Tag: boycott

  • ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷಗಳಿಂದ ಕುಟುಂಬಕ್ಕೆ ಬಹಿಷ್ಕಾರ

    ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷಗಳಿಂದ ಕುಟುಂಬಕ್ಕೆ ಬಹಿಷ್ಕಾರ

    ಕೊಪ್ಪಳ: ತಾಲೂಕಿನ ಚಿಲಕಮುಖಿ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗೆ ಹಾಗೂ ಅವರ ಕುಟುಂಬಕ್ಕೆ ಕಳೆದ ಎಂಟು ವರ್ಷಗಳಿಂದ ಬಹಿಷ್ಕಾರ ಹಾಕಿರುವುದು ಬೆಳಕಿಗೆ ಬಂದಿದೆ.

    ಇದೀಗ ಗ್ರಾಮಕ್ಕೆ ಬಂದರೂ ಸಮಾಜದವರು ಆ ಕುಟುಂಬದವರನ್ನು ಮಾತಾಡಿಸೋ ಹಾಗಿಲ್ಲ. ಅವರ ಮನೆಗೆ ಹೋಗೋ ಹಾಗಿಲ್ಲ. ಆ ಕುಟುಂಬಕ್ಕೆ ಅಘೋಷಿತ ಬಹಿಷ್ಕಾರ ಹಾಕಿದ್ದಾರೆ. ಸಮಾಜದಲ್ಲಿ ಒಂದಾಗಿ ಬಾಳಬೇಕು ಅಂದರೂ ಸಮಾಜ ಅವರನ್ನು ಒಪ್ಪುತ್ತಿಲ್ಲ. ಸಮಾಜ ಹಾಕಿರೋ ಬಹಿಷ್ಕಾರ ಎಂಬ ಬೇಲಿಗೆ ಆ ಕುಟುಂಬದವರು ರೋಸಿ ಹೋಗಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಅಲ್ಲದೇ ಒಂದು ಕಡೆ ಬಹಿಷ್ಕಾರಕ್ಕೆ ಒಳಗಾದ ದಂಪತಿ.. ಮತ್ತೊಂದು ಕಡೆ ಬಹಿಷ್ಕಾರಕ್ಕೆ ಒಳಗಾದವರ ಮನೆಯಲ್ಲಿ ಊಟ ಮಾಡಿದವರಿಗೂ ಬಹಿಷ್ಕಾರದ ಬಿಸಿ ತಟ್ಟಿದೆ.

    ಅವರಿಬ್ಬರು ಕೂಡಿ ಬೆಳೆದವರು ವಯೋಸಹಜವಾಗಿ ಇಬ್ಬರು ಆಕರ್ಷಿತರಾಗಿ ಪ್ರೀತಿಸುತ್ತಿದ್ದರು. ಯುವತಿಗೆ ಮೊದಲೇ ಬಾಲ್ಯವಿವಾಹವಾಗಿತ್ತು. ಮದುವೆಯ ನಂತರ ಆಕೆ ಪ್ರೀತಿಸಿದವನೊಂದಿಗೆ ಹೋಗಿ ಮದುವೆಯಾಗಿದ್ದಳು. ಆಗಿನಿಂದ ಅವರ ಕುಟುಂಬದವರಿಗೆ ಸಮಾಜದ ಹಿರಿಯರು ಬಹಿಷ್ಕಾರ ಹಾಕಿದ್ದಾರೆ.

