Tag: boys

  • ಯುಗಾದಿ ಹಬ್ಬದ ದಿನವೇ ದುರಂತ – ನದಿಗೆ ಈಜಲು ಹೋಗಿದ್ದ 3 ಬಾಲಕರು ನೀರುಪಾಲು

    ಯುಗಾದಿ ಹಬ್ಬದ ದಿನವೇ ದುರಂತ – ನದಿಗೆ ಈಜಲು ಹೋಗಿದ್ದ 3 ಬಾಲಕರು ನೀರುಪಾಲು

    ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ.

    ಸೀತಿಮನಿ ಗ್ರಾಮದ ಬಳಿ ಇರುವ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದ್ದು, ಸೋಮಶೇಖರ್ ದೇವರಮನಿ (15), ಪರನಗೌಡ ಬೀಳಗಿ (17), ಮಲ್ಲಪ್ಪ ಬಗಲಿ (16) ಮೃತಪಟ್ಟಿದ್ದಾರೆ.

    ಬಾಲಕ ಸೋಮಶೇಖರ್‌ನ ಮೃತದೇಹ ಪತ್ತೆಯಾಗಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದಿಂದ ಉಳಿದ ಬಾಲಕರಿಗಾಗಿ ಹುಡುಕಾಟ ನಡೆದಿದೆ.

    ಬಾಲಕರು ಬಾಗಲಕೋಟೆ ಇಲ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಯುಗಾದಿ ಪಾಡ್ಯದ ದಿನವೇ ಸೂತಕದ ಛಾಯೆ ಆವರಿಸಿದೆ.

  • ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

    ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

    ಮಂಡ್ಯ: ಈಜಲೆಂದು (Swim) ಕೆರೆಗೆ ತೆರಳಿದ್ದ ಇಬ್ಬರು ಬಾಲಕರು ಈಜು ಬಾರದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶಂಕರಪುರ ಗ್ರಾಮದ ಸೋಮು (14) ಹಾಗೂ ಮುತ್ತುರಾಜು (17) ಮೃತ ಬಾಲಕರು. ಕೆರೆಯಲ್ಲಿ ಈಜು ಹೊಡೆಯಲೆಂದು ಐವರು ಸ್ನೇಹಿತರು ಕೆರೆಗೆ ತೆರಳಿದ್ದರು. ಈ ವೇಳೆ ಈಜು ಬಾರದೇ ಸೋಮು ಹಾಗೂ ಮುತ್ತುರಾಜು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿದ ಇಬ್ಬರ ಪೈಕಿ ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಂಡೂರು ಬಿಜೆಪಿಯಲ್ಲಿ ಬಂಡಾಯದ ಹೊಗೆ – ಸಂಧಾನಕ್ಕೂ ಬಗ್ಗದ ಟಿಕೆಟ್ ವಂಚಿತ ದಿವಾಕರ್

    ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಭಾನುವಾರ ಸಂಜೆ ಘಟನೆ ನಡೆದಿದೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರೀ ಮಳೆ; ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ

  • ಚೀನಾದಲ್ಲಿ ʼ996 ವರ್ಕ್ ಕಲ್ಚರ್ʼ ವಿರುದ್ಧ ತಿರುಗಿ ಬಿದ್ದ ಉದ್ಯೋಗಿಗಳು- ಏನಿದು ಸಂಸ್ಕೃತಿ?

    ಚೀನಾದಲ್ಲಿ ʼ996 ವರ್ಕ್ ಕಲ್ಚರ್ʼ ವಿರುದ್ಧ ತಿರುಗಿ ಬಿದ್ದ ಉದ್ಯೋಗಿಗಳು- ಏನಿದು ಸಂಸ್ಕೃತಿ?

    – ಇದರಿಂದ ಆಗುವ ಅನಾನುಕೂಲಗಳು ಯಾವುವು?

    ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಅಧ್ಯಯನ ಅಥವಾ ಓದು ಮುಗಿಸಿದ ಬಳಿಕ ಉತ್ತಮವಾದ ಉದ್ಯೋಗ ಪಡೆಯಲು ಬಯಸುತ್ತಾನೆ. ಆರಂಭದಲ್ಲಿ ಕೆಲವೊಮ್ಮೆ ನಾವು ಇಷ್ಟಪಡುವಂತಹ ಕೆಲಸ ದಕ್ಕುವುದಿಲ್ಲ. ಒಂದು ವೇಳೆ ಸಿಕ್ಕರೂ ನಿಜವಾದ ಸವಾಲು ಆನಂತರ ಆರಂಭವಾಗುತ್ತದೆ. ಇಂತಹ ಸವಾಲುಗಳು ಚೀನಾದಲ್ಲಿ ಸಾಮಾನ್ಯವಾಗಿದ್ದು, ‘996 ವರ್ಕ್ ಕಲ್ಚರ್’ (996 Work Culture) ಎಂಬ ಗಲಾಟೆಯೇ ಎದ್ದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕರಿಗೆ ಈ ರೀತಿಯ ಕೆಲಸದ ಸಂಸ್ಕೃತಿಯ ಬಗ್ಗೆ ತಿಳಿದಿರುವುದಿಲ್ಲ. ಆದರೆ ಚೀನಾದಲ್ಲಿ ಈ ಕೆಲಸ ಸಂಸ್ಕೃತಿಯ ಇದೀಗ ದೊಡ್ಡ ಅಭಿಯಾನವೇ ಆರಂಭವಾಗಿದೆ. ‘996 ಕೆಲಸದ ಸಂಸ್ಕೃತಿ’ ವಿರುದ್ಧದ ಅಭಿಯಾನದಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಿಗಳಳು ಸೇರಿದ್ದಾರೆ. ಹಾಗಾದರೆ ಚೀನಾದ ಉದ್ಯೋಗಿಗಳ ಕಣ್ಣು ಕೆಂಪಾಗಿಸಿದ ಈ ‘996 ಕೆಲಸದ ಸಂಸ್ಕೃತಿ’ ಅಂದ್ರೆ ಏನು ಎಂಬುದನ್ನು ನೋಡೋಣ.

