Tag: Brahmanya

  • ಬ್ರಾಹ್ಮಣ ಅಡುಗೆ ಭಟ್ಟ ಬಂದ್ರೆ ನಮಸ್ಕಾರ ಮಾಡ್ತಾರೆ, ಹಿಂದುಳಿದವನು ಶ್ರೀಮಂತನಾಗಿದ್ರೂ ಏನ್ಲಾ ಅಂತಾರೆ: ಸಿದ್ದು

    ಬ್ರಾಹ್ಮಣ ಅಡುಗೆ ಭಟ್ಟ ಬಂದ್ರೆ ನಮಸ್ಕಾರ ಮಾಡ್ತಾರೆ, ಹಿಂದುಳಿದವನು ಶ್ರೀಮಂತನಾಗಿದ್ರೂ ಏನ್ಲಾ ಅಂತಾರೆ: ಸಿದ್ದು

    ಬೆಂಗಳೂರು: ಒಬ್ಬ ಬ್ರಾಹ್ಮಣ ಅಡುಗೆ ಭಟ್ಟ ಬಂದರೆ ಎಲ್ಲರೂ ಬಗ್ಗಿ ನಮಸ್ಕಾರ ಮಾಡುತ್ತಾರೆ. ಆದರೆ ಹಿಂದುಳಿದವರು ಎಷ್ಟೇ ಶ್ರೀಮಂತರಾಗಿದ್ದರೂ ಏನ್ಲಾ ಅಂತಾ ಮಾತಾಡಿಸುತ್ತಾರೆ ಎಂದು ಗುಲಾಮಗಿರಿ ಮನಸ್ಥಿತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ನಮಗೆ ಗುಲಾಮಗಿರಿ ಮನಸ್ಥಿತಿ ಇನ್ನೂ ಹೋಗಿಲ್ಲ. ಇದೇ ಗುಲಾಮಗಿರಿ ಮನಸ್ಥಿತಿ. ಈ ಗುಲಾಮಗಿರಿ ಮನಸ್ಥಿತಿ ಹೋಗಬೇಕು ಎಂದು ಹೇಳಿದ್ದಾರೆ.

    ಶಿಕ್ಷಣ, ಅಧಿಕಾರ ಯಾವುದೇ ಒಂದು ಜಾತಿಯ ಸ್ವತ್ತಲ್ಲ. ಅವಕಾಶ ಸಿಕ್ಕರೆ ಎಲ್ಲ ಪ್ರತಿಭೆಗಳು ಹುಟ್ಟಿಕೊಳ್ತಾರೆ. ಯಾರು ಸಮಾಜದಲ್ಲಿ ಅಸಮಾನತೆ ಸೃಷ್ಟಿ ಮಾಡಿದ್ದಾರೋ ಅವರೇ ಮೀಸಲಾತಿ ಪ್ರಶ್ನೆ ಮಾಡ್ತಾರೆ. ಎಷ್ಟು ದಿನ ಬೇಕು ಮೀಸಲಾತಿ? ಇನ್ನೂ ಏಕೆ ಬೇಕು‌ ಮೀಸಲಾತಿ ಅಂತಾ ಪ್ರಶ್ನೆ ಮಾಡ್ತಾರೆ. ಚತುರ್ ವರ್ಷದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಶಿಕ್ಷಣ, ಅಧಿಕಾರ ಎನ್ನುವಂತಿತ್ತು. ಇದು ಮೀಸಲಾತಿ ಅಲ್ಲವಾ? ಇದೊಂದು ರೀತಿ ಅಲಿಖಿತ ಮೀಸಲಾತಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಆರ್ಯರು ವಲಸೆ ಬಂದರು ಅಂದ್ರೆ ಎಲ್ಲ ನನ್ನ ಮೇಲೆ ಬೀಳ್ತಾರೆ. ದ್ರಾವಿಡರ ಮೇಲೆ ದಬ್ಬಾಳಿಕೆ ಮಾಡಿದ್ರು ಅಂದ್ರೆ ಕೋಪ ಬಂದು ಬಿಡುತ್ತೆ ಅವರಿಗೆ. ನನ್ನ ಮೇಲೆ ಮುಗಿ ಬಿದ್ದುಬಿಡ್ತಾರೆ. ಮಿಲ್ಲರ್ ಆಯೋಗವನ್ನು ವಿರೋಧ ಮಾಡಿದವರು ಯಾರು? ಆ ಸತ್ತ ವ್ಯಕ್ತಿ ಹೇಳಿದ್ರೆ ನಮ್ಮ ಮೇಲೆ ಬರ್ತಾರೆ. ನಾನು ಒಬ್ಬ ಮಾತಾಡಿದ್ರೆ ಅವರು 20 ಜನ ಬರ್ತಾರೆ. ನಮ್ಮವರೂ ಒಬ್ಬರೂ ಮಾತಾಡಲ್ಲ, ಸುಮ್ಮನೇ ಇರ್ತಾರೆ. ಸಿದ್ದರಾಮಯ್ಯ ತಾನೇ ಬೈಯ್ಯಿಸ್ಕೊಳ್ಳೋದು ಅಂತಾ ಸುಮ್ಮನಾಗ್ತಾರೆ ಎಂದು ಮಾತನಾಡಿದ್ದಾರೆ.