    ಚಿಲ್ಕಮುಖಿಯ ಅಲೆಮಾರಿ ಕುಟುಂಬವಾಗಿರುವ ಪರ್ವತ ಮಲ್ಲಯ್ಯ ಸಮಾಜದ ಹನುಮಂತಪ್ಪ ಹಾಗೂ ಅದೇ ಸಮಾಜದ ಮಂಜುಳಾ 8 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮಂಜುಳಾಗೆ ಮೊದಲು ಬಾಲ್ಯವಿವಾಹವಾಗಿತ್ತು. ಪ್ರೀತಿಸಿದವನಿಂದ ದೂರವಾಗಲು ಇಷ್ಟವಿಲ್ಲದೆ ಆಕೆ ಹನುಮಂತಪ್ಪನೊಂದಿಗೆ ಮದುವೆ ಯಾಗಿದ್ರು. ಮದುವೆಯಾದ ಬಳಿಕ ಅವರಿಗೆ ಸಮಾಜ ಬಹಿಷ್ಕಾರ ಹಾಕಿತ್ತು. ಎಂಟು ವರ್ಷಗಳ ಕಾಲ ಆ ಜೋಡಿ ಊರು ತೊರೆದು ಯಲಬುರ್ಗಾದಲ್ಲಿ ಜೀವನ ನಡೆಸುತ್ತಿತ್ತು. ಕಳೆದ 4 ತಿಂಗಳ ಹಿಂದೆ ಗ್ರಾಮಕ್ಕೆ ಬಂದು ವಾಸವಾಗಿದ್ದರು. ರಾಜಿಯಾದ ಬಳಿಕವೂ ಸಮಾಜ ಅವರಿಗೆ ಮತ್ತೆ ಬಹಿಷ್ಕಾರ ಹಾಕಿದೆ.

    ಇತ್ತೀಚೆಗೆ ಹನುಮಂತಪ್ಪನ ತಂದೆ ಶಿವಾಜಪ್ಪ ಮನೆಯಲ್ಲಿ ಕಾರ್ಯಕ್ರಮ ಇತ್ತು. ಅದರ ನಿಮಿತ್ಯ ಸಮಾಜದ ಕೆಲವರಿಗೆ ಊಟಕ್ಕೆ ಕರೆದಿದ್ರು. ಅವರ ಮನೆಯಲ್ಲಿ ಊಟ ಮಾಡಿದ ಸುಮಾರು 10 ಕ್ಕೂ ಹೆಚ್ಚು ಕುಟುಂಬಗಳಿಗೂ ಬಹಿಷ್ಕಾರ ಹಾಕಲಾಗಿದೆ. ಭೋಜನಕ್ಕೆ ಹೋದವರ ಜೊತೆ ಸಹ ಸಮಾಜದವರು ಮಾತನಾಡುತ್ತಿಲ್ಲ. ಇನ್ನೂ ಶಿವಾಜಪ್ಪ ಮನೆಯಲ್ಲಿ ಕಾರ್ಯಕ್ರಮ ಸಂದರ್ಭದ ಊಟದಲ್ಲಿ ಭಾಗಿಯಾಗಿರುವ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಂಕರಪ್ಪ ಸೇರಿ ಸುಮಾರು 16 ಕುಟುಂಬಗಳಿಗೆ ಚಿಲ್ಕಮುಖಿಯ ಪರ್ವತ ಮಲ್ಲಯ್ಯ ಸಮಾಜದವರು ಬಹಿಷ್ಕಾರ ಹಾಕಿದ್ದಾರೆ.

    ಅಲೆಮಾರಿ ಕುಟುಂಬಗಳಲ್ಲಿ ಇನ್ನೂ ನ್ಯಾಯ ಪಂಚಾಯಿತಿಗಳಿದ್ದು, ಇಲ್ಲಿ ಮುಖಂಡರ ಹೇಳಿದ್ದನ್ನು ಪಾಲಿಸುತ್ತಿದ್ದಾರೆ. ಇದೇ ರೀತಿ ಸಮಾಜದ ಮುಖಂಡರು ವಿವಾಹಿತಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಹಿಷ್ಕಾರ ಹಾಕಿದ್ದಾರೆ. ಚಿಲ್ಕಮುಖಿ ಗ್ರಾಮದಲ್ಲಿ ಸುಮಾರು 80 ಕುಟುಂಬಗಳಲ್ಲಿ ಈಗ 16 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

  • ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!

    ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!

    ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಊರಿನಿಂದಲೇ ಬಹಿಷ್ಕಾರ ಹಾಕಿದ್ದಲ್ಲದೇ ಜೊತೆಗೆ 6,000 ದಂಡ ವಿಧಿಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮುಳ್ಳುವಾರೆ (Mulluvare) ಗ್ರಾಮದಲ್ಲಿ ನಡೆದಿದೆ.