    ‘996 ವರ್ಕ್ ಕಲ್ಚರ್’ ಎಂದರೇನು?: ವಾಸ್ತವವಾಗಿ, ‘996’ ಕೆಲಸದ ಸಂಸ್ಕೃತಿಯು ಚೀನಾದ ಖಾಸಗಿ ಕಂಪನಿಗಳಲ್ಲಿ, ವಿಶೇಷವಾಗಿ ಟೆಕ್ ಉದ್ಯಮದಲ್ಲಿ ಪ್ರಚಲಿತವಾಗಿದೆ. ಇದರ ಅಡಿಯಲ್ಲಿ ನೌಕರರು ವಾರದಲ್ಲಿ 6 ದಿನ, ಪ್ರತಿ ದಿನ 12 ಗಂಟೆ ಕೆಲಸ ಮಾಡಬೇಕು. ಈ ಕೆಲಸದ ಸಂಸ್ಕೃತಿಯನ್ನು ಚೀನಾದಲ್ಲಿ ಬಹಳ ಹಿಂದಿನಿಂದಲೂ ವಿರೋಧಿಸಲಾಗುತ್ತಿದೆ. ಆದರೆ ಖಾಸಗಿ ಕಂಪನಿಗಳು ಉದ್ಯೋಗಿಗಳ ಶೋಷಣೆಗೆ ಹಲವು ಬಾರಿ ವರದಿಯಾಗಿದೆ. ಈ ಕಂಪನಿಗಳು ಉದ್ಯೋಗಿಗಳಿಗೆ ವಾರದಲ್ಲಿ ಒಂದು ರಜೆಯನ್ನು ಮಾತ್ರ ನೀಡುತ್ತವೆ. ಇದು ‘996 ವರ್ಕ್ ಕಲ್ಚರ್’ ಆಗಿದ್ದು, ಇದರಿಂದ ಚೀನಾದಲ್ಲಿ ಉದ್ಯೋಗಿಗಳ ಆಕ್ರೋಶ ಹೆಚ್ಚಾಗುತ್ತಿದೆ. ಇದರ ವಿರುದ್ಧ ಈಗ ಧ್ವನಿ ಎತ್ತುತ್ತಿದ್ದು, ‘ವರ್ಕರ್ ಲೈವ್ಸ್ ಮ್ಯಾಟರ್’ ಎಂಬ ಆನ್‌ಲೈನ್ ಅಭಿಯಾನವನ್ನು ನಡೆಸಲಾಗುತ್ತಿದೆ.

    12 ಗಂಟೆ ಕೆಲಸ: ಚೀನಾದಲ್ಲಿ ಕೆಲಸದ ಅವಧಿಯನ್ನು ‘996’ ಎಂದು ಏಕೆ ಕರೆಯಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಏಕೆಂದರೆ ನೌಕರರು ವಾರದಲ್ಲಿ 6 ದಿನ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಕೆಲಸ ಮಾಡುತ್ತಾರೆ. ‘996 ಕೆಲಸದ ಸಂಸ್ಕೃತಿ’ ವಿರುದ್ಧ ಆರಂಭಿಸಿರುವ ಅಭಿಯಾನದಲ್ಲಿ ಉದ್ಯೋಗಿಗಳು ತಮ್ಮ ಕೆಲಸದ ಸಮಯವನ್ನು ಆನ್‌ಲೈನ್ ಸ್ಪ್ರೆಡ್‌ಶೀಟ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಂದಹಾಗೆ ‘996’ ಕಚೇರಿ ಸಂಸ್ಕೃತಿಯ ವಿಷಯವು ಚೀನಾದಲ್ಲಿ ವರ್ಷಗಳಿಂದ ವಿವಾದಕ್ಕೀಡಾಗಿದೆ. ಖಾಸಗಿ ಸಂಸ್ಥೆಗಳಲ್ಲಿ ನೌಕರರು ವಾರಕ್ಕೆ 72 ಗಂಟೆ ಕೆಲಸ ಮಾಡಬೇಕಾಗಿದ್ದು, ಇದನ್ನು ಇಲ್ಲಿನ ಜನ ಅಮಾನವೀಯ ಎನ್ನುತ್ತಿದ್ದಾರೆ.

    ಸಿಡಿದೆದ್ದ ಉದ್ಯೋಗಿಗಳು: 996 ವರ್ಕ್ ಮಾಡೆಲ್ ವಿರುದ್ಧ ಇದೀಗ ಚೀನಾ ಯುವ ಸಮೂಹ ವಿಭಿನ್ನವಾಗಿ ದನಿ ಎತ್ತಿದೆ. ‘996’ ಕೆಲಸದ ಸಂಸ್ಕೃತಿಯನ್ನು ವಿರೋಧಿಸಿ ಚೀನಾದ ಯುವಕರು ಮತ್ತು ಯುವತಿಯರು ಪಕ್ಷಿಗಳಂತೆ ವೇಷ ಧರಿಸಿ ವೀಡಿಯೊಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಯುವಕರು, ಯುವತಿಯರು ತಮ್ಮ ದೇಹವನ್ನು ದೊಡ್ಡ ಗಾತ್ರದ ಟೀ-ಶರ್ಟ್‍ಗಳಲ್ಲಿ ಹುದುಗಿಸಿಕೊಂಡು, ಕುರ್ಚಿ ಮೇಲೆ ಕುಳಿತುಕೊಂಡು ಹಕ್ಕಿಗಳಂತೆ ವರ್ತಿಸ್ತಿದ್ದಾರೆ. ತಮಗೂ ಪಕ್ಷಿಗಳ ರೀತಿಯ ಸ್ವಾತಂತ್ರ್ಯ ಬೇಕು ಎಂಬ ಕೂಗೆಬ್ಬಿಸ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇದಕ್ಕೆ ಸಂಬಂಧಿಸಿದ ದೃಶ್ಯಗಳು ವೈರಲ್ ಆಗಿವೆ. ಈ ಅಭಿಯಾನಕ್ಕೆ ಯುವ ಪೀಳಿಗೆ ಅಪಾರ ಬೆಂಬಲವನ್ನು ಪಡೆಯುತ್ತಿದ್ದಾರೆ.

