿದ್ರು. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಕರೆದೊಯ್ದು ಚಿಕಿತ್ಸೆ ನೀಡಿ, ಚೇತರಿಸಿಕೊಂಡ ಬಳಿಕ ಕುಟುಂಬದವರ ಬಳಿ ಕಳಿಸಿಕೊಟ್ಟರು. ಹೀಗೆ ಅವರು ಪ್ರಜ್ಞೆ ತಪ್ಪುವುದು, ಚಿಕಿತ್ಸೆ ನೀಡಿ ಕರೆತರುವುದು ಐದಾರು ಬಾರಿ ನಡೆಯಿತು. ರೋಧನದ ನಡುವೆ ತೀವ್ರವಾದ ಬಿಸಿಲು ಇದ್ದುದರಿಂದ ಕಾವೇರಿ ತಾಯಿ ಮತ್ತೆ ಅಸ್ವಸ್ಥರಾಗಿದ್ದು, ಝುಂಜರವಾಡ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸವಿತಾ ಬೆಳಗ್ಗೆ ಹಾಲು ಬ್ರೆಡ್ ಸೇವಿಸಿದ್ದಾರೆ ಅಂತಾ ಕೊಕಟ್ಟನೂರು ಪ್ರಾಥಮಿಕ ಆರೋಗ್ಯಾಧಿಕಾರಿ ಸುಕನ್ಯ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಸಾಂತ್ವನ ಹೇಳಲು, ಮನೋಸ್ಥೈರ್ಯ ತುಂಬಲು ಸಂಬಂಧಿಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಕುಟುಂಬದವರ ಬಳಿ ತೆರಳುತ್ತಿದ್ದಂತೆಯೇ ಅವರ ದುಃಖದ ಕಟ್ಟೆಯೊಡೆಯುತ್ತಿತ್ತು. ರೋದನ ಮುಗಿಲು ಮುಟ್ಟುತ್ತಿತ್ತು. ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೇ ಸಂಬಂಧಿಕರು, ನೆರೆಹೊರೆಯವರು ಜಾಲಿ ಮರದ ಕೆಳಗೆ ಕುಳಿತು ಒಬ್ಬರನ್ನೊಬ್ಬರು ಸಂತೈಸುತ್ತಿದ್ದರು. ಬಾಲಕಿಯ ಉಳಿವಿಗಾಗಿ ಒಂದೆಡೆ ಪ್ರಾರ್ಥಿಸುತ್ತಿದ್ದರೆ, ಇನ್ನೊಂದೆಡೆ ಕಣ್ಣೀರ ಕೋಡಿ ಹರಿಯುತ್ತಿದ್ದ ದೃಶ್ಯಗಳು ಸೋಮವಾರ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಸ್ಥಳದಲ್ಲಿ ಗೋಚರಿಸಿತ್ತು,

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಾಲಕಿ ಬಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಡಿಆರ್‍ಎಫ್ ಸಿಬ್ಬಂದಿ, ಎಂಎಲ್‍ಐಆರ್‍ಸಿ ಸಿಬ್ಬಂದಿಗಳಿಂದ ಕಾರ್ಯಾಚರಣೆ ಶನಿವಾರ ರಾತ್ರಿಯಿಂದಲೇ ನಡೆದಿತ್ತು. ಅವಸರ ಮಾಡಿದ್ರೆ ಬಾಲಕಿ ಕಾವೇರಿ ದೇಹಕ್ಕೆ ತೊಂದರೆಯಾಗುವ ಸಾಧ್ಯತೆಗಳಿರುವ ನಿಟ್ಟಿನಲ್ಲಿ ಈವರೆಗೂ ಸೂಕ್ಷ್ಮವಾಗಿ ಕಾರ್ಯಾಚರಣೆ ಮಾಡಿದ್ದೇವು ಅಂತಾ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹೇಳಿದ್ದಾರೆ.