    ಬೇರೆಯವರ ಕಷ್ಟಕ್ಕೆ ಸ್ಪಂದಿಸಿದ್ದಕ್ಕೆ ಗ್ರಾಮದ ಭೈರಪ್ಪ ಎಂಬುವವರನ್ನು ಊರಿನಿಂದಲೇ ಬಹಿಷ್ಕಾರ ಹಾಕಿದ್ದಾರೆ. ಅದಲ್ಲದೇ ಆ ಮನೆಯವರ ಜೊತೆ ಯಾರೂ ಮಾತನಾಡುವಂತಿಲ್ಲ, ಮನೆಗೆ ಯಾರೂ ಹೋಗುವಂತಿಲ್ಲ, ತೋಟದ ಕೆಲಸಕ್ಕೂ ಹೋಗುವಂತಿಲ್ಲ. ಮಗನ ಮದುವೆಗೆ ಯಾರೂ ಹೋಗಿಲ್ಲ. ಯಾರಾದರೂ ಇದಕ್ಕೆ ವಿರೋಧವಾಗಿ ನಡೆದುಕೊಂಡರೆ ಅವರಿಗೂ 5,000 ದಂಡ. ಇದೀಗ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಪಟ್ಟಿರುವ ಭೈರಪ್ಪ ನ್ಯಾಯಕ್ಕಾಗಿ ಡಿಸಿ ಕಚೇರಿ, ಪೋಲಿಸ್ ಸ್ಟೇಷನ್ ಅಲೆಯುತ್ತಿದ್ದಾರೆ.ಇದನ್ನೂ ಓದಿ: ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ನೇಣಿಗೆ ಶರಣು

    ಭೈರಪ್ಪ ಅವರನ್ನು ಗ್ರಾಮಸ್ಥರು ಸೇರಿಕೊಂಡು ಮುಳ್ಳುವಾರೆ ಗ್ರಾಮದ ಮುಖಂಡರನ್ನಾಗಿಸಿದ್ದರು. ಮುಳ್ಳುವಾರೆ ಗ್ರಾಮದ ಪಕ್ಕದಲ್ಲಿರುವ ಕೆಸರಿಕೆ ಗ್ರಾಮದಲ್ಲಿ ಒಂದೇ ದಿನ ಮೂರು ಮದುವೆಯಾಗಿದ್ದವು. ಅಂದು ಅಡುಗೆ ಮಾಡಲು ಪಾತ್ರೆ ಸಮಸ್ಯೆಯಾಗಿದೆ ಎಂದು ಕೆಸರಿಕೆ ಗ್ರಾಮದವರು ಬಂದು ಪಾತ್ರೆ ಕೇಳಿದ್ದರು. ಅದಕ್ಕೆ ಭೈರಪ್ಪ ಕೊಟ್ಟಿದ್ದರು. ಗ್ರಾಮದ ಕಾರ್ಯಕ್ರಮಗಳಿಗೆ ಹಳ್ಳಿಗರು ಹಣ ಹಾಕಿ ತಂದಿರುವ ಪಾತ್ರೆಗಳನ್ನು ಪಕ್ಕದ ಹಳ್ಳಿಗೆ ಕೊಟ್ಟಿದ್ದಕ್ಕೆ ಬಹಿಷ್ಕಾರ ಹಾಕಲಾಗಿದೆ. ಭೈರಪ್ಪ ಹೀಗೆ ಪಾತ್ರೆಗಳನ್ನ ಕೊಟ್ಟಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಕೊಟ್ಟಿದ್ದರು. ಈಗ ಮಾತ್ರ ಬಹಿಷ್ಕಾರ ಹಾಕಿದ್ದಾರೆ. 6,000 ಸಾವಿರ ದಂಡ ಹಾಕಿ, ಭೈರಪ್ಪನವರ ಮನೆಗೆ ಯಾರೂ ಹೋಗದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