    ಆದಾಗ್ಯೂ, ಚೀನಾದ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ದೇಶದ ‘996’ ಕೆಲಸದ ಸಂಸ್ಕೃತಿಯ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿರುವುದು ಇದೇ ಮೊದಲಲ್ಲ. 2022 ರಲ್ಲಿ, ‘ಬಾಯಿ ಲ್ಯಾನ್’ (ಕೊಳೆಯಲಿ) ಎಂಬ ಪದವು ವ್ಯಾಪಕವಾಗಿ ಬಳಸಲಾರಂಭಿಸಿತು. 2021 ರಲ್ಲಿ, ‘996’ ವಿರುದ್ಧ ಚೀನಾದಲ್ಲಿ ‘ವರ್ಕರ್ ಲೈವ್ಸ್ ಮ್ಯಾಟರ್’ ಎಂಬ ಆನ್‌ಲೈನ್ ಅಭಿಯಾನವನ್ನು ಪ್ರಾರಂಭಿಸಲಾಯಿತು. ಆದರೆ ಇದರ ನಂತರವೂ ಈ ರೀತಿಯ ಶೋಷಣೆ ನಡೆಯುತ್ತಿದೆ ಮತ್ತು ಚೀನಾದ ಜನರು ವಾರಕ್ಕೆ 72 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದೆ.

    ಕೇವಲ 8 ಗಂಟೆ ಕೆಲಸ ಮಾಡಲು ಕಾನೂನು: ಚೀನಾ ಸರ್ಕಾರ ಕೆಲಸಕ್ಕೆ ಸಂಬಂಧಿಸಿದಂತೆ ಕಾನೂನನ್ನು ಮಾಡಿದೆ. ಅದರ ಪ್ರಕಾರ, ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಾರದಲ್ಲಿ ಗರಿಷ್ಠ 44 ಗಂಟೆಗಳ ಕಾಲ ಮಾತ್ರ ಕೆಲಸ ಮಾಡಬಹುದು. ಆದರೆ ಇದಾದ ನಂತರವೂ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಓವರ್‌ಟೈಮ್ ಹೆಸರಿನಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡುವಂತೆ ಮಾಡುತ್ತವೆ. ಈ ಬಗ್ಗೆ ಚೀನಾ ಸರ್ಕಾರ ಹಲವಾರು ಬಾರಿ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದರೂ ಸಹ ನೌಕರರನ್ನು ನಿರಂತರವಾಗಿ ಶೋಷಣೆ ಮಾಡಲಾಗುತ್ತಿದೆ.

    ‘996’ ಅನ್ನು ಬೆಂಬಲಿಸಿದ್ದ ಜಾಕ್‌ ಮಾ: ಒಂದು ಸಮಯದಲ್ಲಿ ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ಸಹ ‘996’ ಕೆಲಸದ ಸಂಸ್ಕೃತಿಯನ್ನು ಬೆಂಬಲಿಸಿದ್ದರು. ಆಗ ಜಾಕ್ ಮಾ ಅವರು 996 ಕೆಲಸದ ಸಂಸ್ಕೃತಿ ವರದಾನಕ್ಕಿಂತ ಕಡಿಮೆಯಿಲ್ಲ ಮತ್ತು ಕೇವಲ 8 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಅಲಿಬಾಬಾದಲ್ಲಿ ಸ್ಥಾನವಿಲ್ಲ ಎಂದು ಹೇಳಿದ್ದರು.

    ಅನಾನುಕೂಲಗಳು ಯಾವುವು?: ದೀರ್ಘ ಪಾಳಿಯಲ್ಲಿ ಕೆಲಸ ಮಾಡುವುದರಿಂದ ಹಲವಾರು ಅನಾನುಕೂಲತೆಗಳಿವೆ. ಚೀನಾವನ್ನು ಹೊರತುಪಡಿಸಿ, ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ವಾರಕ್ಕೆ 55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವ ಜನರು ಸಾವಿನ ಅಪಾಯವನ್ನು ಹೊಂದಿರುತ್ತಾರೆ. ಪ್ರತಿ ವರ್ಷ 7 ಲಕ್ಷ 45 ಸಾವಿರ ಜನರು ಪಾರ್ಶ್ವವಾಯು ಅಥವಾ ಹೃದಯಾಘಾತದಿಂದ ಸಾಯುತ್ತಾರೆ. ಆಗ್ನೇಯ ಏಷ್ಯಾದಲ್ಲಿ ಈ ಅಂಕಿ ಅಂಶವು ಅತ್ಯಧಿಕವಾಗಿದೆ. ಅಲ್ಲಿ 55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಜನರು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಕಾಯಿಲೆಗಳಿಂದ ಸಾಯುತ್ತಾರೆ.

    ಕೆಲವು ದೇಶಗಳಲ್ಲಿ 4 ದಿನಗಳ ವಾರದ ಸಂಸ್ಕೃತಿಯನ್ನು ಸಹ ಅಳವಡಿಸಿಕೊಳ್ಳಲಾಗುತ್ತಿದೆ. ನೀವು ದಿನಕ್ಕೆ 7-8 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿದರೆ, ನಿಮ್ಮ ದೇಹಕ್ಕೆ ಸರಿಯಾದ ವಿಶ್ರಾಂತಿ ಸಿಗುವುದಿಲ್ಲ ಮತ್ತು ಇದು ಹೆಚ್ಚಿದ ಒತ್ತಡ, ಆಯಾಸ ಮತ್ತು ಕಿರಿಕಿರಿಯನ್ನು ಉಂಟುಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದರಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ನಿದ್ರಾಹೀನತೆ ಮುಂತಾದ ಹಲವು ಸಮಸ್ಯೆಗಳು ಎದುರಾಗುತ್ತವೆ.

