Tag: Boy died

  • ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ!

    ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ!

    ಚಿಕ್ಕಬಳ್ಳಾಪುರ: ಬೀದಿನಾಯಿಗಳ ದಾಳಿಯಿಂದಾಗಿ ಬಾಲಕ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದ ಸಂತೋಷ ನಗರದಲ್ಲಿ ನಡೆದಿದೆ.

    BOY DEAD

    ಕಲಂದರ್ ಖಾನ್ (11) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಇದನ್ನೂ ಓದಿ: ಫಿಶ್ ಕರಿ ಬೇಕು ಎಂದ ಸ್ನೇಹಿತನ ಬರ್ಬರ ಹತ್ಯೆ

    ತಂದೆ ಬಾಬಾಜಾನ್ ಖಾನ್ ಬಳಿಗೆ ಹೋಗುತ್ತಿದ್ದಾಗ ಬಾಲಕನ ಮೇಲೆ ಏಕಾಏಕಿ 20-30 ನಾಯಿಗಳ ಹಿಂಡು ದಾಳಿ ನಡೆಸಿವೆ. ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಪುನೀತ್ ನೆನಪು ಮಗಳಿಗೆ ಕಾಡುತ್ತಿದೆ: ರಮೇಶ್ ಅರವಿಂದ್

    DOGS ATTACK

    ಸಂತೋಷ ನಗರದ ಚಿಕನ್, ಮಟನ್ ಅಂಗಡಿಗಳ ತ್ಯಾಜ್ಯಕ್ಕಾಗಿ ಬಿಡಾಡಿ ನಾಯಿಗಳು ಹಿಂಡು ಹಿಂಡಾಗಿ ಗುಂಪು ಸೇರಲಿವೆ. ಮಾಂಸದಂಗಡಿಗಳಲ್ಲಿ ಆಹಾರಕ್ಕಾಗಿ ಬಂದು ಸೇರಿದ್ದ ನಾಯಿಗಳು ಭಾನುವಾರ ಬಾಲಕನನ್ನು ಬಲಿ ಪಡೆದಿವೆ. ಮಾಂಸದಂಗಡಿಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

  • KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

    KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

    ಶಿವಮೊಗ್ಗ: ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಐದು ವರ್ಷದ ಬಾಲಕ ಬಿದ್ದು ಮೃತಪಟ್ಟ ಘಟನೆ ಜಿಲ್ಲೆ ಸಾಗರದಲ್ಲಿ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ನಡೆದಿದೆ.

    ಶಿವಪ್ಪ ನಾಯಕ ನಗರದಲ್ಲಿರುವ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಮುನೀಂದ್ರ ಎಂಬವರ ಮಗ ಭುವನ್ (5) ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಡಿಪೋ ಕಂಪೌಂಡ್ ಕಟ್ಟಲು ಗುಂಡಿ ತಗೆಯಲಾಗಿತ್ತು. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಂಡಿ ತುಂಬಿದ್ದು, ಸಮೀಪದಲ್ಲಿಯೇ ಆಟವಾಡುತ್ತಿದ್ದ ಭುವನ್ ಕಾಲು ಜಾರಿ ಗುಂಡಿಗೆ ಬಿದ್ದಿದ್ದಾನೆ.

    ತಕ್ಷಣವೇ ಅಲ್ಲಿದ್ದ ಜನರು ಬಾಲಕನನ್ನು ಮೇಲೆದ್ದಾರೆ. ನೀರು ಕುಡಿದು ಹೊಟ್ಟೆ ಭಾರವಾಗಿದ್ದ ಭುವನ್‍ಗೆ ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆ ತಲುಪುತ್ತಿದ್ದಂತೆ ಬಾಲಕ ಮೃತಪಟ್ಟಿದ್ದಾನೆ.

    ಗುಂಡಿ ತೆಗೆದು ಸೂಚನಾ ಫಲಕ ಹಾಕುವಲ್ಲಿ ಕಾಮಗಾರಿ ಗುತ್ತಿಗೆದಾರರು ನಿರ್ಲಕ್ಷ್ಯ ತೋರಿದ್ದಾರೆ. ನನ್ನ ಮಗನ ಸಾವಿಗೆ ಅವರೇ ಕಾರಣ ಎಂದು ಗುತ್ತಿಗೆದಾರರ ವಿರುದ್ಧ ಮೃತ ಬಾಲಕನ ತಂದೆ ಮುನೀಂದ್ರ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಸಾರ್ವಜನಿಕರು ಸಂಚರಿಸುವ ಸ್ಥಳದಲ್ಲಿ ಕಂಪೌಂಡ್ ನಿರ್ಮಾಣಕ್ಕೆ ಅನೇಕ ಗುಂಡಿಗಳನ್ನು ತೆಗೆಯಲಾಗಿದೆ. ಅಲ್ಲದೇ ಯಾವುದೇ ಸೂಚನಾ ಫಲಕಗಳನ್ನು ಹಾಕಿಲ್ಲ. ಹೀಗಾಗಿ ಈ ದುರ್ಘಟನೆ ನಡೆದಿದೆ ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.