    ಈ ಹಿಂದೆಯೂ ಪಾತ್ರೆ ನೀಡಿದ್ದರು. ಆದರೆ ಅಂದು ತಪ್ಪಾಗಿರಲಿಲ್ಲ. ಈಗ ಪಾತ್ರೆ ನೀಡಿರುವುದು ತಪ್ಪಾಗಿದ್ದು, ಹರೀಶ್, ಪುಟ್ಟಸ್ವಾಮಿ, ಮಂಜುನಾಥ್, ಸತೀಶ್, ಗಿರೀಶ್ ಹಾಗೂ ಪುಟ್ಟಸ್ವಾಮಿ ಎಂಬ ಆರು ಜನರಿಗೆ ದಂಡ ವಿಧಿಸಿ, ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಹಾಗೂ ಆಲ್ದೂರು ಪೊಲೀಸರಿಗೂ ದೂರು ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಎಸ್ಸಿ-ಎಸ್ಟಿ ದೌರ್ಜನ್ಯ ಸಮಿತಿ ಸಭೆ ದಿನ ಪತ್ನಿಗೆ ಹಾರ್ಟ್ ಆಪರೇಷನ್ ಆಗಿದ್ದ ಕಾರಣ ಹೋಗಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಭೈರಪ್ಪ ಬೇಡಿಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ತಿಂಗಳಲ್ಲಿ 70 ಸಲ ನನ್ನ ಲೊಕೇಶನ್‌ ತೆಗೆಸುತ್ತಾರೆ: ಎಸ್‌ಪಿ ಮುಂದೆ ರಾಯಚೂರು ಬಿಜೆಪಿ ಶಾಸಕ ಅಳಲು

  • ಸಿಎಂ ತವರು ಕ್ಷೇತ್ರದಲ್ಲೇ ದಲಿತ ಕುಟುಂಬಕ್ಕೆ 4 ವರ್ಷದಿಂದ ದಲಿತರಿಂದಲೇ ಬಹಿಷ್ಕಾರ

    ಸಿಎಂ ತವರು ಕ್ಷೇತ್ರದಲ್ಲೇ ದಲಿತ ಕುಟುಂಬಕ್ಕೆ 4 ವರ್ಷದಿಂದ ದಲಿತರಿಂದಲೇ ಬಹಿಷ್ಕಾರ

    – ದಂಡ ಕಟ್ಟಲು ಸಾಧ್ಯವಿಲ್ಲ ಎಂದಿದ್ದಕ್ಕೆ ಬಹಿಷ್ಕಾರ

    ಮೈಸೂರು: ದಲಿತರಿಗೆ (Dalits) ಅನ್ಯ ಕೋಮಿನ ಜನ ಬಹಿಷ್ಕಾರ ಹಾಕಿದ ಅನಿಷ್ಟ ಘಟನೆಗಳನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಊರಿನಲ್ಲಿ ದಲಿತರ ಮಾದಿಗ ಸಮುದಾಯದ ಕುಟುಂಬಕ್ಕೆ ಅದೇ ಮಾದಿಗ ಸಮುದಾಯದವರು ಸೇರಿ ನಾಲ್ಕು ವರ್ಷದಿಂದ ಬಹಿಷ್ಕಾರ (Boycott) ಹಾಕಿದ್ದಾರೆ. ಈ ಘಟನೆ ಸಿಎಂ ಹುಟ್ಟೂರು ಸಿದ್ದರಾಮನ ಹುಂಡಿ ಗ್ರಾಮದಿಂದ ಕೂಗಳತೆ ದೂರದಲ್ಲಿನ ಶ್ರೀನಿವಾಸಪುರದಲ್ಲಿ (Srinivaspur) ನಡೆದಿದೆ.