    ಅಂಕಿ-ಅಂಶಗಳು: ಪಶ್ಚಿಮ ಪೆಸಿಫಿಕ್ ಮಹಾಸಾಗರದ ಪ್ರದೇಶಗಳಲ್ಲಿ ಈ ಅಂಕಿ ಅಂಶವು 2 ಲಕ್ಷಕ್ಕಿಂತ ಹೆಚ್ಚಿದ್ದರೆ, ಪೂರ್ವ ಮೆಡಿಟರೇನಿಯನ್ ಪ್ರದೇಶಗಳಲ್ಲಿ 77 ಸಾವಿರ, ಯುರೋಪ್ ನಲ್ಲಿ 57 ಸಾವಿರ, ಅಮೆರಿಕದಲ್ಲಿ 43 ಸಾವಿರ ಮತ್ತು ಆಫ್ರಿಕಾದಲ್ಲಿ 40 ಸಾವಿರ ಮಂದಿ ನಿಗದಿತ ಸಮಯಕ್ಕಿಂತ ಹೆಚ್ಚು ಗಂಟೆ ಕೆಲಸ ಮಾಡಿದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ಸುದೀರ್ಘ ಕೆಲಸದ ಅವಧಿಯಿಂದ ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಜನರು ತಮ್ಮ ಒತ್ತಡವನ್ನು ಕಡಿಮೆ ಮಾಡಲು ವ್ಯಾಯಾಮ ಮಾಡುವುದಿಲ್ಲ ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವುದಿಲ್ಲ. ಇದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ ಮತ್ತು ಅನಾರೋಗ್ಯದ ಸಂದರ್ಭದಲ್ಲಿ, ಅವರು ಸಾಕಷ್ಟು ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ.

    ಪ್ರಪಂಚದ ಹಲವು ದೇಶಗಳಲ್ಲಿ ಕೆಲಸದ ಸಮಯದ ಬಗ್ಗೆಯೂ ಬದಲಾವಣೆಗಳಾಗಿವೆ. ಜರ್ಮನಿಯಲ್ಲಿ ವಾರದಲ್ಲಿ 4 ದಿನಗಳ ಕೆಲಸ ಮತ್ತು 3 ದಿನಗಳ ವಿಶ್ರಾಂತಿಯ ಮಾದರಿಯನ್ನು ಪರಿಗಣಿಸಲಾಗುತ್ತಿದೆ. ಇದರಿಂದಾಗಿ ನೌಕರರು ವಾರಾಂತ್ಯದಲ್ಲಿ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಬಹುದಾಗಿದೆ. ಆದರೆ ಉದ್ಯೋಗಿಗಳನ್ನು ಹೆಚ್ಚು ಸಮಯ ಕೆಲಸ ಮಾಡುವಂತೆ ಒತ್ತಾಯಿಸುವ ಹಲವು ದೇಶಗಳಿವೆ. ಯುಎಇಯಲ್ಲಿನ ಉದ್ಯೋಗಿಗಳು ವಾರಕ್ಕೆ 52 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು. ಭಾರತದಲ್ಲಿ ನೌಕರರು ವಾರಕ್ಕೆ 45 ರಿಂದ 48 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಅಮೆರಿಕದಲ್ಲಿ ಜನರು 36 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಜರ್ಮನಿಯಲ್ಲಿನ ಉದ್ಯೋಗಿಗಳು ಪ್ರತಿ ವಾರ ಕೇವಲ 34 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ.

    ಭಾರತಕ್ಕೆ ಸಲಹೆ ನೀಡಿದ್ದ ನಾರಾಯಣಮೂರ್ತಿ: ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಕಳೆದ ವರ್ಷ ವಾರಕ್ಕೆ 70 ಗಂಟೆಗಳ ಕೆಲಸವನ್ನು ಪ್ರತಿಪಾದಿಸಿದ್ದರು. ಅಲ್ಲದೇ ಯುವಕರಿಗೆ ಹೆಚ್ಚು ಕೆಲಸ ಮಾಡಲು ಸಲಹೆ ನೀಡಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು. 2023 ರ ಅಕ್ಟೋಬರ್ ನಲ್ಲಿ ನಾರಾಯಣ ಮೂರ್ತಿ ಅವರು ಪಾಡ್‌ಕ್ಯಾಸ್ಟ್‌ನಲ್ಲಿ ಭಾರತದ ಕೆಲಸದ ಉತ್ಪಾದಕತೆ ವಿಶ್ವದಲ್ಲೇ ಅತ್ಯಂತ ಕಡಿಮೆ ಎಂದು ಹೇಳಿದಾಗ ಇದ್ದಕ್ಕಿದ್ದಂತೆ ಬೆಳಕಿಗೆ ಬಂದರು. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು, ಭಾರತೀಯ ಯುವಕರು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು.

  • ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ – ತಲೆಗೆ ಜಜ್ಜಿ ಕತ್ತು ಸೀಳಿದ್ರು

    ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ – ತಲೆಗೆ ಜಜ್ಜಿ ಕತ್ತು ಸೀಳಿದ್ರು

    ಭೋಪಾಲ್: 12 ವರ್ಷದ ಬಾಲಕನನ್ನು (Boy) ಆತನ ಮೂವರು ಗೆಳೆಯರೇ ಸೈಕಲ್ ಸರಪಳಿಯಿಂದ ಕತ್ತು ಹಿಸುಕಿ, ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ (Murder) ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ (Madhya Pradesh) ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಭಾನುವಾರ ನಡೆದಿದ್ದು, ಸಿಯೋನಿ ಸಮೀಪದ ಮಗರ್ಕಥಾ ಗ್ರಾಮದಲ್ಲಿ ನಡೆದಿದೆ. ಮೂವರು ಆರೋಪಿಗಳೂ ಅಪ್ರಾಪ್ತರಾಗಿದ್ದು (Minors) ಹತ್ಯೆ ನಡೆಸಿದ ಬಳಿಕ ಗೆಳೆಯನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಎಸೆದಿದ್ದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಆರೋಪಿ ಬಾಲಕರು ಕ್ರಮವಾಗಿ 16, 14 ಹಾಗೂ 11 ವರ್ಷ ವಯಸ್ಸಿನವರಾಗಿದ್ದಾರೆ. 16 ವರ್ಷದ ಆರೋಪಿ 12 ವರ್ಷದ ಬಾಲಕನ ಸಹೋದರಿಯೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ ಅವರಿಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.