    ಸತತ ಕಾರ್ಯಾಚರಣೆಯ ಬಳಿಕ ಬಾಲಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ರಂಧ್ರ ನಿರ್ಮಾಣ ಮಾಡಲು ನಿರ್ಧರಿಸಿದ್ದೇವು. ಆದ್ರೆ ಈ ವೇಳೆ ಬಂಡೆ ಕಲ್ಲುಗಳು ಅಡ್ಡಿಪಡಿಸಿದವು. ನಂತ್ರ ಯಂತ್ರೋಪಕರಣಗಳನ್ನು ಬಳಸಿ ರಂಧ್ರ ಕೊರೆಯುವುದಾಗಿ ನಿರ್ಧರಿಸಲಾಯಿತು. ಅಂತೆಯೇ ಕಾರ್ಯಾಚರಣೆ ಕೊನೆ ಹಂತ ತಲುಪಿತು ಅಂತಾ ಎನ್‍ಡಿಆರ್‍ಎಫ್ ಟೀಂನ ಅಧಿಕಾರಿ ಭಜೇಂದರ್ ಪಬ್ಲಿಕ್ ಟಿವಿ ವರದಿಗಾರನ ಜೊತೆ ಮಾತನಾಡುತ್ತಾ ಹೇಳಿದ್ರು.

    ಬಾಲಕಿ ಕಾವೇರಿ ಕೊಳವೆ ಬಾವಿಯಲ್ಲಿ ಸಿಲುಕಿ 36 ಗಂಟೆ ನಂತ್ರ ಕೊಳವೆ ಬಾವಿ ಪಕ್ಕದಲ್ಲೇ 25 ಅಡಿ ಆಳದಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಯಿತು. ಬಾಲಕಿಯ ಕಾರ್ಯಾಚರಣೆಗೆ 2 ಹಿಟಾಚಿ, 2 ಜೆಸಿಬಿ ಬಳಕೆ ಮಾಡಲಾಗಿದ್ದು, ಇನ್ನು ಸ್ಥಳದಲ್ಲಿ ಅಗ್ನಿಶಾಮಕ ದಳ, ಎನ್‍ಡಿಆರ್‍ಎಫ್, ಎಂಎಲ್‍ಐಆರ್‍ಸಿ ಅಧಿಕಾರಿಗಳು ಹಾಗೂ ಹಟ್ಟಿ ಚಿನ್ನದ ಗಣಿಯ ನುರಿತ ತಜ್ಞರ ತಂಡವು ಕಾರ್ಯಾಚರಣೆ ನಡೆಸಿತ್ತು.

    ನಡೆದಿದ್ದೇನು?: ಅಜಿತ್ ಮಾದರ ಮತ್ತು ಸವಿತಾ  ದಂಪತಿ ಕೂಲಿ ಅರಸಿ ಬಾಗಲಕೋಟೆ ಜಿಲ್ಲೆಯಿಂದ ಇಲ್ಲಿಗೆ ಬಂದಿದ್ದರು. ಸಿಗೆ ಆರಂಭವಾದಾಗಿನಿಂದ ಕೆಲಸ ಸಿಗುವುದೂ ಕಡಿಮೆ ಆಗಿದೆ. ಹೀಗಾಗಿ ಅಜಿತ್ ಮಾದರ ಕೂಲಿ ಹುಡುಕಿಕೊಂಡು, ಸಿಕ್ಕಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಅಂತೆಯೇ ಬೆಳಗಾವಿಯಲ್ಲಿ ಬಂದು ಕುಟುಂಬ ನೆಲೆಸಿತ್ತು. ಹೆಂಡತಿ ಸವಿತಾ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು.