    ಶ್ರೀನಿವಾಸಪುರ ಗ್ರಾಮದಲ್ಲಿ ಇರುವುದೆಲ್ಲಾ ಮಾದಿಗ ಸಮುದಾಯದ ಜನ. ಸುರೇಶ್ ಕುಟುಂಬಕ್ಕೆ ಅವರದೇ ಮಾದಿಗ ಸಮುದಾಯದ ಜನರು ನಾಲ್ಕು ವರ್ಷದಿಂದ ಬಹಿಷ್ಕಾರ ಹಾಕಿದ್ದಾರೆ. ಗ್ರಾಮದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಸುರೇಶ್‌ಗೆ ಗ್ರಾಮದ ಹಿರಿಯರು 16,000 ರೂ. ದಂಡ ಹಾಕಿದ್ದರು. ದಂಡ ಕಟ್ಟಲು ಶಕ್ತಿ ಇಲ್ಲದ ಸುರೇಶ್ ದಂಡ ಕಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ. ಇಷ್ಟಕ್ಕೇ ಈ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಇದನ್ನೂ ಓದಿ: ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಊರಿನ ದೇವಸ್ಥಾನಕ್ಕೆ ಈ ಕುಟುಂಬಕ್ಕೆ ಪ್ರವೇಶವಿಲ್ಲ. ಊರ ದೇವರ ಮೆರವಣಿಗೆ ವೇಳೆ ದೇವರ ಉತ್ಸವ ಇವರ ಮನೆ ಮುಂದೆ ನಿಲ್ಲುವಂತಿಲ್ಲ. ಗ್ರಾಮದಲ್ಲಿ ಯಾರೂ ಈ ಕುಟುಂಬದವರನ್ನು ಮಾತನಾಡಿಸುವಂತಿಲ್ಲ. ಕೂಲಿಗೆ ಕರೆಯುವಂತಿಲ್ಲ. ಮನೆಯಲ್ಲಿ ಯಾರಾದರೂ ಸತ್ತರೆ ಹೆಣ ಹೊರಲು ಯಾರೂ ಹೋಗುವಂತಿಲ್ಲ ಎಂದು ನಿಯಮ ಜಾರಿ ಮಾಡಿ ಬಹಿಷ್ಕಾರ ಹಾಕಿದ್ದಾರೆ. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?

  • ಸಾಯಿಪಲ್ಲವಿ ಬೈಕಾಟ್: ಬಾಲಿವುಡ್ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್

    ಸಾಯಿಪಲ್ಲವಿ ಬೈಕಾಟ್: ಬಾಲಿವುಡ್ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ (Sai Pallavi) ಅವರು ಸೀತಾ ಪಾತ್ರ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಸಾಕಷ್ಟು ನೆಟ್ಟಿಗರು ವಿರೋಧ ವ್ಯಕ್ತ ಪಡಿಸಿದ್ದರು. ಇದೊಂದು ಬಾಲಿವುಡ್ ಮಾಡುತ್ತಿರುವ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್. ದಕ್ಷಿಣ ಹುಡುಗಿಯರನ್ನು ಬಾಲಿವುಡ್ ಬಿಟ್ಟುಕೊಳ್ಳುವುದಿಲ್ಲ. ಹಾಗಾಗಿ ಬೈಕಾಟ್ (Boycott) ಅಂತಿದ್ದಾರೆ ಎನ್ನುವ ಸಂದೇಶ ಹರಿದಾಡುತ್ತಿದೆ.

    ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದಾಗ ಹಿಂದೂ ವಿರೋಧಿ ಹೇಳಿಕೆಯನ್ನು ಸಾಯಿ ಪಲ್ಲವಿ ನೀಡಿದ್ದರು. ಈ ಕಾರಣದಿಂದಾಗಿ ಭಾರೀ ವಿರೋಧವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗುತ್ತಿದೆ. ಇದನ್ನು ಬಾಲಿವುಡ್ ಮೇಲೆ ಎತ್ತಿ ಹಾಕುವಂತಹ ಪ್ರಯತ್ನವನ್ನು ನಟಿಯ ಅಭಿಮಾನಿಗಳು ಮಾಡುತ್ತಿದ್ದಾರೆ.

    ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

     

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

  • ಮೊನ್ನೆ ಸತ್ತಿದ್ದ ಪೂನಂ ಪಾಂಡೆ ನಿನ್ನೆ ಜೀವಂತ – ನಟಿ ವಿರುದ್ಧ ಕೇಸ್‌ ದಾಖಲಿಸಲು ಸೂಚನೆ

    ಮೊನ್ನೆ ಸತ್ತಿದ್ದ ಪೂನಂ ಪಾಂಡೆ ನಿನ್ನೆ ಜೀವಂತ – ನಟಿ ವಿರುದ್ಧ ಕೇಸ್‌ ದಾಖಲಿಸಲು ಸೂಚನೆ

    ಮುಂಬೈ: ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

    ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್‌ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ನಾನು ಬದುಕಿದ್ದೇನೆ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ

    ಏನಿದು ಗಿಮಿಕ್‌ ರಾಣಿಯ ಕಾಂಟ್ರವರ್ಸಿ?
    ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ನಟಿಯ ಮ್ಯಾನೇಜರ್ ಪೂನಂ ಅವರ ಅಧಿಕೃತ ಇನ್‌ಸ್ಟಾ ಪೇಜ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಸುದ್ದಿ ಓದಿ ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.