    ವರದಿಗಳ ಪ್ರಕಾರ 16 ವರ್ಷದ ಆರೋಪಿ ಬಾಲಕ ತನ್ನ ಇನ್ನಿಬ್ಬರು ಸ್ನೇಹಿತರನ್ನು ಸೇರಿಸಿಕೊಂಡು ಸಂತ್ರಸ್ತ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದಿದ್ದಾರೆ. ಅಲ್ಲಿ ಅವರು ಬಾಲಕನಿಗೆ ಸೈಕಲ್ ಚೈನ್‌ನಿಂದ ಕತ್ತು ಹಿಸುಕಿದ್ದಾರೆ. ಆತ ನೋವಿನಿಂದ ಅಳಲು ಪ್ರಾರಂಭಿಸಿದಾಗ ದೊಡ್ಡ ಕಲ್ಲಿನಿಂದ ಆತನ ತಲೆಯನ್ನು ಚಚ್ಚಿದ್ದಾರೆ. ಬಳಿಕ ಹರಿತವಾದ ಚಾಕುವಿನಿಂದ ಆತನ ಗಂಟಲನ್ನು ಸೀಳಿದ್ದಾರೆ.

    ಬಳಿಕ ಬಾಲಕನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಮನೆಯ ಸಮೀಪ ಕಲ್ಲಿನ ರಾಶಿಯಲ್ಲಿ ಎಸೆದಿದ್ದಾರೆ. ಮಹಿಳೆಯೊಬ್ಬರು ರಕ್ತದ ಕಲೆಯುಳ್ಳ ಚೀಲವನ್ನು ಪತ್ತೆ ಮಾಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ಮೂವರು ಅಪ್ರಾಪ್ತ ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಬಾಲಾಪರಾಧಿಗಳ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಹಲ್ಲೆ ಆರೋಪಕ್ಕೆ ಟ್ವಿಸ್ಟ್ – ಉಲ್ಟಾ ಹೊಡೆದ ಆಟೋ ಚಾಲಕ

  • ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ದಾರುಣ ಸಾವು

    ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ದಾರುಣ ಸಾವು

    ರಾಮನಗರ: ಕೆರೆಗೆ ಮೀನು ಹಿಡಿಯಲು ಹೋಗಿದ್ದ ಮೂವರ ಪೈಕಿ ಇಬ್ಬರು ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ಹಾರೋಹಳ್ಳಿಯ (Harohalli) ಮಾರಸಂದ್ರ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ಬಾಲಕರನ್ನು ಪಟ್ಟಣದ ಸರ್ಕಲ್ ನಿವಾಸಿಗಳಾದ ಇಸ್ಮಾಯಿಲ್(13) ಮತ್ತು ಆಫ್ರಿದ್(12) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಮೀನು ಹಿಡಿಯುವ ಆಸೆಯಿಂದ ಪಟ್ಟಣದ ಮಸೀದಿ ಸರ್ಕಲ್ ನಿವಾಸಿಗಳಾದ ಮೂವರು ಬಾಲಕರು ಮಾರಸಂದ್ರ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಒಬ್ಬ ಬಾಲಕ ಕೆರೆಯಲ್ಲಿದ್ದ ಸತ್ತೆಗೆ ಸಿಲುಕಿ ಮುಳುಗುವುದನ್ನು ಕಂಡು ಮತ್ತೊಬ್ಬ ಬಾಲಕ ಆತನನ್ನು ರಕ್ಷಿಸಲು ತೆರಳಿದ್ದಾನೆ. ಇದನ್ನು ಕಂಡ ಇನ್ನೊಬ್ಬ ಬಾಲಕ ಭಯಗೊಂಡು ಓಡಿದ್ದಾನೆ. ಈ ವೇಳೆ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದ ಕೆಲವರು ರಕ್ಷಣೆಗಾಗಿ ಓಡೋಡಿ ಬಂದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕರಿಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ. ಇದನ್ನೂ ಓದಿ: ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು 

    ಈ ಸಂಬಂಧ ಸ್ಥಳೀಯರು ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿಗಳ ಸಹಾಯದಿಂದ ಬಾಲಕರಿಬ್ಬರ ಶವವನ್ನು ಹೊರತೆಗೆದಿದ್ದಾರೆ. ಮೃತ ಬಾಲಕರ ಪೋಷಕರು ಮೆಕ್ಕಾ ಮದೀನ ತೀರ್ಥಯಾತ್ರೆಗೆ ತೆರಳಿದ್ದು, ಸಾರ್ವಜನಿಕರು ಘಟನೆ ಕುರಿತು ಮರುಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 100 ವರ್ಷದ ಹಳೆಯ ಮರ ಶೆಡ್ ಮೇಲೆ ಬಿದ್ದು 7 ಮಂದಿ ದಾರುಣ ಸಾವು

  • ಗುಂಡಿಗೆ ಬಿದ್ದು ಬಾಲಕರಿಬ್ಬರು ಸಾವು

    ಗುಂಡಿಗೆ ಬಿದ್ದು ಬಾಲಕರಿಬ್ಬರು ಸಾವು

    ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಚರಂಡಿ ಹಾಗೂ ತಡೆಗೋಡೆ ಕಾಮಗಾರಿ ಹಿನ್ನೆಲೆಯಲ್ಲಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಇಬ್ಬರು ಬಾಲಕರು (Boys) ಸಾವನ್ನಪ್ಪಿದ್ದಾರೆ.

    ಒಂದೇ ಮನೆಯ ಅಣ್ಣ-ತಮ್ಮಂದಿರ ಮಕ್ಕಳಾದ ಅಜಯ್ (8) ಹಾಗೂ ಯಲ್ಲಾಲಿಂಗ (6) ಭಾನುವಾರ ಸಂಜೆ ವೇಳೆ ಆಟವಾಡಲು ಹೋದಾಗ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಚರಂಡಿ ಹಾಗೂ ತಡೆಗೋಡೆ ಕಾಮಗಾರಿ ಹಿನ್ನೆಲೆ ತೋಡಿದ್ದ ಗುಂಡಿಯನ್ನು ಎರಡ್ಮೂರು ತಿಂಗಳಾಗಿದ್ರೂ ಮುಚ್ಚಿರಲಿಲ್ಲ. ಕುಡಿಯುವ ನೀರಿನ ಪೈಪುಗಳು ಒಡೆದು ಪ್ರತಿದಿನ ಪೋಲಾಗುತ್ತಿದ್ದ ನೀರು (Water) ಗುಂಡಿಯಲ್ಲಿ ತುಂಬಿತ್ತು.