    ಶನಿವಾರ ಸಂಜೆ ತೋಟದ ವಸತಿಯಲ್ಲಿ ದೊಡ್ಡ ಮಗಳು ಅನ್ನಪೂರ್ಣಾಳನ್ನು ಬಿಟ್ಟು, ಚಿಕ್ಕವರಾದ ಕಾವೇರಿ ಹಾಗೂ ಪವನ್‍ನನ್ನು ಕರೆದುಕೊಂಡು ಕಟ್ಟಿಗೆ ಆಯಲು ಬಂದಿದ್ದರು. ಈ ಹೊತ್ತಿನಲ್ಲಿ ಮಕ್ಕಳಿಬ್ಬರೂ ಹೊಲದ ದಾರಿಯ ಪಕ್ಕದಲ್ಲಿ ಆಡುತ್ತಿದ್ದರು. ಮೂರ್ನಾಲ್ಕು ದಿನಗಳ ಹಿಂದಷ್ಟೇ ಹೊಲವನ್ನು ಗಳೆ ಹೊಡೆದಿದ್ದರಿಂದ ದೊಡ್ಡ ದೊಡ್ಡ ಮಣ್ಣಿನ ಹೆಂಟೆಗಳು ಎದ್ದು ನಿಂತಿದ್ದವು. ಆ ಹೆಂಟೆಗಳ ನಡುವೆಯೇ ತೆರೆದ ಕೊಳವೆ ಬಾವಿ ಇರುವುದು ಮಕ್ಕಳಿಗೆ ತಿಳಿದಿರಲಿಲ್ಲ. ಆಡುತ್ತ ಹೋದ ಕಾವೇರಿ ಕಾಲು ಜಾರಿ ಬಿದ್ದಿದ್ದಳು. ಇದನ್ನು ಕಂಡ ಆಕೆಯ ತಮ್ಮ ಪವನ ಗಾಬರಿಯಿಂದ ಚೀರಿದ್ದ. ಮಗನ ದನಿ ಕೇಳುತ್ತಿದ್ದಂತೆಯೇ ಅಲ್ಲಿಗೆ ಧಾವಿಸಿದ ತಾಯಿಯ ಮುಂದೆ `ಅಕ್ಕ ಇದರಾಗ ಬಿದ್ಲು…’ ಎಂದು ಪವನ್ ಕುಣಿಯೊಂದನ್ನು ತೋರಿಸಿದ್ದಾನೆ. ಕೂಡಲೇ ಮಗಳ ರಕ್ಷಣೆಗೆ ಮುಂದಾದ ಸವಿತಾ, ಹಗ್ಗವೊಂದನ್ನು ಬಿಟ್ಟು ಕಾವೇರಿಯನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಿದ್ದರು.

  • ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    – ಭದ್ರತೆಗೆ ಬಂದಿದೆ ಸೇನೆ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾರ ಗ್ರಾಮದಲ್ಲಿ ಕೊಳವೆ ಬಾವಿಯೊಳಗೆ 6 ವರ್ಷದ ಬಾಲಕಿ ಕಾವೇರಿ ಬಿದ್ದ ಪ್ರಕರಣದ ಕಾರ್ಯಾಚರಣೆ ಚುರುಕು ಪಡೆದಿದೆ. 15 ಗಂಟೆಗಳಿಂದಲೂ ಕಾರ್ಯಾಚರಣೆ ನಡೀತಿದೆ. ಕೊಳವೆ ಬಾವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಪುಣೆ ಎನ್‍ಡಿಆರ್‍ಎಫ್ ತಂಡ ಒಂದ್ಕಡೆ ಆ್ಯಂಕರ್ (ಲಂಗರು) ಬಳಸಿಯೂ ಮತ್ತೊಂದು ಕಡೆ ಹಿಟಾಚಿ, ಬಂಡೆ ಒಡೆಯೋ ಯಂತ್ರಗಳಿಂದ ಮಣ್ಣನ್ನು ಅಗೆಯಲಾಗ್ತಿದೆ. ಈಗಾಗಲೇ 13 ಅಡಿ ಅಗೆಯಲಾಗಿದೆ.