    ಶನಿವಾರ ಬೆಳಗ್ಗೆ ಅದೇ ಇನ್ಸ್ಟಾ ಪೇಜ್‌ನಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ್ದ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಕ್ಷಮೆಯನ್ನೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಪೂನಂ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ: ಭುಗಿಲೆದ್ದ ಜನಾಕ್ರೋಶ

    ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಆತಂಕಕ್ಕೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತೆಗೆದುಕೊಳ್ಳಿ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಡ್ರೋನ್ ‍ಪ್ರತಾಪ್: ದೂರು ದಾಖಲು

  • ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಾಟ್‌ ಪಾಂಡೆ’ ಟ್ರೆಂಡ್ ಶುರು

    ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಾಟ್‌ ಪಾಂಡೆ’ ಟ್ರೆಂಡ್ ಶುರು

    ರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ.

    ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ (Death) ಎಂದು ಈ ನಟಿಯ ಮ್ಯಾನೇಜರ್ ನಿನ್ನೆಯಷ್ಟೇ ಪೂನಂ ಅವರ ಅಧಿಕೃತ ಇನ್ಸ್ಟಾ ಪೇಜ್‌ನಲ್ಲಿ ಹಾಕಲಾಗಿತ್ತು. ಈ ಸುದ್ದಿ ಓದಿ ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.

    ಇಂದು ಬೆಳಗ್ಗೆ ಅದೇ ಇನ್ಸ್ಟಾ ಪೇಜ್‌ನಲ್ಲಿ ವಿಡಿಯೋ ಅಪ್‌ಲೋಡ್ ಮಾಡಿರುವ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಐಯಾಮ್ ಸಾರಿ ಎಂದೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ.

    ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಶಾಕ್‌ಗೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ ಅನೇಕರು.

     

    ಕ್ಯಾನ್ಸರ್ ಬಗ್ಗೆ  ಜಾಗೃತಿಯನ್ನು ಅನೇಕ ಸಲಬ್ರಿಟಿಗಳು ಮೂಡಿಸ್ತಾರೆ. ಆದ್ರೇ ಈ ರೀತಿ ಸಾವಿನ ಸುಳ್ಳು ಸುದ್ದಿ ಹರಡಿಸಿ ಜಾಗೃತಿ ಮೂಡಿಸೋದು ಅಲ್ಲ. ಜಾಗೃತಿ ಮೂಡಿಸೋಕೆ ನಾನಾ ದಾರಿಗಳಿವೆ. ಆದರೆ, ಈ ರೀತಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ.

  • ವಿಜಯ್ ನಟನೆಯ ‘ಲಿಯೋ’ ಚಿತ್ರಕ್ಕೆ ಕೇರಳದಲ್ಲಿ ಬೈಕಾಟ್

    ವಿಜಯ್ ನಟನೆಯ ‘ಲಿಯೋ’ ಚಿತ್ರಕ್ಕೆ ಕೇರಳದಲ್ಲಿ ಬೈಕಾಟ್

    ಮಿಳಿನ ಖ್ಯಾತ ನಟ ದಳಪತಿ ವಿಜಯ್  (Vijay) ನಟನೆಯ, ಬಹುನಿರೀಕ್ಷಿತ ‘ಲಿಯೋ’ (Leo) ಸಿನಿಮಾವನ್ನು ಬೈಕಾಟ್ (Boycott) ಮಾಡಬೇಕು ಎನ್ನುವ ಕೂಗು ಕೇರಳದಲ್ಲಿ (Kerala) ಕೇಳಿ ಬರುತ್ತಿದೆ. ಲಿಯೋ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಬೇರೆ ಮಾಡಲಾಗುತ್ತಿದೆ. ಹೀಗಾಗಿ ಸಹಜವಾಗಿಯೇ ನಿರ್ಮಾಪಕರಿಗೆ ಆತಂಕ ಎದುರಾಗಿದೆ.