    ಶಾಲೆಯ ಪಕ್ಕದಲ್ಲೇ ಈ ಗುಂಡಿಯಿದ್ದು, ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ಗುಂಡಿ ಇರೋದನ್ನು ಗಮನಿಸದೇ ಕಾಲು ಜಾರಿ ಬಿದ್ದಿದ್ದಾರೆ. ಸುಮಾರು 32 ಅಡಿ ಉದ್ದ, 6 ಅಡಿ ಅಗಲದ ಗುಂಡಿಯಾಗಿದ್ದರಿಂದ ಬಾಲಕರು ಹೊರಬರಲು ಆಗದೇ ಜೀವ ತೊರೆದಿದ್ದಾರೆ. ಆಟವಾಡಲು ಹೋದ ಮಕ್ಕಳು ರಾತ್ರಿಯಾದ್ರೂ ಮನೆಗೆ ಬಾರದ ಹಿನ್ನೆಲೆ ಇಡೀ ಗ್ರಾಮಸ್ಥರು ಹುಟುಕಾಟ ನಡೆಸಿದ್ದಾರೆ. ಮಕ್ಕಳು ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ

    ಗ್ರಾಪಂ ಅಧಿಕಾರಿಗಳು, ಗುತ್ತಿಗೆದಾರರ ದಿವ್ಯ ನಿರ್ಲಕ್ಷ್ಯದಿಂದ ಒಂದೆಡೆ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಹಲವು ದಿನಗಳಾದರೂ ರಿಪೇರಿಯಾಗಿರಲಿಲ್ಲ. ಇನ್ನೊಂದೆಡೆ ಕಾಮಗಾರಿಯನ್ನೂ ಮಾಡದೇ ಚರಂಡಿಗಾಗಿ ತೋಡಿದ್ದ ಗುಂಡಿಯನ್ನು ತಿಂಗಳುಗಟ್ಟೆ ಹಾಗೆಯೆ ಬಿಟ್ಟಿದ್ದು ಈ ಅವಘಡಕ್ಕೆ ಕಾರಣವಾಗಿದೆ. ಹೀಗಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಬೆಂಗಳೂರು: ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು (Pigeon) ಹಿಡಿಯಲು ಹೋಗಿ ಇಬ್ಬರು ಮಕ್ಕಳಿಗೆ (Children) ಕರೆಂಟ್ ಶಾಕ್ (Electric Shock) ತಗುಲಿ ಸಾವು ಬದುಕಿನ ನಡುವೆ ಮಕ್ಕಳು ಹೋರಾಡುತ್ತಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

    ವಿಜಯನಾಂದನಗರದ ಚಂದ್ರು ಹಾಗೂ ಸುಪ್ರೀತ್ ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಮನೆ ಮಾಲೀಕರು ಮಹಡಿಯನ್ನು ಹತ್ತಬೇಡಿ ಎಂಬ ಎಚ್ಚರಿಕೆಯನ್ನು ನೀಡಿದ್ದರೂ ಕೂಡಾ ಮಕ್ಕಳು ಪಾರಿವಾಳದ ಆಸೆಗೆ ಮನೆ ಮೇಲೆ ಹತ್ತಿದ್ದಾರೆ. ಈ ವೇಳೆ ಮಕ್ಕಳು ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವೈರ್ ಅನ್ನು ಮುಟ್ಟಿದ್ದಾರೆ. ಈ ವೇಳೆ ಮಕ್ಕಳಿಗೆ ಕರೆಂಟ್ ಶಾಕ್ ತಗುಲಿದೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

    ಮಕ್ಕಳಿಗೆ ಕರೆಂಟ್ ಶಾಕ್ ತಗುಲುವ ವೇಳೆ ಅದರ ತೀವ್ರತೆ ಎಷ್ಟಿತ್ತು ಎಂದರೆ, ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳೆಲ್ಲವೂ ಬ್ಲಾಸ್ಟ್ ಆಗಿವೆ. ಇಬ್ಬರು ಬಾಲಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಬ್ಬರ ಸ್ಥಿತಿ ಗಂಭೀರವಾಗಿದೆ. ಸುಪ್ರೀತ್‌ಗೆ ಕರೆಂಟ್ ಶಾಕ್‌ನಿಂದಾಗಿ ದೇಹದಲ್ಲಿ ಶೇ.70 ರಷ್ಟು ಸುಟ್ಟ ಗಾಯಗಳಾಗಿವೆ. ಚಂದ್ರುಗೆ ಶೇ.90 ರಷ್ಟು ಗಾಯಗಳಾಗಿವೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    ಬಾಲಕರಿಬ್ಬರಿಗೂ ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಬಾಲಕರ ಪೋಷಕರು ತಾವು ಕೂಲಿ ಕೆಲಸಗಾರರು, ನಾವು ಬಡವರು. ನಮ್ಮ ಮಕ್ಕಳು ಉಳಿದರೆ ಸಾಕು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    ಗಾಂಧಿನಗರ: ಸುಮಾರು 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ತೂಗುಸೇತುವೆ (Morbi Bridge) ಅಲುಗಾಡಿಸಿದ್ದರಿಂದ ಅವಘಡ ಸಂಭವಿಸಿದೆ ಎಂದು ಘಟನೆಯಲ್ಲಿ ಬದುಕುಳಿದವರು ಆರೋಪಿಸಿದ್ದಾರೆ.

