Tag: Borewelltragedy

  • ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಬೆಳಗಾವಿ: ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಿದ್ದು 27 ಅಡಿಯಲ್ಲಿ ಸಿಲುಕಿರುವ ಕಾವೇರಿಯನ್ನು ಮೇಲೆತ್ತಲು ರಕ್ಷಣಾ ಪಡೆಗಳು ಈಗಾಗಲೇ 24 ಅಡಿ ಆಳ ತೆಗೆದಿದ್ದಾರೆ. 2 ಹಿಟಾಚಿ, 2 ಜೆಸಿಬಿ ಬಳಸಿ ಅಡ್ಡಲಾಗಿ ಸುರಂಗ ಕೊರೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. 4 ಎನ್‍ಡಿಆರ್‍ಎಫ್, ರಾಯಚೂರಿನ 6 ಹಟ್ಟಿ ಚಿನ್ನದ ಗಣಿ ಟೀಂಗಳಿಂದ ಅಹೋರಾತ್ರಿ ಆಪರೇಷನ್ ನಡೆಯುತ್ತಿದೆ.

    ಶನಿವಾರ ಸಂಜೆ ಕಾವೇರಿ ತನ್ನ ತಾಯಿಯ ಜೊತೆ ಕಟ್ಟಿಗೆ ಆರಿಸುವಾಗ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿದೆ. ಕೊಳವೆ ಬಾವಿ ಸುತ್ತ 20 ಬೋರ್‍ವೆಲ್ ಕೊರೆದು ಸಕ್ಕಿಂಗ್ ಮಷಿನ್ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ. ಆದರೆ ಈವರೆಗೂ ಇದ್ಯಾವುದೂ ಫಲ ನೀಡಿಲ್ಲ. ಸ್ಥಳದಲ್ಲಿ ಇಡೀ ಜಿಲ್ಲಾಡಳಿತ ಬೀಡುಬಿಟ್ಟು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

    ಕಾವೇರಿಯ ಹೆತ್ತವರಾದ ಅಜಿತ್ ಮತ್ತು ಸವಿತಾ ಸ್ಥಿತಿ ಯಾರಿಗೂ ಬೇಡವಾಗಿದೆ. ಮಗಳು ಸಿಗೋವರೆಗೂ ಆಹಾರ ಸೇವಿಸುವುದಿಲ್ಲ ಎಂದು ಸವಿತಾ ಪಟ್ಟು ಹಿಡಿದಿದ್ದಾರೆ. ಇನ್ನು ಅವಘಡಕ್ಕೆ ಕಾರಣರಾದ ಜಮೀನು ಮಾಲೀಕ ಶಂಕರಪ್ಪ ಹಿಪ್ಪರಗಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಜಮೀನು ಮಾಲೀಕ ಶಂಕರಪ್ಪ ವಿರುದ್ಧ ಐಪಿಸಿ ಸೆಕ್ಷನ್ 371ರಡಿ ನಿರ್ಲಕ್ಷ್ಯದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

    ಕಾವೇರಿ ರಕ್ಷಣೆಗೆ ಇನ್ನೂ 15 ಗಂಟೆ ಬೇಕು. ಬಾಲಕಿಯ ಕೈಕಾಲುಗಳ ಚಲನವಲನ ಆಗ್ತಿಲ್ಲ. ನಮ್ಮ ಪ್ರಯತ್ನ ನಡೆಯುತ್ತಿದೆ. ನಾವು ನಿರಂತರವಾಗಿ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ ಅಂತಾ ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಝಂಜರವಾಡದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಇರೋದ್ರಿಂದ ರಕ್ಷಣಾ ತಂಡದ ಸದಸ್ಯರು ಬಳಲಿದ್ದಾರೆ.