    ಈ ಹಿಂದೆ ಬ್ರಾಹ್ಮಣರು ಮಾತ್ರ ಓದಬೇಕಿತ್ತು, ಬ್ರಾಹ್ಮಣರು ಮಾತ್ರ ಅಧಿಕಾರ ಹೊಂದಬೇಕಿತ್ತು. ಇದು ಮೀಸಲಾತಿ ಅಲ್ವಾ? ಕೊಳಕು ಕೆಲಸ ಬಿಟ್ಟು ಅವರು‌ ಮಜಾ ಮಾಡ್ತಿದ್ರು. ಇದು ಅಲಿಖಿತ ಮೀಸಲಾತಿ. ಏಕೆ ಮೀಸಲಾತಿ ಕೊಡಬೇಕು. ಮೀಸಲಾತಿ ಎಷ್ಟು ವರ್ಷ ಇರಬೇಕು, ಪ್ರತಿಭೆಗಳಿಗೆ ತೊಂದರೆ ಆಗೋದಿಲ್ಲವಾ ಎಂದು ಪ್ರಶ್ನೆ ಮಾಡ್ತಾರೆ. ಸಮಾಜದಲ್ಲಿ ಅಸಮಾನತೆ ಉಂಟಾಗಲು ಕಾರಣರಾದವರೇ ಈಗ ಪ್ರಶ್ನೆ ಕೇಳ್ತಿರೋದು ಎಂದು ಮೀಸಲಾತಿ ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ಎಲ್ಲಿಯವರಿಗೆ ಜಾತಿ ವ್ಯವಸ್ಥೆ ಇರುತ್ತೋ ಅಲ್ಲಿಯತನಕ ಮೀಸಲಾತಿ ಇರಲೇಬೇಕು ಎಂದು ಅಂಬೇಡ್ಕರ್ ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಅವರು ಎಸ್‌ಸಿ, ಎಸ್ಟಿಗೆ ಮೀಸಲಾತಿ ಕೊಟ್ಟರು. 90ರಲ್ಲಿ ಓಬಿಸಿ ಮೀಸಲಾತಿ ಸಿಕ್ಕಿದೆ. ವಿ.ಪಿ.ಸಿಂಗ್ ಬಂದ ಮೇಲೆ ಮೀಸಲಾತಿ ಸಿಕ್ಕಿದೆ. ಆಗ ವಿರೋಧ ಮಾಡಿದವರು ಯಾರು ಗೊತ್ತಾ? ಈಗ ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಮಾತಾಡುತ್ತಾರಲ್ಲ ಅವರೇ. ರಥಯಾತ್ರೆ ಮಾಡಿದವರು ಯಾರು? ಸತ್ಯ ಮಾತಾಡಿದ್ರೆ ನಾವು ಬೈಯ್ಯಿಸಿಕೊಳ್ಳಬೇಕು ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ

    ಪ್ರಧಾನಿ ಮೋದಿ ಸರ್ಕಾರ‌ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ 10% ಮೀಸಲಾತಿ ಜಾರಿಗೆ ತಂದರು. ಚರ್ಚೆ ಮಾಡದೇ ತರಾತುರಿಯಲ್ಲಿ ಜಾರಿಗೊಳಿಸಿದರು. ಇದು ಸಂವಿಧಾನದಲ್ಲಿ ಇದೆಯಾ? ಇದು ಸಂವಿಧಾನಕ್ಕೆ ವಿರೋಧ ಅಲ್ಲವಾ? ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಅಂತಿದೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಅಂತಾ ಸಂವಿಧಾನದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv

  • ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?
    ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

    ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

    ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
    ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

    ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

    ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.