    ಶನಿವಾರ ಸಂಜೆ 5 ಗಂಟೆ ಆಸುಪಾಸಿನಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ ಕಾವೇರಿಯನ್ನ ಇನ್ನೂ ಮೇಲೆತ್ತಲು ಆಗಿಲ್ಲ. ರಾತ್ರಿಯೆಲ್ಲಾ ನಡೆದ ಕಾರ್ಯಾಚರಣೆ ಇದೀಗ 15 ಗಂಟೆಯೇ ಮುಗಿದಿದೆ. ಆದಾಗ್ಯೂ ಕಾವೇರಿ ಇನ್ನೂ ಮೇಲೆ ಬಂದಿಲ್ಲ. ಸುಮಾರು 30 ಅಡಿ ಆಳದಲ್ಲಿ ಸಿಕ್ಕಿರುವ ಕಾವೇರಿಯ ಚಲನವಲನ ವೀಕ್ಷಿಸಲು 18 ಅಡಿಯವರೆಗೆ ವೆಬ್ ಕ್ಯಾಮೆರಾ ಬಿಡಲಾಗಿತ್ತು. ಆದ್ರೆ ಮಧ್ಯದಲ್ಲಿ ಮಣ್ಣು ಆವರಿಸಿದ ಕಾರಣ ಬಾಲಕಿಯ ಸುಳಿವು ಸಿಕ್ಕಿಲ್ಲ.

    ಬಾಲಕಿ ಕಾವೇರಿ ರಕ್ಷಣಾ ಕಾರ್ಯದಲ್ಲಿ 9 ತಂಡಗಳು ಭಾಗಿಯಾಗಿವೆ. ಪುಣೆ, ಹೈದರಾಬಾದ್‍ನ ಎನ್‍ಡಿಆರ್‍ಎಫ್ ತಂಡಗಳು, ಬೆಳಗಾವಿಯ ಮಿಲಿಟರಿ ತುಕಡಿ, ಸಾಂಗ್ಲಿಯ ಹೆಲ್ಪ್‍ಲೈನ್ ಬಸವರಾಜ್ ಹಿರೇಮಠ್, ರಾಯಚೂರಿನ ಹಟ್ಟಿ, ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆಗಳು ಆಪರೇಷನ್ ಕಾವೇರಿಯಲ್ಲಿ ಭಾಗಿಯಾಗಿವೆ. ಇನ್ನು ಬೆಳಗಾವಿಯ ಡಿಸಿ ಜಯರಾಮ್, ಎಸ್‍ಪಿ ರವಿಕಾಂತೇಗೌಡ, ಅಥಣಿ ತಹಸೀಲ್ದಾರ್ ಉಮಾದೇವಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವಧಿ ರಾತ್ರಿಯೆಲ್ಲಾ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಗಂಟೆ ಗಂಟೆಗೂ ಎಲ್ಲರೂ ಮಾಹಿತಿ ಕೊಡ್ತಿದ್ರು.