     

  • ನಾನೇನು ದೇವರಾ.. ನಾ ಬಂದು ಏನ್ ಮಾಡ್ಬೇಕು?: ರಮೇಶ್ ಜಾರಕಿಹೊಳಿ

    ನಾನೇನು ದೇವರಾ.. ನಾ ಬಂದು ಏನ್ ಮಾಡ್ಬೇಕು?: ರಮೇಶ್ ಜಾರಕಿಹೊಳಿ

    ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ನೀವು ಬೇಗ ಬರಬಹುದಿತ್ತಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಾನೇನು ದೇವರಾ, ನಾ ಬೇಗ ಬಂದು ಏನ್ ಮಾಡ್ಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ.

    ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಕೊಳವೆಗೆ ಕಾವೇರಿ ಎಂಬ ಬಾಲಕಿ ಬಿದ್ದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ವಿಳಂಬವಾಗಿ ಸ್ಥಳಕ್ಕೆ ಆಗಮಿಸಿದ್ದರು. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳು ಸ್ವಲ್ಪ ಬೇಗ ಬರಬಹುದಿತ್ತಲವೇ ಎಂದು ಪ್ರಶ್ನೆ ಕೇಳಿದ್ದಕ್ಕೆ, ನಾನೇನು ದೇವರಾ.. ಬೇಗ ಬಂದು ನಾನ್ ಏನ್ ಮಾಡ್ಬೇಕು? ಎಷ್ಟು ಕೋಟಿ ಹಣ ವ್ಯಯ ಮಾಡಿದ್ರೂ ಬಾಲಕಿ ಬದುಕಿ ಬರಲ್ಲಾ. ಬದುಕಿ ಬಂದರೆ ಸಂತೋಷ ಎಂದು ಉತ್ತರಿಸಿದ್ದಾರೆ.

    ನನಗೆ ನಮ್ಮ ಜಿಲ್ಲಾಡಳಿತದ ಅಧಿಕಾರಿಗಳ ಮೇಲೆ ನಂಬಿಕೆಯಿದೆ. ಅವರು ಕ್ಷಮತೆಯಿಂದ ಕಾರ್ಯ ನಿರ್ವಹಿಸುತ್ತಾರೆ. ನಾನು ದೂರದಿಂದಲೇ ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

    ಉಡಾಫೆಯ ಮಂತ್ರಿಗಳು: ಈ ಸರ್ಕಾರದಲ್ಲಿ ಎಲ್ಲಾ ಉಡಾಫೆ ಮಂತ್ರಿಗಳೇ ಇರೋದು. ಸಿಎಂ ಕೂಡಾ ಉಡಾಫೆ ವರ್ತನೆ ತೋರಿಸ್ತಾರೆ. ಮುಖ್ಯಮಂತ್ರಿಗಳ ಹಾಗೆ ಮಂತ್ರಿಗಳು ಅನುಸರಿಸುತ್ತಾರೆ. ಸಿಎಂ ಎಸ್‍ಪಿ ಗೆ ಸಾರ್ವಜನಿಕವಾಗಿ ಬೈಯ್ತಾರೆ. ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆಯಿಲ್ಲ. ಚುನಾವಣೆ ನಂತರ ಕಾಂಗ್ರೆಸ್‍ನ ಅಡ್ರೆಸ್ ಇರೋದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

    ಕೊಳವೆಬಾವಿ ದುರಂತ ಪ್ರಕರಣಗಳು ನಡೆಯುತ್ತಾನೆ ಇರುತ್ತದೆ. ದುರ್ಘಟನೆ ನಡೆದಿದೆ ಆ ಬಗ್ಗೆ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ. ಸರ್ಕಾರದಲ್ಲಿ ಈಗಾಗಲೇ ಇಂತಹ ಪ್ರಕರಣಗಳಿಗೆ ಸಂಬಂಧಿಸಿದ ಆದೇಶಗಳಿವೆ. ಜಮೀನಿನಲ್ಲಿ ತೆರೆದ ಕೊಳವೆ ಬಾವಿ ಮುಚ್ಚಲು ಆದೇಶವಿದೆ. ಇದನ್ನು ಬಿಟ್ಟು ಮಾಧ್ಯಮಗಳು ಬೇರೆ ವಿಚಾರಗಳನ್ನ ಹೈಲೈಟ್ ಮಾಡಿ ಎಂದು ಸಚಿವ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

    https://youtu.be/9-J2kwfP51M