    ತಮಿಳು ನಟ ವಿಜಯ್ ಮತ್ತು ಮಲಯಾಳಂ ನಟ ಮೋಹನ್ ಲಾಲ್ (Mohanlal) ಅಭಿಮಾನಿಗಳು ಯಾವಾಗಲೂ ಕಿತ್ತಾಡುತ್ತಿರುತ್ತಾರೆ. ಈ ಜೋಡಿ ನಟನೆಯ ‘ಜಿಲ್ಲಾ’ ಸಿನಿಮಾದ ಸಂದರ್ಭದಲ್ಲಿ ವಿಜಯ್ ಅಭಿಮಾನಿಯೊಬ್ಬ ಮೋಹನ್ ಲಾಲ್ ಅವರಿಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದ್ದ, ಅಲ್ಲಿಂದ ಈ ಇಬ್ಬರ ಫ್ಯಾನ್ಸ್ ವಾರ್ ಶುರುವಾಗಿತ್ತು. ವಿಜಯ್ ಸಿನಿಮಾ ರಿಲೀಸ್ ಗೆ ಬಂದಾಗೆಲ್ಲ  ಬೈಕಾಟ್ ಕೂಗು ಕೇಳಿ ಬರುತ್ತದೆ.

    ‘ಲಿಯೋ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ, ಚಿತ್ರವನ್ನು ನಿರ್ಮಿಸುತ್ತಿರುವ 7 ಸ್ಕ್ರೀನ್‍ ಸ್ಟುಡಿಯೋ ಸಂಸ್ಥೆಯು, ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ ಮಾಡಿದೆ.

    ತಮಿಳಿನ ಜನಪ್ರಿಯ ನಿರ್ದೇಶಕರಾದ ಲೋಕೇಶ್‍ ಕನಕರಾಜ್‍ ನಿರ್ದೇಶಿಸಿರುವ ‘ಲಿಯೋ’ ಚಿತ್ರದಲ್ಲಿ ‘ಇಳಯದಳಪತಿ’ ವಿಜಯ್‍, ತ್ರಿಷಾ, ಸಂಜಯ್‍ ದತ್‍, ಅರ್ಜುನ್‍ ಸರ್ಜಾ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಜೊತೆ ಸಂಪರ್ಕದಲ್ಲಿದ್ದೇನೆ, ಆಕೆಯ ಸಕ್ಸಸ್ ಬಗ್ಗೆ ಖುಷಿಯಿದೆ- ರಕ್ಷಿತ್ ಶೆಟ್ಟಿ

    ‘ಲಿಯೋ’ ಚಿತ್ರವು ಒಂದು ಅದ್ಭುತ ಅನುಭವ ನೀಡುವ ಚಿತ್ರವಾಗಿ ರೂಪುಗೊಂಡಿದ್ದು, ಇದರಲ್ಲಿ ಆಕ್ಷನ್‍, ಡ್ರಾಮಾ, ಎಮೋಷನ್‍ ಸೇರಿದಂತೆ ಎಲ್ಲಾ ಭಾಷೆಯ ಮತ್ತು ಪ್ರದೇಶದ ಜನರನ್ನು ಆಕರ್ಷಿಸುವಂತಹ ಅಂಶಗಳಿವೆ.

     

    ಇನ್ನು, ಚಿತ್ರದ ಕರ್ನಾಟಕ ವಿತರಣೆಯ ಹಕ್ಕುಗಳನ್ನು ಸ್ವಾಗತ್‍ ಎಂಟರ್ ಪ್ರೈಸಸ್ ಸಂಸ್ಥೆಯು ತನ್ನದಾಗಿಸಿಕೊಂಡಿದ್ದು, ಚಿತ್ರವನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ. ‘ಲಿಯೋ’ ಚಿತ್ರವು ಅಕ್ಟೋಬರ್‍ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗದ ಕನಸಿನಕಟ್ಟೆ ಗ್ರಾಮದಲ್ಲಿ ಮತದಾನ ಸಂಪೂರ್ಣ ಬಹಿಷ್ಕಾರ