    ಸವಿತಾ – ಅಜಿತ್ ದಂಪತಿಗೆ ಅನ್ನಪೂರ್ಣ, ಕಾವೇರಿ ಮತ್ತು ಪವನ್ ಎಂಬ ಮೂವರು ಮಕ್ಕಳಿದ್ದಾರೆ. ಶನಿವಾರ ಸಂಜೆ ಕಟ್ಟಿಗೆ ಆರಿಸಲು ತಾಯಿ ಜೊತೆ ಕಾವೇರಿ ಮತ್ತು ಪವನ್ ತೆರಳಿದ್ದರು. ಈ ವೇಳೆ ಶಂಕರಪ್ಪ ಹಿಪ್ಪರಗಿ ಅವರ ಜಮೀನಿನಲ್ಲಿ ಮೂರು ವರ್ಷಗಳ ಹಿಂದೆ ಕೊರೆದು ಫೇಲ್ ಆದ ಕಾರಣ ಹಾಗೇ ಬಿಟ್ಟಿದ್ದ ಕೊಳವೇ ಬಾವಿಗೆ ಅಚಾನಕ್ ಆಗಿ ಕಾವೇರಿ ಆಯತಪ್ಪಿ ಬಿದ್ದಿದ್ದಾರೆ. ಅಕ್ಕ ಬಾವಿಗೆ ಬಿದ್ದ ಸುದ್ದಿಯನ್ನ ಪವನ್ ತಕ್ಷಣವೇ ತಾಯಿಗೆ ತಿಳಿಸಿದ್ದಾನೆ. ಆತಂಕದಿಂದ ಓಡಿ ಬಂದ ತಾಯಿ ಸವಿತಾಗೆ ಮೊದಲಿಗೆ ಕಾವೇರಿಯ ಅಳಲು ಕೇಳಿಸಿದೆ. ಆಮೇಲೆ ಹಗ್ಗ ಬಿಟ್ಟು ರಕ್ಷಿಸಲು ಯತ್ನಿಸಿದ್ದಾರೆ. ಆದ್ರೆ ಸಾಧ್ಯವಾಗಿಲ್ಲ. ತಕ್ಷಣವೇ ಗ್ರಾಮಸ್ಥರಿಗೆ ಸುದ್ದಿ ಮುಟ್ಟಿಸಿ ಎಲ್ಲರಿಗೂ ತಿಳಿದಿದೆ. ಕೂಲಿಗೆ ಹೋಗಿದ್ದ ಪತಿ ಅಜಿತ್ ಬರುವಷ್ಟರಲ್ಲಿ ಇಡೀ ಗ್ರಾಮವೇ ಅಲ್ಲಿ ನೆರೆದಿತ್ತು. ಡಿಸಿ, ಎಸ್‍ಪಿ, ಅಗ್ನಿಶಾಮಕ ದಳವೆಲ್ಲಾ ಬಂದಿತ್ತು. ಸವಿತಾ ಅವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲದೆ, ಅನ್ನ-ಆಹಾರ ಸೇವಿಸದೆ ರಾತ್ರಿಯೆಲ್ಲಾ ಗೋಳಾಡಿ ಕಣ್ಣೀರಿಟ್ಟ ಸವಿತಾ ಅಸ್ವಸ್ಥರಾಗಿದ್ದರು.

  • ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ : 6 ವರ್ಷದ ಪುಟಾಣಿಯ ರಕ್ಷಣೆಗೆ ಹರಸಾಹಸ

    ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ : 6 ವರ್ಷದ ಪುಟಾಣಿಯ ರಕ್ಷಣೆಗೆ ಹರಸಾಹಸ

    ಬೆಳಗಾವಿ: 10 ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದೆ. ಅಥಣಿ ತಾಲೂಕಿನ ಝಂಜರವಾಡದಲ್ಲಿ ತೆರೆದ ಬೋರ್‍ವೆಲ್‍ಗೆ 6 ವರ್ಷದ ಬಾಲಕಿ ಬಿದ್ದಿದ್ದಾಳೆ.

    ಕಾವೇರಿ ಮಾದರ ಝಂಜರವಾಡ ಗ್ರಾಮದ ತೋಟದ ಮನೆಯಲ್ಲಿನ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕಿ. ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಮಗು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    ರೈತ ಶಂಕರಪ್ಪ ಹಿಪ್ಪರಗಿ ಅವರು 400 ಅಡಿ ಕೊಳವೆ ಬಾವಿ ಕೊರೆಸಿದ್ದಾಗ ಫೇಲ್ ಆಗಿತ್ತು. ಇವರು ಕೊಳವೆ ಬಾವಿ ಮುಚ್ಚದೇ ಹಾಗೇ ಬಿಟ್ಟಿದ್ದರು. ಇಂದು ಸಂಜೆ ಸುಮಾರು 5 ಗಂಟೆಗೆ ಬಾಲಕಿ `ಕಾವೇರಿ ಮಾದರ’ ಆಟವಾಡುತ್ತಾ ಹೋಗಿ ಬಿದ್ದಿದ್ದಾಳೆ. ಸುಮಾರು 50 ಅಡಿ ಆಳದಲ್ಲಿ ಬಾಲಕಿ ಸಿಲುಕಿದ್ದಾಳೆ ಎನ್ನುವ ಮಾಹಿತಿ ಈಗ ಸಿಕ್ಕಿದೆ.