    ಭಾನುವಾರ ಸಂಜೆ 6:30ರ ಸುಮಾರಿಗೆ ಸೇತುವೆ ಕುಸಿದು 132 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೋರ್ಬಿ ಸೇತುವೆ ಕುಸಿತದಿಂದ ಗಾಯಗೊಂಡು ಬದುಕುಳಿದವರೆಲ್ಲರನ್ನು ಜಿಎಂಇಆರ್‌ಎಸ್ (GMERS) ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಹೇಗಾಯ್ತು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಜ್ಜಿಯ ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ: ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್

    ಸುಮಾರು 15-20 ಕಿಡಿಗೇಡಿಗಳು ಸೇತುವೆಯ ಹಗ್ಗಗಳನ್ನು ಉದ್ದೇಶಪೂರ್ವಕವಾಗಿ ಅಲುಗಾಡಿಸುತ್ತಿದ್ದರು. ಹೀಗಾಗಿ ಸೇತುವೆ ಕುಸಿಯುವ ಮುನ್ನ ಮೂರು ಬಾರಿ ಜೋರಾಗಿ ಶಬ್ದ ಕೇಳಿ ಬಂತು. ನಾನೂ ಕೆಳಗೆ ಬಿದ್ದೆ. ಆದರೆ ನಾನು ಬೀಳುವಾಗ ಸೇತುವೆಯ ಸುತ್ತಲೂ ಇದ್ದ ರೋಪ್ ಹಿಡಿದಿದ್ದೆ. ನನ್ನ ಜೊತೆಯಲ್ಲಿ ನನ್ನ ಸ್ನೇಹಿತನೂ ಇದ್ದ. ಸುಮಾರು ಏಳು ಜನ ರೋಪ್ ಅನ್ನು ಹಿಡಿದು ಮೇಲಕ್ಕೆ ಏರಲು ಆರಂಭಿಸಿದರು. ಘಟನೆ ವೇಳೆ ನನ್ನ ಕಾಲು ಮತ್ತು ಬೆನ್ನಿಗೆ ಗಾಯಗಳಾಗಿದ್ದು, ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅಶ್ವಿನ್ ಮೆಹ್ರಾ ಎಂಬವರು ಹೇಳಿದ್ದಾರೆ.

    ಅಹಮದಾಬಾದ್ (Ahlahabad) ನಿವಾಸಿ ವಿಜಯ್ ಗೋಸ್ವಾಮಿ ಮತ್ತು ಅವರ ಕುಟುಂಬಸ್ಥರು ಸಹ ತೂಗು ಸೇತುವೆಗೆ ಭೇಟಿ ನೀಡಿದ್ದರು. ಆದರೆ ಕೆಲವು ಯುವಕರು ಉದ್ದೇಶಪೂರ್ವಕವಾಗಿ ಸೇತುವೆಯನ್ನು ಅಲುಗಾಡಿಸಿದ್ದರಿಂದ ಅರ್ಧದಾರಿಯಲ್ಲೇ ಹಿಂತಿರುಗಿದರು. ಬ್ರಿಟಿಷರ ಕಾಲದ ಈ ಸೇತುವೆಯನ್ನು ನವೀಕರಣಗೊಳಿಸಿ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಾರ್ವಜನಿಕರಿಗಾಗಿ ಪುನಃ ತೆರೆಯಲಾಗಿತ್ತು. ಇದನ್ನೂ ಓದಿ: ಪೊಲೀಸರೇ ಪ್ಲೀಸ್ ನಮ್ಮನ್ನು ಕಳ್ಳರಿಂದ ಕಾಪಾಡಿ – ಕುರಿಗಳಿಂದ ವಿನೂತನ ಪ್ರತಿಭಟನೆ

    ಖಾಸಗಿ ಕಂಪನಿಯೊಂದು ಸೇತುವೆ ದುರಸ್ತಿ ಕಾರ್ಯ ನಡೆಸಿತ್ತು. ನವೀಕರಣ ಕಾಮಗಾರಿ ಮುಗಿದ ಬಳಿಕ ಸಾರ್ವಜನಿಕರು ಓಡಾಟಕ್ಕೆ ತೆರಯಲಾಗಿತ್ತು. ಆದರೆ ಸ್ಥಳೀಯ ಪುರಸಭೆ ನವೀಕರಣ ಕಾರ್ಯದ ನಂತರ ಯಾವುದೇ ಫಿಟ್‍ನೆಸ್ ಪ್ರಮಾಣಪತ್ರವನ್ನು ನೀಡಿರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆನ್ನಟ್ಟಿಕೊಂಡು ಬಂದ ಬೀದಿ ನಾಯಿಗಳು- ಬಾಲಕರು ಗ್ರೇಟ್ ಎಸ್ಕೇಪ್

    ಬೆನ್ನಟ್ಟಿಕೊಂಡು ಬಂದ ಬೀದಿ ನಾಯಿಗಳು- ಬಾಲಕರು ಗ್ರೇಟ್ ಎಸ್ಕೇಪ್

    ತಿರುವನಂತಪುರಂ: ಕೇರಳ (Kerala) ದಲ್ಲಿ ಶ್ವಾನಗಳ ಹಾವಳಿ ದಿನದಿಂದ ಹೆಚ್ಚಾಗುತ್ತಿದೆ. ಬೀದಿನಾಯಿಗಳ ಅಟ್ಟಹಾಸದಿಂದ ಕೆಲವರು ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಬೀದಿ ನಾಯಿ (Stray Dogs) ಗಳು ಇಬ್ಬರು ಬಾಲಕರನ್ನು ಅಟ್ಟಿಸಿಕೊಂಡು ಬಂದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ. ಇದನ್ನೂ ಓದಿ: 86 ವರ್ಷಗಳ ನಂತರ ಮತ್ತೆ ಕಾಂಗರೂ ದಾಳಿಗೆ ವ್ಯಕ್ತಿ ಬಲಿ

    ವೀಡಿಯೋದಲ್ಲೇನಿದೆ..?: 4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ ಬಾಲಕರು ಬಚಾವಾಗಿದ್ದನ್ನು ಗಮನಿಸಬಹುದಾಗಿದೆ.

    ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ (Supreme Court) ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆ.ಕೆ. ಮಹೇಶ್ವರಿ ಅವರನ್ನು ಒಳಗೊಂಡ ಪೀಠ ಬೀದಿ ನಾಯಿಗಳಿಗೆ ಆಹಾರ ಹಾಕಿದವರೇ ಅದರಿಂದ ಹಾನಿಯಾದವರಿಗೆ ಚಿಕಿತ್ಸೆ ವೆಚ್ಚವಬನ್ನು ಭರಿಸಬೇಕು ಎಂದು ಆದೇಶಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಹುಡುಗರ ಲೈಂಗಿಕ ಸಾಮರ್ಥ್ಯ ಎರಡೇ ನಿಮಿಷ, ಮ್ಯಾಗಿ ಹಾಗೆ ಮುಗಿದು ಹೋಗತ್ತೆ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ರೆಜಿನಾ

    ಹುಡುಗರ ಲೈಂಗಿಕ ಸಾಮರ್ಥ್ಯ ಎರಡೇ ನಿಮಿಷ, ಮ್ಯಾಗಿ ಹಾಗೆ ಮುಗಿದು ಹೋಗತ್ತೆ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ರೆಜಿನಾ

    ನ್ನಡದ ‘ಸೂರ್ಯಕಾಂತಿ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ರೆಜಿನಾ ಕಸೆಂದ್ರ (Regina Cassandra), ಹುಡುಗರ ಲೈಂಗಿಕ ಸಾಮರ್ಥ್ಯವನ್ನು ಎರಡೇ ಎರಡು ನಿಮಿಷದಲ್ಲಿ ಮುಗಿದು ಹೋಗುವ ಮ್ಯಾಗಿಗೆ ಹೋಲಿಸಿದ್ದಾರೆ. ಹುಡುಗರು ಮತ್ತು ಮ್ಯಾಗಿ ಎರಡೂ ಒಂದೇ, ಎರಡೇ ನಿಮಿಷದಲ್ಲಿ ಮುಗಿದು ಬಿಡುತ್ತೆ ಎಂದು ಜೋಕ್ ಮಾಡುವ ಮೂಲಕ ಟ್ರೋಲ್ ಆಗಿದ್ದಾರೆ. ಈ ಮಾತು ಪಡ್ಡೆಗಳನ್ನು ರೊಚ್ಚಿಗೇಳುವಂತೆ ಮಾಡಿದ್ದು, ರೆಜಿನಾ ಬಗ್ಗೆ ಸಲ್ಲದ ಕಾಮೆಂಟ್‍ಗಳನ್ನು ಬರೆಯುತ್ತಿದ್ದಾರೆ.

    ಸದ್ಯ ರೆಜಿನಾ ಶಾಕಿನಿ ಡಾಕಿನಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಹಾಗಾಗಿ ಕೋ ಸ್ಟಾರ್ ನಿವೇತಾ ಥಾಮಸ್ ಜೊತೆ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ ರೆಜಿನಾ ಹುಡುಗರ ಸೆಕ್ಸ್ (Sex) ಸಾಮರ್ಥ್ಯವನ್ನು ಅಳೆದಿದ್ದಾರೆ. ಅದು ಎರಡೇ ನಿಮಿಷದಲ್ಲಿ ಮುಗಿಯುವಂಥದ್ದು ಎಂದು ಹೇಳುವ ಮೂಲಕ ಇಡೀ ಸಂದರ್ಶನದ ಮೂಡ್ ಅನ್ನು ಮತ್ತೊಂದು ದಿಕ್ಕಿಗೆ ತಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

    ಸಂದರ್ಶನದಲ್ಲಿ ನಿರೂಪಕರು ಒಂದು ಜೋಕ್ ಹೇಳ್ತಾ, ಮ್ಯಾಗಿ ಎರಡೇ ನಿಮಷದಲ್ಲಿ ರೆಡಿಯಾದರೂ, ಹುಡುಗಿಯರ ಮೇಕಪ್ ಮಾತ್ರ ಬೇಗ ಆಗುವುದೇ ಇಲ್ಲ ಎಂದು ಹೇಳುತ್ತಾರೆ. ಮ್ಯಾಗಿ (Maggie) ಬಗ್ಗೆ ನನಗೂ ಒಂದು ಜೋಕ್ ಗೊತ್ತು ಎನ್ನುವ ರೆಜಿನಾ, ಮ್ಯಾಗಿ ಎರಡೇ ನಿಮಿಷದಲ್ಲಿ ಮುಗಿದು ಹೋಗತ್ತೆ, ಹಾಗೆ ಹುಡುಗರದ್ದು (Boys) ಕೂಡ ಎರಡೇ ನಿಮಿಷ ಎಂದು ಜೋಕ್ ಕಟ್ ಮಾಡುತ್ತಾರೆ. ಇದು ನಿರೂಪಕನಿಗೆ ಮೊದ ಮೊದಲು ಗೊತ್ತೇ ಆಗುವುದಿಲ್ಲ. ಅಷ್ಟಕ್ಕೆ ಸುಮ್ಮನಿರದ ರೆಜಿನಾ, ನಿಮಗೆ ಜೋಕ್ ಅರ್ಥ ಆಗಲಿಲ್ಲವಾ? ಅಂತಾರೆ. ತಡವಾಗಿ ಅರ್ಥ ಮಾಡಿಕೊಂಡ ನಿರೂಪಕ, ಅಯ್ಯ.. ಈ ವಿಷಯವೇ ಬೇಡ ಎಂದು ಬೇರೆ ಪ್ರಶ್ನೆ ಮಾಡುತ್ತಾನೆ.

    ರೆಜಿನಾ ಕನ್ನಡ ಸಿನಿಮಾ ರಂಗಕ್ಕೆ ಹೊಸಬರೇನೂ ಅಲ್ಲ. ಚೇತನ್ ನಟನೆಯ ‘ಸೂರ್ಯಕಾಂತಿ’ ಚಿತ್ರದಲ್ಲಿ ನಟಿಸಿದ್ದಾರೆ. ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಚೇತನ್ ಅವರಿಗೆ ಒಳ್ಳೆಯ ಹೆಸರು ತಂದು ಕೊಟ್ಟಿತ್ತು.

    Live Tv
    [brid partner=56869869 player=32851 video=960834 autoplay=true]