    ಶಿವಮೊಗ್ಗದ ಕನಸಿನಕಟ್ಟೆ ಗ್ರಾಮದಲ್ಲಿ ಮತದಾನ ಸಂಪೂರ್ಣ ಬಹಿಷ್ಕಾರ

    ಶಿವಮೊಗ್ಗ: ಗ್ರಾಮದಲ್ಲಿರುವ ಸಮಸ್ಯೆಗಳನ್ನು ಈಡೇರಿಸದ ಹಿನ್ನಲೆ ಗ್ರಾಮಸ್ಥರು ಮತದಾನ ಬಹಿಷ್ಕಾರ (Boycott) ಮಾಡಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಕನಸಿನಕಟ್ಟೆ (Kanasinakatte) ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿರುವ ಸ್ಮಶಾನ, ರಸ್ತೆ, ಬಸ್ ಸೌಕರ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಕಾರಣ ಮತದಾನ ಬಹಿಷ್ಕರಿಸಿದ್ದಾರೆ. ಬೆಳಗ್ಗೆಯಿಂದಲೂ ಚುನಾವಣಾ ಅಧಿಕಾರಿಗಳು ಮತದಾರು ಈಗ ಬರಬಹುದು ಎಂದು ಕಾದು ಕುಳಿತಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮತಕೇಂದ್ರದ ಮುಂದೆಯೇ ಕೇಸರಿ ಕಲಹ

    ಕನಸಿನಕಟ್ಟೆ ಗ್ರಾಮದಲ್ಲಿ ಒಟ್ಟು 1,081 ಮತಗಳಿದ್ದು, ಇಲ್ಲಿಯವರೆಗೆ ಕೇವಲ 3 ಮಂದಿ ಮಾತ್ರ ಮತದಾನ ಮಾಡಿದ್ದಾರೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಲಿವುಡ್ ನಲ್ಲಿ ಬಾಯ್ಕಾಟ್ ಕಾವು ಜೋರಾಗಿದೆ. ಇದಕ್ಕೆ ಬಾಲಿವುಡ್ ನಿರ್ಮಾಪಕರು ಬೇಸತ್ತು ಹೋಗಿದ್ದಾರೆ. ಬಾಯ್ಕಾಟ್ ಗಾಳಿ ಎಷ್ಟೇ ಜೋರಾದರೂ, ಪಠಾಣ್ ಸಿನಿಮಾವನ್ನು ಏನೂ ಮಾಡುವುದಕ್ಕೆ ಆಗಲಿಲ್ಲ. ಹಾಗಾಗಿ ಅಕ್ಷಯ್ ಕುಮಾರ್ ತಮ್ಮ ಮುಂದಿನ ಸಿನಿಮಾ ಸೆಲ್ಫಿಯಲ್ಲಿ ಬಾಯ್ಕಾಟ್ ಮಾಡುವವರನ್ನೇ ಟ್ರೋಲ್ ಮಾಡಿದ್ದಾರೆ. ಈ ಮೂಲಕ ಅಕ್ಷಯ್ ಹೊಸದೊಂದು ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಡನ್ನಾಗಿ ಶಾರುಖ್ ಪರ ಅಕ್ಷಯ್ ನಿಂತಿದ್ದು ಅಚ್ಚರಿಯನ್ನೂ ಮೂಡಿಸಿದೆ.

    ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2′ ನಾಯಕಿ ಏನಂದ್ರು ಗೊತ್ತಾ?

    ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಬಾಯ್ಕಾಟ್ ಗ್ಯಾಂಗ್ ಬಗ್ಗೆ ಅನುಮಾನವಿದೆ :  ವಿವೇಕ್ ಅಗ್ನಿಹೋತ್ರಿ

    ‘ಪಠಾಣ್’ ಬಾಯ್ಕಾಟ್ ಗ್ಯಾಂಗ್ ಬಗ್ಗೆ ಅನುಮಾನವಿದೆ : ವಿವೇಕ್ ಅಗ್ನಿಹೋತ್ರಿ

    ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ (Boycott) ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ.

    ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

    ‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k